Connect with us

DAKSHINA KANNADA

ಗ್ರಾಹಕ ನ್ಯಾಯಾಲಯಕ್ಕೆ ದೂರು: ಹಾಳಾದ ಟಿವಿ ಬದಲು ಹೊಸ ಟಿವಿ ನೀಡಿದ Panasonic ..!

Published

on

ಗ್ರಾಹಕ ನ್ಯಾಯಾಲಯಕ್ಕೆ ದೂರು: ಹಾಳಾದ ಟಿವಿ ಬದಲು ಹೊಸ ಟಿವಿ ನೀಡಿದ Panasonic..!

ಮಂಗಳೂರು : ಗ್ರಾಹಕ ನ್ಯಾಯಾಲಯಕ್ಕೆ ದೂರು ನೀಡಿದ ಪರಿಣಾಮ ಹಾಳಾದ ಟಿವಿ ಬದಲು Panasonic ಕಂಪೆನಿ ಹೊಸ ಟಿವಿ ನೀಡಿದ ವಿದ್ಯಮಾನ ಮಂಗಳೂರಿನಲ್ಲಿ ನಡೆದಿದೆ.

ಘಟನೆಯ ವಿವರ : ಮಂಗಳೂರಿನ ಪ್ರತಿಷ್ಠಿತ ಪತ್ರಿಕೆಯೊಂದರ ಕಚೇರಿಯಲ್ಲಿ ಸೇವೆ ಸಲ್ಲಿಸುತ್ತಿರುವ ಗ್ರಾಹಕರೊಬ್ಬರು ಕಳೆದ ವರ್ಷ ಹೊಚ್ಚ ಹೊಸ ಸ್ಯಾಮ್‌ಸಂಗ್ ಟಿವಿಯೊಂದನ್ನು ನಗರದ ಸಿಟಿ ಸೆಂಟರ್ ಮಾಲ್‌ನಲ್ಲಿ ಇರುವ ರಿಲಯನ್ಸ್ ಡಿಜಿಟಲ್ ಮಳಿಗೆಯಲ್ಲಿ ಖರೀದಿಸಿದರು.

39 ಸಾವಿರ ಬೆಲೆಯುಳ್ಳ ಈ Panasonic ಟಿವಿ 10 ತಿಂಗಳಲ್ಲಿ ಕೆಟ್ಟು ಹೋಯಿತು.

ಈ ಬಗ್ಗೆ ಅವರು ರಿಲಯನ್ಸ್ ಡಿಜಿಟಲ್‌ಗೆ ದೂರು ಸಲ್ಲಿಸಿದರು. ಇದನ್ನು ಸಂಬಂಧಪಟ್ಟ ಸೇವಾ ಕೇಂದ್ರಕ್ಕೆ ರಿಲಯನ್ಸ್ ಮಳಿಗೆಯವರು ಕಳುಹಿಸಿದ್ದರು.

ಆದರೆ, ನಾಲ್ಕು ದಿನದಲ್ಲಿ ಟಿವಿಯನ್ನು ರಿಪೇರಿ ಮಾಡಿಕೊಡುವುದಾಗಿ ಹೇಳಿದ್ದ ಸೇವಾ ಕೇಂದ್ರ ವಾರವಾದರೂ ಈ ಬಗ್ಗೆ ಸ್ಪಂದನೆ ಮಾಡಿರಲಿಲ್ಲ.

ಸಾಕಷ್ಟು ಇಮೇಲ್, ದೂರವಾಣಿ ಕರೆ ಬಳಿಕ ಅವರು Panasonic, ರಿಲಯನ್ಸ್ ಡಿಜಿಟಲ್‌ಗೆ ಲೀಗಲ್ ನೋಟೀಸ್ ಜಾರಿಗೊಳಿಸಿದರು.

ಜೊತೆಗೆ ಗ್ರಾಹಕ ಕೇಂದ್ರಕ್ಕೆ ದೂರು ಸಲ್ಲಿಸಿದರು. ದೂರು ದಾಖಲಾಗುತ್ತಿದ್ದಂತೆ ಎಚ್ಚೆತ್ತ ಸ್ಯಾಮ್ ಸಂಗ್ ಕಂಪೆನಿ ಹೊಸ ಟಿವಿಯೊಂದನ್ನು ನೀಡಿ ಪ್ರಕರಣಕ್ಕೆ ಸುಖಾಂತ್ಯ ಹಾಡಿತು.

Click to comment

Leave a Reply

Your email address will not be published. Required fields are marked *

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಚುನಾವಣಾ ಆಯೋಗಕ್ಕೆ ದೂರು

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಪ್ರಕರಣ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

LATEST NEWS

Trending