Connect with us

DAKSHINA KANNADA

ಮುಂದುವರಿದ ಕೊರೊನಾ ಮರಣ ಮೃದಂಗ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಲೋಕಕಲ್ಯಾಣಾರ್ಥ ನಡೆಯುತ್ತಿದೆ ಜಪ ತಪ.. ಕೊರೊನಾ ಮರಣ ಮೃದಂಗ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಲೋಕಕಲ್ಯಾಣಾರ್ಥ ನಡೆಯುತ್ತಿದೆ ಜಪ ತಪ..

Published

on

ಸುಬ್ರಹ್ಮಣ್ಯ:ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಕೊರೊನಾ ಸಂಕಷ್ಟ ನಿವಾರಣೆಗಾಗಿ ಮತ್ತು ಲೋಕ ಕಲ್ಯಾಣಾರ್ಥವಾಗಿ ವಿಶೇಷ ಪೂಜೆಗಳು ನಡೆಯುತ್ತಿದ್ದು, ಕೊನೆಯ ದಿನಗಳಲ್ಲಿ ಹೋಮಗಳು ನಡೆಯಲಿದೆ. ದೇಶದಲ್ಲಿ   ಕೊರೋನಾ ಮಾಹಾಮಾರಿ ನಿಯಂತ್ರಣಕ್ಕೆ  ಬರಬೇಕೆಂಬ ಸಂಕಲ್ಪದೊಂದಿಗೆ ಮತ್ತು ಲೋಕ ಕಲ್ಯಾಣಾರ್ಥವಾಗಿ ವಿಶೇಷ ಪೂಜೆಯನ್ನು ದೇಗುಲದ ಅರ್ಚಕರ ನೇತೃತ್ವದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆರಂಭಿಸಲಾಗಿದೆ.ಶ್ರೀ ಧನ್ವಂತರಿ ಜಪ ಮತ್ತು ಕ್ರಿಮಿಹರ ಸೂಕ್ತ ಜಪ ಸಹಿತ ಹೋಮ ನೆರವೇರಿಸಲಾಗುತ್ತಿದ್ದು, ಇದು ಮೇ.4 ರಿಂದ ಮೇ.13 ರ ವರೆಗೆ ನಡೆಯಲಿದೆ.

ಈ ಬಗ್ಗೆ ಮಾತನಾಡಿದ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ ರವರು ಕರ್ನಾಟಕ ಧಾರ್ಮಿಕ ದತ್ತಿ ಇಲಾಖೆ ಮತ್ತು ದೇವಸ್ಥಾನದ ವ್ಯವಸ್ಧಾಪನಾ ಸಮಿತಿಯ ಅನುಮತಿ ಪಡೆದು, ದೇವಸ್ಥಾನದ ಅರ್ಚಕರ ನೇತೃತ್ವದಲ್ಲಿ ಈ ವಿಶೇಷ ಪೂಜೆ ನೆರವೇರಿಸಲಾಗುತ್ತಿದೆ.

ಯಾವುದೇ ರೀತಿಯಲ್ಲಿ ಹೊರಗಿನ ಜನರಿಗೆ ಈ ವಿಶೇಷ ಪೂಜೆಯಲ್ಲಿ ಅವಕಾಶವನ್ನು ಕಲ್ಪಿಸಲಾಗಿಲ್ಲ.ದೇವಸ್ಥಾನದ ಅರ್ಚಕರು ಹಾಗೂ ಸಹಕರ್ಮಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.

ಮೇ 12 ನೇ ತಾರೀಕಿನಂದು ಧನ್ವಂತರಿ ಹೋಮ ಮತ್ತು ಮೆ.13ನೇ ತಾರೀಕಿನಂದು ಕ್ರಿಮಿಹರ ಸೂಕ್ತ ಹೋಮ ನೆರವೇರಲಿದೆ. ಉಳಿದ ದಿನಗಳಲ್ಲಿ ವಿಶೇಷ ಜಪ ಮತ್ತು ಸಂಕಷ್ಟ ನಿವಾರಣೆಗಾಗಿ ವಿಶೇಷ ಪ್ರಾರ್ಥನೆಗಳು ನಡೆಯಲಿದೆ ಎಂದು ತಿಳಿಸಿದ್ದಾರೆ…

