DAKSHINA KANNADA
ದ.ಕ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ನಿಲುವು ಅವೈಜ್ಞಾನಿಕ, ಖಂಡನೀಯ-ಮುನೀರ್ ಕಾಟಿಪಳ್ಳ
ಮಂಗಳೂರು: ‘ಇದೀಗ ಮುಚ್ಚಲಾಗಿರುವ ಸುರತ್ಕಲ್ ಅಕ್ರಮ ಟೋಲ್ ಗೇಟ್ ಸುಂಕವನ್ನು ಹೆಜಮಾಡಿ ನವಯುಗ್ ಟೋಲ್ ಪ್ಲಾಜಾದಲ್ಲಿ ಸಂಗ್ರಹಿಸುವ ಹೆದ್ದಾರಿ ಪ್ರಾಧಿಕಾರದ ಆದೇಶದ ಕುರಿತು ಉಡುಪಿ ಜಿಲ್ಲಾಡಳಿತ ನಡೆಸಿದ ಸಭೆಯ ತೀರ್ಮಾನದ ಕುರಿತಂತೆ ದಕ್ಷಿಣ ಕನ್ನಡ ಉಸ್ತುವಾರಿ ಸಚಿವರು ನೀಡಿರುವ ಮಾಹಿತಿ ಕುರಿತು ಹೋರಾಟ ಸಮಿತಿ ತೀವ್ರ ಆಕ್ಷೇಪವನ್ನು ವ್ಯಕ್ತಪಡಿಸುತ್ತದೆ’ ಎಂದು ಟೋಲ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಹೇಳಿದರು.
ಹೆಜಮಾಡಿ ಟೋಲ್ ಗೇಟ್ ನಲ್ಲಿ ಉಡುಪಿ ನೊಂದಾವಣೆಯ ಕೆ ಎ 20 ವಾಹನಗಳಿಗೆ ಮಾತ್ರ ಸುರತ್ಕಲ್ ಟೋಲ್ ಸುಂಕದಿಂದ ಪೂರ್ಣ ವಿನಾಯತಿ ಕೊಡಬೇಕು, ಆ ವಾಹನಗಳ ಓಡಾಟಕ್ಕೆ ಪ್ರತ್ಯೇಕ ಲೇನ್ ನಿರ್ಮಿಸಬೇಕು ಎಂಬ ಪ್ರಸ್ತಾವನೆ ಅವೈಜ್ಞಾನಿಕ ಮಾತ್ರ ಅಲ್ಲ. ತೀವ್ರವಾದ ತಾರತಮ್ಯದಿಂದ ಕೂಡಿದೆ.
ಸುರತ್ಕಲ್ ಅಕ್ರಮ ಟೋಲ್ ಸುಂಕವನ್ನು ಉಡುಪಿ, ದ.ಕ ವಾಹನಗಳು ಮಾತ್ರವಲ್ಲ, ಹೆಜಮಾಡಿ ಟೋಲ್ ಪ್ಲಾಜಾ ದಾಟುವ ಯಾವುದೇ ರಾಜ್ಯಗಳ ವಾಹನಗಳಿಂದ ಸಂಗ್ರಹಿಸಿದರೂ ಅದು ಸುಲಿಗೆಯೇ ಆಗುತ್ತದೆ. ಸುರತ್ಕಲ್ ನಲ್ಲಿ ಮಂಗಳೂರು ನೊಂದಾವಣೆಯ ಖಾಸಗಿ ವಾಹನಗಳಿಗೆ ಉಚಿತ ಓಡಾಟದ ಅವಕಾಶ ಇದ್ದರೂ ಟೋಲ್ ಸುಲಿಗೆಯ ವಿರುದ್ದ ಹೋರಾಟ ನಡೆಸಿರುವುದು ಇಂತಹ ವಿಶಾಲ ಮನೋಭಾವದಿಂದ, ನ್ಯಾಯಪ್ರಜ್ಞೆಯಿಂದ. ಇದು ಬಿಜೆಪಿ ಜನಪ್ರತಿನಿಧಿಗಳಿಗೆ, ಉಡುಪಿ ಜಿಲ್ಲಾಡಳಿತಕ್ಕೆ ಅರ್ಥ ಆಗದಿರುವುದು ದುರದೃಷ್ಟಕರ.
