Connect with us

LATEST NEWS

ಡ್ರ್ಯಾಗನ್‌ನಿಂದ ಕತ್ತು, ಎದೆ ಸೀಳಿ ಹಾಕಿದ ಕಿರಾತಕರು

Published

on

ಬೆಂಗಳೂರು: ಪತಿ ಕದಿರೇಶ್​​ ಕೊಲೆಯಾಗಿ ಮೂರು ವರ್ಷಗಳ ಬೆನ್ನಲ್ಲೆ ಪತ್ನಿ ರೇಖಾ ಕೂಡ ಹತ್ಯೆಗೀಡಾಗಿದ್ದು, ಕೊಲೆಯು ವಿವಿಧ ಕಾರಣಗಳನ್ನು ಬಿಚ್ಚಿಡುತ್ತಿರುವ ಜೊತೆಗೆ, ಹಳೇ ವೈಷ್ಯಮ್ಯ ಕಾರಣ ಎಂದು ಪೊಲೀಸ್‌ ಮೂಲಗಳು ತಿಳಿಸುತ್ತಿವೆ.


ಕತ್ತು, ಎದೆ ಸೀಳಿದರು
ಇಂದು ಬೆಳಗ್ಗೆ 9 ಗಂಟೆ ವೇಳೆಗೆ ಅಂಜನಪ್ಪ ಗಾರ್ಡನ್ ಬಳಿ ಇದ್ದ ಬಿಜೆಪಿ ಕಚೇರಿಯಲ್ಲಿ ಬಡವರಿಗೆ ಫುಡ್​ ಕಿಟ್​ ವಿತರಣೆ ಮಾಡಲು ರೇಖಾ ಅವರು ಆಗಮಿಸಿದ್ದರು. ಫುಡ್ ಕಿಟ್ ವಿತರಿಸಲು ಬೇಕಾದ ಪಟ್ಟಿಯನ್ನು ಸಿದ್ಧಪಡಿಸಿ ಜನರನ್ನು ಕರೆಯಲು ಕಚೇರಿಯಿಂದ ಹೊರ ಬಂದಿದ್ದರು. ಆದರೆ ಜನರು ಸೇರಬೇಕು ಎನ್ನುವ ವೇಳೆ ಆರೋಪಿಗಳು ದಾಳಿ ನಡೆಸಿದ್ರು ಎನ್ನಲಾಗಿದೆ.
ತಮ್ಮ ಮೇಲೆ ದಾಳಿ ನಡೆಯುತ್ತಿರುವ ಮುನ್ಸೂಚನೆ ಲಭಿಸುತ್ತಿದಂತೆ ರೇಖಾ ಅವರು ಕಚೇರಿಯ ಒಳಹೋಗಲು ಯತ್ನಿಸಿದ್ದಾರೆ. ಆದರೆ ಹಂತಕರು ಅವರನ್ನು ಅಟ್ಟಾಡಿಸಿಕೊಂಡು ಬಂದಿದ್ದು, ಈ ವೇಳೆ ರೇಖಾ ನೆಲಕ್ಕೆ ಉರುಳಿ ಬಿದ್ದಿದ್ದಾರೆ. ಬಳಿಕ ರೇಖಾ ಅವರ ಮೇಲೆ ಆರೋಪಿಗಳು ಡ್ಯಾಗರ್ನಿಂದ ಕತ್ತು, ಎದೆ ಹಾಗೂ ಹೊಟ್ಟೆ ಭಾಗಕ್ಕೆ ಇರಿದು ಕೊಲೆ ಮಾಡಿದ್ದಾರೆ ಎನ್ನಲಾಗಿದೆ.


2018ರ ಫೆಬ್ರವರಿಯಲ್ಲಿ ಕದಿರೇಶ್ ಹತ್ಯೆ ನಡೆದಿತ್ತು. ರೌಡಿ ಶೋಭನ್ ಗ್ಯಾಂಗ್ ಈ ಹತ್ಯೆ ನಡೆಸಿತ್ತು. ಆಂಜನಪ್ಪ ಗಾರ್ಡನ್ 3ನೇ ಅಡ್ಡರಸ್ತೆ ನ್ಯೂ ಲೇಔಟ್‌ನಲ್ಲಿರೋ ಮುನೇಶ್ವರ ದೇವಾಲಯದ ಬಳಿ ನಾಲ್ಕು ಹಂತಕರ ತಂಡ ಕದಿರೇಶ್​​ ಮೇಲೆ ಎರಗಿ ಹತ್ಯೆಗೈದಿದ್ದರು. ಪೊಲೀಸರು ಆರೋಪಿಗಳಿಗಾಗಿ ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಹುಡುಕಾಡಿದ್ದರು. ಬಳಿಕ ಇಬ್ಬರನ್ನ ಪೊಲೀಸ್ರು ಬಂಧಿಸಿದ್ರೆ, ಉಳಿದ ಇಬ್ಬರು ಕೋರ್ಟ್ ಮುಂದೆ ಶರಣಾಗಿದ್ದರು.

