LATEST NEWS
ಉಳ್ಳಾಲಕ್ಕೆ ಐಸಿಸ್ ನಂಟು: ಮಾಜಿ ಶಾಸಕ ಇದಿನಬ್ಬ ಮಗನ ಸೊಸೆ ಎನ್ಐಎ ವಶಕ್ಕೆ
ಮಂಗಳೂರು: ಐಸಿಸ್ ಉಗ್ರರೊಂದಿಗೆ ಸಂಬಂಧದ ಆರೋಪದಡಿ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಮಗ ಬಿ.ಎಂ ಬಾಷಾ ಅವರ ಸೊಸೆ ದೀಪ್ತಿ ಮಾರ್ಲ ಅವರನ್ನು ರಾಷ್ಟ್ರೀಯ ತನಿಖಾದಳ (ಎನ್ಐಎ) ಇಂದು ಉಳ್ಳಾಲದ ಮನೆಯಿಂದ ಬಂಧಿಸಿದೆ.
ಇಂದು ಬೆಳ್ಳಂಬೆಳಗ್ಗೆ ಉಳ್ಳಾಲದ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಪುತ್ರ, ಬಿ.ಎಂ. ಬಾಷಾ ಮನೆಗೆ ಎನ್ಐಎ ನ ಸಹ ತನಿಖಾಧಿಕಾರಿ ಕೃಷ ಕುಮಾರ್ ನೇತೃತ್ವದಲ್ಲಿ ಇತರ ಅಧಿಕಾರಿಗಳಾದ ಅಜಯ್ ಸಿಂಗ್ ಮತ್ತು ಮೋನಿಕಾ ಧಿಕ್ವಾಲ್ ಅವರ ತಂಡ ತೀವ್ರ ವಿಚಾರಣೆ ನಡೆಸಿ ದೀಪ್ತಿ ಅಲಿಯಾಸ್ ಮರಿಯಂಳನ್ನು ಬಂಧಿಸಿದ್ದಾರೆ.
ಇದೀಗ ಮಂಗಳೂರು ನಗರದ ಜಿಲ್ಲಾಸ್ಪತ್ರೆ ವೆನ್ಲಾಕ್ಗೆ ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ, ಮಂಗಳೂರಿನ ಜಿಲ್ಲಾ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಬಳಿ ಹೆಚ್ಚಿನ ವಿಚಾರಣೆಗೆ ದೆಹಲಿಗೆ ಕರೆದುಕೊಂಡು ಹೋಗಲಿದ್ದಾರೆಂಬ ಉನ್ನತ ಮೂಲಗಳಿಂದ ಮಾಹಿತಿ ಇದೆ.
ಇದೇ ಮನೆಗೆ ಕಳೆದ ಅಗಸ್ಟ್ 4ರಂದು ದಾಳಿ ನಡೆಸಿದ್ದ ಎನ್ ಐಎ ಅಧಿಕಾರಿಗಳು, ಅಂದು ಎರಡು ದಿನಗಳ ದಾಳಿಯ ಬಳಿಕ ಮಾಜಿ ಶಾಸಕ ಇದಿನಬ್ಬ ಅವರ ಪುತ್ರ ಬಿ.ಎಂ ಬಾಷಾ ಅವರ ಕಿರಿಯ ಪುತ್ರ ಅಬ್ದುಲ್ ರೆಹಮಾನರನ್ನು ಬಂಧಿಸಿದ್ದರು.
ಈ ವೇಳೆ ಬಂಧಿತ ರೆಹಮಾನ್ನ ಪತ್ನಿ ದೀಪ್ತಿ ಆಲಿಯಾಸ್ ಮರಿಯಂ ಮೇಲೂ ಅನುಮಾನ ಬಂದಿತ್ತು.
ಆದರೆ ಹಾಲುಣಿಸುವ ಸಣ್ಣ ಮಗುವಿದ್ದ ಕಾರಣ ಎನ್ಐಎ ಕೇವಲ ವಿಚಾರಣೆ ನಡೆಸಿ ಬಿಟ್ಟಿತ್ತು. ಇದೀಗ ಮತ್ತೆ ಉಳ್ಳಾಲ ಮನೆಗೆ ಎನ್ ಐಎ ದಾಳಿ ನಡೆಸಿ ದೀಪ್ತಿ ಆಲಿಯಾಸ್ ಮರಿಯಂ ಬಂಧಿಸಿದೆ.
