Connect with us

    ಬ್ರಿಟಿಷರು ಕಟ್ಟಿಸಿದ್ದ ದೊಡ್ಡ ಆಸ್ಪತ್ರೆಯನ್ನು ಏಕಾಏಕಿ ಖಾಲಿ ಮಾಡಿಸಿದ ಪರಿಣಾಮ ವೃದ್ಧರು, ನಿರ್ಗತಿಕರು ಬೀದಿಯಲ್ಲಿ..

    Published

    on

    ಕೋವಿಡ್ ಆಸ್ಪತ್ರೆಯಾದ ವೆನ್ಲಾಕ್ ಅನ್ನೇ ಆಶ್ರಯಿಸಿದ್ದ ಬಡವರು ಚಳಿ-ಮಳೆಗೆ ಮಾರುಕಟ್ಟೆಯಲ್ಲಿ…ಇದಕ್ಕೆ ಹೊಣೆ ಯಾರು..

    ಮಂಗಳೂರು: ಮಂಗಳೂರಿನ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಸಹಿತ ಅಕ್ಕಪಕ್ಕದ ಹಲವಾರು ಜಿಲ್ಲೆಗಳ ಸಾವಿರಾರು ಮಂದಿ ಬಡವರು ಚಿಕಿತ್ಸೆ ಪಡೆಯುತ್ತಿದ್ದರು.

    ಅದರಲ್ಲಿ ಅನಾಥ, ನಿರ್ಗತಿಕ ಕೆಲವರು ಆಸ್ಪತ್ರೆಯಲ್ಲೇ ಸರಕಾರ ನೀಡುವ ಊಟ ಸೇವಿಸಿಕೊಂಡು ಬದುಕುತ್ತಿದ್ದರು.

    ವೆನ್ಲಾಕ್ ಆಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯಾಗಿ ಮಾರ್ಪಡಿಸಿದಾಗ, ಅಲ್ಲಿದ್ದ ಹಲವರು ಬಿಡುಗಡೆಗೊಂಡು ಮನೆಗೆ ಹೋಗಿದ್ದರು.

    ತೀವ್ರ ಅನಾರೋಗ್ಯದ ಬಡ ರೋಗಿಗಳು, ನಿರ್ಗತಿಕರನ್ನು ಬೇರೆ ಖಾಸಗಿ ಆಸ್ಪತ್ರೆಗಳಿಗೆ ಸ್ಥಳಾಂತರ ಮಾಡಲಾಗಿತ್ತು.

    ಅಲ್ಲಿ ಹಣ ಕೊಡದೆ, ಸರಿಯಾಗಿ ಚಿಕಿತ್ಸೆ ಸಿಗದೆ ಕೆಲವು ರೋಗಿಗಳು ಲಾಕ್‌ ಡೌನ್ ಸಂದರ್ಭ ಬೀದಿಗೆ ಬಂದು ದಿಕ್ಕಿಲ್ಲದೆ ಪರದಾಡುತ್ತಿದ್ದರು.

    ಕೆಲವರನ್ನು ನಮ್ಮ ಮಿತ್ರರು ಆ್ಯಂಬುಲೆನ್ಸ್ ಮೂಲಕ ಅವರ ಊರಿಗೆ ತಲುಪಿಸಿದ್ದಿದೆ.

    ಹಾಗೆ ವೆನ್ಲಾಕ್‌ ನಿಂದ ಸ್ಥಳಾಂತರಗೊಂಡು, ಮೂರು ತಿಂಗಳು ಖಾಸಗಿ ಆಸ್ಪತ್ರೆಯೊಂದರಲ್ಲಿದ್ದ ನಾಲ್ಕು ಮಂದಿ ಹಿರಿಯ ನಾಗರಿಕರನ್ನು ಆಸ್ಪತ್ರೆಯ ಸಿಬ್ಬಂದಿಗಳು,

    ವಾಹನದಲ್ಲಿ ಗುರುವಾರ (ಜೂನ್ 18) ರಾತ್ರಿ ಕಂಕನಾಡಿಯ ಮಾರುಕಟ್ಟೆ ಬಳಿ ತಂದು ಬಿಟ್ಟು ಹೋಗಿದ್ದಾರೆ.

