DAKSHINA KANNADA
ಮೇ 16 ಕ್ಕೆ ಕರಾವಳಿಗೆ ಅಪ್ಪಳಿಸಲಿದೆ ತೌಕ್ತೆ ಚಂಡಮಾರುತ : 2-3 ದಿನ ಭಾರೀ ಮಳೆ ಸಾಧ್ಯತೆ..!
ಬೆಂಗಳೂರು : ಮೇ 16 ರಂದು ಕರಾವಳಿಗೆ ತೌಕ್ತೆ ಚಂಡಮಾರುತ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಹೀಗಾಗಿಯೇ ಮಂಗಳೂರಿನಲ್ಲಿ ಕರಾವಳಿ ಕಾವಲುಪಡೆ ಇಂದಿನಿಂದ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಿದೆ.
ಕೊರೋನಾ ಸೋಂಕಿನ 2ನೇ ಅಲೆಯ ಅಬ್ಬರದ ಜೊತೆಗೆ, ಕರ್ನಾಟಕ, ಕೇರಳ, ಲಕ್ಷದ್ವೀಪ, ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಮುಂದಿನ 2-3 ದಿನಗಳಲ್ಲಿ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಕುರಿತಂತೆ ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಭಾರತೀಯ ಹವಾಮಾನ ಇಲಾಖೆ, ಅರಬ್ಬೀ ಸಮುದ್ರದಲ್ಲಿ ಎದ್ದಿರುವಂತ ತೌಕ್ತೆ ಚಂಡಮಾರುತದ ಪರಿಣಾಮದಿಂದಾಗಿ, ಮುಂದಿನ ಎರಡು ಮೂರು ದಿನಗಳು ಮೇ.14,15, 16 ರಂದು ಕೇರಳ, ಲಕ್ಷದ್ವೀಪ ಭಾಗದಲ್ಲಿ ಭಾರೀ ಮಳೆ ಸುರಿಯುವ ಸಂಭವ ಇದೆ ಎಂದು ತಿಳಿಸಿದೆ.
ಮೇ.15ರ ಸುಮಾರಿಗೆ ದಕ್ಷಿಣ ಅರಬ್ಬೀ ಸಮುದ್ರದಲ್ಲಿ ಏಳಿರುವ ತೌಕ್ತೆ ಚಂಡಮಾರುತದ ಪರಿಣಾವಾಗಿ, ಮೇ.16ರ ಸುಮಾರಿಗೆ ಕೇರಳ, ಕರ್ನಾಟಕ, ಲಕ್ಷದ್ವೀಪ, ಗೋವಾ ಹಾಗೂ ಮಹಾರಾಷ್ಟ್ರ ಭಾಗಗಳಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ತಿಳಿಸಿದೆ.
ಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಉತ್ತರ ಕನ್ನಡ, ಚಿತ್ರದುರ್ಗದಲ್ಲಿ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ.
ಕರ್ನಾಟಕ ಮಾತ್ರವಲ್ಲದೆ ನೆರೆಯ ರಾಜ್ಯವಾದ ಕೇರಳ, ಅಸ್ಸಾಂ, ಸಿಕ್ಕಿಂ, ಪಶ್ಚಿಮ ಬಂಗಾಳ, ಮೇಘಾಲಯದಲ್ಲೂ ಮಳೆ ಹೆಚ್ಚಾಗಲಿದೆ. ಜೂನ್ 1ರಂದು ಕೇರಳಕ್ಕೆ ಮಾನ್ಸೂನ್ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೇ 15ರವರೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಬೆಂಗಳೂರಿನಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದ್ದು, ಮೇ 16ರಂದು ಚಂಡಮಾರುತದಿಂದ ಭಾರೀ ಮಳೆ ಉಂಟಾಗಲಿದೆ
DAKSHINA KANNADA
ಮನೆಯೊಳಗೆ ಈ ಪ್ರಾಣಿ ಪಕ್ಷಿಗಳು ಬರಬಾರದಂತೆ, ಯಾವುದು? ಯಾಕೆ ಗೊತ್ತಾ?
