Connect with us

    ಕಡಲಿಗೆ ಗೋಡೆ ಕಟ್ಟಿದ ಕಡಲ ಮಕ್ಕಳು: 350 ಮೀಟರ್ ಸ್ಯಾಂಡ್ ಬ್ಯಾಗ್ ತಡೆಗೋಡೆ….

    Published

    on

    ಲಾಕ್ಡೌನ್ಅವಧಿಯಲ್ಲಿ ತಡೆಗೋಡೆ ನಿರ್ಮಾಣ: ಪಣಂಬೂರು ಗ್ರಾಮಸ್ಥರ ಕಾರ್ಯಕ್ಕೆ ಶ್ಲಾಘನೆ…

    ಮಂಗಳೂರು: ಲಾಕ್‌ ಡೌನ್‌ ಅವಧಿಯಲ್ಲಿ ಎಲ್ಲರೂ ಕೊರೋನಾದಿಂದ ಜೀವ ಉಳಿಸಲು ಮನೆಯಲ್ಲಿದ್ರೆ, ಇವರು ಮಾತ್ರ ಊರು ಉಳಿಸಲು ಪಣ ತೊಟ್ಟಿದ್ರು.

    ಕಳೆದ ವರ್ಷ ಕಡಲ ಕೊರೆತದಿಂದ ತಮ್ಮ ಊರು ನಾಶವಾಗುತ್ತಿರುವುದನ್ನು ಕಣ್ಣಾರೆ ಕಂಡಿದ್ದ ಜನರು, ಈ ಬಾರಿ ಸಮುದ್ರಕ್ಕೆ ಅಡ್ಡಲಾಗಿ ತಡೆಗೋಡೆ ನಿರ್ಮಾಣಕ್ಕೆ ಇಳಿದಿದ್ದಾರೆ.

    ಹೇಳಿ ಕೇಳಿ ಕಡಲ ನಗರಿ ಮಂಗಳೂರಿನಲ್ಲಿ ಕಡಲಕೊರೆತ ಸಾಮಾನ್ಯವಾಗಿ ಕಾಡೋ ಸಮಸ್ಯೆ..

    ಕಡಲಂಚಿನ ಜನರ ಬದುಕನ್ನು ಹಿಂಡಿ ಹಿಪ್ಪೆ ಮಾಡೋ ಕಡಲ ಕೊರೆತಕ್ಕೆ ಇನ್ನೂ ಶಾಶ್ವತ ಪರಿಹಾರ ಸಿಕ್ಕಿಲ್ಲ.

    ಕಡಲಕೊರೆತ ಪ್ರತೀ ವರ್ಷದ ಸಮಸ್ಯೆಯಾದರೂ ಇನ್ನು ಕಡಲ ತೀರದಲ್ಲಿ ಸಂಪೂರ್ಣವಾಗಿ ತಡೆಗೋಡೆ ನಿರ್ಮಿಸಿಲ್ಲ.

    ಹೀಗಾಗಿ ಸಮುದ್ರ ತೀರದಲ್ಲಿ ಗೂಡು ಕಟ್ಟಿಕೊಂಡಿರುವ ಕಡಲ ಮಕ್ಕಳಿಗೆ ಸಮಸ್ಯೆಯಾಗುತ್ತಿದೆ. ಮಂಗಳೂರಿನ ಚಿತ್ರಾಪುರ ಗ್ರಾಮದಲ್ಲೂ ಇದೇ ಸಮಸ್ಯೆಯಿದೆ.

    ಕಳೆದ ವರ್ಷ ಸಮುದ್ರ ಕೊರೆತದಿಂದ ಪಣಂಬೂರ್‌ ಕುಳಾಯಿ ಮೊಗವೀರ ಸಭಾ ವ್ಯಾಪ್ತಿಯಲ್ಲಿ 350 ಆವರಣ ಗೋಡೆ, 50 ಮೀ ಜಾಗ, ತೆಂಗಿನ ಮರ, ಮೀನು ಒಣಗಿಸಲು ಬಳಸುವ ಚಾಚೆ ಇತ್ಯಾದಿ ಸಂಪೂರ್ಣವಾಗಿ ಸಮುದ್ರ ಪಾಲಾಗಿತ್ತು.

    ಈ ಭಾಗದಲ್ಲಿ 115 ಕುಟುಂಬಗಳು ವಾಸಿಸುತ್ತಿದ್ದು, ಸಮುದ್ರ ಕೊರೆತ ಬಹುದೊಡ್ಡ ಸಮಸ್ಯೆಯಾಗಿಬಿಟ್ಟಿದೆ.

