DAKSHINA KANNADA
ಏರ್ಪೋರ್ಟ್ ಅದಾನಿಗೆ ಕೊಟ್ಟಿರೋದಿಕ್ಕೆ ತೊಡೆತಟ್ಟಿದ ಕಾಂಗ್ರೆಸ್ : ವಾರಕ್ಕೊಂದು ಪ್ರತಿಭಟನೆ – ಅಭಯಚಂದ್ರ..!
ಏರ್ಪೋರ್ಟ್ ಅದಾನಿಗೆ ಕೊಟ್ಟಿರೋದಿಕ್ಕೆ ತೊಡೆತಟ್ಟಿದ ಕಾಂಗ್ರೆಸ್ : ವಾರಕ್ಕೊಂದು ಪ್ರತಿಭಟನೆ – ಅಭಯಚಂದ್ರ..!
ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅದಾನಿ ಕಂಪೆನಿಗೆ ಹಸ್ತಾಂತರ ಮಾಡಿರುವುದನ್ನು ಖಂಡಿಸಿ ಇದೀಗ ಬಿಜೆಪಿ ವಿರುದ್ಧ ಕಾಂಗ್ರೆಸ್ ತೊಡೆತಟ್ಟಿದ್ದು, ವಾರಕ್ಕೊಂದು ಬಾರಿಯಂತೆ ಕೆಂಜಾರಿನಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.
ಈ ಹಿನ್ನೆಲೆಯಲ್ಲಿ ಮಂಗಳೂರು ಅದಾನಿ ಏಪೋಟ್ರ್ಗೆ ಪ್ರವೇಶಿಸುವ ಕೆಂಜಾರಿನಲ್ಲಿ ಪ್ರತಿಭಟನೆ ನಡೆಸುವುದಾಗಿ ಮೂಲ್ಕಿ ಮೂಡುಬಿದಿರೆ ಕ್ಷೇತ್ರದ ಮಾಜಿ ಶಾಸಕ, ಕಾಂಗ್ರೆಸ್ನ ಹಿರಿಯ ಶಾಸಕರೂ ಆಗಿರುವ ಅಭಯಚಂದ್ರ ಜೈನ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
1954ನೇ ಇಸವಿಯಲ್ಲಿ ಅಂದಿನ ಶಾಸಕ ಶ್ರೀನಿವಾಸ್ ಮಲ್ಯ ಪ್ರಯತ್ನದಿಂದ ಜವಾಹರ ಲಾಲ್ ನೆಹರೂ ವಿಮಾನ ನಿಲ್ದಾಣ ಕೊಡುಗೆಯಾಗಿ ನೀಡಿದ್ರು. ಜವಾಹರ್ ಲಾಲ್ ಅವರ ಕಾರ್ಯದರ್ಶಿ ಆಗಿದ್ದ ಕಾರಣ ಇದೆಲ್ಲ ಸಾಧ್ಯವಾಯ್ತು. ಅಂದು ಎನ್ ಐ ಟಿಕೆ ಕೂಡ ಜಿಲ್ಲೆಗೆ ಬರಲು ಸಾಧ್ಯವಾಯ್ತು. ಬಂದರು ಸ್ಥಾಪನೆಯಲ್ಲೂ ಶ್ರೀನಿವಾಸ್ ಮಲ್ಯ ಅವರು ಬಜ್ಪೆ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕಾರಣರಾದರು. ಅಂದು ಬಂದರು ಮತ್ತು ವಿಮಾನ ನಿಲ್ದಾಣದಿಂದ ನಿರ್ವಸಿತರಾದವರಿಗೆ ಬಂಟ್ವಾಳ ಸಿದ್ದಕಟ್ಟೆಯಲ್ಲಿ ನಿವೇಶನ ನೀಡಲಾಯಿತು. ಶೆಟ್ಟಿಗಾರ್ ಸಮುದಾಯದ ದೇವಸ್ಥಾನ ಕೂಡ ಸ್ಥಳಾಂತರಗೊಂಡು ನಿರ್ಮಾಣ ಆಯ್ತು. ಈ ವೇಳೆ ರಾಜ್ಯದ ಮುಖ್ಯಮಂತ್ರಿ ವೀರಪ್ಪ ಮೊಯಿಲಿ, ಜನಾರ್ಧನ ಪೂಜಾರಿ, ಆಸ್ಕರ್ ಫೆರ್ನಾಂಡಿಸ್ ಅವರ ತ್ಯಾಗವು ಕೂಡ ಇದೆ ಎಂದರು.
