ಕೊರೊನಾ ವೈರಸ್ ತಡೆಗಟ್ಟುವಲ್ಲಿ ಕೇಂದ್ರ ಸರಕಾರದ ಸಂಪೂರ್ಣ ವೈಫಲ್ಯ ಖಂಡಿಸಿ ಸಿ.ಪಿ.ಐ.ಎಂ ಪ್ರತಿಭಟನೆ..
ಕೊರೊನಾ ವೈರಸ್ ತಡೆಗಟ್ಟುವಲ್ಲಿ ಕೇಂದ್ರ ಸರಕಾರದ ಸಂಪೂರ್ಣ ವೈಫಲ್ಯ ಖಂಡಿಸಿ ಸಿ.ಪಿ.ಐ.ಎಂ ಪ್ರತಿಭಟನೆ..
ಮಂಗಳೂರು: ವಿಜ್ಞಾನ, ವೈದ್ಯಕೀಯ ಕ್ಷೇತ್ರಗಳು ಮೊದಲ ಆದ್ಯತೆಯಾದಾಗ ಮಾತ್ರವೇ ದೇಶದ ಅಭಿವ್ರದ್ದಿ ಸಾಧ್ಯ.
ಆದರೆ ನಮ್ಮ ದೇಶವು ಜಾಗತೀಕರಣದ ಕರಿ ನೆರಳಿನಲ್ಲಿ ಒದ್ದಾಡುತ್ತಿದ್ದು, ಆಳುವ ಕೇಂದ್ರ ಸರಕಾರವು ಇವೆರಡನ್ನೂ ತೀರಾ ನಿರ್ಲಕ್ಷಿಸಿದ್ದರ ಫಲವಾಗಿ ಕೊರೊನಾ ವೈರಸ್ಸನ್ನು ಹತ್ತಿಕ್ಕುವಲ್ಲಿ ಸಂಪೂರ್ಣ ವೈಫಲ್ಯವನ್ನು ಕಂಡಿದೆ.
ಜನರ ಜೀವವನ್ನು ರಕ್ಷಿಸಬೇಕಾದ ಸರಕಾರವು ಜನರಲ್ಲಿ ಮೌಢ್ಯತೆಯನ್ನು ತುಂಬಿ ಅಪಪ್ರಚಾರ ನಡೆಸಿ, ಇಂತಹ ಸಂಕಷ್ಟದ ಕಾಲದಲ್ಲೂ ಕೋಮುವಿಷ ಬೀಜವನ್ನು ಬಿತ್ತುವ ನೀಚ ಕಾರ್ಯಕ್ಕೆ ಮುಂದಾಗಿದೆ.
ಮತ್ತೊಂದು ಕಡೆ ಆರೋಗ್ಯ ಕ್ಷೇತ್ರವು ತೀವ್ರವಾಗಿ ಖಾಸಗೀಕರಣಗೊಂಡಿರುವುದರಿಂದ ಹಾಗೂ ಸರಕಾರಿ ಆಸ್ಪತ್ರೆಗಳು ಮೂಲಭೂತ ಸೌಕರ್ಯಗಳ ಕೊರತೆಯಿಂದ,
ಅನಿವಾರ್ಯವಾಗಿ ಘೋಷಣೆ ಮಾಡಿದ ಲಾಕ್ ಡೌನ್ ನಿಂದಾಗಿ ದೇಶದ ಕೋಟ್ಯಾಂತರ ಜನತೆಯ ಬದುಕು ತೀರಾ ಶೋಚನೀಯವಾಗಿದೆ ಎಂದು DYFI ಮಂಗಳೂರು ನಗರಾಧ್ಯಕ್ಷರಾದ ನವೀನ್ ಕೊಂಚಾಡಿಯವರು ಅಭಿಪ್ರಾಯಪಟ್ಟರು.
