LATEST NEWS
ಕೋಟ್ಯಾಂತರ ರೂಪಾಯಿ ವಂಚಕ ;ಸಂದೇಶ್ ಶೆಟ್ಟಿ ಬಂಧನ..!
ಕೋಟ್ಯಾಂತರ ರೂಪಾಯಿ ವಂಚಕ ;ಸಂದೇಶ್ ಶೆಟ್ಟಿ ಬಂಧನ..!
ಬೆಂಗಳೂರು: ಕಮಿಷನ್ ಆಮಿಷ ಒಡ್ಡಿ ನೂರಾರು ಮಂದಿಯಿಂದ ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಿಸಿಕೊಂಡು ವಂಚನೆ ಮಾಡಿದ ಆರೋಪಿಯನ್ನು ಸುಬ್ರಹ್ಮಣ್ಯ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.ಮಲ್ಲೇಶ್ವರದ ಬ್ರಿಗೇಡ್ ಗೇಟ್ವೇ ಟ್ರಿಲಿಯನರ್ ಮೈಂಡ್ ವರ್ಲ್ಡ್ ವೆಂಚರ್ ಪ್ರೈ. ಲಿ. ಕಂಪನಿ ಮಾಲೀಕ ಸಂದೇಶ್ ಕುಮಾರ್ ಶೆಟ್ಟಿ (29) ಬಂಧಿತ ಆರೋಪಿಯಾಗಿದ್ದಾನೆ. ಆರೋಪಿಯ ಆಮಿಷಕ್ಕೆ ಒಳಗಾಗಿ ಹೂಡಿಕೆ ಮಾಡಿರುವ ನೂರಾರು ಮಂದಿ ದೂರು ನೀಡುತ್ತಿದ್ದು, 20 ಪ್ರಕರಣಗಳು ದಾಖಲಾಗಿವೆ. ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕುಂದಾಪುರ ಮೂಲದ ಸಂದೇಶ್, 2018ರ ಜುಲೈನಲ್ಲಿ ಬ್ರಿಗೇಡ್ ಗೇಟ್ವೇನಲ್ಲಿ ಕಚೇರಿ ತೆರೆದು ಚೈನ್ಲಿಂಕ್ ಬಿಸಿನೆಸ್ ಆರಂಭಿಸಿದ್ದ. ವಿದ್ಯಾರ್ಥಿಗಳು ಮತ್ತು ಯುವಕರನ್ನೇ ಟಾರ್ಗೆಟ್ ಮಾಡಿದ್ದ ಆರೋಪಿ ಮೊದಲು 15 ಸಾವಿರ ರೂ. ಹೂಡಿಕೆ ಮಾಡಿ ಸದಸ್ಯತ್ವ ಪಡೆದರೆ ಆ ಹಣಕ್ಕೆ ಬಟ್ಟೆ, ತೂಕ ಇಳಿಸುವ ಪೌಡರ್, ಸೌಂದರ್ಯವರ್ಧಕ ಸೇರಿ ಇನ್ನಿತರ ವಸ್ತುಗಳನ್ನು ಕೊಡುವುದಾಗಿ ಆಮಿಷವೊಡ್ಡಿದ್ದ. ಪಾರ್ಟ್ ಟೈಮ್ ಕೆಲಸದ ಆಸೆಯಿಂದ ವಿದ್ಯಾರ್ಥಿಗಳು 15 ಸಾವಿರ ರೂಪಾಯಿ ಹೂಡಿಕೆ ಮಾಡಿದ್ದರು. ಇದಾದ ಮೇಲೆ ಪ್ರವಾಸ ಪ್ಯಾಕೇಜ್, ಶಿಕ್ಷಣ ಅವಧಿ ಆಸೆ ತೋರಿಸಿ ಮತ್ತೆ 18 ಸಾವಿರ ರೂ. ಹೂಡಿಕೆ ಮಾಡಿ ಎಡ-ಬಲ ಸದಸ್ಯರನ್ನು ಕರೆತಂದರೆ ಹೆಚ್ಚಿನ ಕಮಿಷನ್ ಮತ್ತು ವಸ್ತುಗಳು ಸಿಗಲಿವೆ. ಕೈತುಂಬ ಹಣದ ಪ್ರವಾಸವೂ ಹೋಗಬಹುದು ಎಂದು ಹೇಳಿದ್ದ.
