Connect with us

    DAKSHINA KANNADA

    ‘ಮಂಗಳೂರು ದಸರಾ’ ವೈಭವದ ಶೋಭಾಯಾತ್ರೆಗೆ ಕ್ಷಣಗಣನೆ….!!

    Published

    on

    ಮಂಗಳೂರು; ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಆಚರಿಸಲಾಗುತ್ತಿರುವ ‘ಮಂಗಳೂರು ದಸರಾ’ ಸಂಭ್ರಮದ ಬೃಹತ್ ಶೋಭಾಯಾತ್ರೆ ಇಂದು (ಅ.13) ಸಂಜೆ 4 ಗಂಟೆಗೆ ಆರಂಭವಾಗಿ ನಾಳೆ (ಅ.14) ಮುಂಜಾನೆ ಶಾರದೆಯ ಜಲಸ್ತಂಭನದ ಮೂಲಕ ಸಮಾಪನಗೊಳ್ಳಲಿದೆ.


    ಕುದ್ರೋಳಿ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಬಿ. ಜನಾರ್ಧನ ಪೂಜಾರಿ ನೇತೃತ್ವದಲ್ಲಿ ನಡೆಯುವ ಶೋಭಾಯಾತ್ರೆಯಲ್ಲಿ ಲಕ್ಷಾಂತರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಶ್ರೀ ಮಹಾಗಣಪತಿ, ನವದುರ್ಗೆಯರ ಹಾಗೂ ಶಾರದಾ ಮಾತೆಯ ವರ್ಣರಂಜಿತ ಬೃಹತ್ ದಸರಾ ಶೋಭಾಯಾತ್ರೆ, ಅತ್ಯಾಕರ್ಷಕ ವಿದ್ಯುತ್ ದೀಪದ ಅಲಂಕೃತ ಮಂಟಪದೊಂದಿಗೆ ಹೊರಡಲಿದೆ.


    ಶೋಭಾಯಾತ್ರೆಗೆ ಹಲವು ಸ್ತಬ್ಧಚಿತ್ರಗಳು, ರಾಜ್ಯದ ವಿವಿಧ ಕಡೆಗಳಿಂದ ಆಗಮಿಸುವ ಕಲಾತಂಡಗಳು ಹುಲಿ ವೇಷ ಸಹಿತ ಇತರ ವೇಷಗಳು, ಚೆಂಡೆ ತಂಡಗಳು ಮೆರುಗು ನೀಡಲಿದೆ.

    ಊದು ಪೂಜೆ ಸಹಿತ ಭಾರೀ ವೈಭವದಿಂದ ಜರುಗುವ ಶಾಭಾಯಾತ್ರೆಯನ್ನು ಕಣ್ತುಂಬಿಕೊಳ್ಳಲು ಉರು ಮಾತ್ರವಲ್ಲದೆ ಪರವೂರಿನಿಂದಲೂ ಲಕ್ಷಾಂತರ ಮಂದಿ ಆಗಮಿಸಲಿದ್ದಾರೆ. ಗಣ್ಯಾತಿಗಣ್ಯರು ಹಾಜರಾಗಲಿದ್ದು, ಸಂಭ್ರಮ ದುಪ್ಪಟ್ಟಾಗುವ ನಿರೀಕ್ಷೆಯಿದ್ದು, ಇನ್ನೇನು ಕೆಲವೇ ಕ್ಷಣಗಳಷ್ಟೇ ಉಳಿದಿದೆ.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಕಟೀಲು, ಕುದ್ರೋಳಿ ಕ್ಷೇತ್ರಕ್ಕೆ ನಟ ಸಂಜಯ್ ದತ್ ಭೇಟಿ