ಕೃತ್ಯಕ್ಕೂ ಮುನ್ನ ಆರೋಪಿಗಳು ಸ್ಥಳದ ಸುತ್ತಮುತ್ತಲೂ ಇದ್ದ ಎಲ್ಲಾ ಸಿಸಿ ಕ್ಯಾಮೆರಾಗಳನ್ನು  ಬೇರೆಡೆ ತಿರುಗಿಸಿದ್ದಾರೆ. ಆ ಮೂಲಕ ಯಾವುದೇ ಸಿಸಿಟಿವಿ ಕ್ಯಾಮೆರಾದಲ್ಲೂ ಕೃತ್ಯ ಸೆರೆಯಾಗದಂತೆ ಮಾಡಿದ್ದಾರೆ. ಸ್ಥಳದಲ್ಲಿ 7ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳಿದ್ದರೂ ಪ್ರಯೋಜನವಾಗಿಲ್ಲ. ಸದ್ಯ ಆರೋಪಿಗಳ ಕೃತ್ಯದ ಬಗ್ಗೆ ಯಾವುದೇ ಸುಳಿವು ಪೊಲೀಸರಿಗೆ ಸಿಗದಂತಾಗಿದೆ.
ಕದಿರೇಶ್‌ ಯಾರು?
ಕದಿರೇಶ್ ಕಾಟನ್​ಪೇಟೆಯ ರೌಡಿಶೀಟರ್. ಕದಿರೇಶ್ ಮೇಲೆ ಕಾಟನ್ ಪೇಟೆ ಠಾಣೆಯಲ್ಲಿ 14 ಕೇಸ್, ಶ್ರೀರಾಮ್​ಪುರದಲ್ಲಿ ಒಂದು ಕೇಸ್ ಸೇರಿ 2001ರಿಂದ ಹಲವು ಪ್ರಕರಣಗಳು ದಾಖಲಾಗಿದ್ದವು. 2002ರಲ್ಲಿ ಜೋಪಡಿ ರಾಜೇಂದ್ರನ ಕೊಲೆ ಕೇಸ್​​ನಲ್ಲಿ ಕೂಡ ಕದಿರೇಶ್​​ ಆರೋಪಿಯಾಗಿದ್ದ.

Click to comment

Leave a Reply

Your email address will not be published. Required fields are marked *

FILM

ಕೊನೆಗೂ ಉರ್ಫಿ ಜಾವೇದ್ ಇನ್ಸ್ಟಾಗ್ರಾಮ್ ಅಕೌಂಟ್ ಡಿಲೀಟ್…

Published

on

Urfi javed: ಸೋಷಿಯಲ್ ಮೀಡಿಯಾದಲ್ಲಿ ಮಾಡೆಲ್ ಆಗಿ ಗುರುತಿಸಿಕೊಂಡಿರುವ ಉರ್ಫಿ ಜಾವೇದ್ ಆಕೆಯ ಇನ್ಸ್ಟಾಗ್ರಾಮ್ ಖಾತೆ ಡಿಲೀಟ್ ಆಗಿರುವುದು ಇದೀಗ ಆಕೆಗೆ ಸಂಕಷ್ಟ ಎದುರಾಗಿದೆ.

ಉರ್ಫಿ ಜಾವೇದ್ ಎಂದರೆ ಅವಳ ಡ್ರೇಸ್ ನೋಡಿ.. ಅದೇನು ಡ್ರೇಸ್ ಹಾಕಿದ್ದಾಳೆ ಅಂತಾರೆ ಜನ. ಅಂತೂ ಸಾಮಾಜಿಕ ಜಾಲತಾಣದಲ್ಲಿ ಆಕೆಯು ವಿಚಿತ್ರ ವಿಚಿತ್ರ ಪೋಟೋಗಳನ್ನು ಅಪ್ಲೋಡ್ ಮಾಡ್ತಾ ಇರುತ್ತಾಳೆ.