ಅಂದು ವಿಮಾನ ನಿಲ್ದಾಣ ಆಗುವಾಗ ಅಲ್ಲಿದ್ದ ದಲಿತರ ಭೂಮಿ ಹೋಯಿತು, ಅವರಲ್ಲಿ ಎಷ್ಟು ಜನರಿಗೆ ಕೆಲಸ ಸಿಕ್ಕಿತು ಗೊತ್ತಿಲ್ಲ. ರಮಾನಾಥ್ ರೈ ಅವರು ಸೀ ಬರ್ಡ್ ನಿರ್ವಸಿತರಿಗೆ ಪರಿಹಾರ ನೀಡಿದ ರೀತಿ ನೀಡಲು ಶ್ರಮಿಸಿದರು. ಆದರೆ ಇಷ್ಟೆಲ್ಲ ಹೋರಾಟ ಪರಿಶ್ರಮದ ವಿಮಾನ ನಿಲ್ದಾಣ ಅದಾನಿ ಪಾಲಾಗಿದೆ. ನಾವು ಹಿಂದೆ ಅದೆಷ್ಟೋ ಬಾರಿ ಶ್ರೀನಿವಾಸ್ ಮಲ್ಯ ಅವರ ಹೆಸರು ವಿಮಾನ ನಿಲ್ದಾಣಕ್ಕೆ ಇಡಲು ಮನವಿ ಮಾಡಿದ್ದೆವು. ಆದರೆ ಈಗ ನಿಲ್ದಾಣವನ್ನು ಗುಜರಾತಿನ ಅದಾನಿ ಹೆಸರಿಟ್ಟು 50 ವರ್ಷಕ್ಕೆ ಮಾರಲಾಗಿದೆ. ನಾಳೆ ಇದರ ಬಗ್ಗೆ ಪ್ರತಿಭಟನೆ ನಡೆಯಲಿದೆ. ಮುಂದಿನ ದಿನಗಳಲ್ಲಿ ಕೆಂಜಾರಿನಲ್ಲಿ ವಾರಕ್ಕೊಂದು ದಿನ ಪ್ರತಿಭಟನೆ ನಡೆಸಲಿದ್ದೇವೆ ಎಂದರು.
ಬಂದರು, ಎನ್ ಐಟಿಕೆ, ವಿಮಾನ ನಿಲ್ದಾಣ ವನ್ನು ಕೊಡುಗೆಯಾಗಿ ನೀಡಿದ ಶ್ರೀನಿವಾಸ ಮಲ್ಯರ ಹೆಸರಿಡದೆ ಅದಾನಿ ಹೆಸರಿಟ್ಟಿರುವ ಬಗ್ಗೆ ಪ್ರತಿಭಟಿಸಲಿದ್ದೇವೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಭಾಗವಹಿಸುವ ಸಾಧ್ಯತೆಯಿದೆ ಎಂದರು.
DAKSHINA KANNADA
Sullia : ಕಂಠಪೂರ್ತಿ ಕುಡಿದು ಅಡ್ಡಾದಿಡ್ಡಿ ಕಾರು ಚಲಾಯಿಸಿದ ಸರ್ಕಾರಿ ಅಧಿಕಾರಿ
ಸುಳ್ಯ : ಸರ್ಕಾರಿ ಅಧಿಕಾರಿಯೊಬ್ಬರು ಮದ್ಯದ ನಶೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಸಾರ್ವಜನಿಕರಿಂದ ಬೈಗುಳ ತಿಂದ ಸುಳ್ಯದ ಅರಂಬೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್ ಕುಮಾರ್ ಎಂಬವರು ಕಂಠಪೂರ್ತಿ ಕುಡಿದ ಮದ್ಯದ ಮತ್ತಿನಲ್ಲಿ ಸುಳ್ಯ ಅರಂಬೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ, ರಸ್ತೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಹಲವಾರು ವಾಹನಗಳಿಗೆ ಢಿಕ್ಕಿ ಆಗುವಂತಹ ಸಂಭಾವ್ಯ ದುರಂತವೊಂದು ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ತಪ್ಪಿದೆ. ರಸ್ತೆಯುದ್ದಕ್ಕೂ ವಿರುದ್ಧ ದಿಕ್ಕಿನಲ್ಲಿ, ಅಡ್ಡಾದಿಡ್ಡಿ ವಾಹನ ಚಲಾಯಿಸಿ ಅಪಘಾತ ಸಂಭವಿಸುವ ಸಾಧ್ಯತೆಯನ್ನು ಮನಗಂಡ ಕೆಲವು ವಾಹನ ಸವಾರರು ಸಾರ್ವಜನಿಕರ ಸಹಕಾರದಿಂದ ಅಡ್ಡಗಟ್ಟಿದ್ದಾರೆ. ಸರ್ಕಾರಿ ಅಧಿಕಾರಿಯ ಈ ವರ್ತನೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
DAKSHINA KANNADA
ಉಪ್ಪಿನಂಗಡಿ:12 ಅಡಿ ಉದ್ದದ ಕಾಳಿಂಗ ಸರ್ಪ ಹಿಡಿಯೋಕು ಮೀಟ್ರು ಬೇಕು
ಉಪ್ಪಿನಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿಯ ಸೈಂಟ್ ಜೋಸೆಫ್ ಮಲಂಕರ ಚರ್ಚ್ ಪರಿಸರದಲ್ಲಿ 12 ಅಡಿ ಉದ್ದದ ಕಾಳಿಂಗ ಸರ್ಪ ಪ್ರತ್ಯಕ್ಷಗೊಂಡಿತು. ಇದನ್ನು ಸೆರೆ ಹಿಡಿದ ಉರಗ ತಜ್ಞ ಕೆ. ಝಕರಿಯ್ಯ ಎಂಬುವವರು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.
