Connect with us

    DAKSHINA KANNADA

    ಮಳೆ, ಪ್ರವಾಹಕ್ಕೆ ದ.ಕ. ಜಿಲ್ಲೆಯಲ್ಲಿ 167.73 ಕೋ.ರೂ ನಷ್ಟ..! 234 ಮಂದಿ ಸಂತ್ರಸ್ತರಿಗೆ ಆಶ್ರಯ-ಗುಂಡೂರಾವ್‌

    Published

    on

    ಮಂಗಳೂರು: ದ.ಕ ಜಿಲ್ಲೆಯಾದ್ಯಂತ ನೆರೆಹಾನಿ ಹಾಗೂ ಮಳೆಯಿಂದಾಗಿ ಅಪಾರ ನಷ್ಟ ಉಂಟಾಗಿದ್ದು ಈ ಪ್ರದೇಶಗಳಿಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ ರವರು ಭೇಟಿ ನೀಡಿ ಹಾನಿಗೊಳಗಾದ ಪ್ರದೇಶಗಳನ್ನು ಆ.2ರಂದು ವೀಕ್ಷಣೆ ಮಾಡಿದ್ದಾರೆ.

    ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ವರ್ಷ ಸುರಿದ ಭಾರೀ ಮಳೆ, ಗಾಳಿ ಮತ್ತು ಪ್ರವಾಹದಿಂದಾಗಿ ಇದುವರೆಗೆ ಒಟ್ಟು 167.73 ಕೋ.ರೂ. ನಷ್ಟವಾಗಿದೆ. ಪ್ರಾಕೃತಿಕ ವಿಕೋಪ ನಿರ್ವಹಣೆ ಬಳಕೆಗಾಗಿ ಜಿಲ್ಲಾ ವಿಪತ್ತು ಪರಿಹಾರ ನಿಧಿಯಲ್ಲಿ 14.22 ಕೋ.ರೂ. ಹಾಗೂ ತಾಲೂಕುಗಳಲ್ಲಿ ಒಟ್ಟು 4.14 ಕೋ.ರೂ. ಲಭ್ಯವಿದೆ ತಿಳಿಸಿದ್ದಾರೆ.

    ಜಿಲ್ಲೆಯಲ್ಲಿ ಈವರೆಗೆ ಒಟ್ಟು 11 ಮಂದಿ ಸಾವನ್ನಪ್ಪಿದ್ದು, 9 ಮಂದಿ ಗಾಯಗೊಂಡಿದ್ದಾರೆ. 154 ಮನೆಗಳು ಸಂಪೂರ್ಣ ಹಾಗೂ 484 ಭಾಗಶಃ ಹಾನಿಗೀಡಾಗಿವೆ. 18 ಪ್ರಾಣಿಗಳು ಮೃತಪಟ್ಟಿವೆ ಎಂದರು. ಮಂಗಳೂರು, ಉಳ್ಳಾಲ ಹಾಗೂ ಕಡಬ ಸೇರಿದಂತೆ 3 ತಾಲೂಕುಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದ್ದು, ಒಟ್ಟು 234 ಮಂದಿ ಸಂತ್ರಸ್ತರು ಆಶ್ರಯ ಪಡೆದಿದ್ದಾರೆ. ರಾಜ್ಯ ಸರಕಾರದ ಹೊಸ ಆದೇಶದ ಪ್ರಕಾರ ಪೂರ್ಣ ಹಾನಿಯಾದ ಮನೆಗಳಿಗೆ 1.20 ಲಕ್ಷ ರೂ. ಪರಿಹಾರದ ಜತೆಗೆ ದೇವರಾಜ್‌ ಅರಸು ವಸತಿ ಯೋಜನೆಯಡಿ ಹೆಚ್ಚುವರಿಯಾಗಿ 1.20 ಲಕ್ಷ ರೂ., ಪರಿಶಿಷ್ಟ ಪಂಗಡ ಹಾಗೂ ಪರಿಶಿಷ್ಟ ಜಾತಿ ವರ್ಗಗಳಿಗೆ 1.50 ಲಕ್ಷ ರೂ. ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಅನಧಿಕೃತ ಜಮೀನಿನಲ್ಲಿ ಸಂಪೂರ್ಣ ಹಾನಿಗೊಳಗಾದ ಮನೆಗಳಿಗೆ ಒಂದು ಬಾರಿ ಪರಿಹಾರವಾಗಿ 1 ಲಕ್ಷ ರೂ. ಒದಗಿಸಲಾಗುತ್ತದೆ. ಭಾಗಶಃ ಹಾನಿಗೀಡಾದ ಮನೆಗಳಿಗೆ ದುರಸ್ತಿಗೆ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ 6,500 ರೂ.ಜತೆಗೆ ರಾಜ್ಯ ಸರಕಾರ ಹೆಚ್ಚುವರಿಯಾಗಿ 43,500 ರೂ. ಸೇರಿಸಿ ಒಟ್ಟು 50 ಸಾ. ರೂ. ಒದಗಿಸಲಿದೆ. ಪ್ರವಾಹದಿಂದ ಬಟ್ಟೆಬರೆ ಕಳೆದುಕೊಂಡರೆ 2,500 ರೂ., ಗೃಹೋಪಯೋಗಿ ವಸ್ತುಗಳು ಹಾನಿಯಾದರೆ 2,500 ರೂ.ಗಳನ್ನು ನೀಡಲು ನಿರ್ಧರಿಸಲಾಗಿದೆ ಎಂದು ದಿನೇಶ್‌ ಗುಂಡೂರಾವ್‌ ತಿಳಿಸಿದರು.