ಮಾನ್ಯ ಸುನಿಲ್ ಕುಮಾರ್ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರು. ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಜನತೆಯ, ಆಡಳಿತದ ಹಿತಾಸಕ್ತಿಗಳನ್ನು ಎತ್ತಿಹಿಡಿಯುವ ಕರ್ತವ್ಯ ಇದೆ.
ಹಾಗಿರುತ್ತಾ ಅವರು ಉಡುಪಿ ಜಿಲ್ಲಾಡಳಿತದ ಸಭೆಯಲ್ಲಿ ಭಾಗಿಯಾಗಿ ಮಂಗಳೂರು ವಾಹನಗಳ ಹಿತಾಸಕ್ತಿಯನ್ನು ಕಡೆಗಣಿಸಿರುವುದು, ಉಚಿತ ಪ್ರಯಾಣದ ಅವಕಾಶವನ್ನು ನಿರಾಕರಿಸಿರುವುದು ಖಂಡನೀಯ. ಆ ಮೂಲಕ ಅವರು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಮುಂದುವರಿಯುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ. ಉಡಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಮಾನ್ಯ ಅಂಗಾರ ರವರು ಸಭೆಯ ಅಧ್ಯಕ್ಷತೆ ವಹಿಸಿದ್ದರೂ ಈ ಚರ್ಚೆಗಳ ಸಂದರ್ಭ ಮೂಕ ಪ್ರೇಕ್ಷಕರಾಗಿದ್ದದ್ದು ದುರದೃಷ್ಟಕರ.
ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವು ಸಂಬಂಧ ಹೆದ್ದಾರಿ ಪ್ರಾಧಿಕಾರದ ಮಹತ್ವದ ಸಭೆ ಅಕ್ಟೋಬರ್ 14, 2022 ರಂದು ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದಿತ್ತು.
ಆ ಸಭೆಯಲ್ಲಿ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ಎಮ್ ಕೆ ವತಾರೆ ಸ್ವತಹ ಭಾಗಿಯಾಗಿದ್ದರು. ವಿಲೀನದ ಕುರಿತು ನಿರ್ಣಾಯಕ ಪ್ರಸ್ಥಾಪಗಳು ಆ ಸಭೆಯಲ್ಲಿ ತೀರ್ಮಾನಗೊಂಡಿದ್ದವು.
ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾಗಿ, ಸುರತ್ಕಲ್ ಟೋಲ್ ನಿಂದ ಅತಿ ಹೆಚ್ಚು ಭಾದಿತ ಉಡುಪಿ ಜಿಲ್ಲೆಗೆ ಸೇರಿದ ಶಾಸಕರಾಗಿ ಸುನಿಲ್ ಕುಮಾರ್ ಆ ಸಭೆಯಲ್ಲಿ ಭಾಗಿಯಾಗದಿರುವುದು, ಜಿಲ್ಲೆಯ ಉಳಿದ ಶಾಸಕರು ಭಾಗವಹಿಸುವಂತೆ ಮಾಡದಿರುವುದು ಯಾಕೆ ?
ಅಂದಿನ ಸಭೆಯಲ್ಲಿ ಉಸ್ತುವಾರಿ ಸಚಿವರು ಭಾಗಿಗಳಾಗಿದ್ದರೆ ಸಭೆಯ ಅಧ್ಯಕ್ಷತೆ ಸುನಿಲ್ ಕುಮಾರ್ ಅವರದ್ದೇ ಆಗಿರುತ್ತಿತ್ತು ಅಲ್ಲವೇ? ಅಂದು ಸಭೆಯಲ್ಲಿ ಭಾಗಿಗಳಾಗಿದ್ದರೆ ಈಗ ಅವೈಜ್ಞಾನಿಕ ಎಂದು ಹೇಳುವ ತೀರ್ಮಾನಕ್ಕೆ ಆಗಲೆ ತಡೆ ಬೀಳುತ್ತಿತ್ತು.