ಆಕೆ ಫಾಲೋವರ್ಸ್ ಹೆಚ್ಚಾಗಳು ಇಂತಹ ಡ್ರೇಸ್ ಹಾಕ್ತ ಇದ್ದಾಳ…ಎಸ್, ಈಕೆ ಅಂತಹ ವಿಚಿತ್ರವಾದ ಡ್ರೇಸ್ ಗಳನ್ನು ಹಾಕಿ ಫೋಟೊ ಶೂಟ್ ಮಾಡಿದ ಬಳಿಕ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಅಪ್ಲೋಡ್ ಮಾಡುತ್ತಾಳೆ. ಹಾಗೇ ಫಾಲೋವರ್ಸ್ ಗಳ ಸಂಖ್ಯೆ ಹೆಚ್ಚಾಗುತ್ತಿತ್ತು. ಸುಮಾರು 4 ಮಿಲಿಯನ್ ಗೂ ಅಧಿಕ ಫಾಲೋವರ್ಸ್ ಗಳನ್ನು ಹೊಂದಿದ್ದಳು.

ಅರೆಬರೆ ಡ್ರೇಸ್ ಹಾಕುತ್ತಾ ದಿನದಿಂದ ದಿನಕ್ಕೆ ಹೊಸ ಟ್ರೆಂಡ್ ಗಳನ್ನು ಸೃಷ್ಟಿಸುತ್ತಿದ್ದಳು. ಆದರೆ ಇದೀಗ ಆಕೆಯ ಖಾತೆಯನ್ನು ಇನ್​ಸ್ಟಾಗ್ರಾಂ ಅಮಾನತು ಮಾಡಿದೆ. ಡಿಲೀಟ್ ಆಗಿರುವ ಕುರಿತು ಆಕೆ ಮಾಡೆಲ್​ ಸ್ಕ್ರೀನ್​ ಶಾಟ್​ ತೆಗೆಯುವ ಮೂಲಕ ಹಂಚಿಕೊಂಡಿದ್ದಾಳೆ.

ಇನ್ನು ಇನ್​​ಸ್ಟಾ ಆಕೆಯ ಖಾತೆಯನ್ನು ಅಮಾನತುಗೊಳಿಸಿದ್ದಲ್ಲದೆ, ಈ ನಿರ್ಧಾರವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು 180 ದಿನಗಳ ಕಾಲಾವಕಾಶ ನೀಡಿದೆ. ಆದ​ರೆ ಉರ್ಫಿ ಇವೆಲ್ಲದಕ್ಕೆ ಉತ್ತರ ನೀಡಿ ತನ್ನ ಖಾತೆಯನ್ನು ಮರಳಿ ಪಡೆಯುತ್ತಾಳಾ ಎಂಬ ಪ್ರಶ್ನೆ ಫ್ಯಾನ್ಸ್​ಗೆ ಕಾಡಿದೆ. ಇನ್ಸ್ಟಾಗ್ರಾಮ್ ಖಾತೆ ಮರಳಿ ಬಂದರೆ ಆಕೆ ಇನ್ನಾದರೂ ಸರಿಯಾದ ಡ್ರೇಸ್ ಹಾಕುತ್ತಾಳ ಎಂದು ಕಾದು ನೋಡಬೇಕಷ್ಟೇ.

ಆಕೆಯ ಅರೆಬರೆ ಡ್ರೇಸ್ ನೋಡಿ ಕೆಳವರು ಆಕೆಯ ಖಾತೆ ಡಿಲೀಟ್ ಆಗಿದ್ದು, ಒಳ್ಳೆಯದೇ ಎಂದು ಹೆಳುತ್ತಿದ್ದಾರೆ. ಆದರೆ ಆಕೆ ಮಾತ್ರ ನೊಂದುಕೊಂಡಿದ್ದಾಳೆ.

