Connect with us

    LATEST NEWS

    ಕಿರುತೆರೆ ನಟಿ ಜೊತೆ ದಾಂಪತ್ಯಕ್ಕೆ ಕಾಲಿಡಲಿದ್ದಾರೆ ಕ್ರಿಕೆಟಿಗ ಶುಭ್‌ಮನ್‌ ಗಿಲ್‌..!!

    Published

    on

    ಮುಂಬೈ/ಮಂಗಳೂರು: ಕಿರುತೆರೆ ನಟಿ ರಿಧಿಮಾ ಪಂಡಿತ್‌ ರವರು ಟೀಂ ಇಂಡಿಯಾ ಕ್ರಿಕೆಟಿಗನನ್ನು ವರಿಸಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಡಿದೆ. ಹೌದು, ಟೀಂ ಇಂಡಿಯಾ ಸೆಂಸೇಷನಲ್ ಬಾಯ್‌ ಶುಭ್‌ಮನ್ ಗಿಲ್‌ ಜೊತೆ ಮದುವೆಯಾಗಲಿದ್ದಾರೆ. ಇದೇ 2024ರ ಡಿಸೆಂಬರ್ ನಲ್ಲಿ ಮದುವೆ ಮಂಟಪ ಏರಲಿದ್ದಾರೆ ಎಂಬ ಸುದ್ದಿ ಹರಡಿದೆ.

    ರಿಧಿಮಾ ಬಣ್ಣದ ಲೋಕಕ್ಕೆ ಬಂದು 8 ವರ್ಷಗಳು ಕಳೆದಿವೆ. ‘ಬಹು ಹಮಾರಿ ರಜ್ನಿ ಕಾಂತ್’ ಅವರ ನಟನೆಯ ಮೊದಲ ಧಾರಾವಾಹಿ. ಇದು 2016ರಲ್ಲಿ ಪ್ರಸಾರ ಕಂಡಿತು. ಆ ಬಳಿಕ ಅವರು ಹಲವು ಹಿಂದಿ ಧಾರಾವಾಹಿಯಲ್ಲಿ ನಟಿಸಿದ್ದಾರೆ. ಅವರಿಗೆ ಕೆಲವು ಅವಾರ್ಡ್​ಗಳು ಬಂದಿವೆ. ರಿಧಿಮಾಗೆ 33 ವರ್ಷ ವಯಸ್ಸು. ಶುಭಮನ್‌ ಗೆ 24ವರ್ಷವಾಗಿದ್ದು, ಇವರಿಬ್ಬರ ಮಧ್ಯೆ ಒಂಭತ್ತು ವರ್ಷಗಳ ಅಂತರವಿದೆ.

    ಇನ್ನು ಈ ಬಗ್ಗೆ ರಿಧಿಮಾ ಪ್ರತಿಕ್ರಿಯೆ ನೀಡಿದ್ದು, ಈ ಸುದ್ದಿ ಸುಳ್ಳು ಎಂದು ಹೇಳಿದ್ದಾರೆ. ‘ ನನಗೆ ಮುಂಜಾನೆ ಪತ್ರಕರ್ತರಿಂದ ಫೋನ್‌ಗಳು ಬಂದವು. ನನ್ನ ಮದುವೆ ಕುರಿತಾಗಿ ಪ್ರಶ್ನೆಗಳನ್ನು ಮಾಡಿದ್ರು. ನನ್ನ ಜೀವನದಲ್ಲಿ ಮುಖ್ಯ ಘಟ್ಟವನ್ನು ತಲುಪುವಾಗ ನಾನೇ ತಿಳಿಸುತ್ತೇನೆ’ ಎಂದು ಹೇಳುವ ಮೂಲಕ ಇವರಿಬ್ಬರ ಮದುವೆ ವದಂತಿಯನ್ನು ಅಲ್ಲಗೆಳೆದಿದ್ದಾರೆ.

    ಮುಂದೆ ಓದಿ..; ಟಿ-20 ವಿಶ್ವಕಪ್: ಭಾರತ-ಪಾಕಿಸ್ತಾನ ಪಂದ್ಯಕ್ಕೆ ಉಗ್ರರ ಬೆದರಿಕೆ..!!