DAKSHINA KANNADA

ಅಡುಗೆ ಮನೆಯಲ್ಲಿರುವ ಈ ಒಂದು ವಸ್ತುವನ್ನು ಪ್ರತಿದಿನ ಲಕ್ಷ್ಮೀಗೆ ಅರ್ಪಿಸಿ

Published

on

ಮಂಗಳೂರು: ಲಕ್ಷ್ಮೀ ನಿಮಗೆ ಒಲಿದರೆ ಆ ವ್ಯಕ್ತಿಗಳು ಐಶ್ವರ್ಯ  ದೊರೆತು ಲಕ್ಷ್ಮೀ ಪುತ್ರ ಎನಿಸಿಕೊಳ್ಳುತ್ತಾರೆ. ಲಕ್ಷ್ಮೀಯನ್ನು ಮೆಚ್ಚಿಸಲು ನಿಮ್ಮ ಅಡುಗೆ ಮನೆಯಲ್ಲಿರುವ ಒಂದು ವಸ್ತುವನ್ನು ಆಕೆಗೆ ಅರ್ಪಿಸಿದರೆ ಸಾಕು.

ಮನೆಯ ವಾಸ್ತುವಿಗೂ ಮನೆಯಲ್ಲಿರುವ ವಸ್ತುಗಳಿಗೂ ಸಂಬಂಧ ಇದೆ. ವಿಶೇಷವಾಗಿ ಅಡುಗೆ ಮನೆಯಲ್ಲಿರುವ ವಸ್ತುಗಳಿಗೂ ವಾಸ್ತುವಿಗೂ ಸಂಬಂಧ ಇದೆ. ಅಡುಗೆ ಮನೆಯಲ್ಲಿರುವ ಕೆಲವು ವಸ್ತುಗಳನ್ನು ಜ್ಯೋತಿಷ್ಯದಲ್ಲಿ ಪರಿಹಾರವಾಗಿ ಬಳಸಲಾಗುತ್ತದೆ. ಅಂತಹ ಒಂದು ವಸ್ತು ಯಾವುದೆಂದರೆ ಅದು ಕೊತ್ತಂಬರಿ.

ಪ್ರಮುಖ ಸಂಬಾರ ಪದಾರ್ಥವಾದ ಕೊತ್ತಂಬರಿಯನ್ನು ವಾಸ್ತು ಪರಿಹಾರವಾಗಿಯೂ ಬಳಸುತ್ತಾರೆ. ಜೊತೆಗೆ ಕೊತ್ತಂಬರಿ ಸೊಪ್ಪನ್ನು ವಾಸ್ತು ಪರಿಹಾರದಲ್ಲಿ ಬಳಸಲಾಗುತ್ತದೆ. ಈ ವಸ್ತುಗಳನ್ನು ಸರಿಯಾಗಿ ಬಳಸಿದರೆ ನಿಮ್ಮ ಜೀವನ ಬದಲಾಗಬಹುದು

ಬಹಳಷ್ಟು ಕಡೆ ಲಕ್ಷ್ಮೀಗೆ ಧನಿಯಾ ಕಾಳನ್ನು ಅರ್ಪಿಸಲಾಗುತ್ತದೆ. ಲಕ್ಷ್ಮೀಗೆ ಧನಿಯಾ ಬಹಳ ಇಷ್ಟ ಎಂಬ ನಂಬಿಕೆ ಇದೆ. ದೀಪಾವಳಿ ಹಬ್ಬದಂದು ಲಕ್ಷ್ಮೀಗೆ ಈ ಧನಿಯಾವನ್ನು ಅರ್ಪಿಸಲಾಗುತ್ತದೆ. ಪೂಜೆಯ ನಂತರ ಲಕ್ಷ್ಮೀಗೆ ಅರ್ಪಿಸಿದ ಈ ಧನಿಯಾವನ್ನು ಸುರಕ್ಷಿತವಾಗಿ ಇಡಬೇಕು. ಹೀಗೆ ಪ್ರತಿದಿನ ಲಕ್ಷ್ಮೀ ದೇವಿಗೆ ಧನಿಯಾವನ್ನು ಇಟ್ಟರೆ ಮನೆಯಲ್ಲಿ ಸುಖ-ಶಾಂತಿ-ಸಮೃದ್ಧಿ ಆಗುತ್ತದೆ ಎನ್ನುವ ನಂಬಿಕೆ ಇದೆ.

