LATEST NEWS
ಖಾಲಿ ನಿವೇಶನಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಲಕ್ಷಾಂತರ ರೂ. ವಂಚನೆ : ಐವರು ಆರೋಪಿಗಳು ಅರೆಸ್ಟ್..!
ಖಾಲಿ ನಿವೇಶನಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಲಕ್ಷಾಂತರ ರೂ. ವಂಚನೆ : ಐವರು ಆರೋಪಿಗಳು ಅರೆಸ್ಟ್..!
Create duplicate records for vacant premises and Fraud 69 lacs – Five accused Arrest ..
ಬೆಂಗಳೂರು : ಖಾಲಿ ನಿವೇಶನಗಳಿಗೆ ನಕಲಿ ದಾಖಲೆ ಸೃಷ್ಟಿಸಿ, ನಕಲಿ ಮಾಲೀಕರಿಂದ ಕ್ರಯ ಪತ್ರ ಮಾಡಿಸಿಕೊಂಡು ಅಸಲಿ ಮಾಲೀಕರ ಸೋಗಿನಲ್ಲಿ ಬೇರೆಯವರಿಗೆ ಮಾರಾಟ ಮಾಡಿ ಲಕ್ಷಾಂತರ ರೂಪಾಯಿ ವಂಚಿಸಿದ್ದ 5 ಜನ ಆರೋಪಿಗಳನ್ನು ಬೆಂಗಳೂರಿನ ಕೋಣನಕುಂಟೆ ಪೊಲೀಸರು ಬಂಧಿಸಿದ್ದಾರೆ.
ನಗರದ ನಿವಾಸಿಗಳಾದ ಕೀರ್ತನಾ, ಈಕೆಯ ಗಂಡ ಶೇಖರ್, ಸಹಚರರಾದ ಪವನ್ ಕುಮಾರ್, ಉಮಾ ಮಹೇಶ್ ರಾವ್, ಜಯಪ್ರಕಾಶ್ ಎಂಬುವರನ್ನು ಬಂಧಿಸಿ 16.83 ಲಕ್ಷ ರೂ. ಮೌಲ್ಯದ 362 ಗ್ರಾಂ ಚಿನ್ನ, ಎರಡು ಕಾರು ಹಾಗೂ ಒಂದು ಬೈಕ್ ವಶಕ್ಕೆ ಪಡೆದುಕೊಂಡಿದ್ದಾರೆ.
ಕೃತ್ಯದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಮತ್ತೋರ್ವ ಆರೋಪಿ ಪ್ರಜ್ವಲ್ ರಾಮಯ್ಯ ಪತ್ತೆಗಾಗಿ ಶೋಧ ಮುಂದುವರೆಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳ ಪೈಕಿ ಕೀರ್ತನಾ ರಿಯಲ್ ಎಸ್ಟೇಟ್ನಲ್ಲಿ ತೊಡಗಿಸಿಕೊಂಡಿದ್ದು, ಈಕೆಯ ಗಂಡ ಶೇಖರ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾನೆ.
ತಲೆಮರೆಸಿಕೊಂಡಿರುವ ಪ್ರಜ್ವಲ್ ಜೊತೆ ಸೇರಿಕೊಂಡು ಗೊಟ್ಟಿಗೆರೆಯ ಭಾಗ್ಯನಗರದ 8ನೇ ಕ್ರಾಸ್ನಲ್ಲಿರುವ ಸರ್ವೇ ನಂಬರ್ 282 ಸೈಟ್ ಮಾರಾಟಕ್ಕೆ ಇರುವುದಾಗಿ ಬಿಂಬಿಸಿಕೊಂಡಿದ್ದರು.
ನಿವೇಶನದ ಅಸಲಿ ಮಾಲೀಕ ಮೈಕಲ್ ಡಿಸೋಜಾ ದುಬೈನಲ್ಲಿರುವುದನ್ನು ಅರಿತಿದ್ದ ವಂಚಕರು ಈತನ ಹಸರಿನಲ್ಲೇ ನಕಲಿ ದಾಖಲಾತಿ ಸೃಷ್ಟಿಸಿಕೊಂಡಿದ್ದರು.