    ಕಳೆದ ವರ್ಷ ಸಮದ್ರ ಕೊರೆತದಿಂದ ಚಿತ್ರಾಪುರ ಪಣಂಬೂರು ಸಮುದ್ರದಂಚಿನ ಜನರಿಗಾದ ನಷ್ಟಕ್ಕೆ ಇನ್ನೂ ಪರಿಹಾರ ಸಿಕ್ಕಿಲ್ಲ.

    ಜಿಲ್ಲಾಡಳಿತ, ಜನಪ್ರತಿನಿಧಿಗಳಿಗೆ ಈ ಬಗ್ಗೆ ತಿಳಿಸಿದಕ್ಕೆ ಮಳೆಗಾಲದ ಒಳಗಾಗಿ ತಡೆಗೋಡೆ ನಿರ್ಮಿಸುವ ಭರವಸೆಯೇನೋ ನೀಡಿದ್ರು.

    ಆದ್ರೆ ಅದು ಭರವಸೆಯಾಗೆ ಉಳಿದಿದೆ. ಹೀಗಾಗಿ ಈ ವರ್ಷ ಮತ್ತೆ ಕಡಲಕೊರೆತ ಸಂಭವಿಸಿದರೆ ಗತಿಯೇನು ಎಂಬ ಭಯದಿಂದ ಊರವರು ಸೇರಿ ಊರುಳಿಸುವ ನಿರ್ಧಾರಕ್ಕೆ ಬಂದ್ರು.

    ಪಣಂಬೂರ್‌ ಕುಳಾಯಿ ಮೊಗವೀರ ಸಭಾದ ಸದಸ್ಯರು, ಮಹಿಳಾ ಮೊಗವೀರ ಸಭಾ ಮತ್ತು ಊರವರೆಲ್ಲರೂ ಸೇರಿ ಕಳೆದ 18 ದಿವಸಗಳಿಂದ ತಡೆಗೋಡೆಯನ್ನು ನಿರ್ಮಿಸುತ್ತಿದ್ದಾರೆ.

    ಇನ್ನು ಗೋಣಿಚೀಲದ ಈ ತಡೆಗೋಡೆ ನಮಗೆ ರಕ್ಷಣೆ ಕೊಡುವ ಭರವಸೆಯಿದೆ ಅಂತಾರೆ ಮೊಗವೀರ ಸಭಾ ಅಧ್ಯಕ್ ಪಿ. ಮಾಧವ….

    ಅಂದಹಾಗೆ ಯಾವುದೇ ವೇತನವಿಲ್ಲದೆ ಗ್ರಾಮಸ್ಥರು ಊರು ಉಳಿಸುವ ಸಲುವಾಗಿ ಶ್ರಮಿಸುತ್ತಿದ್ದಾರೆ.

    ಸುಮಾರು 350 ಮೀಟರ್‌ ಉದ್ದಕ್ಕೆ ತಡೆಗೋಡೆ ನಿರ್ಮಾಣ ಮಾಡುತ್ತಿದ್ದಾರೆ. 8 ಅಡಿ ಆಳ, 3 ಅಡಿ ಎತ್ತರಕ್ಕೆ ಮರಳು ಮತ್ತು ಸಿಮೆಂಟ್‌ನ ಜಂಬೋ ಬ್ಯಾಗ್‌ ಅನ್ನು ನೈಲಾನ್‌ ವಯರ್‌ನಿಂದ ಬಿಗಿದು ತಡೆಗೋಡೆ ನಿರ್ಮಿಸಿದ್ದಾರೆ.

    ಇನ್ನು ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿದ್ದು, ತಡೆಗೋಡೆ ನಿರ್ಮಾಣದ ಖರ್ಚು ವೆಚ್ಚ ನೀಡುವ ಭರವಸೆ ನೀಡಿದ್ದಾರೆ.

    ಒಟ್ಟಾರೆ.. ಸರ್ಕಾರ ಮಾಡಬೇಕಾದ ಕೆಲಸವನ್ನು ಯಾವ ನಿರೀಕ್ಷೆಯೂ ಇಲ್ಲದೆ ಗ್ರಾಮಸ್ಥರು ಮಾಡಿ ತೋರಿಸಿದ್ದಾರೆ.

