DAKSHINA KANNADA
ಶಾಂತಿ-ಕ್ರಾಂತಿಯ ಹರಿಕಾರ ಜನಾರ್ದನ ಪೂಜಾರಿ ‘ಮಹಾ ಗೌರವ’ ಕ್ಕೆ ಕಾಲ ಸನ್ನಿಹಿತ
ಬಿಳಿ ಶರ್ಟು, ಬಿಳಿ ಪ್ಯಾಂಟು, ಮುಖದಲ್ಲಿ ತೆಳ್ಳಗಿನ ಕಪ್ಪು ಮೀಸೆ, ಜೊತೆಗೆ ಕಣ್ಣಿಗೆ ದಪ್ಪ ಪಟ್ಟಿಯ ಆ್ಯಂಟಿಕ್ ಲುಕ್ ಕನ್ನಡಕ ದಟ್ ಇಸ್ ಬಿ. ಜನಾರ್ದನ ಪೂಜಾರಿ.
ಕರಾವಳಿಯ ಹಿರಿಯ ಮುತ್ಸದ್ದಿ, ಮಾಜಿ ಕೇಂದ್ರ ಸಚಿವ, ನೇರ ನಡೆನುಡಿಯ, ಪ್ರಾಮಾಣಿಕ, ಸಾಲ ಮೇಳದ ರೂವಾರಿ ಬಿ.ಜನಾರ್ದನ ಪೂಜಾರಿ ಈಗ ತಮ್ಮ ಜೀವನದ ಮುಸ್ಸಂಜೆಯಲ್ಲಿದ್ದಾರೆ. ಈಗ ಬಂಟ್ವಾಳದ ಬಸ್ತಿಪಡ್ಪುವಿನ ‘ಚೆನ್ನಮ್ಮ ಕುಟೀರ’ದಲ್ಲಿ ತನ್ನ ಇಳಿವಯಸ್ಸಿನಲ್ಲಿ ಗತಕಾಲದ ದಿನಗಳನ್ನು ಮೆಲುಕುಹಾಕುತ್ತಾ ಕುಟುಂಬದೊಂದಿಗೆ ಜೀವನ ಕಳೆಯುತ್ತಿದ್ದಾರೆ.
ಅವರು ಕರಾವಳಿಗೆ ನೀಡಿದ ವಿಶೇಷ ಕೊಡುಗೆ, ಹೊಸ ಚಿಂತನೆಯ ಕ್ರಾಂತಿಕಾರಿ ಬದಲಾವಣೆಗಳನ್ನು ತಂದು. ಹೊಸ ಮುನ್ನುಡಿ ಬರೆದಿದ್ದಾರೆ. ಜೊತೆಗೆ ಸಮಾನ ಸಾಮಾಜಿಕ ಚಿಂತನೆ, ಹತ್ತಾರು ಜನಪರ ಯೋಜನೆ ಜಾರಿಗೆ ತಂದ ಅವರು ರಾಜಕೀಯ ಕ್ಷೇತ್ರದಲ್ಲಿ ಅಜರಾಮರರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಜನಾರ್ದನ ಪೂಜಾರಿ ಅವರಿಗೆ ಪಕ್ಷಬೇಧ, ಜಾತಿ, ಮತಗಳನ್ನು ಮರೆತು ‘ ಸಾರ್ವಜನಿಕ ಮಹಾ ಗೌರವ ಸಮಾರಂಭ’ ನಡೆಸಬೇಕು ಎಂಬುವುದು ಬಹುಕರಾವಳಿಗರ ಒಕ್ಕೊರಲಿನ ಅಭಿಪ್ರಾಯವಾಗಿದೆ.
ಬಂಟ್ವಾಳದ ಅತೀ ಹಿಂದುಳಿದ ಬಸ್ತಿಪಡ್ಪುವಿನಿಂದ ದೆಹಲಿಯ ಜನಪಥ್ವರೆಗೆ ಅತ್ಯಂತ ಪ್ರಭಾವ ಹೊಂದಿದ್ದ ಕರ್ನಾಟಕದ ಏಕೈಕ ರಾಜಕಾರಣಿ ಎಂದರೆ ಬಿ.ಜನಾರ್ದನ ಪೂಜಾರಿ. ಪೂಜಾರಿ ಅವರಿಗೆ ರಾಜಕೀಯವಾಗಿ ಪಕ್ಷದ ಒಳಗೆ ಮತ್ತು ಹೊರಗೆ ರಾಜಕೀಯ ವಿರೋಧಿಗಳಿರಬಹುದು. ಆದರೆ ಅವರ ಪ್ರಾಮಾಣಿಕತೆ ಬಗ್ಗೆ ಸಾಸಿವೆ ಕಾಳಿನಷ್ಟೂ ದೂರುವಂತಿಲ್ಲ. ಅವರ ನೇರನುಡಿ ಕೆಲವರಿಗೆ ಕಹಿ ಅನಿಸಿರಬಹುದು ಆದರೆ ಅದರಲ್ಲಿ ಸತ್ಯಗಳು ಇತ್ತು ಎನ್ನುವುದನ್ನು ಅವರ ವಿರೋಧಿಗಳು ಒಪ್ಪಿಕೊಳ್ಳುತ್ತಾರೆ.
