DAKSHINA KANNADA
ದ.ಕ: ಮುಂದುವರಿದ ಮುಂಗಾರು ಪೂರ್ವ ಮಳೆ; ನೆರೆ ಹಾವಳಿ ಸಂಭವಿಸುವ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಮುಂದುವರಿದಿದ್ದು, ಇನ್ನೆರಡು ದಿನ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಮಳೆಯಿಂದ ನೆರೆ ಹಾವಳಿ ಸಂಭವಿಸುವ ಮಂಗಳೂರು ನಗರದ ಕೊಟ್ಟಾರ ಚೌಕಿ ಹಾಗೂ ಕೂಳೂರು ಪ್ರದೇಶಕ್ಕೆ ನಿನ್ನೆ(ಮೇ.22) ಸಂಜೆ ಭೇಟಿ ನೀಡಿ ಸ್ಥಳ ವೀಕ್ಷಣೆ ನಡೆಸಿ ಮುನ್ನೆಚ್ಚರಿಕೆ ಕ್ರಮ ವಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೊಟ್ಟಾರ ಚೌಕಿಯಲ್ಲಿ ಸಾಮಾನ್ಯವಾಗಿ ಪ್ರತೀ ಮಳೆಗಾಲದಲ್ಲಿ ನೆರೆ ಬರುತ್ತದೆ. ಈ ಬಾರಿ ನೆರೆ ಬಂದರೆ ಆಸ್ತಿ ಪಾಸ್ತಿಗಳಿಗೆ ಹಾನಿ ಆಗದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದವರು ಈ ಸಂದರ್ಭದಲ್ಲಿ ತಿಳಿಸಿದರು. ಕೂಳೂರು ಜಂಕ್ಷನ್ ಮತ್ತು ಕೂಳೂರು ಸೇತುವೆ ನಿರ್ಮಾಣ ಕಾಮಗಾರಿಯನ್ನೂ ಪರಿಶೀಲಿಸಿದ ಜಿಲ್ಲಾಧಿಕಾರಿ, ಸೇತುವೆ ನಿರ್ಮಾಣ ಪ್ರದೇಶದಲ್ಲಿ ಮಳೆ ಸಂದರ್ಭ ಹಾನಿ ಸಂಭವಿಸದಂತೆ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಮತ್ತು ಸೇತುವೆ ಕಾಮಗಾರಿ ನಿರ್ವಹಿಸುತ್ತಿರುವ ಗುತ್ತಿಗೆದಾರರಿಗೆ ಸೂಚಿಸಿದರು.
ಗುಡುಗು ಸಹಿತ ಧಾರಾಕಾರ ಮಳೆ:
ಈ ನಡುವೆ ಬುಧವಾರ ರಾತ್ರಿ ಮಂಗಳೂರು, ಬಂಟ್ವಾಳ, ಸುಳ್ಯ, ಪುತ್ತೂರು, ಬೆಳ್ತಂಗಡಿ ಮತ್ತಿತರ ಕಡೆಗಳಲ್ಲಿ ಗುಡುಗು ಮಿಂಚು, ಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ಸಿಡಿಲು ಮತ್ತು ಗಾಳಿಯಿಂದಾಗಿ ಜಿಲ್ಲಾದ್ಯಂತ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿತ್ತು. ಕೆಲವು ಪ್ರದೇಶಗಳಳ್ಲಿ ರಾತ್ರಿ ವೇಳೆ ಕರೆಂಟ್ ಇಲ್ಲದೆ ಜನರು ಸಮಸ್ಯೆ ಅನುಭವಿಸಿದರು. ಸಿಡಿಲಿನಿಂದಾಗಿ ಹಲವು ಮನೆಗಳಲ್ಲಿ ಇನ್ವರ್ಟರ್, ಫ್ರಿಜ್ ಇತ್ಯಾದಿ ಎಲೆಕ್ಟ್ರಾನಿಕ್ ಉಪಕರಣಗಳಿಗೆ ಹಾನಿಯಾದ ಬಗ್ಗೆ ವರದಿಯಾಗಿದೆ. ಗುರುವಾರ ಬೆಳಗ್ಗೆ ಜಿಲ್ಲಾದ್ಯಂತ ಮೋಡ ಕವಿದ ವಾತಾವರಣ ಕಂಡು ಬಂದಿದೆ.
