HomeLATEST NEWSಕೊರೋನಾ ಮಾತ್ರೆ ಎಂದು ವಿಷದ ಮಾತ್ರೆ ಕೊಟ್ಟು ಮೂವರ ಕೊಲೆ

ಕೊರೋನಾ ಮಾತ್ರೆ ಎಂದು ವಿಷದ ಮಾತ್ರೆ ಕೊಟ್ಟು ಮೂವರ ಕೊಲೆ

ಕೋಯಮತ್ತೂರು: ಕೊವಿಡ್​ 19 ನಿವಾರಣೆಯ ಮಾತ್ರೆ ಎಂದು ಹೇಳಿ ವಿಷದ ಮಾತ್ರೆ ಕೊಟ್ಟು ಒಂದೇ ಕುಟುಂಬ ಮೂವರನ್ನು ಹತ್ಯೆ ನಡೆಸಿದ ಘಟನೆ ತಮಿಳುನಾಡಿನ ಎರೋಡ್​ ನಲ್ಲಿ ನಡೆದಿದೆ. ಕೃತ್ಯಕ್ಕೆ ಆರೋಗ್ಯ ಕಾರ್ಯಕರ್ತೆಯೊಬ್ಬರ ಸಹಾಯವನ್ನೂ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಪ್ರಮುಖ ಆರೋಪಿ ಆರ್. ಕಲ್ಯಾಣಸುಂದರಂ (43) ಹಾಗೂ ಆರೋಗ್ಯ ಇಲಾಖೆ ಕಾರ್ಯಕರ್ತೆಯಾಗಿದ್ದ ಸಬರಿ (25) ಬಂಧಿತರು.  ಆರೋಪಿ ಕಲ್ಯಾಣಸುಂದರಂ ವೈಯುಕ್ತಿಕ ಕಾರಣಕ್ಕೆ ಕರುಪ್ಪನಕೌಂದರ್ ಎಂಬುವರಿಂದ ಕೆಲವು ತಿಂಗಳುಗಳ ಹಿಂದೆ 15 ಲಕ್ಷ ರೂಪಾಯಿ ಸಾಲ ಪಡೆದಿದ್ದ. ಆದರೆ ಸಾಲ ಹಿಂದಿರುಗಿಸಲು ಸಾಧ್ಯವಾಗುತ್ತಿರಲಿಲ್ಲ. ಈ ಮಧ್ಯ ಹಣ ವಾಪಸ್​ ಕೊಡುವಂತೆ ಕರುಪ್ಪನಕೌಂದರ್​ ಒತ್ತಡ ಹಾಕುತ್ತಲೇ ಇದ್ದರು. ಈ ಒತ್ತಡವನ್ನು ತಾಳಿಕೊಳ್ಳಲು ಸಾಧ್ಯವಾಗದೆ ಕೆ.ಕಲ್ಯಾಣಸುಂದರಂ ಆರೋಗ್ಯ ಇಲಾಖೆ ಕಾರ್ಯಕರ್ತೆಯಾಗಿದ್ದ ಸಬರಿ ಎಂಬಾಕೆಯ ಸಹಾಯದಿಂದ ಕರುಪ್ಪನಕೌಂದರ್ ಕುಟುಂಬಕ್ಕೆ ಮಾತ್ರೆ ರೂಪದಲ್ಲಿ ವಿಷವುಣಿಸಿದ.

ಘಟನೆ ವಿವರ

ಆರೋಗ್ಯ ಇಲಾಖೆ ಕಾರ್ಯಕರ್ತೆ ಸಬರಿ ಗ್ರಾಮದ ಮನೆಮನೆಗೆ ತೆರಳಿ ಕೊರೊನಾ ಸೋಂಕಿನ ಬಗ್ಗೆ ಅರಿವು ಮೂಡಿಸುತ್ತಿದ್ದೇನೆ ಎಂದು ಹೇಳುತ್ತ ಜೂ. 26ರಂದು ಕುರುಪ್ಪನಕೌಂದರ್​ ಮನೆಗೂ ಹೋದಳು. ಅಲ್ಲಿ ಹೋಗಿ ಕುರುಪ್ಪನಕೌಂದರ್​ ಮತ್ತು ಅವರ ಕುಟುಂಬದವರ ಬಳಿ, ನಿಮಗೆ ಜ್ವರ, ಕೆಮ್ಮು ಏನಾದರೂ ಇದೆಯಾ ಎಂದು ಪ್ರಶ್ನಿಸಿದಳು. ನಂತರ ಒಂದಷ್ಟು ಮಾತ್ರೆಗಳನ್ನು ಕೊಟ್ಟು, ಇದು ಕೊವಿಡ್​ 19 ನಿವಾರಣೆ ಮಾತ್ರೆಯಾಗಿದೆ. ನೀವು ತೆಗೆದುಕೊಳ್ಳಲು ಪ್ರಾರಂಭಿಸಿ, ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ ಎಂದೂ ಹೇಳಿದಳು. ಸಬರಿಯ ಅಣತಿಯಂತೆ ಕರುಪ್ಪನಕೌಂದರ್​, ಪತ್ನಿ ಮಲ್ಲಿಕಾ, ಮಗಳು ದೀಪಾ ಮತ್ತು ಮನೆಕೆಲಸದಾಕೆ ಕುಪ್ಪಲ್​ ಮಾತ್ರೆ ಸೇವಿಸಿದ ತಕ್ಷಣ ತೀವ್ರ ಅಸ್ವಸ್ಥರಾದರು. ಇದನ್ನು ಗಮನಿಸಿದ ನೆರೆಮನೆಯವರು ಇವರೆಲ್ಲರನ್ನು ಆಸ್ಪತ್ರೆಗೆ ದಾಖಲಿಸಿದರು.

