LATEST NEWS
ಖಾಲಿ ನಿವೇಶನಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಲಕ್ಷಾಂತರ ರೂ. ವಂಚನೆ : ಐವರು ಆರೋಪಿಗಳು ಅರೆಸ್ಟ್..!
ಖಾಲಿ ನಿವೇಶನಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಲಕ್ಷಾಂತರ ರೂ. ವಂಚನೆ : ಐವರು ಆರೋಪಿಗಳು ಅರೆಸ್ಟ್..!
Create duplicate records for vacant premises and Fraud 69 lacs – Five accused Arrest ..
ಬೆಂಗಳೂರು : ಖಾಲಿ ನಿವೇಶನಗಳಿಗೆ ನಕಲಿ ದಾಖಲೆ ಸೃಷ್ಟಿಸಿ, ನಕಲಿ ಮಾಲೀಕರಿಂದ ಕ್ರಯ ಪತ್ರ ಮಾಡಿಸಿಕೊಂಡು ಅಸಲಿ ಮಾಲೀಕರ ಸೋಗಿನಲ್ಲಿ ಬೇರೆಯವರಿಗೆ ಮಾರಾಟ ಮಾಡಿ ಲಕ್ಷಾಂತರ ರೂಪಾಯಿ ವಂಚಿಸಿದ್ದ 5 ಜನ ಆರೋಪಿಗಳನ್ನು ಬೆಂಗಳೂರಿನ ಕೋಣನಕುಂಟೆ ಪೊಲೀಸರು ಬಂಧಿಸಿದ್ದಾರೆ.
ನಗರದ ನಿವಾಸಿಗಳಾದ ಕೀರ್ತನಾ, ಈಕೆಯ ಗಂಡ ಶೇಖರ್, ಸಹಚರರಾದ ಪವನ್ ಕುಮಾರ್, ಉಮಾ ಮಹೇಶ್ ರಾವ್, ಜಯಪ್ರಕಾಶ್ ಎಂಬುವರನ್ನು ಬಂಧಿಸಿ 16.83 ಲಕ್ಷ ರೂ. ಮೌಲ್ಯದ 362 ಗ್ರಾಂ ಚಿನ್ನ, ಎರಡು ಕಾರು ಹಾಗೂ ಒಂದು ಬೈಕ್ ವಶಕ್ಕೆ ಪಡೆದುಕೊಂಡಿದ್ದಾರೆ.
ಕೃತ್ಯದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಮತ್ತೋರ್ವ ಆರೋಪಿ ಪ್ರಜ್ವಲ್ ರಾಮಯ್ಯ ಪತ್ತೆಗಾಗಿ ಶೋಧ ಮುಂದುವರೆಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳ ಪೈಕಿ ಕೀರ್ತನಾ ರಿಯಲ್ ಎಸ್ಟೇಟ್ನಲ್ಲಿ ತೊಡಗಿಸಿಕೊಂಡಿದ್ದು, ಈಕೆಯ ಗಂಡ ಶೇಖರ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾನೆ.
ತಲೆಮರೆಸಿಕೊಂಡಿರುವ ಪ್ರಜ್ವಲ್ ಜೊತೆ ಸೇರಿಕೊಂಡು ಗೊಟ್ಟಿಗೆರೆಯ ಭಾಗ್ಯನಗರದ 8ನೇ ಕ್ರಾಸ್ನಲ್ಲಿರುವ ಸರ್ವೇ ನಂಬರ್ 282 ಸೈಟ್ ಮಾರಾಟಕ್ಕೆ ಇರುವುದಾಗಿ ಬಿಂಬಿಸಿಕೊಂಡಿದ್ದರು.
ನಿವೇಶನದ ಅಸಲಿ ಮಾಲೀಕ ಮೈಕಲ್ ಡಿಸೋಜಾ ದುಬೈನಲ್ಲಿರುವುದನ್ನು ಅರಿತಿದ್ದ ವಂಚಕರು ಈತನ ಹಸರಿನಲ್ಲೇ ನಕಲಿ ದಾಖಲಾತಿ ಸೃಷ್ಟಿಸಿಕೊಂಡಿದ್ದರು.
