ಕೊರೊನಾ ವೈರಸ್ ಎಫೆಕ್ಟ್: ಇಂದು ಮಂಗಳೂರು ಬಂದರಿಗೆ ಬರಬೇಕಿದ್ದ ಹಡಗಿಗೆ ನಿಷೇಧ
ಕೊರೊನಾ ವೈರಸ್ ಎಫೆಕ್ಟ್: ಇಂದು ಮಂಗಳೂರು ಬಂದರಿಗೆ ಬರಬೇಕಿದ್ದ ಹಡಗಿಗೆ ನಿಷೇಧ
ಮಂಗಳೂರು: ಅತಿ ಹೆಚ್ಚು ಪ್ರವಾಸಿ ಹಡಗನ್ನು ಬರಮಾಡಿಕೊಳ್ಳುವ ಮಂಗಳೂರು ಬಂದರು ಈ ಬಾರಿ ಕರೋನಾ ಹಿನ್ನಲೆ ಪ್ರವಾಸಿ ಹಡಗಿಗೆ ಮಂಗಳೂರು ಬಂದರು ಪ್ರವೇಶಕ್ಕೆ ಕೊನೆ ಕ್ಷಣದಲ್ಲಿ ಅನುಮತಿ ನಿರಾಕರಿಸಿದೆ.
ವಿಶ್ವಪರ್ಯಟನೆ ಮಾಡುತ್ತಿರುವ ಪ್ರವಾಸಿ ಹಡಗು ಶನಿವಾರ (ಮಾರ್ಚ್ 7) ಮುಂಜಾನೆ 6 ಗಂಟೆಗೆ ಬಂದರು ಪ್ರವೇಶಿಸಬೇಕಿತ್ತು.
ಆದರೆ ಹಡಗು ಕರೋನಾ ಬಾಧಿತ ಪ್ರದೇಶಗಳಿಗೆ ಭೇಟಿ ನೀಡಿದ್ದರಿಂದ ಸರಕಾರ ಮಂಗಳೂರು ಬಂದರು ಪ್ರವೇಶಕ್ಕೆ ಅನುಮತಿ ನಿರಾಕರಿಸಿದೆ.
ಪ್ರವಾಸಿಗರಲ್ಲಿ ಕರೋನಾ ಬಾಧಿತರು ಯಾರೂ ಇಲ್ಲ ಎಂದು ಹಡಗಿನ ನಿರ್ವಹಣಾ ತಂಡ ಸಮಜಾಯಿಷಿ ನೀಡಿದರೂ ಕೂಡ ಸರಕಾರ ಒಪ್ಪಿಗೆ ನೀಡಲು ನಿರಾಕರಿಸಿದೆ.
LATEST NEWS
ಉಡುಪಿ: ವಾಯು ಭಾರ ಕುಸಿತ, ಗಾಳಿ, ಕಡಲ ಅಲೆಗಳ ಅಬ್ಬರ
ಉಡುಪಿ: ಬಂಗಾಳ ಕೊಲ್ಲಿಯಲ್ಲಿ ಕಾಣಿಸಿಕೊಂಡಿರುವ ವಾಯು ಭಾರ ಕುಸಿತದಿಂದಾಗಿ ಅರಬ್ಬಿ ಸಮುದ್ರದಲ್ಲಿ ಅಲೆಗಳ ಅಬ್ಬರ, ಗಾಳಿಯ ತೀವ್ರತೆ ಕಳೆದೆರಡು ದಿನಗಳಿಂದ ಜಾಸ್ತಿಯಾಗಿದ್ದು, ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಕಂಚುಗೋಡು, ಗುಜ್ಜಾಡಿ ಗ್ರಾಮದ ಸನ್ಯಾಸಿಬಲೆ ಪ್ರದೇಶದಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು, 7-8 ಮನೆಗಳು ಅಪಾಯದಲ್ಲಿವೆ. ಕಂಚುಗೋಡಿನಲ್ಲಿ ಈ ವರ್ಷದ ಮುಂಗಾರು ಋತುವಿನಲ್ಲಿ ಇದುವರೆಗೆ ಸುಮಾರು 500 ಮೀ. ನಷ್ಟು ಕಡಲ್ಕೊರೆತ ಸಂಭವಿಸಿದೆ.
