FILM
ಕಂಟೆಂಟ್ ಸ್ಟಾರ್ ನಿಹಾರಿಕಾಗೆ ಒಲಿದು ಬಂತು ಅದೃಷ್ಟ..! ‘ಯಶ್’ ಜೊತೆ ವೀಡಿಯೋ ಮಾಡಿ ಹಿಟ್ ಆದ ನಿಹಾರಿಕಾ..
ಆಂಧ್ರಪ್ರದೇಶ/ಮಂಗಳೂರು: ಯಾರ ಅದೃಷ್ಟ ಹೇಗೆ ಬದಲಾಗುತ್ತೆ ಗೊತ್ತಿಲ್ಲ.. ಅದೃಷ್ಟ ಅನ್ನೋದು ಯಾವುದೇ ಹಣ ಕೊಟ್ಟು ಪಡೆಯುವಂತದಲ್ಲ. ಅದು ತಾನಾಗಿಯೇ ಒಳಿದು ಬರಬೇಕು. ಇನ್ನು ಬಹಳಷ್ಟು ಜನ ಸೋಶಿಯಲ್ ಮೀಡಿಯಾವನ್ನು ತಮ್ಮ ಪ್ರತಿಭೆಗೆ ಪ್ಲಾಟ್ಫಾರ್ಮ್ ಆಗಿ ಮಾಡಿಕೊಂಡಿದ್ದಾರೆ. ಇದಕ್ಕೆ ಉತ್ತಮ ಉದಾಹರಣೆ ಅಂದ್ರೆ ನಿಹಾರಿಕಾ…
ಹೌದು.. ಈಕೆ ತನ್ನದೇ ಆದ ಯೂಟ್ಯೂಬ್ ಚಾನೆಲ್ವೊಂದರಲ್ಲಿ ಮಿಂಚುತ್ತಿದ್ದ ಹುಡುಗಿ. ಆಂಧ್ರ ಸೋಶಿಯಲ್ ಮೀಡಿಯಾ ಸ್ಟಾರ್ ನಿಹಾರಿಕಾ ಕೇವಲ ತೆಲುಗು ಅಲ್ಲದೇ ಬಾಲಿವುಡ್ನಲ್ಲೂ ತಮ್ಮ ನಿಲುವನ್ನು ಕಂಡುಕೊಂಡಿದ್ದಾರೆ. ಸಿನೆಮಾಗಳ ಪ್ರಚಾರಕ್ಕಾಗಿ ತಮ್ಮ ವಿಭಿನ್ನ ವೀಡಿಯೋ ಕಂಟೆಂಟ್ ಮೂಲಕ ಜನರನ್ನು ರೀಚ್ ಮಾಡ್ತಾರೆ. ಅಲ್ಲದೆ ತೆಲುಗು ಸ್ಟಾರ್ ಮಹೇಶ್ ಬಾಬು ಜೊತೆ ಸಿನೆಮಾ ಪ್ರಚಾರಕ್ಕಾಗಿ ಒಂದು ವಿಡಿಯೋವನ್ನು ಮಾಡಿದ್ದು ಸಖತ್ ವೈರಲ್ ಆಗಿತ್ತು. ಬಾಲಿವುಡ್ ನ ಕರೀನಾ ಕಪೂರ್ ಸೇರಿದಂತೆ ಕೆಜಿಎಫ್ ಮೂವಿ ರಿಲೀಸ್ ಸಮಯದಲ್ಲೂ ಯಶ್ ಜೊತೆ ವೀಡಿಯೋ ಕಂಟೆಂಟ್ ಮಾಡಿ ಹಂಚಿಕೊಂಡಿದ್ದರು.