ಅವರು CPIM ನೇತೃತ್ವದಲ್ಲಿ ನಗರದಲ್ಲಿ ಇಂದು (ಜೂನ್ 29) ಸ್ಟೇಟ್ ಬ್ಯಾಂಕ್ ಹಾಗೂ ಲೇಡಿಗೋಷನ್ ಬಳಿಯಲ್ಲಿ ಬಿತ್ತಿಚಿತ್ರ ಪ್ರದರ್ಶನ ಹಾಗೂ ಪ್ರತಿಭಟನೆಯಲ್ಲಿ ಭಾಗವಹಿಸಿ, ಮಾತನಾಡಿದರು.
ಕೊರೊನಾ ವೈರಸ್ ತಡೆಗಟ್ಟುವಲ್ಲಿ ಕೇಂದ್ರ ಸರಕಾರದ ಸಂಪೂರ್ಣ ವೈಫಲ್ಯವನ್ನು ಖಂಡಿಸಿ,CPIM ದ.ಕ.ಜಿಲ್ಲೆಯಾದ್ಯಂತ ಹಮ್ಮಿಕೊಂಡ ವಾರಾಚರಣೆಯ ಭಾಗವಾಗಿ ಈ ಪ್ರತಿಭಟನೆಯನ್ನು ಆಯೋಜಿಸಲಾಗಿತ್ತು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ CPIM ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್, ಅಂದು ನರೇಂದ್ರ ಮೋದಿ ಸರಕಾರವು ಅಧಿಕಾರಕ್ಕೇರುವಲ್ಲಿ ಪ್ರಾರಂಭಿಸಿದ ಹಸಿಹಸಿ ಸುಳ್ಳಿನ ವರಸೆ ಇಂದಿಗೂ ಕೊನೆಗೊಂಡಿಲ್ಲ.
ಜನರ ಭಾವನೆಗಳನ್ನು ಕೆರಳಿಸಿ, ವಾಸ್ತವ ಬದುಕನ್ನು ಮರೆಮಾಚಿ ಸುಳ್ಳಿನ ಸಾಮ್ರಾಜ್ಯವನ್ನು ಕಟ್ಟುವಲ್ಲಿ ನಿಸ್ಸೀಮರಾದ ಬಿಜೆಪಿಗರು, ಕಪ್ಪು ಹಣ ತರುವುದಾಗಿ, ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ 15 ಲಕ್ಷ ಹಾಕುವುದಾಗಿ ಹೇಳಿದ್ದರು.
ಇಂದು 20 ಲಕ್ಷ ಕೋಟಿ ರೂ.ಪರಿಹಾರ ಘೋಷಣೆ ಮಾಡಿರುವುದು ಸಂಪೂರ್ಣ ಬೊಗಳೆಯಾಗಿದೆ. ಯಾವುದೇ ವಿಭಾಗದ ಕಾರ್ಮಿಕರಿಗೂ ಪರಿಹಾರ ಘೋಷಣೆ ಮಾಡಿಲ್ಲ.
ಲಾಕ್ ಡೌನ್ ನಿಂದಾಗಿ ಹೋಟೆಲ್ ಉದ್ಯಮ, ಟೂರಿಸಂ, ಶಾಲಾ ಕಾಲೇಜ್ ಪ್ರಾರಂಭವಾಗುವುದು ಇನ್ನೂ ಅನಿಶ್ಚಿತತೆಯಲ್ಲಿದ್ದು,
ಅಲ್ಲಿನ ಹೋಟೆಲ್ ಕಾರ್ಮಿಕರು, ಖಾಸಗಿ ಶಾಲಾ ಶಿಕ್ಷಕರು, ಬಿಸಿಯೂಟ ನೌಕರರ ಬದುಕು ತೀರಾ ಸಂಕಷ್ಟಮಯವಾಗಿದೆ ಎಂದು ಹೇಳಿದರು.
