Connect with us

LATEST NEWS

“ನನ್ನ ಬಗ್ಗೆ ಸುಳ್ಳು ಸುದ್ದಿ ನಂಬಿ ಟೀಕಿಸಿದ್ದ ಮಠಾಧೀಶರು ಮಾಂಸ ತಿಂದು ದೇವಸ್ಥಾನಕ್ಕೆ ಹೋದ ಸಿ.ಟಿ ರವಿ ಬಗ್ಗೆ ಯಾಕೆ ಮೌನ ..!?”

Published

on

ಬೆಂಗಳೂರು: ನಾನು ಮೀನು ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂಬ ನಾಯಕರ ಸುಳ್ಳು ಸುದ್ದಿಯನ್ನು ನಂಬಿ ನನ್ನನ್ನು ಟೀಕಿಸಿದ್ದ ರಾಜ್ಯದ ಕೆಲವು ಮಠಾಧೀಶರು, ಸಿ.ಟಿ.ರವಿ ಅವರು ಮಾಂಸತಿಂದು ದೇವಸ್ಥಾನಕ್ಕೆ ಹೋಗಿರುವ ಬಗ್ಗೆ ಮೌನವಾಗಿರುವುದು ನನಗೆ ಅಚ್ಚರಿ ಉಂಟುಮಾಡಿದೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.


ಈ ಬಗ್ಗೆ ಸುಧೀರ್ಘ ಟ್ವೀಟ್‌ ಮಾಡಿರುವ ಅವರು, ಮಾಂಸ ತಿನ್ನುವುದು ತಿನ್ನದಿರುವುದು, ದೇವಸ್ಥಾನಗಳಿಗೆ ಹೋಗುವುದು ಹೋಗದಿರುವುದು ವೈಯಕ್ತಿಕ ಆಯ್ಕೆಗಳು. ಇದು ರಾಜಕೀಯ ಚರ್ಚೆಯ ವಸ್ತು ಆಗಬಾರದು.

ರಾಜಕೀಯ ನಾಯಕರು ಜನತೆಯ ಕಲ್ಯಾಣ, ರಾಜ್ಯದ ಅಭಿವೃದ್ದಿ ಬಗ್ಗೆ ಚರ್ಚಿಸಬೇಕು. ಪರದೂಷಣೆಯಲ್ಲಿ ನಿರತರಾಗಿರುವ ಸಿ.ಟಿ ರವಿ ಅವರಿಗೆ ದೇವರು ಒಳ್ಳೆಯ ಬುದ್ದಿ ಕೊಡಲಿ.
ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿರುವ ವಿಡಿಯೋ ಜಗತ್ತಿಗೆಲ್ಲ ಸತ್ಯ ಸಾರುತ್ತಿರುವಾಗ “ತಾನು ತಿಂದದ್ದು ನಿಜ, ದೇವಸ್ಥಾನದ ಒಳಪ್ರವೇಶಿಸಿಲ್ಲ, ರಸ್ತೆಯಲ್ಲಿಯೇ ನಿಂತು ಕೈಮುಗಿದಿದ್ದೆ’’ ಎಂಬ ಅವರ ವಾದ, ಸದಾ ಹಸಿಹಸಿ ಸುಳ್ಳು ಹೇಳುವ ಅವರ ಹುಟ್ಟು ಗುಣಕ್ಕೆ ತಕ್ಕ ಹಾಗೆ ಇದೆ.

ನಾನು ಮೀನು ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂಬ ಸುಳ್ಳು ಸುದ್ದಿಯನ್ನೇ ಪ್ರಚಾರ ಮಾಡಿ ನನ್ನನ್ನು ಹಿಂದೂ ವಿರೋಧಿ ಎಂದು ನಾಯಕರು ಪ್ರಚಾರ ಮಾಡಿದ್ದರು.