ಬುಧವಾರ (ಅ.16) ರಾತ್ರಿ ಇಲ್ಲಿನ 3 ಮನೆಗಳ ಒಳಗೆ ನೀರು ನುಗ್ಗಿದೆ. ಗುರುವಾರವೂ ಕಡಲ್ಕೊರೆತ ತೀವ್ರ ಗೊಂಡಿತ್ತು. ಸುಮಅರು 20-30 ಮೀ. ದೂರದಲ್ಲಿರುವ ನಾಗರಾಜ ಖಾರ್ವಿ, ಬಿಕ್ಕ ಖಾರ್ವಿ, ಚಂದು ಖಾರ್ವಿ, ಸಂಜೀವ ಖಾರ್ವಿ, ನಾಗೇಶ್ ಖಾರ್ವಿ ಹಾಗೂ ಮೋಹನ್ ಖಾರ್ವಿ ಅವರ ಮನೆಗಳಿದ್ದು, ಅಲ್ಲಿನ ನಿವಾಸಿಗಳು ಆತಂಕದಲ್ಲಿದ್ದಾರೆ.
ದಡದಲ್ಲಿದ್ದ ದೋಣಗಳಿಗೂ ಅಲೆಗಳು ಅಪ್ಪಳಿಸುತ್ತಿದ್ದು, ಕೆಲವರ ಬಲೆಗಳು ಮರಳಿನಡಿಗೆ ಬಿದ್ದಿವೆ. ದೋಣಿಗಳನ್ನು ಸುರಕ್ಷಿತವಾಗಿ ಇಡುವುದೇ ಸವಾಲಾಗಿ ಪರಿಣಮಿಸಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯು ಭಾರ ಕುಸಿತದ ಪರಿಣಾಮ ಅರಬ್ಬಿ ಸಮುದ್ರದಲ್ಲೂ ಸಣ್ಣ ಪ್ರಮಾಣದ ತೂಫಾನ್ ಆರಂಭವಾಗಿದೆ ಎಂಬ ಮಾಹಿತಿ ಇದೆ.
ಕೇರಳದಿಂದ ಆರಂಭವಾಗಿ ಕರ್ನಾಟಕದ ಕರಾವಳಿ, ಗೋವಾ, ರತ್ನಾಗಿರಿಯವರೆಗೂ ಇದರ ಪರಿಣಾಮವಿದೆ. ಇನ್ನೆರಡು ದಿನ ಇದು ಮುಂದು ವರಿಯುವ ಸಾಧ್ಯತೆಯೂ ಇದೆ ಎಂದು ಹವಾಮಾನ ಇಲಾಖೆಯ ಮೂಲಗಳು ತಿಳಿಸಿವೆ.
LATEST NEWS
ಉಡುಪಿ: ಬೈಂದೂರಿನ ಒತ್ತಿನೆಣೆ ತಿರುವಿನಲ್ಲಿ ಗುಡ್ಡ ಕುಸಿತ
ಉಡುಪಿ: ಬೈಂದೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿಯ ಒತ್ತಿನೆಣೆ ತಿರುವಿನಲ್ಲಿ ಗುಡ್ಡದ ಮಣ್ಣು ಕುಸಿದ ಘಟನೆ ನಡೆದಿದೆ. ಕಳೆದ ಕೆಲವು ದಿನಗಳಿಂದ ಅಲ್ಲಲ್ಲಿ ಮಳೆ ಸುರಿಯುತ್ತಿದ್ದು, ರಾತ್ರಿ ಅಧಿಕ ಮಳೆ ಸುರಿದ ಪರಿಣಾಮ ಗುಡ್ಡ ಕುಸಿತ ಸಂಭವಿಸಿದೆ.
ಗುಡ್ಡದ ಮೇಲ್ಭಾಗದಲ್ಲಿ ಮಣ್ಣು ಅಪಾಯಕಾರಿ ಸ್ಥಿತಿಯಲ್ಲಿದೆ. ಕೆಲವು ತಿಂಗಳ ಹಿಂದೆ ಅಗ್ನಿಶಾಮಕ ವಾಹನದ ಮೂಲಕ ನೀರು ಸಿಂಪಡಿಸಿ ಕುಸಿಯುವ ಭೀತಿಯಲ್ಲಿರುವ ಗುಡ್ಡದ ಮಣ್ಣನ್ನು ಸಮತಟ್ಟು ಮಾಡಲಾಗಿತ್ತು. ಈ ಹಿಂದೆಯೂ ಈ ಭಾಗದಲ್ಲಿ ಗುಡ್ಡ ಕುಸಿಯುವ ಸಂಭವವಿದ್ದಾಗ ಮಣ್ಣು ತೆರವುಗೊಳಿಸಿ ಮುಂಜಾಗ್ರತೆ ವಹಿಸಲಾಗಿತ್ತು. ಆದರೆ ಕಳೆದೆರಡು ದಿನದಿಂದ ಮಳೆಯ ಪ್ರಮಾಣ ಅಧಿಕವಾದ ಕಾರಣ ಗುಡ್ಡದ ಮಣ್ಣು ಕುಸಿದಿದೆ.
