Connect with us

    LATEST NEWS

    ‘ತಂದೆಯನ್ನು ಭೇಟಿ ಮಾಡಲು ಹೋದರೆ ಹೊಡಿತಾರೆ..’ ಸಿ.ಪಿ ಯೋಗೇಶ್ವರ್‌ ಪುತ್ರಿಯ ಅಳಲು..! ರಾಜಕೀಯ ಚರ್ಚೆಗೆ ಕಾರಣವಾಯ್ತು ಈ ವೀಡಿಯೋ

    Published

    on

    ಬೆಂಗಳೂರು: ಕೆಲ ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಬಿಜಿಪಿ ಮುಖಂಡರ ಪುತ್ರಿಯ ಹೇಳಿಕೆಯ ವೀಡಿಯೋವೊಂದು ಭಾರಿ ವೈರಲ್ ಆಗುತ್ತಿದೆ. ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್‌ ಅವರ ಪುತ್ರಿ ಬುಧವಾರ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಮಾಡಿ ತಂದೆ ವಿರುದ್ಧ ಹರಿಹಾಯ್ದಿದ್ದಾರೆ.

    nisha yogeshwar

    ಸಿ.ಪಿ. ಯೋಗೇಶ್ವ‌ರ್ ಮತ್ತು ಅವರ ಎರಡನೇ ಪತ್ನಿ ವಿರುದ್ಧ ಮೊದಲನೇ ಪತ್ನಿಯ ಪುತ್ರಿ ನಿಶಾ ಯೋಗೇಶ್ವ‌ರ್ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.  ಕೌಟುಂಬಿಕ ಸಮಸ್ಯೆಗಳ ಕುರಿತಾಗಿ ವಿಡಿಯೊ ವೊಂದನ್ನು ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಇದೀಗ ಈ ವೀಡಿಯೋ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

    ‘ನನ್ನ ತಂದೆ ಮತ್ತು ಚಿಕ್ಕಮ್ಮ(ಮಲತಾಯಿ) ಇಬ್ಬರೂ ಮೊದಲನೇ ಪತ್ನಿಯ ಮಗಳಾದ ನನ್ನನ್ನು ಬೆಳೆಸಿ ಆದರ್ಶವಾಗಲಿಲ್ಲ. ತಂದೆಯ ಭೇಟಿಗೆ ಹೋದರೆ ಪೊಲೀಸರನ್ನು ಕರೆಯಿಸುತ್ತಾರೆ. ಮಾತನಾಡಿಸಲು ಮುಂದಾದರೆ ಕಪಾಳಕ್ಕೆ ಹೊಡೆಯುತ್ತಾರೆ. ನಿನಗೆ ಒಂದು ರೂಪಾಯಿ ಕೂಡ ಕೊಡುವುದಿಲ್ಲ. ಭಿಕ್ಷೆ ಬೇಡಿ ಬದುಕು ಎನ್ನುತ್ತಾರೆ. ನನ್ನ ಬದುಕಿನಿಂದ ತಂದೆ ಹೊರ ಹೋದಾಗಿನಿಂದಲೂ ವನವಾಸ ಅನುಭವಿಸುತ್ತಲೇ ಇದ್ದೇನೆ’ ಎಂದು ಹೇಳಿದ್ದಾರೆ.

    Read More..; ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಬಾಲಿವುಡ್‌ನಿಂದ ಹೊರಬರುತ್ತೇನೆ: ಕಂಗನಾ ರಣಾವತ್