DAKSHINA KANNADA
ವಿಟ್ಲ : ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ : 2024-25ನೇ ಶೈಕ್ಷಣಿಕ ಸಾಲಿನ ಶಾಲಾ ಸಂಸತ್ತಿನ ಚುನಾವಣೆ
ವಿಟ್ಲ : ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಶಾಲಾ ಸಂಸತ್ತಿನ ಚುನಾವಣೆ ನಡೆಯಿತು. ಈ ಚುನಾವಣೆಯ ಪೂರ್ವಭಾವಿಯಾಗಿ ಜೂನ್ 3 ರಂದು ಶಾಲಾ ಸಂಸತ್ತಿನ ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಾಯಿತು. ಜೂನ್ 6 ರಂದು ಶಾಲೆಯ ಚುನಾವಣಾ ಅಭ್ಯರ್ಥಿಗಳು ಶಾಲಾ ಚುನಾವಣಾ ಅಧಿಕಾರಿಗಳಿಗೆ ನಾಮಪತ್ರಗಳನ್ನು ಸಲ್ಲಿಸಿದರು.
ಜೂನ್ 11 ರಿಂದ ಜೂನ್ 13 ರ ವರೆಗೆ ಅಭ್ಯರ್ಥಿಗಳು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ 5 ರಿಂದ 10ನೇ ತರಗತಿಯವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ಕೆಲವು ಆಶ್ವಾಸನೆಗಳನ್ನು ನೀಡಿ ಮತ ಯಾಚಿಸಿದರು. ಜೂನ್ 15 ರಂದು ಡಿಜಿಟಲ್ ತಂತ್ರಜ್ಞಾನದ ಮುಖೇನ ನಡೆದ ಮತದಾನ ಪ್ರಕ್ರಿಯೆಯಲ್ಲಿ ಶಾಲಾ ವಿದ್ಯಾರ್ಥಿಗಳು ಅತೀ ಉತ್ಸಾಹದಿಂದ ಪಾಲ್ಗೊಂಡಿದ್ದರು.
ಚುನಾಯಿತರಾದವರು :
ಶಾಲಾ ಸಂಸತ್ತಿನ ಪ್ರಧಾನ ಮಂತ್ರಿಯಾಗಿ ಹತ್ತನೇ ತರಗತಿಯ ಸಾಕ್ಷಿ, ಗೃಹ ಮಂತ್ರಿಯಾಗಿ ಅಬೂಬಕರ್ ನವವಿ (10ನೇ ತರಗತಿ), ಸಂವಹನ ಮಂತ್ರಿಯಾಗಿ ಖತಿಜಾ ಇಫ್ಹಾ (10ನೇ ತರಗತಿ), ಕ್ರೀಡಾ ಮಂತ್ರಿಯಾಗಿ ಶುಭಂ ಶೆಟ್ಟಿ (10ನೇ ತರಗತಿ ), ಶಿಕ್ಷಣ ಮಂತ್ರಿಯಾಗಿ ನಿಧಿಶಾ (9ನೇ ತರಗತಿ), ಸಾಂಸ್ಕೃತಿಕ ಮಂತ್ರಿಯಾಗಿ ಪ್ರಗತಿ (9ನೇ ತರಗತಿ), ಆರೋಗ್ಯ ಮತ್ತು ಸ್ವಚ್ಛತಾ ಮಂತ್ರಿಯಾಗಿ ಲಿಖಿತ್ ಕುಮಾರ್ ಎಲ್ (9ನೇ ತರಗತಿ) ಹಾಗೂ ನೀರಾವರಿ ಮತ್ತು ವಿದ್ಯುತ್ ಮಂತ್ರಿಯಾಗಿ ದೀಪಿತ್ (8ನೇ ತರಗತಿ) ಚುನಾಯಿತರಾದರು.
