Connect with us

    ಲಾಕ್ ಡೌನ್ ಗೆ ಬಂದ್ ಆದ ಕ್ರೀಡಾ ಚಟುವಟಿಕೆ.. ಬ್ಯಾಟು ತಯಾರಿಸುವವರ ಬದುಕಿಗೂ ಕೊರೊನಾ ಹೊಡೆತ…

    Published

    on

    ಲಾಕ್ ಡೌನ್ ಗೆ ಬಂದ್ ಆದ ಕ್ರೀಡಾ ಚಟುವಟಿಕೆ.. ಬ್ಯಾಟು ತಯಾರಿಸುವವರ ಬದುಕಿಗೂ ಕೊರೊನಾ ಹೊಡೆತ…

    ಮಂಗಳೂರು : ಲಾಕ್‌ಡೌನ್‌ ಹಿನ್ನೆಲೆಯಲ್ಲಿ ದೇಶದಾದ್ಯಂತ ಕ್ರೀಡಾ ಕೂಟಗಳೂ ಸಂಪೂರ್ಣ ಸ್ಥಗಿತವಾಗಿದೆ. ಆಟಗಾರರೂ ಮನೆಯೊಳಗೆ ಕುಳಿತ್ತಿದ್ದಾರೆ. ಇನ್ನು ಕ್ರೀಡಾ ಪರಿಕರಗಳನ್ನು ತಯಾರಿಸುವ ಮಂದಿಯ ಬದುಕೂ ಇನ್ನಷ್ಟು ನರಕವಾಗಿದೆ. ದೂರದ ಮಹಾರಾಷ್ಟ್ರದಿಂದ ಮಂಗಳೂರಿಗೆ ಬಂದು ಬ್ಯಾಟ್‌ ತಯಾರಿಸುತ್ತಾ ಜೀವನ ನಿರ್ವಹಣೆ ಮಾಡುತ್ತಿದ್ದ ಈ ಕುಟುಂಬವೀಗ ದಯನೀಯ ಸ್ಥಿತಿಯಲ್ಲಿದೆ…..

    ವಿರಾಟ್‌ ಕೊಹ್ಲಿ ಮೈದಾನದಲ್ಲಿ ಬ್ಯಾಟ್‌ ಹಿಡಿದು ನಿಂತರೆ ಮೈ ರೋಮಾಂಚಕ. ಆತನ ಆಟದ ಶೈಲಿಗೆ ಮಾರುಹೋಗದವರಿಲ್ಲ. ಕ್ರಿಕೆಟ್ ಮೂಲಕ ಕೋಟಿಗಟ್ಟಲೆ ಹಣ ಬಾಚಿದ ಆಟಗಾರರೆಲ್ಲರೂ ಐಷಾರಾಮಿ ಬದುಕಿನಲ್ಲಿದ್ದಾರೆ. ಆದರೀಗ ಪರಿಸ್ಥಿತಿ ಭಿನ್ನವಾಗಿದೆ. ಕಾರಣ ಕೊರೊನಾ ಲಾಕ್‌ಡೌನ್‌. ಎಳೆ ಹರೆಯದ ಮಕ್ಕಳಿಗೆ ವಿವಿಧ ಮಾದರಿಯ ಬ್ಯಾಟ್‌ಗಳನ್ನು ರೂಪಿಸಿ ಕ್ರೀಡಾ ಸ್ಪೂರ್ತಿ ಹುಟ್ಟಿಸುವ ಬ್ಯಾಟ್‌ ತಯಾರಕರ ಬದುಕು ಬೀದಿಗೆ ಬಿದ್ದಿದೆ. ಇವರ ಸಂಕಷ್ಟದ ಸ್ಥಿತಿಯಲ್ಲಿ ನೆರವಾಗುವವರು ಯಾರೂ ಇಲ್ಲ. ಇದು ಮಂಗಳೂರಿನ ಕದ್ರಿ ಕೆಪಿಟಿ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 66ರ ಹೆದ್ದಾರಿ ಪಕ್ಕದಲ್ಲಿ ಬದುಕು ಕಟ್ಟಿರುವ ಮಹಾರಾಷ್ಟ್ರದ ನಾಲ್ಕು ಕುಟುಂಬಗಳ ವ್ಯಥೆಯ ಕಥೆ…