ಒಲಿದು ಬಂತು ಅದೃಷ್ಟ:
ಇದೀಗ ನಿಹಾರಿಕಾಗೆ ಅದೃಷ್ಟ ಒಳಿದು ಬಂದಿದೆ. ಇನ್ನು ನಿಹಾರಿಕಾಗೆ ಎಷ್ಟರ ಮಟ್ಟಿಗೆ ಬೇಡಿಕೆ ಹೆಚ್ಚಾಗಿ ಅಂದ್ರೆ ನ್ಯಾಷನಲ್ ಸ್ಟಾರ್ ಯಶ್ ರವರ ಸಿನೆಮಾಗೆ ಪ್ರಮೋಷನ್ ನೀಡಿರುವುದೇ ಇದಕ್ಕೆ ಸಾಕ್ಷಿ. ಆ ಸಮಯದಲ್ಲಿ ಈ ವೀಡಿಯೋ ಕೂಡಾ ಸಖತ್ ವೈರಲ್ ಆಗಿತ್ತು. ಇದೀಗ ಕಂಟೆಂಟ್ ಕ್ರಿಯೇಟರ್ ನಿಂದ ಸಿನೆಮಾ ಹಿರೋಯಿನ್ ಆಗಿ ಚಿತ್ರರಂಗಕ್ಕೆ ಹೆಜ್ಜೆ ಇಡುತ್ತಿದ್ದಾರೆ. ನಿಹಾರಿಕಾ ತಮ್ಮ ಚೊಚ್ಚಲ ಸಿನೆಮಾವನ್ನು ತಮಿಳು ಚಿತ್ರದ ಮೂಲಕ ಆರಂಭಿಸುತ್ತಿದ್ದಾರೆ.
Read More..; ಡಿ ಬಾಸ್ ಫ್ಯಾನ್ಸ್ ಗೆ ಗುಡ್ ನ್ಯೂಸ್; ‘ಡೆವಿಲ್’ ಚಿತ್ರ ಬಿಡುಗಡೆಗೆ ದಿನಾಂಕ ಫಿಕ್ಸ್
ದಕ್ಷಿಣದ ಪ್ರಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಈ ಸಿನೆಮಾವನ್ನು ನಿರ್ಮಾಣ ಮಾಡುತ್ತಿದೆ. ಆಕಾಶ್ ಭಾಸ್ಕರ್ ಚಿತ್ರವನ್ನು ನಿರ್ದೇಶನ ಮಾಡಲಿದ್ದಾರೆ. ಇನ್ನೂ ಸಿನೆಮಾದಲ್ಲಿ ನಿಹಾರಿಕಾಳಿಗೆ ಅಥರ್ವ ಜೋಡಿಯಾಗಲಿದ್ದಾರೆ.
ಈ ಸಿನೆಮಾಗೆ ಇನ್ನೂ ಹೆಸರು ಫೈನಲ್ ಆಗಿಲ್ಲ. ಆದರೆ ಈ ಸಿನೆಮಾ ಪಕ್ಕಾ ಹಾಸ್ಯ ಪ್ರದಾನವಾಗಿದ್ದು, ಪ್ರಣಯ, ಹಾಸ್ಯ, ಭಗ್ನ ಪ್ರೇಮ ಹಾಗೂ ರೋಡ್ ಟ್ರಿಪ್ಗಳನ್ನು ಒಳಗೊಂಡಿರುತ್ತದೆ. ಚಿತ್ರದ ಪ್ರಿ ಪ್ರೊಡಕ್ಷನ್ ಆರಂಭವಾಗಿದ್ದು, ಶೀಘ್ರದಲ್ಲಿಯೇ ಚಿತ್ರದ ಮುಹೂರ್ತ ಆಗಲಿದೆ.
FILM
ದರ್ಶನ್ ಭೇಟಿ ಮಾಡಲು ಸ್ಟೇಷನ್ಗೆ ಬಂದ ಪತ್ನಿ..!