    ನೆರೆ ಪೀಡಿತ ಪ್ರದೇಶಕ್ಕೆ ಸಚಿವ ಗುಂಡೂರಾವ್ ಭೇಟಿ; ನೆರೆಗೆ ಶಾಶ್ವತ ಪರಿಹಾರದ ಭರವಸೆ

    ಈ ಸಂದರ್ಭದಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್‌, ಡಿ.ಸಿ. ಮುಲ್ಲೆ„ ಮುಗಿಲನ್‌, ಜಿ.ಪಂ. ಸಿಇಒ ಡಾ| ಆನಂದ್‌, ಮೆಸ್ಕಾಂ ಎಂಡಿ ಪದ್ಮಾವತಿ, ಪಾಲಿಕೆ ಆಯುಕ್ತ ಆನಂದ್‌ ಉಪಸ್ಥಿತರಿದ್ದರು.

    ಸಚಿವರು ಮಂಗಳೂರಿನ ಅದ್ಯಪಾಡಿ, ಕೆತ್ತಿಕಲ್‌ಗ‌ುಡ್ಡೆ, ಬಂಟ್ವಾಳದ ಅಮ್ಮುಂಜೆ ಹೊಳೆ ಬದಿ, ಗೂಡಿನಬಳಿ, ಆಲಡ್ಕ, ನಾವೂರಿನ ಕಡವಿನ ಬಾಗಿಲು, ನೇತ್ರಾವತಿ ಸೇತುವೆ, ಅಣೆಜ ರಸ್ತೆ ಬದಿ, ಕಂಚಿಕಾರ ಪೇಟೆ ರಸ್ತೆ ಹಾನಿ ಪ್ರದೇಶ, ಅಜಿಲಮೊಗರು ಮಸೀದಿ, ಬೆಳ್ತಂಗಡಿಯ ಮಾಲಾಡಿ ಹಾಗೂ ಲಾಯಿಲಕ್ಕೆ ಭೇಟಿ ನೀಡಿದ ಸಚಿವರು ಮಳೆ ಹಾನಿ ಕುರಿತು ಮಾಹಿತಿ ಪಡೆದುಕೊಂಡರು.