ಅಕ್ಟೋಬರ್ 17 ರಂದು ಮುಕ್ಕ, ಬಿಸಿ ರೋಡ್ ಹೆದ್ದಾರಿ ನಿರ್ಮಾಣಕ್ಕೆ ಹಣಕಾಸು ಒದಗಿಸಿರುವ ಬ್ಯಾಂಕರ್ ಗಳ ಸಭೆ ಮಂಗಳೂರಿನಲ್ಲಿ ನಡೆದಿತ್ತು. ಆಗಲೂ ಉಸ್ತುವಾರಿ ಸಚಿವರಾದ ಮಾನ್ಯ ಸುನಿಲ್ ಕುಮಾರ್ ಸಭೆಯಲ್ಲಿ ಭಾಗಿಯಾಗಿ ವಿವರಗಳನ್ನು ಪಡೆದುಕೊಳ್ಳದಿದ್ದದ್ದು ಯಾಕೆ ?
ಈ ಎಲ್ಲಾ ಸಭೆಗಳ ನಡಾವಳಿ, ಪ್ರಸ್ತಾವನೆಗಳ ಆಧಾರದಲ್ಲಿ ಹೆದ್ದಾರಿ ಪ್ರಾಧಿಕಾರವು ಹೆಜಮಾಡಿ ನವಯುಗ್ ಟೋಲ್ ಗೇಟ್ ನೊಂದಿಗೆ ವಿಲೀನ ಹಾಗೂ ಪರಿಷ್ಕೃತ ದರಪಟ್ಟಿಯೊಂದಿಗೆ ರಾಜ್ಯ ಸರಕಾರಕ್ಕೆ ಪ್ರಸ್ತಾವನೆಯನ್ನು ಅನುಮೋದನೆಗಾಗಿ ಕಳುಹಿಸಿಕೊಟ್ಟಿತ್ತು.
ಆ ಪ್ರಸ್ತಾವನೆಯ ಕುರಿತು ತೀರ್ಮಾನ ಕೈಗೊಳ್ಳಲು ಅಕ್ಟೋಬರ್ 28 ರಂದು ರಾಜ್ಯ ಸರಕಾರ ಬೆಂಗಳೂರಿನಲ್ಲಿ ಹೆದ್ದಾರಿ ಪ್ರಾಧಿಕಾರದ ಸಭೆ ನಡೆಸಿ ಯಾವುದೇ ತಕರಾರು, ಅಕ್ಷೇಪಗಳನ್ನು ಎತ್ತದೆ ಪ್ರಸ್ತಾವನೆಗೆ ಅನುಮೋದನೆಯನ್ನು ನೀಡಿತು. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಬಹುದೊಡ್ಡ ಸಮಸ್ಯೆಯ ಕುರಿತಾದ ರಾಜ್ಯ ಸರಕಾರದ ಮಟ್ಟದ ಸಭೆ ನಡೆಯುವಾಗ ಸಂಪುಟ ದರ್ಜೆಯ ಸಚಿವರಾಗಿ, ದ.ಕ.ಜಿಲ್ಲಾ ಉಸ್ತುವಾರಿ ಸಚಿವರಾಗಿ ಸುನಿಲ್ ಕುಮಾರ್ ಅವರ ಪಾತ್ರ ಏನಿತ್ತು ? ಸಭೆ ನಡೆಯುವ ಮಾಹಿತಿಯೇ ಅವರಿಗೆ ಇರಲಿಲ್ಲವೆ ?
