Connect with us

    LATEST NEWS

    ದನದ ಕೊಟ್ಟಿಗೆಯಲ್ಲಿ ನೇ*ಣಿಗೆ ಶರಣಾದ ದಂಪತಿ

    Published

    on

    ಮಂಗಳೂರು/ ರಾಮನಗರ : ದನದ ಕೊಟ್ಟಿಗೆಯಲ್ಲಿ ದಂಪತಿ ಆತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ  ಚನ್ನಪಟ್ಟಣ ತಾಲೂಕಿನ ಕರ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ರಾಜು(34) ಮತ್ತು ಲಕ್ಷ್ಮೀ(30) ಆತ್ಮಹ*ತ್ಯೆ ಮಾಡಿಕೊಂಡ ದಂಪತಿ.

    ಸಾಲದ ವಿಚಾರವಾಗಿ ದಂಪತಿ ಆತ್ಮಹ*ತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

    ಇದನ್ನೂ ಓದಿ : ರತನ್ ಟಾಟಾ ಅವರಿಗೆ ವಿಶೇಷ ನಮನ ಸಲ್ಲಿಸಿದ ನಮ್ಮ ಮೆಟ್ರೋ; ಫೋಟೋ ವೈರಲ್

    ರಾಜು ಹಾಗೂ ಲಕ್ಷ್ಮೀ ಕಳೆದ ಐದು ವರ್ಷದ ಹಿಂದೆ ಮದುವೆಯಾಗಿದ್ದರು. ಇವರಿಗೆ ಮೂರು ವರ್ಷದ ಹೆಣ್ಣು ಮಗು ಇದೆ. ರಾಜು ದಂಪತಿಯ ತಂದೆ, ತಾಯಿ ಧರ್ಮಸ್ಥಳಕ್ಕೆ ತೆರಳಿದ್ದಾಗ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಅಕ್ಕೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

     

    LATEST NEWS

    ಅ. 15ಕ್ಕೆ ಹರಿಯಾಣದ ಸಿಎಂ ಆಗಿ ಯಾಬ್ ಸಿಂಗ್ ಸೈನಿ ಪ್ರಮಾಣ ವಚನ ಸ್ವೀಕಾರ

    Published

    on

    ಹರಿಯಾಣ: ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲವು ಪಡೆದುಕೊಂಡಿದೆ. ರಾಜ್ಯದ 90 ಸ್ಥಾನಗಳ ಪೈಕಿ 48 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಗೆಲುವು ಸಾಧಿಸಿದೆ.

    ಇದೀಗ ಅಕ್ಟೋಬರ್ 15ರಂದು ನಯಾಬ್ ಸಿಂಗ್ ಸೈನಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀ ಕರಿಸುವ ಸಾಧ್ಯತೆಗಳಿವೆ ಎಂದು ಅಧಿಕೃತ ಮೂಲಗಳಿಂದ ತಿಳಿದು ಬಂದಿದೆ.

    ಪ್ರಧಾನಿ ನರೇಂ ದ್ರ ಮೋದಿ ಮತ್ತು ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಇತರ ಪ್ರಮುಖ ನಾಯಕರು ಪ್ರಮಾಣ ವಚನ ಸ್ವೀ ಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ.

    Continue Reading

    LATEST NEWS

    ನೋಯಲ್ ಟಾಟಾ ಗ್ರೂಪ್’ಗೆ ಮುಂದಿನ ವಾರಸುದಾರ

    Published

    on

    ಮುಂಬೈ: ಟಾಟಾ ಗ್ರೂಪ್ ಗೆ ಹೊಸ ವಾರಸುದಾರರ ಆಯ್ಕೆಯಾಗಿದೆ. ಟಾಟಾ ಟ್ರಸ್ಟ್ ಗಳ ಮುಖ್ಯಸ್ಥರಾಗಿ ನೋಯಲ್ ಟಾಟಾ ಅವರನ್ನು ನೇಮಕ ಮಾಡಲಾಗಿದೆ.

    ಇಂದು ಶುಕ್ರವಾರ ಟಾಟಾ ಟ್ರಸ್ಟ್ ಗಳ ಮಂಡಳಿ ಸಭೆ ನಡೆದಿದ್ದು, ಅದರಲ್ಲಿ ಒಮ್ಮತದಿಂದ ನೋಯಲ್ ಅವರ ಪರವಾಗಿ ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಗಿದೆ.

