Connect with us

bengaluru

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿಟಿ ರವಿ ಬಹುತೇಕ ಫಿಕ್ಸ್-ಘೋಷಣೆ ಮಾತ್ರ ಬಾಕಿ..!?

Published

on

ಕರ್ನಾಟಕ ಬಿಜೆಪಿಯಲ್ಲಿ (Karnataka BJP) ಕಳೆದ ಕೆಲ ಸಮಯದಿಂದ ಭಾರೀ ಚರ್ಚೆಯಲ್ಲಿರುವ ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಸ್ಥಾನದ (BJP State President) ಚರ್ಚೆ ಬಹುತೇಕ ಕ್ಲೈಮಾಕ್ಸ್ ಹಂತಕ್ಕೆ ತಲುಪಿದೆ.

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ (Karnataka BJP) ಕಳೆದ ಕೆಲ ಸಮಯದಿಂದ ಭಾರೀ ಚರ್ಚೆಯಲ್ಲಿರುವ ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಸ್ಥಾನದ (BJP State President) ಚರ್ಚೆ ಬಹುತೇಕ ಕ್ಲೈಮಾಕ್ಸ್ ಹಂತಕ್ಕೆ ತಲುಪಿದೆ.

ಕಳೆದ ಕೆಲ ಸಮಯದಿಂದ ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹಲವರ ಹೆಸರು ಮುಂಚೂಣಿಯಲ್ಲಿ ಕೇಳಿ ಬಂದಿದ್ದರೂ ಇದೀಗ ಮಾಜಿ ಶಾಸಕ ಸಿಟಿ ರವಿ (CT Ravi) ಅವರ ಆಯ್ಕೆ ಬಹುತೇಕ ಖಚಿತ ಎನ್ನಲಾಗಿದೆ.

ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ವಿ ಸುನೀಲ್ ಕುಮಾರ್, ಬಸನಗೌಡ ಪಾಟೀಲ್ ಯತ್ನಾಳ್, ವಿ ಸೋಮಣ್ಣ, ಆರ್ ಅಶೋಕ್, ಡಾ ಅಶ್ವತ್ಥ್ ನಾರಾಯಣ್ ಸೇರಿದಂತೆ ಅನೇಕರ ಹೆಸರು ಕೇಳಿ ಬರುತ್ತಿತ್ತು.

ಆದರೆ ಸದ್ಯದ ಟ್ರೆಂಡ್ ಪ್ರಕಾರ ಮಾಜಿ ಶಾಸಕ ಬೆಂಕಿ ಚೆಂಡು ಸಿಟಿ ರವಿ ಅವರನ್ನೇ ರಾಜ್ಯ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಸಾಧ್ಯತೆ ಇದೆ,.

ಇನ್ನೇನು ಘೋಷಣೆ ಮಾತ್ರ ಬಾಕಿ ಇದೆ ಎಂದು ತಿಳಿದು ಬಂದಿದೆ.

ಮಾಜಿ ಶಾಸಕ ಸಿಟಿ ರವಿ ಅವರು ರಾಜ್ಯದಲ್ಲಿ ಪ್ರಬಲ ಸಮುದಾಯ ಎನಿಸಿಕೊಂಡಿರುವ ಒಕ್ಕಲಿಗ ಸಮುದಾಯದ ವ್ಯಕ್ತಿ ಆಗಿರುವುದರಿಂದ ಒಕ್ಕಲಿಗ ಮತಬ್ಯಾಂಕ್‌ಗೆ ಕಣ್ಣು ಹಾಕುವ ನಿಟ್ಟಿನಲ್ಲಿ ಅವರನ್ನೇ ಅಧ್ಯಕ್ಷರನ್ನಾಗಿ ಮಾಡುವ ಸಾಧ್ಯತೆ ಇದೆ.

ಈವರೆಗೆ ಒಕ್ಕಲಿದ ಸಮುದಾಯ ಬಹುದೊಡ್ಡ ಸಂಖ್ಯೆಯಲ್ಲಿ ಜೆಡಿಎಸ್ ಪಕ್ಷವನ್ನು ಕೈ ಹಿಡಿದಿತ್ತು.