ಮೂಲತಃ ಕೊಡಗು ಮೂಲದ ದೀಪ್ತಿ ಹತ್ತು ವರ್ಷಗಳ ಹಿಂದೆ ದೇರಳಕಟ್ಟೆಯಲ್ಲಿ ಬಿಡಿಎಸ್ ಕಲಿಯುತ್ತಿದ್ದಾಗ ಬಿಎಂ ಬಾಷಾ ಪುತ್ರ ಅನಾಸ್ ಪರಿಚಯವಾಗಿ ಮದುವೆಯಾಗಿದ್ದಳು.
ಆನಂತರ ಮುಸ್ಲಿಂ ಆಗಿ ಪರಿವರ್ತನೆಯಾಗಿದ್ದ ದೀಪ್ತಿ ತನ್ನ ಹೆಸರನ್ನು ಮರಿಯಂ ಎಂದು ಬದಲಿಸಿಕೊಂಡಿದ್ದಳು.
ಇದೀಗ ಉಗ್ರವಾದಿ ಗುಂಪು ಐಸಿಸ್ ಸಂಪರ್ಕ ಪಡೆದಿದ್ದು ಯುವಕರನ್ನು ಸೇರಿಸುವ ಜಾಲದಲ್ಲಿ ಇದ್ದಾಳೆ ಎನ್ನುವ ಶಂಕೆಯಲ್ಲಿ ಎನ್ಐಎ ಅಧಿಕಾರಿಗಳು ತನಿಖೆ ನಡೆಸಿ ಬಂಧಿಸಿದ್ದಾರೆ.
ಕಾಶ್ಮೀರದ ಕಣಿವೆಗಳಲ್ಲಿ ಮತ್ತು ದೂರದ ಸಿರಿಯಾದಲ್ಲಿ ನಡೆಯುವ ಐಸಿಸ್ ಚಟುವಟಿಕೆಗಳಲ್ಲಿ ಮಂಗಳೂರಿನ ಉಳ್ಳಾಲದ ಮಾಜಿ ಶಾಸಕ ಇದ್ದಿನಬ್ಬರ ಕುಟುಂಬವೇ ಭಾಗಿಯಾಗಿರುವುದು ಚರ್ಚೆಗೆ ಕಾರಣವಾಗಿತ್ತು. ಅಗಸ್ಟ್ನಲ್ಲಿ ಇದ್ದಿನಬ್ಬರ ಮೊಮ್ಮಗ ಅಮ್ಮರ್ ಅಬ್ದುಲ್ ರಹಮಾನ್ ನನ್ನಷ್ಟೇ ಎನ್ ಐಎ ವಶಕ್ಕೆ ಪಡೆದಿತ್ತು. ಇದೇ ಮನೆಯಲ್ಲಿ ಮತ್ತಷ್ಟು ಐಸಿಸ್ ನಂಟಿನ ಲಿಂಕ್ ಇರುವುದು ರಾಷ್ಟ್ರೀಯ ತನಿಖಾ ದಳದ ತನಿಖೆ ವೇಳೆ ಬೆಳಕಿಗೆ ಬಂದಿದೆ. ಹೀಗಾಗಿ ಎನ್ ಐಎ ತಂಡ ಅಂದೇ ಮನೆಯ ಮತ್ತಿಬ್ಬರು ಸದಸ್ಯರ ಪಾಸ್ ಪೋರ್ಟ್ ವಶಕ್ಕೆ ಪಡೆದಿದ್ದು, ಐಸಿಸ್ ನಂಟಿಗೆ ಪೂರಕ ಸಾಕ್ಷ್ಯ ಲಭ್ಯವಾಗುತ್ತಿದ್ದಂತೆ ಬಂಧಿಸಲು ಸಂಚು ರೂಪಿಸಿದೆ.