1937ರಲ್ಲಿ ಎಪ್ರಿಲ್ 27 ರಂದು ಮಂಗಳೂರಿನ ಬೊಕ್ಕಪಟ್ಣದಲ್ಲಿ ಹುಟ್ಟಿ ಬಂಟ್ವಾಳ ‘ಚೆನ್ನಮ್ಮ ಕುಟೀರ’ದಿಂದ ವಕೀಲ ವೃತ್ತಿ ಆರಂಭಿಸಿದರು. ಈ ವೇಳೆ ಕಾಂಗ್ರೆಸ್ನ ಸಿದ್ದಾಂತವನ್ನು ಮನಸಾರೆ ಅಪ್ಪಿ, ಒಪ್ಪಿ ಪಕ್ಷದ ಕಾರ್ಯಕರ್ತರಾದರು. 1977ರಲ್ಲಿ ಮೊದಲ ಬಾರಿಗೆ ಮಂಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದರು. ನಂತರ 1980ರಲ್ಲಿ ಮತ್ತೆ ಗೆದ್ದು ಬೀಗಿದರು. ಈ ವೇಳೆ ಭಾರತದ ‘ಐರನ್ ಲೇಡಿ’ ಇಂದಿರಾ ಗಾಂಧಿ ಪ್ರಧಾನಿಯಾಗಿದ್ದರು. ಅವರ ಕ್ಯಾಬಿನೆಟ್ನಲ್ಲಿ ಕೇಂದ್ರ ಸಹಾಯಕ ಹಣಕಾಸು ಸಚಿವರಾಗಿ ಕಾರ್ಯನಿರ್ವಹಿಸಿದರು.
ಬಡವರಿಗೆ ಬ್ಯಾಂಕ್ನ ಬಾಗಿಲು ತೆರೆದಿರದ ಸಮಯದಲ್ಲಿ ‘ಸಾಲಮೇಳ’ ಆಯೋಜನೆ ಮಾಡುವ ಮೂಲಕ ಬಡವರು ಬ್ಯಾಂಕ್ಗೆ ಬಂದ ವೇಳೆ ಅವರನ್ನು ಚಾ, ಕಾಫೀ ಕೊಟ್ಟು ಸತ್ಕರಿಸಿ ಗೌರವಯುತವಾಗಿ ನಡೆಸಿಕೊಳ್ಳಲು ಆದೇಶಿಸಿದ್ದು ಈಗ ಇತಿಹಾಸ. ಇದರಿಂದ ಅವರಿಗೆ ಹಲವು ಬ್ಯಾಂಕುಗಳಿಂದ ಒತ್ತಡ ಬಂದರೂ ಅದನ್ನು ಡೋಂಟ್ ಕೇರ್ ಮಾಡದೇ ಅದನ್ನು ಸಮರ್ಥವಾಗಿ ಎದುರಿಸಿದ ಧೀಮಂತ ನಾಯಕ. ಇಂದಿರಾಗಾಂಧಿ ಅವರ ಅತ್ಯಾಪ್ತ ಬಳಗದಲ್ಲಿ ಜನಾರ್ಧನ ಪೂಜಾರಿ ಒಬ್ಬರಾಗಿದ್ದರು. ಕಾರಣ ಪ್ರಾಮಾಣಿಕತೆ. ಪೂಜಾರಿ ‘ಕಾಂಗ್ರೆಸ್ನ ಉಸಿರು’ ಎಂದು ಸ್ವತಃ ಇಂದಿರಾ ಗಾಂಧಿ ಅವರಿಂದ ಹೇಳಿಸಿಕೊಂಡ ಏಕೈಕ ವ್ಯಕ್ತಿ. ಇಂದಿರಾಗಾಂಧಿಯ ಹತ್ಯೆ ನಂತರದಲ್ಲಿ ರಾಜೀವ ಗಾಂಧಿಯ ಆಪ್ತ ವಲಯದಲ್ಲೂ ಅದೇ ಗೌರವವನ್ನು ಉಳಿಸಿಕೊಂಡರು.
ದಕ್ಷಿಣ ಕನ್ನಡಕ್ಕೆ ಇವರ ಕೊಡುಗೆ ಅಪಾರವಾದುದು. ಕೆಐಒಸಿಎಲ್, ಎಂಆರ್ಪಿಎಲ್, ಮಂಗಳೂರು ವಿಮಾನ ನಿಲ್ದಾಣ, ಎನ್ಐಟಿಕೆ, ಎನ್ಎಂಪಿಟಿಯನ್ನು ಉನ್ನತ ದರ್ಜೆಗೇರಿಸಿದ್ದು, ಬಂಟ್ವಾಳದಿಂದ ಸುರತ್ಕಲ್ಗೆ ಫ್ಲೈ ಓವರ್ ಹೀಗೆ ಹತ್ತು ಹಲವು ಯೋಜನೆಗಳನ್ನು ಕರಾವಳಿಗೆ ತಂದ ಕೀರ್ತಿ ಶ್ರೀನಿವಾಸ ಮಲ್ಯ ಅವರ ನಂತರ ಪೂಜಾರಿಯವರಿಗೆ ಸಲ್ಲುತ್ತದೆ. ಸಂಸತ್ತಿನಲ್ಲಿ ಸದಾ ಬಡವರ ಬಗ್ಗೆ ಧ್ವನಿ ಎತ್ತಿ ನಿರರ್ಗಳವಾಗಿ ಮಾತನಾಡಿ ಉತ್ತಮ ‘ಸಂಸದೀಯ ಪಟು’ ಎಂದು ಹೆಸರು ಪಡೆದಿದ್ದರು.