ಸದ್ಯ ಡಿಕೆ ಶಿವಕುಮಾರ್ ಅವರು ಕಾಂಗ್ರೆಸ್ ಅಧ್ಯಕ್ಷ ಮತ್ತು ಉಪಮುಖ್ಯಮಂತ್ರಿಯೂ ಆಗಿರುವುದರಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಒಕ್ಕಲಿಗ ಸಮುದಾಯದ ಮತ ಕಾಂಗ್ರೆಸ್ ಪಾಲಾಗುವ ಸಾಧ್ಯತೆ ನಿಚ್ಚಳವಾಗಿರುವುದರಿಂದ ಒಕ್ಕಲಿಗೆ ಮತಬುಟ್ಟಿಗೆ ಕೈ ಹಾಕುವ ನಿಟ್ಟಿನಲ್ಲಿ ಸಿಟಿ ರವಿ ಅವರಿಗೆ ನಾಯಕತ್ವ ನೀಡುವ ಸಾಧ್ಯತೆ ಹೇರಳವಾಗಿದೆ.

bengaluru

ಕಾಂತಾರ ಚಿತ್ರಕ್ಕೆ 1 ವರ್ಷ-ನಾಳೆ ‘ವರಾಹ ರೂಪಂ’ ವಿಡಿಯೋ ಸಾಂಗ್ ರಿಲೀಸ್

Published

on

ಜಗತ್ತೆ ನಿಬ್ಬೆರಗಾಗಿ ನೋಡಿದ ಕಾಂತಾರ ಸಿನೆಮಾ ರಿಲೀಸ್ ಆಗಿ ನಾಳೆಗೆ ಭರ್ತಿ 1 ವರ್ಷ. ಇದೇ ಖುಷಿಯಲ್ಲಿ ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ಹೊಸ ಘೋಷಣೆಯಾಗಿದ್ದು ಸೆ.30ರಂದು ಕಾಂತಾರ ಚಿತ್ರದ ‘ವರಾಹ ರೂಪಂ’ ವಿಡಿಯೋ ಸಾಂಗ್ ರಿಲೀಸ್ ಮಾಡುವ ಪ್ಲಾನ್ ನಡೆಯುತ್ತಿದೆ.

 

ಜಗತ್ತೆ ನಿಬ್ಬೆರಗಾಗಿ ನೋಡಿದ ಕಾಂತಾರ ಸಿನೆಮಾ ರಿಲೀಸ್ ಆಗಿ ನಾಳೆಗೆ ಭರ್ತಿ 1 ವರ್ಷ.

ಇದೇ ಖುಷಿಯಲ್ಲಿ ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ಹೊಸ ಘೋಷಣೆಯಾಗಿದ್ದು ಸೆ.30ರಂದು ಕಾಂತಾರ ಚಿತ್ರದ ‘ವರಾಹ ರೂಪಂ’ ವಿಡಿಯೋ ಸಾಂಗ್ ರಿಲೀಸ್ ಮಾಡುವ ಪ್ಲಾನ್ ನಡೆಯುತ್ತಿದೆ.

ಸಣ್ಣ ಬಜೆಟ್ ನಲ್ಲಿ ಕಾಂತಾರ ಸಿನೆಮಾ ನಿರ್ಮಾಣವಾಗಿದ್ದು ಚಿತ್ರ ಗಳಿಸಿದ್ದು ಮಾತ್ರ ಬರೋಬ್ಬರಿ 400 ಕೋಟಿಗಿಂತಲೂ ಅಧಿಕ ಮೊತ್ತ.

ರಿಷಬ್ ಶೆಟ್ಟಿ, ಸಪ್ತಮಿ ಗೌಡ, ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ ಸೇರಿ ಅನೇಕ ಕಲಾವಿದರು ಕಾಂತಾರ ಚಿತ್ರದಲ್ಲಿ ನಟಿಸಿ ಪ್ರತಿಯೊಬ್ಬ ಸಿನಿ ರಸಿಕರ ಮನದಲ್ಲಿ ಹಚ್ಚೊತ್ತಿದ್ರು.

