Connect with us

DAKSHINA KANNADA

ಜಿಲ್ಲೆಯಲ್ಲಿ ಬೇಲಿಯೇ ಎದ್ದು ಹೊಲ ಮೇಯುತ್ತಿದೆ: ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ಮೌನ

Published

on

ಮಂಗಳೂರು: ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲಿ ಕೋರೋನಾ ಆರ್ಭಟ ಹೆಚ್ಚಾಗುತ್ತಿದೆ. ರಾಜ್ಯದಲ್ಲಿಯೇ ಅತೀ ಹೆಚ್ಚಿ ಪಾಸಿಟಿವಿಟಿ ರೇಟ್‌ ಇರುವ ಜಿಲ್ಲೆ ದಕ್ಷಿಣ ಕನ್ನಡ. ಈಗ ಶೇಕಡಾ 2.63 ರಷ್ಟು ಪಾಸಿಟಿವಿಟಿ ಪ್ರಮಾಣವಿದ್ದು, ಈ ಮಧ್ಯೆ ಜಿಲ್ಲೆಯಲ್ಲಿ ರಾಜಕೀಯ ಸಮಾವೇಶ, ಪ್ರತಿಭಟನೆ, ಜಾಥಾ ನಡೆಯುತ್ತಿದ್ದು, ಪೊಲೀಸ್‌ ಇಲಾಖೆ ಹಾಗೂ ಜಿಲ್ಲಾಡಳಿ ಕೈಕಟ್ಟಿ, ಬಾಯಿಮುಚ್ಚಿ ಕುಳಿತಿದೆ.


ನಿನ್ನೆ ದ.ಕ ಜಿಲ್ಲೆಯಲ್ಲಿ 268 ಪಾಸಿಟಿವ್‌, 3 ಸಾವು ಸಂಭವಿಸಿದೆ. ಇದರ ಜೊತೆಗೆ ಕೊರೋನಾ ನಿಯಂತ್ರಿಸಲು ಜಿಲ್ಲೆಯಲ್ಲಿ ವೀಕೆಂಡ್‌ ಕರ್ಫ್ಯೂ ವಿಧಿಸಲಾಗಿದೆ.

ಇದರ ಜೊತೆಗೆ ಮದುವೆ, ಸಭೆ, ಸಮಾರಂಭಗಳಿಗೆ ನಿಯಮಿತ ಜನರಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ.


ನಗರದಲ್ಲಿ ಮಾಸ್ಕ್‌ ಧರಿಸದಿದ್ದರೆ ದಂಡ, ಮುದುವೆಗೆ 100 ಜನರಿಗಿಂತ ಮೀರಿದರೆ ಕೇಸ್‌ ಜೊತೆ ದಂಡ, ವೈಯುಕ್ತಿಕ ಸಭೆ- ಸಮಾರಂಭದಲ್ಲಿ ಕೊರೋನಾ ಮಾರ್ಗಸೂಚಿ ಪಾಲಿಸದವರ ಮೇಲೆ ಕೇಸ್‌, ದಂಡ ವಿಧಿಸಲಾಗುತ್ತದೆ.

ಆದರೆ ರಾಜಕೀಯ ಸಭೆ ಸಮಾರಂಭಕ್ಕೆ ಯಾವುದೇ ಮಾರ್ಗಸೂಚಿ ಇಲ್ಲ. ರಾಜಕೀಯ ಸಭೆ, ಸಮಾರಂಭ, ಪ್ರತಿಭಟನೆಗಳಿಗೆ ಮಾತ್ರ ಜಿಲ್ಲಾಡಳಿತ, ಅನುಮತಿ ನೀಡುತ್ತಿದೆ. ದೇವಸ್ಥಾನಗಳಲ್ಲಿ ಸಾಮೂಹಿಕ ಪೂಜೆಗೆ ಅವಕಾಶವಿಲ್ಲ.

ಶಾಲೆ ತೆರೆಯಲು ನೂರಾರು ಸಬೂಬು, ಅಲ್ಲೆಲ್ಲ ಕೊರೊನಾ ಬರಬಹುದು ಎಂದಾದರೆ ರಾಜಕೀಯ ಸಮಾವೇಶಗಳಲ್ಲಿ ಕೊರೋನಾ ಹರಡುವುದಿಲ್ಲವೇ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸಿದ್ದಾರೆ.