ಈ ಎಲ್ಲಾ ಸಂದರ್ಭದಲ್ಲಿ ತಮಗೂ, ಸುರತ್ಕಲ್ ಅಕ್ರಮ ಟೋಲ್ ಗೇಟ್ ಸಮಸ್ಯೆಗೂ ಯಾವುದೇ ಸಂಬಂಧ ಇಲ್ಲ ಎಂದು ಮೌನ ವಹಿಸಿದ್ದು ಈಗ ತಾವು ಹೇಳುತ್ತಿರುವ “ಅವೈಜ್ಞಾನಿಕ” ಎಂಬ ಆದೇಶಗಳು ಹೊರಡಲು ಕಾರಣವಲ್ಲವೆ ?
ಇನ್ನು ಸುರತ್ಕಲ್ ಟೋಲ್ ಸುಂಕದ ಬಾಕಿ ಮೊತ್ತ ಸಂಗ್ರಹಕ್ಕೆ ತಾವು ಸೂಚಿಸುತ್ತಿರುವ “ಮೂರು ಟೋಲ್ ಗೇಟ್ ಗಳಲ್ಲಿ ಹಂಚಿಕೆ ಮಾಡಿ ಸಂಗ್ರಹಿಸುವ” ಪರಿಹಾರವೇ ಅವೈಜ್ಞಾನಿಕತೆಯಿಂದ ಕೂಡಿದೆ ಮಾನ್ಯ ಸುನಿಲ್ ಕುಮಾರ್ ಅವರೆ.
ಮಂಜೇಶ್ವರ ಭಾಗದಿಂದ ಮಂಗಳೂರು ಕಡೆಗೆ ತೆರಳುವ 90 ಶೇಕಡಾ ವಾಹನಗಳು ನಂತೂರು ಸುರತ್ಕಲ್ ರಸ್ತೆಯನ್ನು ಪ್ರವೇಶಿಸುವುದಿಲ್ಲ, ಹಾಗೆಯೆ ಮಂಗಳೂರು, ತೊಕ್ಕೊಟು ಭಾಗದಿಂದ ತಲಪಾಡಿ ಟೋಲ್ ಗೇಟ್ ದಾಟುವ ವಾಹನಗಳು ನಂತೂರು, ಸುರತ್ಕಲ್ ರಸ್ತೆಯನ್ನು ಬಳಸಿರುವುದಿಲ್ಲ. ಬಿಸಿ ರೋಡ್ ನಲ್ಲಿರುವ ಬ್ರಹ್ಮರ ಕೂಟ್ಲು ಟೋಲ್ ಗೇಟ್ ದಾಟುವ ವಾಹನಗಳ ಸ್ಥಿತಿಯೂ ಸರಾಸಾರಿ ಹೀಗೆಯೆ ಇದೆ.
ನಿಮ್ಮ ಹಂಚಿಕೆ ನೀತಿಯನ್ನು ಹೆದ್ದಾರಿ ಪ್ರಾಧಿಕಾರ ಒಪ್ಪಿಕೊಂಡರೆ ಈ ವಾಹನ ಸವಾರರು ತಾವು ಬಳಸದೇ ಇರುವ ಸುರತ್ಕಲ್, ನಂತೂರು ರಸ್ತೆಗೆ ಅನ್ಯಾಯವಾಗಿ ಬ್ರಹ್ಮರ ಕೂಟ್ಲು, ತಲಪಾಡಿ ಟೋಲ್ ಪ್ಲಾಜಾದಲ್ಲಿ ಹೆಚ್ಚುವರಿ ಸುಂಕ ಕಟ್ಟಬೇಕಾಗುತ್ತದೆ.
ಇದು ಅವೈಜ್ಞಾನಿಕ ಮಾತ್ರ ಅಲ್ಲ, ಬಲವಂತದ ಸುಲಿಗೆಯೂ ಆಗುತ್ತದೆ ಎಂಬುದನ್ನು ತಮ್ಮ ಗಮನಕ್ಕೆ ತರುತ್ತಿದ್ದೇವೆ.