CITU ಮಂಗಳೂರು ನಗರ ಮುಖಂಡರಾದ ಮಹಮ್ಮದ್ ಮುಸ್ತಫಾರವರು ಮಾತನಾಡುತ್ತಾ, ಇಡೀ ದೇಶದಲ್ಲಿ 3 ಕೋಟಿಗೂ ಮಿಕ್ಕಿರುವ ಬೀದಿ ಬದಿ ವ್ಯಾಪಾರಸ್ಥರ ಬದುಕು ಈ ಲಾಕ್ ಡೌನ್ ನಿಂದಾಗಿ ತೀರಾ ಕಂಗೆಟ್ಟಿದ್ದು,
ಕೇಂದ್ರ ಸರಕಾರ ಕಿಂಚಿತ್ತೂ ಗಮನ ಹರಿಸಿಲ್ಲ. ಬೀದಿಬದಿ ವ್ಯಾಪಾರಸ್ಥರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ಮೂಲಕ ಪರಿಹಾರ ಧನವನ್ನು ಒದಗಿಸಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ CITU ನಗರ ಮುಖಂಡರಾದ ಸಂತೋಷ್ ಆರ್.ಎಸ್, ಹರೀಶ್ ಪೂಜಾರಿ ಹಸೈನಾರ್, ಮುಝಾಫರ್, ವಿಜಯ,ಶಿವಪ್ಪ, ಗುಡ್ಡಪ್ಪ, ಸೆಲ್ವರಾಜ್ ಮುಂತಾದವರು ಹಾಜರಿದ್ದರು.
DAKSHINA KANNADA
ಹಳ್ಳ ಹಿಡಿದ ಸ್ಮಾರ್ಟ್ ಸಿಟಿಯ ಕಾಮಗಾರಿ; ಕುಂಟುತ್ತಾ ಸಾಗಿದ ಮಹಾಕಾಳಿ ಪಡ್ಪು ಅಂಡರ್ ಪಾಸ್
ಮಂಗಳೂರು: ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕೈಗೆತ್ತಿಕೊಂಡಿರುವ ಮಹಾಕಾಳಿ ಪಡ್ಪುವಿನ ರೈಲ್ವೇ ಅಂಡರ್ ಪಾಸ್ ಕಾಮಗಾರಿ ಸದ್ಯಕ್ಕಂತು ಮುಗಿಯುವ ಲಕ್ಷಣ ಕಾಣಿಸುತ್ತಿಲ್ಲ. ಈ ಕಾಮಗಾರಿ ಕೈಗೆತ್ತಿಕೊಂಡು ವರ್ಷಗಳೇ ಕಳೆದರೂ ಕಾಮಗಾರಿ ಮುಗಿಸಬೇಕು ಅನ್ನೋ ಇಚ್ಚೆ ಸ್ಮಾರ್ಟ್ ಸಿಟಿ ಯೋಜನೆಯವರಿಗೂ ಇದ್ದಂತಿಲ್ಲ.
ಕೆಲ ತಿಂಗಳ ಹಿಂದೆ ಕಳಪೆ ಕಾಮಗಾರಿಯಿಂದಾಗಿ ಇಲ್ಲಿ ಕಾಮಗಾರಿ ಕುಸಿತ ಕೂಡಾ ಉಂಟಾಗಿತ್ತು. ಇದೀಗ ಕೆಲ ದಿನಗಳಿಂದ ಯಾವುದೇ ಕಾಮಗಾರಿ ನಡೆಸದೆ ಕಾರ್ಮಿಕರು ಕೂಡಾ ಕೆಲಸ ಇಲ್ಲದೆ ಸುಮ್ಮನೆ ಕುಳಿತಿರುವ ದೃಶ್ಯ ಇಲ್ಲಿ ಮಾಮೂಲಾಗಿದೆ. ಮಾರ್ಗನ್ ಗೇಟ್ ಮೂಲಕವಾಗಿ ಜೆಪ್ಪಿನ ಮೊಗೆರು ಹೈವೆ ಸಂಪರ್ಕಿಸುವ ಈ ರಸ್ತೆಯಲ್ಲಿ ನಿತ್ಯ ಸಾವಿರಾರು ವಾಹನಗಳು ಓಡಾಡುತ್ತಿದೆ. ಸದ್ಯ ಈ ಕಾಮಗಾರಿ ಆರಂಭವಾದ ಬಳಿಕ ಇಲ್ಲಿ ದ್ವಿಚಕ್ರ ವಾಹನಕ್ಕಷ್ಟೇ ಓಡಾಡಲು ವ್ಯವಸ್ಥೆ ಮಾಡಲಾಗಿದೆ.
