ಸಿಪಿಐಎಂ ನೇತೃತ್ವದಲ್ಲಿ ಮಂಗಳೂರಲ್ಲಿ ಪ್ರತಿಭಟನೆ : ಕೊರೊನಾ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಲು ಆಗ್ರಹ
ಸಿಪಿಐಎಂ ನೇತೃತ್ವದಲ್ಲಿ ಮಂಗಳೂರಲ್ಲಿ ಪ್ರತಿಭಟನೆ : ಕೊರೊನಾ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಲು ಆಗ್ರಹ..
ಮಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಿಪಿಐಎಂ ನೇತೃತ್ವದಲ್ಲಿ ಮಂಗಳೂರಲ್ಲಿ ಪ್ರತಿಭಟನೆ ನಡೆಯಿತು.
ಮಿನಿ ವಿಧಾನಸೌಧದ ಎದುರು ಸಿಪಿಐಎಂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕೊರೋನಾ ನಿಗ್ರಹಿಸಲು ಲಾಕ್ ಡೌನ್ ಪರಿಹಾರವಲ್ಲ.
ಕೋರೋನಾ ಸೋಂಕಿತರಿಗೆ ತಾರತಮ್ಯವಿಲ್ಲದೆ ಉಚಿತ ಚಿಕಿತ್ಸೆ ಒದಗಿಸಬೇಕು ಎಂದು ಒತ್ತಾಯಿಸಿದರು. ಅಲ್ಲದೇ ಜನತೆಗೆ ಆಹಾರ ಸಾಮಾಗ್ರಿಗಳನ್ನು ಒದಗಿಸಬೇಕು. ಆರೋಗ್ಯ ಸಿಬ್ಬಂದಿಗೆ ಸುರಕ್ಷತಾ ಆರೋಗ್ಯ ಕಿಟ್ ಗಳನ್ನು ಒದಗಿಸಬೇಕು ಎಂದು ಆಗ್ರಹಿಸಿದರು.
ಸೀಲ್ ಡೌನ್ ಆದ ಪ್ರದೇಶಗಳಲ್ಲಿ ಜನರು ಸಂಕಷ್ಟದಲ್ಲಿದ್ದು ಸರ್ಕಾರ ಕೂಡಲೇ ಸ್ಪಂದಿಸಬೇಕು. ಅಲ್ಲದೇ ವೆನ್ಲಾಕ್ ಆಸ್ಪತ್ರೆಯಲ್ಲಿ ತಜ್ಞ ವೈದ್ಯರನ್ನು ನೇಮಕ ಮಾಡಬೇಕು.
ಕೊರೊನಾ ಹೆಸರಿನಲ್ಲಿ ಖಾಸಗಿ ಆಸ್ಪತ್ರೆಗಳ ಲೂಟಿಕೋರತನಕ್ಕೆ ಕಡಿವಾಣ ಹಾಕಬೇಕು ಅಂತ ಭಿತ್ತಿಪತ್ರ ಪ್ರದರ್ಶನ ಮಾಡುವ ಮೂಲಕ ಪ್ರತಿಭಟನೆ ನಡೆಸಲಾಯಿತು.
ಸಿಪಿಐಎಂನ ಜಿಲ್ಲಾ ಮಂಡಳಿ ಕಾರ್ಯಾಧ್ಯಕ್ಷ ಬಾಲಕ್ರಷ್ಣ ಶೆಟ್ಟಿ, ಮಂಗಳೂರು ನಗರ ಕಾರ್ಯದ್ಯಕ್ಷ ಸುನಿಲ್ ಬಜಾಲ್, ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಸಿಪಿಐಎಂ ಜಿಲ್ಲಾ ಸಮಿತಿ ಸದಸ್ಯೆ ಜಯಂತಿ ಶೆಟ್ಟಿ ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು
LATEST NEWS
ಲೋ ಬಿಪಿಯಿಂದ ಕುಸಿದು ಬಿದ್ದು 5ನೇ ತರಗತಿ ವಿದ್ಯಾರ್ಥಿ ಸಾ*ವು
ಬೆಂಗಳೂರು : ತರಗತಿಯಲ್ಲೇ ಏಕಾಏಕಿ ಲೋ ಬಿಪಿಯಿಂದ ಕುಸಿದು ಬಿದ್ದು ವಿದ್ಯಾರ್ಥಿ ಸಾ*ವನಪ್ಪಿದ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ಗಬ್ಯೂರು ಗ್ರಾಮದಲ್ಲಿ ನಡೆದಿದೆ.