    ಕಳೆದ ಹಲವು ವರ್ಷಗಳಿಂದ ಇವರು ಇಲ್ಲಿ ಜೋಪಡಿಯಲ್ಲಿ ಸ್ವಾಭಿಮಾನದ ಬದುಕು ನಡೆಸುತ್ತಿದ್ದಾರೆ. ಕಷ್ಟಪಟ್ಟು ಜೀವನ ನಿರ್ವಹಣೆ ಮಾಡುವ ಇವರ ಬದುಕಿನಲ್ಲೂ ಕೊರೊನಾ ಕರಾಳ ಛಾಯೆ ಮೂಡಿಸಿದೆ. ಅತ್ತ ಊರಿಗೂ ಹೋಗಲಾಗದೆ ಇತ್ತ ಇಲ್ಲೂ ಕೂಲಿ ಇಲ್ಲದೆ ಇದ್ದೇವೆ ಎನ್ನುತ್ತಾರೆ ಬ್ಯಾಟ್‌ ತಯಾರಕ ಸಂತೋಷ್‌. ಕಾರ್ಡು ಇಲ್ಲದೆ ರೇಶನ್‌ ಇಲ್ಲ. ವಿದ್ಯುತ್‌ ದೀಪದಡಿಯಲ್ಲಿ ನಮ್ಮ ಬದುಕು. ಇಲ್ಲಿ 5 ಕುಟುಂಬಗಳಿವೆ. ಬ್ಯಾಟು ತಯಾರಿಸಿ ಮಾರಾಟ ಮಾಡಿ ಅದರಲ್ಲಿ ಬಂದ ಹಣದಲ್ಲೇ ನಮ್ಮ ಬದುಕಿನ ಬಂಡಿ ಅನ್ನುತ್ತಾರವರು.

    ಬರೋಬ್ಬರಿ 25ಕ್ಕೂ ಹೆಚ್ಚು ಮಂದಿ ಇಲ್ಲಿದ್ದಾರೆ. ಪುಟ್ಟಪುಟ್ಟ ಮಕ್ಕಳೂ ಇದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ದಯನೀಯ ಸ್ಥಿತಿಯಲ್ಲಿ ಇವರು ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. 8 ತಿಂಗಳು ಮಂಗಳೂರಿನಲ್ಲಿ ಬ್ಯಾಟ್‌ ತಯಾರಿ ಮಾಡಿ ಹೊಟ್ಟೆ ತುಂಬಿಸಿದರೆ, ಉಳಿದ 4 ತಿಂಗಳು ಊರಿಗೆ ಹೋಗುತ್ತಾರೆ. ಇನ್ನು ಕೆಲವೇ ತಿಂಗಳಲ್ಲಿ ಮಳೆ ಸುರಿಯಲು ಆರಂಭವಾದರೆ ಮತ್ತೆ ಬ್ಯಾಟ್ ಮಾರಾಟವಿಲ್ಲ. ಊರಿನಲ್ಲೂ ಇರುವುದು ಕೇವಲ ಮನೆ ಮಾತ್ರ. ಅಲ್ಲಿ ಹೋದರೂ ನಮ್ಮದು ದಯನೀಯ ಸ್ಥಿತಿ ಅನ್ನುತ್ತಾರವರು..