ನಂಬಿದ ನೂರಾರು ಮಂದಿ ತಾವು ಹೂಡಿಕೆ ಮಾಡಿದ್ದಲ್ಲದೆ ಸ್ನೇಹಿತರು, ಕುಟುಂಬ ಸದಸ್ಯರ ಹೆಸರಿನಲ್ಲಿಯೂ ಸಾವಿರಾರು ರೂಪಾಯಿ ಹಣ ತೊಡಗಿಸಿದ್ದರು.
ತನ್ನ ಸಹಚರರಿಗೆ ಬೆಲೆ ಬಾಳುವ ವಸ್ತುಗಳು ಮತ್ತು ಕಮಿಷನ್ ಹಣ ಕೊಟ್ಟು ಇತರರನ್ನು ನಂಬಿಸಿದ್ದ. ಬ್ರಿಗೇಡ್ ಗೇಟ್ವೇಗೆ ಸೇರಿದ ವರ್ಲ್ಡ್ ಟ್ರೇಡ್ ಸೆಂಟರ್ನ 22ನೇ ಮಹಡಿಯಲ್ಲಿ ಟ್ರಿಲಿಯನರ್ ಮೈಂಡ್ ವರ್ಲ್ಡ್ ವೆಂಚರ್ ಪ್ರೈ.ಲಿ. ಕಂಪನಿ ತೆರೆದಿದ್ದ. ಹೂಡಿಕೆದಾರರು ಮತ್ತು ಆಸಕ್ತಿ ಇರುವರರ ಮೀಟಿಂಗ್ ಕರೆದು ಟಿವಿ ಪರದೆ ಮೇಲೆ ಬಣ್ಣಬಣ್ಣದ ಆಸೆ ತೋರಿಸುತ್ತಿದ್ದ.
ಕೇವಲ 15 ಸಾವಿರ ರೂ. ಹೂಡಿಕೆ ಮಾಡಿ ಎಡ-ಬಲ ಸದಸ್ಯರನ್ನು ಮಾಡಿದರೆ ಕೂತಲ್ಲೇ ಲಕ್ಷಾಂತರ ರೂ. ಸಂಪಾದನೆ ಮಾಡಬಹುದು ಎಂದು ಟ್ರಿಲಿಯನ್ ಆಸೆ ತೋರಿಸುತ್ತಿದ್ದ..
ನಕಲಿ ವಸ್ತುಗಳ ಮಾರಾಟ: ಹೂಡಿಕೆದಾರರಿಗೆ ಬಟ್ಟೆ, ಪಾನೀಯಗಳು, ಸೌಂದರ್ಯವರ್ಧಕ ಮತ್ತು ವ್ಯಾಯಾಮ ಉಪಕರಣಗಳನ್ನು ಕೊಡುತ್ತಿದ್ದ.ಆದರೆ ಯಾವುದೇ ವಸ್ತುಗಳು ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದಿರಲಿಲ್ಲ. ಕಳಪೆ ಮತ್ತು ನಕಲಿ ವಸ್ತುಗಳು ಆಗಿದ್ದವು.ಈ ಬಗ್ಗೆ ಪ್ರಶ್ನೆ ಮಾಡಿದಾಗ ಜಾಹೀರಾತು ನೀಡಿದರೆ ವಸ್ತುಗಳ ಬೆಲೆ ಹೆಚ್ಚಾಗುತ್ತವೆ. ಬದಲಿಗೆ ಸದಸ್ಯತ್ವ ಪಡೆದಿರುವವರೇ ಚೈನ್ ಲಿಂಕ್ನಲ್ಲಿ ವಸ್ತುಗಳನ್ನು ಮಾರಾಟ ಮಾಡಿದರೆ ಕಮಿಷನ್ ಸಿಗುತ್ತದೆ ಎಂದು ಆಸೆ ಹುಟ್ಟಿಸುತ್ತಿದ್ದ.