    Published

    on

    ಮಂಗಳೂರು : ಮಂಗಳೂರು ದಸರಾ ಬಲು ಸುಂದರ. ಪ್ರತೀ ವರ್ಷ ಅಬ್ಬರದಿಂದ ನಡೆವ ಮಂಗಳೂರು ದಸರಾಗೆ ಮನಸೋಲದವರಿಲ್ಲ. ವೈಭವದ ಸಂಭ್ರಮಕ್ಕೆ ಪ್ರತಿ ವರ್ಷ ಸಿನಿತಾರೆಯರು ಮೆರುಗು ನೀಡುತ್ತಾರೆ. ಈ ಬಾರಿ ಬಾಲಿವುಡ್ ನಟ ಸಂಜಯ್ ದತ್ ಬಂದಿದ್ದರು.  ಮೊದಲು ಅವರು ಕಟೀಲು ಶ್ರೀ ದುರ್ಗಾಪರಮೇಶ್ವರಿಯ ದರ್ಶನ ಪಡೆದ ಅವರು, ಬಳಿಕ ಕುದ್ರೋಳಿ ದೇವಸ್ಥಾನಕ್ಕೆ ಭೇಟಿ ನೀಡಿದರು. ದರ್ಬಾರ್ ಹಾಲ್ ಗೆ ತೆರಳಿ ದೇವಿಯರ ವಿಗ್ರಹ ಕಣ್ತುಂಬಿಕೊಂಡರು. ಶಾರದೆ ಮಾತೆಗೆ ನಮಿಸಿದರು.

    ಎರಡೂ ದೇವಸ್ಥಾನದಲ್ಲಿ ಸಂಜಯ್ ದತ್ ರಿಗೆ ದೇವರ ಶೇಷ ವಸ್ತ್ರ ಮತ್ತು ಪ್ರಸಾದ ನೀಡಿ ಗೌರವಿಸಲಾಯಿತು.

    ಬಳಿಕ ಅವರು ಹುಲಿ ಕುಣಿತದ ಊದು ಪೂಜೆಯಲ್ಲಿ ಭಾಗಿಯಾದರು.  ಪಿಲಿ ನಲಿಕೆ ನೋಡಿ ಆನಂದಿಸಿದರು. ಬಳ್ಳಾಲಭಾಗ್‌ ನಲ್ಲಿ ನಡೆದಿದ್ದ ಈ ಊದು ಪೂಜೆ ಕಾರ್ಯಕ್ರಮಕ್ಕೆ ನಟ ಸಂಜಯತ್ ದತ್ ಆಗಮಿಸುತ್ತಿದ್ದಂತೆ ಅಭಿಮಾನಿಗಳು ಮುತ್ತಿಕೊಂಡರು. ತಮ್ಮ ಮೊಬೈಲ್‌ ನಲ್ಲಿ ಫೋಟೋ ಕ್ಲಿಕ್ಕಿಸಿ ಸಂಭ್ರಮಿಸಿದ್ದರು.

     

     

    Continue Reading

    BELTHANGADY

    ಗುರುವಾಯನಕೆರೆ – ಹೊಂಡ ತಪ್ಪಿಸಲು ಹೋಗಿ ಕಾರುಗಳು ಜ*ಖಂ

    Published

    on

    ಗುರುವಾಯನಕೆರೆ: ಇಂದು (ಅ.12) ಮುಂಜಾನೆ ಎರಡು ಕಾರುಗಳ ನಡೆವೆ ಭೀಕರ ಅ*ಪಘಾತವು ಗುರುವಾಯನಕೆರೆ ಶಕ್ತಿನಗರದಲ್ಲಿ ಸಂಭವಿಸಿದೆ.


    ಗುರುವಾಯನಕೆರೆಯಿಂದ ಹೆಬ್ರಿ ಕಡೆಗೆ ಹೋಗುವ ಸ್ಕೋಡಾ ಕಾರು ಮತ್ತು ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ಐ20 ಕಾರಿನ ನಡೆವೆ ಅ*ಪಘಾತ ಸಂಭವಿಸಿದೆ.


    ಐ 20 ಕಾರು ಚಾಲಕ ರಸ್ತೆಯ ಹೊಂಡ ತಪ್ಪಿಸಲು ಹೋಗಿ ಈ ದುರ್ಘಟನೆ ನಡೆದಿದೆ ಎಂಬುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ.