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ದರ್ಶನ್ ತೂಗುದೀಪ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರ ವಿಚಾರಣೆ ಎದುರಿಸುತ್ತಿದ್ದಾರೆ. ದರ್ಶನ್ ಬಂಧನವಾಗಿ ಇಂದಿಗೆ 8 ದಿನವಾಗಿದೆ. ಇಂದು (ಜೂನ್ 19) ದರ್ಶನ್ ಪತ್ನಿ ವಿಜಯಲಕ್ಷ್ಮಿ ಠಾಣೆಗೆ ಬಂದಿದ್ದು, ಪ್ರಕರಣದ ಬಗ್ಗೆ ಹೇಳಿಕೆ ನೀಡಲಿದ್ದಾರೆ.
ಕಳೆದ ಮಂಗಳವಾರ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನವಾಗಿತ್ತು, ಕೊಲೆ ಪ್ರಕರಣವಾದ ಮರುದಿನ ನಟಿ ವಿಜಯಲಕ್ಷ್ಮಿ ತಮ್ಮ ಇನ್ಸ್ಟಾಗ್ರಾಂ ಖಾತೆಯನ್ನು ಡಿಲೀಟ್ ಮಾಡಿದ್ದರು. ವಿಜಯಲಕ್ಷ್ಮಿ, ಕೊಲೆ ಆರೋಪಿ ಪತಿಯಿಂದ ಅಂತರ ಕಾಯ್ದುಕೊಳ್ಳಲಿದ್ದಾರೆ ಎನ್ನಲಾಗಿತ್ತು. ಆದರೆ ವಿಜಯಲಕ್ಷ್ಮಿ ಅವರು, ದರ್ಶನ್ ಪರವಾಗಿ ವಕೀಲರನ್ನು ನೇಮಿಸಿ, ಪತಿಗಾಗಿ ಹೊರಗಿನಿಂದ ಹೋರಾಟ ಆರಂಭಿಸಿದ್ದರು. ಅಂತಿಮವಾಗಿ ಇಂದು ಪೊಲೀಸರ ಮುಂದೆ ಹೇಳಿಕೆ ನೀಡಲಿದ್ದಾರೆ.
ರೇಣುಕಾ ಸ್ವಾಮಿ ಕೊಲೆ ನಡೆದ ಬಳಿಕ ವಿಜಯಲಕ್ಷ್ಮಿ ವಾಸವಿರುವ ಅಪಾರ್ಟ್ಮೆಂಟ್ಗೆ ದರ್ಶನ್ ಹೋಗಿದ್ದರು. ಅಲ್ಲಿ ತಮ್ಮ ಬಟ್ಟೆಗಳನ್ನು ಬದಲಿಸಿದ್ದರು. ಶೂಗಳನ್ನು ಸಹ ಅಲ್ಲಿಯೇ ಬಿಟ್ಟಿದ್ದರು. ಅದೇ ಕಾರಣಕ್ಕೆ ವಿಜಯಲಕ್ಷ್ಮಿ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಕರೆದಿದ್ದರು. ವಿಜಯಲಕ್ಷ್ಮಿ ಮಾತ್ರವೇ ಠಾಣೆಗೆ ಆಗಮಿಸಿದ್ದಾರೆ, ಪುತ್ರ ವಿನೀಶ್ ಬಂದಿಲ್ಲ ಎನ್ನಲಾಗುತ್ತಿದೆ. ದರ್ಶನ್ಗೆ ಬಟ್ಟೆ ಸೇರಿದಂತೆ ಕೆಲವು ಅಗತ್ಯ ವಸ್ತುಗಳನ್ನು ಸಹ ವಿಜಯಲಕ್ಷ್ಮಿ ತಂದಿದ್ದಾರೆ ಎಂಬ ಮಾಹಿತಿಯೂ ಇದೆ. ದರ್ಶನ್ ಬಂಧನ ಆದಾಗಿನಿಂದಲೂ ವಿಜಯಲಕ್ಷ್ಮಿ ಅವರು ಬೇರೊಬ್ಬರಿಂದ ದರ್ಶನ್ಗೆ ಬೇಕಾದ ಬಟ್ಟೆ ಮತ್ತು ಕೆಲ ಅಗತ್ಯ ವಸ್ತುಗಳನ್ನು ಕಳಿಸುತ್ತಿದ್ದರು.