    ಎರಡು ಕೈ ಸೇರಿದರೆ ಚಪ್ಪಾಳೆ ಅನ್ನೋದಕ್ಕೆ ಪಣಂಬೂರು ಸಾಕ್ಷಿಯಾಗಿದೆ. ಇನ್ನಾದ್ರೂ ಕಡಲ ಕೊರೆತ ಶಾಶ್ವತವಾಗಿ ನಿಂತು ಜನರು ನೆಮ್ಮದಿಯಿಂದ ದಿನದೂಡುವಂತಾಗಲಿ ಅನ್ನೋದೆ ನಮ್ಮ ಆಶಯ….

    ಗಣೇಶ್‌ ಪೂಜಾರಿ…

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಬಸ್‌ ನಲ್ಲಿ ವಿದ್ಯಾರ್ಥಿನಿಗೆ ಕಿರುಕುಳ..! ಧರ್ಮದೇಟು ತಿಂದ ಮುಸ್ಲಿಂ ಯುವಕ..!

    Published

    on

    ಮಂಗಳೂರು ( ಸುಳ್ಯ ) : ಬೆಂಗಳೂರಿನಿಂದ ಸುಬ್ರಹ್ಮಣ್ಯ ಮಾರ್ಗವಾಗಿ ಸುಳ್ಯಕ್ಕೆ ಬರುತ್ತಿದ್ದ ಸರ್ಕಾರಿ ಬಸ್‌ನಲ್ಲಿ ಯುವಕನೊಬ್ಬ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದಾನೆ. ಈ ವಿಚಾರ ತಿಳಿದ ವಿದ್ಯಾರ್ಥಿನಿಯ ಸಹಪಾಠಿಗಳು ಯುವಕನನ್ನು ಹಿಡಿದು ಹಲ್ಲೆ ನಡೆಸಿದ ಘಟನೆ ಸುಳ್ಯದಲ್ಲಿ ನಡೆದಿದೆ.

    ಸುಬ್ರಹ್ಮಣ್ಯ ಸಮೀಪದ ಬಿಸಲೆ ಘಾಟ್‌ ಬಳಿ ವಿದ್ಯಾರ್ಥಿನಿ ಬೆಂಗಳೂರಿನಿಂದ ಬಂದಿದ್ದ ಬಸ್ ಹತ್ತಿದ್ದಳು. ಈ ವೇಳೆ ಯುವಕೊನೊಬ್ಬ ಕುಳಿತಿದ್ದ ಸೀಟ್‌ ಪಕ್ಕದ ಸೀಟ್ ಖಾಲಿ ಇದ್ದ ಕಾರಣ ಆಕೆ ಆತನ ಪಕ್ಕದಲ್ಲೇ ಕುಳಿತಿದ್ದಾಳೆ. ಆದ್ರೆ ವಿದ್ಯಾರ್ಥಿನಿ ಪಕ್ಕದಲ್ಲಿ ಕುಳಿತ ಸ್ವಲ್ಪ ಸಮಯದಲ್ಲೇ ಯುವಕ ಅನುಚಿತವಾಗಿ ವರ್ತಿಸಲು ಆರಂಭಿಸಿದ್ದಾನೆ. ಈ ವಿಚಾರವನ್ನು ಬಸ್ ನಿರ್ವಾಹಕನಿಗೆ ತಿಳಿಸಿದಾಗ ನಿರ್ವಾಹಕ ಹಾಗೂ ಬಸ್‌ ಪ್ರಯಾಣಿಕರು ಆರೋಪಿ ಯುವಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

