BANTWAL
ಹಸುಗೂಸಿನ ಮೇಲೆ ದಾದಿಯ ಕ್ರೌರ್ಯ…ಬಂಟ್ವಾಳ ಮೂಲದ ಐರಿನ್ ಅರೆಸ್ಟ್.!
ಬಂಟ್ವಾಳ : ಬಂಟ್ವಾಳ ಬಾಂಬಿಲಪದವು ಮೂಲದ ಯಮರೂಪಿ ಮಹಿಳೆಯ ಹೀನಾಯ ಕೃತ್ಯ ಬಯಲಾಗಿದ್ದು ಸಾಹುಕಾರನ ಸೂರನ್ನೇ ಸೂತಕದ ನಿವಾಸ ಮಾಡಲೆತ್ನಿಸಿದ ಸೂಲಗಿತ್ತಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಮುಂಬೈ ಉಪನಗರ ನವಿಮುಂಬಯಿ ವಾಶಿ ಇಲ್ಲಿನ ಮಂಗಳೂರು ಮೂಲದ ಶ್ರೀಮಂತ ಮತ್ತು ಪ್ರತಿಷ್ಠಿತ ಸೆರಾವೋ ಕುಟುಂಬದ ನವದಂಪತಿ ನವಜಾತ ಶಿಶುವೊಂದರ ಆಗಮನದ ನಿರೀಕ್ಷೆಯಲ್ಲಿತ್ತು.
ಅದೂ ಶ್ರೀಮಂತರ ಬಂಗಲೆಯಲ್ಲಿ ಹುಟ್ಟುವ ಮೊದಲಮಗು ಎಂದಾಗ ಆಗುವ ಖುಷಿ ಅಷ್ಟಿಷ್ಟಲ್ಲ.
ಎಲ್ಲರಂತೆ ಇಲ್ಲೂ ಎಲ್ಲರಲ್ಲೂ ಸಂತಸವೇ ಸಂತಸ. ಅಂತೂ ಸಿಸೇರಿಯನ್ ಡೆಲಿವರಿಯೊಂದಿಗೆ ಹೆರಿಗೆ ಮುಗಿಸಿ ತನ್ನ ಬಂಗಲೋ ಮನೆಗೆ ಸ್ಟಾರ್ ಬೇಬಿ ಗಂಡುಮಗು ಜೊತೆ ಆಕೆ ಬಂದದ್ದೂ ಆಯಿತು.
ಪೂರ್ವ ತಯಾರಿಯಂತೆ ಬಾಣಂತಿಯ ಆರೈಕೆಗಾಗಿ ಐರಿನ್ ವಾಸ್ ಅವರನ್ನು ಸೂಲಗತ್ತಿ (ದಾದಿ)ಯ ಸೇವೆಗೆ ನೇಮಕವೂ ಮಾಡಿದ್ದು ಆಕೆಯೂ ಅಲ್ಲಿದ್ದು ತನ್ನ ಬಾಹುಗಳಲ್ಲಿ ಮಗುವನ್ನು ಪಡೆದು ಶಿಶುಪಾಲನಾ ಕೆಲಸ ಆರಂಭಿಸಿದ್ದಾಯಿತು.
ಒಂದುವಾರ ಎಲ್ಲವೂ ಸಂತೋಷಮಯ, ಸುಗಮವಾಗಿ ನಡೆಯಿತು. ವಾರದ ಬಳಿಕ ಮಗು ಏಕಾಏಕಿ ಬಿಕ್ಕಿಬಿಕ್ಕಿ ಅಳುವುದೇ ಅಳುವುದು ಎಂದಾಗ ಮನೆಒಡತಿ (ಅಜ್ಜಿ) ಮಗು ಆಳುತ್ತಿದೆಯೇ..? ಮಗುವಿಗೆ ಗ್ರೈಪ್ ವಾಟರ್ ಕುಡಿಸಿ…. ಅಂದು ಕುಡಿಸಿದರೂ ಮಗು ಇನ್ನಷ್ಟು ಜೋರಾಗಿ ಅಳುತ್ತಿತ್ತು.
ದಿನೇದಿನೇ ಮಗುವಿನ ತಡೆಯಲಾರದ ರೋದನೆ ಕಂಡು ಪಾಲಕರು ಮಗುವನ್ನು ಕುಟುಂಬ ವೈದ್ಯರಲ್ಲಿ ಒಯ್ದರು.