ಘಟನೆ ನಡೆದ ದಿನ ದರ್ಶನ್ ಮನೆಗೆ ಬಂದಾಗ ನಡೆದ ಘಟನೆಗಳು, ಆಡಿದ ಮಾತು, ನಡೆದುಕೊಂಡ ರೀತಿ ಸೇರಿದಂತೆ ದರ್ಶನ್ರ ಇತರೆ ಕೆಲವು ವಿಷಯಗಳ ಬಗ್ಗೆಯೂ ಪೊಲೀಸರು ವಿಜಯಲಕ್ಷ್ಮಿ ಅವರನ್ನು ಪ್ರಶ್ನಿಸಿ ಮಾಹಿತಿ ಪಡೆಯಲಿದ್ದಾರೆ ಎನ್ನಲಾಗುತ್ತಿದೆ.
ಪವಿತ್ರಾ ಜೊತೆಗಿನ ದರ್ಶನ್ ಸಂಬಂಧವನ್ನು ಕಠುವಾಗಿ ವಿರೋಧಿಸುತ್ತಲೇ ಬಂದಿದ್ದರು ವಿಜಯಲಕ್ಷ್ಮಿ. ಆದರೆ ದರ್ಶನ್ ಈಗ ಪವಿತ್ರಾ ಗೌಡಗೆ ಸಂಬಂಧಿಸಿದ ಪ್ರಕರಣದಲ್ಲಿಯೇ ಕೊಲೆ ಆರೋಪ ಹೊತ್ತುಕೊಂಡಿದ್ದಾರೆ. ಆದರೂ ಸಹ ವಿಜಯಲಕ್ಷ್ಮಿ ಮತ್ತೊಮ್ಮೆ ದರ್ಶನ್ ಮಾಡಿರುವ ತಪ್ಪನ್ನು ಮನ್ನಿಸಿ, ಪತಿಗಾಗಿ ಠಾಣೆ ಮೆಟ್ಟಿಲೇರಿದ್ದಾರೆ.
FILM
ದರ್ಶನ್ ಸರ್ ನನಗೆ ಗುರು ಸಮಾನರು…ಧರ್ಮೋ ರಕ್ಷತಿ ರಕ್ಷಿತಃ… ಎಂದ ನಟಿ ರಚಿತಾ ರಾಮ್; ಹೇಳಿದ್ದೇನು?
ಬೆಂಗಳೂರು : ರೇಣುಕಾಸ್ವಾಮಿ ಹ*ತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದರ್ಶನ್ ಬಂಧನವಾಗಿದೆ. ಇತ್ತ ನಟ, ನಟಿಯರು ಪ್ರತಿಕ್ರಿಯೆ ನೀಡಲು ಆರಂಭಿಸಿದ್ದಾರೆ. ಇದೀಗ ರಚಿತಾ ರಾಮ್ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಇನ್ಟಾಗ್ರಾಂ ಖಾತೆಯಲ್ಲಿ ಈ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
“ಧರ್ಮೋ ರಕ್ಷತಿ ರಕ್ಷಿತಃ” ಎಂದು ಅವರು ಪೋಸ್ಟ್ ಹಂಚಿಕೊಂಡಿದ್ದಾರೆ. ನಮಸ್ಕಾರ..ಈ ನೋಟ್ನ ನಾನು ನಟಿಯಾಗಿ ಅಲ್ಲ ಸಾಮನ್ಯ ಪ್ರಜೆಯಾಗಿ ಬರೆಯುತ್ತಿದ್ದೇನೆ. ಇತ್ತಿಚೆಗೆ ನಡೆದ ಪ್ರಕರಣದ ಬಗ್ಗೆ ನನ್ನ ಮಾತು..! ಎಂದಿದ್ದಾರೆ.