    ಸ್ವಾಭಿಮಾನದ ಬದುಕು ಕಟ್ಟಿಕೊಂಡು ಯಾರದೇ ಹಂಗಿಲ್ಲದೇ ತಮ್ಮ ಕೌಶಲ್ಯದ ಮೂಲಕ ಭಿನ್ನ, ವಿಭಿನ್ನ ಮಾದರಿ ಬ್ಯಾಟುಗಳನ್ನು ತಯಾರಿಸಿ ಪುಟ್ಟ ಮಕ್ಕಳ ಕ್ರಿಕೆಟ್‌ ಆಟಕ್ಕೆ ಸ್ಪೂರ್ತಿ ನೀಡುವ ಇವರ ಅಳಲಿಗೂ ನಾವು ದನಿಯಾಗಬೇಕಾಗಿದೆ. ಸಹೃದಯ ದಾನಿಗಳು ಇವರ ನೆರವಿಗೆ ಮುಂದಾಗಬೇಕಾಗಿದೆ ಅನ್ನೋದೇ ನಮ್ಮ ಕುಡ್ಲ ವಾಹಿನಿಯ ಕಳಕಳಿ.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಹಳ್ಳ ಹಿಡಿದ ಸ್ಮಾರ್ಟ್‌ ಸಿಟಿಯ ಕಾಮಗಾರಿ; ಕುಂಟುತ್ತಾ ಸಾಗಿದ ಮಹಾಕಾಳಿ ಪಡ್ಪು ಅಂಡರ್ ಪಾಸ್

    Published

    on

    ಮಂಗಳೂರು: ಮಂಗಳೂರು ಸ್ಮಾರ್ಟ್‌ ಸಿಟಿ ಯೋಜನೆಯಲ್ಲಿ ಕೈಗೆತ್ತಿಕೊಂಡಿರುವ ಮಹಾಕಾಳಿ ಪಡ್ಪುವಿನ ರೈಲ್ವೇ ಅಂಡರ್‌ ಪಾಸ್‌ ಕಾಮಗಾರಿ ಸದ್ಯಕ್ಕಂತು ಮುಗಿಯುವ ಲಕ್ಷಣ ಕಾಣಿಸುತ್ತಿಲ್ಲ. ಈ ಕಾಮಗಾರಿ ಕೈಗೆತ್ತಿಕೊಂಡು ವರ್ಷಗಳೇ ಕಳೆದರೂ ಕಾಮಗಾರಿ ಮುಗಿಸಬೇಕು ಅನ್ನೋ ಇಚ್ಚೆ ಸ್ಮಾರ್ಟ್‌ ಸಿಟಿ ಯೋಜನೆಯವರಿಗೂ ಇದ್ದಂತಿಲ್ಲ.

    ಕೆಲ ತಿಂಗಳ ಹಿಂದೆ ಕಳಪೆ ಕಾಮಗಾರಿಯಿಂದಾಗಿ ಇಲ್ಲಿ ಕಾಮಗಾರಿ ಕುಸಿತ ಕೂಡಾ ಉಂಟಾಗಿತ್ತು. ಇದೀಗ ಕೆಲ ದಿನಗಳಿಂದ ಯಾವುದೇ ಕಾಮಗಾರಿ ನಡೆಸದೆ ಕಾರ್ಮಿಕರು ಕೂಡಾ ಕೆಲಸ ಇಲ್ಲದೆ ಸುಮ್ಮನೆ ಕುಳಿತಿರುವ ದೃಶ್ಯ ಇಲ್ಲಿ ಮಾಮೂಲಾಗಿದೆ. ಮಾರ್ಗನ್‌ ಗೇಟ್ ಮೂಲಕವಾಗಿ ಜೆಪ್ಪಿನ ಮೊಗೆರು ಹೈವೆ ಸಂಪರ್ಕಿಸುವ ಈ ರಸ್ತೆಯಲ್ಲಿ ನಿತ್ಯ ಸಾವಿರಾರು ವಾಹನಗಳು ಓಡಾಡುತ್ತಿದೆ. ಸದ್ಯ ಈ ಕಾಮಗಾರಿ ಆರಂಭವಾದ ಬಳಿಕ ಇಲ್ಲಿ ದ್ವಿಚಕ್ರ ವಾಹನಕ್ಕಷ್ಟೇ ಓಡಾಡಲು ವ್ಯವಸ್ಥೆ ಮಾಡಲಾಗಿದೆ.

