Connect with us

     covid 19 essential service/ ತುರ್ತುಸೇವೆ ಬೋರ್ಡ್ ದುರ್ಬಳಕೆ ಎಷ್ಟು ಸರಿ..!?

    Published

    on

     covid 19 essential service/ ತುರ್ತುಸೇವೆ ಬೋರ್ಡ್ ದುರ್ಬಳಕೆ ಎಷ್ಟು ಸರಿ..!?
    ಕೊರೊನಾದ ಗಂಭೀರತೆ ಇನ್ನೂ ಅರಿಯದ ಪಾಲಿಕೆ, ಜಿಲ್ಲಾಡಳಿತ !?

    ಮಂಗಳೂರು: ಕೊರೊನಾ ಮಹಾಮಾರಿಯಿಂದ ದೇಶ ಲಾಕ್ ಡೌನ್ ಆಗಿದೆ. ಇದಕ್ಕೆ ಕಡಲತಡಿ ಕರಾವಳಿಯ ಮಂಗಳೂರು ಕೂಡ ಹೊರತಾಗಿಲ್ಲ. ಎಲ್ಲರೂ ಮನೆಯಲ್ಲಿರಬೇಕು ಯಾರೂ ಕೂಡ ಹೊರಗೆ ಬರಬಾರದು ಅನ್ನುವ ಕಟ್ಟುನಿಟ್ಟಿನ ಕಾನೂನು ಕ್ರಮ ಚಾಲ್ತಿಯಲ್ಲಿದೆ. ಆದರೂ ನಮ್ಮ ಮಂಗಳೂರಿನ ಪ್ರಜ್ಞಾವಂತ ನಾಗರಿಕರಿಗೆ ಇದು ಅರ್ಥ ಆದಂತೆ ಕಾಣುತ್ತಿಲ್ಲ.


    ಈ ಕಟ್ಟುನಿಟ್ಟಿನ ಲಾಕ್ ಡೌನ್ ಸಂಧರ್ಭ ಇದ್ದರೂ ರಸ್ತೆಯಲ್ಲಿ ಒಡಾಡೋ ವಾಹನಗಳಿಗೆ ಇನ್ನೂ ಕೂಡ ಜಿಲ್ಲೆಯಲ್ಲಿ ಸಂಪೂರ್ಣವಾಗಿ ಬ್ರೇಕ್ ಬಿದ್ದಂತೆ ಕಾಣುತ್ತಾ ಇಲ್ಲ. ಕಾರಣ ಮಂಗಳೂರಿನ ಕೆಲ ರಸ್ತೆಗಳಲ್ಲಿ ಈಗಲೂ ಹಲವಾರು ವಾಹನಗಳು ಒಡಾಡ್ತಾ ಇದ್ದು, ಬಹುತೇಕ ವಾಹನಗಳಲ್ಲಿ covid 19 essential service/ ತುರ್ತುಸೇವೆ ಅನ್ನುವ ಬೋರ್ಡ್ ಸರ್ವೇ ಸಾಮಾನ್ಯವಾಗಿ ಕಾಣಸಿಗುತ್ತೆ. ವಿಪರ್ಯಾಸವೆಂದರೆ ನೀವು ಹತ್ತಿರದಿಂದ ಗಮನಿಸಿದರೆ ಇದು ಜಿಲ್ಲಾಡಳಿತ ಅಥವಾ ಪಾಲಿಕೆಯ ಅಧಿಕೃತ ಪಾಸ್ ಅಲ್ಲ ಬದಲಾಗಿ ಬಿಳಿಯ ಕಾಗದದದಲ್ಲಿ ತಮಗೆ ತಾವೇ ಪೆನ್ನಿನಲ್ಲಿ ಬರೆದು ಅಂಟಿಸಿರುವ ಕಾಗದ.