ಹಿಂದೂ ಧರ್ಮದಿಂದ ಮತಾಂತರ
ಇದ್ದಿನಬ್ಬರ ಮನೆಯಲ್ಲಿ ಲವ್ ಜಿಹಾದ್ ನಡೆದಿದೆ ಅನ್ನುವ ಗಂಭೀರ ಅರೋಪ ಕೇಳಿ ಬಂದಿದ್ದು, ಲವ್ ಜಿಹಾದ್ ನಡೆಸಿ ಹಿಂದೂ ಹೆಣ್ಮಗಳೊಬ್ಬಳನ್ನು ಭಯೋತ್ಪಾದನಾ ಕೃತ್ಯಗಳಿಗೆ ಬಳಸಿಕೊಳ್ಳಲಾಗಿದೆ ಅಂತ ವಿಶ್ವಹಿಂದೂ ಪರಿಷತ್ ಬಜರಂಗದಳ ಗಂಭೀರವಾಗಿ ಆರೋಪಿಸಿತ್ತು. ಅಲ್ಲದೆ ಉಳ್ಳಾಲದ ಮಾಸ್ತಿಕಟ್ಟೆಯಲ್ಲಿರುವ ಮನೆಗೆ ನುಗ್ಗಲು ಯತ್ನಿಸಿತ್ತು. ಇದೀಗ ಅದಕ್ಕೆ ಪೂರಕ ಎನ್ನುವಂತೆ ದೀಪ್ತಿ ಮಾರ್ಲ ಬಂಧನವಾಗಿದೆ. ಮಡಿಕೇರಿ ಮೂಲದ ದೀಪ್ತಿ ಮಾರ್ಲ ಎಂಬ ಬಂಟ ಸಮುದಾಯದ ಹಿಂದೂ ಯುವತಿಯನ್ನು ಇದ್ದಿನಬ್ಬರ ಮತ್ತೊಬ್ಬ ಮೊಮ್ಮಗ ಅನಾಸ್ ಎಂಬಾತ ವಿವಾಹವಾಗಿ ಮುಸ್ಲಿಂ ಧರ್ಮಕ್ಕೆ ಮತಾಂತರಗೊಳಿಸಿದ್ದರು. ಅಲ್ಲದೇ ಆ ಬಳಿಕ ದೀಪ್ತಿ ಮಾರ್ಲ ತನ್ನ ಹೆಸರನ್ನ ಮರಿಯಮ್ ಎಂದು ಬದಲಿಸಿಕೊಂಡಿದ್ದರು. ಆಗಸ್ಟ್ ನಲ್ಲಿ ಅಮ್ಮರ್ ಅಬ್ದುಲ್ ರೆಹಮಾನ್ ಬಂಧನದ ಬೆನ್ನಲ್ಲೇ ಎನ್ ಐಎ ತಂಡ ದೀಪ್ತಿ ಮಾರ್ಲ ಮತ್ತು ಆಕೆಯ ಪತಿ ಅನಾಸ್ ನ ಪಾಸ್ ಪೋರ್ಟ್ ವಶಕ್ಕೆ ಪಡೆದಿತ್ತು. ಮಡಿಕೇರಿ ಮೂಲದವಳಾದ ಈಕೆ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಶಿಕ್ಷಣ ಪಡೆಯುವ ಸಂದರ್ಭ ಅನಾಸ್ ನ ಸಂಪರ್ಕಕ್ಕೆ ಬಂದು ಅದು ಪ್ರೇಮಕ್ಕೆ ತಿರುಗಿ ಇಸ್ಲಾಂಗೆ ಮತಾಂತರವಾಗಿ ಅನಾಸ್ ಜೊತೆ ವಿವಾಹ ನಡೆದಿದೆ. ಅಲ್ಲದೇ 2017ರಲ್ಲಿ ಕಾಸರಗೋಡಿನಿಂದ ಐಸಿಸ್ ಸೇರಿ ಸಿರಿಯಾಗೆ ತೆರಳಿದ್ದ ಇದ್ದಿನಬ್ಬ ಮರಿಮೊಮ್ಮಗಳು