ನಿವೇಶನ ಖರೀದಿಸಲು ಚಕ್ರವರ್ತಿ ನಡುಪಾಂಡು ಎಂಬುವರು ಮುಂದಾಗಿದ್ದರು.
ಈತನ ಪತ್ನಿ ರುತಿರಾದೇವಿ ಚಕ್ರವರ್ತಿ ಹೆಸರಿನಲ್ಲಿ ಸೈಟ್ ಖರೀದಿಸಲು ಮುಂದಾಗಿದ್ದರು.
ವಂಚಕರೊಂದಿಗೆ 1 ಕೋಟಿ ರೂಪಾಯಿ ಖರೀದಿಯ ಮಾತುಕತೆಯಾಗಿತ್ತು. ಆರೋಪಿಗಳ ಸಹಕಾರದಿಂದಲೇ ಸಹಕಾರನಗರದ ಐಸಿಐಸಿಐ ಬ್ಯಾಂಕ್ನಲ್ಲಿ 69 ಲಕ್ಷ ಸಾಲ ಪಡೆದುಕೊಂಡಿದ್ದರು.
ಆರೋಪಿಗಳ ಸೂಚನೆಯಂತೆ ಬ್ಯಾಂಕ್ನಿಂದ ಮಂಜೂರಾಗಿದ್ದ ಹಣವನ್ನು ಡಿಮಾಂಡ್ ಡ್ರಾಪ್ಟ್ (ಡಿಡಿ) ಮಾಡಿಸಿಕೊಂಡು ಬೊಮ್ಮನಹಳ್ಳಿಯ ಉಪನೋಂದಣಿ ಅಧಿಕಾರಿ ಕಚೇರಿಗೆ ಬಂದಿದ್ದರು.
ಇತ್ತ ಆರೋಪಿಗಳು ನಿರುದ್ಯೋಗಿಯಾಗಿದ್ದ ಜೇರ್ವಗಿಸ್ ಮ್ಯಾಥ್ಯೂ ಎಂಬುವರನ್ನು ಕೆಲಸ ಕೊಡಿಸುವ ಸೋಗಿನಲ್ಲಿ ನೋಂದಣಿ ಕಚೇರಿಗೆ ಕರೆತಂದು ಸೈಟ್ ಮಾಲೀಕ ಮೈಕಲ್ ಡಿಸೋಜಾ ಎಂದು ಬಿಂಬಿಸುವಂತೆ ಮಾಡಿದ್ದರು.
ಬಳಿಕ ಆರೋಪಿಗಳ ಪೈಕಿ ಪವನ್ ಕುಮಾರ್ ಎಂಬಾತ ಮಲ್ಲೇಶ್ವರಂ ಬಂಧನ್ ಬ್ಯಾಂಕ್ನಲ್ಲಿ ಮೈಕಲ್ ಡಿಸೋಜಾ ಹೆಸರಿನಲ್ಲಿ ನಕಲಿ ಹೆಸರಿನಲ್ಲಿ ಖಾತೆ ತೆರೆದು ಹಣ ಜಮಾವಣೆ ಮಾಡಿಕೊಂಡಿದ್ದ. ಬಂದ ಹಣವನ್ನು ಆರೋಪಿಗಳು ಸಮನಾಗಿ ಹಂಚಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
DAKSHINA KANNADA
Sullia: ನದಿಗೆ ಸ್ನಾನಕ್ಕೆ ತೆರಳಿದ ವ್ಯಕ್ತಿ ಶವವಾಗಿ ಪತ್ತೆ..!
ಸುಳ್ಯ: ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸುಳ್ಯದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಎರಡನೇ ಮಣ್ಣಗೇರಿಯ ನಿವಾಸಿ ವೆಂಕಟರಮಣ ಎಂದು ಗುರುತಿಸಲಾಗಿದೆ.