    ಲಾಕ್ ಡೌನ್ ಘೋಷಣೆಯಾದ ನಂತರ ಊಟ ಹಂಚುವವರಿಗೆ, ಆಹಾರ ಕಿಟ್ ಕೊಡುವವರಿಗೆ, ಆರೋಗ್ಯ ಕಾರ್ಯಕರ್ತರಿಗೆ ಪಾಲಿಕೆಯಿಂದ ಅಧಿಕೃತ ಪಾಸ್ ಹಂಚಲಾಗಿತ್ತು. ಲಾಕ್ ಡೌನ್ ಪ್ರಾರಂಭದಲ್ಲಿ ಪೊಲಿಸರಿಂದ ಕಟ್ಟುನಿಟ್ಟಿನ ತಪಾಸಣೆ, ಪರಿಶೀಲನೆ ನಡೆಯುತ್ತಿತ್ತು. ಆದರೆ ಈಗ ಅಂತಹ ಯಾವುದೇ ರೀತಿಯ ತಪಾಸಣೆ ಆಗಲಿ, ಕಟ್ಟುನಿಟ್ಟಿನ ಕ್ರಮವಾಗಲೀ ಕಾಣಸಿಗುತ್ತಿಲ್ಲ.

    ಇದರ ಫಲಿತಾಂಶ ಎಂಬಂತೆ ಇದೀಗ ಮಂಗಳೂರಿನಲ್ಲಿ ಎಲ್ಲೆಂದರಲ್ಲಿ ಓಡಾಡ್ತಾ ಇರುವ ಹೋಮ್ ಮೇಡ್, ಕೃತಕ ಬೋರ್ಡ್ ಧಾರಣೆಯ ವಾಹನಗಳು. ಅಗತ್ಯವಿಲ್ಲದಿದ್ದರೂ ಅನಾವಶ್ಯಕವಾಗಿ ರಸ್ತೆಯಲ್ಲಿ ತಿರುಗಾಡುತ್ತಿರುವ ವಾಹನಗಳು. ಇದನ್ನು ನೋಡಿ, ನೋಡದೆಯೂ ಇರುವಂತೆ ಜಾಣಕುರುಡು ಪ್ರದರ್ಶಿಸುತ್ತಿರುವ ಜಿಲ್ಲಾಡಳಿತ ಪೊಲೀಸ್ ಇಲಾಖೆ.

    ಇದರ ಪ್ರತಿಕೂಲ ಪರಿಣಾಮ ಎಂಬಂತೆ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೊರೊನಾ ಪ್ರಕರಣಗಳು. ಹೀಗಿದ್ದರೂ ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ ಮಾತ್ರ ಜಾಣಕುರುಡು ಪ್ರದರ್ಶಿಸುತ್ತಿರುವುದು ತೀರ ವಿಪರ್ಯಾಸ.

    ಈಗಾಗಲೇ ಇತ್ತೀಚಿನ ಕೆಲವು ಕೋವಿಡ್ ಪ್ರಕರಣಗಳಲ್ಲಿ ಜಿಲ್ಲಾಡಳಿತದ ವೈಫಲ್ಯ ನೇರವಾಗಿ ಕಾಣಸಿಗುತ್ತಿದ್ದು, ಇನ್ನಾದರೂ ಪಾಲಿಕೆ ಮತ್ತು ಜಿಲ್ಲಾಡಳಿತ ಈ ಬಗ್ಗೆ ಎಚ್ಚೆತ್ತುಕೊಳ್ಳದಿದ್ದರೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಲ್ಲಿ ಜನತೆ ವಿಫಲರಾದರೆ, ರಸ್ತೆಯಲ್ಲಿ ವಾಹನಗಳು ಇದೇ ರೀತಿ ಬೇಕಾಬಿಟ್ಟಿ ಒಡಾಡುತ್ತಾ ಇದ್ದರೆ ಮುಂದೆ ಮಹಾಮಾರಿ ಕೊರೊನಾದ ಅಟ್ಟಹಾಸದಿಂದ ಅಪಾಯಕಾರಿ ಘಟನೆಗಳು ಸಂಭವಿಸುವುದರಲ್ಲಿ ಸಂಶಯವೇ ಇಲ್ಲ.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಹಳ್ಳ ಹಿಡಿದ ಸ್ಮಾರ್ಟ್‌ ಸಿಟಿಯ ಕಾಮಗಾರಿ; ಕುಂಟುತ್ತಾ ಸಾಗಿದ ಮಹಾಕಾಳಿ ಪಡ್ಪು ಅಂಡರ್ ಪಾಸ್