ಅಜ್ಮಲಾ ಜೊತೆಗೂ ಈಕೆಗೆ ಸಂಪರ್ಕ ಇತ್ತು ಎನ್ನಲಾಗಿದೆ. ಇದೇ ಮಾಹಿತಿ ಆಧಾರದಲ್ಲಿ ಎನ್ ಐಎ ಇದ್ದಿನಬ್ಬರ ಪುತ್ರನ ಮನೆಗೆ ದಾಳಿ ನಡೆಸಿದ್ದು, ಈ ವೇಳೆ ದೀಪ್ತಿಯನ್ನ ತೀವ್ರ ವಿಚಾರಣೆ ನಡೆಸಿತ್ತು. ಆದರೆ ಈ ವೇಳೆ ಮತ್ತೊಬ್ಬ ಮೊಮ್ಮಗ ಅಮ್ಮರ್ ವಿರುದ್ದ ಸಾಕ್ಷ್ಯಗಳು ಲಭ್ಯವಾಗಿದ್ದು, ಆತನನ್ನ ವಶಕ್ಕೆ ಪಡೆದಿತ್ತು. ದೀಪ್ತಿ ಕಾಶ್ಮೀರಕ್ಕೆ ಹೋಗಿದ್ದು, ಅಲ್ಲಿನ ಐಸಿಸ್ ಉಗ್ರರ ಜೊತೆಗೆ ಸಂಪರ್ಕ ಇತ್ತು ಎಂಬ ಬಗ್ಗೆ ಎನ್ ಐಎ ಮಾಹಿತಿ ಕಲೆ ಹಾಕಿರುವುದಾಗಿ ತಿಳಿದುಬಂದಿದೆ. ಅಲ್ಲದೇ ಕ್ರೋನಿಕಲ್ ಪೌಂಡೇಶನ್ ಇನ್ಸ್ಟಾ್ಗ್ರಾಮ್ ಪೇಜ್ ಮೂಲಕ ಫಂಡಿಂಗ್ ಕಾರ್ಯದಲ್ಲಿ ನಿರತರಾಗಿರುವ ಬಗ್ಗೆಯೂ ಮಾಹಿತಿ ಸಿಕ್ಕಿದೆ ಎನ್ನಲಾಗಿದೆ. ಹೀಗಾಗಿ ಆಗಸ್ಟ್ ನಲ್ಲಿ ಬಂಧಿತನಾಗಿದ್ದ ಹಮ್ಮರ್ ಅಬ್ದುಲ್ ರೆಮಮಾನ್ ಮಾಹಿತಿ ಮೇರೆಗೆ ಸದ್ಯ ದೀಪ್ತಿ ಬಂಧನವಾಗಿದೆ .
bangalore
ಮಹಿಳೆಯ ಅತಿಯಾದ ಕಾಮದಾಹ…! ದಾಹಕ್ಕೆ ಅಂತ್ಯ ಹಾಡಿದ ಯುವಕ..!
ಆಕೆ 48 ವರ್ಷ ಪ್ರಾಯದ ಮಹಿಳೆಯಾಗಿದ್ದು, ತನ್ನಿಬ್ಬರು ಹೆಣ್ಣು ಮಕ್ಕಳಿಗೆ ಮದುವೆ ಮಾಡಿಸಿ ಗಂಡನ ಮನೆಗೆ ಕಳುಹಿಸಿ ಕೊಟ್ಟಿದ್ದಾಳೆ. ಬೆಂಗಳೂರಿನ ಕೊಡಿಗೆ ಹಳ್ಳಿಯಲ್ಲಿ ಮನೆ ಮಾಡಿಕೊಂಡು ಒಂಟಿಯಾಗಿದ್ದ ಆಕೆಯ ದೇಹ ನಗ್ನವಾಗಿ ಬೆಡ್ರೂಮಿನಲ್ಲಿ ಪತ್ತೆಯಾಗಿತ್ತು. ಎಪ್ರಿಲ್ 19 ರಂದು ನಡೆದಿದ್ದ ಈ ಘಟನೆಯನ್ನು ಭೇದಿಸಿದ ಪೊಲೀಸರಿಗೆ ಶಾಕ್ ಆಗುವಂತ ವಿಚಾರಗಳು ಗೊತ್ತಾಗಿದೆ.