ನಿರೀಕ್ಷೆಗೂ ಮೀರಿ ನೇಮು-ಫೇಮು ಎಲ್ಲವೂ ಸಿಕ್ಕಿತು.


ಇದೀಗ ಚಿತ್ರ ಬಿಡುಗಡೆಯಾಗಿ ಒಂದು ವರ್ಷ ಆಗಿದೆ. ಈ ಹಿನ್ನಲೆ ನಾಳೆ ಸೆ. 30 ರಂದು ಬೆಳಿಗ್ಗೆ ಕಾಂತಾರ ಚಿತ್ರದಲ್ಲಿ ಭರ್ಜರಿ ಯಶಸ್ಸು ಕಂಡ ‘ವರಾಹ ರೂಪಂ’ ಹಾಡಿನ ವಿಡಿಯೋ ವರ್ಷನ್ ರಿಲೀಸ್ ಆಗಲಿದೆ.

ಈ ಕುರಿತು ಹೊಂಬಾಳೆ ಫಿಲ್ಮ್ಸ್ ಮಾಹಿತಿ ಹಂಚಿಕೊಂಡಿದೆ.

Continue Reading

bangalore

SHOCKING! ಗುರುತೇ ಸಿಗದಷ್ಟು ಬದಲಾದ ‘ಹುಚ್ಚ’ ಖ್ಯಾತಿಯ ನಟಿ ರೇಖಾ …!

Published

on

ಶಾಕಿಂಗ್ ಲುಕ್ ನಲ್ಲಿ ಕಾಣಿಸಿಕೊಂಡ ಕಿಚ್ಚ ಸುದೀಪ್ ಜೊತೆ ‘ಹುಚ್ಚ’ ಚಿತ್ರದಲ್ಲಿ ನಟಿಸಿ ಮನೆ ಮಾತಾಗಿದ್ದ ನಟಿ ರೇಖಾ ವೇದವ್ಯಾಸ್.

 

ಬೆಂಗಳೂರು : ಕಿಚ್ಚ ಸುದೀಪ್ ಜೊತೆ ‘ಹುಚ್ಚ’ ಚಿತ್ರದಲ್ಲಿ ನಟಿಸಿ ಮನೆ ಮಾತಾಗಿದ್ದ ನಟಿ ರೇಖಾ ವೇದವ್ಯಾಸ್ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ.

ಅಷ್ಟೊಂದು ಮುದ್ದು ಮುದ್ದು ಮುಖ, ಹೊಳೆಯುತ್ತಿದ್ದ ಕಣ್ಣು, ಮಿನುಗುತ್ತಿದ್ದ ಕೆನ್ನೆಯನ್ನು ಇಂದಿಗೂ ಅಭಿಮಾನಿಗಳು ನೆನೆಸಿಕೊಳ್ಳುತ್ತಾರೆ.ಆದ್ರೆ ಈಗ ಅದೇ ರೇಖಾ ಗುರುತೆ ಸಿಗದಷ್ಟರ ಮಟ್ಟಿಗೆ ಬದಲಾಗಿ ಹೋಗಿದ್ದಾರೆ.

ಸಣಕಲು ದೇಹ, ಬತ್ತಿದ ಕಣ್ಣುಗಳು, ಬಾಡಿದ ಕೆನ್ನೆಗಳು ರೇಖಾ ಅವರ ನಿಜ ಸ್ವರೂಪವನ್ನೇ ಬದಲಾಯಿಸಿ ಬಿಟ್ಟಿದೆ.

ಒಂದು ಕಾಲದಲ್ಲಿ ಬೆಳ್ಳಿ ತೆರೆಯಲ್ಲಿ ಮಿರ ಮಿರ ಮಿಂಚಿ ಮರೆಯಾಗಿರುವ ನಟಿ ರೇಖಾ ದಿಢೀರನೆ ತೆಲುಗು ಕಿರುತೆರೆ ಕಾರ್ಯಕ್ರಮದಲ್ಲಿ ಪ್ರತ್ಯಕ್ಷ ಆಗಿದ್ದಾರೆ.