ಈ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ಇರುವುದು ಒಂದೇ ದಾರಿ. ತಪ್ಪು ಮಾಡಿರುವುದು ಅಕ್ರಮ ಟೋಲ್ ಗೇಟ್ ಹಾಕಿರುವ ಹೆದ್ದಾರಿ ಪ್ರಾಧಿಕಾರ. ಹೆದ್ದಾರಿ ಪ್ರಾಧಿಕಾರ ಹಾಗೂ ರಾಜ್ಯ ಸರಕಾರ ಸೇರಿಕೊಂಡು ತಾವು ಹೇಳುತ್ತಿರುವ ಕೆಲವು ಕೋಟಿ ರೂಪಾಯಿ ಉಳಿಕೆ ಮೊತ್ತವನ್ನು ಭರಿಸುವುದು, ನಂತೂರು, ಸುರತ್ಕಲ್ ಹೆದ್ದಾರಿಯನ್ನು ಟೋಲ್ ಮುಕ್ತ ರಸ್ತೆ ಎಂದು ಘೋಷಿಸುವುದು’ ಎಂದು ಹೇಳಿದ್ದಾರೆ.
DAKSHINA KANNADA
ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮೋದಿ ಹೆಸರು ಉಲ್ಲೇಖಿಸಿದ್ದ ವರ..! ವರನ ಮೇಲೆ ದೂರು ದಾಖಲು..!
ಕಡಬ: ವ್ಯಕ್ತಿಯೊಬ್ಬರು ತಮ್ಮ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮೋದಿಯ ಕುರಿತಾಗಿ ಉಲ್ಲೇಖಿಸಿದ್ದು ಇದೀಗ ಇಕ್ಕಟ್ಟಿಗೆ ಸಿಲುಕಿರುವ ಘಟನೆ ನಡೆದಿದೆ. ಕಡಬ ತಾಲೂಕಿನ ಆಲಂತಾಯ ನಿವಾಸಿ ಶಿವಪ್ರಸಾದ್ ಎಂಬವರು ತಮ್ಮ ಮದುವೆಯ ಆಮಂತ್ರನ ಪತ್ರಿಕೆಯಲ್ಲಿ ಪ್ರಧಾನಿ ಮೋದಿಯನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡುವುದು ನಮಗೆ ನೀವು ನೀಡುವ ಉಡುಗೊರೆ ಎಂದು ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಉಲ್ಲೇಖಿಸಿದ್ದರು.
ಮುಂದೆ ಓದಿ..; ಮಕ್ಕಳ ಮುಂದೆಯೇ ದಾಂಪತ್ಯಕ್ಕೆ ಕಾಲಿಟ್ಟ ವೃದ್ದರು..!! ಅಚ್ಚರಿಯಾದ್ರು ಇದು ಸತ್ಯ..!!
ಮದುವೆ ನಡೆದ ಬಳಿಕ ವರನ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರನ್ನು ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ. ಮಾರ್ಚ್1 ರಂದು ಮದುವೆ ಆಮಂತ್ರಣ ಪತ್ರಿಕೆ ಮುದ್ರಿಸಿ ಶಿವಪ್ರಸಾದ್ರವರು ಹಂಚಿದ್ದರು. ನೀತಿ ಸಂಹಿತಿ ಘೋಷಣೆಗೆ ಮೊದಲೇ ಈ ಆಮಂತ್ರಣ ಪತ್ರಿಕೆ ಮುದ್ರಣಗೊಂಡಿತ್ತಾದರೂ ಇದೀಗ ಚುನಾವಣಾ ಅಧಿಕಾರಿಗಳಿಂದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
DAKSHINA KANNADA
ಮೇ 3 ರಂದು ಗಬ್ಬರ್ ಸಿಂಗ್ ತುಳು ಸಿನಿಮಾ ತೆರೆಗೆ
ಮಂಗಳೂರು: ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ತಯಾರಾದ ಸತೀಶ್ ಬಾರ್ಕೂರು ನಿರ್ಮಾಣದ ಗಬ್ಬರ್ ಸಿಂಗ್ ತುಳು ಚಲನ ಚಿತ್ರ ಮೇ 3 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ.
