Connect with us

    LATEST NEWS

    ಲ್ಯಾಪ್ ಟಾಪ್ ಚಾರ್ಜ್ ಮಾಡುವಾಗ ದುರಂ*ತ; ವಿದ್ಯುತ್ ಸ್ಪರ್ಶಿಸಿ ವೈದ್ಯೆ ಸಾ*ವು

    Published

    on

    ತಮಿಳುನಾಡು : ಲ್ಯಾಪ್ ಟಾಪ್ ಚಾರ್ಜ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ವೈದ್ಯೆ ಇಹಲೋಕ ತ್ಯಜಿಸಿರುವ ಘಟನೆ ಚೆನ್ನೈನಲ್ಲಿ ನಡೆದಿದೆ. ಡಾ.ಸರಣಿತಾ( 32) ಮೃತ ಡಾಕ್ಟರ್. ಸರಣಿತಾ 25 ದಿನಗಳ ತರಬೇತಿಗಾಗಿ ಚೆನ್ನೈನ ಕಿಲ್ಪಾಕ್ಕಂ ಮನೋವೈದ್ಯಕೀಯ ಆಸ್ಪತ್ರೆಯಲ್ಲಿ ಟ್ರೈನಿ ಡಾಕ್ಟರ್ ಆಗಿ ಬಂದಿದ್ದರು.
    ಚೆನ್ನೈನ ಆಸ್ಪತ್ರೆಯಲ್ಲಿ ತರಬೇತಿ ಪಡೆಯಲು ಬಂದಿದ್ದ ಸರಣಿತಾ ತರಬೇತಿಗಾಗಿ ಅಯನವರಂನ ಹಾಸ್ಟೆಲ್‌ನಲ್ಲಿ ತಂಗಿದ್ದರು. ಹಾಸ್ಟೆಲ್ ಕೊಠಡಿಯಲ್ಲಿ ಲ್ಯಾಪ್ ಟಾಪ್ ಚಾರ್ಜ್ ಮಾಡಲು ಯತ್ನಿಸುತ್ತಿದ್ದಾಗ ಆಕೆಗೆ ವಿದ್ಯುತ್ ಸ್ಪರ್ಶಿಸಿದೆ. ಪರಿಣಾಮ ಸ್ಥಳದಲ್ಲೇ ಸಾ*ವನ್ನಪ್ಪಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸಿ ಶವವನ್ನು ವಶಕ್ಕೆ ಪಡೆದು ಮರ*ಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

    ನಾಮಕ್ಕಲ್ ಜಿಲ್ಲೆಯ ಕಿಲ್ವೆಲ್ಲೂರು ಮೂಲದ ಡಾ.ಸರಣಿತಾ, 2016 ರಲ್ಲಿ ಡಾ.ಉದಯಕುಮಾರ್ ಎಂಬವರನ್ನು ವಿವಾಹವಾಗಿದ್ದರು. ಅವರಿಗೆ 5 ವರ್ಷದ ಮಗುವಿದೆ. ಉದಯಕುಮಾರ್ ಕೊಯಮತ್ತೂರಿನಲ್ಲಿ ಇಎಸ್‌ಐ ಆಗಿದ್ದು, ಆಸ್ಪತ್ರೆಯಲ್ಲಿ ವೈದ್ಯರಾಗಿ ಕೆಲಸ ಮಾಡುತ್ತಿದ್ದಾರೆ. ಸರಾಣಿತಾ ಉನ್ನತ ಶಿಕ್ಷಣದಲ್ಲಿ ವ್ಯಾಸಂಗ ಮಾಡುತ್ತಿದ್ದು, ಅಂತಿಮ ವರ್ಷದ ವ್ಯಾಸಂಗಕ್ಕಾಗಿ ಚೆನ್ನೈಗೆ ಬಂದಿದ್ದರು.

    ಚೆನ್ನೈನ ಆಸ್ಪತ್ರೆಯಲ್ಲಿ ಒಂದು ತಿಂಗಳ ತರಬೇತಿಗಾಗಿ ಬಂದಿದ್ದ ಅವರು ಮಹಿಳಾ ಹಾಸ್ಟೆಲ್‌ನಲ್ಲಿ ಉಳಿದುಕೊಂಡಿದ್ದರು. ಮಂಗಳವಾರ ಬೆಳಗ್ಗೆ ಸರಣಿತಾ ಅವರನ್ನು ಆಕೆಯ ಪತಿ ಮೊಬೈಲ್ ಮೂಲಕ ಸಂಪರ್ಕಿಸಿದ್ದರು. ಆದರೆ ಬಹಳ ಹೊತ್ತಾದರೂ ಫೋನ್ ತೆಗೆಯಲಿಲ್ಲ. ಇದಾದ ಬಳಿಕ ಸರಣಿತಾ ಅವರ ಪತಿ ಅವರು ತಂಗಿದ್ದ ಹಾಸ್ಟೆಲ್ ಗೆ ಕರೆ ಮಾಡಿ ಆಕೆಯ ಕೊಠಡಿಗೆ ಭೇಟಿ ನೀಡುವಂತೆ ತಿಳಿಸಿದ್ದಾರೆ.

