Connect with us

ದೇಶದ್ರೋಹಿಗಳಿಗೆ ಕಾಂಗ್ರೆಸ್ ಪ್ರೇರಣೆ : ನಳಿನ್ ಕುಮಾರ್ ಕಟೀಲ್

Published

on

ದೇಶದ್ರೋಹಿಗಳಿಗೆ ಕಾಂಗ್ರೆಸ್ ಪ್ರೇರಣೆ : ನಳಿನ್ ಕುಮಾರ್ ಕಟೀಲ್

ಪುತ್ತೂರು : ದೇಶದ್ರೋಹಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ಇನ್ನೆಂದೂ ಯಾರೂ ದೇಶದ್ರೋಹಿ ಕೆಲಸ ಮಾಡದಂತೆ ನೋಡಿಕೊಳ್ಳುವ ಅಗತ್ಯವಿದೆ ಎಂದು  ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಬಿಜೆಪಿ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಳ್ಳಲು ಬಂದಿದ್ದ ಅವರು ಸುದ್ದಿಗಾರೊಂದಿಗೆ ಮಾತನಾಡಿದರು.

ಸಿಎಎ ಪ್ರತಿಭಟನೆಯ ಹೆಸರಿನಲ್ಲಿ ದೇಶದ್ರೋಹಿ ಹೇಳಿಕೆಗಳನ್ನು ನೀಡುವ ಕೆಲಸ ನಿರಂತರವಾಗಿ ನಡೆಯುತ್ತಿದೆ.

ನಕ್ಸಲ್ ಪರ ವಿಚಾರವುಳ್ಳವರು, ಕಮ್ಯುನಿಷ್ಟರು ಹಾಗೂ ಇವರೆಲ್ಲರ ಹಿಂದೆ ಕಾಂಗ್ರೇಸ್ ಕುಮ್ಮಕ್ಕಿನಿಂದಾಗಿ ಇಂಥಹ ದೇಶದ್ರೋಹಿ ಹೇಳಿಕೆಗಳನ್ನು ನೀಡುವ ಪ್ರಕ್ರಿಯೆಗಳು ನಡೆಯುತ್ತಿದೆ.

ಇಂಥ ದೇಶದ್ರೋಹಿಗಳಲ್ಲಿ ನಾಲ್ವರಿಗೆ ಸರಿಯಾದ ಕಠಿಣ ಶಿಕ್ಷೆಯಾದಲ್ಲಿ ಮತ್ತೆ ಇಂಥಹ ಪ್ರಕ್ರಿಯೆಗಳಲ್ಲಿ ಯಾರೂ ಗುರುತಿಸಿಕೊಳ್ಳುವುದಿಲ್ಲ ಎಂದ ಅವರು ರಾಜ್ಯ ಸರಕಾರ ಈಗಾಗಲೇ ದೇಶದ್ರೋಹಿ, ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನು ಬಂಧಿಸಿದೆ ಎಂದರು.

Click to comment

Leave a Reply

Your email address will not be published. Required fields are marked *

LATEST NEWS

ಐಸ್‌ಕ್ರೀಂ ತಿಂದ ಬಳಿಕ ಅವಳಿ ಮಕ್ಕಳು ಸಾ*ವು

Published

on

ಮಂಡ್ಯ: ಐಸ್‌ಕ್ರೀಂ ತಿಂದ ಬಳಿಕ ಅವಳಿ ಮಕ್ಕಳು ಸಾ*ವಿಗೀಡಾಗಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ.

