ಮುಂಬೈನಿಂದ ಬಂದ ಟ್ರಕ್ ಡ್ರೈವರ್ ನಿಂದಾಗಿ ಉಡುಪಿ ತೆಕ್ಕಟ್ಟೆ ಬಂಕ್ ಸೀಲ್ ಡೌನ್..!
ಮುಂಬೈನಿಂದ ಬಂದ ಟ್ರಕ್ ಡ್ರೈವರ್ ನಿಂದಾಗಿ ಉಡುಪಿ ತೆಕ್ಕಟ್ಟೆ ಬಂಕ್ ಸೀಲ್ ಡೌನ್..!
ಉಡುಪಿ: ಮುಂಬೈಯಿಂದ ಸರಕು ಸಾಗಾಟ ವಾಹನದಲ್ಲಿ ಬಂದಿದ್ದ ಮಂಡ್ಯ ಮೂಲದ ವ್ಯಕ್ತಿಗೆ ಈಗ ಕೋವಿಡ್ 19 ಸೋಂಕು ಇರುವುದು ಪತ್ತೆಯಾಗಿದೆ.
ದಾರಿಮಧ್ಯೆ ಈತ ಉಡುಪಿ ಕುಂದಾಪುರ ಸಮೀಪದ ತೆಕ್ಕಟ್ಟೆಯ ಪೆಟ್ರೋಲ್ ಬಂಕ್ ನಲ್ಲಿ ಸ್ನಾನ ಮಾಡಿ ಉಪಹಾರ ಕೂಡ ಸೇವಿಸಿದ್ದು ದೃಢವಾಗಿರುವುದರಿಂದ ತಡರಾತ್ರಿ ಬಂಕ್ ಅನ್ನು ಸೀಲ್ ಡೌನ್ ಮಾಡಲಾಗಿದೆ.
ಮುಂಬಯಿಯಿಂದ ಖರ್ಜೂರ ಸಾಗಾಟ ಮಾಡುವ ವಾಹನದಲ್ಲಿ ಆತ ಬಂದಿದ್ದು,
ಶಿರೂರು ಟೋಲ್ ಗೇಟ್ ಮತ್ತು ಸಾಸ್ತಾನ ಟೋಲ್ ಗೇಟ್ ನಡುವಿನ ಸಮುದ್ರದ ಬದಿಯ ಯಾವುದೋ ಪೆಟ್ರೋಲ್ ಬಂಕ್ ಒಂದರಲ್ಲಿ ತಾನು ಸ್ನಾನ ಮಾಡಿರುವುದಾಗಿ ಮಂಡ್ಯದಲ್ಲಿ ವಿಚಾರಣೆ ವೇಳೆ ಮಾಹಿತಿ ನೀಡಿದ್ದ.
ನಿನ್ನೆ ಸಂಜೆ ವೇಳೆಗೆ ಮಂಡ್ಯ ಜಿಲ್ಲಾಡಳಿತದಿಂದ ಬಂದ ಮಾಹಿತಿಯನ್ನು ಅನುಸರಿಸಿ ಕುಂದಾಪುರ ತಾಲೂಕು ಆರೋಗ್ಯಾಧಿಕಾರಿ, ಡಾ| ನಾಗಭೂಷಣ ಉಡುಪ ಹಾಗೂ ಕೋಟ ಎಸ್.ಐ ನಿತ್ಯಾನಂದ ಗೌಡ ನೇತೃತ್ವದಲ್ಲಿ ಎಲ್ಲಾ ಪೆಟ್ರೋಲ್ ಬಂಕ್ ಗಳ ಸಿಸಿ ಕ್ಯಾಮೆರಾ ದಾಖಲೆಗಳನ್ನು ಪರಿಶೀಲನೆ ನಡೆಸಲಾಯಿತು.
ತಡರಾತ್ರಿ ವೇಳೆಗೆ ಕುಂದಾಪುರ ತೆಕ್ಕಟ್ಟೆಯ ಶಿವಪ್ರಸಾದ್ ಪೆಟ್ರೋಲ್ ಬಂಕ್ ನ ಕ್ಯಾಮರಾ ಪರಿಶೀಲನೆ ವೇಳೆ ಆತ ಸ್ನಾನ ಮಾಡಿರುವ ಬಂಕ್ ಅದುವೇ ಎಂಬುದು ದೃಢವಾಯಿತು.
ಇದೀಗ ತೆಕ್ಕಟ್ಟೆ ಶಿವಪ್ರಸಾದ್ ಪೆಟ್ರೋಲ್ ಬಂಕನ್ನು ರಾತ್ರೋರಾತ್ರಿ ಜಿಲ್ಲಾಡಳಿತ ಸೀಲ್ ಮಾಡಿದೆ.