    ‘ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ನಾನು ವಿಡಿಯೊವೊಂದನ್ನು ಪೋಸ್ಟ್ ಮಾಡಿದ್ದೆ. ನನ್ನ ಹೆಸರಿನ ಮುಂದೆ ತಮ್ಮ ಹೆಸರನ್ನು ಬಳಸದಂತೆ ತಾಕೀತು ಮಾಡಿದರು. ಅವರ ಹೆಸರು ಇಲ್ಲದೆ ನನಗೆ ಅಸ್ತಿತ್ವವೇ ಇಲ್ಲ ಎಂದು ಹೀಯಾಳಿಸಿದ್ದಾರೆ. ಈ ಬಗ್ಗೆ ಮಾತನಾಡಲು ಇಷ್ಟಪವಿಲ್ಲದಿದ್ದರೂ ಕೂಡಾ ಮಾತನಾಡಲೇಬೇಕಾದ ಪರಿಸ್ಥಿತಿ ಬಂದಿದೆ. ನಾನು ಹತ್ತು ವರ್ಷವಿದ್ದಾಗಲೇನನ್ನ ತಂದೆ ನಮ್ಮ ಬದುಕಿನಿಂದ ಹೊರ ನಡೆದಿದ್ದಾರೆ. ಆದರೂ, ಚುನಾವಣೆ ಸಂದರ್ಭದಲ್ಲಿ ಕರೆದಾಗ ಅವರ ಪರ ಪ್ರಚಾರ ಮಾಡಿದ್ದೆ. ಅವರಿಷ್ಟಕ್ಕೆ ಅನುಗುಣವಾಗಿ ಕೆಲಸ ಮಾಡಿದಾಗ ಎಲ್ಲವೂ ಚೆನ್ನಾಗಿತ್ತು. ಈಗ 24 ವರ್ಷದ ನಂತರ ನನ್ನ ಬಗ್ಗೆ ಯೋಚಿಸಿದ್ದಕ್ಕೆ ಆದರ್ಶ ಮಗಳಾಗದೆ ಯಾರಿಗೂ ಬೇಡವಾಗಿದ್ದೇನೆ. ತಂದೆ ಹೆಸರನ್ನು ಬಳಸಬಾರದೆಂಬ ಮಾತು ಬರುತ್ತಿವೆ’ ಎಂದು ನಿಶಾ ವೀಡಿಯೋದಲ್ಲಿ ಹೇಳಿಕೊಂಡಿದ್ದಾರೆ.

    ‘ಈ ರೀತಿ ಕಾಮೆಂಟ್ ಮಾಡುವವರು ಯಾರೆಂದು ನನಗೆ ಗೊತ್ತಿದೆ. ಅವರೆಲ್ಲರೂ ಒಂದು ಕಡೆ ಸೇರಿ ನನ್ನ ಆಧಾರ್, ಪಾಸ್‌ಪೋರ್ಟ್, ಜನನ ಪ್ರಮಾಣಪತ್ರ ಸೇರಿದಂತೆ ಹಲವು ಕಡೆ ತಂದೆ ಹೆಸರನ್ನು ಹೇಗೆ ತೆಗೆಯಬೇಕೆಂದು ನನಗೆ ಹೇಳಿ ಕೊಡಲಿ. ಹೆಸರು ತೆಗೆದರೆ ಅವರು ನನ್ನ ತಂದೆ ಎಂಬ ಸತ್ಯ ಸುಳ್ಳಾಗುತ್ತಾ..?  24 ವರ್ಷದ ಹಿಂದೆ ಅವರ ಜೀವನದಿಂದ ನನ್ನನ್ನು ತೆಗೆದುಬಿಟ್ಟಿದ್ದೀರಿ. ಈಗ ಹೆಸರಿನ ಮುಂದೆಯೇ ಅವರನ್ನು ತೆಗೆಯಲು ಮುಂದಾಗಿದ್ದೀರಾ’ ಎಂದು ಪ್ರಶ್ನಿಸಿದ್ದಾರೆ.

    ಕೈ ಸೇರಲು ಯತ್ನ:

