chikkamagaluru
ಗೈರು ಹಾಜರಾದ ವಿದ್ಯಾರ್ಥಿಗಳಿಂದ ಹಣ ವಸೂಲಿ ಸಂಚು; ತಾವು ಬೀಸಿದ ಬಲೆಗೆ ತಾವೇ ಸಿಕ್ಕಿಬಿದ್ದ ಆರೋಪಿಗಳು
ಮಂಗಳೂರು/ಚಿಕ್ಕಮಗಳೂರು: ಅನಿವಾರ್ಯ ಕಾರಣಗಳಿಂದ ಕಾಲೇಜಿಗೆ ವಿದ್ಯಾರ್ಥಿಗಳು ಗೈರು ಹಾಜರಾಗುವುದು ಸಹಜ. ಹಾಗೆ ಬಾರದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಬೇಕೆಂದಿದ್ದರೆ, ಹಣ ನೀಡುವಂತೆ ಆದೇಶಿಸಿದ್ದ ಬೀರೂರು ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಮತ್ತು ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕ ಬಿ.ಟಿ.ಹರೀಶ್ ಮುಖಾಂತರ ಹಣದ ಬೇಡಿಕೆಯನ್ನಿಟ್ಟಿದ್ದ ಹಿನ್ನಲೆಯಲ್ಲಿ ಇಬ್ಬರನ್ನೂ ಬಂಧಿಸಲಾಗಿದೆ.
ಪ್ರಥಮ ದರ್ಜೆ ಸಹಾಯಕ ಸದಾಶಿವಯ್ಯ ಫೋನ್ ಪೇ ಮೂಲಕ 10 ಸಾವಿರ ಹಾಗೂ ಪ್ರಾಂಶುಪಾಲ ಎಂ.ಕೆ.ಪ್ರವೀಣ್ ಕುಮಾರ್ 5 ಸಾವಿರ ರೂ. ಕಸಿದುಕೊಂಡಿರುವುದಾಗಿ ಪ್ರಕರಣ ದಾಖಲಾಗಿದೆ.
ಕಾರ್ಯಾಚರಣೆಯಲ್ಲಿ ಡಿವೈಎಸ್ಪಿ ತಿರುಮಲೇಶ್, ಬಿ.ಮಲ್ಲಿಕಾರ್ಜುನ್, ಅನಿಲ್ ರಾಥೋಡ್ ಇತರರು ಪಾಲ್ಗೊಂಡಿದ್ದರು.
chikkamagaluru
ಚಿಕ್ಕಮಗಳೂರು ಹೋಮ್ಸ್ಟೇಗಳಿಗೆ ಅರಣ್ಯ ಇಲಾಖೆಯಿಂದ ನೋಟೀಸ್..!
ಚಿಕ್ಕಮಗಳೂರು/ಮಂಗಳೂರು: ಅಂಕೋಲಾದ ಶಿರೂರು, ಶಿರಾಡಿ ಘಾಟ್ ಭೂಕುಸಿತ ಹಾಗೂ ವಯನಾಡಿನ ದುರ್ಘಟನೆ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ಪಶ್ಚಿಮಘಟ್ಟ ಪ್ರದೇಶದಲ್ಲಿ ನಿರ್ಮಿಸಲಾಗಿರುವ ರೆಸಾರ್ಟ್ ಅಥವಾ ಹೋಂಸ್ಟೇಗಳಿಗೆ ನೋಟಿಸ್ ನೀಡಿದೆ. ಅನಧಿಕೃತವಾಗಿ ನಡೆಯುತ್ತಿರುವ ಹೋಂಸ್ಟೇ ಅಥವಾ ರೆಸಾರ್ಟ್ಗಳನ್ನು ಪತ್ತೆ ಹಚ್ಚಲು ಮುಂದಾಗಿದೆ.