    ಇದನ್ನು ಕಂಡ ಸ್ಥಳೀಯ ರಿಕ್ಷಾ ಚಾಲಕರು, ಮಾರುಕಟ್ಟೆ ವ್ಯಾಪಾರಿಗಳು ಅವರಿಗೆ ಊಟ, ನೀರು ತಂದು ಕೊಟ್ಟಿದ್ದಾರೆ.

    ಮಲಗಲು ತುಫೈಲ್ ಅಹ್ಮದ್ ಎಂಬವರು ಬೆಡ್‌ ಶೀಟ್, ಹೊದಿಕೆ ತಂದು ಕೊಟ್ಟು ಮಾನವೀಯತೆ ಮೆರೆದಿದ್ದಾರೆ.

    ಇವರು ಬಹಳ ದೂರದವರೇನೂ ಅಲ್ಲ.‌ ಉಪ್ಪಿನಂಗಡಿಯ ರಘುರಾಮ, ಪರಂಗಿಪೇಟೆ ಪೊಳಲಿ ರಸ್ತೆಯ ಬೆಂಜನಪದವಿನ ಶ್ರೀನಿವಾಸ, ತಲಪಾಡಿಯ ರಮೇಶ ಮತ್ತು ಪುತ್ತೂರಿನ ಸುಂದರ.

    ಇದೀಗ ನಿರ್ಗತಿಕರಾದ ಇವರಿಗೆ ಯಾರಾದರೂ ಯಾವುದಾದರೂ ವೃದ್ಧಾಶ್ರಮದಲ್ಲಿ ವ್ಯವಸ್ಥೆ ಮಾಡಿದರೆ ಉತ್ತಮ.

    ಕೋವಿಡ್ ರೋಗಿಗಳ ಚಿಕಿತ್ಸೆ ಹೆಸರಿನಲ್ಲಿ ಬ್ರಿಟಿಷರು ಕಟ್ಟಿದ್ದ ಅಷ್ಟು ದೊಡ್ಡ ಆಸ್ಪತ್ರೆಯನ್ನು ಏಕಾಏಕಿ ಖಾಲಿ ಮಾಡಿಸಿದ ಪರಿಣಾಮ ಇದು.

    ಹಿರಿಯ ಜೀವಗಳು ಮಳೆ, ಚಳಿಯಲ್ಲಿ ಮಾರುಕಟ್ಟೆ ಜಗಲಿಯಲ್ಲಿ ಮಲಗಿವೆ. ಇದಕ್ಕೆ ಯಾರು ಹೊಣೆ..???…

    ಬರಹ: ಮುಹಮ್ಮದ್ ಆರಿಫ್ ಪಡುಬಿದ್ರಿ

    Click to comment

    Leave a Reply

    Your email address will not be published. Required fields are marked *

    LATEST NEWS

    ಫರಂಗಿಪೇಟೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ, ಮೂವರಿಗೆ ಗಾಯ

    Published

    on

    ವಿಟ್ಲದಿಂದ ಮಂಗಳೂರು ವಿಮಾನ ನಿಲ್ದಾಣದ ಕಡೆಗೆ ಸಾಗುತ್ತಿದ್ದ ಕಾರೊಂದು ಮಾರ್ಗ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಮೂವರು ಗಾಯಗೊಂಡ ಘಟನೆ ಇಂದು ಬೆಳಗ್ಗೆ ಬಂಟ್ವಾಳ ತಾಲೂಕಿನ ಫರಂಗಿಪೇಟೆಯಲ್ಲಿ ಸಂಭವಿಸಿದೆ.

    ಬೆಳಗ್ಗೆ 6.15 ರ ವೇಳೆಗೆ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಈ ಮೂವರು ಪ್ರಯಾಣಿರಿಗೆ ತುರ್ತಾಗಿ ವಿಮಾನ ನಿಲ್ದಾಣಕ್ಕೆ ಹೋಗಬೇಕಾಗಿದ್ದರಿಂದ ಅವರನ್ನು ಆಟೋ ರಿಕ್ಷಾದಲ್ಲಿ ವಿಮಾನ ನಿಲ್ದಾಣಕ್ಕೆ ಕಳುಹಿಸಿ ಕೊಡಲಾಯಿತು.