ಸಹಾಯಕ ಮಂತ್ರಿಗಳಾಗಿ ಪ್ರಾಥಮಿಕ ವಿಭಾಗದಿಂದ ಯಶಸ್ವಿ ಟಿ ಎಮ್ (7ನೇ ತರಗತಿ), ದಿಯಾ ವೈ ಶೆಟ್ಟಿ (7ನೇ ತರಗತಿ), ಸನ್ನಿಧಿ ಎಲ್ ಎಸ್ (5ನೇ ತರಗತಿ), ಮುಹಮ್ಮದ್ ಫಹ್ಮಾನ್ (7ನೇ ತರಗತಿ), ಸಾತ್ವಿಕ್ ಕೆ (6ನೇ ತರಗತಿ), ಕೌಶಲ್ ಬಿ (5ನೇ ತರಗತಿ), ಸುಶಾನ್ (6ನೇ ತರಗತಿ) ಹಾಗೂ ಜಿ ಎಸ್ ರಿಷಿಕ್ ಅಂಚನ್ (5ನೇ ತರಗತಿ ಚುನಾಯಿತರಾದರು.
ಇದನ್ನೂ ಓದಿ : ಹಕ್ಕಿ ಜ್ವರ ಬಂದಿದೆ, ಮೊಟ್ಟೆ, ಕೋಳಿ ತಿನ್ನುವುದು ಸುರಕ್ಷಿತವೇ?
ಚುನಾವಣಾ ಫಲಿತಾಂಶ ಘೋಷಣೆಯ ನಂತರ ಬಾಲವಿಕಾಸ ಟ್ರಸ್ಟಿನ ಕಾರ್ಯದರ್ಶಿ ಮಹೇಶ್ ಶೆಟ್ಟಿ ಜೆ ಹಾಗೂ ಸಂಸ್ಥೆಯ ಪ್ರಾಚಾರ್ಯರಾದ ರವೀಂದ್ರ ದರ್ಬೆ ವಿಜೇತ ಅಭ್ಯರ್ಥಿಗಳನ್ನು ಅಭಿನಂದಿಸಿದರು. ಈ ಚುನಾವಣಾ ಪ್ರಕ್ರಿಯೆಯಲ್ಲಿ ಶಿಕ್ಷಕಿಯರಾದ ಲೀಲಾ ಮುಖ್ಯ ಚುನಾವಣಾ ಅಧಿಕಾರಿಯಾಗಿ ಹಾಗೂ ಶೋಭಾ ಎಂ ಶೆಟ್ಟಿ ಉಪ ಚುನಾವಣಾ ಅಧಿಕಾರಿಯಾಗಿ ಜವಾಬ್ದಾರಿಯನ್ನು ನಿರ್ವಹಸಿದರು.
ಶಿಕ್ಷಕಿ ರಶ್ಮಿ ಕೆ ಫೆರ್ನಾಂಡೀಸ್ ಚುನಾವಣಾ ಫಲಿತಾ0ಶ ಘೋಷಿಸಿದರು. ಶಾಲಾ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ ವರ್ಗ ಸಹಕರಿಸಿದರು.
DAKSHINA KANNADA
ಏಕಕಾಲಕ್ಕೆ ಅರಳಿ ನಿಂತ 42 ಬ್ರಹ್ಮಕಮಲ ಪುಷ್ಪ; ಮಧ್ಯರಾತ್ರಿಯೇ ವಿಶೇಷ ಪೂಜೆ ಸಲ್ಲಿಕೆ!
ಉತ್ತರ ಕನ್ನಡ: ಶ್ರಾವಣದ ಸಂಜೆಗಳಲ್ಲಿ ಬ್ರಹ್ಮ ಕಮಲ ಅರಳುವುದು ವಾಡಿಕೆ. ಒಮ್ಮೊಮ್ಮೆ ಅದಕ್ಕೆ ವ್ಯತಿರಿಕ್ತವಾಗಿ ಬೇಗವೂ ಬ್ರಹ್ಮ ಕಮಲ ಅರಳುತ್ತದೆ. ಆದರೆ ಒಮ್ಮೆಲೆ ಪುಷ್ಪಗುಚ್ಛದಷ್ಟು ಅಂದವಾಗಿ ಒಂದೆಡೆಗೇ ಅರಳುವ ಬ್ರಹ್ಮಕಮಲದ ಸೊಬಗನ್ನು ನೋಡುವ ಅನುಭವವೇ ಬೇರೆ! ಬ್ರಹ್ಮಕಮಲವು ಅಧ್ಯಾತ್ಮಿಕ ಸ್ಥಾನವನ್ನು ಹಿಂದೂ ಹಾಗೂ ಜೈನ, ಬೌದ್ಧ ಧರ್ಮಗಳಲ್ಲಿ ಹೊಂದಿದೆ. ಹೀಗಾಗಿ ಬ್ರಹ್ಮಕಮಲ ಬರೀ ಹೂವಾಗದೇ ಈ ಹೂವೇ ಆರಾಧನೆಯ ವಸ್ತುವಾಗಿರುವುದು ವಿಶೇಷ!