ಪೂಜಾ, ಪ್ರಸನ್ನ ದಂಪತಿ ಮಕ್ಕಳಾದ ತ್ರಿಶುಲ್ ಹಾಗೂ ತ್ರಿಶ ಸಾ*ವನ್ನಪ್ಪಿದ ಕಂದಮ್ಮಗಳು. ನಿನ್ನೆ ಮಧ್ಯಾಹ್ನ ಮಕ್ಕಳಿಗೆ ತಾಯಿ ಐಸ್‌ಕ್ರೀಂ ತಿನ್ನಿಸಿದ್ದರು. ತಳ್ಳುವ ಗಾಡಿಯಾತನಿಂದ ಐಸ್‌ಕ್ರೀಂ ಕೊಡಿಸಿದ್ದರು. ಆನಂತರ ಮಕ್ಕಳು ಅಸ್ವಸ್ಥಗೊಂಡು ಮೃ*ತಪಟ್ಟಿದ್ದಾರೆ.

ಗ್ರಾಮದಲ್ಲಿ ಬೇರೆ ಮಕ್ಕಳು ಕೂಡ ಐಸ್‌ಕ್ರೀಂ ‌ತಿಂದಿದ್ದರು. ಐಸ್‌ಕ್ರೀಂ ತಿಂದ ಬೇರೆ ಯಾರಿಗೂ ತೊಂದರೆ ಆಗಿಲ್ಲ. ಅವಳಿ ಮಕ್ಕಳ ಸಾ*ವಿಗೆ ಇದುವರೆಗೂ ಕಾರಣ ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆ ನಂತರ ನಿಖರ ಕಾರಣ ತಿಳಿಯಲಿದೆ.

ಮಿಮ್ಸ್ ಆಸ್ಪತ್ರೆಗೆ ಶ*ವಗಳನ್ನು ರವಾನಿಸಲಾಗಿದೆ. ಅರಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Continue Reading

LATEST NEWS

WATCH : ಪತಿ ಬಿಟ್ಟು ಪರಪುರುಷನೊಂದಿಗೆ ಜಾಲಿ ರೈಡ್; ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಾಕೆಗೆ ಪತಿ ಏನು ಮಾಡ್ದ ಗೊತ್ತಾ!?

Published

on

ಮಂಗಳೂರು/ ಹರಿಯಾಣ : ಇತ್ತೀಚೆಗೆ ದಾಂಪತ್ಯ ಜೀವನದಲ್ಲಿ ಬಿರುಕು ಸಾಮಾನ್ಯವಾಗಿದೆ. ಅನೈತಿಕ ಸಂಬಂಧಗಳೂ ಹೆಚ್ಚಾಗಿವೆ. ಇದೀಗ ಅಂತಹುದೇ ಒಂದು ಘಟನೆ ನಡೆದಿದೆ. ಆದರೆ, ಇಲ್ಲಿ ಪತ್ನಿ ಪರಪುರುಷನೊಂದಿಗೆ ಇದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾಳೆ. ಅಷ್ಟೇ ಅಲ್ಲ, ಧರ್ಮದೇಟೂ ತಿಂದಿದ್ದಾಳೆ.

ಹರಿಯಾಣದ ಪಂಚಕುಲದಲ್ಲಿ ಈ ಘಟನೆ ನಡೆದಿದೆ. ಸದ್ಯ ಈ ವೀಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ.

ವೀಡಿಯೋದಲ್ಲಿ ಏನಿದೆ?

ಪಂಚಕುಲದ ಸೆಕ್ಟರ್ 26ರ ಉದ್ಯಾನವನದಲ್ಲಿ ಪತ್ನಿ ಬೇರೊಬ್ಬ ಪುರುಷನೊಂದಿಗೆ ಕಾರಿನಲ್ಲಿದ್ದಳು. ಇದನ್ನು ಗಮನಿಸಿದ ಪತಿ ಬ್ಯಾಟಿನಿಂದ ಕಾರಿನ ಕಿಟಕಿ ಗಾಜು ಒಡೆದಿದ್ದಾನೆ. ಅಷ್ಟು ಮಾತ್ರವಲ್ಲ, ಅವಳನ್ನು ಹೊರಗೆಳೆದು ನಡುರಸ್ತೆಯಲ್ಲೇ ಹಿಗ್ಗಾ ಮುಗ್ಗಾ ಥಳಿಸಿದ್ದಾನೆ.