ಮಗುವನ್ನು ತಪಾಸನೆಗೈದ ವೈದ್ಯರು ಮಗುವಿನ ದೇಹ, ಕೈಕಾಲುಗಳಲ್ಲಿ ಹೆಪ್ಪುಗಟ್ಟಿದ ರಕ್ತದ ಕಲೆಗಳು ಮತ್ತು ಊತು ಕೊಂಡಿದ್ದ ಕೈಕಾಲುಗಳನ್ನು ಗಮನಿಸಿದರು.
ಚಿಕಿತ್ಸೆ ನೀಡಿದ ವೈದ್ಯರು ಸೂಲಗಾತಿ ನಡೆಯಲ್ಲಿ ಮೇಲೆ ನಿಗಾ ಇರಿಸುವಂತೆ ಸೂಚಿಸಿದ್ದು ಮನೆಮಾಲೀಕರು ಅಂದೇ ಸಿಸಿಟಿವಿ ಕ್ಯಾಮೆರಾ ಅಳವಡಿಸಿದರು.
ಅಷ್ಟರಲ್ಲೇ ಬಯಲಾಯಿತು ಯಮರೂಪಿ ಬಾಣಂತಿ ಆರೈಕೆ ಆಳಿನ ಕರ್ಮಕಾಂಡ.
ಇದನ್ನು ಕಂಡ ಮನೆಮಂದಿ ಬೆಚ್ಚಿಬಿದ್ದಿದ್ದರು. ಮಹಾರಾಣಿಯಂತೆ ಸೋಫಾದಲ್ಲಿ ಕುಳಿತು ಮಗುವನ್ನು ಮಲಗಿಸುವ ವೇಳೆಗೆ ಮಗು ಮೌನವಾಗಿ ನಿದ್ರಿಸದೇ ಇರುವುದಕ್ಕೆ ಆಟಿಕೆಯ ಮಗು (ಗೊಂಬೆ-ಡಾಲ್) ತರಹ ಮಗುವಿನ ಕೈ, ಕಾಲು, ಕತ್ತು, ತಲೆಯನ್ನು ಯದ್ವಾತದ್ವಾ ಬೆಂಡೆತ್ತಿ ಮಗುವನ್ನು ಉಂಡೆ ತರಹ ಮಾಡಿ ತೀವ್ರವಾಗಿ ಚಿತ್ರಹಿಂಸೆಯನ್ನಿತ್ತು ಮಗುವಿನ ಪ್ರಾಣವನ್ನೇ ಹಿಂಡುತ್ತಾ ತನ್ನ ಕೋಪವನ್ನೆಲ್ಲಾ ಮಗುವಿನಲ್ಲಿ ತೆಗೆಯುತ್ತಿರುವುದು ಗಮನಕ್ಕೆ ಬಂದಿತು.
ಇನ್ನೂ ಕಣ್ಣು ಬಿಡದೆ ಲೋಕ ಕಾಣದ ಮುಗ್ಧ ಹಸುಗೂಸುವಿನ ಸೇವೆ ಮಾಡಬೇಕಿದ್ದ ಐರಿನ್ ಹಸುಳೆಯಲ್ಲಿ ರಾಕ್ಷಸಿ ರೌದ್ರಾವತಾರ ತೋರಿದ ಅಮಾನುಷ ಕೃತ್ಯಗಳೆಲ್ಲವನ್ನೂ ಮನೆಮಂದಿ ಸಿಸಿಟಿವಿ ಕ್ಯಾಮೆರಾ ಮೂಲಕ ಸೆರೆಹಿಡಿದು ಆಕೆಯನ್ನು ರೆಡ್ಹ್ಯಾಂಡ್ ಆಗಿ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಈಕೆಯ ವರ್ತನೆಯಲ್ಲೇ ಸಂಶಯ ವ್ಯಕ್ತಪಡಿಸಿದ್ದ ಫ್ಯಾಮಿಲಿ ಡಾಕ್ಟರ್ ನುಡಿದದ್ದೇ ಸತ್ಯವಾಗಿತ್ತು . ಶಿಶುವಿನ ಸೇವೆಗೈದು ಉಂಡುತಿಂದು ಮಹಾರಾಣಿಯಂತೆ ಮೆರೆಯಬೇಕಾಗಿದ್ದ ಐರಿನ್ ಸದ್ಯ ಪೆಲಿಸರ ಅತಿಥಿ ಆಗಿದ್ದಾಳೆ. ಪ್ರಕರಣದ ಇಡೀ ತನಿಖೆ ನಡೆಸಿದ ವಾಶಿ ಪೊಲೀಸ್ ಠಾಣಾಧಿಕಾರಿ ಸಬ್ ಇನ್ಸ್ಪೆಕ್ಟರ್ ರೇಶ್ಮಾ ಬಿ.ಮೊಮಿನ್ ಪ್ರಕರಣವನ್ನು ದಾಖಲಿಸಿ ನ್ಯಾಯಲಯಕ್ಕೆ ಒಪ್ಪಿಸಿದ್ದರು.