ಏಕಕಾಲಕ್ಕೆ 42 ಹೂಗಳು!
ಯಲ್ಲಾಪುರ ಪಟ್ಟಣದ ರಾಮಾಪುರ ವ್ಯಾಪ್ತಿಯಲ್ಲಿ ವಾಸಿಸುವ ಗಣೇಶ್ ಪಂಡರಾಪುರ ಅವರ ಮನೆಯ ವಿಶೇಷವಾದ ಬ್ರಹ್ಮಕಮಲದ ಹೂವುಗಳು! ಯಾಕೆ ವಿಶೇಷ ಎಂದರೆ, ಹೋದ ವರ್ಷ ಇವರ ಮನೆಯಲ್ಲಿ ಸುಮಾರು 84 ಬ್ರಹ್ಮಕಮಲಗಳು ಒಟ್ಟಿಗೆ ಅರಳಿದ್ದವು. ಈ ವರ್ಷ 42 ಬ್ರಹ್ಮಕಮಲ ಏಕಕಾಲಕ್ಕೆ ಅರಳಿ ನಿಂತಿವೆ.
ಪುಷ್ಪಕ್ಕೆ ಪೂಜೆ!
ಮಧ್ಯರಾತ್ರಿ 12: 40 ರ ಸುಮಾರಿಗೆ ಈ ಹೂವುಗಳೆಲ್ಲಾ ಅರಳಿದ್ದವು ತಕ್ಷಣ ಗಣೇಶ್ ಪಂಡರಾಪುರ ಅವರ ಕುಟುಂಬ ವಾಡಿಕೆಯಂತೆ ಪೂಜೆ ಮಾಡಿ ನಂತರ ಮನೆಯವರಿಗೆ ಜನರಿಗೆ ಪ್ರಸಾದ ಹಂಚಿ ಹೂವುಗಳ ಮುಂದೆ ಭಕ್ತಿ ಭಾವದಿಂದ ಪ್ರಾರ್ಥನೆ ಸಲ್ಲಿಸಿದರು, ಬ್ರಹ್ಮಕಮಲ ಅರಳುವ ವೇಳೆ ಕೇಳಿದ ಕೋರಿಕೆಗಳು ಈಡೇರುತ್ತವೆ ಎಂಬುದು ಪ್ರಸಿದ್ಧ ಲೋಕಾರೂಢಿಯ ನಂಬಿಕೆ.
DAKSHINA KANNADA
ಹಕ್ಕಿ ಜ್ವರ ಬಂದಿದೆ, ಮೊಟ್ಟೆ, ಕೋಳಿ ತಿನ್ನುವುದು ಸುರಕ್ಷಿತವೇ?
ಭಾರತದಲ್ಲಿ ಐದು ವರ್ಷಗಳ ಬಳಿಕ ವ್ಯಕ್ತಿಯೊಬ್ಬರಲ್ಲಿ ಹಕ್ಕಿಜ್ವರ ಪತ್ತೆಯಾಗಿದ್ದು ಇದನ್ನು ವಿಶ್ವ ಆರೋಗ್ಯ ಸಂಸ್ಥೆ ಮಂಗಳವಾರ ದೃಢಪಡಿಸಿತ್ತು. ಪಶ್ಚಿಮ ಬಂಗಾಳದಲ್ಲಿ ನಾಲ್ಕು ವರ್ಷದ ಮಗುವಿಗೆ ಹಕ್ಕಿ ಜ್ವರ ತಗುಲಿದ್ದು ಅಲ್ಲಿಯ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ವೈರಸ್ನಿಂದ ಬಳಲುತ್ತಿರುವ ಮಗು ಮನೆ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇರುವ ಕೋಳಿಗಳೊಂದಿಗೆ ಸಂಪರ್ಕ ಹೊಂದಿತ್ತು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. H9N2 ವೈರಸ್ನಿಂದ ಉಂಟಾಗುವ ಹಕ್ಕಿ ಜ್ವರದಿಂದ ಮಾನವ ಸೋಂಕಿನ ಪ್ರಕರಣವನ್ನು ದೃಢಪಡಿಸಲಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.