ಇದನ್ನೂ ಓದಿ : ಪುತ್ತೂರು ಜಾತ್ರೆಯಿಂದ ಹಿಂದಿರುಗುವ ವೇಳೆ ಜವರಾಯನ ಅಟ್ಟಹಾಸ; ಜೀಪ್ ಡಿಕ್ಕಿ; ಬೈಕ್ ಸವಾರ ಸಾ*ವು

ಈ ದೃಶ್ಯಾವಳಿಗಳನ್ನು ಅಲ್ಲೇ ಇದ್ದ ವ್ಯಕ್ತಿಯೊಬ್ಬರು ಸೆರೆ ಹಿಡಿದಿದ್ದು, ವೀಡಿಯೋ ವೈರಲ್ ಆಗುತ್ತಿದೆ.

ಪತಿ ಬಂಧನ :

ಇನ್ನು ವೀಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಘಟನೆಯ ಬೆಂಬತ್ತಿದ್ದಾರೆ. ಪತ್ನಿಯ ದೂರಿನ ಆಧಾರದ ಮೇಲೆ ಪಂಚಕುಲದ ಸೆಕ್ಟರ್ 26ರ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಪತಿಯನ್ನು ಬಂಧಿಸಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Continue Reading

BANTWAL

ಪುತ್ತೂರು ಜಾತ್ರೆಯಿಂದ ಹಿಂದಿರುಗುವ ವೇಳೆ ಜವರಾಯನ ಅಟ್ಟಹಾಸ; ಜೀಪ್ ಡಿಕ್ಕಿ; ಬೈಕ್ ಸವಾರ ಸಾ*ವು

Published

on

ಪುತ್ತೂರು : ಜೀಪೊಂದು ಬೈಕ್ ಗೆ ಡಿ*ಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃ*ತಪಟ್ಟು, ಅವರ ಇಬ್ಬರು ಮಕ್ಕಳು ಗಂಭೀ*ರ ಗಾ*ಯಗೊಂಡ ಘಟನೆ ಬುಧವಾರ ರಾತ್ರಿ ಪುತ್ತೂರು ಸುಬ್ರಹ್ಮಣ್ಯ ರಸ್ತೆಯಲ್ಲಿನ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್ (48) ಮೃ*ತಪಟ್ಟವರು. ಅವರ ಇಬ್ಬರು ಮಕ್ಕಳು ಗಂಭೀ*ರ ಗಾಯಗೊಂಡಿದ್ದು, ಗಾ*ಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಲೋಕೇಶ್ ಅವರು  ಮಕ್ಕಳೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಜಾತ್ರೆಗೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆಯಲ್ಲಿ ಮುಂಭಾಗದಿಂದ ಆಗಮಿಸಿದ ಜೀಪು ಅವರು ಚಲಾಯಿಸುತ್ತಿದ್ದ ಬೈಕ್ ಗೆ ಡಿ*ಕ್ಕಿಯಾಗಿತ್ತು.

ಇದನ್ನೂ ಓದಿ : ಕರಡಿಗೂ ಕ್ಯಾಪ್ಟನ್ ಗೂ ಫೈಟ್; ಮನೆಯಂಗಳದಲ್ಲೇ ಕಾದಾಟ! ವೀಡಿಯೋ ವೈರಲ್

ಡಿ*ಕ್ಕಿಯ ರಭಸಕ್ಕೆ ಬೈಕ್ ಎರಡು ತುಂಡಾಗಿದೆ. ಸುಮಾರು 50 ಮೀಟರ್ ದೂರದ ತನಕ ಬೈಕನ್ನು ಜೀಪ್‌ ಎಳೆದುಕೊಂಡು ಹೋಗಿದೆ. ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟ ಲೋಕೇಶ್ ಅವರು ಸ್ಥಳದಲ್ಲಿಯೇ ಸಾ*ವನ್ನಪ್ಪಿದ್ದಾರೆ. ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

Trending