ಟಿಫನ್ ಮಾಡಿದ ಸ್ಥಳವನ್ನು ಪತ್ತೆ ಹಚ್ಚಿದ ಕುಂದಾಪುರ ಪೊಲೀಸರು, ಟೋಲ್ ಸಿಬ್ಬಂದಿಯನ್ನು ಕೂಡ ಕ್ವಾರಂಟೈನ್ ಮಾಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 66 ರಲ್ಲಿರುವ ಪೆಟ್ರೋಲ್ ಬಂಕ್, ಬಹಳಷ್ಟು ಜನ ಓಡಾಡುವ ಏರಿಯಾ ಇದಾಗಿದೆ. ಹಾಗಾಗಿ ಆತಂಕ ಮನೆಮಾಡಿದೆ.
ಮಾಧ್ಯಮಗಳಿಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಜಿ. ಜಗದೀಶ್, ಗಡಿಯನ್ನು ಸೀಲ್ ಮಾಡಿದ್ದರೂ ಗೂಡ್ಸ್ ಬಿಡಬೇಕಾಗುತ್ತದೆ.
ಲಾರಿ, ಟ್ಯಾಂಕರಲ್ಲಿ ಅವಿತು ಕುಳಿತು ಪ್ರಯಾಣ ಮಾಡುವವರ ಮೇಲೆ ಕೂಡಾ ನಿಗಾ ವಹಿಸಲು ಸೂಚಿಸಲಾಗಿದೆ ಎಂದರು.
LATEST NEWS
8 ವರ್ಷಗಳ ಬಳಿಕ ಆಗಮಿಸಿದ ಹಿಮಕರಡಿ ಹತ್ಯೆ
ಮಂಗಳೂರು/ರೇಕ್ಯವಿಕ್; ಉತ್ತರ ಪ್ರದೇಶದ ಬಹ್ರೈಚ್ನಲ್ಲಿ ತೋಳಗಳ ಹಿಂಡು ಪುಟ್ಟ ಮಕ್ಕಳನ್ನು ಬೇಟೆಯಾಡುತ್ತಿವೆ. ಆರು ತೋಳಗಳಲ್ಲಿ ಐದನ್ನು ಸೆರೆಹಿಡಿದರೂ, ಈಗ ಒಂಟಿಯಾಗಿರುವ ತೋಳ ದಾಳಿ ನಿಂತಿಲ್ಲ. ಆದರೂ ಅದನ್ನು ಸಾಯಿಸದೆ ಸರ್ಕಾರವು ಎಲ್ಲವನ್ನೂ ಜೀವಂತ ಹಿಡಿಯುವ ಪ್ರಯತ್ನದಲ್ಲಿದೆ. ತೀರಾ ಅಪರೂಪದ್ದಾಗಿರುವ ಹಿಮ ಕರಡಿಗಳು ಅಳಿವಿನ ಅಂಚಿನಲ್ಲಿವೆ. ಐಸ್ಲ್ಯಾಂಡ್ನಲ್ಲಿ ಮನೆಯೊಂದರ ಸಮೀಪ ಬಂದ ಅಪರೂಪದ ಹಿಮಕರಡಿಯನ್ನು ಪೊಲೀಸರು ಗುಂಡಿಕ್ಕಿ ಕೊಂದ ಘಟನೆ ನಡೆದಿದೆ.
ಹಿಮ ಪ್ರದೇಶಗಳು ಕರಗುತ್ತಿದ್ದು, ಇಲ್ಲಿ ಮಾತ್ರ ವಾಸಿವ ಪ್ರಾಣಿಗಳು ನಶಿಸುವ ಅಪಾಯಕ್ಕೆ ಸಿಲುಕಿವೆ. ಅಪರೂಪದಲ್ಲಿ ಅಪರೂಪ ಎನಿಸಿರುವ ಈ ಪ್ರಾಣಿಗಳನ್ನು ಕೂಡ ಮನುಷ್ಯ ಆಹುತಿ ಪಡೆಯುತ್ತಿರುವುದು ಆತಂಕ ಮೂಡಿಸಿದೆ. ಐಸ್ಲ್ಯಾಂಡ್ನ ಕುಗ್ರಾಮವೊಂದರ ಮನೆಯ ಹೊರಗೆ ಬಲು ಅಪರೂಪದ ಹಿಮ ಕರಡಿಯೊಂದು ಕಾಣಿಸಿಕೊಂಡಿದ್ದು,
ಒಂಟಿ ವೃದ್ಧೆಯ ನಿವಾಸದ ಬಳಿ ಈ ಹಿಮಕರಡಿ ಕಂಡುಬಂದಿದ್ದು, ಭಯಭೀತರಾಗಿ ತಮ್ಮ ಪುತ್ರಿಗೆ ಮಾಹಿತಿ ನೀಡಿದರು.