    Published

    on

    ಮಂಗಳೂರು: ಮಂಗಳೂರು ಸ್ಮಾರ್ಟ್‌ ಸಿಟಿ ಯೋಜನೆಯಲ್ಲಿ ಕೈಗೆತ್ತಿಕೊಂಡಿರುವ ಮಹಾಕಾಳಿ ಪಡ್ಪುವಿನ ರೈಲ್ವೇ ಅಂಡರ್‌ ಪಾಸ್‌ ಕಾಮಗಾರಿ ಸದ್ಯಕ್ಕಂತು ಮುಗಿಯುವ ಲಕ್ಷಣ ಕಾಣಿಸುತ್ತಿಲ್ಲ. ಈ ಕಾಮಗಾರಿ ಕೈಗೆತ್ತಿಕೊಂಡು ವರ್ಷಗಳೇ ಕಳೆದರೂ ಕಾಮಗಾರಿ ಮುಗಿಸಬೇಕು ಅನ್ನೋ ಇಚ್ಚೆ ಸ್ಮಾರ್ಟ್‌ ಸಿಟಿ ಯೋಜನೆಯವರಿಗೂ ಇದ್ದಂತಿಲ್ಲ.

    ಕೆಲ ತಿಂಗಳ ಹಿಂದೆ ಕಳಪೆ ಕಾಮಗಾರಿಯಿಂದಾಗಿ ಇಲ್ಲಿ ಕಾಮಗಾರಿ ಕುಸಿತ ಕೂಡಾ ಉಂಟಾಗಿತ್ತು. ಇದೀಗ ಕೆಲ ದಿನಗಳಿಂದ ಯಾವುದೇ ಕಾಮಗಾರಿ ನಡೆಸದೆ ಕಾರ್ಮಿಕರು ಕೂಡಾ ಕೆಲಸ ಇಲ್ಲದೆ ಸುಮ್ಮನೆ ಕುಳಿತಿರುವ ದೃಶ್ಯ ಇಲ್ಲಿ ಮಾಮೂಲಾಗಿದೆ. ಮಾರ್ಗನ್‌ ಗೇಟ್ ಮೂಲಕವಾಗಿ ಜೆಪ್ಪಿನ ಮೊಗೆರು ಹೈವೆ ಸಂಪರ್ಕಿಸುವ ಈ ರಸ್ತೆಯಲ್ಲಿ ನಿತ್ಯ ಸಾವಿರಾರು ವಾಹನಗಳು ಓಡಾಡುತ್ತಿದೆ. ಸದ್ಯ ಈ ಕಾಮಗಾರಿ ಆರಂಭವಾದ ಬಳಿಕ ಇಲ್ಲಿ ದ್ವಿಚಕ್ರ ವಾಹನಕ್ಕಷ್ಟೇ ಓಡಾಡಲು ವ್ಯವಸ್ಥೆ ಮಾಡಲಾಗಿದೆ.