ಇತ್ತೀಚೆಗೆ ನಡೆದ ಪ್ರಕರಣದ ಬಗ್ಗೆ ನನ್ನ ಮಾತು.
ಮೊದಲನೆಯದಾಗಿ ರೇಣುಕಾಸ್ವಾಮಿ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ಭಗವಂತ ಧೈರ್ಯ ಭರಿಸುವ ಶಕ್ತಿ ನೀಡಲಿ ಎಂಬ ಪ್ರಾರ್ಥನೆ ಮಾಡುತ್ತೇನೆ. ಈ ಹತ್ಯೆಗೆ ಕಾನೂನಾತ್ಮಕವಾಗಿ ನ್ಯಾಯ ಸಿಗುತ್ತದೆ ಎಂಬ ಭರವಸೆ ನನಗಿದೆ.
ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದ ನಟ ದರ್ಶನ್ ಸರ್ ನನಗೆ ಗುರು ಸಮಾನರು. ನನ್ನ ಜೀವನದ ತಪ್ಪುಗಳನ್ನು ತಿದ್ದಿ ಮಾರ್ಗದರ್ಶನ ನೀಡಿದಂತಹ ವ್ಯಕ್ತಿ ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ನಂಬಲು ಸ್ವಲ್ಪ ಕಷ್ಟವಾಗುತ್ತಿದೆ. ಏನಿದ್ದರೂ ಸತ್ಯ ಪೊಲೀಸ್ ತನಿಖೆಯಿಂದ ನಮ್ಮ ಮುಂದೆ ಬರಲಿದೆ ಎನ್ನುವುದೇ ನನ್ನ ನಂಬಿಕೆ. ನನ್ನ ಮಾಧ್ಯಮ ಮಿತ್ರರು ಈ ಕೇಸ್ನ ವರದಿಯಲ್ಲಿ ಪಾರದರ್ಶಕವಾಗಿರುತ್ತೀರಿ ಮತ್ತು ನಿಷ್ಪಕ್ಷವಾಗಿ ಕೆಲಸ ಮಾಡುತ್ತೀರಿ ಎಂದು ಆಶಿಸುತ್ತೇನೆ ಎಂದು ಅವರು ಬರೆದುಕೊಂಡಿದ್ದಾರೆ.
ಇದನ್ನೂ ಓದಿ : ನಟ ದರ್ಶನ್ ಮತ್ತೊಬ್ಬ ಮ್ಯಾನೇಜರ್ ಆತ್ಮಹ*ತ್ಯೆ!? ಡೆ*ತ್ ನೋಟ್ ನಲ್ಲಿ ಏನಿದೆ!?
ದರ್ಶನ್ ಹಾಗೂ ರಚಿತಾ ರಾಮ್ ಜೊತೆಯಾಗಿ ನಾಲ್ಕು ಸಿನಿಮಾಗಳಲ್ಲಿ ನಟಿಸಿದ್ದಾರೆ. ಡಿಂಪಲ್ ಕ್ವೀನ್ ತನ್ನ ಸಿನಿ ಜರ್ನಿ ಆರಂಭಿಸಿದ್ದೇ ದರ್ಶನ್ ಜೊತೆಗೆ, ಅದೂ ‘ಬುಲ್ ಬುಲ್’ ಚಿತ್ರದ ಮೂಲಕ. ಅಂಬರೀಶ, ಜಗ್ಗುದಾದಾ, ಕ್ರಾಂತಿ ಚಿತ್ರಗಳಲ್ಲಿ ಇವರಿಬ್ಬರು ಜೊತೆಯಾಗಿ ನಟಿಸಿದ್ದರು.