ಕೊಡಿಗೆ ಹಳ್ಳಿಯ ಭದ್ರಪ್ಪ ಲೇಔಟ್ನಲ್ಲಿ ನಡೆದಿದ್ದ ಶೋಭಾ ಎಂಬ ಮಹಿಳೆಯ ಕೊ*ಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ ಕೊಲೆ ಆರೋಪಿಯಾಗಿರುವ ನವೀನ್ ಎಂಬ ಯುವಕನನ್ನು ಕೊಡಿಗೆ ಹಳ್ಳಿಯ ಪೊಲೀಸರು ಬಂದಿಸಿದ್ದಾರೆ. ವಿಚಾರಣೆ ವೇಳೆ ಬಾಯ್ಬಿಟ್ಟ ವಿಚಾರ ಕೇಳಿ ಪೊಲೀಸರೇ ಸುಸ್ತಾಗಿದ್ದಾರೆ. ಬಳಿಕ ಹೆಚ್ಚಿನ ತನಿಖೆ ನಡೆಸಿದ ಪೊಲೀಸರಿಗೆ ಶೋಭಾಳ ಕಾಮದಾಹ ಬೆಳಕಿಗೆ ಬಂದಿದೆ.
ಶೋಭಾಳಿಗೆ ಇನ್ಸ್ಟಾಗ್ರಾಂ ಮೂಲಕ ಪರಿಚಿತನಾಗಿದ್ದ ನವೀನ್ ಬಳಿಕ ಸ್ನೇಹಿತನಾಗಿ, ಅದು ಪ್ರೀತಿಗೆ ತಿರುಗಿ ಬಳಿಕ ಇಬ್ಬರ ನಡುವೆ ಅನೈತಿಕ ಸಂಬಂಧದವರೆಗೂ ಬಂದು ನಿಂತಿತ್ತು. ಮಗನ ವಯಸ್ಸಿನ ಹುಡುಗನ ಜೊತೆಯಲ್ಲಿ ನಿರಂತರ ಸೆಕ್ಸ್ ಮಾಡುತ್ತಿದ್ದ ಶೋಭಾಳ ಅತಿಯಾದ ಕಾಮಧಾಹದಿಂದ ಬೇಸತ್ತು ಆಕೆಯನ್ನು ಕೊಲೆ ಮಾಡಿದ್ದಾಗಿ ಹೇರೋಹಳ್ಳಿ ಮೂಲದ ಆರೋಪಿ ನವೀನ್ ಹೇಳಿಕೆ ನೀಡಿದ್ದಾನೆ.
ಕೊಲೆ ನಡೆದ ದಿನವೂ ಶೋಭಾ ಮನೆಗೆ ನವೀನ್ ಬಂದಿದ್ದ. ಏ.19ರಂದು ಇಬ್ಬರು ದೈಹಿಕ ಸಂರ್ಪಕವನ್ನು ಬೆಳೆಸಿದ್ದರು. ಆ ನಂತರ ಶೋಭಾ ಮತ್ತೆ ನವೀನ್ಗೆ ಸೆಕ್ಸ್ಗೆ ಒತ್ತಾಯಿಸಿದ್ದು ನಿರಾಕರಿಸಿದಾಗ ಬ್ಲ್ಯಾಕ್ಮೇಲ್ ಮಾಡಿದ್ದಾಳೆ. ಈಕೆ ಅತಿಯಾಗಿ ಸೆಕ್ಸ್ಗೆ ಒತ್ತಾಯಿಸಿದ್ದಕ್ಕೆ ಬೇಸರಗೊಂಡ ನವೀನ್ ಬೆಡ್ ರೂಮಿನಲ್ಲೇ ಆಕೆಯ ಕಥೆ ಮುಗಿಸಿದ್ದ.