    ಉಪ್ಪಳದಲ್ಲಿ 3.5 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್‌ ವಶ; ಓರ್ವ ಬಂಧನ

    ಹೀಗಾಗಿ ಈ ರಸ್ತೆಯ ಮೂಲಕ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಕಾಮಗಾರಿ ಯಾವಾಗ ಮುಗಿಸ್ತೀರಿ ಅಂತ ಪ್ರಶ್ನೆ ಮಾಡುತ್ತಿದ್ದಾರೆ. ಆದರೆ ಇಲ್ಲಿ ನಡಿಯುತ್ತಿರುವ ಕಾಮಗಾರಿಯ ವೇಗ ನೋಡಿದರೆ ಇದು 2024 ರಲ್ಲಿ ಪೂರ್ಣಗೊಳ್ಳುವ ಯಾವುದೇ ಲಕ್ಷಣ ಇಲ್ಲ ಅನ್ನೋದು ಸ್ಪಷ್ಟವಾಗುತ್ತಿದೆ. ಹೀಗಾಗಿ ತಕ್ಷಣ ಅಂಡರ್ ಪಾಸ್ ಕೆಲಸ ಮಗಿಸಿ ಅಂತ ಜನ ಒತ್ತಾಯಿಸಿದ್ದಾರೆ.

    Continue Reading

    LATEST NEWS

    11 ವರ್ಷದ ಬಾಲಕ ಹೃದಯಘಾ*ತಕ್ಕೆ ಬ*ಲಿ

    Published

    on

    ಹಾಸನ : ಹೃದಯಾಘಾ*ತ ಎಂಬುದು ಇತ್ತೀಚೆಗೆ ಸಾಮಾನ್ಯವಾಗಿದೆ. ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಸಾದವರೂ ಹೃದಯಾ*ಘಾತಕ್ಕೆ ಒಳಗಾಗುತ್ತಿದ್ದಾರೆ. ರಾಜ್ಯದಲ್ಲಿ ಮತ್ತೊಂದು ಕಳವಳಕಾರಿ ಘಟನೆ ನಡೆದಿದ್ದು, 11 ವರ್ಷದ ಬಾಲಕ ಹೃದಯಾ*ಘಾತಕ್ಕೆ ಬ*ಲಿಯಾಗಿದ್ದಾನೆ. ಈ  ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಸಚಿನ್ ಮೃ*ತ ಬಾಲಕ.

    ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ ಸಚಿನ್, ಮನೆಯಲ್ಲಿ ಟಿವಿ ನೋಡುತ್ತಿದ್ದ ವೇಳೆ ಹೃದಯಾ*ಘಾತವಾಗಿದೆ.

    ಇದನ್ನೂ ಓದಿ : ಮನೆಯಲ್ಲಿ ಹಲ್ಲಿ ಕಾಟವೇ? ಈ ಸಿಂಪಲ್​ ಮನೆಮದ್ದು ಟ್ರೈ ಮಾಡಿ

    ಟಿವಿ ನೋಡುತ್ತಲೇ ಕುಸಿ*ದು ಬಿದ್ದ ಮಗನನ್ನು ಮಾತನಾಡಿಸಲು ಮನೆಯವರು ಪ್ರಯತ್ನಿಸಿದ್ದು, ಏನು ಮಾತನಾಡದೆ ಇರೋದನ್ನು ಗಮನಿಸಿ ಪೋಷಕರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಆಲೂಕು ಸರ್ಕಾರಿ ಆಸ್ಪತ್ರೆಗೆ ಕರೆತರುವ ಮುನ್ನವೇ ಬಾಲಕ ಸಾ*ವನ್ನಪ್ಪಿದ್ದ ಎಂದು ವೈದ್ಯರು ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ.