ಭೂ ಕುಸಿತದಿಂದ ಚರಂಡಿಗೆ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ತೆರವು ಮಾಡಲಾಗಿದೆ. ಗುಡ್ಡದ ಮಣ್ಣು ಕುಸಿತದಿಂದ ಹೆದ್ದಾರಿ ಸಂಚಾರಕ್ಕೆ ಯಾವುದೇ ತೊಂದರೆಯಾಗಿಲ್ಲ. ಸ್ಥಳಕ್ಕೆ ತೆರಳಿದ ಐಆರ್ಬಿ ಅಧಿಕಾರಿಗಳು ಮಣ್ಣು ತೆರವುಗೊಳಿಸಿ ಮುಂಜಾಗ್ರತ ಕ್ರಮ ಕೈಗೊಂಡಿದ್ದಾರೆ. ಒತ್ತಿನೆಣೆ ತಿರುವಿನ ರಾಘವೇಂದ್ರ ಮಠದ ಬಳಿ ಕುಸಿತ ಸಂಭವಿಸುವ ಆತಂಕ ಇರುವ ಕಾರಣ ಹೆದ್ದಾರಿ ಇಲಾಖೆ ಮತ್ತು ಐಆರ್ಬಿ ಕಂಪೆನಿ ಪ್ಲಾಸ್ಟರಿಂಗ್ ಮೂಲಕ ಸೂಕ್ತ ಮುನ್ನೆಚ್ಚರಿಕೆ ಕೈಗೊಂಡಿದೆ.
ಉತ್ತರ ಕನ್ನಡದ ಶಿರೂರು ಗುಡ್ಡ ಕುಸಿತ ಬಳಿಕ ದಿಲ್ಲಿಯಿಂದ ಹಿರಿಯ ಭೂ ವಿಜ್ಞಾನಿಗಳು ಈ ಪ್ರದೇಶಗಳಿಗೆ ಭೇಟಿ ನೀಡಿದ್ದರು. ಇದರ ಹೊರತಾಗಿ, ಸಮೀಪದಸೋಮೇಶ್ವರ ಗುಡ್ಡ ಕೂಡಾ ಮಳೆಯ ಅಬ್ಬರದಿಂದಾಗಿ ಕುಸಿಯುತ್ತಿದೆ.ಗುಡ್ಡ ಭಾಗದಲ್ಲಿ ಖಾಸಗಿ ವ್ಯಕ್ತಿಗಳು ರೆಸಾರ್ಟ್ ನಿರ್ಮಿಸಲು ಅನಧಿಕೃತವಾಗಿ ರಸ್ತೆ ನಿರ್ಮಿಸಿದ ಕಾರಣ ಮಳೆಗಾಲದಲ್ಲಿ ಗುಡ್ಡದ ಮಣ್ಣು ನೀರಿನಲ್ಲಿ ಕೊಚ್ಚಿಹೋಗಿ ಆತಂಕ ಉಂಟು ಮಾಡಿತ್ತು.
ಸ್ಥಳಕ್ಕೆ ಜಿಲ್ಲಾಧಿಕಾರಿಗಳು, ಉಸ್ತುವಾರಿ ಸಚಿವರು ಭೇಟಿ ನೀಡಿ ಪರಿಶೀಲಿಸಿದ್ದರು. ಆದರೆ ಇದುವರಗೆ ಯಾವುದೆ ಕ್ರಮ ಕೈಗೊಂಡಿಲ್ಲ. ಎರಡು ದಿನಗಳ ಹಿಂದೆ ಮಳೆಗೆ ಗುಡ್ಡ ಇನ್ನಷ್ಟು ಕುಸಿದಿದ್ದು, ಗುಡ್ಡದ ಮೇಲ್ಭಾಗದಲ್ಲಿರುವ ಕ್ಷಿತಿಜ ನೇಸರ ಧಾಮ ಕೂಡಾ ಅಪಾಯದಲ್ಲಿದೆ.ಈ ಬಗ್ಗೆ ಸ್ಥಳೀಯರು ಹಲವು ಬಾರಿ ಸಂಬಂಧಪಟ್ಟವರ ಗಮನಕ್ಕೆ ತಂದಿದ್ದರೂ ಇಲಾಖೆ ಗಂಭೀರವಾಗಿ ಪರಿಗಣಿಸಿಲ್ಲ ಎಂದು ಸ್ಥಳೀಯ ಜನರು ತಿಳಿಸಿದ್ದಾರೆ.