    ಇದನ್ನೂ ಓದಿ :ಹೆಗ್ಗಣ ಕಾಟ ತಾಳಲಾಗದೆ ಪೊಲೀಸ್ ಠಾಣೆ ಮೆಟ್ಟಿಲೇರಿದ ವ್ಯಕ್ತಿ! ಆಮೇಲೇನಾಯ್ತು? 

    ಕೊಠಡಿಯೊಳಗಿದ್ದ ಸರಣಿತಾ ಅವರಿಂದ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಹಾಗಾಗಿ ಪೊಲೀಸ್ ನಿಯಂತ್ರಣ ಕೊಠಡಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಅಯನಾವರಂ ಪೊಲೀಸರು ಸ್ಥಳಕ್ಕಾಗಮಿಸಿ ಕೊಠಡಿಯ ಬಾಗಿಲು ಒಡೆದು ನೋಡಿದಾಗ ಲ್ಯಾಪ್‌ಟಾಪ್‌ ಚಾರ್ಜರ್‌ ಹಿಡಿದುಕೊಂಡ ಸ್ಥಿತಿಯಲ್ಲಿ ಡಾ.ಸರಣಿತಾ ಮೃ*ತದೇಹ ಪತ್ತೆಯಾಗಿದ. ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    FILM

    ಒಂದೇ ಹಾಡಿನಲ್ಲಿ 700 ಮಂದಿ ಬ್ಯಾಕ್ ಡ್ಯಾನ್ಸರ್ಸ್; ಯಾವ ಚಿತ್ರದಲ್ಲಿ ಗೊತ್ತಾ!?

    Published

    on

    ಮಂಗಳೂರು/ಮುಂಬೈ : ಲಕ್ಷ್ಮಣ್ ಉಟೇಕರ್ ನಿರ್ದೇಶನದ ‘ಛವ್ವಾ’ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಚಿತ್ರದಲ್ಲಿ ವಿಕ್ಕಿ ಕೌಶಲ್, ರಶ್ಮಿಕಾ ಮಂದಣ್ಣ ಮೊದಲಾದವರು ನಟಿಸಿದ್ದು, ಛತ್ರಪತಿ ಸಾಂಬಾಜಿ ಪಾತ್ರದಲ್ಲಿ ವಿಕ್ಕಿ ನಟಿಸಿದರೆ, ಅವರ ಪತ್ನಿ ಯೇಸುಬಾಯಿ ಪಾತ್ರದಲ್ಲಿ ರಶ್ಮಿಕಾ ಕಾಣಿಸಿಕೊಂಡಿದ್ದಾರೆ.


    ಡ್ಯಾನ್ಸ್ ಮಾಡುವಾಗ ಸಾಮಾನ್ಯವಾಗಿ 50 – 100 ಮಂದಿ ಕಾಣಿಸಿಕೊಳ್ಳೋದು ಸಾಮಾನ್ಯ. ಆದರೆ, ಬರೋಬ್ಬರಿ 700 ಮಂದಿ ಕಾಣಿಸಿಕೊಂಡರೆ? ಹೀಗೊಂದು ಅಪರೂಪದ ದೃಶ್ಯ ‘ಛವ್ವಾ’ಸಿನಿಮಾದಲ್ಲಿ ಮೂಡಿ ಬಂದಿದೆ. ಎ.ಆರ್. ರೆಹಮಾನ್ ಕಂಪೋಸ್ನಲ್ಲಿ ಈ ಹಾಡು ಮೂಡಿದ್ದು, ಇದರ ಶೂಟ್ಗೆ ಸಿದ್ಧತೆ ನಡೆದಿದೆ.
    ಮರಾಠಿ ಜಾನಪದ ಮ್ಯೂಸಿಕ್ನಲ್ಲಿ ಈ ಹಾಡು ಮೂಡಿ ಬರುತ್ತಿದೆ. ರಾಜರ ಕಾಲವನ್ನು ರೀ ಕ್ರಿಯೇಟ್ ಮಾಡಬೇಕಾಗಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಬ್ಯಾಕ್ ಡ್ಯಾನ್ಸರ್ಗಳು ಇರಲಿದ್ದಾರೆ. ವಿಜಯ್ ಗಂಗೂಲಿ ಅವರು ಈ ಹಾಡಿಗೆ ಕೊರಿಯೋಗ್ರಾಫಿ ಮಾಡುತ್ತಿದ್ದಾರೆ.
    ಈ ಸಿನಿಮಾದ ಕಥೆ 1681ರ ಕಾಲಘಟ್ಟದ್ದಾಗಿದೆ. ಇದಕ್ಕಾಗಿಯೇ ಬೃಹತ್ ಸೆಟ್ಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಈ ಚಿತ್ರ ಡಿಸೆಂಬರ್ 6 ರಂದು ರಿಲೀಸ್ ಆಗಲಿದ್ದು, ಅದೇ ದಿನ ರಶ್ಮಿಕಾ ಮಂದಣ್ಣ ನಟನೆಯ ‘ಪುಷ್ಪ 2’ ಕೂಡ ರಿಲೀಸ್ ಆಗುತ್ತಿರೋದು ವಿಶೇಷ.