    ವಿದ್ಯಾರ್ಥಿನಿ ಈ ವಿಚಾರವನ್ನು ಸುಳ್ಯದ ತನ್ನ ಕಾಲೇಜು ಸಹಪಾಠಿಗಳ ಗಮನಕ್ಕೂ ತಂದಿದ್ದಾಳೆ. ಈ ನಡುವೆ ಯುವಕ ಸುಬ್ರಹ್ಮಣ್ಯದಲ್ಲಿ ಬಸ್‌ನಿಂದ ಇಳಿದು ಬೇರೆ ಬಸ್ ಮೂಲಕ ಸುಳ್ಯದತ್ತ ಪ್ರಯಾಣ ಮಾಡಿದ್ದಾನೆ. ಬೆಂಗಳೂರಿನ ಬಸ್‌ನಲ್ಲಿ ಪ್ರಯಾಣಿಸಿ ಸುಳ್ಯ ತಲುಪಿದ್ದ ವಿದ್ಯಾರ್ಥಿನಿ ಈ ವಿಚಾರವನ್ನು ತನ್ನ ಸಹಪಾಠಿಗಳಿಗೆ ತಿಳಿಸಿದ್ದಾಳೆ. ತಕ್ಷಣ ಸುಳ್ಯದ ಪೈಚಾರು ಎಂಬಲ್ಲಿಗೆ ಕಾರಿನಲ್ಲಿ ತೆರಳಿದ ವಿದ್ಯಾರ್ಥಿಗಳು ಅಲ್ಲಿ ಯುವಕ ಪ್ರಯಾಣಿಸುತ್ತಿದ್ದ ಬಸ್‌ನಿಂದ ಆತನನ್ನು ಇಳಿಸಿದ್ದಾರೆ. ಬಳಿಕ ಆತನನ್ನು ಕಾರಿನಲ್ಲಿ ಸುಳ್ಯ ಬಸ್ ನಿಲ್ದಾಣಕ್ಕೆ ಕರೆತಂದು ಬಸ್ ನಿಲ್ದಾಣದಲ್ಲಿ ಹಿಗ್ಗಾ ಮುಗ್ಗ ಥಳಿಸಿದ್ದಾರೆ.

    ವಿದ್ಯಾರ್ಥಿಗೆ ಕಿರುಕುಳ ನೀಡಿದ ಯುವಕ ಕೇರಳ ಮೂಲದವನಾಗಿದ್ದು, ಆತನ ಹೆಸರು ನಿಯಾಜ್‌ ಎಂದು ಗೊತ್ತಾಗಿದೆ. ಘಟನೆಯ ಬಗ್ಗೆ ಮಾಹಿತಿ ಸಿಕ್ಕ ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ವಿದ್ಯಾರ್ಥಿಗಳಿಂದ ಹಲ್ಲೆಗೊಳಗಾದ ನಿಯಾಜ್‌ನನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಕೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ಮಾಹಿತಿ ಲಭ್ಯವಾಗಿದೆ.

    Continue Reading

    BIG BOSS

    Bigg Boss Kannada 11: ದೊಡ್ಮನೆಯಲ್ಲಿ ಸ್ವರ್ಗ, ನರಕ ಎನ್ನುವ ಎರಡು ಥೀಮ್

    Published

    on

    ‘ಬಿಗ್ ಬಾಸ್ ಕನ್ನಡ 11’ಕ್ಕೆ ಕೌಂಟ್ ಡೌನ್ ಶುರುವಾಗಿದೆ. ದೊಡ್ಮನೆ 2ನೇ ಪ್ರೋಮೋ ರಿಲೀಸ್ ಆಗಿ ಮೆಚ್ಚುಗೆ ಗಳಿಸಿತ್ತು. ಈ ಬಾರಿ ಬಿಗ್ ಬಾಸ್‌ನಲ್ಲಿ ಸ್ವರ್ಗ ಮತ್ತು ನರಕ ಎಂದು ಥೀಮ್ ಇರಲಿದೆ ಎಂದು ಸುದೀಪ್‌ ಇಂಟರೆಸ್ಟಿಂಗ್ ಮಾಹಿತಿ  ತಿಳಿಸಿದ್ದಾರೆ.

    ನಾವು ಮಾಡಿ ಕಳುಹಿಸಲಿಲ್ಲ ಅಂದರೆ ಒಳಗೆ ಹೋಗಿರುವ ಸ್ಪರ್ಧಿಗಳೇ ಟೀಮ್ ಮಾಡಿಕೊಳ್ಳುತ್ತಾರೆ. ಹಾಗಾಗಿ ಈ ಬಾರಿ ದೊಡ್ಮನೆಗೆ ಎಂಟ್ರಿ ಕೊಡುವಾಗಲೇ 2 ತಂಡ ಮಾಡುವುದೇ ಈ ಸೀಸನ್‌ನ ಸ್ಪೆಷಾಲಿಟಿ ಎಂದು ಸುದೀಪ್ ತಿಳಿಸಿದರು.

    ಕಳೆದ ಬಾರಿ ಬಿಗ್ ಬಾಸ್ ಸೀಸನ್ 10 ಪ್ರಾರಂಭವಾದ ವೇಳೆ, ಸ್ಪರ್ಧಿಗಳಿಗೆ ಸಮರ್ಥರು ಮತ್ತು ಅಸಮರ್ಥರು ಎಂದು ಪರಿಗಣಿಸಿ ತಂಡಗಳಾಗಿ ವಿಂಗಡಿಸಿದ್ದರು. ಅದರಂತೆಯೇ ಈ ಬಾರಿಯು ಕೂಡ ಹೊಸ ರೀತಿಯಲ್ಲಿ ಸ್ವರ್ಗ ಮತ್ತು ನರಕ ಎಂದು ಎರಡು ತಂಡ ಮಾಡಿ ಸ್ಪರ್ಧಿಗಳನ್ನು ಕಳುಹಿಸಲಾಗುತ್ತದೆ.