48ರ ಮಹಿಳೆಗೆ ಯುವಕರ ಮೇಲೆ ಹುಚ್ಚು
48ರ ಶೋಭಾ ಕೇವಲ ನವೀನ್ ಮಾತ್ರವಲ್ಲದೇ ಅನೇಕ ಯುವಕರ ಸಹವಾಸ ಬೆಳೆಸಿದ್ದಳು. ಒಬ್ಬೊಬ್ಬ ಹುಡುಗರಿಗೂ ಒಂದೊಂದು ಹಣ್ಣಿನ ಹೆಸರಿಟ್ಟಿದ್ದು, ನವೀನ್ಗೆ ಆ್ಯಪಲ್ ಎಂದು ಹೆಸರಿಟ್ಟಿದ್ದಳಂತೆ. ಆ್ಯಪಲ್, ಆರೆಂಜ್, ಬನಾನ ಹೆಸರಿನಲ್ಲಿ ಹುಡುಗರ ಹೆಸರು ಸೇವ್ ಮಾಡಿಕೊಳ್ಳುತ್ತಿದ್ದಳು. ಆ್ಯಪ್ಗಳಲ್ಲಿಯೂ ಆ್ಯಕ್ಟಿವ್ ಆಗಿದ್ದ ಶೋಭಾ ಸುಮಾರು 20 ಕ್ಕೂ ಹೆಚ್ಚು ಹುಡುಗರನ್ನು ಖೆಡ್ಡಾಗೆ ಬೀಳಿಸಿಕೊಂಡಿದ್ದಳು. ಈಕೆ ಕರೆದಾಗ ಯುವಕರು ಏನಾದರೂ ಬಾರದೆ ಇದ್ದರೆ ಅವರ ಮನೆ ಬಳಿಯೇ ಹೋಗುತ್ತಿದ್ದಳು. ನಂತರ ಕಾರಿನ ಹಾರ್ನ್ ಜೋರಾಗಿ ಹಾಕುತ್ತಿದ್ದಳು. ಇಷ್ಟಕ್ಕೂ ಜಗ್ಗದೆ ಹೋದರೆ ಮನೆಯವರಿಗೆ ಖಾಸಗಿ ಫೋಟೊವನ್ನು ತೋರಿಸುವುದಾಗಿ ಬೆದರಿಕೆ ಹಾಕುತ್ತಿದ್ದಳು. ಅಷ್ಟೇ ಅಲ್ಲದೆ ಆ ಯುವಕರ ಮದುವೆಗೂ ಅಡ್ಡಿ ಪಡಿಸಿ ಮದುವೆ ನಿಲ್ಲಿಸಿದ್ದಳು.
ಕೊಲೆಯಾದ ದಿನವೂ ನವೀನ್ಗೆ ಬ್ಲಾಕ್ ಮೇಲ್ ಮಾಡಿ ಕರೆಸಿಕೊಂಡಿದ್ದಳು. ನವೀನ್ ಎಡಗೈಗೆ ಗಾಯವಾಗಿತ್ತು, ಗಾಯದ ಮೇಲೆ ಕೂತು ನೀನು ಮದುವೆ ಆಗಬಾರದು, ಹೀಗೆ ನನ್ನ ಜತೆ ಇರಬೇಕು. ಮದುವೆ ಆದರೆ ಅಲ್ಲೆ ಬಂದು ಗಲಾಟೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಳು. ಇದರಿಂದ ಬೇಸತ್ತ ನವೀನ್, ಶೋಭಾಳ ಕತ್ತು ಹಿಸುಕಿ ಕೊ*ಲೆ ಮಾಡಿದ್ದಾಗಿ ವಿಚಾರಣೆ ವೇಳೆ ಹೇಳಿದ್ದಾನೆ.
LATEST NEWS
ನ್ಯೂಡಲ್ಸ್ ಪ್ಯಾಕೇಟ್ ನಲ್ಲಿ ಸಿಕ್ಕಿತು 6 ಕೋಟಿ ರೂ. ಮೌಲ್ಯದ ಡೈಮಂಡ್!