ಪೊಲೀಸ್ ಕಸ್ಟಡಿಯಲ್ಲಿದ್ದ ಐರಿನ್ ವಾಸ್ ಷರತ್ತುಬದ್ಧ ಜಾಮೀನು ಮೇಲೆ ಬಿಡುಗಡೆ ಆಗಿದ್ದಾಳೆ. ಸದ್ಯ ಐರಿನ್ ಮಲಾಡ್ ಅಲ್ಲಿನ ಸಂಬಂಧಿಕರ ಮನೆಯಲ್ಲಿದ್ದು ಷರತ್ತಿನಂತೆ ದಿನಾಲೂ ಠಾಣೆಗೆ ಬಂದು ಹಾಜರಾಗಬೇಕಾಗಿದೆ.
ಸೆರಾವೋ ಕುಟುಂಬದಲ್ಲಿ ಏಳೆಂಟು ಶಿಶುಗಳ ಹಾರೈಕೆ ಮಾಡಿದ್ದವಳು ಮತ್ತೊಂದು ಕಡೆ ಜವಾಬ್ದಾರಿ ವಹಿಸಿದ್ದ ಕಾರಣ ಆಕೆ ಐರಿನ್ಳ ಪರಿಚಯ ಮಾಡಿಸಿದ್ದಳು ಎನ್ನಲಾಗಿದೆ.
ಬಂಟ್ವಾಳ ಅಮ್ಟಾಡಿ ಗ್ರಾಮದ ಬಾಂಬಿಲ ಪದವು ಮೆಕ್ಸಿಮ್ ವಿನ್ಸೆಂಟ್ ಲಾಸ್ರದೋ ಇವರ ಪತ್ನಿ ಆಗಿರುವ ಐರಿನ್ ತಾನೊಬ್ಬ ನಿಪುಣ ಬಾಣಂತಿ ಎಕ್ಸ ಪರ್ಟ್ ಆಗಿದ್ದು ತಿಂಗಳಿಗೆ ಬರೋಬ್ಬರಿ ಐವತ್ತು ಸಾವಿರ ಸಂಬಳಕ್ಕೆ ಒಪ್ಪಿದ್ದಳು.
ಮಿಕ್ಕಿದ್ದು ಬೇರೆ ಜೊತೆಗೆ ಇನ್ನಿತರ ಷರತ್ತುಗಳು ಅನ್ವಯ ಎಂದೆಲ್ಲಾ ಸೇವೆಗೆ ಬದ್ಧವಾಗಿ ಬಂದಿದ್ದಳು. ಈಕೆಗೆ ಬಂಗಲೆಯಲ್ಲೇ ಉಳಕೊಳ್ಳಲು ವ್ಯವಸ್ಥೆಯೂ ಮಾಡಲಾಗಿತ್ತು.
ಈಗ ಪೊಲೀಸರ ಅತಿಥಿಯಾಗಿ ಮಾಡಿದ್ದನ್ನು ಉಣ್ಣು ಮಾರಾಯ ಎಂಬಂತೆ ಮಾಡಿದ ಕರ್ಮಕ್ಕೆ ಶಿಕ್ಷೆ ಅನುಭವಿಸ ಬೇಕಾಗಿದೆ.
BANTWAL
ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.
ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ
ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.
BANTWAL
ಬಂಟ್ವಾಳ : ಬಾವಿಯೊಳಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಸಾ*ವು
ಬಂಟ್ವಾಳ : 30 ಅಡಿ ಇರುವ ಆಳದ ಬಾವಿಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಕೂಲಿ ಕಾರ್ಮಿಕರು ಬಾವಿಯೊಳಗೆ ಆಕ್ಸಿಜನ್ ಸಿಗದೇ ಸಾ*ವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಪಡಿಬಾಗಿಲಿನಲ್ಲಿ ನಡೆದಿದೆ.