ತೆಲುಗಿನ ‘ಶ್ರೀದೇವಿ ಡ್ರಾಮಾ ಕಂಪನಿ’ ಕಾಮಿಡಿ ಶೋಗೆ ಅತಿಥಿಯಾಗಿ ಬಂದಿದ್ದ ರೇಖಾ ಎಲ್ಲರಿಗೂ ಶಾಕ್ ನೀಡಿದ್ದಾರೆ.

ಬೆಂಗಳೂರಿನಲ್ಲಿ ಹುಟ್ಟಿಬೆಳೆದ ರೇಖಾ ಕನ್ನಡದ ‘ಹುಚ್ಚ’ ಚಿತ್ರದಲ್ಲಿ ಮೊದಲಿಗೆ ಆಕೆ ಬಣ್ಣ ಹಚ್ಚಿದ್ದರು.

ಅಲ್ಲಿಂದ ಮುಂದೆ ಕನ್ನಡ ಸಿನಿರಸಿಕರಿಗೆ ‘ಹುಚ್ಚ’ ನಟಿ ರೇಖಾ ಅಂತ್ಲೇ ಪರಿಚಿತರಾದರು.

ಕನ್ನಡ ಜೊತೆ ಜೊತೆಗೆ ತೆಲುಗು, ತಮಿಳು ಸಿನಿಮಾಗಳಲ್ಲಿ ರೇಖಾ ಮಿಂಚಿದರು. ತೆಲುಗಿನಲ್ಲೂ ಆಕೆ ಹಲವು ಹಿಟ್ ಸಿನಿಮಾಗಳಲ್ಲಿ ಮಿಂಚಿದ್ದಾರೆ.

ಕಾಲೇಜು ದಿನಗಳಲ್ಲೇ ಮಾಡೆಲಿಂಗ್ ಆರಂಭಿಸಿದ ಚೆಲುವೆಗೆ ಚಿತ್ರರಂಗಕ್ಕೆ ಬರುವುದು ಕಷ್ಟವಾಗಲಿಲ್ಲ.

‘ಚಿತ್ರ’, ‘ತುಂಟಾಟ’, ‘ಮೋನಲಿಸಾ’, ‘ಚೆಲ್ಲಾಟ’ ಹೀಗೆ ಹಿಟ್ ಸಿನಿಮಾಗಳಲ್ಲಿ ಮಿಂಚಿದರು.

ಬಳಿಕ ತೆಲುಗು, ತಮಿಳು ಸಿನಿಮಾಗಳತ್ತ ಮುಖ ಮಾಡಿದ್ದರು. ಗಣೇಶ್ ಜೋಡಿಯಾಗಿ ‘ಹುಡುಗಾಟ’ ಚಿತ್ರದ ಮೂಲಕ ಮತ್ತೆ ಕನ್ನಡಕ್ಕೆ ಬಂದ ರೇಖಾ ಮತ್ತೊಮ್ಮೆ ಕಮಾಲ್ ಮಾಡಿದರು.

ನಟಿ ರೇಖಾ 2014ರ ನಂತರ ಬೆಳ್ಳಿತೆರೆ ಮೇಲೆ ಕಾಣಿಸಿಕೊಂಡಿಲ್ಲ. ಅವಕಾಶಗಳು ಸಿಕ್ಕಿಲ್ವೋ ಅಥವಾ ಸಿನಿಮಾ ಮೇಲಿನ ಆಸಕ್ತಿ ಕಮ್ಮಿ ಆಯ್ತೋ ಗೊತ್ತಿಲ್ಲ.

ಆದರೆ ಇದ್ದಕ್ಕಿಂದ್ದಂತೆ ಬಿಗ್ ಸ್ಕ್ರೀನ್​ನಿಂದ ಮಾಯವಾಗಿದ್ದ ರೇಖಾ ಸಿನಿಪ್ರೇಮಿಗಳಿಗೆ ಅಪರೂಪದ ತಾರೆಯಾಗಿ ಉಳಿದುಕೊಂಡು ಬಿಟ್ರು.