ಪತ್ನಿ ಮಲ್ಲಿಕಾ ಆಸ್ಪತ್ರೆಗೆ ಹೋಗುವ ಮಾರ್ಗದಲ್ಲೇ ಮೃತಪಟ್ಟಿದ್ದಾರೆ. ಅದಾದ ಮರುದಿನ ದೀಪಾ ಮತ್ತು ಕುಪ್ಪಲ್​ ಸಾವನ್ನಪ್ಪಿದ್ದಾರೆ. ಸದ್ಯ ಕರುಪ್ಪನ್​ಕೌಂದರ್​ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಭಾನುವಾರ ಕಲ್ಯಾಣಸುಂದರಂ ಮತ್ತು ಸಬರಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್​ ಆದೇಶ ಹೊರಡಿಸಿದೆ.

Latest articles

ಕೆಲಸ ಇಲ್ಲದವನು ಎಂದು ಬೈಯುತ್ತಿದ್ದ ಅಜ್ಜಿಯನ್ನು ಕೊಂದು ಸುಟ್ಟು ಹಾಕಿದ ಕಿರಾತಕ ಮೊಮ್ಮಗ

ಮೈಸೂರು: ದುಡಿಯುವ ವಯಸ್ಸಿನಲ್ಲಿ ಪುಂಡ ಪೋಕರಿಯಂತೆ ಅಲೆಯುತ್ತಿದ್ದುದಕ್ಕೆ ಬೈಯುತ್ತಿದ್ದ ಅಜ್ಜಿಯನ್ನು ಸ್ವಂತ ಮೊಮ್ಮಗನೇ ಕೊಂದು ಸುಟ್ಟು ಹಾಕಿ ಶವವನ್ನು...

ಚಿತ್ರದುರ್ಗ : ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಯ್ತು ಅಕ್ರಮ ಗೋಸಾಗಾಟ- ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ..!

ಚಿತ್ರದುರ್ಗದಲ್ಲಿ ರಾತ್ರಿ ವೇಳೆ ಕಳ್ಳರು ಬೀದಿ ಬದಿಯ ಗೋವುಗಳನ್ನು ಕಳ್ಳತನ ಮಾಡಿ ಟೆಂಪೋದಲ್ಲಿ ತುಂಬಿಸಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ...

ಕೇರಳಕ್ಕೆಮುಂಗಾರು ಪ್ರವೇಶ- ಮಂಗಳೂರಿನಲ್ಲಿ ಸಂಜೆ ಬಿರುಸಿನ ಮಳೆ..!

ಕೇರಳದಲ್ಲಿ ಇಂದು ಮುಂಗಾರು ಪ್ರವೇಶಿಸಿದ್ದು ಈ ಹಿನ್ನೆಲೆಯಲ್ಲಿ ಕರಾವಳಿಯ ಬಂದರು ನಗರ ಮಂಗಳೂರಿನಲ್ಲಿ ಇಂದು ಸಂಜೆ ಬಿರುಸಿನ ಮಳೆಯಾಗಿದೆ.ಮಂಗಳೂರು...

ಬೆಂಗಳೂರು: ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ರನ್ನು ಭೇಟಿಯಾದ ಸ್ಪೀಕರ್ ಯು.ಟಿ.ಖಾದರ್

ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಸ್ಪೀಕರ್ ಯು.ಟಿ.ಖಾದರ್ ಅವರು ಮೊದಲ ಬಾರಿಗೆ ದೆಹಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರನ್ನು...