ಆ ರೀತಿ ಅಪಪ್ರಚಾರ ಮಾಡಿದವರೆಲ್ಲರೂ ಈಗ ಅವರ ಕೃತ್ಯದಿಂದಾಗಿ ತಾವು ಮಾಡಿದ್ದ ವಾಂತಿಯನ್ನು ತಾವೇ ತಿನ್ನುವಂತಾಗಿದೆ ಎಂದು ಟ್ವಿಟ್ಟರ್‌ನಲ್ಲಿ ವಾಗ್ದಾಳಿ ನಡೆಸಿದ್ದಾರೆ.

LATEST NEWS

ಸಾ*ವಿನಲ್ಲಿ ಒಂದಾದ ತಂದೆ ಮಗ.. ತಂದೆಯ ಅಗಲಿಕೆ ನೋವಲ್ಲೇ ಅಸುನೀಗಿದ ಮಗ..!

Published

on

ಕೊಪ್ಪಳ: ಒಂದೇ ದಿನದಲ್ಲಿ ತಂದೆ ಮಗ ಇಬ್ಬರೂ ಸಾವನ್ನಪ್ಪಿದ ಘಟನೆ ಕೊಪ್ಪಳದ ಬಂಡಿಹರ್ಲಾಪುರಾದಲ್ಲಿ ನಡೆದಿದೆ. ತಂದೆಯ ಸಾವಿನ ನೋವಿನಲ್ಲಿ ಮಗ ಕೂಡಾ ಸಾವನ್ನಪ್ಪಿದ್ದಾರೆ. ಮೃ*ತರನ್ನು ರಾಮರೆಡ್ಡಿ (70) ಮತ್ತು ಆದಿನಾರಾಯಣ ರೆಡ್ಡಿ (42) ಎಂದು ಗುರುತಿಸಲಾಗಿದೆ.

death

ಮುಂದೆ ಓದಿ..; ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀರ

ರಾಮರೆಡ್ಡಿ ಅನಾರೋಗ್ಯದಿಂದ ಬಳಲುತ್ತಿದ್ದು, ನಿನ್ನೆ(ಎ.28) ಬೆಳಿಗ್ಗೆ ಮೃತಪಟ್ಟಿದ್ದರು. ಅದೇ ದಿನ ರಾತ್ರಿ 8.30ಕ್ಕೆ ಮಗ ಆದಿನಾರಾಯಣ ರೆಡ್ಡಿ ಕೂಡ ಪ್ರಾಣ ಬಿಟ್ಟಿದ್ದಾರೆ. ಆದಿನಾರಾಯಣ ತಂದೆಯನ್ನು ಬಹಳ ಪ್ರೀತಿಸುತ್ತಿದ್ದು, ತಂದೆಯ ಸಾವಿನ ದುಃಖದಲ್ಲಿ ಕುಳಿತಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಆದಿನಾರಾಯಣ ರೆಡ್ಡಿ, ಪತ್ನಿ ಹಾಗೂ ತನ್ನೆರಡು ಮಕ್ಕಳನ್ನು ಅಗಲಿದ್ದಾರೆ.

Continue Reading

DAKSHINA KANNADA

ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀ*ರ

Published

on

ಮಂಗಳೂರು: ಬೈಕಂಪಾಡಿ ಹೋಟೆಲ್ ಶ್ರೀ ದ್ವಾರದ ಬಳಿ ಲಾರಿಗಳೆರಡರ ನಡುವೆ ಅಪಘಾತ ಸಂಭವಿಸಿ ಲಾರಿ ಚಾಲಕ ಗಂಭಿರ ಗಾಯಗೊಂಡ ಘಟನೆ ನಡೆದಿದೆ. ಒಂದು ಲಾರಿಯೊಂದು ಗ್ರಾನೈಟ್ ಅಂಗಡಿಯೊಳಗೆ ನುಗ್ಗಿದ್ದು, ಅಪಾರ ಮೌಲ್ಯದ ಗ್ರಾನೈಟ್‌ ಹಾನಿಗೊಂಡಿದೆ.