     

     

    ಇದನ್ನೂ ಓದಿ:  ಉಪ್ಪಿನಂಗಡಿ| ಪ್ರಪಾತಕ್ಕೆ ಉರುಳಿದ ಖಾಸಗಿ ಬಸ್:‌ ಚಾಲಕ ಮೃ*ತ್ಯು

     

    ಎರಡೂ ಕಾರು ಉಲ್ಟಾ ಬಿದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದವರಿಗೆ ಗಂಭೀರ ಗಾಯಗಳಾಗಿಲ್ಲ ಎಂಬುವುದು ತಿಳಿದು ಬಂದಿದೆ. ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

    Continue Reading

    DAKSHINA KANNADA

    ಮಂಗಳೂರು – ಕಟೀಲಮ್ಮನ ಮಡಿಲಲ್ಲಿ ಹಲವಾರು ಬಣ್ಣದ ವೇಷಗಳ ವೈಭವ

    Published

    on

    ಮಂಗಳೂರು: ನಂದಿನಿ ನದಿಯ ಮಧ್ಯದಲ್ಲಿ ರಾರಾಜಿಸುತ್ತಿರುವ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ಅದ್ದೂರಿಯಾಗಿ ನಡೆಯುವ ಶರನ್ನವರಾತ್ರಿ ಉತ್ಸವದ ವೈಭವ ಒಂದು ಕಡೆಯಾದರೆ ಹುಲಿ, ಸಿಂಹ ಸೇರಿದಂತೆ ಸಾವಿರಾರು ಬಣ್ಣದ ವೇಷಗಳು ಸೇವೆ ಸಲ್ಲಿಸುವ ಸೊಬಗು ಇನ್ನೊಂದು ಕಡೆ.


    ಹಲವಾರು ತಂಡಗಳು ಹುಲಿ ವೇಷ ಹಾಕಿ ತಿರುಗಾಟ ನಡೆಸಿ ಅಂತಿಮವಾಗಿ ಕಟೀಲಿಗೆ ಬಂದು ದೇವಾಲಯದ ಆವರಣದಲ್ಲಿ ನರ್ತಿಸಿ ವೇಷ ಕಳಚಿ ನಂದಿನಿ ನೀರಿನಲ್ಲಿ ಮಿಂದು ಹೋಗುವುದು ರೂಢಿ. ವೇಷ ಹಾಕುವಾಗಲೇ ಕಟೀಲಿನಲ್ಲಿ ವೇಷ ಬಿಚ್ಚುತ್ತೇವೆ ಎಂದು ಹರಕೆ ಹೊತ್ತವರು ಒಂದೆಡೆಯಾದರೆ, ಕಟೀಲು ಕ್ಷೇತ್ರದಲ್ಲೇ ಸೇವೆ ಸಲ್ಲಿಸಿ ಮರಳಿ ಅಲ್ಲೇ ವೇಷ ಬಿಚ್ಚುತ್ತೇವೆ ಎನ್ನುವವರು ಇನ್ನೊಂದೆಡೆ ಇದ್ದಾರೆ. ಇದು ತಲತಲಾಂತರಗಳಿಂದ ಪಾಲಿಸಿಕೊಂಡು ಬರುತ್ತಿರುವ ಸಂಪ್ರದಾಯವಾಗಿದೆ.


    ಶರನ್ನವರಾತ್ರಿ ಸಮಯದಲ್ಲಿ ಕಟೀಲು ದೇವಾಲಯದ ಆವರಣದಲ್ಲಿ ನಿತ್ಯವೂ ಹತ್ತಾರು ತಂಡಗಳ ಹುಲಿ ವೇಷ ನರ್ತನ ಇರುತ್ತದೆ. ಒಟ್ಟಾರೆಯಾಗಿ 2000 ಕ್ಕೂ ಅಧಿಕ ವೇಷಗಳು , 70 ರಿಂದ 80 ತಂಡಗಳು ಕಟೀಲು ಸನ್ನಿಧಿಗೆ ಬಂದು ಸೇವೆ ಸಲ್ಲಿಸುತ್ತವೆ ಎಂದು ಹೇಳಬಹುದು.

    Continue Reading

    LATEST NEWS

    Trending