ನಿವೇಶನ ಖರೀದಿಸಲು ಚಕ್ರವರ್ತಿ ನಡುಪಾಂಡು ಎಂಬುವರು ಮುಂದಾಗಿದ್ದರು.
ಈತನ ಪತ್ನಿ ರುತಿರಾದೇವಿ ಚಕ್ರವರ್ತಿ ಹೆಸರಿನಲ್ಲಿ ಸೈಟ್ ಖರೀದಿಸಲು ಮುಂದಾಗಿದ್ದರು.
ವಂಚಕರೊಂದಿಗೆ 1 ಕೋಟಿ ರೂಪಾಯಿ ಖರೀದಿಯ ಮಾತುಕತೆಯಾಗಿತ್ತು. ಆರೋಪಿಗಳ ಸಹಕಾರದಿಂದಲೇ ಸಹಕಾರನಗರದ ಐಸಿಐಸಿಐ ಬ್ಯಾಂಕ್ನಲ್ಲಿ 69 ಲಕ್ಷ ಸಾಲ ಪಡೆದುಕೊಂಡಿದ್ದರು.
ಆರೋಪಿಗಳ ಸೂಚನೆಯಂತೆ ಬ್ಯಾಂಕ್ನಿಂದ ಮಂಜೂರಾಗಿದ್ದ ಹಣವನ್ನು ಡಿಮಾಂಡ್ ಡ್ರಾಪ್ಟ್ (ಡಿಡಿ) ಮಾಡಿಸಿಕೊಂಡು ಬೊಮ್ಮನಹಳ್ಳಿಯ ಉಪನೋಂದಣಿ ಅಧಿಕಾರಿ ಕಚೇರಿಗೆ ಬಂದಿದ್ದರು.
ಇತ್ತ ಆರೋಪಿಗಳು ನಿರುದ್ಯೋಗಿಯಾಗಿದ್ದ ಜೇರ್ವಗಿಸ್ ಮ್ಯಾಥ್ಯೂ ಎಂಬುವರನ್ನು ಕೆಲಸ ಕೊಡಿಸುವ ಸೋಗಿನಲ್ಲಿ ನೋಂದಣಿ ಕಚೇರಿಗೆ ಕರೆತಂದು ಸೈಟ್ ಮಾಲೀಕ ಮೈಕಲ್ ಡಿಸೋಜಾ ಎಂದು ಬಿಂಬಿಸುವಂತೆ ಮಾಡಿದ್ದರು.
ಬಳಿಕ ಆರೋಪಿಗಳ ಪೈಕಿ ಪವನ್ ಕುಮಾರ್ ಎಂಬಾತ ಮಲ್ಲೇಶ್ವರಂ ಬಂಧನ್ ಬ್ಯಾಂಕ್ನಲ್ಲಿ ಮೈಕಲ್ ಡಿಸೋಜಾ ಹೆಸರಿನಲ್ಲಿ ನಕಲಿ ಹೆಸರಿನಲ್ಲಿ ಖಾತೆ ತೆರೆದು ಹಣ ಜಮಾವಣೆ ಮಾಡಿಕೊಂಡಿದ್ದ. ಬಂದ ಹಣವನ್ನು ಆರೋಪಿಗಳು ಸಮನಾಗಿ ಹಂಚಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
DAKSHINA KANNADA
ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಲಕ್ಷಾಧಿಪತಿ….ಅವರ ಆಸ್ತಿ ವಿವರ ಇಲ್ಲಿದೆ!
ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಆಸ್ತಿ ವಿವರ ಘೋಷಣೆ ಮಾಡಿದ್ದಾರೆ. ಅವರ ಸ್ಥಿರ ಮತ್ತು ಚರಾಸ್ತಿ ಒಟ್ಟು ಮೊತ್ತ 70,81,365 ಲಕ್ಷ ರೂ. ಆಗಿದೆ. ಸ್ಥಿರ ಆಸ್ತಿಯ ಒಟ್ಟು ಮೊತ್ತ 27,31,365 ಲಕ್ಷ ರೂ. ಆಗಿದೆ. ಚರಾಸ್ತಿಯ ಒಟ್ಟು ಮೊತ್ತ 43,50,000 ಲಕ್ಷ ರೂ., ಇನ್ನು ಒಟ್ಟು 9,62,010 ರೂ. ಅನ್ನು ಇನ್ನೋವಾ ಕಾರಿಗಾಗಿ ಸಾಲ ಮಾಡಿದ್ದಾರೆ.