    ಸುದೀಪ್ ನಿರೂಪಣೆಯಲ್ಲಿ ಇದೇ ಸೆ.29ಕ್ಕೆ ಬಿಗ್ ಬಾಸ್ ಗ್ರ್ಯಾಂಡ್ ಆಗಿ ಲಾಂಚ್ ಆಗುತ್ತಿದೆ. ಪ್ರತಿದಿನ ರಾತ್ರಿ 9:30ಕ್ಕೆ ಶೋ ಪ್ರಸಾರವಾಗಲಿದೆ.

    Continue Reading

    BANTWAL

    ವಗ್ಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಬಸ್; ಹಲವರಿಗೆ ಗಾಯ

    Published

    on

    ಬಂಟ್ವಾಳ ತಾಲೂಕಿನ ವಗ್ಗದ ಸಮೀಪ ಕೊಪ್ಪಳ ಎಂಬಲ್ಲಿ ಸರ್ಕಾರಿ ಬಸ್‌ ಉರುಳಿ ಬಿದ್ದಿದ್ದು, ಹಲವರು ಗಾಯಗೊಂಡಿದ್ದಾರೆ.

    ಧರ್ಮಸ್ಥಳ ಮಂಗಳೂರು ನಡುವೆ ಸಂಚರಿಸುವ ಸರ್ಕಾರಿ ಬಸ್ ಇದಾಗಿದ್ದು, ಕೊಪ್ಪಳ ಎಂಬಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿದೆ. ಈ ವೇಳೆ ರಸ್ತೆಯ ಪಕ್ಕದ ಗುಂಡಿಗೆ ಬಸ್ ಉರುಳಿ ಬಿದ್ದಿದ್ದು ಬಸ್‌ನಲ್ಲಿದ್ದ ಹಲವರಿಗೆ ಗಾಯಗಳಾಗಿದೆ. ತಕ್ಷಣ ಸ್ಥಳೀಯ ಯುವಕರು ಸೇರಿ ಬಸ್‌ ಒಳಗಿದ್ದ ಪ್ರಯಾಣಿಕರನ್ನು ಬಸ್‌ ನಿಂದ ಹೊರ ತೆಗೆದಿದ್ದಾರೆ.

    ಗಾಯಾಳುಗಳನ್ನು ಖಾಸಗಿ ವಾಹನಗಳ ಮೂಲಕ ಸಮೀಪದ ಆಸ್ಪತ್ರೆಗೆ ರವಾನಿಸುವ ಕೆಲಸ ಮಾಡಿದ್ದಾರೆ. ಬಸ್ ಬರುತ್ತಿರುವ ವೇಳೆ ಬೈಕ್‌ ಒಂದು ಅಡ್ಡ ಬಂದಿದ್ದು ಈ ವೇಳೆ ಬಸ್ ನಿಯಂತ್ರಿಸುವ ವೇಳೆ ರಸ್ತೆಯಿಂದ ಪಕ್ಕಕ್ಕೆ ಉರುಳಿದೆ ಎಂದು ಬಸ್ ಚಾಲಕ ಮಾಹಿತಿ ನೀಡಿದ್ದಾರೆ . ಆದರೆ ಸ್ಥಳಿಯರು ಇದನ್ನು ನಿರಾಕರಿಸಿದ್ದು ಬಸ್ ಚಾಲಕನ ನಿರ್ಲಕ್ಷ್ಯವೇ ಈ ಅಪಘಾತಕ್ಕೆ ಕಾರಣ ಎಂದು ಹೇಳಿದ್ದಾರೆ.

    ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ಭೇಟಿ ನೀಡಿದ್ದು, ಮಾಹಿತಿ ಪಡೆದುಕೊಂಡು ಘಟನೆಗೆ ಕಾರಣ ಏನು ಎಂಬ ಬಗ್ಗೆ ವಿಚಾರಣೆ ಮುಂದುವರೆಸಿದ್ದಾರೆ.

    Continue Reading

    LATEST NEWS

    Trending