ಮುಂದೆ ಓದಿ..; ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!

accident

ಲಾರಿ ಸಾಗಾಟ ಮಾಡುತ್ತಿದ್ದ ಲಾರಿ ಅಪಘಾತದಿಂದ ನಜ್ಜುಗುಜ್ಜಾಗಿದೆ. ಇನ್ನು ಇದೇ ಭಾಗದಲ್ಲಿ ನಿತ್ಯವೂ ಮಹಿಳೆಯರು ಮೀನ ಮಾರಾಟ ಮಾಡುತ್ತಿದ್ದರು. ಅದೃಷ್ಟವಶಾತ್ ಇದೀಗ ಭಾರೀ ಅನಾಹುತ ತಪ್ಪಿದೆ.

 

Continue Reading

LATEST NEWS

60ನೇ ವಯಸ್ಸಿಗೆ “ಮಿಸ್ ಯುನಿವರ್ಸ್” ಕಿರೀಟ ಮುಡಿಗೇರಿಸಿಕೊಂಡ ಈಕೆ ಯಾರು ಗೊತ್ತಾ? ಈಕೆಯ ಸೌಂದರ್ಯಕ್ಕೆ ಬೆರಗಾದ್ರು ಜನ..!!

Published

on

ಹೆಚ್ಚಾಗಿ ಮಿಸ್​ ವರ್ಲ್ಡ್​​​, ಮಿಸ್​​ ಯುನಿವರ್ಸ್ ಇನ್ನೂ ಮುಂತಾದ ಸೌಂದರ್ಯ ಸ್ಪರ್ಧೆಯಲ್ಲಿ ಹದಿಹರೆಯದ ಸುಂದರಿಯರೇ ಭಾಗವಹಿಸುತ್ತಾರೆ. ಆದರೆ ಅಲೆಜಾಂಡ್ರಾ ಮಾರಿಸಾ ರೋಡ್ರಿಗಸ್ ಎಂಬ ಮಹಿಳೆ ತನ್ನ 60ನೇ ವಯಸ್ಸಿನಲ್ಲಿ ಮಿಸ್ ಯುನಿವರ್ಸ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾಳೆ.

ವೃತ್ತಿಯಲ್ಲಿ ವಕೀಲ ಮತ್ತು ಪತ್ರಕರ್ತೆಯಾಗಿರೋ ಅಲೆಜಾಂಡ್ರಾ ಅವರು 60ನೇ ವಯಸ್ಸಿನಲ್ಲಿ ಸೌಂದರ್ಯ ಸ್ಪರ್ಧೆಯಲ್ಲಿ ಗೆದ್ದ ಮೊದಲ ಮಹಿಳೆ ಎಂಬ ದಾಖಲೆ ಪಡೆದುಕೊಂಡಿದ್ದಾರೆ. ಅರ್ಜೆಂಟೀನಾದ ಬ್ಯೂನಸ್ ಐರಿಸ್​​ನ ರಾಜಧಾನಿ ಲಾ ಪ್ಲಾಟಾದಲ್ಲಿ ನಡೆದ 2024ರ ಮಿಸ್‌ ಯೂನಿವರ್ಸ್ ಬ್ಯೂನಸ್ ಐರಿಸ್ ಸ್ಪರ್ಧೆಯಲ್ಲಿ ಗೆದ್ದು ಇಡೀ ಜಗತ್ತೆ ತಿರುಗಿ ನೋಡುವಂತೆ ಮಾಡಿದ್ದಾಳೆ.

ಇನ್ನೂ 60ನೇ ವಯಸ್ಸಿನಲ್ಲಿಯೂ ಈಕೆಯ ಸೌಂದರ್ಯ ಕಂಡು ನೆಟ್ಟಿಗರು ಫುಲ್​ ಶಾಕ್​ ಆಗಿದ್ದಾರೆ. ಅನೇಕರು ಆಕೆ ಮಿಸ್​​ ಯುನಿವರ್ಸ್​​ ಕಿರೀಟ ಪಡೆದುಕೊಂಡಿರೋದಕ್ಕೆ ಶುಭಾಶಯ ತಿಳಿಸುತ್ತಿದ್ದು ಇನ್ನೂ ಕೆಲವರು ಕಮೆಂಟ್ಸ್‌ಗಳನ್ನು ಹಾಕುತ್ತಿದ್ದಾರೆ.

Continue Reading

LATEST NEWS

Trending