ಉಪ್ಪಳದಲ್ಲಿ 3.5 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶ; ಓರ್ವ ಬಂಧನ
ಹೀಗಾಗಿ ಈ ರಸ್ತೆಯ ಮೂಲಕ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಕಾಮಗಾರಿ ಯಾವಾಗ ಮುಗಿಸ್ತೀರಿ ಅಂತ ಪ್ರಶ್ನೆ ಮಾಡುತ್ತಿದ್ದಾರೆ. ಆದರೆ ಇಲ್ಲಿ ನಡಿಯುತ್ತಿರುವ ಕಾಮಗಾರಿಯ ವೇಗ ನೋಡಿದರೆ ಇದು 2024 ರಲ್ಲಿ ಪೂರ್ಣಗೊಳ್ಳುವ ಯಾವುದೇ ಲಕ್ಷಣ ಇಲ್ಲ ಅನ್ನೋದು ಸ್ಪಷ್ಟವಾಗುತ್ತಿದೆ. ಹೀಗಾಗಿ ತಕ್ಷಣ ಅಂಡರ್ ಪಾಸ್ ಕೆಲಸ ಮಗಿಸಿ ಅಂತ ಜನ ಒತ್ತಾಯಿಸಿದ್ದಾರೆ.
LATEST NEWS
11 ವರ್ಷದ ಬಾಲಕ ಹೃದಯಘಾ*ತಕ್ಕೆ ಬ*ಲಿ
ಹಾಸನ : ಹೃದಯಾಘಾ*ತ ಎಂಬುದು ಇತ್ತೀಚೆಗೆ ಸಾಮಾನ್ಯವಾಗಿದೆ. ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಸಾದವರೂ ಹೃದಯಾ*ಘಾತಕ್ಕೆ ಒಳಗಾಗುತ್ತಿದ್ದಾರೆ. ರಾಜ್ಯದಲ್ಲಿ ಮತ್ತೊಂದು ಕಳವಳಕಾರಿ ಘಟನೆ ನಡೆದಿದ್ದು, 11 ವರ್ಷದ ಬಾಲಕ ಹೃದಯಾ*ಘಾತಕ್ಕೆ ಬ*ಲಿಯಾಗಿದ್ದಾನೆ. ಈ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಸಚಿನ್ ಮೃ*ತ ಬಾಲಕ.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ ಸಚಿನ್, ಮನೆಯಲ್ಲಿ ಟಿವಿ ನೋಡುತ್ತಿದ್ದ ವೇಳೆ ಹೃದಯಾ*ಘಾತವಾಗಿದೆ.
ಇದನ್ನೂ ಓದಿ : ಮನೆಯಲ್ಲಿ ಹಲ್ಲಿ ಕಾಟವೇ? ಈ ಸಿಂಪಲ್ ಮನೆಮದ್ದು ಟ್ರೈ ಮಾಡಿ
ಟಿವಿ ನೋಡುತ್ತಲೇ ಕುಸಿ*ದು ಬಿದ್ದ ಮಗನನ್ನು ಮಾತನಾಡಿಸಲು ಮನೆಯವರು ಪ್ರಯತ್ನಿಸಿದ್ದು, ಏನು ಮಾತನಾಡದೆ ಇರೋದನ್ನು ಗಮನಿಸಿ ಪೋಷಕರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಆಲೂಕು ಸರ್ಕಾರಿ ಆಸ್ಪತ್ರೆಗೆ ಕರೆತರುವ ಮುನ್ನವೇ ಬಾಲಕ ಸಾ*ವನ್ನಪ್ಪಿದ್ದ ಎಂದು ವೈದ್ಯರು ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ.