    ಉಪ್ಪಳದಲ್ಲಿ 3.5 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್‌ ವಶ; ಓರ್ವ ಬಂಧನ

    ಹೀಗಾಗಿ ಈ ರಸ್ತೆಯ ಮೂಲಕ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಕಾಮಗಾರಿ ಯಾವಾಗ ಮುಗಿಸ್ತೀರಿ ಅಂತ ಪ್ರಶ್ನೆ ಮಾಡುತ್ತಿದ್ದಾರೆ. ಆದರೆ ಇಲ್ಲಿ ನಡಿಯುತ್ತಿರುವ ಕಾಮಗಾರಿಯ ವೇಗ ನೋಡಿದರೆ ಇದು 2024 ರಲ್ಲಿ ಪೂರ್ಣಗೊಳ್ಳುವ ಯಾವುದೇ ಲಕ್ಷಣ ಇಲ್ಲ ಅನ್ನೋದು ಸ್ಪಷ್ಟವಾಗುತ್ತಿದೆ. ಹೀಗಾಗಿ ತಕ್ಷಣ ಅಂಡರ್ ಪಾಸ್ ಕೆಲಸ ಮಗಿಸಿ ಅಂತ ಜನ ಒತ್ತಾಯಿಸಿದ್ದಾರೆ.

    Continue Reading

    LATEST NEWS

    11 ವರ್ಷದ ಬಾಲಕ ಹೃದಯಘಾ*ತಕ್ಕೆ ಬ*ಲಿ

    Published

    on

    ಹಾಸನ : ಹೃದಯಾಘಾ*ತ ಎಂಬುದು ಇತ್ತೀಚೆಗೆ ಸಾಮಾನ್ಯವಾಗಿದೆ. ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಸಾದವರೂ ಹೃದಯಾ*ಘಾತಕ್ಕೆ ಒಳಗಾಗುತ್ತಿದ್ದಾರೆ. ರಾಜ್ಯದಲ್ಲಿ ಮತ್ತೊಂದು ಕಳವಳಕಾರಿ ಘಟನೆ ನಡೆದಿದ್ದು, 11 ವರ್ಷದ ಬಾಲಕ ಹೃದಯಾ*ಘಾತಕ್ಕೆ ಬ*ಲಿಯಾಗಿದ್ದಾನೆ. ಈ  ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಸಚಿನ್ ಮೃ*ತ ಬಾಲಕ.

    ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ ಸಚಿನ್, ಮನೆಯಲ್ಲಿ ಟಿವಿ ನೋಡುತ್ತಿದ್ದ ವೇಳೆ ಹೃದಯಾ*ಘಾತವಾಗಿದೆ.

    ಇದನ್ನೂ ಓದಿ : ಮನೆಯಲ್ಲಿ ಹಲ್ಲಿ ಕಾಟವೇ? ಈ ಸಿಂಪಲ್​ ಮನೆಮದ್ದು ಟ್ರೈ ಮಾಡಿ

    ಟಿವಿ ನೋಡುತ್ತಲೇ ಕುಸಿ*ದು ಬಿದ್ದ ಮಗನನ್ನು ಮಾತನಾಡಿಸಲು ಮನೆಯವರು ಪ್ರಯತ್ನಿಸಿದ್ದು, ಏನು ಮಾತನಾಡದೆ ಇರೋದನ್ನು ಗಮನಿಸಿ ಪೋಷಕರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಆಲೂಕು ಸರ್ಕಾರಿ ಆಸ್ಪತ್ರೆಗೆ ಕರೆತರುವ ಮುನ್ನವೇ ಬಾಲಕ ಸಾ*ವನ್ನಪ್ಪಿದ್ದ ಎಂದು ವೈದ್ಯರು ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ.