Continue Reading

FILM

ರಾತ್ರಿ 12.30ಕ್ಕೆ ಆಡಿಷನ್..2.30ಕ್ಕೆ ಆಯ್ಕೆ-ಬೃಂದಾವನ ಸೀರಿಯಲ್ ಹೀರೋ ಕ್ಲಾರಿಟಿ

Published

on

ಬೆಂಗಳೂರು : ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬೃಂದಾವನ ಧಾರವಾಹಿಯ ನಟ ಧಾರವಾಹಿಗೆ ಆಯ್ಕೆಯಾದ ತಮ್ಮ ಅಭಿಪ್ರಾಯವನ್ನು ಕೊನೆಗೂ ಹಂಚಿಕೊಂಡಿದ್ದಾರೆ.
ಎಲ್ಲರಿಗೂ ಗೊತ್ತಿರುವಂತೆ ವರುಣ್ ಸೋಷಿಯಲ್ ಮೀಡಿಯಾದಲ್ಲಿ ಈಗಾಗ್ಲೇ ಜನಪ್ರಿಯತೆ ಪಡೆದುಕೊಂಡವರು. ಅಲ್ಲದೇ ಇತ್ತೀಚೆಗೆ ಗರ್ಲ್ ಫ್ರೆಡ್ ಜೊತೆಗೆ ಬ್ರೇಕಪ್ ಮಾಡಿಕೊಂಡಿದ್ದು ದೊಡ್ಡ ಸುದ್ದಿಯಾಗಿತ್ತು.

ಇದೀಗ ಸೀರಿಯಲ್ ಗೆ ಆಯ್ಕೆಯಾದ ಬಗ್ಗೆ ಮಾತನಾಡಿರುವ ನಟ ವರುಣ್ ಆರಾಧ್ಯ “ದೀಪಾವಳಿ ಹಬ್ಬದ ಊಟ ಮುಗಿಸಿಕೊಂಡು ಮಲಗಿಕೊಂಡಿದ್ದೆ. ರಾತ್ರಿ 12.30ಗೆ ಕರೆ ಮಾಡಿ ಸೀರಿಯಲ್‌ನಲ್ಲಿ ನಟಿಸುವ ಇಂಟ್ರೆಸ್ಟ್‌ ಇದ್ಯಾ. ಅವಕಾಶ ಇದೆ ಎಂದು ಫೋನ್ ಮಾಡಿದರು. ರಾತ್ರಿ ಆ ಸಮಯದಲ್ಲಿ ಮಾಡಿದಕ್ಕೆ ನಾನು ಗಾಬರಿ ಆಗಿದೆ ಆ ಸಮಯದಲ್ಲಿ ಆಡಿಷನ್‌ಗೆ ಬರೆಲು ಹೇಳಿದರು. ನನ್ನ ಸ್ನೇಹಿತರನ್ನು ಕರೆದುಕೊಂಡು ನಾಗರಭಾವಿಯಲ್ಲಿ ನಿರ್ದೇಶಕರಾದ ರಾಮ್‌ಜೀ ಹೇಳಿದ ಸ್ಥಳಕ್ಕೆ ಹೋದೆ. ಕೈಗೆ ಒಂದು ಸ್ಕ್ರಿಪ್ಟ್‌ ಕೊಟ್ಟರು ಆಡಿಷನ್ ಮಾಡಿದೆ.

ಮಧ್ಯರಾತ್ರಿ 2.30ಕ್ಕೆ ಸೆಲೆಕ್ಟ್‌ ಆಗಿರುವೆ ಎಂದು ಹೇಳಿದರು. ನಾನು ಫುಲ್ ಶಾಕ್ ಆಗಿಬಿಟ್ಟಿ..ಅಲ್ಲದೆ ಬೆಳಗ್ಗೆನಿಂದ ಶೂಟಿಂಗ್ ಎಂದು ಹೇಳಿದರು. ಅಷ್ಟೊತ್ತರಲ್ಲಿ ಮನೆಗೆ ಬಂದು ಅಕ್ಕ ಮತ್ತು ಅಮ್ಮ ಮಲಗಿದ್ದರು, ಅವರನ್ನು ಎಬ್ಬಿಸಿ ಸೆಲೆಕ್ಟ್‌ ಅನ್ನೋ ವಿಚಾರ ಹೇಳಿದೆ. ಬೆಳಗ್ಗೆ ಶೂಟಿಂಗ್ ಇತ್ತು…ಹೇರ್ ಕಟ್ ಮಾಡಿಸಬೇಕು ಮತ್ತು ಗಡ್ಡ ಟ್ರಿಮ್ ಮಾಡಬೇಕು ಎಂದು ಹೇಳಿದರು ಅದೂ ಮಾಡಿಸಿಕೊಂಡು ಬೆಳಗ್ಗೆ ಶೂಟಿಂಗ್ ಸ್ಥಳಕ್ಕೆ ಹೋದೆ ಮರು ದಿನವೇ ಪ್ರಸಾರ ಮಾಡಲು ಶುರು ಮಾಡಿದ್ದರು. ಮೊದಲ ದೃಶ್ಯವೇ ಮದುವೆ ಮನೆ ಸೀನ್ ಅಗಿತ್ತು ಎಂದಿದ್ದಾರೆ.