ಮುಂಬೈ : ಹಣ, ಚಿನ್ನವನ್ನು ಖದೀಮರು ಎಲ್ಲೆಲ್ಲೋ ಅಡಗಿಸಿಟ್ಟುಕೊಂಡು ಸಾಗಿಸುವ ಸುದ್ದಿಗಳನ್ನು ಕೇಳುತ್ತಿರುತ್ತೇವೆ. ಆದರೆ, ಇಲ್ಲೊಬ್ಬ ನೂಡಲ್ಸ್ ಪ್ಯಾಕೇಟ್ ನಲ್ಲಿ ಡೈಮಂಡ್ಸ್ ಸಾಗಿಸಲು ಯತ್ನಿಸಿ ಸಿಕ್ಕಿ ಹಾಕಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸುವ ವೇಳೆ ನೂಡಲ್ಸ್ ಪ್ಯಾಕೆಟ್ಗಳಲ್ಲಿ ಹುದುಗಿಸಿಟ್ಟಿದ್ದ ವಜ್ರಗಳ ಹರಳುಗಳು ಪತ್ತೆಯಾಗಿವೆ. 6.48 ಕೋಟಿ ರೂಪಾಯಿ ಎಂದು ಮೌಲ್ಯದ ಹರಳನ್ನು ವಶಕ್ಕೆ ಪಡೆಯಲಾಗಿದೆ.
ಮುಂಬೈನಿಂದ ಬ್ಯಾಂಕಾಕ್ ಪ್ರಯಾಣಿಸುತ್ತಿದ್ದ ಭಾರತೀಯ ಪ್ರಜೆಯನ್ನು ವಶಕ್ಕೆ ಪಡೆಯಲಾಯಿತು. ಈ ವೇಳೆ ಆತನ ಟ್ರಾಲಿ ಬ್ಯಾಗ್ನಲ್ಲಿ ನೂಡಲ್ಸ್ ಪ್ಯಾಕೆಟ್ಗಳಿದ್ದವು. ಅದರಲ್ಲಿ ಅಡಗಿಸಿಟ್ಟಿದ್ದ ವಜ್ರಗಳಿದ್ದು ಅವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಹಲವರು ವಶಕ್ಕೆ
ಕೊಲಂಬೋದಿಂದ ಮುಂಬೈಗೆ ಪ್ರಯಾಣಿಸುತ್ತಿದ್ದ ವಿದೇಶಿ ಪ್ರಜೆಯೊಬ್ಬರು ಚಿನ್ನದ ಗಟ್ಟಿಗಳು ಮತ್ತು ಕತ್ತರಿಸಿದ ತುಂಡನ್ನು ಸಾಗಿಸುತ್ತಿರುವುದು ಕಂಡುಬಂದಿದೆ. 321 ಗ್ರಾಂ ತೂಕದ ಚಿನ್ನವನ್ನು ತನ್ನ ಒಳ ಉಡುಪುಗಳಲ್ಲಿ ಅಡಗಿಸಿಟ್ಟಿದ್ದ ಆತನನ್ನು ವಶಕ್ಕೆ ಪಡೆಯಲಾಗಿದೆ.
ದುಬೈ ಮತ್ತು ಅಬುಧಾಬಿಯಿಂದ ತಲಾ ಇಬ್ಬರು, ಬಹ್ರೇನ್, ದೋಹಾ, ರಿಯಾದ್, ಮಸ್ಕತ್, ಬ್ಯಾಂಕಾಕ್ ಮತ್ತು ಸಿಂಗಾಪುರದಿಂದ ತಲಾ ಒಬ್ಬರು ಸೇರಿದಂತೆ ಕನಿಷ್ಠ 10 ಭಾರತೀಯ ಪ್ರಜೆಗಳನ್ನು ತಡೆಹಿಡಿಯಲಾಯಿತು. ಈ ವೇಳೆ 4.04 ಕೋಟಿ ಮೌಲ್ಯದ 6.199 ಕೆ.ಜಿ ಚಿನ್ನ ಸಾಗಿಸುತ್ತಿರುವುದು ಕಂಡುಬಂದಿದೆ. ಅವರಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ : ರಜೆಯಿದೆ ಎಂದು ಪ್ರವಾಸಕ್ಕೆ ಹೊರಟಿದ್ದೀರಾ? ಗಮನಿಸಿ, ಈ ಪ್ರವಾಸಿ ತಾಣಗಳಿಗಿದೆ ನಿರ್ಬಂಧ