    Continue Reading

    LATEST NEWS

    ಹ್ಯಾರಿಪಾಟರ್‌ ಖ್ಯಾತಿಯ ಹಾಲಿವುಡ್‌ ನಟಿ ಮ್ಯಾಗಿ ಸ್ಮಿತ್‌ ವಿಧಿವಶ

    Published

    on

    ಹಾಲಿವುಡ್‌ನ ಜನಪ್ರಿಯ ನಟಿ ಹ್ಯಾರಿಪಾಟರ್‌ ಖ್ಯಾತಿಯ ನಟಿ ಮ್ಯಾಗಿ ಸ್ಮಿತ್ ಅವರು ಇಹಲೋಕ ತ್ಯಜಿಸಿದ್ದಾರೆ.

    ಆಸ್ಕರ್ ಪ್ರಶಸ್ತಿ ವಿಜೇತ ನಟಿ ಮ್ಯಾಗಿ ಸ್ಮಿತ್ ಅವರು ಇಬ್ಬರೂ ಮಕ್ಕಳು ಮತ್ತು ಐದು ಜನ ಮೊಮ್ಮಕ್ಕಳನ್ನು ಅಗಲಿದ್ದಾರೆ. ಮ್ಯಾಗಿ ಸ್ಮಿತ್ ಅವರು ಸೆ.27ರಂದು ನಿಧನರಾಗಿದ್ದು, ಕುಟುಂಬ ಮೂಲಗಳು ಅಧಿಕೃತ ಪಡಿಸಿದೆ.

    ಶಾಸಕ ಮುನಿರತ್ನ ಮನೆಗೆ ಐಟಿ ಅಧಿಕಾರಿಗಳ ದಾಳಿ

    ಮ್ಯಾಗಿ ಸ್ಮಿತ್ ಸುಮಾರು 50ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. 60ರ ದಶಕದಿಂದ ಸಿನಿಮಾಗಳಲ್ಲಿ ನಟಿಸುವುದ್ದಕ್ಕೆ ಆರಂಭಿಸಿದ್ದ ಮ್ಯಾಗಿ ಸ್ಮಿತ್ ಹಲವು ಜನಪ್ರಿಯ ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದಿದ್ದಾರೆ. ಇವರ ವೃತ್ತಿ ಬದುಕಿನಲ್ಲಿ ಎರಡು ಆಸ್ಕರ್ ಪ್ರಶಸ್ತಿಗಳು ಲಭಿಸಿವೆ.

    Continue Reading

    LATEST NEWS

    ಶೀಘ್ರವೇ ಗೃಹಲಕ್ಷ್ಮಿ ಹಣ, ಯೋಜನೆ ನಿಲ್ಲುವ ಮಾತೇ ಇಲ್ಲ: ಲಕ್ಷ್ಮಿ ಹೆಬ್ಬಾಳ್ಕರ್‌

    Published

    on

    ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ ಜುಲೈ ಕಂತಿನ ಹಣ ಬಿಡುಗಡೆಯ ಪ್ರಕ್ರಿಯೆ ನಡೆಯುತ್ತಿದ್ದು, ಇದಾದ ಕೆಲ ದಿನಗಳಲ್ಲೇ ಆಗಸ್ಟ್ ತಿಂಗಳ ಹಣವೂ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದರು.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆ ನಿರಂತರ ಪ್ರಕ್ರಿಯೆ ಸರ್ಕಾರ ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

    ಪಂಚಮಸಾಲಿ ಸಮುದಾಯಕ್ಕೆ ಮಾಜಿ ಸಚಿವ ಮುರುಗೇಶ್ ನಿರಾಣಿ ಅವರ ಕೊಡುಗೆ ಏನು ಎಂದು ಸಚಿವರು ಪ್ರಶ್ನಿಸಿದ ಹೆಬ್ಬಾಳ್ಕರ್‌ ನಾನು ಎಂದಿಗೂ ಪಂಚಮಸಾಲಿ ಮೀಸಲಾತಿ ಪರವಾಗಿದ್ದೇನೆ. 2ಎ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಸದಾ ನನ್ನ ಬೆಂಬಲ ಇರುತ್ತದೆ ಎಂದರು.

    ಮುರುಗೇಶ್ ನಿರಾಣಿ ಅವರು ಅಧಿಕಾರದಲ್ಲಿದ್ದಾಗ ಸಮುದಾಯದ ಬಗ್ಗೆ ಯೋಚಿಸಲಿಲ್ಲ. ಈಗ ಸುಖಾಸುಮ್ಮನೆ ನನ್ನ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಬೇರೆ ಸಮಾಜಕ್ಕೆ ಯಾವುದೇ ತೊಂದರೆಯಾಗದಂತೆ ಮೀಸಲಾತಿ ನೀಡಲಿ ಎಂಬುದೇ ನಮ್ಮ ಆಗ್ರಹವಾಗಿದೆ ಎಂದು ತಿಳಿಸಿದರು.

    Continue Reading

    LATEST NEWS

    Trending