ಸ್ಥಳಕ್ಕಾಗಮಿಸಿದ ಪೊಲೀಸರು ಗುಂಡು ಹಾರಿಸಿ ಕೊಂದಿದ್ದಾರೆ. 2016 ರ ಬಳಿಕ ಮೊದಲ ಬಾರಿ ಹಿಮಕರಡಿ ಪತ್ತೆಯಾಗಿರುವುದು ಸುದ್ದಿಯಾಗಿದೆ.
LATEST NEWS
ಭಾರತದ ಪ್ರಾಚೀನ 297 ವಸ್ತುಗಳನ್ನು ಹಿಂದಿರುಗಿಸಿದ ಅಮೆರಿಕಾ; ಕೃತಜ್ಞತೆ ಸಲ್ಲಿಸಿದ ಮೋದಿ
ಅಮೆರಿಕಾ/ಮಂಗಳೂರು: ಭಾರತಕ್ಕೆ ಅತ್ಯಮೂಲ್ಯ 297 ಪ್ರಾಚೀನ ವಸ್ತುಗಳನ್ನು ಹಿಂದಿರುಗಿಸಿದ ಅಮೆರಕಾ ಅಧ್ಯಕ್ಷ ಜೋ ಬೈಡನ್ ಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಧನ್ಯವಾದ ಸಲ್ಲಿಸಿದ್ದಾರೆ.
ಅಮೆರಿಕಾದಲ್ಲಿ ನಡೆಯುವ ಶೃಂಗಸಭೆಯಲ್ಲಿ ಭಾಗವಹಿಸಲು ನರೇಂದ್ರ ಮೋದಿಯವರು ಮೂರು ದಿನಗಳ ಪ್ರವಾಸವನ್ನು ಕೈಗೊಂಡಿದ್ದರು. ಈ ಮಧ್ಯೆ ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಜೊತೆ ಮೋದಿ ಮಾತುಕತೆ ನಡೆಸಿದ್ದಾರೆ. ಎರಡು ದೇಶಗಳ ಮಧ್ಯೆ ನಡೆಸಿದ್ದ ಒಪ್ಪಂದಗಳ ಪ್ರಕಾರ ಭಾರತದ ಪ್ರಾಚೀನ ಅಮೂಲ್ಯ ವಸ್ತುಗಳನ್ನು ಮರಳಿ ಭಾರತಕ್ಕೆ ನೀಡುವಂತೆ ಕೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ಭಾರತದ ಪ್ರಾಚೀನ 297 ಅಮೂಲ್ಯ ವಸ್ತುಗಳನ್ನು ಭಾರತಕ್ಕೆ ಹಿಂತಿರುಗಿಸಲು ಒಪ್ಪಿಗೆ ಸೂಚಿಸಿದ್ದಾರೆ. ಈ ಕುರಿತಾಗಿ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಮೋದಿಯವರು ‘‘ಸಾಂಸ್ಕೃತಿಕ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವುದು ಮತ್ತು ಸಾಂಸ್ಕೃತಿಕ ಆಸ್ತಿಗಳ ಅಕ್ರಮ ಕಳ್ಳಸಾಗಾಣೆ ವಿರುದ್ಧ ಹೋರಾಟವನ್ನು ದೃಢಗೊಳಿಸುವ ನಿಟ್ಟಿನಲ್ಲಿ ಭಾರತಕ್ಕೆ 297 ಬೆಲೆಬಾಳುವ ಪ್ರಾಚೀನ ವಸ್ತುಗಳನ್ನು ಹಿಂದಿರುಗಿಸಲಿರುವ ಅಮೆರಿಕ ಸರ್ಕಾರ ಮತ್ತು ಅಧ್ಯಕ್ಷ ಜೋ ಬೈಡನ್ ಅವರಿಗೆ ಕೃತಜ್ಞತೆ” ಎಂದು ತಿಳಿಸಿದ್ದಾರೆ.
ಕ್ಯಾನ್ಸರ್ ತಡೆಗಟ್ಟಲು ಮುಂದಾದ ಕ್ವಾಡ್ ದೇಶಗಳ ನಾಯಕರು
ಸಾಂಸ್ಕೃತಿಕ ಅಕ್ರಮ ಸಾಗಾಟಣೆಯನ್ನು ತಡೆಗಟ್ಟಲು ಮತ್ತು ಪುರಾತನ ವಸ್ತುಗಳನ್ನು ಮೂಲ ದೇಶಕ್ಕೆ ಹಿಂತಿರುಗಿಸುವ ಸಲುವಾಗಿ ಭಾರತ ಹಾಗೂ ಅಮೆರಿಕಾ ಜುಲೈ ತಿಂಗಳಿನಲ್ಲಿ ಒಪ್ಪಂದಕ್ಕೆ ಸಹಿ ಹಾಕಿತ್ತು.