ಈ ಮಧ್ಯೆ ಕಾಂಗ್ರೆಸ್ ಪಕ್ಷವನ್ನು ಬೆಳೆಸಲು ಎಐಸಿಸಿ ಕಾರ್ಯದರ್ಶಿ, ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಪಕ್ಷಕ್ಕಾಗಿ ದುಡಿದರು. ಎಷ್ಟೋ ಸಲ ಅವರು ಕೈಗೊಳ್ಳುವ ಕಠಿಣ ನಿರ್ಧಾರಗಳಿಂದ ಪಕ್ಷದಲ್ಲಿ ತೀವ್ರ ವಿರೋಧಗಳು ಬಂದರೂ, ಡೋಂಟ್ ಕೇರ್ ಅನ್ನದೇ ತನ್ನ ನಿಲುವಿಗೆ ಬದ್ದರಾಗಿರುತ್ತಿದ್ದರು. ಅವರಿಗೆ ಕೆಲವು ಇತ್ತೀಚಿನ ರಾಜಕೀಯ ನಿರ್ಧಾರಗಳು ಸರಿ ಅನಿಸದಿದ್ದರೂ, ಕೆಲವು ಬಾರಿ ಹಿರಿಯ ನಾಯಕನಿಗೆ ಸಿಗಬೇಕಾದಾಗ ಗೌರವ ಸಿಗದೇ ಇದ್ದ ವೇಳೆ ಎಲ್ಲವನ್ನು ಸಹಿಸಿ ಸುಮ್ಮನಾಗಿದ್ದರು. ಹಲವು ಪತ್ರಿಕಾಗೋಷ್ಠಿಯಲ್ಲಿ ನಾನು ಕಾಂಗ್ರೆಸ್ ಪಕ್ಷ ಬಿಟ್ಟು ಬೇರೆಲ್ಲೂ ಹೋಗುವುದಿಲ್ಲ. ನಾನು ನನ್ನ ಕೊನೆಯ ಉಸಿರು ಇರುವ ವರೆಗೂ ಕಾಂಗ್ರೆಸ್ನಲ್ಲಿಯೇ ಇರುತ್ತೇನೆ ಎಂದು ಕಡ್ಡಿ ಮುರಿದಂತೆ ಹೇಳುತ್ತಿದ್ದರು. ಅವರ ಹಿಂಬಾಲಕರು ಕಾಂಗ್ರೆಸ್ ಬಿಟ್ಟು ಹೋದರೂ ಅವರು ಮಾತ್ರ ಇಂದಿರಾ ಮಾತಿನಂತೆ ಕಾಂಗ್ರೆಸ್ಸಿನ ಉಸಿರಾಗಿದ್ದಾರೆ. ರಾಜೀವ ಗಾಂಧಿ ದುರಂತ ಅಂತ್ಯದ ನಂತರ ಕಾಂಗ್ರೆಸ್ ಪಕ್ಷವನ್ನು ಸ್ವತಃ ಸೋನಿಯಾ ಗಾಂಧಿ ಮುನ್ನಡೆಸುವ ಅನಿವಾರ್ಯ ಒದಗಿತು. ಈ ವೇಳೆ ಸೋನಿಯಾ ಗಾಂಧಿಯನ್ನು ಕೈಹಿಡಿದು ರಾಜಕೀಯದ ಆಳ-ಅಗಲ ತೋರಿಸಿದವರ ಪೈಕಿ ಪೂಜಾರಿ ಸಹ ಒಬ್ಬರು. ಆದ್ದರಿಂದ ಗಾಂಧಿ ಕುಟುಂಬವು ಪೂಜಾರಿ ಅವರನ್ನು ಅತ್ಯಂತ ಗೌರವದಿಂದ ನಡೆಸಿಕೊಳ್ಳುತ್ತಿದ್ದಾರೆ. ಪೂಜಾರಿ ಮೇಲಿನ ಪ್ರೀತಿಯಿಂದ ಚುನಾವಣಾ ಪ್ರಚಾರ ಸಂದರ್ಭ ಸ್ವತಃ ಸೋನಿಯಾ ಗಾಂಧಿ ರಾಹುಲ್ ಗಾಂಧಿ ಮಂಗಳೂರಿಗೆ ಆಗಮಿಸಿ ಪೂಜಾರಿ ಪರ ಪ್ರಚಾರ ನಡೆಸುತ್ತಿದ್ದರು. ಇತ್ತೀಚೆಗೆ ರಾಹುಲ್ ಮಂಗಳೂರಿನ ಕುದ್ರೋಳಿ ದೇವಸ್ಥಾನಕ್ಕೆ ಭೇಟಿಯ ವೇಳೆ ಮೊಮ್ಮಗನ ರೀತಿಯಲ್ಲಿ ರಾಹುಲ್ ಗಾಂಧಿ ಕೈ ಹಿಡಿದು ಮುನ್ನಡೆಸಿದಾಗ ಪೂಜಾರಿ ಭಾವೋದ್ವೇಗಕ್ಕೆ ಒಳಗಾಗಿದ್ದರು.
ಕುದ್ರೋಳಿ ದೇವಾಲಯ ಮತ್ತು ಮಂಗಳೂರು ದಸರಾದ ರೂವಾರಿ
ಜನಾರ್ದನ ಪೂಜಾರಿ ಕೇಂದ್ರ ಸಚಿವರಾಗಿದ್ದ ಸಂದರ್ಭ ಕುದ್ರೋಳಿ ಗೋಕರ್ಣನಾಥೇಶ್ವರ ದೇವಾಲಯದ ಅಭಿವೃದ್ದಿ ಕಾರ್ಯಕ್ಕಾಗಿ ಮುಂಬೈ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಾರ್ವಜನಿಕ ಸಭೆ ನಡೆಸಿದರು. ಇದರಿಂದ ಬಂದ ದೇಣಿಗೆಯಿಂದ ದೇವಾಲಯದ ಜೀರ್ಣೋದ್ದಾರ ನಡೆಸಿದರು. 1991ರಲ್ಲಿ ರಾಜೀವ್ ಗಾಂಧಿ ನವೀಕೃತ ದೇವಾಲಯದ ಉದ್ಘಾಟಿದರು. ಜೊತೆಗೆ ದೇಶದಲ್ಲೆ ಮೊದಲ ಬಾರಿ ಒಂದೇ ಕಡೆ ನವದುರ್ಗೆಯರನ್ನು ಪೂಜಿಸಿ ಅದಕ್ಕೆ ‘ಮಂಗಳೂರು ದಸರಾ’ ಎಂದು ಹೆಸರು ಇಟ್ಟರು. ಅದಲ್ಲದೆ ಏಷ್ಯಾದ ಅತೀ ಉದ್ದನೆಯ(9.ಕೀ.ಮೀ) ವಿದ್ಯುತ್ ದೀಪಾಲಂಕೃತ ರಸ್ತೆಯಲ್ಲಿ ಸಾಂಸ್ಕೃತಿಕ ಸ್ಥಬ್ದಚಿತ್ರ ಮೆರವಣಿಗೆ ನಡೆಸಿದ ಕೀರ್ತಿ ಪೂಜಾರಿಗೆ ಸಲ್ಲುತ್ತದೆ. ಈಗಲೂ ಕೂಡ ಆ ಹಬ್ಬ ವಿಜೃಂಭಣೆಯಿಂದ ನಡೆಯುತ್ತಿದೆ.