    ಆದರೆ ಇದರಿಂದಾಗಿ ಅಭಿಮಾನಿಗಳಂತೂ ನಿಟ್ಟುಸಿರು ಬಿಟ್ಟಿದ್ದಾರೆ. ಈ ಹಿಂದೆ ಮಾಜಿ ಕ್ರಿಕೆಟ್ ಆಡಗಾರ ಸಚಿನ್ ತೆಂಡುಲ್ಕರ್ ಪುತ್ರಿ ಸಾರಾ ತೆಂಡುಲ್ಕರ್ ಜೊತೆ ಶುಭ್‌ಮನ್‌ ಡೇಟಿಂಗ್‌ನಲ್ಲಿದ್ದಾರೆ ಎಂದು ಹೇಳಲಾಗಿತ್ತು. ಹೋಟೆಲ್‌ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಇವರಿಬ್ಬರ ನಡುವೆ ಪ್ರೇಮಾಂಕುರವೂ ಇದೆ ಎಂಬ ಮಾತು ಕೇಳಿ ಬರುತ್ತಿದೆ.  ಈ ಮಧ್ಯೆ ರಿಧಿಮಾ ಜೊತೆ ಶುಭ್‌ಮನ್ ಮದುವೆ ಎಂಬ ವದಂತಿ ಹಬ್ಬಿದ ಬಳಿಕ ಇವರಿಬ್ಬರ ನಡುವೆ ಬ್ರೇಕ್‌ಅಪ್ ಆಯಿತೆ..? ಎಂಬ ಪ್ರಶ್ನೆ  ಎಲ್ಲರಲ್ಲೂ ಮೂಡಿತ್ತು.

    ಶುಭ್‌ಮನ್ ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಲ್ಲಿರುತ್ತಾರೆ. ಈ ಹಿಂದೆ ರಶ್ಮಿಕಾ ಮಂದಣ್ಣ ಮೇಲೆ ಕ್ರಶ್ ಆಗಿದೆ ಎಂದು ಅವರು ಹೆಳಿಕೊಂಡಿದ್ದಾಗಿ ವರದಿಯಾಗಿತ್ತು. ಆ ಬಳಿಕ ಅವರು ಹಾಗೆ ನಾನು ಹೇಳಲಿಲ್ಲ. ಅದು ಸುಳ್ಳು ಎಂದು ಅಲ್ಲಗೆಳೆದಿದ್ದರು.

    1 Comment

    1 Comment

    1. Pingback: ಜೂ. 2 ರಂದು ಜೈಲು ಅಧಿಕಾರಿಗಳ ಮುಂದೆ ಶರಣಾಗುತ್ತೇನೆ : ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ - NAMMAKUDLA NEWS - ನಮ್ಮಕುಡ್ಲ ನ್

    Leave a Reply

    Your email address will not be published. Required fields are marked *

    LATEST NEWS

    ಚಿಕ್ಕ ಪುಟ್ಟ ಮಕ್ಕಳನ್ನು ಕಾಡುತ್ತಿದೆ ವೈರಲ್ ಫಿವರ್..! 200ಕ್ಕೂ ಅಧಿಕ ಮಕ್ಕಳು ಆಸ್ಪತ್ರೆಗೆ

    Published

    on

    ಬಾಗಲಕೋಟೆ/ಮಂಗಳೂರು: ಮಳೆಗಾಲ ಆರಂಭವಾಗುತ್ತಿದ್ದಂತೆ ಖಾಯಿಲೆಗಳು ವಕ್ಕರಿಸಿಕೊಳ್ಳುತ್ತದೆ.  ವಾತಾವರಣ ಹೆಚ್ಚಳದಿಂದ ವೈರಲ್ ಫಿವರ್ ಹಾವಳಿ ಕೂಡಾ ಹೆಚ್ಚಾಗುತ್ತಿದೆ. ಒಂದು ಕಡೆ ಡೆಂಗ್ಯೂ ಆಂತಕವಾದ್ರೆ ಇದೀಗ ವೈರಲ್ ಫಿವರ್ ಕಾಟ ಚಿಕ್ಕ ಪುಟ್ಟ ಮಕ್ಕಳ ಜೀವ ಹಿಂಡುತ್ತಿದೆ.

    ಈ ಮಧ್ಯೆ ಬಾಗಲಕೋಟೆ ಜಿಲ್ಲೆಯ ಆಸ್ಪತ್ರೆಯಲ್ಲಿ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಿದೆ. ಹೌದು, ಜಿಲ್ಲೆಯಲ್ಲಿ ಪುಟಾಣಿ ಮಕ್ಕಳು ವೈರಲ್ ಫೀವರ್‌ನಿಂದ ಬಳಲುತ್ತಿದ್ದಾರೆ. ಶೀತ, ಕೆಮ್ಮು, ನೆಗಡಿ ಹಾಗೂ ಉಸಿರಾಟ ತೊಂದರೆಯಿಂದ ಮಕ್ಕಳು ಹೈರಾಣಾಗುತ್ತಿದ್ದಾರೆ.

    ಡೆಂಗ್ಯೂ ಜ್ವರದಿಂದ ಮಗುವಿನ ಜೀವಾಂ*ತ್ಯ..! ಸರ್ಕಾರಿ ಆಸ್ಪತ್ರೆ ಅಭಿವೃದ್ದಿಗೆ ತಂದೆಯ ಮನವಿ..!