ಎರಡು- ಮೂರು ದಿನಗಳಿಂದ ಸುಮಾರು 12 ಅಡಿ ಉದ್ದದ ಕಾಳಿಂಗ ಸರ್ಪವೊಂದು ನೆಲ್ಯಾಡಿಯ ಸೈಂಟ್ ಜೋಸೆಫ್ ಮಲಂಕರ ಚರ್ಚ್ ಪರಿಸರದಲ್ಲಿ ಸುತ್ತಾಡಿಕೊಂಡಿತ್ತು.
ಈ ಬಗ್ಗೆ ಮಾಹಿತಿ ಪಡೆದ ಉಪ್ಪಿನಂಗಡಿಯ ಕೆ. ಝಕರಿಯಾ ಅವರು ಅಲ್ಲಿಗೆ ತೆರಳಿ ಸುಮಾರು ಒಂದು ಗಂಟೆಯಷ್ಟು ಕಾರ್ಯಾಚರಣೆಯ ಬಳಿಕ ಕಾಳಿಂಗ ಸರ್ಪವನ್ನು ಹಿಡಿದು ಸುರಕ್ಷಿತವಾಗಿ ಗುಂಡ್ಯ ಬಳಿ ದಟ್ಟಾರಣ್ಯಕ್ಕೆ ಬಿಟ್ಟಿದ್ದಾರೆ.
DAKSHINA KANNADA
ಅತ್ತಾವರ ಅಪಾರ್ಟ್ಮೆಂಟ್ನಲ್ಲಿ ಆಕಸ್ಮಿಕ ಬೆಂಕಿ – ವೃದ್ಧೆ ಸಾವು..!
ಮಂಗಳೂರು: ಮಂಗಳೂರಿನ ಅತ್ತಾವರದ ಅಪಾರ್ಟ್ ಮೆಂಟ್ವೊಂದರಲ್ಲಿ ಇಂದು ಬೆಳಗ್ಗೆ ನಡೆದ ಆಕಸ್ಮಿಕ ಬೆಂಕಿ ಅನಾಹುತದಲ್ಲಿ ಗಂಭೀರ ಗಾಯಗೊಂಡಿದ್ದ ವೃದ್ಧೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಶಾಹಿನಾ ನುಸ್ಬಾ(58) ಸಾವನ್ನಪ್ಪಿದ ವೃದ್ಧೆ ಎಂದು ಗುರುತಿಸಲಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮುಂಜಾನೆ 4 ಗಂಟೆಯ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿದ್ದು, ಐವರು ಮಕ್ಕಳ ಸಹಿತ ಎಂಟು ಮಂದಿ ಅಪಾಯದಿಂದ ಪಾರಾಗಿದ್ದಾರೆ.
ಅನಾರೋಗ್ಯದಿಂದಾಗಿ ಬೆಡ್ ರೂಮ್ ನಲ್ಲೇ ಇದ್ದ ವೃದ್ಧ ಮಹಿಳೆ ದಟ್ಟ ಹೊಗೆಯಿಂದಾಗಿ ತಕ್ಷಣ ಹೊರಬರಲಾಗದೇ ಉಸಿರುಗಟ್ಟಿ ಚಿಂತಾಜನಕ ಸ್ಥಿತಿಯಲ್ಲಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
- FILM7 days ago
ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ ನೋಡಿ ‘ಕತ್ತೆ’ ಎಂದ ಕಿಚ್ಚ ಸುದೀಪ
- bengaluru6 days ago
ಇನ್ಸ್ಟಾಗ್ರಾಂನಲ್ಲಿ 11 ಸಾವಿರ ಫಾಲೋವರ್ಸ್ ಕಳೆದುಕೊಂಡ ಬಿಗ್ ಬಾಸ್ ಸ್ಪರ್ಧಿ ಸಂಗೀತಾ
- bengaluru6 days ago
ಬೆಂಗಳೂರು ಕಂಬಳಕ್ಕೆ ಕ್ಷಣಗಣನೆ-ಉಪ್ಪಿನಂಗಡಿಯಿಂದ ಬೆಂಗಳೂರಿಗೆ ಕೋಣಗಳ ಪ್ರಯಾಣ
- DAKSHINA KANNADA6 days ago
Breaking news :ಮಂಗಳೂರಿನ ಹೊಟೇಲ್ ರೂಂನಲ್ಲಿ ಬೆಂಕಿ-ಒಳಗಿದ್ದ ವ್ಯಕ್ತಿ ಸಾವು