ಚಿಕ್ಕಮಗಳೂರು ಅರಣ್ಯ ವಲಯ ವ್ಯಾಪ್ತಿಯಲ್ಲಿನ ಮುಳ್ಳಯ್ಯನಗಿರಿ, ಇನಾಂ ದತ್ತಾತ್ರೇಯ ಬಾಬಾ ಬುಡನ್ಸ್ವಾಮಿ ದರ್ಗಾ, ಚಂದ್ರದ್ರೋಣ ಪರ್ವತದ ಸುತ್ತಮುತ್ತ ನಿರ್ಮಾಣವಾಗಿರುವ ಹೋಂಸ್ಟೇ, ರೆಸಾರ್ಟ್ ಮಾಲಿಕರು ತಮ್ಮ ಹೋಂಸ್ಟೇಗೆ ಸಂಬಂಧಿಸಿದ ಕಂದಾಯ ದಾಖಲಾತಿಗಳನ್ನು ಕಚೇರಿಗೆ ಸಲ್ಲಿಸುವಂತೆ ಡಿಎಫ್ಒ ರಮೇಶ್ ಬಾಬು ಅವರು ನೋಟಿಸ್ ಹೊರಡಿಸಿದ್ದಾರೆ.
ಗಡಿನಾಡು ಹೊಸೂರಿನಲ್ಲಿ ಗಣೇಶನಿಗೆ ಹೈಕೋರ್ಟ್ ಮಂಟಪ, ಗಣಪನೇ ಜಡ್ಜ್
ಎಚ್ಚೆತ್ತ ಅರಣ್ಯ ಇಲಾಖೆ:
ಸಾಲು ಸಾಲು ದುರ್ಘಟನೆ ಬಳಿಕ ಎಚ್ಚತ್ತ ಅರಣ್ಯ ಇಲಾಖೆ ಚಿಕ್ಕಮಗಳೂರು ಅರಣ್ಯ ವಲಯದಲ್ಲಿ ನಿರ್ಮಿಸಲಾಗಿರುವ ಅನಧಿಕೃತ ಹೋಂಸ್ಟೇ ಅಥವಾ ರೆಸಾರ್ಟ್ಗಳ ಸ್ಥಳ ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಿತ್ತು. ವರದಿ ಸಲ್ಲಿಕೆಯಾದ ಬಳಿಕ ಅರಣ್ಯ ಇಲಾಖೆ 2015ರ ನಂತರ ಅರಣ್ಯ ಒತ್ತುವರಿ ಮಾಡಿ ನಿರ್ಮಿಸಿರುವ ರೆಸಾರ್ಟ್ ಅಥವಾ ಹೋಂಸ್ಟೇ, ತೋಟ, ಬಡವಾಣೆಗಳನ್ನು ನಿರ್ದಾಕ್ಷಿಣ್ಯವಾಗಿ ತೆರವು ಮಾಡುವಂತೆ ಸೂಚನೆ ನೀಡಿತ್ತು.
ಇದೀಗ, ಅನಧಿಕೃತವಾಗಿ ನಡೆಯುತ್ತಿರುವ ರೆಸಾರ್ಟ್ ಅಥವಾ ಹೋಂಸ್ಟೇಗಳನ್ನು ಪತ್ತೆಹಚ್ಚಲು ಅರಣ್ಯ ಇಲಾಖೆ ಮುಂದಾಗಿದೆ. ಹೀಗಾಗಿ ಚಿಕ್ಕಮಗಳೂರು ಅರಣ್ಯ ವಲಯದಲ್ಲಿ ನಿರ್ಮಾಣ ಮಾಡಿರುವ ಎಲ್ಲ ಹೋಂಸ್ಟೇ ಮಾಲಿಕರು ಕಂದಾಯ ದಾಖಲಾತಿಗಳನ್ನು ಸಲ್ಲಿಸುವಂತೆ ಅರಣ್ಯ ಇಲಾಖೆ ಸೂಚಿಸಿದೆ.
chikkamagaluru
ಗನ್ ಒರೆಸುತ್ತಿದ್ದ ವೇಳೆ ಮಿಸ್ ಫಯರ್; ವ್ಯಕ್ತಿ ಸಾ*ವು
ಚಿಕಮಗಳೂರು: ಮನೆಯಲ್ಲಿದ್ದ ಗನ್ ಒರೆಸುತ್ತಿದ್ದ ವೇಳೆ ಮಿಸ್ ಫಯರ್ ಆಗಿ ವ್ಯಕ್ತಿಯೊಬ್ಬ ಸಾವನಪ್ಪಿರುವ ಘಟನೆ ಚಿಕ್ಕಮಗಳೂರಿನ ಕಳವಾಸ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಕಳವಾಸೆ ಗ್ರಾಮದ ಅರುಣ್ (47 ವ) ಎಂದು ಹೇಳಲಾಗಿದೆ.