FILM
ನಟ ದರ್ಶನ್ ಮತ್ತೊಬ್ಬ ಮ್ಯಾನೇಜರ್ ಆತ್ಮಹ*ತ್ಯೆ!? ಡೆ*ತ್ ನೋಟ್ ನಲ್ಲಿ ಏನಿದೆ!?
ಬೆಂಗಳೂರು : ಬೆಂಗಳೂರಿನ ಹೊರವಲಯದಲ್ಲಿರುವ ಆನೇಕಲ್ ತಾಲ್ಲೂಕಿನ ಬಗ್ಗನದೊಡ್ಡಿಯಲ್ಲಿ ನಟ ದರ್ಶನ್ ಅವರಿಗೆ ಸೇರಿದ್ದೆನ್ನಲಾದ ಫಾರ್ಮ್ ಹೌಸ್ ನಲ್ಲಿ ಮ್ಯಾನೇಜರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಮ್ಯಾನೇಜರ್ ಮಾನಸಿಕ ಖಿನ್ನತೆಗೆ ಒಳಗಾಗಿ ಡೆ*ತ್ ನೋಟ್ ಬರೆದಿಟ್ಟು ಆತ್ಮಹ*ತ್ಯೆಗೆ ಶರಣಾಗಿದ್ದಾರೆ ಎಂಬುದು ತಿಳಿದುಬಂದಿದೆ.
ಶ್ರೀಧರ್ ಮೃತ ಮ್ಯಾನೇಜರ್. ಕಳೆದ ಏಪ್ರಿಲ್ ತಿಂಗಳಿನಲ್ಲಿ ಮ್ಯಾನೇಜರ್ ಶ್ರೀಧರ್ ಆತ್ಮಹತ್ಯೆಗೆ ಶರಣಾಗಿದ್ದರು. ಬಗ್ಗನದೊಡ್ಡಿಯಲ್ಲಿನ ದುರ್ಗ ಫಾರ್ಮ್ ಹೌಸ್ನಲ್ಲಿ ಶ್ರೀಧರ್ ಮ್ಯಾನೇಜರ್ ಆಗಿ ಕೆಲಸ ಮಾಡಿಕೊಂಡಿದ್ದರು. ಆತ, ಡೆತ್ ನೋಟ್ ಬರೆದಿಟ್ಟು, ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇನ್ನು ಶ್ರೀಧರ್ ಮೃ*ತದೇಹವನ್ನು ನೋಡಿದ್ದ ಆತನ ಸ್ನೇಹಿತ ಪೊಲೀಸರಿಗೆ ಮಾಹಿತಿ ನೀಡಿದ್ದ.
ಪೊಲೀಸರು ಸ್ಥಳ ಭೇಟಿ ಮಾಡಿ ಪರಿಶೀಲನೆ ಮಾಡಿದಾಗ ಮ್ಯಾನೇಜರ್ ಶ್ರೀಧರ್ ಫಾರ್ಮ್ ಹೌಸ್ ಪಕ್ಕದಲ್ಲಿ ರಕ್ತಕಾರಿ ಮೃ*ತಪಟ್ಟಿರುವುದು ಕಂಡು ಬಂದಿದೆ. ಒಂದು ವರ್ಷಗಳ ಕಾಲ ಮ್ಯಾನೇಜರ್ ಆಗಿ ಕೆಲಸ ಮಾಡಿದ್ದರು, ಸುಮಾರು 2 ಎಕರೆ 36 ಗುಂಟೆ ಪ್ರದೇಶದಲ್ಲಿರುವ ಫಾರ್ಮ್ ಹೌಸ್ ನಿರ್ಮಾಣವಾಗುತ್ತಿದೆ. ಫಾರ್ಮ್ಹೌಸ್ ಪಕ್ಕದ ಕಲ್ಲು ಬಂಡೆ ಮೇಲೆ ಶ*ವವಾಗಿ ಪತ್ತೆಯಾಗಿದ್ದಾರೆ.