ಇನ್ನು ಬಿಎಸ್ಸಿ ಶಿಕ್ಷಣದ ಜೊತೆಗೆ ಐಐಎಂ ಅನ್ನು ಇಂದೋರ್ನಲ್ಲಿ ಬ್ಯುಸಿನೆಸ್ ಮ್ಯಾನೇಜ್ಮೆಂಟ್ ಡಿಫೆನ್ಸ್ ಆಫೀಸರ್ ಸರ್ಟಿಫಿಕೇಟ್ ಕೋರ್ಸ್ ಮಾಡಿದ್ದಾರೆ. ಅವರು, ಅವಿವಾಹಿತರಾಗಿದ್ದು 42 ವರ್ಷ ಪ್ರಾಯದವರಾಗಿದ್ದಾರೆ.
ಬ್ರಿಜೇಶ್ ಚೌಟ ಯಾರು?
ಮಂಗಳೂರಿನ ರಥಬೀದಿಯಲ್ಲಿ ನೆಲೆಸಿರುವ ಕ್ಯಾಪ್ಟನ್ ಬೃಜೇಶ್ ಚೌಟ ಕಾಲೇಜು ದಿನಗಳಲ್ಲಿಯೇ ಎನ್ ಸಿಸಿಯಲ್ಲಿ ತೊಡಗಿಕೊಂಡಿದ್ದು, ಮಂಗಳೂರು ವಿವಿಯಲ್ಲಿ ಅತ್ಯುತ್ತಮ ಕೆಡೆಟ್ ಎಂಬ ಹೆಗ್ಗಳಿಕೆ ಪಡೆದಿದ್ದರು. ಮಂಗಳೂರಿನ ಸೇಂಟ್ ಅಲೋಶಿಯಸ್ ಕಾಲೇಜಿನಲ್ಲಿ ವಿಜ್ಞಾನ ಪದವಿಯನ್ನು ಪಡೆದ ಅವರು ಇಂದೋರ್ನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ನಿಂದ ಆಡಳಿತ ವ್ಯವಹಾರ ನಿರ್ವಹಣೆಯಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ.
ಯುಪಿಎಸ್ಸಿ ಮೂಲಕ ಡಿಫೆನ್ಸ್ ಪರೀಕ್ಷೆ ಬರೆದು ತೇರ್ಗಡೆಗೊಂಡು ಚೆನ್ನೈನಲ್ಲಿ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಭೂಸೇನೆ ಸೇರಿದ್ದರು. ಪ್ರತಿಷ್ಠಿತ ಎಂಟನೇ ಗೋರ್ಖಾ ರೈಫಲ್ಸ್ 7ನೇ ಬೆಟಾಲಿಯನ್ ನಲ್ಲಿ ಉತ್ತರ ಭಾರತ ಮತ್ತು ಈಶಾನ್ಯ ರಾಜ್ಯಗಳಲ್ಲಿ ಸೇವೆ ಸಲ್ಲಿಸಿ ಕ್ಯಾಪ್ಟನ್ ಹುದ್ದೆಗೇರಿದ್ದರು.
ನಳಿನ್ ಬದಲು ಚೌಟ ಕಣಕ್ಕೆ :
ಕಳೆದ 15 ವರ್ಷಗಳ ಹಿಂದೆ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಹಿಡಿತದಲ್ಲಿದೆ. ಸತತ ಮೂರು ಬಾರಿ ನಳಿನ್ ಕುಮಾರ್ ಕಟೀಲ್ ಅವರು ಗೆದ್ದುಕೊಂಡು ಬಂದಿದ್ದರು. ಈ ಬಾರಿ ಮಾಜಿ ಯೋಧ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.