LATEST NEWS
ಕ್ಯಾನ್ಸರ್ ತಡೆಗಟ್ಟಲು ಮುಂದಾದ ಕ್ವಾಡ್ ದೇಶಗಳ ನಾಯಕರು
ಅಮೆರಿಕಾ/ಮಂಗಳೂರು: ಕ್ವಾಡ್ ಶೃಂಗಸಭೆಯಲ್ಲಿ ಕ್ಯಾನ್ಸರ್ ಪತ್ತೆ, ಚಿಕಿತ್ಸೆ ಮತ್ತು ಅದನ್ನು ತಡೆಗಟ್ಟುವ ಸಲುವಾಗಿ ಮಹತ್ವದ ಯೋಜನೆಯೊಂದನ್ನು ಘೋಷಿಸಿದ್ದು, ಈ ಯೋಜನೆಯ ಬಗ್ಗೆ ಕ್ವಾಡ್ ದೇಶಗಳ ನಾಯಕರು ಮಾಹಿತಿ ನೀಡಿದ್ದಾರೆ.
ವಿಶ್ವದಾದ್ಯಂತ ಕ್ಯಾನ್ಸರ್ ಕೊನೆಗೊಳಿಸಲು ಕ್ವಾಡ್ ಕ್ಯಾನ್ಸರ್ ಮೂನ್ಶಾಟ್ ಉಪಕ್ರಮವನ್ನು ಅನಾವರಣಗೊಳಿಸಲು ನಾನು ಹೆಮ್ಮೆಪಟ್ಟುಕೊಳ್ಳುತ್ತೇನೆ ಎಂದು ಅಮೆರಿಕದ ಅಧ್ಯಕ್ಷ ಜೋ ಬೈಡನ್ ತಿಳಿಸಿದ್ದಾರೆ.
ಇಂಡೋ-ಫೆಸಿಪಿಕ್ ಪ್ರದೇಶದಲ್ಲಿ ಗರ್ಭಕಂಠ ಕ್ಯಾನ್ಸರ್ ತಡೆಗಟ್ಟಲು ಕ್ವಾಡ್ ರಾಷ್ಟ್ರಗಳ ನಾಯಕರು ಬದ್ಧತೆ ಪ್ರದರ್ಶಿಸಿದ್ದಾರೆ. ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಬಹುದಾದ ಕ್ಯಾನ್ಸರ್ಗಳಲ್ಲಿ ಒಂದಾಗಿದೆ. ಇಂಡೋ –ಫೆಸಿಫಿಕ್ ನಲ್ಲಿ 1.5 ಲಕ್ಷ ಮಹಿಳೆಯರು ಇದರಿಂದಾಗಿ ಸಾವಿಗೀಡಾಗುತ್ತಿದ್ದಾರೆ. ಇದನ್ನು ಮುಂದುವರಿಯಲು ನಾವು ಬಿಡುವುದಿಲ್ಲ, ಎಂದು ಬೈಡನ್ ಎಕ್ಸ್ ನಲ್ಲಿ ತಿಳಿಸಿದ್ದಾರೆ.
‘ಅಮೆರಿಕ, ಭಾರತ, ಆಸ್ಟ್ರೇಲಿಯಾ, ಜಪಾನ್ ನಾವೆಲ್ಲರೂ ಸೇರಿ ಪ್ರತಿಯೊಬ್ಬ ಕ್ಯಾನ್ಸರ್ ರೋಗಿಯ ಹೋರಾಟ ಹಾಗೂ ಆರೈಕೆಗೆ ನೆರವಾಗಲಿದ್ದೇವೆ. ಕ್ಯಾನ್ಸರ್ ಅನ್ನು ಸೋಲಿಸಲು ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಲಿದ್ದೇವೆ’ ಎಂದು ಹೇಳಿದ್ದಾರೆ. ಬೈಡನ್ ಪೋಸ್ಟ್ಗೆ ಪ್ರತಿಕ್ರಿಯೆ ನೀಡಿರುವ ಭಾರತ ಪ್ರಧಾನಿ ನರೇಂದ್ರ ಮೋದಿ, ‘ಕ್ಯಾನ್ಸರ್ ವಿರುದ್ಧದ ಉಪಕ್ರಮವನ್ನು ಭಾರತ ಸಂಪೂರ್ಣವಾಗಿ ಬೆಂಬಲಿಸುತ್ತದೆ. ಕ್ಯಾನ್ಸರ್ ವಿರುದ್ಧದ ಹೋರಾಟವನ್ನು ಬಲಪಡಿಸಲು ಒಟ್ಟಾಗಿ ಕೆಲಸ ಮಾಡೋಣ’ ಎಂದು ಹೇಳಿದ್ದಾರೆ.