ಸುಳ್ಯದಲ್ಲಿರುವ ಆರಂಬೂರು ಸೇತುವೆ ಬಳಿಯ ಪಯಸ್ವಿನಿ ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿಯು ಕಾಣೆಯಾಗಿದ್ದಾರೆ. ಬಳಿಕ ಅವರ ಹುಡುಕಾಟ ನಡೆಸಲಾಗಿದೆ. ಆದರೆ ಎಷ್ಟು ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. ಆ ಕಾರಣದಿಂದ ಸುಳ್ಯದ ಪೈಚಾರ್ ನ ಮುಳುಗು ತಜ್ಞರ ತಂಡವು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮೇಳಕ್ಕೆತ್ತುವಲ್ಲಿ ಯಶಸ್ವಿಯಾಗಿದೆ. ಸುಳ್ಯ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ
DAKSHINA KANNADA
Sullia: ಮದ್ಯ ಸೇವಿಸಿ ಅಡ್ಡಾದಿಡ್ಡಿ ವಾಹನ ಚಲಾವಣೆ- ಎಪಿಎಂಸಿ ಕಾರ್ಯದರ್ಶಿ ಅಮಾನತು
ಸುಳ್ಯ: ಮದ್ಯಪಾನ ಮಾಡಿ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಸರಕಾರಿ ವಾಹನ ಚಲಾಯಿಸಿದ ಪ್ರಕರಣದ ಆರೋಪಿ ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್ ಕುಮಾರ್ನನ್ನು ಅಮಾನತುಗೊಳಿಸಿ ಇಲಾಖೆ ಆದೇಶ ಹೊರಡಿಸಿದೆ.
ನವೀನ್ ಕುಮಾರ್ ಮಂಗಳವಾರ ರಾತ್ರಿ ಅರಂಬೂರು ಬಳಿ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ ಸರಕಾರಿ ಇಲಾಖೆಯ ನಾಮಫಲಕವಿರುವ ವಾಹನವನ್ನು ಅಪಾಯಕಾರಿಯಾಗಿ ಚಲಾಯಿಸಿದ್ದನೆಂದು ಆರೋಪಿಸಲಾಗಿದೆ. ಅಡ್ಡಾದಿಡ್ಡಿಯಾಗಿ ವಾಹನ ಚಲಾಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ವಾಹನವನ್ನು ಬೆನ್ನಟ್ಟಿ ಅಡ್ಡಗಟ್ಟಿ ವಿಚಾರಿಸಿದ್ದರು. ಈ ಸಂದರ್ಭ ತಾನು ಸುಳ್ಯ ಎಪಿಎಂಸಿ ಕಾರ್ಯದರ್ಶಿ, ನನ್ನದು ತಪ್ಪಾಯಿತು ಎಂದು ಕ್ಷಮೆ ಯಾಚಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಬುಧವಾರ ಎಪಿಎಂಸಿ ಕಾರ್ಯದರ್ಶಿಯವರನ್ನು ಅಮಾನತುಗೊಳಿಸಿ ಆದೇಶ ಮಾಡಲಾಗಿದೆ. ಬೆಳ್ತಂಗಡಿ ಎಪಿಎಂಸಿ ಕಾರ್ಯದರ್ಶಿ ರವೀಂದ್ರ ಅವರಿಗೆ ಸುಳ್ಯ ಎಪಿಎಂಸಿ ಪ್ರಭಾರ ವಹಿಸಲಾಗಿದೆ.
LATEST NEWS
ಕೋಟಿಯ ಒಡೆಯನಾದ 8ನೇ ತರಗತಿ ಪೋರ..!!
ನವದೆಹಲಿ: ಕೌನ್ ಬನೇಗಾ ಕರೋಡ್ ಪತಿ ಎಂಬ ಹಿಂದಿ ಶೋ ನಲ್ಲಿ ಕೋಟಿ ಗೆದ್ದ 14ವರ್ಷದ ಪೋರ ಸಣ್ಣ ವಯಸ್ಸಿನಲ್ಲೇ ದಾಖಲೆ ಬರೆದಿದ್ದಾನೆ.