LATEST NEWS
ಕೇರಳದಲ್ಲಿ ಬಹಿರಂಗವಾಗಿ ಕಾಣಿಸಿದ ನಕ್ಸಲರ ತಂಡ; ಚುನಾವಣೆ ಬಹಿಷ್ಕಾರಕ್ಕೆ ಕರೆ
ಕೇರಳ : ವಯನಾಡು ಜಿಲ್ಲೆಯ ಕಂಬಮಲೆ ಅರಣ್ಯ ಹಾಗೂ ಮಕ್ಕಿಮಲೆ ಅರಣ್ಯದಲ್ಲಿ ನಕ್ಸಲರು ಇದ್ದಾರೆ ಅನ್ನೋ ಅನುಮಾನ ಬಲವಾಗಿತ್ತು. ಹೀಗಾಗಿ ಕೇರಳದ ನಕ್ಸಲ್ ನಿಗ್ರಹ ತಂಡ ನಿರಂತರ ಕೂಂಬಿಂಗ್ ನಡೆಸಿತ್ತು. ಆದ್ರೆ, ನಕ್ಸಲರ ಸುಳಿವು ಪತ್ತೆಯಾಗದ ಕಾರಣ ಕೂಂಬಿಂಗ್ ನಿಲ್ಲಿಸಲಾಗಿತ್ತು. ಆದ್ರೆ, ಇದೀಗ ಲೋಕಸಭಾ ಚುನಾವಣೆ ವೇಳೆ ಮತ್ತೆ ನಕ್ಸಲರು ಗ್ರಾಮದಲ್ಲಿ ಕಾಣಿಸಿಕೊಂಡಿದ್ದಾರೆ.
ಚುನಾವಣೆ ಬಹಿಷ್ಕರಿಸಲು ಸೂಚನೆ :
ಮಾವೋವಿಸ್ಟ್ ಜಿಂದಾಬಾದ್ ಎಂಬ ಘೋಷಣೆ ಕೂಗಿ ಗ್ರಾಮಕ್ಕೆ ಎಂಟ್ರಿ ಕೊಟ್ಟು ನಾಲ್ವರ ತಂಡ ಚುನಾವಣೆಗೆ ಬಹಿಷ್ಕಾರ ಮಾಡುವಂತೆ ಕರೆ ನೀಡಿದ್ದಾರೆ. ಗ್ರಾಮಸ್ಥರ ಜೊತೆ ಮಾತನಾಡಿ ಕಳೆದ ನಲುವತ್ತು ವರ್ಷದಿಂದ ಕಂಬಮಲೆ ಅರಣ್ಯ ತಪ್ಪಲಿನ ಜನರ ಸಮಸ್ಯೆಯನ್ನು ಸರ್ಕಾರ ಗಮನಿಸಿಲ್ಲ. ಇಲ್ಲಿ ವಾಸವಾಗಿರುವ ಕೂಲಿ ಕಾರ್ಮಿಕರ ಕಷ್ಟ ಸರ್ಕಾರ ಅರ್ಥ ಮಾಡಿಕೊಂಡಿಲ್ಲ. ಹೀಗಾಗಿ ಎಲ್ಲರೂ ಚುನಾವಣೆ ಬಹಿಷ್ಕಾರ ಮಾಡಿ ಎಂದು ಕರೆ ನೀಡಿದ್ದಾರೆ.