Continue Reading

DAKSHINA KANNADA

”ನಮ್ಮ ಕಂಬಳ ಪ್ರಶಸ್ತಿ ಪ್ರದಾನ 2024”ರ ಸಂಭ್ರಮ; ಕಂಬಳ ಸಾಧಕರನ್ನು ಗುರುತಿಸಿ ಗೌರವಿಸಿದ “ನಮ್ಮ ಕುಡ್ಲ”

Published

on

ಮಂಗಳೂರು : ತುಳುನಾಡಿನ ಜಾನಪದ ಕ್ರೀಡೆ ಕಂಬಳಕ್ಕೆ ಇನ್ನಷ್ಟು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ 2023/24 ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ನಡೆದ ಒಟ್ಟು 24 ಕಂಬಳಗಳ 6 ವಿಭಾಗಗಳಲ್ಲಿ ಪ್ರಶಸ್ತಿ ನೀಡುವ ವಿಶೇಷ ಕಾರ್ಯಕ್ರಮ ಶುಕ್ರವಾರ (ಮೇ 17) ಮಂಗಳೂರಿನ ಸೈoಟ್ ಅಲೋಶಿಯಸ್ ಡೀಮ್ಡ್ ಯೂನಿವರ್ಸಿಟಿಯ ಎಲ್.ಎಫ್. ರಸ್ಕಿನ್ಹಾ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು.


ನಮ್ಮಕುಡ್ಲ ಟಿವಿ ಚಾನೆಲ್, ನಮ್ಮ ಕಂಬಳ ಟೀಮ್ ದುಬಾಯಿ ಮತ್ತು ಸೈoಟ್ ಅಲೋಶಿಯಸ್ ಡೀಮ್ಡ್ ಯೂನಿವರ್ಸಿಟಿಯ ಸಂಯುಕ್ತ ಆಶ್ರಯದಲ್ಲಿ ನಡೆದ ಸಮಾರಂಭವನ್ನು ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರ ಅಧ್ಯಕ್ಷತೆಯಲ್ಲಿ ಮೂಲ್ಕಿ ಸೀಮೆ ದುಗ್ಗಣ್ಣ ಸಾವಂತರಸರು ಮತ್ತು ಸೈoಟ್ ಅಲೋಶಿಯಸ್ ಡೀಮ್ಡ್ ಯೂನಿವರ್ಸಿಟಿಯ ರೆಕ್ಟರ್ ಫಾ. ಮೆಲ್ವಿನ್ ಜೋಸೆಫ್ ಪಿಂಟೋ ಅವರು ಉದ್ಘಾಟಿಸಿದರು. ನಮ್ಮಕುಡ್ಲ ಚಾನೆಲ್ ನ ಸಿಒಒ ಕದ್ರಿ ನವನೀತ ಶೆಟ್ಟಿ ಪ್ರಸ್ತಾವನೆಗೈದು ‘ನಮ್ಮಕಂಬಳ ಪ್ರಶಸ್ತಿ 2024’ ರ ಬಗ್ಗೆ ಮಾಹಿತಿ ನೀಡಿದರು.

‘ನಮ್ಮ ಕಂಬುಲ ನನ ದುಂಬುಲ’ ಕೈಪಿಡಿ ಬಿಡುಗಡೆ

ಕದ್ರಿ ನವನೀತ ಶೆಟ್ಟಿ ಮತ್ತು ಸನತ್ ಕುಮಾರ್ ಶೆಟ್ಟಿ ದುಬಾಯಿ ಸಂಪಾದಿತ ‘ನಮ್ಮ ಕಂಬುಲ ನನ ದುಂಬುಲ’ ಎಂಬ 2023/24 ನೇ ಸಾಲಿನ ಕಂಬಳದ ಮಾಹಿತಿ ಕೈಪಿಡಿಯನ್ನು ಮೂಲ್ಕಿ ಸೀಮೆ ದುಗ್ಗಣ್ಣ ಸಾವಂತರಸರು ಬಿಡುಗೆಡೆ ಮಾಡಿದರು. ರಿಯಲ್‌ಎಸ್ಟೇಟ್‌ಉದ್ಯಮಿ ಹಾಗೂ ಬಿಲ್ಡರ್ ಕ್ಷೇತ್ರದ ಹಿರಿಯ ಸಾಧಕ ರೋಹನ್ ಕಾರ್ಪೋರೇಷನಿನ ಆಡಳಿತ ನಿರ್ದೇಶಕ ರೋಹನ್ ಮೊಂತೆರೊ ಅವರಿಗೆ ಪೇಟ ಧರಿಸಿ, ಫಲಪುಷ್ಪ ಹಾಗೂ ಸ್ಮರಣಿಕೆ ನೀಡಿ ಗೌರವ ಸನ್ಮಾನ ನೀಡಲಾಯಿತು.