    ಇನ್ನು ರಾಜ್ಯದಲ್ಲಿ ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಸಕ್ರಿಯವಾಗಿದ್ದ ನಿಶಾ, ಕಾಂಗ್ರೆಸ್ ಸೇರಲು ಪ್ರಯತ್ನಿಸಿದ್ದರು. ಕಾಂಗ್ರೆಸ್ ನಾಯಕರ ಜೊತೆಯೂ ಕಾಣಿಸಿಕೊಂಡಿದ್ದರು. ಪಕ್ಷ ಸೇರ್ಪಡೆ ಕುರಿತು ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದರು. ಆ ವೇಳೆ ಮಾಧ್ಯಮದವರ ಜೊತೆ ಪ್ರತಿಕ್ರಿಯಿಸಿದ್ದ ಶಿವಕುಮಾರ್ ನಿಶಾ ರವರಿಗೆ ಇನ್ನೂ ಮದುವೆ ಆಗಿಲ್ಲ. ಅವರು ತಂದೆ ಮನೆಯಲ್ಲೇ ಇರಬೇಕು. ಮಗಳ ಮದುವೆ ಸಮಯದಲ್ಲಿ ತಂದೆ ಧಾರೆ ಎರೆದು ಕೊಡಬೇಕು. ತಂದೆ- ಮಗಳನ್ನು ದೂರ ಮಾಡಿದ ಅಪಕೀರ್ತಿ ನನಗೆ ಬೇಡ ಎಂದು ಸುಮ್ಮನಿದ್ದೇನೆ ಎಂದು ಹೇಳಿದ್ದರು.

    ಮೋದಿ ಭೇಟಿ ಮಾಡಿಸಲಿಲ್ಲ – ನಿಶಾ

    ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರ ಮಾಡಿದ ನನ್ನ ತಾಯಿಯ ಕಪಾಳಕ್ಕೆ ತಂದೆ ಹೊಡೆದಿದ್ದರು. ಚಿಕ್ಕಮ್ಮನ ಮಗ ನನ್ನ ತಮ್ಮನಿಗೆ ಹೊಡೆದು, ಮನೆಯಿಂದ ಸಾಮಗ್ರಿ ಹೊರ ಹಾಕಿದ್ದರು. ಚುನಾವಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ಬಂದಾಗ ಅವರನ್ನು ಭೇಟಿ ಮಾಡಿಸಿ ಎಂದು ಕೇಳಿಕೊಂಡಿದ್ದೆ. ಆದರೆ, ಬೇಕೆಂದೇ ಭೇಟಿ ಮಾಡಿಸಲಿಲ್ಲ. ಇದೆಂಥಾ ನ್ಯಾಯ ಎಂದು ನಿಶಾ ಪ್ರಶ್ನಿಸಿದ್ದಾರೆ.

    ಮಗಳಿಗೆ ಯಾಕೆ ಒಂದು ದಾರಿ ತೋರಿಸಲಿಲ್ಲ ಎಂದು ನನ್ನ ತಂದೆಯನ್ನು ಪ್ರಶ್ನಿಸಿ. ಅವರು ನನ್ನಿಂದ ಮಾತ್ರ ಸರಿಯಾದುದನ್ನು ಬಯಸಿದರೆ ಸಾಕೇ? ಅವರು ಸರಿಯಾಗಿರಬೇಕಲ್ಲವೇ? ಮಾತನಾಡಲು ನನ್ನ ಬಳಿ ಸಾಕಷ್ಟಿದೆ. ನನ್ನನ್ನು ಶಾಂತವಾಗಿರಲು ಬಿಡಿ. ಇಲ್ಲದಿದ್ದರೆ, ನೀವು ಎಲ್ಲಿ ತಲೆ ಎತ್ತಿ ನಡೆಯುವುದಕ್ಕೆ ಸಾಧ್ಯವಾಗುವುದಿಲ್ಲವೊ ಅಲ್ಲಿಗೆ ವಿಡಿಯೊ ಕಳಿಸುತ್ತೇನೆ ಎಂದು ತಂದೆಗೆ ಎಚ್ಚರಿಸಿದ್ದಾರೆ.