ಈ ತಂಡದಲ್ಲಿ ಕೇರಳ ರಾಜ್ಯಕ್ಕೆ ಬಹಳಷ್ಟು ವರ್ಷಗಳಿಂದ ತಲೆ ಮರೆಸಿಕೊಂಡಿರುವ ನಕ್ಸಲರು ಇದ್ದರು ಅನ್ನೋ ಮಾಹಿತಿಯನ್ನು ಸ್ಥಳೀಯರು ನೀಡಿದ್ದಾರೆ. ಕಂಬಮಲೆ ಎಂಬ ಪ್ರದೇಶದಲ್ಲಿ ಟೀ ಎಸ್ಟೇಟ್ ಇದ್ದು, ಇಲ್ಲಿನ ಕೂಲಿ ಕಾರ್ಮಿಕರ ಜೊತೆ ನಕ್ಸಲರು ಮಾತುಕತೆ ನಡಿಸಿದ ವಿಡಿಯೋ ಈಗ ಪೊಲೀಸರಿಗೆ ಲಭ್ಯವಾಗಿದೆ.
ಇದನ್ನೂ ಓದಿ : ಖತರ್ನಾಕ್ ಕಳ್ಳನನ್ನು ಬಂಧಿಸಿದ ಕೋಟ ಪೊಲೀಸರು; ‘ನನ್ನ ಬಗ್ಗೆ ಮಾಹಿತಿ ಬೇಕಾದ್ರೆ ಯೂಟ್ಯೂಬ್ ನೋಡಿ’ ಎಂದ ಖದೀಮ!
ವಿಡಿಯೋ ಮಾಡುತ್ತಿರುವುದು ಗಮನಕ್ಕೆ ಬಂದರೂ ಏನೂ ಮಾತನಾಡದೆ ಶಸಸ್ತ್ರರಾಗಿದ್ದ ನಕ್ಸಲರು ಮಕ್ಕಿಮಲೆ ಕಾಡಿನೊಳಗೆ ಹೋಗಿ ಕಣ್ಮರೆ ಆಗಿದ್ದಾರೆ.
bangalore
ರಾಜ್ಯದ ಎಂಟು ಜಿಲ್ಲೆಗಳಲ್ಲಿ ಮಳೆಯಾಗಲಿದೆ: ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು : ಬಿಸಿಲಿನ ಉರಿಗೆ ಜನರು ಬೆಂದು ಹೋಗಿದ್ದಾರೆ. ವರುಣ ಕೃಪೆ ತೋರಯ್ಯ ಎಂದು ಬೇಡಿಕೊಳ್ಳುತ್ತಿದ್ದಾರೆ. ಈ ನಡುವೆ ಅಲ್ಲಲ್ಲಿ ಮಳೆಯಾಗಿದ್ರೂ ಸೂರ್ಯ ತಾಪವೇನೂ ಕಮ್ಮಿಯಾಗಿಲ್ಲ. ಇದೀಗ 8 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಎಲ್ಲೆಲ್ಲಿ ಮಳೆ ?
ರಾಜ್ಯದ ಜನತೆ ಮಳೆರಾಯನಿಗಾಗಿ ಕಾಯುತ್ತಿದ್ದಾರೆ. ಹವಾಮಾನ ಇಲಾಖೆ ಕೆಲವು ಜಿಲ್ಲೆಗಳಿಗೆ ಶುಭ ಸುದ್ದಿ ನೀಡಿದೆ. ಏಪ್ರಿಲ್ 24ರಂದು ಬಾಗಲಕೋಟೆ, ಬೆಳಗಾವಿ, ಬೀದರ್, ಮೈಸೂರು, ಕೊಡಗು, ಹಾಸನ ಸೇರಿ 8 ಜಿಲ್ಲೆಗಳಲ್ಲಿ ಕೆಲವೆಡೆ ಮಳೆ ಬೀಳಬಹುದು ಎಂದು ಹೇಳಿದೆ.