ಕಷ್ಟಗಳು ಮನುಷ್ಯನಿಗೆ ಬರದೇ ಮರಕ್ಕೆ ಬರುತ್ತಾ ಎನ್ನುವ ಮಾತಿದೆ. ಹುಟ್ಟಿದ ಪ್ರತಿಯೊಬ್ಬ ಮನುಷ್ಯನು ಕಷ್ಟ ಸುಖ ಎರಡನ್ನು ಸಮಭಾಗವಾಗಿ ಸ್ವೀಕರಿಸಬೇಕು. ಆದರೆ ಜ್ಯೋತಿಷ್ಯದ ಪ್ರಕಾರ ಈ ಪ್ರಾಣಿ ಪಕ್ಷಿಗಳು ಮನೆಯೊಳಗೆ ಬಂದರೆ ಸಂಕಷ್ಟ ಕಟ್ಟಿಟ್ಟ ಬುತ್ತಿ. ಹೀಗಾಗಿ ಈ ಕೆಲವು ಪ್ರಾಣಿ ಹಾಗೂ ಪಕ್ಷಿಗಳು ಮನೆಯನ್ನು ಪ್ರವೇಶಿಸಬಾರದು ಎಂದು ಹೇಳುತ್ತಾರೆ. ಆದರೆ ಇದರಿಂದ ಏನೆಲ್ಲಾ ಸಮಸ್ಯೆಗಳು ಉಂಟಾಗುತ್ತದೆ ಎನ್ನುವುದು ಅನೇಕರಿಗೆ ತಿಳಿದಿಲ್ಲ.
ಏಡಿ : ಏಡಿಯು ಮನೆಯೊಳಗೆ ಪ್ರವೇಶಿಸಿದರೆ ಮನೆಗೆ ಮಾಟ ಮಾಡಿದ್ದಂತೆ ಎನ್ನಲಾಗುತ್ತದೆ. ಇದು ಪ್ರವೇಶಿಸಿದರೆ ಮನೆಯಲ್ಲಿ ಸಂಕಷ್ಟಗಳು ಎದುರಾಗಿ ಮನೆಯೇ ಸರ್ವನಾಶವಾಗುತ್ತದೆ ಎನ್ನಲಾಗುತ್ತದೆ.
ಕಪ್ಪು ಬೆಕ್ಕು : ಕೆಲವೊಮ್ಮೆ ಬೇರೆಯವರ ಮನೆಯ ಬೆಕ್ಕು ಮನೆಗೆ ಬಂದು ಉಳಿಯುತ್ತವೆ. ಆದರೆ ಕಪ್ಪು ಬೆಕ್ಕು ಮನೆಯನ್ನು ಪ್ರವೇಶಿಸುವುದು ಒಳ್ಳೆಯದಲ್ಲ. ಈ ಬೆಕ್ಕು ಅಪಶಕುನವಂತೆ, ಮನೆಗೆ ಬಂದರೆ ಕೆಟ್ಟದಾಗುತ್ತದೆ ಎನ್ನಲಾಗುತ್ತದೆ.
ಉಡ : ಅಪರೂಪವಾಗಿ ಕಾಣಸಿಗುವ ಉಡವನ್ನು ನೋಡುವುದೇ, ಅದರ ಬಗ್ಗೆ ಮಾತನಾದುವುದೇ ಕೆಟ್ಟದಂತೆ. ಈ ಪ್ರಾಣಿಯು ಅನಿಷ್ಟವಂತೆ, ಹೀಗಾಗಿ ಮನೆಗೆ ಬರುವುದು ಒಳ್ಳೆಯದಲ್ಲ. ಒಂದು ವೇಳೆ ಅಪ್ಪಿ ತಪ್ಪಿ ಮನೆಯನ್ನು ಪ್ರವೇಶಿಸಿದರೆ ಮನೆಗೆ ಮಾಟ ಮಾಡಿದ್ದಂತೆ. ಇದರಿಂದ ಮನೆಯೇ ನಾಶವಾಗುತ್ತದೆ ಎನ್ನಲಾಗುತ್ತದೆ.