DAKSHINA KANNADA
ದೀಪಾವಳಿಗೆ ಬಂಪರ್ ಆಫರ್; ಮಂಗಳೂರು – ಬೆಂಗಳೂರು ವಿಶೇಷ ರೈಲು
ಮಂಗಳೂರು: ಬೆಳಕಿನ ಹಬ್ಬ ದೀಪಾವಳಿಯ ಸಂದರ್ಭ ದೀರ್ಘ ರಜೆಯ ಕಾರಣ ಬೆಂಗಳೂರು – ಮಂಗಳೂರು ಮಧ್ಯೆ ಓಡಾಡುವವರ ಸಂಖ್ಯೆ ಹೆಚ್ಚಿರುತ್ತದೆ. ಟಿಕೇಟ್ ರೇಟ್ ಕೇಳಿಯೇ ಕಂಗಾಲಾಗುತ್ತಾರೆ. ಅದರ ಮಧ್ಯೆಯೂ ಸೀಟ್ ಭರ್ತಿಯಾಗಿದೆ ಎಂದಾಗ ಆತಂಕಕ್ಕೊಳಗಾಗುತ್ತಾರೆ. ಹಾಗಾಗಿ ಅಂತಹವರ ಭಾರ ಕಡಿಮೆ ಮಾಡುವ ನಿಟ್ಟಿನಲ್ಲಿ ಯಶವಂತಪುರ – ಮಂಗಳೂರು ಜಂಕ್ಷನ್- ಯಶವಂತಪುರ ನಡುವೆ ವಿಶೇಷ ರೈಲು ಓಡಿಸಲು ನೈಋತ್ಯ ರೈಲ್ವೇ ನಿರ್ಧರಿಸಿದ್ದು, ಅ.30 ಮತ್ತು 31ರಂದು ಈ ರೈಲುಗಳು ಸಂಚರಿಸಲಿವೆ.
ನಂ.06565 ಯಶವಂತಪುರ-ಮಂಗಳೂರು ಜಂಕ್ಷನ್ ವಿಶೇಷ ರೈಲು ಅ.30ರಂದು ರಾತ್ರಿ 11.50ಕ್ಕೆ ಯಶವಂತಪುರದಿಂದ ಹೊರಡಲಿದ್ದು, ಅ.31ರಂದು ಮಧ್ಯಾಹ್ನ 11.45ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ನಂ.06566 ಮಂಗಳೂರು ಜಂಕ್ಷನ್ – ಯಶವಂತಪುರ ವಿಶೇಷ ರೈಲು ಅ.31ರಂದು ಮಧ್ಯಾಹ್ನ 1 ಗಂಟೆಗೆ ಮಂಗ ಳೂರು ಜಂಕ್ಷನ್ನಿಂದ ಹೊರಡಲಿದ್ದು, ರಾತ್ರಿ 9.45ಕ್ಕೆ ಬೆಂಗಳೂರು ತಲುಪಲಿದೆ.
ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು, ಬಂಟ್ವಾಳ ನಿಲ್ದಾಣದಲ್ಲಿ ನಿಲುಗಡೆಯಾಗಲಿದೆ. ರೈಲು ಒಟ್ಟು 21 ಬೋಗಿ ಸಂಯೋಜನೆಯನ್ನು ಒಳಗೊಂಡಿದೆ.