ತಾಪಮಾನ ಹೆಚ್ಚಳ :
ಭಾರತೀಯ ಹವಾಮಾನ ಇಲಾಖೆ ದೇಶದ ಹಲವು ಭಾಗಗಳಲ್ಲಿ ಬಿಸಿಲಿನ ತಾಪ ತೀವ್ರವಾಗಲಿದೆ ಎಂದು ಕೂಡ ಮಾಹಿತಿ ನಡಿದೆ. ಅದರಲ್ಲೂ ಪೂರ್ವ ಮತ್ತು ದಕ್ಷಿಣ ಭಾರತದ ಹೆಚ್ಚಿನ ಭಾಗಗಳಲ್ಲಿ ಶಾಖದ ಅಲೆಗಳು ಹೆಚ್ಚಲಿವೆ ಎಂದಿದೆ. ಏಪ್ರಿಲ್ 25 ರ ವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಏಪ್ರಿಲ್ 27 ರ ವರೆಗೆ ಈ ಪ್ರದೇಶಗಳಲ್ಲಿ ಉಷ್ಣಾಂಶ 2 ರಿಂದ 2 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ : ಖತರ್ನಾಕ್ ಕಳ್ಳನನ್ನು ಬಂಧಿಸಿದ ಕೋಟ ಪೊಲೀಸರು; ‘ನನ್ನ ಬಗ್ಗೆ ಮಾಹಿತಿ ಬೇಕಾದ್ರೆ ಯೂಟ್ಯೂಬ್ ನೋಡಿ’ ಎಂದ ಖದೀಮ!
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಏಪ್ರಿಲ್ 6 ರಂದು ರಾಜಧಾನಿಯಲ್ಲಿ ಗರಿಷ್ಠ 37.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದು ಎಂಟು ವರ್ಷಗಳಲ್ಲಿ ಅತಿ ಹೆಚ್ಚು ಎಂದು ವರದಿಯಾಗಿದೆ.
ಮುಂದಿನವಾರ ನಗರದಲ್ಲಿ ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
LATEST NEWS
ಖತರ್ನಾಕ್ ಕಳ್ಳನನ್ನು ಬಂಧಿಸಿದ ಕೋಟ ಪೊಲೀಸರು; ‘ನನ್ನ ಬಗ್ಗೆ ಮಾಹಿತಿ ಬೇಕಾದ್ರೆ ಯೂಟ್ಯೂಬ್ ನೋಡಿ’ ಎಂದ ಖದೀಮ!
ಕೋಟ : ಈತ ಅಂತಿಂಥ ಕಳ್ಳನಲ್ಲ..ಖತರ್ನಾಕ್ ಕಳ್ಳ! ಇತ್ತೀಚೆಗೆ ಕೇರಳದಿಂದ ಭಾರೀ ಮೊತ್ತದ ಚಿನ್ನಾಭರಣವನ್ನು ಕಳ್ಳತನ ಮಾಡಿ ಬಿಹಾರಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಉಡುಪಿ ಜಿಲ್ಲೆಯ ಕೋಟ ಪೊಲೀಸರ ಅತಿಥಿಯಾಗಿದ್ದಾನೆ. ಬಿಹಾರ ಮೂಲದ ಮಹಮ್ಮದ್ ಇರ್ಫಾನ್ ಬಂಧಿತ ಆರೋಪಿ. ಬ್ರಹ್ಮಾವರ ತಾಲೂಕು ಕೋಟ ಮೂರ್ಕೈನಲ್ಲಿ ಶನಿವಾರ ರಾತ್ರಿ ಕೋಟ ಪೊಲೀಸರು ನಡೆಸಿದ ಕಾರ್ಯಾಚರಣೆ ಸಂದರ್ಭ ಈತ ಬಲೆಗೆ ಬಿದ್ದಿದ್ದಾನೆ. ವಿಚಾರಣೆ ವೇಳೆ ಈತನ ಕರಾಮತ್ತು ಕೇಳಿ ಪೊಲೀಸರೇ ಶಾಕ್ ಗೊಳಗಾಗಿದ್ದಾರೆ.