    FILM

    ಅಪ್ಪಂದಿರ ದಿನ : ತಂದೆಯನ್ನು ನೆನೆದು ಭಾವುಕ ಪೋಸ್ಟ್ ಹಂಚಿಕೊಂಡ ವಿನೀಶ್ ದರ್ಶನ್

    Published

    on

    ಬೆಂಗಳೂರು : ಇಂದು ವಿಶ್ವ ಅಪ್ಪಂದಿರ ದಿನ. ನಟ ದರ್ಶನ್ ಪುತ್ರ ಕೂಡಾ ತಂದೆಯನ್ನು ನೆನೆದಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊ*ಲೆ ಪ್ರಕರಣದಲ್ಲಿ ನಟ ದರ್ಶನ್‌ ಜೈಲು ಪಾಲಾಗಿದ್ದರೂ ಮಗ ವಿನೀಶ್‌ ಅಪ್ಪಂದಿರ ದಿನದ ಶುಭಾಶಯ ತಿಳಿಸಿದ್ದಾರೆ.
    ತನ್ನ ತಂದೆಯೊಂದಿಗೆ ಅಪಾರ ಪ್ರೀತಿ ಹೊಂದಿರುವ ವಿನೀಶ್‌, ಈ ದಿನ ಅಪ್ಪನನ್ನು ಮಿಸ್‌ ಮಾಡಿಕೊಳ್ಳುತ್ತಾ ಭಾವುಕ ಪೋಸ್ಟ್‌ವೊಂದನ್ನು ಶೇರ್‌ ಮಾಡಿಕೊಂಡಿದ್ದಾರೆ.


    ತಾಯಿ ವಿಜಯಲಕ್ಷ್ಮಿ ಹಾಗೂ ತಂದೆ ದರ್ಶನ್‌ ಜೊತೆಗಿನ ವಿಶೇಷವಾದ ಫೋಟೋಗಳನ್ನು ಹಂಚಿಕೊಂಡಿರುವ ವಿನೀಶ್‌, ನಿಮ್ಮನ್ನು ನಾನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಐ ಲವ್‌ ಯು, ಯಾವತ್ತಿಗೂ ನೀವೇ ನನ್ನ ಹೀರೋ ಅಪ್ಪ ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾನೆ.

    ಅತ್ತ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಪೊಲೀಸರ ವಶದಲ್ಲಿದ್ದಾರೆ. ಇತ್ತ ಪತ್ನಿ ವಿಜಯಲಕ್ಷ್ಮಿ ಮತ್ತು ಮಗ ವಿನೀಶ್ ನೋವು ಅನುಭವಿಸುತ್ತಿದ್ದಾರೆ. ಅತ್ತ ವಿಜಯಲಕ್ಷ್ಮಿ ಅವರು ಸೋಶಿಯಲ್ ಮೀಡಿಯಾ ಖಾತೆಗಳನ್ನು ಡಿಲೀಟ್ ಮಾಡಿಕೊಂಡಿದ್ದು, ಇತ್ತ ವಿನೀಶ್ ಇನ್ಸ್ಟಾಗ್ರಾಮ್‌ ಪೋಸ್ಟ್‌ ಹಾಕುವ ಮೂಲಕ ತಮ್ಮ ವೇದನೆ ಹಂಚಿಕೊಳ್ಳುತ್ತಿದ್ದಾರೆ.

    ಇದನ್ನೂ ಓದಿ :  ಐಸ್‌ಕ್ರೀಂ ಪ್ರಿಯರೇ ಎಚ್ಚರ! ಆನ್‌ಲೈನ್‌ನಲ್ಲಿ ತರಿಸಿದ ಐಸ್‌ಕ್ರೀಂನಲ್ಲಿ ಸತ್ತ ಹುಳಗಳು ಪತ್ತೆ!

    ನನಗೆ ಶಾಪ ಹಾಕುವುದರಿಂದ ಯಾವ ಪ್ರಯೋಜನವಿಲ್ಲ :