Continue Reading

bengaluru

ಹೈಕೋರ್ಟ್​ ಕಲಾಪವನ್ನೂ ಬಿಡದ ಸೈಬರ್​ ಹ್ಯಾಕರ್ಸ್​​-ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯ ಅಪ್​ಲೋಡ್

Published

on

ಬೆಂಗಳೂರು: ಸೈಬರ್‌ ಖದೀಮರ ಉಪಟಳ ಎಲ್ಲಿಯವರೆಗೆ ತಲುಪಿದೆ ಎಂದರೆ ಅದು ಇದೀಗ ಕರ್ನಾಟಕ ಹೈಕೋರ್ಟ್ ಕಲಾಪಕ್ಕೂ ತಟ್ಟಿದೆ.

ಮಂಗಳವಾರ ಸಂಜೆ ಹೈಕೋರ್ಟಿನ ಹಾಲ್‌ ನಂಬರ್‌ 6, 12, 18, 23, 24, 26 ಮತ್ತು ಇತರ ಹಾಲ್‌ ಗಳಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರು ವಿಚಾರಣೆ ನಡೆಸುತ್ತಿದ್ದಾಗಲೇ ಲಿಂಕ್‌ ಮೂಲಕ ಭಾಗವಹಿಸಿದ್ದ ಅಪರಿಚಿತ ಆರೋಪಿಗಳು ಅಶ್ಲೀಲ ಚಿತ್ರಗಳನ್ನು ಪ್ರದರ್ಶಿಸಿ ಕಲಾಪಕ್ಕೆ ಅಡ್ಡಿ ಪಡಿಸಿದ್ದಾರೆ. ಈ ಬಗ್ಗೆ ಹೈಕೋರ್ಟಿನ ಕಂಪ್ಯೂಟರ್‌ ವಿಭಾಗದ ರಿಜಿಸ್ಟ್ರಾರ್‌ ಅವರು ಸೆಂಟ್ರಲ್‌ ಸೆನ್‌ ಕ್ರೈಂ ಪೊಲೀಸ್‌ ಠಾಣೆಗೆ ದೂರು ಸಲ್ಲಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಘಟನೆಯ ಹಿನ್ನೆಲೆಯಲ್ಲಿ ಬೆಂಗಳೂರು, ಧಾರವಾಡ ಮತ್ತು ಕಲಬುರಗಿ ಹೈಕೋರ್ಟ್ ಪೀಠಗಳಲ್ಲಿ ಲೈವ್‌ ಸ್ಟ್ರೀಮಿಂಗ್‌ ಮತ್ತು ವೀಡಿಯೋ ಕಾನ್ಫರೆನ್ಸ್‌ ಸೌಲಭ್ಯವನ್ನು ಕೆಲವು ದಿನಗಳ ಮಟ್ಟಿಗೆ ಸ್ಥಗಿತಗೊಳಿಸಲಾಗಿದೆ. ಬುಧವಾರ ಸಂಜೆ ಹೈಕೋರ್ಟ್ ಕಲಾಪದ ವೇಳೆ ವೀಡಿಯೋ ಕಾನ್ಫರೆನ್ಸ್‌ ಆ್ಯಪ್‌ ಅನ್ನು ಹ್ಯಾಕ್‌ ಮಾಡಿ ಆಶ್ಲೀಲ ದೃಶ್ಯಾವಳಿಯನ್ನು ಅಪ್‌ ಲೋಡ್‌ ಮಾಡಲಾಗಿತ್ತು. ಅಶ್ಲೀಲ ವೀಡಿಯೋ ಪ್ರಸಾರವಾಗುತ್ತಿದ್ದಂತೆ ಅದನ್ನು ನಿರ್ವಹಣೆ ಮಾಡುತ್ತಿದ್ದ ಸಿಬಂದಿಯನ್ನು ಕರೆದು ವಿಚಾರಿಸಿದಾಗ ಸೈಬರ್‌ ಹ್ಯಾಕ್‌ ಆಗಿರುವ ವಿಷಯ ಗೊತ್ತಾಗಿದೆ. ಕೂಡಲೇ ವೀಡಿಯೋ ಕಾನ್ಫರೆನ್ಸ್ ವ್ಯವಸ್ಥೆಯನ್ನು ಸ್ಥಗಿತಗೊಳಿಸಲಾಗಿದೆ.

Continue Reading

LATEST NEWS

Trending