ಆದಷ್ಟು ಬೇಗ ಕನ್ನಡ ಮುದ್ದು ಮುಖದ ನಟಿ ರೇಖಾ ವೇದವ್ಯಾಸ್ ಗುಣ ಮುಖರಾಗಿ ಮೊದಲಿನ ಮಂದಹಾಸ ಬರಲಿ ಅನ್ನೋದೆ ಅವರ ಅಭಿಮಾನಿಗಳ ಆಸೆ.

 

Continue Reading

bengaluru

ಬೆಂಗಳೂರಿನ ಗೋವರ್ಧನಗಿರಿ ಕ್ಷೇತ್ರದಲ್ಲಿ ಪುತ್ತಿಗೆ ಶ್ರೀಗಳ 50 ನೇ ಚಾತುರ್ಮಾಸ್ಯ ಸಂಭ್ರಮ

Published

on

ಬೆಂಗಳೂರು: ಬೆಂಗಳೂರಿನ ಗೋವರ್ಧನಗಿರಿ ಕ್ಷೇತ್ರದಲ್ಲಿ 78 ದಿನಗಳ ಉಡುಪಿ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥರ 50ನೇ ಚಾತುರ್ಮಾಸ್ಯ ವೈಭವದಿಂದ ಸಮಾಪನಗೊಂಡಿತು.

ಪೂಜ್ಯ ಶ್ರೀಗಳ ಚಾತುರ್ಮಾಸ್ಯ ಕಾರ್ಯದ ನಡುವೆಯೂ ಕೋಟಿ ಕೋಟಿ ಗೀತಾ ಲೇಖನ ಯಜ್ಞದ ಕುರಿತಾಗಿ ವಿಶೇಷ ಕಾರ್ಯಕ್ರಮಗಳು ಬೆಂಗಳೂರಿನ ವಿವಿಧ ಕಡೆಗಳಲ್ಲಿ ಯಶಸ್ವಿಯಾಗಿ ನಡೆಯುತ್ತಿದ್ದು, ಪೂಜ್ಯ ಶ್ರೀಗಳ ದಿವ್ಯ ಉಪಸ್ಥಿತಿಯಲ್ಲಿ ಈ ಚಾತುರ್ಮಾಸ್ಯದ ಸಮಾರೋಪ, ಸನ್ಯಾಸ ಸ್ವೀಕಾರ ಮಾಡಿದ 50 ವರ್ಷದ ಸುವರ್ಣ ಮಹೋತ್ಸವ ಸಂಭ್ರಮದಿಂದ ಜರುಗಿತು.

ವೇದಮಂತ್ರಗಳ ಘೋಷಗಳೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಭಾವೀ ಪರ್ಯಾಯ ಮಠದ ಪುತ್ತಿಗೆ ಮಠದ ಸುಗುಣೇಂದ್ರ ಶ್ರೀಗಳು ಆಶೀರ್ವಚನವನ್ನು ನೀಡಿದರು. ವಿದ್ವಾನ್ ಮಾಲಗಿ ರಾಮಾಚಾರ್ಯರು, ವಿದ್ವಾನ್‌ ಕೇಶವ ಬಾಯಿರಿ ಅವರು ಶ್ರೀಗಳನ್ನು ಮಾಲಾರ್ಪಣೆ ಮಾಡಿದರು.

ರಾಜ್ಯದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಸರಕಾರದ ಪರವಾಗಿ ಶುಭ ಹಾರೈಸಿದರು.

ಅಂತಾರಾಷ್ಟ್ರೀಯ ಮಟ್ಟದಲ್ಲೂ ಸುಗುಣೇಂದ್ರ ಶ್ರೀಗಳು ಅವರು ಪ್ರಸಿದ್ಧಿಯನ್ನು ಮಾಡಿದ್ದಾರೆ. ಧರ್ಮದ ಕೈಂಕರ್ಯವನ್ನು ಮಾಡಿದ್ದಾರೆ. ಇಷ್ಟೊಂದು ದೊಡ್ಡ ಮಟ್ಟದಲ್ಲಿ ಅವರು ಕಾರ್ಯಕ್ರಮ ಮಾಡಿದ್ದಾರೆ ಎಂದು ಅಭಿನಂದಿಸಿದರು.