    Continue Reading

    FILM

    ಕನ್ನಡದ ಸೀರಿಯಲ್‌ನಲ್ಲಿ ಮಿಂಚುತ್ತಿರುವ ಉಡುಪಿಯ ಬೆಡಗಿ

    Published

    on

    ಬೆಂಗಳೂರು/ಮಂಗಳೂರು: ಸಿನೆಮಾದಲ್ಲಿ ನಟಿಸಬೇಕು ಅನ್ನೋದು ಎಲ್ಲರ ಕನಸು. ಆದರೆ ಇಲ್ಲೊಬ್ಬಾಕೆ ನಟಿಗೆ ಸೀರಿಯಲ್‌ನಲ್ಲಿ ನಟಿಸಬೇಕು ಎಂಬ ಆಸೆ. ಆದರೆ ಆಕೆಗೆ ಮಾತ್ರ ಮೊದಲು ಒಲಿದು  ಬಂದಿದ್ದು ಸಿನೆಮಾದಲ್ಲಿ ನಟಿಸುವ ಅವಕಾಶ. ಇದೀಗ ಆ ನಟಿ ಸುರ್ವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಅವನು ಮತ್ತು ಶ್ರಾವಣಿ’ ಧಾರವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೌದು, ಈ ಧಾರಾವಾಹಿಯಲ್ಲಿ ಶ್ರಾವಣಿಯಾಗಿ ಕಾಣಿಸಿಕೊಂಡಿರುವ ಇಶಿಕಾ ಶೆಟ್ಟಿಗಾರ್ ಮೂಲತಃ ಉಡುಪಿಯವರಾಗಿದ್ದಾರೆ.

    ಶ್ರಾವಣಿ ಪಾತ್ರದ ಇಶಿಕಾ ಶೆಟ್ಟಿಗಾರ್ ಮೂಲತಃ  ಉಡುಪಿಯವರಾಗಿದ್ದು ಸದ್ಯ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಈಕೆ 9 ನೇ ತರಗತಿಯಲ್ಲಿದ್ದಅಗಲೇ ಸಿನೆಮಾ ನಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಊರ್ವಿ, ಗರುಡ, ಮನದ ಮರೆಯಲಿ ಸೇರಿದಂತೆ ನಾಳ್ಕೈದು ಸಿನೆಮಾಗಳಲ್ಲಿ ನಟಿಸಿದ್ದಾರೆ. ಬಳಿಕ ಕಾನೂನು ಪದವಿ ಮುಗಿಸಿರುವ ಇವರು ಸೀರಿಯಲ್‌ ನಲ್ಲಿ ಆಭಿನಯಿಸುವತ್ತ ಒಲವು ಮಾಡಿದ್ದಾರೆ. ಹೀಗಾಗಿ ಲುಕ್‌ ಟೆಸ್ಟ್ ಕೂಡಾ ಕೊಟ್ಟಿದ್ದಾರೆ.

    ಜಾನಿ ಮಾಸ್ಟರ್ ಪತ್ನಿಗೂ ಬಂತು ಕಂಟಕ..! ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್..!!

    ಇದೇ ವೇಳೆ ‘ಅವನು ಮತ್ತು ಶ್ರಾವಣಿ’ ಧಾರಾವಾಹಿಗೆ ರಿಪ್ಲೇಸ್‌ಮೆಂಟ್‌ ಪಾತ್ರಕ್ಕೆ ಕರೆ ಬರುತ್ತದೆ. ರಿಪ್ಲೇಸ್‌ಮೆಂಟ್‌ ಪಾತ್ರ ಆಗಿದ್ದರಿಂದ ಜನರಿಗೆ ಇಷ್ಟ ಆಗ್ಬೋದಾ ಅನ್ನುವ ಮೈಂಡ್‌ ಸೆಟ್ ನಲ್ಲಿ ಇವರು ಕೊನೆಗೂ ಪಾತ್ರಕ್ಕೆ ಸೈ ಎಂದು ಹೇಳಿದ್ದಾರೆ. ಇದೀಗ ಧಾರಾವಾಹಿ ಮೂಲಕ ಕನ್ನಡಿಗರ ಮನಗೆದ್ದಿದ್ದಾರೆ. ಈ ಧಾರಾವಾಹಿಯಲ್ಲಿ ನಟನೆ ಆರಂಭಿಸಿದ ಮೇಲೆ ಆಫರ್‌ಗಳು ಬರುತ್ತಿದೆ ಎಂದು ಇಶಿಕಾ ಶೆಟ್ಟಿಗಾರ್ ಹೇಳಿದ್ದಾರೆ.

    Continue Reading

    LATEST NEWS

    Trending