    ತಂದೆ ದರ್ಶನ್‌ ಅರೆಸ್ಟ್ ಆದ ಬಳಿಕ ವಿನೀಶ್ ಇನ್ಸ್ಟಾಗ್ರಾಮ್‌ನಲ್ಲಿ ಭಾವನಾತ್ಮಕ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದರು. ಈ ಮೂಲಕ ತಮ್ಮ ನೋವನ್ನು ಹಂಚಿಕೊಂಡಿದ್ದರು. ನನ್ನ ತಂದೆ ಬಗ್ಗೆ ಕೆಟ್ಟ ಕಾಮೆಂಟ್ಸ್ ಹಾಗೂ ಅಸಭ್ಯ ಭಾಷೆಯಲ್ಲಿ ನಿಂದಿಸುತ್ತಿರುವವರಿಗೆ ಧನ್ಯವಾದ. ನನಗೀಗ 15 ವರ್ಷ, ನನಗೂ ಮನಸ್ಸಿದೆ. ಈ ಕಷ್ಟದ ಸಮಯದಲ್ಲಿ ನನ್ನ ತಾಯಿ ಮತ್ತು ತಂದೆಗೆ ನಿಮ್ಮ ಬೆಂಬಲ ಬೇಕಾಗಿದೆ. ನನಗೆ ಶಾಪ ಹಾಕುವುದರಿಂದ ಯಾವ ಪ್ರಯೋಜನವಿಲ್ಲ ಎಂದು ಇನ್‌ಸ್ಟಾ ಸ್ಟೋರಿಯಲ್ಲಿ ಬರೆದುಕೊಂಡಿದ್ದರು.

    ವಿನೀಶ್ ಇನ್ಸ್ಟಾಗ್ರಾಮ್‌ನ ಸ್ಟೋರಿ ಸದ್ಯ ಭಾರೀ ವೈರಲ್ ಆಗುತ್ತಿದೆ.

    Continue Reading

    LATEST NEWS

    ಐಸ್‌ಕ್ರೀಂ ಪ್ರಿಯರೇ ಎಚ್ಚರ! ಆನ್‌ಲೈನ್‌ನಲ್ಲಿ ತರಿಸಿದ ಐಸ್‌ಕ್ರೀಂನಲ್ಲಿ ಸತ್ತ ಹುಳಗಳು ಪತ್ತೆ!

    Published

    on

    ನವದೆಹಲಿ/ ಮಂಗಳೂರು : ಆನ್ ಲೈನ್ ಮೂಲಕ ಆರ್ಡರ್ ಮಾಡಿದ ಫುಡ್ ನಲ್ಲಿ ಏನಾದರೂ ಅವಾಂತರ ಸೃಷ್ಟಿಯಾಗೋದು ಯಾವಾಗಲೂ ಇದ್ದದ್ದೇ. ಇದೀಗ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಇಲ್ಲೊಬ್ಬರು ಡೆಲಿವರಿ ಆ್ಯಪ್‌ನಿಂದ ಆರ್ಡರ್ ಮಾಡಿದ ಐಸ್ ಕ್ರೀಂನಲ್ಲಿ ಜರಿಹುಳು ಪತ್ತೆಯಾಗಿವೆ. ಈ ಘಟನೆ ನಡೆದಿರೋದು ನೋಯ್ಡಾದಲ್ಲಿ.


    ಈ ಬಗ್ಗೆ ಮಾಹಿತಿ ಬಂದ ತಕ್ಷಣ, ಆಹಾರ ಮತ್ತು ಸರಬರಾಜು ಇಲಾಖೆ ತಂಡವು ಸೆಕ್ಟರ್ -22 ರಲ್ಲಿರುವ ಡೆಲಿವರಿ ಆ್ಯಪ್‌ ಸ್ಟೋರ್‌ಗೆ ಭೇಟಿ ನೀಡಿದೆ. ಅಲ್ಲದೇ, ಎಲ್ಲಾ ಐಸ್​ಕ್ರೀಂಗಳ ಮಾರಾಟವನ್ನು ನಿಷೇಧಿಸಿದೆ. ಐಸ್ ಕ್ರೀಂ ಮಾದರಿಯನ್ನು ಪರೀಕ್ಷಿಸಲಾಗುತ್ತದೆ. ಐಸ್ ಕ್ರೀಂ ತಯಾರಿಕಾ ಕಂಪನಿ ಮತ್ತು ಡೆಲಿವರಿ ಆ್ಯಪ್ ವಿರುದ್ಧವೂ ಪ್ರಕರಣ ದಾಖಲಿಸಲಾಗುವುದು ಎಂಬುದಾಗಿ ಇಲಾಖೆ ಮಾಹಿತಿ ನೀಡಿದೆ.