ನಿಮಿಷದ ಬಳಿಕ  ಖ್ಯಾತ ಚಲನಚಚಿತ್ರ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರು ಮಾತನಾಡಿ, ಇದೊಂದು ಎಲ್ಲರೂ ಸಂಭ್ರಮ ಪಡಬೇಕಾದ ವಿಚಾರವಾಗಿದೆ. ನಮ್ಮ ತಾಯಿ ಉಡುಪಿಯವಾಗಿದ್ದು, ಕೃಷ್ಣ ಮಠ ತುಂಬಾ ಹತ್ತಿರ. ಕೃಷ್ಣನ ಪರವಾಗಿ ಒಂದು ಚಿತ್ರ ಮಾಡಬೇಕೆಂಬ ಆಸೆಯನ್ನು ಶ್ರೀಗಳಲ್ಲಿ ಅರಿಕೆ ಮಾಡಿದ್ದೇನೆ ಎಂದರು.

ಇದೇ ಸಂದರ್ಭ ಶ್ರೀಗಳು ಭಕ್ತರಿಂದ ವಿಶೇಷ ಪೂಜೆಯನ್ನು ನೆರವೇರಿಸಿಕೊಂಡರು.

ಎಲ್ಲಾ ಭಕ್ತರೂ ಸೇರಿ ನನ್ನನ್ನು ಹರಸಿದ್ದೀರಿ. ಶ್ರೀ ಕೃಷ್ಣನ ಪೂಜಾ ಕಾರ್ಯ ಮಾಡಲು ಸಿಕ್ಕಿರುವುದು ಪುಣ್ಯಫಲ. ಭಕ್ತರು ನನಗೆ ಅರ್ಪಣೆ ಮಾಡಿದ ಎಲ್ಲವನ್ನೂ ನಾವು ಶ್ರೀಕೃಷ್ಣನಿಗೆ ಸಮರ್ಪಣೆ ಮಾಡಿದ್ದೇವೆ.

ನೀವು ಕೊಟ್ಟ ಸುವರ್ಣ ಅಭಿಷೇಕ ಸಂಕಲ್ಪ ಮಾಡಿದ ಸುವರ್ಣ ರಥಕ್ಕೆ ಅರ್ಪಣೆ ಮಾಡುತ್ತೇವೆ ಎಂದರು. ಎಲ್ಲಾ ಸಮಿತಿಯ ಭಕ್ತರಿಗೂ ಕೃಷ್ಣ ಭಗವದ್ಗನುಗ್ರಹ ಮಾಡಲಿ ಎಂದು ಹರಸಿದರು.

ಬಳಿಕ ಶ್ರೀಗಳು ಎಲ್ಲರಿಗೂ ಫಲಮಂತ್ರಾಕ್ಷತೆ ನೀಡಿದರು. ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಉಪಕುಲಪತಿ ಡಾ ಎಸ್ ಅಹಲ್ಯ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರದ ಭಕ್ತರಾದ ಮಂಜುನಾಥ ಹೆಗಡೆ, ಹಯಗ್ರೀವ ಆಚಾರ್ಯರು, ಸಮಿತಿ ಸದಸ್ಯ ಯು ಬಿ ವೆಂಕಟೇಶ್‌, ನಮ್ಮ ಕುಡ್ಲ ವಾಹಿನಿ ನಿರ್ದೇಶಕ ಲೀಲಾಕ್ಷ ಕರ್ಕೇರ, ಸಿಒಒ ಕದ್ರಿ ನವನೀತ್‌ ಶೆಟ್ಟಿ ಸಹಿತ ಗಣ್ಯಾತಿಗಣ್ಯರು ಈ ಸಂದರ್ಭ ಉಪಸ್ಥಿತರಿದ್ದರು.

ಜನವರಿ 18ರಿಂದ ಶ್ರೀಗಳ ಪರ್ಯಾಯ ಮಹೋತ್ಸವ ಆರಂಭವಾಗಲಿದೆ.

Continue Reading

LATEST NEWS

Trending