ಕಾಗೆ : ಕಾಗೆಯು ಮನೆಗೆ ಬಂದರೆ ಶನಿಯು ಮನೆಗೆ ಪ್ರವೇಶಿಸುತ್ತಿದ್ದಾನೆ ಎನ್ನುವುದರ ಸೂಚಕ. ಕಾಗೆಯೂ ಮನೆಯೊಳಗೆ ಬಂದರೆ ಸಂಕಷ್ಟಗಳು ಎದುರಾಗುತ್ತದೆ. ಆರ್ಥಿಕ ಧನನಷ್ಟ ಹಾಗೂ ಆರೋಗ್ಯ ಸಮಸ್ಯೆಯು ಕಾಣಿಸಿಕೊಳ್ಳುತ್ತದೆ ಎನ್ನಲಾಗಿದೆ.
ಬಾವುಲಿ : ಬಾವಲಿಯು ಮನೆಗೆ ಪ್ರವೇಶಿಸುವುದರಿಂದ ಮನೆಯು ಹಾಳಾಗುತ್ತಿದೆ ಎಂದು ಸೂಚಿಸುತ್ತದೆ. ಇದರಿಂದ ನಕಾರಾತ್ಮಕ ಶಕ್ತಿಗಳು ಮನೆಯಲ್ಲಿ ಉಳಿಯುತ್ತವೆ. ಅಷ್ಟೇ ಅಲ್ಲದೇ, ಮನೆಯಲ್ಲಿ ವಾಸಿಸುವ ಜನರ ಜೀವನದಲ್ಲಿ ಸಮಸ್ಯೆಗಳು ಆರಂಭವಾಗುತ್ತದೆಯಂತೆ.
ಜೇನುಗೂಡು ಅಥವಾ ಜೇನುಹುಳ: ಮನೆಯೊಳಗೆ ಜೇನುಹುಳಗಳು ಒಂದೆರಡು ಬಂದರೆ ಪರವಾಗಿಲ್ಲ. ಆದರೆ ಜೇನುಹುಳಗಳು ಮನೆಯೊಳಗೆ ಗೂಡು ಕಟ್ಟುವುದು ಒಳ್ಳೆಯದಲ್ಲ. ಇದರಿಂದ ಆ ಮನೆಯಲ್ಲಿ ವಾಸಿಸುತ್ತಿರುವವರಿಗೆ ಸಂಕಷ್ಟ ಎದುರಾಗುತ್ತದೆ.
ಗೂಬೆ : ಗೂಬೆಯು ಅನಿಷ್ಟ ವಾಗಿದ್ದು ಇದರ ಆಗಮನವು ನಕಾರಾತ್ಮಕ ಶಕ್ತಿಯನ್ನು ಸೃಷ್ಟಿಸುತ್ತದೆ. ಮನೆಗೆ ಗೂಬೆ ಬಂದರೆ ಮನೆಯ ಪ್ರಗತಿಯು ಕುಂಠಿತವಾಗುತ್ತದೆ. ಮನೆಯಲ್ಲಿ ವಾಸಿಸುವ ಸದಸ್ಯರ ನಡುವೆ ವೈಮನಸ್ಸು ಉಂಟಾಗಿ ಮನೆಯೇ ನಾಶವಾಗುವ ಸಾಧ್ಯತೆ ಇರುತ್ತದೆ.
ರಣಹದ್ದುಗಳು : ರಣ ಹದ್ದುಗಳು ಮನೆಯೊಳಗೆ ಪ್ರವೇಶಿಸಿದರೆ ಯಜಮಾನನಿಗೆ ಸಮಸ್ಯೆಯಾಗುತ್ತದೆ. ಅದಲ್ಲದೇ, ಮನೆಯಲ್ಲಿ ಭಿನ್ನಾಭಿಪ್ರಾಯಗಳು ಮೂಡುತ್ತದೆ ಎನ್ನಲಾಗಿದೆ.
DAKSHINA KANNADA
ಮಂಗಳೂರು: ವಿಮಾನ ನಿಲ್ದಾಣದ ರನ್ ವೇಯಿಂದ ಮನೆಗಳಿಗೆ ನುಗ್ಗುತ್ತಿದೆ ನೀರು…!