ಇದೇ ದೇವಾಲಯಕ್ಕೆ ವಿಧವೆಯರಿಂದ ಚಂಡಿಕಾ ಹೋಮ ಮಾಡಿಸಿ, ಅವರ ಕೈಗೆ ಬಳೆ ತೊಡಿಸಿ, ಹಣೆಗೆ ಕುಂಕುಮ ಇರಿಸಿ ಹೊಸ ಸಾಮಾಜಿಕ ಕ್ರಾಂತಿಗೆ ಮುನ್ನುಡಿ ಬರೆದರು. ಅದಾದ ನಂತರ ಪರಿಶಿಷ್ಟ ಜಾತಿಗೆ ಸೇರಿದ ವಿಧವೆ ಶಿಕ್ಷಕಿನ್ನು ಕರೆಸಿ ಅವರ ಪಾದಪೂಜೆ ಮಾಡಿ ಶಿವನಿಗೆ ಆರತಿ ಬೆಳಗಿಸಿ, ಅವರನ್ನೇ ಅರ್ಚಕಿಯನ್ನಾಗಿ ನೇಮಕ ಮಾಡಿದರು.
ಬಿಳಿ ಬಣ್ಣದ ಅಂಬಾಸಿಡರ್ ಕಾರು ಮತ್ತು ಪೂಜಾರಿ ನಂಟು
ಬಿಳಿ ಬಣ್ಣದ ಅಂಬಾಸಿಡರ್ ಕಾರಿನೊಂದಿಗೆ ಜನಾರ್ಧನ ಪೂಜಾರಿ ಅದೇನೋ ವ್ಯಾಮೋಹ. ಅವರಿಗೆ ಈ ಕಾರು ಬ್ರಾಂಡ್ ಮಾರ್ಕ್. ತನ್ನ ರಾಜಕೀಯ ಚಟುವಟಿಕೆಯ ಸಭೆ, ಸಮಾರಂಭ, ಪತ್ರಿಕಾಗೋಷ್ಠಿಗಳಿಗೆ ಇದೇ ಕಾರು ಬಳಸುತ್ತಿದ್ದರು. ಹಳೆಯ ಅಂಬಾಸಿಡರ್ ಕಾರನ್ನು ಬದಲಾಯಿಸುವ ಸಂದರ್ಭ ಅಂಬಾಸಿಡರ್ ಕಾರು ತಯಾರಕ ಹಿಂದೂಸ್ತಾನ್ ಮೋಟರ್ಸ್ ಅಂಬಾಸಿಡರ್ ಕಾರು ಉತ್ಪಾದನೆ ನಿಲ್ಲಿಸಿತ್ತು. ಮಂಗಳೂರಿನಲ್ಲೂ ಅಂಬಾಸಿಡರ್ ಕಾರಿನ ಡೀಲರ್ ಮುಚ್ಚಲ್ಪಟ್ಟಿತ್ತು. ಈ ವೇಳೆ ಪೂಜಾರಿ ಸ್ವತಃ ಕೋಲ್ಕತ್ತಾದಲ್ಲಿರುವ ಹಿಂದೂಸ್ತಾನ್ ಮೋಟರ್ಸ್ ಕಂಪೆನಿಯನ್ನು ಸಂಪರ್ಕಿಸಿ ಮಂಗಳೂರಿಗೆ ಹೊಚ್ಚ ಹೊಸ ಅಂಬಾಸಿಡರ್ ಕಾರು ತರಿಸಿಕೊಂಡರು. ಸದ್ಯ ಅವರು ಅನಾರೋಗ್ಯದಿಂದ ಓಡಾಡಲು ಕಷ್ಟಪಡುತ್ತಿದ್ದಾರೆ. ಆದರೂ ಈಗಲೂ ಈ ಕಾರು ಸುಸ್ಥಿತಿಯಲ್ಲಿದೆ ಎಂದರೂ ನೀವು ನಂಬಲೇಬೇಕು.
ಪತ್ರಿಕಾಗೋಷ್ಠಿಯಲ್ಲಿ ಏನು ಹೇಳುತ್ತಾರೆಂಬ ಕುತೂಹಲವಿತ್ತು
ಯಾವುದೇ ಚೀಟಿ, ಪುಸ್ತಕ ಇಲ್ಲದೇ ಅವರು ಪತ್ರಿಕಾಗೋಷ್ಠಿ ನಡೆಸುತ್ತಿದುದು ವಿಶೇಷ. ಉಳಿದ ರಾಜಕಾರಣಿಗಳು ಖಾಸಗಿ ಹೊಟೇಲ್, ರೆಸಾರ್ಟ್, ಮನೆ ಹೀಗೆ ಹಲವು ಕಡೆ ಪತ್ರಿಕಾಗೋಷ್ಠಿ ನಡೆಸಿದರೆ ಅವರು ಮಾತ್ರ ಮಂಗಳೂರು ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸುತ್ತಿದ್ದರು. ಕಾರಣ ಅದಕ್ಕೂ ಅವರಿಗೂ ಒಂದು ಅವಿನಾಭಾವ ಸಂಬಂಧವಿದೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಲು ಸ್ವಂತ ಕಟ್ಟಡ ಇಲ್ಲದ ವೇಳೆ ಪತ್ರಿಕಾಗೋಷ್ಠಿ ನಡೆಸಲು ಪತ್ರಕರ್ತರಿಗಾಗಿ ಪತ್ರಿಕಾ ಭವನ ನಿರ್ಮಾಣಕ್ಕೆ ತಮ್ಮ ಸಂಸತ್ ನಿಧಿಯಿಂದ 25 ಲಕ್ಷ ರೂಪಾಯಿ ದೇಣಿಗೆ ನೀಡಿದರು. ಪತ್ರಿಕಾ ಭವನಕ್ಕೆ ಅಷ್ಟು ದೊಡ್ಡ ಮೊತ್ತ ನೀಡಿದರೂ ತಾವು ನಡೆಸುವ ಪತ್ರಿಕಾಗೋಷ್ಠಿಯ ವೆಚ್ಚವನ್ನು ಪ್ರೆಸ್ಕ್ಲಬ್ಗೆ ನೀಡುತ್ತಿದ್ದುದು ವಿಶೇಷ. ಅವರು ಪತ್ರಿಕಾಗೋಷ್ಠಿಗೆ ನಡೆಸುವ ವೇಳೆ ಯಾವ ವಿಷಯದ ಬಗ್ಗೆ ಮಾತನಾಡುತ್ತಾರೆಂಬ ಕುತೂಹಲ ಪ್ರತಿಯೊಬ್ಬ ಪತ್ರಕರ್ತರಲ್ಲಿರುತಿತ್ತು. ಅಂದಿನ ಪ್ರಧಾನಿ ಇಂದಿರಾ ಗಾಂಧಿ ಕರೆ ಮಾಡಿದ ಮರುದಿನ ‘ಇಂಡಿಯನ್ ಎಕ್ಸ್ಪ್ರೆಸ್’ ಪತ್ರಿಕೆಯಲ್ಲಿ who is this poojary?(ಹೂ ಈಸ್ ದೀಸ್ ಪೂಜಾರಿ) ಎಂಬ ತಲೆಬರಹಕ್ಕೆ ‘that is poojary’ಎಂದು ತನ್ನ ಕೆಲಸ, ನೇರನುಡಿ, ಪ್ರಾಮಾಣಿಕತೆಯ ಮೂಲಕವೇ ಉತ್ತರ ನೀಡಿದ್ದಾರೆ.