    Continue Reading

    FILM

    ಕನ್ನಡದ ಸೀರಿಯಲ್‌ನಲ್ಲಿ ಮಿಂಚುತ್ತಿರುವ ಉಡುಪಿಯ ಬೆಡಗಿ

    Published

    on

    ಬೆಂಗಳೂರು/ಮಂಗಳೂರು: ಸಿನೆಮಾದಲ್ಲಿ ನಟಿಸಬೇಕು ಅನ್ನೋದು ಎಲ್ಲರ ಕನಸು. ಆದರೆ ಇಲ್ಲೊಬ್ಬಾಕೆ ನಟಿಗೆ ಸೀರಿಯಲ್‌ನಲ್ಲಿ ನಟಿಸಬೇಕು ಎಂಬ ಆಸೆ. ಆದರೆ ಆಕೆಗೆ ಮಾತ್ರ ಮೊದಲು ಒಲಿದು  ಬಂದಿದ್ದು ಸಿನೆಮಾದಲ್ಲಿ ನಟಿಸುವ ಅವಕಾಶ. ಇದೀಗ ಆ ನಟಿ ಸುರ್ವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಅವನು ಮತ್ತು ಶ್ರಾವಣಿ’ ಧಾರವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೌದು, ಈ ಧಾರಾವಾಹಿಯಲ್ಲಿ ಶ್ರಾವಣಿಯಾಗಿ ಕಾಣಿಸಿಕೊಂಡಿರುವ ಇಶಿಕಾ ಶೆಟ್ಟಿಗಾರ್ ಮೂಲತಃ ಉಡುಪಿಯವರಾಗಿದ್ದಾರೆ.

    ಶ್ರಾವಣಿ ಪಾತ್ರದ ಇಶಿಕಾ ಶೆಟ್ಟಿಗಾರ್ ಮೂಲತಃ  ಉಡುಪಿಯವರಾಗಿದ್ದು ಸದ್ಯ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಈಕೆ 9 ನೇ ತರಗತಿಯಲ್ಲಿದ್ದಅಗಲೇ ಸಿನೆಮಾ ನಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಊರ್ವಿ, ಗರುಡ, ಮನದ ಮರೆಯಲಿ ಸೇರಿದಂತೆ ನಾಳ್ಕೈದು ಸಿನೆಮಾಗಳಲ್ಲಿ ನಟಿಸಿದ್ದಾರೆ. ಬಳಿಕ ಕಾನೂನು ಪದವಿ ಮುಗಿಸಿರುವ ಇವರು ಸೀರಿಯಲ್‌ ನಲ್ಲಿ ಆಭಿನಯಿಸುವತ್ತ ಒಲವು ಮಾಡಿದ್ದಾರೆ. ಹೀಗಾಗಿ ಲುಕ್‌ ಟೆಸ್ಟ್ ಕೂಡಾ ಕೊಟ್ಟಿದ್ದಾರೆ.

    ಜಾನಿ ಮಾಸ್ಟರ್ ಪತ್ನಿಗೂ ಬಂತು ಕಂಟಕ..! ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್..!!

    ಇದೇ ವೇಳೆ ‘ಅವನು ಮತ್ತು ಶ್ರಾವಣಿ’ ಧಾರಾವಾಹಿಗೆ ರಿಪ್ಲೇಸ್‌ಮೆಂಟ್‌ ಪಾತ್ರಕ್ಕೆ ಕರೆ ಬರುತ್ತದೆ. ರಿಪ್ಲೇಸ್‌ಮೆಂಟ್‌ ಪಾತ್ರ ಆಗಿದ್ದರಿಂದ ಜನರಿಗೆ ಇಷ್ಟ ಆಗ್ಬೋದಾ ಅನ್ನುವ ಮೈಂಡ್‌ ಸೆಟ್ ನಲ್ಲಿ ಇವರು ಕೊನೆಗೂ ಪಾತ್ರಕ್ಕೆ ಸೈ ಎಂದು ಹೇಳಿದ್ದಾರೆ. ಇದೀಗ ಧಾರಾವಾಹಿ ಮೂಲಕ ಕನ್ನಡಿಗರ ಮನಗೆದ್ದಿದ್ದಾರೆ. ಈ ಧಾರಾವಾಹಿಯಲ್ಲಿ ನಟನೆ ಆರಂಭಿಸಿದ ಮೇಲೆ ಆಫರ್‌ಗಳು ಬರುತ್ತಿದೆ ಎಂದು ಇಶಿಕಾ ಶೆಟ್ಟಿಗಾರ್ ಹೇಳಿದ್ದಾರೆ.

    Continue Reading

    LATEST NEWS

    Trending