ವಿಮಾನ ನಿಲ್ದಾಣ ಮುಖ್ಯದ್ವಾರ ಬಂದ್ ಮಾಡಿ ಸ್ಥಳೀಯರ ಪ್ರತಿಭಟನೆ
ಮಂಗಳೂರು: ಭಾರೀ ಮಳೆಯಿಂದಾಗಿ ವಿಮಾನ ನಿಲ್ದಾಣದ ರನ್ ವೇಯಿಂದ ಹರಿದು ಬಂದ ನೀರು ಏಳು ಮನೆಗಳಿಗೆ ಹಾನಿ ಉಂಟು ಮಾಡಿದ ಹಿನ್ನೆಲೆಯಲ್ಲಿ ಕರಂಬಾರ ಸ್ಥಳೀಯರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರವೇಶ ದ್ವಾರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ವಿಮಾನ ನಿಲ್ದಾಣದಿಂದ ಮಳೆ ನೀರು ಹರಿದು ಹೋಗಲು ಏರ್ಪೋರ್ಟ್ ಆಡಳಿತ ಸರಿಯಾದ ವ್ಯವಸ್ಥೆ ಕಲ್ಪಿಸಿಲ್ಲ. ಹೀಗಾಗಿ ಕೆಂಜಾರು ಹಾಗೂ ಏರ್ಪೋರ್ಟ್ ಸುತ್ತಮುತ್ತಲಿನ ಹಲವು ಮನೆಗಳಿಗೆ ನೆರೆ ಭೀತಿ ಸೃಷ್ಟಿಯಾಗಿದೆ. ಸೂಕ್ತ ವ್ಯವಸ್ಥೆ ಕಲ್ಪಿಸದೆ ಮಳೆ ನೀರನ್ನು ಅವೈಜ್ಞಾನಿಕವಾಗಿ ಹೊರ ಬಿಡಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಟೇಬಲ್ ಟಾಪ್ ಏರ್ಪೋರ್ಟ್ ಆಗಿರುವ ಕಾರಣ ಕೆಲ ಭಾಗದ ಜನ ವಸತಿ ಪ್ರದೇಶಗಳಿಗೆ ನೀರು ನುಗ್ಗುವ ಭೀತಿ ಉಂಟಾಗಿದೆ. ಈ ಮಧ್ಯೆ, ರಸ್ತೆ ತಡೆ ನಡೆಸಿದ ಕಾರಣ ಬಜ್ಪೆ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಘಟನಾ ಸ್ಥಳದಲ್ಲಿ ಸಿಐಎಸ್ಎಫ್ ಸಿಬ್ಬಂದಿ ಮೊಕ್ಕಾಂ ಹೂಡಿದ್ದಾರೆ.
ಸದ್ಯ ಗ್ರಾಮಸ್ಥರನ್ನು ಮನವೊಲಿಸಿ ರಸ್ತೆ ತೆರವು ಮಾಡಲಾಗಿದೆ. ಪ್ರತಿಭಟನಾನಿರತರು ಜಿಲ್ಲಾಧಿಕಾರಿ ಸ್ಥಳಕ್ಕೆ ಬರಲು ಒಂದು ಗಂಟೆಯ ಗಡುವು ನೀಡಿದ್ದಾರೆ. ಸ್ಥಳಕ್ಕೆ ಮಂಗಳೂರು ಉತ್ತರ ವಿಭಾಗದ ಎಸಿಪಿ ಮನೋಜ್ ನಾಯಕ್, ಮಂಗಳೂರು ತಹಶೀಲ್ದಾರ್ ಪ್ರಶಾಂತ್ ಪಾಟೀಲ್, ಮಂಗಳೂರು ಉತ್ತರ ಶಾಸಕ ಡಾ. ವೈ ಭರತ್ ಶೆಟ್ಟಿ ಭೇಟಿ ನೀಡಿದ್ದಾರೆ. ಏರ್ಪೋರ್ಟ್ ಆಡಳಿತ ಅಧಿಕಾರಿಗಳು, ಸ್ಥಳೀಯರ ಜೊತೆ ಶಾಸಕ ಭರತ್ ಶೆಟ್ಟಿ ಚರ್ಚೆ ನಡೆಸಿದ್ದಾರೆ.