ಅಧ್ಯಕ್ಷತೆ ವಹಿಸಿದ್ದ ಡಾ.ಮೋಹನ್ ಆಳ್ವ ಮಾತನಾಡಿ, ಕಾಲದೊಂದಿಗೆ ಬದಲಾದ ಕಂಬಳ ಇಂದು ಜಗತ್ತಿನ ಗಮನ ಸೆಳೆದೆದಿದೆ. ಹಂತ ಹಂತವಾಗಿ ಕಂಬಳ ಬದಲಾಗಿ ಇಂದು ಲಕ್ಷಾಂತರ ಜನರನ್ನು ತಲುಪಿದೆ. ಇಂತಹ ಬದಲಾವಣೆಗಳ ಜತೆಗೆ ಕಂಬಳದಲ್ಲಿ ಕೋಣಗಳನ್ನು ಬಿಡುವ ವಿಚಾರದಲ್ಲೂ ಬದಲಾವಣೆ ಆಗ ಬೇಕು ಎಂದರು.

ರೋಹನ್ ಮೊಂತೆರೊ ಅವರು ಮಾತನಾಡಿ, ಈ ಸನ್ಮಾನದಿಂದ ನನ್ನ ಜವಾಬ್ದಾರಿ ಮತ್ತಷ್ಟು ಹೆಚ್ಚಾಗಿದೆ. ಬಾಲ್ಯದಲ್ಲಿ ತಾನು ಕೂಡಾ 2 ವರ್ಷ ಗದ್ದೆಯಲ್ಲಿ ಉಳುಮೆ ಮಾಡಿದ್ದೇನೆ. ಕೋಣಗಳನ್ನು ಸಾಕುವ ಕಷ್ಟ ನನಗೂ ಗೊತ್ತು ಎಂದು ಹೇಳಿ ನಮ್ಮಕುಡ್ಲ ಚಾನೆಲ್ ಮತ್ತು ಸಂಘಟಕರನ್ನು ಅಭಿನಂದಿಸಿದರು.

ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್, ಪುತ್ತೂರು ಶಾಸಕ, ಬೆಂಗಳೂರು ಕಂಬಳದ ಸಾರಥಿ ಅಶೋಕ್‌ ಕುಮಾರ್ ರೈ, ಆಭರಣ ಟೈಮ್ ಲೆಸ್ ಜುವೆಲ್ಲರಿ ಬೆಂಗಳೂರು ಇದರ ಮಾಲಕ ಪ್ರತಾಪ್ ಮಧುಕರ ಕಾಮತ್, ಎಸ್.ಎಲ್. ಡೈಮಂಡ್ ಹೌಸ್ ನ ಮಾಲಕ ಪ್ರಶಾಂತ್ ಶೇಟ್, ಜನಪದ ವಿದ್ವಾoಸ ಹಾಗೂ ಕಂಬಳದ ಪ್ರಧಾನ ತೀರ್ಪುಗಾರ ಗುಣಪಾಲ ಕಡoಬ, ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿಯ ಶಿಸ್ತು ಸಮಿತಿಯ ಅಧ್ಯಕ್ಷ ಭಾಸ್ಕರ ಕೋಟ್ಯಾನ್, ಸೈoಟ್ ಅಲೋಶಿಯಸ್ ಡೀಮ್ಡ್ ಯೂನಿವರ್ಸಿಟಿಯ ಡೀನ್ ಡಾ. ಆದರ್ಶ ಗೌಡ, ಅದಾನಿ ಸಂಸ್ಥೆಯ ಸಿಇಒ ಕಿಶೋರ್ ಆಳ್ವ, ಪಟ್ಲ ಫೌಂಡೇಶನಿನ ಸ್ಥಾಪಕ ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