ಏವಿಯನ್ ಇನ್ಫ್ಲುಯೆನ್ಸ ಎಂದೂ ಕರೆಯಲ್ಪಡುವ ಬರ್ಡ್ ಫ್ಲೂ ವೈರಸ್ ಆಗಿದ್ದು ಅದು ಪಕ್ಷಿಗಳಿಗೆ ಮಾತ್ರವಲ್ಲ, ಮನುಷ್ಯರು ಮತ್ತು ಇತರ ಪ್ರಾಣಿಗಳಿಗೂ ಸೋಂಕು ತರುತ್ತದೆ. ಹಾಗಾದರೆ ಹಕ್ಕಿ ಜ್ವರ ಸೋಂಕಿತ ಪಕ್ಷಿಯನ್ನು ಸೇವಿಸುವುದು ಸುರಕ್ಷಿತವೇ? ಎಂಬ ಅನುಮಾನ ಜನರಲ್ಲಿ ಮೂಡಿತ್ತು.
ಮಾಹಿತಿಯ ಪ್ರಕಾರ, ಹಕ್ಕಿ ಜ್ವರದ ಸೋಂಕಿಗೆ ಒಳಗಾದ ಪಕ್ಷಿಗಳನ್ನು ತಿನ್ನುವುದರಿಂದ ಗಂಭೀರ ಆರೋಗ್ಯ ಸಮಸ್ಯೆಗಳು ಕಂಡು ಬರಬಹುದು, ಆದರೂ ಪಕ್ಷಿಗಳನ್ನು ಬೇಯಿಸಿ, ಹೆಚ್ಚಿನ ಕಾಳಜಿ ವಹಿಸಿ ಸೇವನೆ ಮಾಡಬಹುದು. ಇದನ್ನು ಚೆನ್ನಾಗಿ ಬೇಯಿಸದಿದ್ದರೆ ವೈರಸ್ ಬರುವ ಅಪಾಯ ಹೆಚ್ಚಾಗಿರುತ್ತದೆ.
ಹಾಗಾಗಿ ಅಡುಗೆ ಮಾಡುವಾಗ ಹೆಚ್ಚು ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಹಸಿ ಕೋಳಿಯನ್ನು ಸ್ವಚ್ಛಗೊಳಿಸಿದ ಮೇಲೆ ಕೈಗಳು, ಪಾತ್ರೆಗಳನ್ನು ಸ್ವಚ್ಛ ಮಾಡಬೇಕು. ಮೊಟ್ಟೆ ಬಳಸುವಾಗಲೂ ಕೂಡ ಈ ಕ್ರಮಗಳನ್ನು ಪಾಲನೆ ಮಾಡಬೇಕು.
- LATEST NEWS6 days ago
ನಿವೇದಿತಾಗೆ ಡಿವೋರ್ಸ್ ಕೊಟ್ಟಿದ್ದು ಯಾಕಂದ್ರೆ.. ಕೊನೆಗೂ ಕಾರಣ ಹೇಳಲು ಮುಂದೆ ಬಂದ ಚಂದನ್!
- LATEST NEWS4 days ago
ಅಡುಗೆಯಲ್ಲಿ ಉಪ್ಪು ಜಾಸ್ತಿ ಆಯ್ತಾ? ಯೋಚನೆ ಬೇಡ, ಈ ಟಿಪ್ಸ್ ಫಾಲೋ ಮಾಡಿ
- LATEST NEWS3 days ago
ಅಡುಗೆ ಮನೆಯಿಂದ ಹಲ್ಲಿಗಳನ್ನು ಓಡಿಸಲು ಈ ಟಿಪ್ಸ್ ಅನುಸರಿಸಿ
- FILM3 days ago
ಡ್ರೋನ್ ಪ್ರತಾಪ್ ಹುಟ್ಟು ಹಬ್ಬಕ್ಕೆ ಸಿಕ್ತು ಬ್ಯೂಟಿಫುಲ್ ಗಿಫ್ಟ್