    ಟಾಟಾ ಗ್ರೂಪ್ ನ ಮಾಲೀಕ ಸಂಸ್ಥೆಯಾದ ಟಾಟಾ ಸನ್ಸ್ ನಲ್ಲಿ ಟಾಟಾ ಟ್ರಸ್ಟ್ ಗಳು ಬಹುಪಾಲು ಷೇರುದಾರಿಕೆ ಹೊಂದಿವೆ. ಈ ಮೂಲಕ ಟಾಟಾ ಗ್ರೂಪ್ ನ ಒಡೆತನ ನೋಯಲ್ ಟಾಟಾಗೆ ಸಿಗಲಿದೆ.
    67 ವರ್ಷದ ನೋಯಲ್ ಟಾಟಾ ಅವರು ರತನ್ ಟಾಟಾ ತಂದೆಯ ಎರಡನೇ ಪತ್ನಿಯ ಮಗ. ಟಾಟಾ ಕುಟುಂಬಕ್ಕೆ ಸೇರಿದ ಸರ್ ದೊರಾಬ್ ಜಿ ಟಾಟಾ ಟ್ರಸ್ಟ್ ಮತ್ತು ಸರ್ ರತನ್ ಟಾಟಾ ಟ್ರಸ್ಟ್ ಮಂಡಳಿಗಳ ಟ್ರಸ್ಟೀಗಳಲ್ಲಿ ಒಬ್ಬರಾಗಿರುವ ನೋಯಲ್ ಟಾಟಾ ಅವರು ಮುಂದಿನ ವಾರಸುದಾರ ಎಂಬುದು ಬಹುತೇಕ ನಿಶ್ಚಿತವಾಗಿತ್ತು.

    87 ವರ್ಷದ ರತನ್ ಟಾಟಾ ಮೊನ್ನೆ ಬುಧವಾರ ಸಂಜೆ ಮುಂಬೈನಲ್ಲಿ ವಿಧಿವಶರಾಗಿದ್ದಾರೆ. ರತನ್ ಅವರ ತಂದೆ ನವಲ್ ಟಾಟಾ ಅವರಿಗೆ ಎರಡು ವಿವಾಹವಾಗಿತ್ತು. ಮೊದಲ ಪತ್ನಿಗೆ ವಿಚ್ಛೇದನ ನೀಡಿ ಎರಡನೇ ಮದುವೆಯಾಗಿದ್ದರು. ರತನ್ ಮತ್ತು ಜಿಮ್ಮಿ ಟಾಟಾ ಅವರು ಮೊದಲ ಪತ್ನಿಯ ಮಕ್ಕಳಾಗಿದ್ದಾರೆ. ನೋಯಲ್ ಟಾಟಾ ಅವರು ಎರಡನೇ ಪತ್ನಿಯ ಮಗ. ನೋಯಲ್ ಅವರಿಗೆ ಒಂದು ಗಂಡು ಮಗು ಸೇರಿ ಮೂವರು ಮಕ್ಕಳಿದ್ದಾರೆ.

    Continue Reading

    LATEST NEWS

    VIRAL VIDEO: ವಿದ್ಯಾರ್ಥಿಗಳ ಕೈಯಿಂದ ತರಗತಿಯಲ್ಲಿ ಸ್ಮೂತ್ ಮಸಾಜ್ ಮಾಡಿಕೊಂಡ ಶಿಕ್ಷಕಿ

    Published

    on

    ಮಂಗಳೂರು/ಜೈಪುರ; ಕೆಲವು ಶಿಕ್ಷಕರು ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡದೆ ವಿದ್ಯಾರ್ಥಿಗಳಿಂದ ಕೆಲಸ ಮಾಡಿಸಿಕೊಳ್ಳುವಂತಹ ನಾಚಿಕೆಗೇಡಿನ ಕೆಲಸಳು ನಡೆಯುತ್ತಿವೆ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ಮಕ್ಕಳಿಗೆ ಪಾಠ ಹೇಳಿಕೊಡುವ ಬದಲು ಶಿಕ್ಷಕಿಯೊಬ್ಬರು ತರಗತಿಯೊಳಗೆ ಮಲಗಿ ವಿದ್ಯಾರ್ಥಿಗಳಿಂದ ತನ್ನ ಕಾಲಿಗೆ ಮಸಾಜ್‌ ಮಾಡಿಸಿಕೊಂಡಿರುವ ಘಟನೆ ಜೈಪುರ ಕರ್ತಾರ್‌ಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