ಅರುಣ್ ಎಂಬವರು ತನ್ನ ಮನೆಯ ಶೆಡ್ ನಲ್ಲಿದ್ದ ಗನ್ನನ್ನು ಶುಚಿಗೊಳಿಸುತ್ತಿದ್ದ ವೇಳೆ ಏಕಾಏಕಿ ಗುಂಡು ಹಾರಿ ಅರುಣ್ರವರ ಬಲಕಣ್ಣನ್ನು ಹೊಕ್ಕಿದೆ. ಘಟನೆಯಿಂದ ಗಂಭೀರ ಗಾಯಗೊಂಡ ಅರುಣ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಈ ಘಟನೆ ಸಂಭವಿಸಿದ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ. ಇದು ಆತ್ಮಹತ್ಯೆಯೋ ಅಥವಾ ಮಿಸ್ ಫಯರ್ ಆಗಿ ಗುಂಡು ತಗುಳಿದೆಯೋ ಅನ್ನೋದು ತನಿಖೆ ವೇಳೆ ಬಯಲಿಗೆ ಬರಬೇಕಿದೆ.
ನಟಿಗೆ ಲೈಂಗಿಕ ಕಿರುಕುಳ ಆರೋಪ; ಮಲಯಾಳಂ ನಿರ್ದೇಶಕ ರಂಜಿತ್ ವಿರುದ್ದ ಎಫ್ಐಆರ್..!
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಹಾಸನ ಆಸ್ಪತ್ರೆಗೆ ರವಾನಿಸಲಾಗಿದೆ. ಮಲ್ಲಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
chikkamagaluru
ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆ ಸ್ಥಳದಲ್ಲೇ ಸಾ*ವು
ಚಿಕ್ಕಮಗಳೂರು/ಪುತ್ತೂರು: ಆಹಾರ ಅರಸಿ ನಾಡಿಗೆ ಬಂದ ಗಜರಾಜ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಳಗಾಮೆಯ ಆಶ್ರಯ ಎಸ್ಟೇಟ್ ಬಳಿ ನಡೆದಿದೆ. ಇಲ್ಲಿನ ಭದ್ರ ಅಭಯಾರಣ್ಯದಿಂದ ಆಹಾರ ಅರಸಿ ಬಂದ ಕಾಡಾನೆ ಬೇಲಿ ದಾಟುವ ವೇಳೆ, ಅಲ್ಲಿನ ತೋಟಕ್ಕೆ ಅಳವಡಿಸಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ಆನೆ ಸ್ಥಳದಲ್ಲೇ ಮೃತಪಟ್ಟಿದೆ.
ಇನ್ನು ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿದ್ದು ತೋಟದ ಮಾಲೀಕನ ವಿರುದ್ಧ ಪ್ರಕರಣ ದಾಖಲು ಮಾಡಿದ್ದಾರೆ.
- FILM4 days ago
ಕನ್ನಡದ ಸೀರಿಯಲ್ನಲ್ಲಿ ಮಿಂಚುತ್ತಿರುವ ಉಡುಪಿಯ ಬೆಡಗಿ
- NATIONAL6 days ago
ವಿಶ್ವದ ಶ್ರೀಮಂತ ಭಿಕ್ಷುಕ ಇವರೇ ನೋಡಿ ! ಭರತ್ ಜೈನ್ ಒಟ್ಟು ಆಸ್ತಿ ಎಷ್ಟು ಗೊತ್ತಾ ???
- NATIONAL6 days ago
ಶ್ವಾನ ನೆಗೆದು ಗರ್ಭಪಾತ; ಮಾಲಿಕನಿಗೆ 10 ಲಕ್ಷ ದಂಡ
- DAKSHINA KANNADA4 days ago
ಕನ್ನಡದಲ್ಲಿ ಔಷಧ ಚೀಟಿ ಬರೆದು ಗಮನ ಸೆಳೆದ ಕಾಸರಗೋಡು ಜಿಲ್ಲೆಯ ದಂತ ವೈದ್ಯ..!