ಪೂಜಾರಿಗೆ ಹಾರ ತುರಾಯಿ ಅಲರ್ಜಿ
ಮೊದಲಿನಿಂದಲೂ ಪೂಜಾರಿ ಅವರಿಗೆ ಸನ್ಮಾನ, ಹಾರ, ತುರಾಯಿ ಎಂದರೆ ಅಲರ್ಜಿ. ಈಗಲೂ ಅವರಿಗೆ ಸನ್ಮಾನ ಮಾಡುತ್ತೇವೆ ಎಂದು ಮುಂಚಿತವಾಗಿ ತಿಳಿಸಿದರೆ ತಿರಸ್ಕರಿಸುವುದು ಖಂಡಿತ. ಅವರನ್ನು ಗೌರವಿಸುವುದು ಅವಿಭಾಜ್ಯ ದಕ್ಷಿಣ ಕನ್ನಡ ಜಿಲ್ಲೆಗೆ ಒಂದು ಗೌರವ. ಆದ್ದರಿಂದ ಹಿರಿಯ ನಾಯಕರು ಅವರನ್ನು ಮನವೊಲಿಸಿ ಅವರ ಉಪಸ್ಥಿತಿಯ ಜೊತೆಗೆ ಹೆಸರಿನಲ್ಲಿ ಸೇವಾ ಕಾರ್ಯ ಮಾಡುವುದು ಧರ್ಮ.
ಪೂಜಾರಿಯ ‘ಮಹಾಗೌರವ‘ಕ್ಕಾಗಿ ನಡೆಯಬೇಕು ಅಭಿಯಾನ
ಅವರುಡುವ ಶ್ವೇತ ವರ್ಣದ ವಸ್ತ್ರದಂತೆ ನಿಶ್ಕಲ್ಮಶ, ಪ್ರಾಮಾಣಿಕ ರಾಜಕಾರಣಿ ಸಿಗುವುದು ಬಲು ಅಪರೂಪ. ಆದ್ದರಿಂದ ಅವರು ಕರಾವಳಿ, ರಾಜ್ಯ, ದೇಶಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿ ಅವರಿಗೆ ಪಕ್ಷಾತೀತವಾಗಿ ಗೌರವ ನೀಡಬೇಕು ಎಂಬುವುದು ಎಲ್ಲರ ಆಶಯ. ಈ ಕಾರ್ಯಕ್ರಮವನ್ನು ಬಿಲ್ಲವ ನಾಯಕರು ಹಾಗೂ ಸರ್ವ ಪಕ್ಷದ ನಾಯಕರು ಮಂಗಳೂರಿನ ಪುರಭವನ ಅಥವಾ ನೆಹರೂ ಮೈದಾನದಲ್ಲಿ ನಡೆಸಬೇಕು. ಈ ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯಮಂತ್ರಿ ಸೇರಿದಂತೆ ಎಲ್ಲಾ ಪಕ್ಷದ ಹಿರಿಯ ನಾಯಕರನ್ನು ಕರೆದರೆ ಆ ಕಾರ್ಯಕ್ರಮಕ್ಕೆ ವಿಶಿಷ್ಟ ಕಳೆ ಬರುವುದು ಖಂಡಿತ. ಈ ನಿಟ್ಟಿನಲ್ಲಿ ಈಗಾಗಲೇ ಜಿಲ್ಲೆಯ ಎಲ್ಲಾ ನಾಯಕರು ಧೃಡ ಸಂಕಲ್ಪದಿಂದ ಮುನ್ನಡೆಯುವ ಅಗತ್ಯವಿದೆ.
DAKSHINA KANNADA
ಅಡ್ಯಾರ್ ಬೊಂಡ ಪ್ಯಾಕ್ಟರಿ ಎಳನೀರು ಪ್ರಕರಣ- ಆರೋಗ್ಯ ಇಲಾಖೆಯ ಕೈ ಸೇರಿದ ಪ್ರಯೋಗಾಲಯ ಪರೀಕ್ಷಾ ವರದಿ ಬಹಿರಂಗ..!