ಬಾಲಿವುಡ್ ಸ್ಟಾರ್ ಅಮಿತಾಭ್ ಬಚ್ಚನ್ ನಡೆಸಿಕೊಡುವಂತಹ ಹಿಂದಿಯ ಕೌನ್ ಬನೇಗಾ ಕರೋಡ್ ಪತಿ ಎಂಬ ಶೋ ನಲ್ಲಿ ಹರಿಯಾಣದ ಮಹೇಂದ್ರಗಢ್ ಮೂಲದ 8ನೇ ತರಗತಿ ವಿದ್ಯಾರ್ಥಿ ಮಯಾಂಕ್ ಭಾಗವಹಿಸಿ 15 ಪ್ರಶ್ನೆಗಳಿಗೆ ಉತ್ತರಿಸಿ ಒಂದು ಕೋಟಿ ಗೆದ್ದು ದಾಖಲೆ ಬರೆದಿದ್ದಾನೆ. ಕೌನ್ ಬನೇಗಾ ಕರೋಡ್ ಪತಿಯಲ್ಲಿ ನಡೆಯುವ ಜನಪ್ರಿಯ ಪ್ರಶ್ನೆಗಳಿಗೆ ಉತ್ತರಿಸಿದ 14 ವರ್ಷದ ಕಿರಿಯ ಪೋರ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ.
ಜನಪ್ರಿಯ ರಸಪ್ರಶ್ನೆ ಕಾರ್ಯಕ್ರಮ ಕೌನ್ ಬನೇಗಾ ಕರೋಡ್ಪತಿಯಲ್ಲಿ 1 ಕೋಟಿ ರೂ.ಗೆದ್ದ ಹೆಗ್ಗಳಿಕೆಗೆ ಹರಿಯಾಣದ ಮಹೇಂದ್ರಗಢ್ನ 8 ನೇ ತರಗತಿಯ ವಿದ್ಯಾರ್ಥಿ ಮಯಾಂಕ್ ಪಾತ್ರನಾಗಿದ್ದಾನೆ. 14 ವರ್ಷದ ಈ ಬಾಲಕ 1 ಕೋಟಿ ರೂ.ಗೆದ್ದ ಅತ್ಯಂತ ಕಿರಿಯ ಸ್ಪರ್ಧಿಯಾಗಿದ್ದು, ಹೊಸ ಇತಿಹಾಸ ನಿರ್ಮಿಸಿದ್ದಾನೆ. 15 ಪ್ರಶ್ನೆಗಳಿಗೆ ಉತ್ತರ ಕೊಟ್ಟು, 1 ಕೋಟಿ ರೂ ಗೆದ್ದು, 16ನೇ ಪ್ರಶ್ನೆಗೂ ಸರಿಯಾದ ಉತ್ತರ ನೀಡಿದ್ದಾನೆ. ಈತನ ಗುರಿ ಕೇವಲ ಒಂದು ಕೋಟಿ ಆಗಿರಲಿಲ್ಲ. ಏಳು ಕೋಟಿಯನ್ನು ಗುರಿಯಾಗಿಸಿಟ್ಟುಕೊಂಡಿದ್ದ. ಏಳು ಕೋಟಿಯ ಪ್ರಶ್ನೆಗೆ ಉತ್ತರಿಸೋಕೆ ಆಗದೇ ಆಟದಿಂದ ವಾಪಸ್ಸಾಗಿದ್ದಾನೆ. ಈತನ ಸಾಧನೆಗೆ ಹರಿಯಾಣ ಸಿಎಂ ಮನೊಹರ್ ಲಾಲ್ ಖಟ್ಟರ್ ಅಭಿನಂದಿಸಿದ್ದಾರೆ. ಇದು ಮೊದಲ ಬಾರಿ 14 ವರ್ಷದ ಪೋರ ಕೋಟಿಗೆದ್ದ ಇತಿಹಾಸವಾಗಿದೆ.
- bangalore4 days ago
ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ನಲ್ಲಿ ಎಂಟ್ರಿಯಾದ ಈ ಸ್ಪರ್ಧಿಗಳು ಯಾರು..?
- FILM3 days ago
ಆಲಿಯಾ ಭಟ್ ಡೀಫ್ ಫೇಕ್ ವಿಡಿಯೋ ವೈರಲ್ – ವಿಡಿಯೋ ನೋಡಿದ್ರಾ..?
- bangalore6 days ago
ಬೆಂಗಳೂರು ಕಂಬಳಕ್ಕೆ ಚಾಲನೆ ನೀಡಿದ ಅಶ್ವಿನಿ ಪುನಿತ್ ರಾಜ್ ಕುಮಾರ್
- DAKSHINA KANNADA6 days ago
Puttur: ಮಹಿಳೆಗೆ ಅಮಲು ಬರಿಸುವ ಪಾನೀಯ ಕುಡಿಸಿ ಅತ್ಯಾಚಾರ..!