ನಮ್ಮ ಕುಡ್ಲ ಸಂಸ್ಥೆಯ ನಿರ್ದೇಶಕ ಲೀಲಾಕ್ಷ ಬಿ. ಕರ್ಕೇರ ಸ್ವಾಗತಿಸಿ, ವಂದಿಸಿದರು. ನಿರ್ದೇಶಕರಾದ ಹರೀಶ್ ಬಿ. ಕರ್ಕೇರ, ಸುರೇಶ್ ಬಿ. ಕರ್ಕೇರ, ಮೋಹನ್ ಬಿ. ಕರ್ಕೇರ, ಮಾರ್ಕೆಟಿಂಗ್ ವಿಭಾಗದ ಮುಖ್ಯಸ್ಥ ಸುದರ್ಶನ್, ಅಮಿತಾ, ಸುರೇಖಾ ಶೆಟ್ಟಿ ಮತ್ತಿತರರು ಇದ್ದರು. ನಿತಿನ್ ಸಾಲ್ಯಾನ್ ಕಾರ್ಯಕ್ರಮ ನಿರ್ವಹಿಸಿದರು.

120 ಪ್ರಶಸ್ತಿ ಪ್ರದಾನ :

ಕಂಬಳದ ಚಾಂಪಿಯನ್ ಕೋಣ ಹಾಗೂ ಕೋಣದ ಯಜಮಾನರಿಂದ ಹಿಡಿದು ತಂಡದ ಎಲ್ಲಾ ಸದಸ್ಯರನ್ನು ಗುರುತಿಸಿ ವಿವಿಧ ವಿಭಾಗಗಳಲ್ಲಿ ಒಟ್ಟು ಸುಮಾರು 120 ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ಕನೆ ಹಲಗೆ ಮತ್ತು ಅಡ್ಡ ಹಲಗೆ ವಿಭಾಗದಲ್ಲಿ ಬೋಳಾರ ತ್ರಿಶಾಲ್ ಕೆ. ಪೂಜಾರಿ, ಹಗ್ಗ ಹಿರಿಯ ವಿಭಾಗದಲ್ಲಿ ನಂದಳಿಕೆ ಶ್ರೀಕಾಂತ ಭಟ್, ಹಗ್ಗ ಕಿರಿಯ ಸುರತ್ಕಲ್ ಪಾಂಚಜನ್ಯ ಯೋಗೀಶ್ ಪೂಜಾರಿ, ನೇಗಿಲು ಹಿರಿಯ ಬೋಳದ ಗುತ್ತು ಸತೀಶ್ ಶೆಟ್ಟಿ, ನೇಗಿಲು ಕಿರಿಯ ಮುನಿಯಾಲ್ ಉದಯಕುಮಾರ್ ಶೆಟ್ಟಿ ಸೇರಿದಂತೆ ಕೋಣಗಳ ಯಜಮಾನರಿಗೆ ಪ್ರಶಸ್ತಿ ನೀಡಲಾಯಿತು.

ಇದನ್ನೂ ಓದಿ : ಕೊನೆಗೂ ಮೌನ ಮುರಿದ ಎಚ್‌ಡಿ ದೇವೇಗೌಡ..! ಪ್ರಜ್ವಲ್ ಬಗ್ಗೆ ಹೇಳಿದ್ದೇನು?

ಬೈಂದೂರು ಮಹೇಶ್ ಪೂಜಾರಿ, ಭಟ್ಕಳ ಹರೀಶ್, ಬಂಬ್ರಾಣ ಬೈಲ್ ವಂದಿತ್ ಶೆಟ್ಟಿ, ಭಟ್ಕಳ ಶಂಕರ ನಾಯ್ಕ್, ಕಕ್ಕೆ ಪದವು ಪೆರ್oಗಾಲ್ ಕೃತಿಕ್ ಗೌಡ ಮತ್ತು ಮಾಸ್ತಿಕಟ್ಟೆ ಸ್ವರೂಪ್ ಸಹಿತ 6 ವಿಭಾಗಗಳಲ್ಲಿ ಕೋಣ ಓಡಿಸುವವರನ್ನು ನಮ್ಮ ಕಂಬಳ ಪ್ರಶಸ್ತಿ ನೀಡಿ ಗೌರವಿಸಲಾಯಿತು. 6 ವಿಭಾಗಗಳ ಕೋಣಗಳಿಗೆ ಚಾoಪಿಯನ್ ಅವಾರ್ಡ್ ಪ್ರದಾನ ಮಾಡಲಾಯಿತು. ಕಂಬಳ ಸಂಯೋಜಕರು ಮತ್ತು ತೀರ್ಪುಗಾರರನ್ನು ಶಾಲು ಮತ್ತು ಸ್ಮರಣಿಕೆ ನೀಡಿ ಗೌರವಿಸಲಾಯಿತು.