ಅನುಮತಿ ನೀಡುತ್ತಿರುವ ಪೊಲೀಸ್‌ ಇಲಾಖೆ ಹಾಗೂ ಜಿಲ್ಲಾಡಳಿತ
ರಾಜ್ಯಕ್ಕೆ ಹೋಲಿಸಿದರೆ ದ.ಕ ಜಿಲ್ಲೆಯಲ್ಲಿ ಕೋವಿಡ್‌ ಪಾಸಿಟಿವಿಟ ಪ್ರಮಾಣ ಜಾಸ್ತಿ ಇದೆ. ಇದರ ಮಧ್ಯೆ ಆಳುವ ಪಕ್ಷದ ಜನಾಶೀರ್ವಾದ ಯಾತ್ರೆ, ಸೋಮವಾರ ಹಾಗೂ ಮಂಗಳವಾರ ಪುತ್ತೂರಿನಲ್ಲಿ ನಡೆದ ಪ್ರತಿಭಟನೆ ನಡೆದಿದೆ.

ಈ ಸಮಾರಂಭಕ್ಕೆ ಬರುವವರು ಎಲ್ಲಿಂದ ಬರುತ್ತಾರೋ ಗೊತ್ತಿಲ್ಲ, ಸಾಮಾಜಿಕ ಅಂತರ ಇಲ್ಲವೇ ಇಲ್ಲ, ಮಾಸ್ಕ್‌ ಮುಖಕ್ಕೆ ಬಿಟ್ಟು ಎಲ್ಲೆಲ್ಲೋ ಸಿಕ್ಕಿಸಿಕೊಳ್ಳುತ್ತಿದ್ದಾರೆ.

ಇದಕ್ಕೆಲ್ಲಾ ಯಾರು ಅನುಮತಿ ನೀಡಿದ್ದಾರೆ. ಮುಖ್ಯವಾಗಿ ಪೊಲೀಸ್‌ ಇಲಾಖೆ ಅಥವಾ ಜಿಲ್ಲಾಡಳಿತ ಅನುಮತಿ ನೀಡಬೇಕು. ಅವರು ಅನುಮತಿ ಯಾವ ಆಧಾರದ ಮೇಲೆ ನೀಡಿದ್ದಾರೆ ಎಂದು ಸಾರ್ವಜನಿಕರು ಪ್ರಶ್ನೆ ಮಾಡುತ್ತಿದ್ದಾರೆ.

ಜಿಲ್ಲೆಯ ಪೊಲೀಸ್‌ ಇಲಾಖೆ, ಜಿಲ್ಲಾಡಳಿತ ಉತ್ತಮ ಅಧಿಕಾರಿ ವರ್ಗ ಹೊಂದಿದೆ. ಆದರೂ ರಾಜಕಾರಣಿಗಳು ಆಡಿಸುವ ಬೊಂಬೆಯಂತೆ ಕಾರ್ಯ ನಿರ್ವಹಿಸುತ್ತಿರುವುದು ನಾಚೀಕೆಗೇಡು.

ಆಳುವ ಪಕ್ಷಕ್ಕೆ ಬುದ್ಧಿವಾದ ಹೇಳಬೇಕಿರುವ ಪ್ರಧಾನ ಪ್ರತಿಪಕ್ಷ ಕಾಂಗ್ರೆಸ್‌ ಕೂಡ ಮೈಮರೆತು ರಾಜಕೀಯ ಸಭೆ ಸಮಾರಂಭ ನಡೆಸುತ್ತಿದೆ.

ಮುಖ್ಯಮಂತ್ರಿಯಿಂದ ಉಗಿಸಿಕೊಂಡರೂ ಬುದ್ದಿ ಬಾರದ ಜಿಲ್ಲಾಡಳಿತ
ಇತ್ತೀಚೆಗೆ ಮುಖ್ಯಮಂತ್ರಿ ಮಂಗಳೂರು ಭೇಟಿಯ ವೇಳೆ ಜಿಲ್ಲಾಡಳಿತ ಕೈಗೊಂಡ ಕ್ರಮದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು.

ಜೊತೆಗೆ ಅಧಿಕಾರಿ ವರ್ಗವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಆದರೂ ಸಿಎಂ ಬೆನ್ನುಹಾಕಿದ ಕೂಡಲೇ ರಾಜಕೀಯ ಪಕ್ಷ, ಪ್ರತಿಭಟನೆಗೆ ಅನುಮತಿ ನೀಡುತ್ತಿದ್ದಾರೆ ಎಂದರೆ ಹಾಸ್ಯಾಸ್ಪದ ಅಲ್ಲವೇ? ಎಂಬುವುದು ಸಾರ್ವಜನಿಕರ ಪ್ರಶ್ನೆ

Click to comment

Leave a Reply

Your email address will not be published. Required fields are marked *

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

LATEST NEWS

Trending