5ನೇ ತರಗತಿ ವಿದ್ಯಾರ್ಥಿ ಶಿವಪ್ರಸಾದ್ ಮೃ*ತ ಬಾಲಕ. ಗಬ್ಯೂರ್ನಲ್ಲಿ ಸೈನಿಕ, ನವೋದಯ ಕೋಚಿಂಗ್ ಪಡೆಯುತ್ತಿದ್ದ. ಇನ್ನು ಕೋಚಿಂಗ್ ಸೆಂಟರ್ನಲ್ಲೇ ಏಕಾಏಕಿ ಲೋ ಬಿಪಿಯಾಗಿ ಬಾಲಕ ಶಿವಪ್ರಸಾದ್ ಸಾವನಪ್ಪಿದ್ದು, ಗಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
ಇಂದು ದೆಹಲಿ ನೂತನ ಸಿಎಂ ಆಗಿ ಆತಿಶಿ ಪ್ರಮಾಣವಚನ ಸ್ವೀಕಾರ
ನವದೆಹಲಿ: ದೆಹಲಿ ನೂತನ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷ ದ ಆತಿಶಿ ಇಂದು (ಸೆ.21) ಅಧಿಕಾರ ಸ್ವೀಕರಿಸಲಿದ್ದಾರೆ. ಅವರೊಂದಿಗೆ ಐದು ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ರಾಜಭವನದಲ್ಲಿ ಸಂಜೆ 4.30ಕ್ಕೆ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಅತಿಶಿ ಜೊತೆಗೆ ಆಪ್ ನ ಹಿರಿಯರಾದ ಗೋಪಾಲ್ ರೈ, ಕೈಲಾಶ್ ಗಹ್ಲೋಟ್, ಸೌರಭ್ ಭಾರದ್ವಾಜ್, ಮುಖೇಶ್ ಅಹ್ಲಾವತ್ ಮತ್ತು ಇಮ್ರಾನ್ ಹುಸೇನ್ ಕೂಡ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ದಲಿತ ನಾಯಕ ಮುಖೇಶ್ ಅಹ್ಲಾವತ್ ಅವರು ದಿಲ್ಲಿ ಕ್ಯಾಬಿನೆಟ್ಗೆ ಹೊಸದಾಗಿ ಪ್ರವೇಶಿಸುತ್ತಿದ್ದಾರೆ. ಸುಲ್ತಾನ್ಪುರ ಮಜ್ರಾದಿಂದ ಅವರು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ನಿರ್ಗಮಿತ ಕೇಜ್ರಿವಾಲ್ ಸರ್ಕಾರದಲ್ಲಿ ಅತಿಶಿ ಅವರು ಹಣಕಾಸು, ಕಂದಾ ಯ, ಲೋಕೋಪಯೋಗಿ, ವಿದ್ಯುತ್ ಮತ್ತು ಶಿಕ್ಷಣ ಸೇರಿದಂತೆ 13 ಪ್ರಮುಖ ಖಾತೆಗಳನ್ನು ಹೊಂದಿದ್ದರು.ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಅರವಿಂದ ಕೇಜ್ರಿವಾಲ್ ಅವರು ಜಾಮೀನಿನ ಮೇಲೆ ಹೊರಬಂದ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು . ಅದಾದ ಬಳಿಕ ಶಾಸಕಾಂಗ ಸಭೆಯಲ್ಲಿ ಅವಿರೋಧವಾಗಿ ಆತಿಶಿ ಅವರನ್ನು ಸಿಎಂ ಸ್ಥಾನಕ್ಕೆ ಆಯ್ಕೆ ಮಾಡಲಾಗಿತ್ತು.