ಪ್ರಯಾಣಿಕರ ಬೇಡಿಕೆ :
ಕಳೆದ ವರ್ಷ ದಸರಾ, ದೀಪಾವಳಿ ಸಂದರ್ಭದಲ್ಲಿ ಮಂಗಳೂರು – ಬೆಂಗಳೂರು – ಮೈಸೂರು ನಡುವೆ ವಿಶೇಷ ರೈಲು ಓಡಾಟ ನಡೆಸಿತ್ತು. ಈ ಬಾರಿ ದಸರಾದಲ್ಲಿ ನಂ.06569 ಯಶವಂತಪುರ – ಕಾರವಾರ ವಿಶೇಷ ಎಕ್ಸ್ಪ್ರೆಸ್ ರೈಲು ಮತ್ತು ನಂ. 06570 ಕಾರವಾರ – ಮೈಸೂರು ವಿಶೇಷ ಎಕ್ಸ್ಪ್ರೆಸ್ ರೈಲು ವಯಾ ಪಡೀಲ್ ಮೂಲಕ ಸಂಚರಿಸಿದೆ. ಇದರಿಂದ ಮಂಗಳೂರಿಗೆ ಬರುವವರಿಗೆ ಹೆಚ್ಚಿನ ಲಾಭವಾಗಿಲ್ಲ. ದೀಪಾವಳಿಗಾದರೂ ಮಂಗಳೂರು – ಬೆಂಗಳೂರು ನಡುವೆ ಹೆಚ್ಚುವರಿ ರೈಲು ಓಡಲಿ ಎನ್ನುವುದು ರೈಲ್ವೇ ಹೋರಾಟಗಾರರ ಆಗ್ರಹವಾಗಿತ್ತು.
ಸಂಸದರಿಂದ ಮನವಿ ಪತ್ರ:
ವಿಶೇಷ ರೈಲಿಗೆ ಬೇಡಿಕೆ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರು ನೈಋತ್ಯ ರೈಲ್ವೇ ಮಹಾ ಪ್ರಬಂಧಕರಿಗೆ ಪತ್ರ ಬರೆದು, ದೀಪಾವಳಿ ಹಬ್ಬಕ್ಕೆ ಬೆಂಗಳೂರು – ಮಂಗಳೂರು ನಡುವೆ ವಿಶೇಷ ರೈಲು ಓಡಿಸುವಂತೆ ಮನವಿ ಮಾಡಿದ್ದರು. ಬೆಂಗಳೂರಿನಿಂದ ಊರಿಗೆ ಬರುವ ಸಾವಿರಾರು ಪ್ರಯಾಣಿಕರಿಗೆ ಈ ರೈಲಿನಿಂದ ಅನುಕೂಲವಾಗಲಿದೆ. ಆದ್ದರಿಂದ ಆದ್ಯತೆ ಮೇರೆಗೆ ರೈಲನ್ನು ಓಡಿಸಲು ಕ್ರಮ ಕೈಗೊಳ್ಳಬೇಕು. ಇದರಿಂದ ರೈಲ್ವೇ ಇಲಾಖೆಗೂ ಹೆಚ್ಚಿನ ಲಾಭವಾಗಲಿದೆ ಎಂದು ಸಂಸದರು ಪತ್ರದಲ್ಲಿ ವಿವರಿಸಿದ್ದರು. ಪ್ರಯಾಣಿಕರು, ಹೋರಾಟಗಾರರು ಹಾಗೂ ಜನ ಪ್ರತಿನಿಧಿಗಳ ಬೇಡಿಕೆ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೇ ವಿಶೇಷ ರೈಲು ಓಡಾಟಕ್ಕೆ ಮುಂದಾಗಿದೆ.
- FILM6 days ago
ಮಾಲ್ಡೀವ್ಸ್ ದ್ವೀಪದಲ್ಲಿ ಹನಿಮೂನ್..! ಜಾಲಿ ಮೂಡ್ನಲ್ಲಿ ತರುಣ್ ಸುಧೀರ್ ದಂಪತಿ
- LATEST NEWS5 days ago
‘ಸೆಕ್ಸ್’ ಗೆ ಅಡ್ಡಿಯಾದ ಇಬ್ಬರು ಮಕ್ಕಳನ್ನೇ ಹತ್ಯೆ ಮಾಡಿದ ಪಾಪಿ ತಾಯಿ.!
- FILM7 days ago
ಮಗುವಿನ ಮುಖ ರಿವೀಲ್ ಮಾಡಿದ ಕವಿತಾ-ಚಂದನ್ ದಂಪತಿ
- BIG BOSS5 days ago
ಯಾರೂ ಊಹಿಸದ ವ್ಯಕ್ತಿಗೆ ಈ ವಾರ ಕಿಚ್ಚನ ಚಪ್ಪಾಳೆ, ಬಿಗ್ಬಾಸ್ ಮನೆಯಲ್ಲಿ ಇದೇ ಮೊದಲು