     

    DAKSHINA KANNADA

    ಬ್ರೇಕ್ ಫೇಲ್ ಆಗಿ ದ್ವಿಚಕ್ರ ವಾಹನಕ್ಕೆ ಲಾರಿ ಡಿ*ಕ್ಕಿ; ಓರ್ವ ಸಾ*ವು

    Published

    on

    ಮಂಗಳೂರು/ಆನೇಕಲ್ ದ್ವಿಚಕ್ರ ವಾಹನಕ್ಕೆ ಲಾರಿ ಡಿ*ಕ್ಕಿ ಹೊಡೆದು, ಸವಾರ ಸ್ಥಳದಲ್ಲಿಯೇ ಮೃ*ತಪಟ್ಟಿರುವ ಘಟನೆ ತಮಿಳುನಾಡು ಗಡಿ ಪ್ರದೇಶವಾದ ಹೊಸೂರು ಸಮೀಪದ ಸೂಳಗಿರಿ ಬಳಿ ನಡೆದಿದೆ. ಆನೇಕಲ್ ತಾಲೂಕಿನ ರಾಚಮಾನಹಳ್ಳಿಯ ನಿವಾಸಿ ಅರ್ಚಕ ಶ್ರೀನಿವಾಸ್ ಮೃ*ತ‌ ದುರ್ದೈವಿ.

    ದೇವಾಲಯದ ಅರ್ಚಕರಾಗಿದ್ದ ಶ್ರೀನಿವಾಸ್, ಪೂಜೆಯ ನಿಮಿತ್ತ ಬೈಕ್‌ ಮೂಲಕ ಆನೇಕಲ್‌ನಿಂದ ಹೋಗುತ್ತಿದ್ದರು. ಈ ವೇಳೆ ತಮಿಳುನಾಡಿನ ಲಾರಿಯೊಂದರ ಬ್ರೇಕ್ ಫೇಲ್ ಆಗಿ ಹೆದ್ದಾರಿಯಿಂದ ಡಿವೈಡರ್ ದಾಟಿಕೊಂಡು ಬಂದು ಸರ್ವಿಸ್ ರಸ್ತೆಯಲ್ಲಿ ಹೋಗುತ್ತಿದ್ದ ಶ್ರೀನಿವಾಸ್ ಅವರ ವಾಹನಕ್ಕೆ ಡಿ*ಕ್ಕಿ ಹೊಡೆದಿದೆ. ಪರಿಣಾಮ ಶ್ರೀನಿವಾಸ್ ಸ್ಥಳದಲ್ಲಿಯೇ ಮೃ*ತಪಟ್ಟರೆ, ರಾಘವೇಂದ್ರ ಎಂಬುವವರಿಗೆ ಗಂಭೀರ ಗಾ*ಯವಾಗಿದೆ.

    ಇದನ್ನೂ ಓದಿ : ಖಾಸಗಿ ಬಾಹ್ಯಾಕಾಶ ನಡಿಗೆ ಯಶಸ್ವಿ; ಸುರಕ್ಷಿತವಾಗಿ ಭೂಮಿಗೆ ಮರಳಿದ ಗಗನಯಾತ್ರಿಗಳು

    ಅಪಘಾ*ತದ ರಭಸಕ್ಕೆ ಬೈಕ್‌ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಸೂಳಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮ*ರಣೋತ್ತರ ಪರೀಕ್ಷೆಗಾಗಿ ಮೃ*ತದೇಹವನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.

    Continue Reading

    DAKSHINA KANNADA

    ಬಿಜೆಪಿ ಹೈಕಮಾಂಡಿಂದ ಭರ್ಜರಿ ಗಿಫ್ಟ್ ; ನಳೀನ್ ಕುಮಾರ್ ಕಟೀಲ್ ಸುತ್ತಾಟ ಮತ್ತೆ ಆರಂಭ !