DAKSHINA KANNADA
ವ್ಯಾಟ್ಸಾಪ್ ಸ್ಟೇಟಸ್ ಹಾಕಿ ಆತ್ಮಹ*ತ್ಯೆ ಮಾಡಿಕೊಂಡ ವ್ಯಕ್ತಿ
ಉಪ್ಪಿನಂಗಡಿ : ಕುಡಿತದ ಚಟಕ್ಕೆ ಬಿದ್ದಿದ್ದ ವ್ಯಕ್ತಿಯೊಬ್ಬರು ವ್ಯಾಟ್ಸಾಪ್ ಸ್ಟೇಟಸ್ ಹಾಕಿ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಸಿರಿಬಾಗಿಲು ಗ್ರಾಮದಲ್ಲಿ ನಡೆದಿದೆ. ಪುಲ್ಲೊಟ್ಟೆ ನಿವಾಸಿ ಲೋಹಿತ್ ಕುಮಾರ್ (47) ಆತ್ಮಹ*ತ್ಯೆ ಮಾಡಿಕೊಂಡ ವ್ಯಕ್ತಿ.
ಲೋಹಿತ್ ಕುಮಾರ್ ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದರು. ವಿಪರೀತವಾದ ಮದ್ಯಪಾನದ ಚಟ ಅಂಟಿಸಿಕೊಂಡಿದ್ದರು. ಇದೇ ಕಾರಣದಿಂದ ನಿತ್ಯ ಪತ್ನಿ ಹಾಗೂ ಮಕ್ಕಳ ಜೊತೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಇದರಿಂದ ಬೇಸತ್ತಿದ್ದ ಪತ್ನಿ ತನ್ನ ಮಕ್ಕಳೊಂದಿಗೆ ತವರು ಮನೆಗೆ ಹೊರಟು ಹೋಗಿದ್ದರು. ಇದರಿಂದ ಮನನೊಂದ ಲೋಹಿತ್ ಕುಮಾರ್ ಸೆಪ್ಟಂಬರ್ 18 ರಂದು ಗುಂಡ್ಯಕ್ಕೆ ಹೋಗಿ ವಾಪಾಸಾದವರು ಮನೆಯಲ್ಲಿ ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ : ಹೆಣ್ಣು ಕೊಟ್ಟ ಅತ್ತೆ-ಮಾವನನ್ನೇ ಕೊಂ*ದ ಪಾಪಿ ಅಳಿಯ
ತಾನು ಆತ್ಮಹ*ತ್ಯೆಯ ಮಾಡಿಕೊಳ್ಳುವುದಾಗಿ ವ್ಯಾಟ್ಸಾಪ್ನಲ್ಲಿ ಸ್ಟೇಟಸ್ ಹಾಕಿಕೊಂಡಿದ್ದ ಸಂದೇಶವನ್ನು ಮಂಗಳೂರಿನಲ್ಲಿದ್ದ ಲೋಹಿತ್ ಸಹೋದರನ ಮಗಳು ನೋಡಿ ಮಾಹಿತಿ ನೀಡಿದ್ದರು. ಸೆಪ್ಟಂಬರ್ 19 ರ ಮುಂಜಾನೆ ಲೋಹಿತ್ ವಾಸವಾಗಿದ್ದ ಮನೆಗೆ ಹೋಗಿ ನೋಡಿದಾಗ ಮನೆಯ ಹಾಲ್ನಲ್ಲಿ ನೇ*ಣು ಬಿಗಿದ ಸ್ಥಿತಿಯಲ್ಲಿ ಅವರ ಮೃ*ತದೇಹ ಪತ್ತೆಯಾಗಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.