ಮೃ*ತರನ್ನು ಪರ್ತಿಪ್ಪಾಡಿ ನಿವಾಸಿ ಇಬ್ರಾಹಿಂ(40) ಹಾಗೂ ಮಲಾರ್ ನಿವಾಸಿ ಆಲಿ (24) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ : ಡಿವೈಡರ್ ಗೆ ಡಿ*ಕ್ಕಿ ಹೊಡೆದ ಬೈಕ್; ಸವಾರ ಸ್ಥಳದಲ್ಲೇ ಸಾ*ವು
ಮೃ*ತ ಇಬ್ರಾಹಿಂ ಎಂಬವರು ಸುಮಾರು 20 ವರ್ಷಗಳಿಂದ ಬಾವಿಗೆ ರಿಂಗ್ ಹಾಕುವಲ್ಲಿ ಪರಿಣಿತರಾಗಿದ್ದರು. ಮೃ*ತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಲಾಗಿದೆ.
BANTWAL
ಪುತ್ತೂರು ಜಾತ್ರೆಯಿಂದ ಹಿಂದಿರುಗುವ ವೇಳೆ ಜವರಾಯನ ಅಟ್ಟಹಾಸ; ಜೀಪ್ ಡಿಕ್ಕಿ; ಬೈಕ್ ಸವಾರ ಸಾ*ವು
ಪುತ್ತೂರು : ಜೀಪೊಂದು ಬೈಕ್ ಗೆ ಡಿ*ಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃ*ತಪಟ್ಟು, ಅವರ ಇಬ್ಬರು ಮಕ್ಕಳು ಗಂಭೀ*ರ ಗಾ*ಯಗೊಂಡ ಘಟನೆ ಬುಧವಾರ ರಾತ್ರಿ ಪುತ್ತೂರು ಸುಬ್ರಹ್ಮಣ್ಯ ರಸ್ತೆಯಲ್ಲಿನ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್ (48) ಮೃ*ತಪಟ್ಟವರು. ಅವರ ಇಬ್ಬರು ಮಕ್ಕಳು ಗಂಭೀ*ರ ಗಾಯಗೊಂಡಿದ್ದು, ಗಾ*ಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲೋಕೇಶ್ ಅವರು ಮಕ್ಕಳೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಜಾತ್ರೆಗೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆಯಲ್ಲಿ ಮುಂಭಾಗದಿಂದ ಆಗಮಿಸಿದ ಜೀಪು ಅವರು ಚಲಾಯಿಸುತ್ತಿದ್ದ ಬೈಕ್ ಗೆ ಡಿ*ಕ್ಕಿಯಾಗಿತ್ತು.
ಇದನ್ನೂ ಓದಿ : ಕರಡಿಗೂ ಕ್ಯಾಪ್ಟನ್ ಗೂ ಫೈಟ್; ಮನೆಯಂಗಳದಲ್ಲೇ ಕಾದಾಟ! ವೀಡಿಯೋ ವೈರಲ್
ಡಿ*ಕ್ಕಿಯ ರಭಸಕ್ಕೆ ಬೈಕ್ ಎರಡು ತುಂಡಾಗಿದೆ. ಸುಮಾರು 50 ಮೀಟರ್ ದೂರದ ತನಕ ಬೈಕನ್ನು ಜೀಪ್ ಎಳೆದುಕೊಂಡು ಹೋಗಿದೆ. ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟ ಲೋಕೇಶ್ ಅವರು ಸ್ಥಳದಲ್ಲಿಯೇ ಸಾ*ವನ್ನಪ್ಪಿದ್ದಾರೆ. ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- DAKSHINA KANNADA7 days ago
“ಸೆಕ್ಸ್” ನನ್ನ ಸಾಮರ್ಥ್ಯದ ರಹಸ್ಯ…! ಮಾಜಿ ಸಂಸದೆಯ ಹೇಳಿಕೆ ವೈರಲ್..!
- DAKSHINA KANNADA7 days ago
ಕೊರಗಜ್ಜನ ಫೋಟೋವನ್ನು ಮನೆಯಲ್ಲಿ ಇಟ್ಟು ಆರಾಧಿಸಬಹುದಾ?
- FILM3 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- LATEST NEWS6 days ago
ಆಲದ ಮರದ ಪೊಟರೆಯಲ್ಲಿ ಪತ್ತೆಯಾಯ್ತು 64 ಲಕ್ಷ ರೂ.!