    Published

    on

    ಮಂಗಳೂರು: ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ದ.ಕ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಅವರು ಎಂಪಿ ಚುನಾವಣೆಯಲ್ಲಿ ಟಿಕೆಟ್ ಸಿಗದೆ ವಂಚಿತರಾದ ಬಳಿಕ ಅಷ್ಟಾಗಿ ರಾಜಕೀಯ ವಿಚಾರದಲ್ಲಿ ಪ್ರಚಲಿತದಲ್ಲಿರಲಿಲ್ಲ. ಆದರೆ ಇದಿಗ ಕಟೀಲ್ ಮತ್ತೆ ಸುದ್ದಿಯಲ್ಲಿದ್ದಾರೆ.


    ನಳೀನ್ ಕುಮಾರ್‌ಗೆ ಗುಡ್ ನ್ಯೂಸ್;
    ಬಿಜೆಪಿಯು ನಳೀನ್ ಕುಮಾರ್ ಕಟೀಲ್ ಅವರನ್ನು ಒಡಿಶಾ ರಾಜ್ಯದ ಬಿಜೆಪಿ ಸದಸ್ಯತ್ವ ಅಭಿಯಾನದ ಉಸ್ತುವಾರಿಯಾಗಿ ನಿಯೋಜನೆ ಮಾಡಿ ಆದೇಶ ಹೊರಡಿಸಿದೆ. ಅಂದಹಾಗೆ ಒಡಿಶಾದಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಸದಸ್ಯತ್ವದ ಗುರಿಯನ್ನು ನೀಡಿದ್ದು, ಕೇಂದ್ರ ನಾಯಕತ್ವ ನಳಿನ್ ಕುಮಾ‌ರ್ ಕಟೀಲ್‌ಗೆ ಈ ಜವಾಬ್ದಾರಿ ನೀಡಿದೆ ಎಂದು ಮೂಲಗಳು ತಿಳಿಸಿವೆ.
    ಈ ಹಿನ್ನೆಲೆಯಲ್ಲಿ ನಳಿನ್ ಕುಮಾರ್ ಕಟೀಲ್ ಅವರು ಸೆ.17ರಂದು ಒಡಿಶಾಗೆ ತೆರಳಲಿದ್ದು, ಅಲ್ಲಿ ಒಂದು ವಾರ ಕಾಲ ಸದಸ್ಯತ್ವ ಅಭಿಯಾನದಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

     

    Continue Reading

    DAKSHINA KANNADA

    ಮಂಗಳೂರಿನ ಕಾಟಿಪಳ್ಳದಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ

    Published

    on

    ಸುರತ್ಕಲ್ : ಮಂಗಳೂರು ಹೊರವಲಯದ ಸುರತ್ಕಲ್ ಕಾಟಿಪಳ್ಳ 3ನೆ ಬ್ಲಾಕ್‌ ನಲ್ಲಿರುವ ಬದ್ರಿಯಾ ಜುಮಾ ಮಸೀದಿಗೆ ದು*ಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಭಾನುವಾರ(ಸೆ.15) ರಾತ್ರಿ 11ರ ಸುಮಾರಿಗೆ ಈ ಘಟನೆ ನಡೆದಿದೆ.

    ಎರಡು ಬೈಕ್‌ ಗಳಲ್ಲಿ ಬಂದ ನಾಲ್ಕು ಮಂದಿ ದು*ಷ್ಕರ್ಮಿಗಳು ಮಸೀದಿಗೆ ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ. ಮಸೀದಿಯ ಕಿಟಕಿಗಳಿಗೆ ಹಾನಿಯಾಗಿದೆ.

    ಸುರತ್ಕಲ್‌ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಮಸೀದಿಯ ಸಿಸಿಟಿವಿ ಸೇರಿದಂತೆ ಸಮೀಪದ ಸಿಸಿಟಿವಿ ಫೂಟೇಜ್‌ ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ.

    ಇಂದು(ಸೆ.16) ಈದ್ ಮಿಲಾದ್  ಹಬ್ಬ. ಹಾಗಾಗಿ ಸುರತ್ಕಲ್ ಸೇರಿದಂತೆ ಮಂಗಳೂರು ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

    Continue Reading

    LATEST NEWS

    Trending