ಉಡುಪಿ: ತೆರೆದ ಬಾವಿಗೆ ಬಿದ್ದ ದನವನ್ನು ರಕ್ಷಣೆ ಮಾಡಿದ ಘಟನೆ ಉಡುಪಿ ಉದ್ಯಾವರದ ಕೆಮುತ್ತೂರು ಬಳಿ ನಡೆದಿದೆ.
ಇಲ್ಲಿನ ಶಾರದಾ ಭಜನಾ ಮಂಡಳಿಯ ಸಮೀಪ ತೆರೆದ ಬಾವಿಗೆ ದನ ಬಿದ್ದಿದ್ದು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.
ಉಡುಪಿ ಅಗ್ನಿಶಾಮಕ ಠಾಣಾಧಿಕಾರಿ ಸತೀಶ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಅನೇಕ ಸಿಬ್ಬಂದಿಗಳು ಭಾಗವಹಿಸಿದ್ದರು.