ಆ ಮೂಲಕ ನಳಿನ್ ಕುಮಾರ್ ಕಟೀಲ್ಗೆ ಟಿಕೆಟ್ ಕೈತಪ್ಪಿ ಹೋಗಿದೆ. ಇದೀಗ ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಏಪ್ರಿಲ್ 4 ರಂದು ಅಧಿಕೃತವಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಅವರು ಸಲ್ಲಿಸಿರುವ ನಾಮಪತ್ರ ಅಫಿಡವಿಟ್ನಲ್ಲಿ ಲಕ್ಷಾಧಿಪತಿ ಎಂದು ಘೋಷಿಸಿಕೊಂಡಿದ್ದಾರೆ.
bangalore
ಐದು ವರ್ಷದಲ್ಲಿ ನಾಲ್ಕು ಪಟ್ಟು ಏರಿದ ಆಸ್ತಿ…! ಪ್ರಜ್ವಲ್ ರೇವಣ್ಣ ಘೋಷಿಸಿದ ಆಸ್ತಿ ವಿವರದಲ್ಲಿ ಬಹಿರಂಗ..!!
ಬೆಂಗಳೂರು: ಲೋಕಸಭಾ ಕ್ಷೇತ್ರದ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಸಂಸದ ಪ್ರಜ್ವಲ್ ರೇವಣ್ಣ ಅವರು ಗುರುವಾರ (ಮಾ.28) ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ನಾಮಪತ್ರದಲ್ಲಿ ಪ್ರಜ್ವಲ್ ಅವರು ತಮ್ಮ ಆಸ್ತಿ ಮೌಲ್ಯಗಳನ್ನು ಘೋಷಿಸಿದ್ದಾರೆ. ತಮ್ಮ ಒಟ್ಟು ಆಸ್ತಿ ಮೌಲ್ಯ 40.94 ಕೋಟಿ ಎಂದು ಘೋಷಿಸಿದ್ದಾರೆ.
2019ರ ಚುನಾವಣೆಯಲ್ಲಿ ಘೋಷಿಸಿದ ಆಸ್ತಿ ಮೌಲ್ಯಕ್ಕೆ ನಾಲ್ಕು ಪಟ್ಟು ಹೆಚ್ಚಳವಾಗಿದೆ. 2019 ರ ಲೋಕಸಭಾ ಚುನಾವಣೆ ವೇಳೆ ಸಲ್ಲಿಸಿದ್ದ ಅಫಿದವಿಟ್ನಲ್ಲಿ ಅವರು ತಮ್ಮ ಒಟ್ಟು ಆಸ್ತಿ ಮೌಲ್ಯ 9.78 ಕೋಟಿ ರೂಪಾಯಿ ಎಂದು ಘೋಷಿಸಿದ್ದರು. ಈ ಬಾರಿ ಪ್ರಜ್ವಲ್ ರೇವಣ್ಣ ಅವರು ಅಫಿಡವಿಟ್ನಲ್ಲಿ ತಮ್ಮ ಒಟ್ಟು ಆಸ್ತಿ ಮೌಲ್ಯ 40.94 ಕೋಟಿ ರೂಪಾಯಿ ಎಂದು ಘೋಷಿಸಿದ್ದಾರೆ. ಈ ಪೈಕಿ 5.44 ಕೋಟಿ ರೂಪಾಯಿ ಮೌಲ್ಯದ ಚರಾಸ್ತಿ, 35.40 ಕೋಟಿ ರೂಪಾಯಿ ಸ್ಥಿರಾಸ್ತಿ ಹೊಂದಿದ್ದಾರೆ. ಅಲ್ಲದೆ, 9.29 ಲಕ್ಷ ನಗದು ಹೊಂದಿರುವುದಾಗಿ ಪ್ರಮಾಣ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ವಿವಿಧ ಬ್ಯಾಂಕ್ಗಳ ಉಳಿತಾಯ ಖಾತೆಯಲ್ಲಿ 56 ಲಕ್ಷ ನಗದು ಇದ್ದು, 5 ವರ್ಷದಲ್ಲಿ ಕೃಷಿಯಿಂದ 2.75 ಕೋಟಿ ಆದಾಯ ಗಳಿಸಿದ್ದಾರೆ ಎಂದು ಅಫಿಡವಿಟ್ನಲ್ಲಿ ತಿಳಿಸಿದ್ದಾರೆ. ಕೃಷಿಯೇತರ ಮೂಲದಿಂದ 1.33 ಕೋಟಿ ಆದಾಯ ಗಳಿಸಿದ್ದು, 31 ಹಸುಗಳು, 4 ಎತ್ತುಗಳು, 1 ಟ್ರ್ಯಾಕ್ಟರ್ ಹೊಂದಿದ್ದಾರೆ.