    ಏನಿದು ಘಟನೆ ?

    ನೋಯ್ಡಾದ ಸೆಕ್ಟರ್ -12 ರಲ್ಲಿ ವಾಸಿಸುತ್ತಿರುವ ದೀಪಾ ಎಂಬವರು ತನ್ನ ಮಕ್ಕಳಿಗಾಗಿ ಐಸ್ ಕ್ರೀಮ್ ತಿನ್ನಲು ಒತ್ತಾಯಿಸಿದರು ಎನ್ನುವ ಕಾರಣಕ್ಕೆ ಐಸ್‌ಕ್ರೀಮ್‌ ತರಲು ಯೋಚಿಸಿದ್ದಾರೆ. ಹೀಗಾಗಿ ಅವರು 195 ರೂಪಾಯಿ ಮೌಲ್ಯದ ಅಮುಲ್ ವೆನಿಲ್ಲಾ ಮ್ಯಾಜಿಕ್ ಐಸ್ ಕ್ರೀಮ್ ಅನ್ನು ಬ್ಲಿಂಕಿಟ್ ಆಪ್‌ನಲ್ಲಿ ಆನ್‌ಲೈನ್‌ಲ್ಲಿ ಆರ್ಡರ್ ಮಾಡಿದ್ದಾರೆ. ಅದನ್ನು ತೆರೆದಾಗ ಅದರೊಳಗೆ ಶತಪದಿ ಇರುವುದು ಅವರಿಗೆ ಕಂಡು ಬಂದಿದೆ.

    ಇದನ್ನು ನೋಡಿ ಅವರು ತುಂಬಾ ಭಯಗೊಂಡಿದ್ದು, ನಂತರ ಇದರ ಬಗ್ಗೆ ಅವರು ಈ ಬಗ್ಗೆ ಬ್ಲಿಂಕಿಟ್‌ಗೆ ದೂರು ನೀಡಿದ್ದಾರೆ. ನಂತರ ಬ್ಲಿಂಕಿಟ್‌ ದೀಪಾರಿಗೆ ಮರುಪಾವತಿಯನ್ನೂ ಮಾಡಿದೆ.

    ಅಮುಲ್ ಐಸ್‌ಕ್ರೀಂ ಕಂಪನಿಯ ಮ್ಯಾನೇಜರ್ ಅನ್ನು ಬ್ಲಿಂಕಿಟ್ ಕಸ್ಟಮರ್ ಕೇರ್ ತಂಡ ಸಂಪರ್ಕಿಸಿದೆ. ಆದರೆ ಇಲ್ಲಿಯವರೆಗೆ ಅಮುಲ್‌ ಕಂಪನಿಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ತಿಳಿದು ಬಂದಿದೆ.

    ಇದನ್ನೂ ಓದಿ : ಆನ್​ಲೈನ್​ ಮೂಲಕ ಆರ್ಡರ್​ ಮಾಡಿದ್ದ ಐಸ್​ಕ್ರೀಂನಲ್ಲಿ ಮನುಷ್ಯನ ಬೆರಳು ಪತ್ತೆ

    ಈ ವಿಷಯದ ಬಗ್ಗೆ ಮಾಹಿತಿ ಬಂದ ತಕ್ಷಣ, ಆಹಾರ ಮತ್ತು ಸರಬರಾಜು ಇಲಾಖೆ ತಂಡವು ಸೆಕ್ಟರ್ -22 ನಲ್ಲಿರುವ ಡೆಲಿವರಿ ಆಪ್ ಸ್ಟೋರ್‌ಗೆ ತಲುಪಿದ್ದು, ಎಲ್ಲಾ ರೀತಿಯ ಐಸ್ ಕ್ರೀಮ್ ಮಾರಾಟವನ್ನು ನಿಷೇಧಿಸಿದೆ ಎಂದು ತಿಳಿದು ಬಂದಿದೆ.