Continue Reading

DAKSHINA KANNADA

ಮಂಗಳೂರು : ಮೇ 25 ರಂದು ಉಚಿತ ವೈದ್ಯಕೀಯ ಮತ್ತು ರಕ್ತದಾನ ಶಿಬಿರ

Published

on

ಮಂಗಳೂರು : ಅಖಿಲ ಭಾರತ ಬಿಲ್ಲವರ ಯೂನಿಯನ್ (ರಿ.), ಮಂಗಳೂರು ಮತ್ತು ನಾರಾಯಣ ಗುರು ಕಾಲೇಜು ಇದರ ಆಶ್ರಯದಲ್ಲಿ ಕೆ.ಎಮ್.ಸಿ. ಆಸ್ಪತ್ರೆ ಅತ್ತಾವರ ಮಂಗಳೂರು ಇದರ ಸಹಕಾರದಿಂದ ಹಿಂದುಳಿದ ಸಮಾಜದ ಸಾಮಾಜಿಕ ಕ್ರಾಂತಿಯ ಹರಿಕಾರ ದಿ.ದಾಮೋದರ ಆರ್.ಸುವರ್ಣ ಜನ್ಮಶತಾಬ್ದಿ ಪ್ರಯುಕ್ತ ಮೇ 25 ರಂದು ಕುದ್ರೋಳಿ ನಾರಾಯಣ ಗುರು ಕಾಲೇಜಿನ ದಾಮೋದರ ಆರ್.ಸಭಾಂಗಣದಲ್ಲಿ ಉಚಿತ ವೈದ್ಯಕೀಯ ಮತ್ತು ರಕ್ತದಾನ ಶಿಬಿರ ನಡೆಯಲಿದೆ. ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಘಂಟೆ ತನಕ ಈ ಕಾರ್ಯಕ್ರಮ ನಡೆಯಲಿದೆ.


ವೈದ್ಯಕೀಯ ಶಿಬಿರದಲ್ಲಿ ಕಣ್ಣು, ಕಿವಿ, ಮೂಗು, ಗಂಟಲು, ಎಲುಬು, ಕೀಲು ಮತ್ತು ಸಾಮಾನ್ಯ ರೋಗ ತಪಾಸಣೆ, ಮಧುಮೇಹ, ರಕ್ತದೊತ್ತಡ ಪರೀಕ್ಷೆ, ರೀಡಿಂಗ್ ಕನ್ನಡಕ ಅಗತ್ಯ ಇದ್ದವರಿಗೆ ಉಚಿತವಾಗಿ ನೀಡಲಾಗುವುದು. ಶಿಬಿರದಲ್ಲಿ ಭಾಗವಹಿಸುವವರಿಗೆ ಕೆ.ಎಮ್.ಸಿ.ಯ ಹಸಿರು ಕಾರ್ಡ್ ನೀಡಲಾಗುವುದು.

ಇದನ್ನೂ ಓದಿ : ಟಿ 20 ವಿಶ್ವಕಪ್ ಗೆ ಲಗ್ಗೆಯಿಟ್ಟ ‘ನಂದಿನಿ’; ಕ್ರಿಕೆಟಿಗರ ಜೆರ್ಸಿಯಲ್ಲಿ ಕರ್ನಾಟಕದ ಹೆಮ್ಮೆಯ ಬ್ರ್ಯಾಂಡ್‌

ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆಯಬೇಕು. ಅದೇ ರೀತಿ ರಕ್ತದಾನದಲ್ಲೂ ಸ್ವಯಂ ಸ್ಪೂರ್ತಿಯಿಂದ ಭಾಗವಹಿಸಬೇಕೆಂದು ಅಖಿಲ ಭಾರತ ಬಿಲ್ಲವರ ಯೂನಿಯನ್ ನ ಅಧ್ಯಕ್ಷ ನವೀನ್ ಚಂದ್ರ ಸುವರ್ಣ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

Continue Reading

LATEST NEWS

Trending