    ಜಿಲ್ಲೆಯಲ್ಲಿ ಪ್ರತಿ ದಿನ 200ಕ್ಕೂ ಅಧಿಕ ಮಕ್ಕಳು ವೈರಲ್ ಫಿವರ್ ಗೆ ತುತ್ತಾಗಿ, ಜಿಲ್ಲೆಯ ಸರಕಾರಿ, ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗುತ್ತಿದ್ದಾರೆ.  ವೈರಲ್ ಫೀವರ್ ಹರಡುವುದರಿಂದ ಪೋಷಕರು ಮಕ್ಕಳ ಬಗ್ಗೆ ಭಯಭೀತರಾಗಿದ್ದಾರೆ. ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ. ಶಾಲೆಗೆ ಕಳುಹಿಸುವುದಕ್ಕಿಂತ ಮನೆಯಲ್ಲಿ ಇರುವುದು ಒಳ್ಳೆಯದು ಅಂತ ಅನ್ನಿಸುತ್ತಿದೆ ಎಂದು ಪೋಷಕರು ಹೇಳುತ್ತಿದ್ದಾರೆ.

    ಇನ್ನು ಮಕ್ಕಳಿಗೆ ಚಳಿಯಾಗದಂತೆ, ಬಿಸಿಲಿಗೆ ಹೆಚ್ಚಾಗಿ ಓಡಾಡದಂತೆ ತಡೆಯಬೇಕು. ಮಕ್ಕಳ ಬಗ್ಗೆ ಹೆಚ್ಚು ಮುಂಜಾಗೃತಾ ಕ್ರಮ ಕೈಗೊಳ್ಳಬೇಕು. ಹಾಗಿದ್ದಲ್ಲಿ ಮಾತ್ರ ವೈರಲ್ ಫೀವರ್ ತಡೆಯಲು ಸಾಧ್ಯ ಎಂದು ವೈದ್ಯರು ಹೇಳಿದ್ದಾರೆ.

    ಒಟ್ಟಿನಲ್ಲಿ ಮಕ್ಕಳು ಮತ್ತು ವೃದ್ಧರು ಈ ವೈರಲ್ ಫೀವರ್‌ಗೆ ಹೈರಾಣಾಗುತ್ತಿದ್ದಾರೆ. ಜ್ವರ ಬರುವ ಮೊದಲೇ ಮುಂಜಾಗೃತಾ ಕ್ರಮ ಕೈಗೊಂಡರೆ ಇದರಿಂದ ಪಾರಾಗಬಹುದಾಗಿದೆ.

    Continue Reading

    DAKSHINA KANNADA

    ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಭೇಟಿ ಮಾಡಿದ ಸಂಸದ ಚೌಟ

    Published

    on

    ಮಂಗಳೂರು : ಕರಾವಳಿ ಕಂಡ ಹಿರಿಯ ಮುತ್ಸದ್ದಿ, ನೇರ ನುಡಿಯ ರಾಜಕಾರಣಿ, ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ತೆರಳಿದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಆಶೀರ್ವಾದ ಪಡೆದು ಪಡೆದು ವಿದ್ಯಮಾನಗಳ ಕುರಿತು ಮಾತನಾಡಿದರು.

    ಬಂಟ್ವಾಳ ಮಂಡಲ ಅಧ್ಯಕ್ಷರಾದ ಚೆನ್ನಪ್ಪ ಕೋಟ್ಯಾನ್, ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ, ಗೋವಿಂದ ಪ್ರಭು, ಜಿಲ್ಲಾ ಉಪಾಧ್ಯಕ್ಷ ದಿನೇಶ್ ಅಮ್ಟೂರು ಮತ್ತು ಜಿಲ್ಲಾ ಮಾಧ್ಯಮ ಸಂಚಾಲಕ ವಸಂತ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

    Continue Reading

    LATEST NEWS

    ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮಾತೃ ವಿಯೋಗ

    Published

    on

    ಕೋಟ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ, ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್ತಿ ವಯೋಸಹಜ ಅಸೌಖ್ಯದಿಂದ ನಿನ್ನೆ(ಜೂ.30) ನಿಧ*ನರಾದರು. ಅವರಿಗೆ 97 ವರ್ಷ ವಯಸ್ಸಾಗಿತ್ತು.

    ಮೃ*ತರು ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಅವರ ನಿಧ*ನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

    ಇದನ್ನೂ ಓದಿ : ‘ಎಲ್ಲಾ ಹಣೆಬರಹ..ನಾವೇನು ಮಾಡೋಕ್ಕಾಗಲ್ಲ…’ ದರ್ಶನ್ ಕೊಲೆ ಪ್ರಕರಣದ ಬಗ್ಗೆ ಶಿವಣ್ಣ ಪ್ರತಿಕ್ರಿಯೆ

    Continue Reading

    LATEST NEWS

    Trending