    ವೇಗವಾಗಿ ಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಢಿಕ್ಕಿ ಹೊಡೆದು ಬಳಿಕ ಮನೆಯೊಂದರ ಅಂಗಳದಲ್ಲಿ ಮಗುಚಿ ಬಿದ್ದಿದೆ. ಬೆಳಗ್ಗಿನ ವೇಳೆ ಜಿಟಿ ಜಿಟಿ ಮಳೆ ಸುರಿಯುತ್ತಿದ್ದು, ಇದರಿಂದಾಗಿ ಚಾಲಕನ ನಿಯಂತ್ರಣ ಕಳೆದುಕೊಂಡಿರ ಬೇಕೆಂದು ಶಂಕಿಸಲಾಗಿದೆ.

    Continue Reading

    LATEST NEWS

    ಮೆಟ್ರೋ ನಿಲ್ದಾಣದಲ್ಲಿಅನಾಹುತ; ಹಳಿಗೆ ಹಾರಿ ವ್ಯಕ್ತಿ ಆತ್ಮಹ*ತ್ಯೆ

    Published

    on

    ದೆಹಲಿ/ಮಂಗಳೂರು: ದೆಹಲಿಯ ಲೋಕ ಕಲ್ಯಾಣ್ ಮಾರ್ಗದ ಮೆಟ್ರೋ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಹಳಿಗೆ ಹಾರಿ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ನಡೆದಿದೆ. 28 ವರ್ಷದ ದೇವೇಂದ್ರಕುಮಾರ್ ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ.

    ರಾಜಸ್ಥಾನ್‌ ಅಲ್ವಾರ್ ನಿವಾಸಿಯಾಗಿರುವ ದೇವೆಂದ್ರ ಕುಮಾರ್ ಲೋಕಕಲ್ಯಾಣ್ ಮಾರ್ಗ ಮೆಟ್ರೋ ನಿಲ್ದಾಣದ ಪ್ಲಾಟ್‌ ಫಾರ್ಮ್‌ ಸಂಖ್ಯೆ 2ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಪ್ರಕರಣದ ಕುರಿತು ತನಿಖೆ ನಡೆಯುತ್ತಿದ್ದು, ಶವವನ್ನು ಆರ್‌ಎಂಎಲ್‌ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

    Continue Reading

    LATEST NEWS

    ಶಿರೂರು ಗುಡ್ಡ ಕುಸಿತ; ಮೂಳೆ ಸಿಕ್ಕಿದ್ದು ದನದ್ದು, ಮನುಷ್ಯನದಲ್ಲ

    Published

    on

    ಅಂಕೋಲಾ: ತಾಲೂಕಿನ ಶಿರೂರು ಗುಡ್ಡ ಕುಸಿತದ ಶೋಧ ಕಾರ್ಯಾಚರಣೆ ವೇಳೆ ಗಂಗಾವಳಿ ನದಿಯಲ್ಲಿ ಪತ್ತೆಯಾಗಿದ್ದ ಮೂಳೆ ದನದ ಮೂಳೆ ಎಂದು ವೈಜ್ಞಾನಿಕ ಪರೀಕ್ಷೆಯಿಂದ ದೃಢಪಟ್ಟಿದೆ.

    ಭಾನುವಾರ ಸಂಜೆ ಕಾರ್ಯಾಚರಣೆಯಲ್ಲಿ ಮೂಳೆ ಪತ್ತೆಯಾಗಿದ್ದರಿಂದ ಇದು ಶಿರೂರು ದುರಂತದಲ್ಲಿ ಗಂಗಾವಳಿ ನದಿಯಲ್ಲಿ ಕಣ್ಮರೆಯಾಗಿರುವ ಮೂವರಲ್ಲಿ ಯಾರದಾದರೂ ಮೂಳೆ ಇರಬಹುದು ಎಂಬ ಜಿಜ್ಞಾಸೆಗೆ ಕಾರಣವಾಗಿತ್ತು.

    ಆದರೆ ಇದೀಗ ಮೂಳೆ ಪರೀಕ್ಷೆ ನಡೆಸಿ ವರದಿ ನೀಡಲಾಗಿದ್ದು ದನದ ಮೂಳೆ ಎಂಬುದು ದೃಢಪಟ್ಟಿದೆ.

    Continue Reading

    LATEST NEWS

    Trending