DAKSHINA KANNADA
ನಿವೃತ್ತಿಗೊಂಡ ಪೊಲೀಸ್ ಅಧಿಕಾರಿಗೆ ವಿಶೇಷ ಗೌರವ..! ಪುಷ್ಪಾರ್ಚಣೆ ಸಲ್ಲಿಸಿದ ಪೊಲೀಸ್ ಅಧಿಕಾರಿಗಳು..!
ಮೂಡುಬಿದಿರೆ: ಪೊಲೀಸ್ ಅಧಿಕಾರಿಯಾದವರು ದಕ್ಷತೆ, ಪ್ರಮಾಣಿಕತೆಯಿಂದ ಕೆಲಸ ಮಾಡಿದರೆ ಎಂತಹ ಗೌರವ ಸಿಗುತ್ತದೆ ಅನ್ನೋದಕ್ಕೆ ಮೂಡಬಿದಿರೆಯ ಈ ಪೊಲೀಸ್ ಅಧಿಕಾರಿಯೇ ಸಾಕ್ಷಿ. ಹೌದು, ಪೊಲೀಸ್ ಅಧಿಕಾರಿಯಾಗಿ 39 ವರ್ಷಗಳ ಕಾಲ ಸೇವೆ ಸಲ್ಲಿಸಿ ಇದೀಗ ನಿವೃತ್ತರಾಗಿದ್ದ ಪೊಲೀಸ್ ಉಪನಿರೀಕ್ಷಕ ದಿವಾಕರ್ ರೈ ಅವರಿಗೆ ಸಹೋದ್ಯೋಗಿಗಳು ಪುಷ್ಪಾರ್ಚನೆಯ ಗೌರವ ಸಲ್ಲಿಸಿದ್ದಾರೆ.
ದಿವಾಕರ ರೈ ಅವರು ಸೇವೆಯಿಂದ ನಿವೃತ್ತರಾಗಿದ್ದರು. ಮೂಡಬಿದಿರೆಯ ಪೊಲೀಸ್ ಠಾಣೆಯಿಂದ ಅವರು ಸೇವೆಯನ್ನು ಮುಗಿಸಿ ಮನೆಗೆ ತೆರಳುವ ವೇಳೆಯಲ್ಲಿ ಅವರು ಠಾಣೆಯಿಂದ ಪೊಲೀಸ್ ಜೀಪ್ ಏರುವವರೆಗೂ ಮೂಡಬಿದಿರೆಯ ವೃತ್ತ ನಿರೀಕ್ಷಕರಾದ ಸಂದೇಶ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪುಷ್ಪಾರ್ಚನೆಯನ್ನು ಮಾಡಿದ್ದಾರೆ. ಪೊಲೀಸ್ ಜೀಪ್ನಲ್ಲೇ ಪೊಲೀಸ್ ಅಧಿಕಾರಿಯಾಗಿಯೇ ದಿವಾಕರ ರೈ ಮನೆಗೆ ತೆರಳಿದ್ದಾರೆ. ಸಹೋದ್ಯೋಗಿಗಳು ನೀಡಿದ ಗೌರವಕ್ಕೆ ದಿವಾಕರ ರೈ ಅವರು ಆನಂದ ಬಾಷ್ಪ ಸುರಿಸಿದ್ದಾರೆ. ಸದಾ ಒಂದೊಲ್ಲೊಂದು ಅಪರಾಧ ಪ್ರಕರಣಗಳಿಂದಲೇ ಬ್ಯುಸಿಯಾಗಿರುತ್ತಿದ್ದ ಮೂಡಬಿದಿರೆಯ ಪೊಲೀಸ್ ಠಾಣೆ ಇಂದು ವಿನೂತನ ಸಂದರ್ಭಕ್ಕೆ ಸಾಕ್ಷಿಯಾಗಿತ್ತು.
ಈ ಪುಣ್ಯಕ್ಷೇತ್ರಕ್ಕೆ ಹೋಗಲು ರಾಜ್ಯ ಸರ್ಕಾರದಿಂದ ಸಹಾಯಧನ ಸಿಗಲಿದೆ..!