    ಕೆಲವು ದಿನಗಳ ಹಿಂದೆ ಆನ್​ಲೈನ್​ ಮೂಲಕ ತರಿಸಲಾಗಿದ್ದ ಕೋನ್​ ಐಸ್​ಕ್ರೀಂನಲ್ಲಿ ಮಾನವನ ಬೆರಳುಗಳು ಪತ್ತೆಯಾಗಿದ್ದು ಸುದ್ದಿಯಾಗಿತ್ತು.

    Continue Reading

    LATEST NEWS

    ಡೀಸೆಲ್, ಪೆಟ್ರೋಲ್ ಬೆಲೆ ಏರಿಕೆಗೆ ಸುನಿಲ್‌ ಕುಮಾರ್ ಖಂಡನೆ..! ಹೋರಾಟದ ಎಚ್ಚರಿಕೆ

    Published

    on

    ಉಡುಪಿ: ಪೆಟ್ರೋಲ್‌ ಡೀಸೆಲ್‌ ಬೆಲೆಯನ್ನು ಏರಿಸುವುದರ ಮೂಲಕ ರಾಜ್ಯ ಸರಕಾರ ತುಘಲಕ್ ಸರಕಾರ ಎಂಬುದನ್ನು  ಸಾಬೀತು ಪಡಿಸಿದೆ ಎಂದು ಮಾಜಿ ಸಚಿವ ಸುನಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    Read More..; ರಾಜ್ಯದಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ..! ವಾಹನ ಸವಾರರಿಗೆ ಬಿಗ್ ಶಾಕ್..

    ರಾಜ್ಯ ಸರಕಾರ ಚುನಾವಣೆಯ ಮೊದಲು ಎಲ್ಲಾ ಯೋಜನೆಗಳನ್ನು ರದ್ದು ಮಾಡಿ ಕೇವಲ ಗ್ಯಾರಂಟಿಗಳ ಜಪ ಮಾಡಿಕೊಂಡು ಬಂದಿತ್ತು. ಇದೀಗ ಫಲಿತಾಂಶ ಮುಗಿದ ಕೂಡಲೇ ಏಕಾಏಕಿ ತೆರಿಗೆಯನ್ನು ಹೆಚ್ಚಳ ಮಾಡಿದೆ. ಪೆಟ್ರೋಲ್ ಡೀಸೆಲ್ ಬೆಲೆಯಲ್ಲಿ ಮೂರುವರೆ ರೂಪಾಯಿ ಹೆಚ್ಚಿಸಿ ಜನಸಾಮಾನ್ಯರಿಗೆ ಸಂಕಷ್ಟ ತಂದೊಡ್ಡಿದೆ. ಅಲ್ಲದೆ ಹಾಲಿಗೆ ಸಬ್ಸಿಡಿ ಕೊಡುತ್ತಿಲ್ಲ, ಕಂದಾಯ ಇಲಾಖೆಯ ಕಾಗದ ಪತ್ರಗಳ ದರ ಹೆಚ್ಚಿಸಿದ್ದು, ಇಂಜಿನಿಯರಿಂಗ್, ಮೆಡಿಕಲ್ ಕಾಲೇಜು ಫೀಸ್‌ ಕೂಡಾ ಹೆಚ್ಚಳ ಮಾಡಿದೆ. ಇದೀಗ ಕಾಂಗ್ರೆಸ್ ಸರಕಾರ ಡೀಸೆಲ್, ಪೆಟ್ರೋಲ್ ಬೆಲೆ ಏರಿಕೆ ಮಾಡಿ ಖಜಾನೆ ತುಂಬಿಸುವ ಕಾರ್ಯ ಮಾಡುತ್ತಿದೆ. ಕಾಂಗ್ರೆಸ್ ಸರಕಾರ ಡೀಸೆಲ್, ಪೆಟ್ರೋಲ್ ಬೆಲೆ ಏರಿಕೆಯನ್ನು ಕೂಡಲೇ ಹಿಂಪಡೆಯಬೇಕು.  ಇಲ್ಲದೇ ಇದ್ದಲ್ಲಿ ನಾಳೆಯಿಂದ ಬಿಜೆಪಿಯಿಂದ ಹೋರಾಟ ನಡೆಸಲಾಗುತ್ತದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

     

     

    Continue Reading

    LATEST NEWS

    Trending