ಪ್ರಜ್ವಲ್ ರೇವಣ್ಣ ಮಾಡಿದ ಸಾಲ
ಬೆಂಗಳೂರು ನಗರ, ಮೈಸೂರು ಸೇರಿದಂತೆ ವಿವಿಧೆಡೆ ವಾಣಿಜ್ಯ ಕಟ್ಟಡ, ಹೊಳೆನರಸೀಪುರ, ನೆಲಮಂಗಲದಲ್ಲಿ ಆಸ್ತಿ ಹೊಂದಿದ್ದಾರೆ. ಅತ್ತೆ ಅನುಸೂಯಾರಿಂದ 22 ಲಕ್ಷ, ಅತ್ತೆ ಶೈಲಜಾರಿಂದ 10 ಲಕ್ಷ ಸಾಲ ಪಡೆದಿದ್ದು, ತಂದೆ ರೇವಣ್ಣರಿಂದ 86 ಲಕ್ಷ, ಸೋದರ ಸೂರಜ್ರಿಂದ 1 ಕೋಟಿ ಸಾಲ ಮಾಡಿದ್ದಾರೆ. ಹೀಗೆ ಒಟ್ಟು 4.48 ಕೋಟಿ ಸಾಲ ಹೊಂದಿದ್ದಾರೆ.
ತೆರಿಗೆ ಬಾಕಿ ಉಳಿಸಿಕೊಂಡ ಪ್ರಜ್ವಲ್ ರೇವಣ್ಣ
ಸರ್ಕಾರಕ್ಕೆ 3.4 ಕೋಟಿ ತೆರಿಗೆ ಬಾಕಿ ಉಳಿಸಿಕೊಂಡಿದ್ದಾರೆ. ಈ ಬಗ್ಗೆ ಕಾನೂನು ಹೋರಾಟ ನಡೆಸುತ್ತಿರುವ ಬಗ್ಗೆಯೂ ಉಲ್ಲೇಖ ಮಾಡಿದ್ದಾರೆ. 67 ಲಕ್ಷ ಮೌಲ್ಯದ 1 ಕೆ.ಜಿ. 100 ಗ್ರಾಂ ಚಿನ್ನ ಹೊಂದಿದ್ದಾರೆ. 17.48 ಲಕ್ಷ ಮೌಲ್ಯದ 23 ಕೆ.ಜಿ. ಬೆಳ್ಳಿ, 1.90 ಲಕ್ಷ ಮೌಲ್ಯದ ವಜ್ರಾಭರಣ ಹೊಂದಿದ್ದಾರೆ ಎಂದು ನಾಮಪತ್ರ ಸಲ್ಲಿಕೆ ವೇಳೆ ಘೋಷಿಸಿದ್ದಾರೆ.
LATEST NEWS
ಈ ದೇವಸ್ಥಾನದಲ್ಲಿ ಒಂದು ಲಿಂಬೆಹಣ್ಣಿಗೆ ಲಕ್ಷಾಂತರ ರೂ. ಬೇಡಿಕೆ..! ಅಂತದ್ದೇನಿದೆ ಈ ಲಿಂಬೆ ಹಣ್ಣಲ್ಲಿ?