ಡೆತ್ ನೋಟ್ ಪತ್ತೆಯಾಗಿದ್ದು, ಈ ಘಟನೆಯ ಬೆನ್ನಲ್ಲೇ ಆನೇಕಲ್ ಪೊಲೀಸ್ ಠಾಣೆಯಲ್ಲಿ ಯುಡಿಆರ್ ದಾಖಲು ಮಾಡಿಕೊಂಡಿದ್ದಾರೆ.
ಇದನ್ನೂ ಓದಿ : WATCH : ಕಾರು ಚಲಾಯಿಸುವಾಗ ರೀಲ್ಸ್ ಮಾಡಲು ಹೋಗಿ ಪ್ರಾ*ಣ ಕಳೆದುಕೊಂಡ ಯುವತಿ
ಡೆತ್ ನೋಟ್ ನಲ್ಲಿ ಏನಿದೆ?
ದರ್ಶನ್ ಫಾರ್ಮ್ಹೌಸ್ ಮ್ಯಾನೇಜರ್ ಸಾವಿಗೂ ಮುನ್ನ ಬರೆದಿಟ್ಟಿರುವ ಡೆ*ತ್ನೋಟ್ ಪತ್ತೆಯಾಗಿದೆ. ಡೆತ್ ನೋಟ್ ಅನ್ನು ಸ್ವತಃ ತಾನೇ ಬರೆದಿಟ್ಟಿರುವ ಮ್ಯಾನೇಜರ್ ಶ್ರೀಧರ್ ಡೆ*ತ್ ನೋಟ್ ನಲ್ಲಿ ಹೆಬ್ಬೆಟ್ಟು ಕೂಡಾ ಒತ್ತಿದ್ದಾರೆ.
ಅದರಲ್ಲಿ ಯಾವುದೋ ಕಾರಣದಿಂದ ನನ್ನ ಪರ್ಸನಲ್ ಒಂಟಿತನ ಕಾಡುತ್ತಿದೆ. ಬದುಕುವ ಆಸೆಯಿಲ್ಲ, ನನ್ನ ಸಾವಿಗೆ ನಾನೇ ಕಾರಣ. ನನ್ನ ಸಾ*ವಿನ ಕಾರಣ ಹಾಗೂ ಹಿನ್ನೆಲೆಯನ್ನು ಇಟ್ಟುಕೊಂಡು ಸ್ನೇಹಿತರು, ಕುಟುಂಬ ಸದಸ್ಯರು ಸೇರಿದಂತೆ ಯಾರೊಬ್ಬರಿಗೂ ತೊಂದರೆ ಕೊಡಬೇಡಿ. ನಾನು ಯಾರಿಗೆ ಫೋನ್ ಮಾಡಿದ್ದೆ, ಅದು ಇದು ಎಂದು ಯಾರಿಗೂ ಪೊಲೀಸರು ತೊಂದರೆ ಕೊಡಬೇಡಿ. ನಮ್ಮ ಮನೆಯಲ್ಲಿ ಅಪ್ಪ, ಅಮ್ಮ, ಸಹೋದರಿಯರು ಸೇರಿ ಎಲ್ಲರಿಗೂ ಹೇಳುತ್ತಿದ್ದೇನೆ, ನನ್ನ ಸಾವಿಗೆ ನಾನೇ ಕಾರಣ ಎಂದು ಹೇಳಿದ್ದಾರೆ.
Pingback: ತಮ್ಮನ ಅಗಲಿಕೆಯ ಬಗ್ಗೆ ಅಣ್ಣನಿಗೆ ಅನುಮಾನ..! ದಫನ ಭೂಮಿಯಿಂದ ಹೊರ ಬಂತು ಮೃ*ತದೇಹ...! - NAMMAKUDLA NEWS - ನಮ್ಮಕುಡ್ಲ ನ್ಯೂಸ್