    ಶಾಲೆಗಳು ದೇವಾಲಯವಿದ್ದಂತೆ. ಈ ಪವಿತ್ರ ಸ್ಥಳದಲ್ಲಿ ಶಿಕ್ಷಕರಾದವರು ಮಕ್ಕಳಿಗೆ ಕಲಿಕೆಯ ಜೊತೆಗೆ ಒಳ್ಳೆಯ ಜೀವನ ಪಾಠವನ್ನು ಕೂಡಾ ಕಲಿಸಿಕೊಡಬೇಕು. ಆದ್ರೆ ಕೆಲವು ಶಿಕ್ಷಕರು ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡದೆ ವಿದ್ಯಾರ್ಥಿಗಳಿಂದ ಕೆಲಸ ಮಾಡಿಸಿಕೊಳ್ಳುವಂತಹ ನಾಚಿಕೆಗೇಡಿನ ಕೆಲಸಗಳನ್ನು ಮಾಡುತ್ತಿರುತ್ತಾರೆ. ಶಿಕ್ಷಕರ ಕರ್ತವ್ಯ ಲೋಪಕ್ಕೆ ಸಂಬಂಧಿಸಿದ ಸುದ್ದಿಗಳು ಈ ಹಿಂದೆಯೂ ವೈರಲ್‌ ಆಗಿದೆ. ಘಟನೆಯ ಅನ್ವಯ ಶಾಲೆಯ ಶಿಕ್ಷಕಿ ಪಾಠ ಮಾಡುವ ಬದಲು ತರಗತಿಯಲ್ಲಿ ಮಲಗಿ ವಿದ್ಯಾರ್ಥಿಗಳಿಂದಲೇ ತಮ್ಮ ಕಾಲಿಗೆ ಮಸಾಜ್‌ ಮಾಡಿಸಿಕೊಂಡಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗುತ್ತಿದ್ದು, ಶಿಕ್ಷಕರೇ ಹೀಗೆ ಮಾಡಿದ್ರೆ ವಿದ್ಯಾರ್ಥಿಗಳ ಭವಿಷ್ಯ ಏನಾಗಬೇಡ ಎಂದು ನೆಟ್ಟಿಗರು ಕಳವಳ ವ್ಯಕ್ತಪಡಿಸಿದ್ದಾರೆ.

     

    ಇದನ್ನೂ ಓದಿ:WATCH VIDEO : ಕಾಳಿಗೆ ಮೋದಿ ನೀಡಿದ್ದ ಕಿರೀಟಕ್ಕೆ ಕನ್ನ ಹಾಕಿದ ಕಳ್ಳ; ಸಿಸಿ ಟಿವಿಯಲ್ಲಿ ಸೆರೆಯಾಯ್ತು ಖದೀಮನ ಕೈಚಳಕ 

     

    ಪ್ರಶಾಂತ್‌ ರೈ (prashanthrai280) ಎಂಬವರು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ಮಕ್ಕಳು ಶಿಕ್ಷಕಿಯ ಕಾಲಿನ ಮೇಲೆ ನಿಂತು ಮಸಾಜ್‌ ಮಾಡಿದ್ದಾರೆ.
    ಇಂದು ಮುಂಜಾನೆ ಶೇರ್‌ ಮಾಡಲಾದ ಈ ವಿಡಿಯೋ ಸದ್ಯ ಭಾರೀ ವೈರಲ್‌ ಆಗುತ್ತಿದ್ದು, ‘ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡುವ ಬದಲು ವಿದ್ಯಾರ್ಥಿಗಳಿಂದಲೇ ಕೆಲಸ ಮಾಡಿಸಿಕೊಂಡ ಆ ಶಿಕ್ಷಕಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲೇಬೇಕು, ಇದು ಆ ಶಾಲೆಯ ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ’ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

     

    watch video:

    Continue Reading

    LATEST NEWS

    Trending