FILM
ಕನ್ನಡದ ಸೀರಿಯಲ್ನಲ್ಲಿ ಮಿಂಚುತ್ತಿರುವ ಉಡುಪಿಯ ಬೆಡಗಿ
ಬೆಂಗಳೂರು/ಮಂಗಳೂರು: ಸಿನೆಮಾದಲ್ಲಿ ನಟಿಸಬೇಕು ಅನ್ನೋದು ಎಲ್ಲರ ಕನಸು. ಆದರೆ ಇಲ್ಲೊಬ್ಬಾಕೆ ನಟಿಗೆ ಸೀರಿಯಲ್ನಲ್ಲಿ ನಟಿಸಬೇಕು ಎಂಬ ಆಸೆ. ಆದರೆ ಆಕೆಗೆ ಮಾತ್ರ ಮೊದಲು ಒಲಿದು ಬಂದಿದ್ದು ಸಿನೆಮಾದಲ್ಲಿ ನಟಿಸುವ ಅವಕಾಶ. ಇದೀಗ ಆ ನಟಿ ಸುರ್ವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಅವನು ಮತ್ತು ಶ್ರಾವಣಿ’ ಧಾರವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೌದು, ಈ ಧಾರಾವಾಹಿಯಲ್ಲಿ ಶ್ರಾವಣಿಯಾಗಿ ಕಾಣಿಸಿಕೊಂಡಿರುವ ಇಶಿಕಾ ಶೆಟ್ಟಿಗಾರ್ ಮೂಲತಃ ಉಡುಪಿಯವರಾಗಿದ್ದಾರೆ.
ಶ್ರಾವಣಿ ಪಾತ್ರದ ಇಶಿಕಾ ಶೆಟ್ಟಿಗಾರ್ ಮೂಲತಃ ಉಡುಪಿಯವರಾಗಿದ್ದು ಸದ್ಯ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಈಕೆ 9 ನೇ ತರಗತಿಯಲ್ಲಿದ್ದಅಗಲೇ ಸಿನೆಮಾ ನಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಊರ್ವಿ, ಗರುಡ, ಮನದ ಮರೆಯಲಿ ಸೇರಿದಂತೆ ನಾಳ್ಕೈದು ಸಿನೆಮಾಗಳಲ್ಲಿ ನಟಿಸಿದ್ದಾರೆ. ಬಳಿಕ ಕಾನೂನು ಪದವಿ ಮುಗಿಸಿರುವ ಇವರು ಸೀರಿಯಲ್ ನಲ್ಲಿ ಆಭಿನಯಿಸುವತ್ತ ಒಲವು ಮಾಡಿದ್ದಾರೆ. ಹೀಗಾಗಿ ಲುಕ್ ಟೆಸ್ಟ್ ಕೂಡಾ ಕೊಟ್ಟಿದ್ದಾರೆ.
ಜಾನಿ ಮಾಸ್ಟರ್ ಪತ್ನಿಗೂ ಬಂತು ಕಂಟಕ..! ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್..!!
ಇದೇ ವೇಳೆ ‘ಅವನು ಮತ್ತು ಶ್ರಾವಣಿ’ ಧಾರಾವಾಹಿಗೆ ರಿಪ್ಲೇಸ್ಮೆಂಟ್ ಪಾತ್ರಕ್ಕೆ ಕರೆ ಬರುತ್ತದೆ. ರಿಪ್ಲೇಸ್ಮೆಂಟ್ ಪಾತ್ರ ಆಗಿದ್ದರಿಂದ ಜನರಿಗೆ ಇಷ್ಟ ಆಗ್ಬೋದಾ ಅನ್ನುವ ಮೈಂಡ್ ಸೆಟ್ ನಲ್ಲಿ ಇವರು ಕೊನೆಗೂ ಪಾತ್ರಕ್ಕೆ ಸೈ ಎಂದು ಹೇಳಿದ್ದಾರೆ. ಇದೀಗ ಧಾರಾವಾಹಿ ಮೂಲಕ ಕನ್ನಡಿಗರ ಮನಗೆದ್ದಿದ್ದಾರೆ. ಈ ಧಾರಾವಾಹಿಯಲ್ಲಿ ನಟನೆ ಆರಂಭಿಸಿದ ಮೇಲೆ ಆಫರ್ಗಳು ಬರುತ್ತಿದೆ ಎಂದು ಇಶಿಕಾ ಶೆಟ್ಟಿಗಾರ್ ಹೇಳಿದ್ದಾರೆ.