ಮಂಗಳೂರು : ಇತ್ತೀಚೆಗೆ ಅಡ್ಯಾರ್ ನಲ್ಲಿರುವ ಬೊಂಡಾ ಪ್ಯಾಕ್ಟರಿಯಲ್ಲಿ ಎಳ ನೀರು ಸೇವಿಸಿ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಯೋಗಾಲಯ ಪರೀಕ್ಷಾ ವರದಿ ಆರೋಗ್ಯ ಇಲಾಖೆಯ ಕೈ ಸೇರಿದ್ದು, ಸಹಜವಾಗಿತ್ತು ಎಳನೀರು ಎಂದು ವರದಿಯಲ್ಲಿ ತಿಳಿಸಲಾಗಿದೆ.
ನಗರದ ಹೊರವಲಯದ ಅಡ್ಯಾರಿನ ಬೊಂಡ ಫ್ಯಾಕ್ಟರಿಯಲ್ಲಿ ಎಪ್ರಿಲ್ 9ರಂದು ಖರೀದಿಸಿದ ಎಳನೀರು ಕುಡಿದವರಲ್ಲಿ 138 ಜನರು ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡಿದ್ದರು. ಈ ಪ್ರಕರಣ ಗಮನಕ್ಕೆ ಬಂದ ಬೆನ್ನಲ್ಲೇ ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಹಾಗೂ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಫ್ಯಾಕ್ಟರಿಯನ್ನು ಬಂದ್ ಮಾಡಿಸಿ ಎಳನೀರು ಮಾದರಿ ಸಂಗ್ರಹಿಸಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಿದ್ದರು.ಘಟನೆ ನಡೆದ ಎರಡು ದಿನಗಳ ನಂತರ ಇದು ಗಮನಕ್ಕೆ ಬಂದಿದ್ದು, ಆ ದಿನ ಫ್ಯಾಕ್ಟರಿಯಲ್ಲಿ ಸಂಗ್ರಹಿಸಿದ್ದ ಎಳನೀರನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಪ್ರಯೋಗಾಲಯ ಪರೀಕ್ಷೆಯ ವರದಿ ಎಪ್ರಿಲ್ 22ರಂದು ಆರೋಗ್ಯ ಇಲಾಖೆಯ ಕೈ ಸೇರಿದೆ.
ಅಸ್ವಸ್ಥಗೊಂಡವರ ಮಲ ಮತ್ತು ರಕ್ತದ ಮಾದರಿ ಸಂಗ್ರಹಿಸಿ, ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ವರದಿ ಪ್ರಕಾರ ಕೆಲವರ ದೇಹದಲ್ಲಿ ಇಕೊಲೈ ಬ್ಯಾಕ್ಟಿರಿಯಾ ಇರುವುದು ಪತ್ತೆಯಾಗಿದೆ. ಮನುಷ್ಯನ ಕರುಳಿನಲ್ಲಿ ಈ ಬ್ಯಾಕ್ಟಿರಿಯಾ ಇರುತ್ತದೆ. ಆದರೆ ಅವುಗಳ ಪ್ರಮಾಣ ಹೆಚ್ಚಾದರೆ, ಕೆಲವೊಮ್ಮೆ ಆರೋಗ್ಯ ಸಮಸ್ಯೆ ಬರುತ್ತದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ತಿಳಿಸಿದರು.ಅಡ್ಯಾರಿನಲ್ಲಿರುವ ಎಳನೀರು ಗಂಜಿಯಿಂದ ಐಸ್ಕ್ರೀಮ್ ತಯಾರಿಸುವ ಘಟಕ, ಕಾರ್ಸ್ಪೀಟ್ ಮತ್ತು ಕದ್ರಿಯಲ್ಲಿರುವ ಎಳನೀರು ಮಳಿಗೆಗಳನ್ನು ಬಂದ್ ಮಾಡಿಸಲಾಗಿದೆ. ಈಗಲೂ ಅವು ಬಂದ್ ಆಗಿಯೇ ಇವೆ.
ಫ್ಯಾಕ್ಟರಿಯವರು ಸ್ವಯಂ ಪ್ರೇರಿತರಾಗಿ ಎಳನೀರು ನೀಡುವುದನ್ನು ನಿಲ್ಲಿಸಿದ್ದಾರೆ. ಅಡ್ಯಾರ್ನಲ್ಲಿ ಪಲ್ಟಿಂಗ್ ಘಟಕಗಳು ಮಾತ್ರ ಕಾರ್ಯಾಚರಿಸುತ್ತಿವೆ. ಗ್ರಾಹಕರಿಗೆ ಆಹಾರ ನೀಡುವಾಗ ನಿಯಮ ಪಾಲನೆ, ಶುಚಿತ್ವಕ್ಕೆ ಸಂಬಂಧಿಸಿ ಕೆಲವು ಅಂಶಗಳ ಕಟ್ಟುನಿಟ್ಟು ಪಾಲನೆಗೆ ಆಹಾರ ಸುರಕ್ಷಾ ಅಫಿದಾವಿತನ್ನು ಫ್ಯಾಕ್ಟರಿಯಿಂದ ಪಡೆಯಲು ಆಹಾರಸುರಕ್ಷಾ ಅಧಿಕಾರಿಗೆ ಸೂಚನೆ ನೀಡಲಾಗುವುದು ಎಂದು ಅವರು ಪ್ರತಿಕ್ರಿಯಿಸಿದರು.
DAKSHINA KANNADA
ವೈರಲ್ ವಿಡಿಯೋ: ಕಲ್ಲಂಗಡಿ ಚಿಕನ್ ಬಿರಿಯಾನಿ ತಿಂದಿದ್ದೀರಾ?