‘ಕೋಟಿ’ ಮೇಲೆ ಕಣ್ಣು:
ಇರ್ಫಾನ್ ಸಾಮಾನ್ಯ ಕಳ್ಳನಲ್ಲ. ಈತನ ವಿರುದ್ಧ 13 ರಾಜ್ಯಗಳಲ್ಲಿ ಹಲವಾರು ಕಳ್ಳತನ ಆರೋಪಗಳಿವೆ. ಇದರ ಜತೆಗೆ ಹಲವಾರು ಕುತೂಹಲಕಾರಿ ವಿಷಯಗಳು ಹೊರಬಿದ್ದಿವೆ. ಈತ ಈಗಾಗಲೇ ಹಲವು ಬಾರಿ ಪೊಲೀಸರ ಅತಿಥಿಯಾಗಿದ್ದು, ಸಿನಿಮಾ ನಟರು, ರಾಜಕಾರಣಿಗಳು, ಗುತ್ತಿಗೆದಾರರು ಸೇರಿದಂತೆ ಅತ್ಯಂತ ಶ್ರೀಮಂತರ ಮನೆಗಳನ್ನೇ ಹೊಂಚುಹಾಕಿ ಕಳ್ಳತನ ಮಾಡುತ್ತಿದ್ದ.
ಒಮ್ಮೆ ಕಣ್ಣಿಟ್ಟರೆ ಸಾಕು! ಎಷ್ಟೇ ದಿನಗಳಾದರೂ ಕಾದು ತನ್ನ ಕೈಚಳಕ ತೋರುತ್ತಿದ್ದ. ಹೆಚ್ಚಿನ ಬಾರಿ ಓರ್ವನೇ ಪ್ರಕರಣದಲ್ಲಿ ಭಾಗಿಯಾಗುತ್ತಿದ್ದ ಹಾಗೂ ಪ್ರತಿ ಬಾರಿಯೂ ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣಗಳನ್ನೇ ಲಪಟಾಯಿಸುತ್ತಿದ್ದ ಎಂದು ತಿಳಿದು ಬಂದಿದೆ.
ಇದನ್ನೂ ಓದಿ : ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಬ್ಯಾಗ್ ಪರಿಶೀಲಿಸಿದ ಕಸ್ಟಮ್ಸ್ ಅಧಿಕಾರಿಗಳಿಗೆ ಶಾಕ್; ಅದರಲ್ಲಿತ್ತು 10 ಅನಕೊಂಡಾ!
‘ನನ್ನ ಬಗ್ಗೆ ಯೂಟ್ಯೂಬ್ ನೋಡಿ’ ಎಂದ ಖದೀಮ :
ಕೋಟ್ಯಂತರ ರೂಪಾಯಿ ಕಳವುಗೈದು ಬಂಧಿಸಲ್ಪಟ್ಟ ಇರ್ಫಾನ್ ವಿಚಾರಣೆಗಿಳಿದ ಪೊಲೀಸರಿಗೆ ಆತನ ಹೇಳಿಕೆ ಅಚ್ಚರಿ ಹುಟ್ಟಿಸಿತ್ತು. ‘ ನನ್ನ ಬಗ್ಗೆ ಮಾಹಿತಿ ಬೇಕಾದರೆ ಯೂಟ್ಯೂಬ್ನಲ್ಲಿ ಮಹಮ್ಮದ್ ಇರ್ಫಾನ್ ರೋಬಿನ್ಹುಡ್ ಎಂದು ಸರ್ಚ್ ಮಾಡಿ’ ಎಂದಿದ್ದನಂತೆ ಈ ಖದೀಮ. ಯೂಟ್ಯೂಬ್ನಲ್ಲಿ ಸರ್ಚ್ ಮಾಡಿದಾಗ ಈತನ ಬಗ್ಗೆ ಇರುವ ಹತ್ತಾರು ವೀಡಿಯೋಗಳು ಸಿಕ್ಕಿವೆ. ಅದರಲ್ಲಿ ಕಳ್ಳತನ ಹಾಗೂ ಕೋಟ್ಯಂತರ ರೂ. ಮೊತ್ತವನ್ನು ಜನರಿಗೆ ಹಂಚುವ ಕುರಿತು ವಿಚಾರಗಳಿವೆ. ಇವೆಲ್ಲವನ್ನು ನೋಡಿದ ಪೊಲೀಸರಿಗೆ ಶಾಕ್ ಆಗಿದ್ದು ಸುಳ್ಳಲ್ಲ.