ತಮಿಳುನಾಡು: ತಮಿಳುನಾಡಿನಲ್ಲಿರುವ ದೇವಸ್ಥಾನದಲ್ಲಿ ಒಂದು ಲಿಂಬೆ ಹಣ್ಣಿಗೆ ಲಕ್ಷಾಂತರ ರೂಪಾಯಿ ಬೇಡಿಕೆ ಇದ್ದು, ಲಿಂಬೆಹಣ್ಣಿಗಾಗಿ ಜನ ಮುಗಿ ಬೀಳುತ್ತಿದ್ದಾರೆ. ವಿಲ್ಲುಪುರಂ ಜಿಲ್ಲೆಯ ಮುರುಗನ್ ದೇವಸ್ಥಾನದ ಉತಿರಂ ಹಬ್ಬದ ಸಂದರ್ಭದಲ್ಲಿ ಒಟ್ಟು ಒಂಬತ್ತು ನಿಂಬೆ ಹಣ್ಣು ಬರೋಬ್ಬರಿ 2.36 ಲಕ್ಷ ರೂಪಾಯಿಗೆ ಹರಾಜಿನಲ್ಲಿ ಮಾರಾಟವಾಗಿದೆ. ಸಾಮಾನ್ಯವಾಗಿ ಅಂಗಡಿಗಳಲ್ಲಿ 10 ರೂಪಾಯಿಗೆ ಎರಡು ಮೂರು ನಿಂಬೆ ಹಣ್ಣು ಖರೀದಿಸಬಹುದು. ಆದ್ರೆ, ಇಲ್ಲಿನ ಲಿಂಬೆ ಹಣ್ಣು ಮಾತ್ರ ವಿಶೇಷವಾಗಿದೆ. ಹಾಗಾಗಿ ಭಾರೀ ಬೇಡಿಕೆ ಗಿಟ್ಟಿಸಿಕೊಂಡಿದೆ.
ಈ ಲಿಂಬೆಹಣ್ಣಿನಲ್ಲೇನಿದೆ?
ಮುರುಗನ್ ದೇವಸ್ಥಾನದಲ್ಲಿ ಪತ್ರೀ ವರ್ಷ ಅದ್ಧೂರಿಯಾಗಿ ಒಂಭತ್ತು ದಿನಗಳ ಕಾಲ ಉತಿರಂ ಹಬ್ಬವನ್ನು ಆಚರಿಸಲಾಗುತ್ತದೆ. ಒಂಭತ್ತು ದಿನಗಳ ದೇವರ ಪೂಜಾ ಸಮಯದಲ್ಲಿ ಒಂದೊಂದು ದಿನ ದೇವರ ತ್ರಿಶೂಲದ ಮೇಲೆ ಲಿಂಬೆ ಹಣ್ಣುಗಳನ್ನು ಇಟ್ಟು ಅರ್ಚಕರು ಪೂಜೆ ಸಲ್ಲಿಸುತ್ತಾರೆ.
ಈ ಲಿಂಬೆಹಣ್ಣಿನಲ್ಲಿ ವಿಶೇಷ ಶಕ್ತಿಯಿದೆ ಎಂದು ಸಾಕಷ್ಟು ವರ್ಷಗಳಿಂದ ಭಕ್ತರು ನಂಬಿಕೊಂಡು ಬಂದಿದ್ದಾರೆ. ಸಂತಾನದೋಷದಿಂದ ಬಳಲುತ್ತಿರುವ ದಂಪತಿಗಳಿಗೆ ಈ ಲಿಂಬೆಹಣ್ಣು ಸಿಕ್ಕಿದರೆ ಸಂತಾನ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆಯಿದೆ. ಈ ಲಿಂಬೆ ಹಣ್ಣನ್ನು ಪಡೆದವರಿಗೆ ಯಶಸ್ಸು ಹೆಗಲೇರಿ ಬರುತ್ತದೆ ಎಂಬ ಪ್ರತೀತಿ ಇದೆ.
- LATEST NEWS7 days ago
ಅಬ್ ಕೀ ಬಾರ್ 500 ಪಾರ್… ! ಪ್ರಚಾರ ಕಣಕ್ಕಿಳಿದ ಗ್ರೇಟ್ ಕಲಿ..!
- DAKSHINA KANNADA7 days ago
ಮಂಗಳೂರಿಗೆ ಹೆಮ್ಮೆಯ ಗರಿ; ಎಜೆ ಗ್ರ್ಯಾಂಡ್ ಎಲೈಟ್ ಹೊಟೇಲ್ ಲೋಕಾರ್ಪಣೆ
- FILM4 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ವರ್ಯ ರೈ- ಅಭಿಷೇಕ್ ಬಚ್ಚನ್ ಫೋಟೋ!
- DAKSHINA KANNADA3 days ago
ಖತರ್ನಾಕ್ ಲ್ಯಾಪ್ಟಾಪ್ ಕಳ್ಳಿ…! ಈಕೆ ಬ್ಯಾಂಕ್ ಉದ್ಯೋಗಿ… !