ಮಂಗಳೂರು(ವೈರಲ್ ವಿಡಿಯೋ): ಬಿರಿಯಾನಿ ಅಂದ್ರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಬಹುಜನರ ಬೇಡಿಕೆಯ ಖಾದ್ಯವಾದ ಬಿರಿಯಾನಿ ಹಲವು ಮಾದರಿಗಳಲ್ಲಿ ಸಿಗುತ್ತದೆ. ಚಿಕನ್ ಬಿರಿಯಾನಿ, ಮಟನ್ ಬಿರಿಯಾನಿ ತಿನ್ನಲು ಜನರಂತೂ ದೂರ ಸರಿಯುದೇ ಇಲ್ಲ. ಆದರೆ ಈಗ ಬಿರಿಯಾನಿ ಹೊಸ ಹೊಸ ಮಾದರಿಯಲ್ಲಿ ತುಂಬಾ ವೈರಟಿ ಆಗಿ ಸಿಗುತ್ತಾ ಇದೆ. ಬಾರ್ಬಿ ಬಿರಿಯಾನಿ ವೈರಲ್ ಆದ ಬಳಿಕ ಇದೀಗ ಇನ್ನೊಂದು ಹೊಸ ಬಿರಿಯಾನಿ ವೈರಲ್ ಆಗ್ತಾ ಇದೆ.
ಕಲ್ಲಂಗಡಿ ಚಿಕನ್ ಬಿರಿಯಾನಿ
ಹೌದು, ಈ ಬಿರಿಯಾನಿಯ ಹೆಸರು ಕಲ್ಲಂಗಡಿ ಚಿಕನ್ ಬಿರಿಯಾನಿ. ಇದು ವಿಚಿತ್ರವಾದರೂ ಸತ್ಯ. ಕಲ್ಲಂಗಡಿ ಹಾಕಿ ಮಾಡಿರುವ ಈ ಚಿಕನ್ ಬಿರಿಯಾನಿ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗ್ತಾ ಇದೆ. ಇನ್ಸ್ಟಾಗ್ರಾಮ್ನ villagefoodchannel_official ಪೇಜ್ನಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ, ಈ ವಿಚಿತ್ರ ಬಿರಿಯಾನಿ ವೈರಲ್ ಆಗಿದೆ.
ಕಲ್ಲಂಗಡಿ ಬಿಕನ್ ಬಿರಿಯಾನಿ ತಯಾರಿಸುವ ವಿಧಾನ
ಮೊದಲಿಗೆ ಇಬ್ಬರು ಕಲ್ಲಂಗಡಿ ಹಣ್ಣನ್ನು ತುಂಡು ಮಾಡುವ ಮೂಲಕ ವಿಡಿಯೋ ಆರಂಭವಾಗುತ್ತದೆ. ಬಳಿಕ ಹಣ್ಣಿನ ತುಂಡುಗಳನ್ನು ದೊಡ್ಡ ಪಾತ್ರೆಗೆ ಹಾಕಿ ಅದರಲ್ಲಿ ಗುದ್ದಿ ರಸವನ್ನು ತೆಗೆಯುತ್ತಾರೆ. ಬಳಿಕ ಮತ್ತೊಂದು ಪಾತ್ರೆಯಲ್ಲಿ ಚಿಕನ್ ಬಿರಿಯಾನಿ ತಯಾರಿಸಲು ಪ್ರಾರಂಭಿಸುತ್ತಾರೆ.
ದೊಡ್ಡ ಪಾತ್ರೆಯನ್ನು ಇಟ್ಟು ಅದಕ್ಕೆ ಎಣ್ಣೆ, ನೀರುಳ್ಳಿ, ಬೆಳ್ಳುಳ್ಳಿ, ಶುಂಠಿ-ಬೆಳ್ಳುಳ್ಳಿ ಪೇಸ್ಟ್, ಮಸಾಲೆಗಳು, ಗರಂ ಮಸಾಲೆ ಹಾಕಿ ಮಸಾಲೆ ತಯಾರಿಸುತ್ತಾರೆ. ಬಳಿಕ ಅದಕ್ಕೆ ಶುಚಿಗೊಳಿಸಿದ ಕೋಳಿ ತುಂಡುಗಳನ್ನು ಹಾಕಿ ಮಿಕ್ಸ್ ಮಾಡಿ ಬೇಯಿಸುತ್ತಾರೆ.
ಕೋಳಿ ಮಾಂಸ ಬೆಂದ ನಂತರ ಅದಕ್ಕೆ ಪ್ರಮುಖ ಅಂಶವಾದ ಕಲ್ಲಂಗಡಿ ಹಣ್ಣಿನ ರಸವನ್ನು ಸೇರಿಸುತ್ತಾರೆ. ನಂತರ ಅದಕ್ಕೆ ಬಾಸುಮತಿ ಅಕ್ಕಿ ಹಾಕಿ ಮತ್ತೆ ಬೇಯಿಸುತ್ತಾರೆ. ಸ್ವಲ್ಪ ಕೊತ್ತಂಬರಿ ಸೊಪ್ಪನ್ನು ಮೇಲಿಗೆ ಹಾಕಿ ಮುಚ್ಚಿಡುತ್ತಾರೆ. ಈ ರೀತಿ ಮಾಡಿದಾಗ ಕಲ್ಲಂಗಡಿ ಚಿಕನ್ ಬಿರಿಯಾನಿ ತಯಾರಾಗುತ್ತದೆ.
ಈ ವಿಡಿಯೋ ಬಾರಿ ವೈರಲ್ ಆಗಿದ್ದು, ಇದುವರೆಗೆ ಆರು ಲಕ್ಷಕ್ಕೂ ಹೆಚ್ಚು ಮಂದಿ ವಿಡಿಯೋ ಲೈಕ್ ಮಾಡಿದ್ದಾರೆ. ಹಾಗೆಯೇ 21 ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. ಕಲ್ಲಂಗಡಿ ಚಿಕನ್ ಬಿರಿಯಾನಿಯ ಈ ವಿಶಿಷ್ಟ ಸಂಯೋಜನೆಯನ್ನು ವೀಕ್ಷಿಸಿದ ಹಲವಾರು ಜನರು ತಮ್ಮ ಅಭಿಪ್ರಾಯಗಳನ್ನು ಕಮೆಂಟ್ ಮಾಡಿದ್ದಾರೆ.
Ancient Mangaluru
ಮಂಗಳೂರು ವಿಮಾನ ನಿಲ್ದಾಣವಿನ್ನು ನಿಶ್ಶಬ್ದ ವಲಯ!
ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಇನ್ನು ಮುಂದೆ ನಿಶ್ಶಬ್ದ ವಲಯವಾಗಿರಲಿದೆ. ಹೌದು, ಇನ್ನು ಮುಂದೆ ವಿಮಾನ ನಿಲ್ದಾಣದಲ್ಲಿ ಏರ್ಲೈನರ್ಗಳಿಂದ ಯಾವುದೇ ಪ್ರಯಾಣಿಕರ ಮಾಹಿತಿ ಕುರಿತ ಅನೌನ್ಸ್ ಮೆಂಟ್ ಇರುವುದಿಲ್ಲ. ಪ್ರಯಾಣಿಕರು ಫ್ಲೈಟ್ ಇನ್ಫಾರ್ಮೇಶನ್ ಡಿಸ್ಪ್ಲೇ ಸಿಸ್ಟಂ ಫಲಕಗಳನ್ನು ನೋಡಿ ಮಾಹಿತಿ ಪಡೆದುಕೊಳ್ಳ ಬೇಕಾಗಿದೆ ಎಂದು ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ.
ಸಹಾಯಕ್ಕಾಗಿ ಯಾರನ್ನು ಸಂಪರ್ಕಿಸಬೇಕು?
ವಿಮಾನ ನಿಲ್ದಾಣದಲ್ಲಿರುವ ಪ್ರಯಾಣಿಕರಿಗೆ ಕಿರಿಕಿರಿಯಾಗುವುದನ್ನು ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ. ಇನ್ನು ಮುಂದೆ ವಿಮಾನಗಳ ಹಾರಾಟದ ಮಾಹಿತಿಗಳು ಫ್ಲೈಟ್ ಇನ್ಫಾರ್ಮೇಶನ್ ಡಿಸ್ಪ್ಲೇ ಸಿಸ್ಟಂ ಫಲಕಗಳಲ್ಲಿ ಅನಾವರಣಗೊಳ್ಳಲಿದೆ. ವಿಮಾನ ನಿಲ್ದಾಣದ ಹಲವು ಕಡೆಗಳಲ್ಲಿ ಈ ಡಿಸ್ಪ್ಲೇಗಳನ್ನು ಇರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಇದಲ್ಲದೆ, ವಿಮಾನ ನಿಲ್ದಾಣದ ಟರ್ಮಿನಲ್ನಲ್ಲಿ ‘ಮೇ ಐ ಹೆಲ್ಪ್ ಯು’ ಡೆಸ್ಕ್ ನಿರ್ವಹಿಸುವ ಸಿಬಂದಿ, ಗ್ರಾಹಕ ಸೇವೆ ಮತ್ತು ಅತಿಥಿ ಸಂಬಂಧಗಳ ಕಾರ್ಯನಿರ್ವಾಹಕರು, ಪ್ರಣಾಮ್ ಸಿಬಂದಿ ಕೂಡಾ ಮಾಹಿತಿಯೊಂದಿಗೆ ಪ್ರಯಾಣಿಕರಿಗೆ ಸಹಾಯ ಮಾಡಲು ಸಿದ್ಧರಿರುತ್ತಾರೆ.
ಇದನ್ನೂ ಓದಿ : ಕೋವಿಶೀಲ್ಡ್ ಲಸಿಕೆ ಅಡ್ಡ ಪರಿಣಾಮ ಬೀರಲಿದೆ; ಸತ್ಯ ಒಪ್ಪಿಕೊಂಡ ಆಸ್ಟ್ರಾಜೆನಿಕಾ! ಏನಿದರ ಪರಿಣಾಮ?
ಎಸ್.ಎಂ.ಎಸ್ ಮೂಲಕ ಮಾಹಿತಿ :
ಎಲ್ಲಾ ಏರ್ಲೈನ್ ಚೆಕ್-ಇನ್ ಕೌಂಟರ್ಗಳು, ಬೋರ್ಡಿಂಗ್ ಗೇಟ್ಗಳಲ್ಲಿ ವಿಮಾನದ ಮಾಹಿತಿಯನ್ನು ವೀಕ್ಷಿಸ ಬಹುದು. ಬೋರ್ಡಿಂಗ್ ಗೇಟ್ ಬದಲಾವಣೆಗಳು/ ವಿಮಾನ ಮರು ವೇಳಾಪಟ್ಟಿ ವಿವರಗಳನ್ನು ಎಸ್.ಎಂ.ಎಸ್. ಮೂಲಕ ಪ್ರಯಾಣಿಕರ ನೋಂದಾಯಿತ ಇಮೇಲ್ ಮತ್ತು ಮೊಬೈಲ್ ಸಂಖ್ಯೆಯಲ್ಲೂ ಕೂಡಾ ಏರ್ಲೈನ್ ಹಂಚಿಕೊಳ್ಳಲಿದೆ ಎಂದು ವಿವರಿಸಿದ್ದಾರೆ.
- FILM6 days ago
“ನಿತ್ಯಾಮೆನನ್” ಚಿತ್ರರಂಗದಿಂದ ‘ಬ್ಯಾನ್’ ಆಗಲು ಕಾರಣವೇನು ಗೊತ್ತಾ? ಈ ಬಗ್ಗೆ ನಿತ್ಯಾ ಹೇಳಿದ್ದೇನು?
- DAKSHINA KANNADA6 days ago
ನಮ್ಮ ಮಾತುಗಳಿಗೆ ಅಸ್ತು ಅನ್ನುವ ಅಶ್ವಿನಿ ದೇವತೆಗಳು – ಯಾರಿವರು?
- LATEST NEWS6 days ago
ಕಾಲಿನ ಮೂಲಕವೇ ಕಾರು ಚಲಾಯಿಸಿ, ಡ್ರೈವಿಂಗ್ ಲೈಸೆನ್ಸ್ ಪಡೆದ ಏಷ್ಯಾದ ಮೊದಲ ಮಹಿಳೆ!
- DAKSHINA KANNADA5 days ago
ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪದ್ಮರಾಜ್ ಪೂಜಾರಿ