ಮುಂಬೈ ವಿಮಾನ ನಿಲ್ದಾಣದಿಂದ ಕಳ್ಳಸಾಗಣೆ ಮಾಡಿದ ಚಿನ್ನವನ್ನು ಹೊರತರಲು ಸಹಾಯ ಮಾಡಿದ್ದ ಆರೋಪದ ಮೇಲೆ ಅಲ್ಲಿನ ಫಾಸ್ಟ್ ಫುಡ್ ರೆಸ್ಟೋರೆಂಟ್ 38 ವರ್ಷದ ಉದ್ಯೋಗಿಯನ್ನು ಮುಂಬೈ ಕಸ್ಟಮ್ಸ್ನ ಏರ್ ಇಂಟೆಲಿಜೆನ್ಸ್ ಯುನಿಟ್ ಬಂಧಿಸಿದೆ. ಸುಮಾರು 1.86 ಕೋಟಿ ಮೌಲ್ಯದ 6 ಅಂಡಾಕಾರದ ಚಿನ್ನದ ಕ್ಯಾಪ್ಸೂಲ್ಸ್ನಲ್ಲಿ ತನ್ನ ಬೆಲ್ಟ್ನಲ್ಲಿ ಅಡಗಿಸಿಟ್ಟಿದ್ದ ಬಗ್ಗೆ ವರದಿಯಾಗಿದೆ.
BANTWAL
ಬಂಟ್ವಾಳ : ಬಾವಿಯೊಳಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಸಾ*ವು
ಬಂಟ್ವಾಳ : 30 ಅಡಿ ಇರುವ ಆಳದ ಬಾವಿಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಕೂಲಿ ಕಾರ್ಮಿಕರು ಬಾವಿಯೊಳಗೆ ಆಕ್ಸಿಜನ್ ಸಿಗದೇ ಸಾ*ವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಪಡಿಬಾಗಿಲಿನಲ್ಲಿ ನಡೆದಿದೆ.
ಮೃ*ತರನ್ನು ಪರ್ತಿಪ್ಪಾಡಿ ನಿವಾಸಿ ಇಬ್ರಾಹಿಂ(40) ಹಾಗೂ ಮಲಾರ್ ನಿವಾಸಿ ಆಲಿ (24) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ : ಡಿವೈಡರ್ ಗೆ ಡಿ*ಕ್ಕಿ ಹೊಡೆದ ಬೈಕ್; ಸವಾರ ಸ್ಥಳದಲ್ಲೇ ಸಾ*ವು
ಮೃ*ತ ಇಬ್ರಾಹಿಂ ಎಂಬವರು ಸುಮಾರು 20 ವರ್ಷಗಳಿಂದ ಬಾವಿಗೆ ರಿಂಗ್ ಹಾಕುವಲ್ಲಿ ಪರಿಣಿತರಾಗಿದ್ದರು. ಮೃ*ತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಲಾಗಿದೆ.
- DAKSHINA KANNADA6 days ago
ಮಂಗಳೂರು : ಬೈಕ್ಗೆ ಕಾರು ಡಿಕ್ಕಿ; ಇಹಲೋಕ ತ್ಯಜಿಸಿದ ವಿದ್ಯಾರ್ಥಿ
- DAKSHINA KANNADA6 days ago
ಸೀರೆ ಉಟ್ರೆ ಕ್ಯಾನ್ಸರ್ ಬರುತ್ತಂತೆ..! ಏನಿದು ಸೀರೆ ಕ್ಯಾನ್ಸರ್?
- DAKSHINA KANNADA7 days ago
ಬಿಜೆಪಿಯಿಂದ ಬಿಲ್ಲವ ನಾಯಕ ಔಟ್..? ನಾರಾಯಣ ಗುರು ಹೈಜಾಕ್..!
- DAKSHINA KANNADA5 days ago
“ಸೆಕ್ಸ್” ನನ್ನ ಸಾಮರ್ಥ್ಯದ ರಹಸ್ಯ…! ಮಾಜಿ ಸಂಸದೆಯ ಹೇಳಿಕೆ ವೈರಲ್..!