ಉತ್ತರ ಪ್ರದೇಶದಲ್ಲಿ ನಡೆದ ಘಟನೆಯೊಂದನ್ನು ಆಧರಿಸಿ ಗಬ್ಬರ್ ಸಿಂಗ್ ತುಳು ಸಿನಿಮಾ ಕಥೆಯನ್ನು ಹೆಣೆಯಲಾಗಿದೆ. ಸಿನಿಮಾದಲ್ಲಿ ಆರು ಹಾಡು, ನಾಲ್ಕು ಫೈಟ್ಸ್ ಇದೆ. ಈ ಚಿತ್ರವನ್ನುಸುರತ್ಕಲ್, ಚಿತ್ರಾಪುರ, ಬೈಕಂಪಾಡಿ ಮೊದಲಾದ ಪ್ರದೇಶಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ನಾಯಕ ನಟನಾಗಿ ಶರಣ್ ಶೆಟ್ಟಿ ನಾಯಕಿಯಾಗಿ ವೆನ್ಸಿಟಾ ಅಭಿನಯಿಸಿದ್ದಾರೆ. ಗಬ್ಬರ್ ಸಿಂಗ್ ಸಿನಿಮಾ ಈಗಾಗಲೇ ಮಸ್ಕತ್ ಮತ್ತು ಉಡುಪಿಯಲ್ಲಿ ಸಿನಿಮಾದ ಪ್ರೀಮಿಯರ್ ಶೋ ನಡೆದಿದೆ. ಎಂದು ನಿರ್ಮಾಪಕ ಸತೀಶ್ ಬಾರ್ಕೂರು ತಿಳಿಸಿದ್ದಾರೆ.
“ಗಬ್ಬರ್ ಸಿಂಗ್” ಆ್ಯಕ್ಷನ್ ಥ್ರಿಲ್ಲರ್ ಫ್ಯಾಮಿಲಿ ಓರಿಯೆಂಟೆಡ್ ಫಿಲ್ಮ್ ಆಗಿದೆ. ಈ ಸಿನಿಮಾದ ಕಥೆ, ಚಿತ್ರಕಥೆ, ನಿರ್ಮಾಪಕರು ಸತೀಶ್ ಪೂಜಾರಿ ಬಾರ್ಕೂರ್ , ನಿರ್ದೇಶನದ ಜವಾಬ್ದಾರಿಯನ್ನು ಪ್ರದೀಪ್ ವಹಿಸಿದ್ದಾರೆ. ಮಧು ಸುರತ್ಕಲ್ ಸಂಭಾಷಣೆ ರಚಿಸಿದ್ದಾರೆ.
ಮುಖ್ಯ ಪಾತ್ರದಲ್ಲಿ ಕುಸೇಲ್ದರಸೆ ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಸಾಯಿಕೃಷ್ಣ, ಉಮೇಶ್ ಮಿಜಾರ್, ರವಿರಾಮ ಕುಂಜ, ಗಿರೀಶ್ ಎಂ. ಶೆಟ್ಟಿ ಕಟೀಲ್, ವೀಣಾ ಶೆಟ್ಟಿ ಉಡುಪಿ, ಅಥರ್ವ ಪ್ರಕಾಶ್, ಉದಯ ಆಳ್ವ ಇಡ್ಯಾ, ಸಂದೀಪ್ ಭಕ್ತ, ಕಿರಣ್ ಮಲ್ಪೆ, ಪೂರ್ಣಿಮಾ ಶೆಟ್ಟಿ, ಪವಿತ್ರ ಶೆಟ್ಟಿ,ಚಂದ್ರಹಾಸ ಶೆಟ್ಟಿ ಮಾಣಿ, ಸಂಪತ್ ಲೋಬೋ, ಆಶಾ ಶೆಟ್ಟಿ ಶಿಬರೂರು, ಲಹರಿ ಶೆಟ್ಟಿ ಪಡ್ರೆ, ಶಿಲ್ಪಾ ಶೆಟ್ಟಿ, ಭವ್ಯಾ ಶೆಟ್ಟಿ ಸುರತ್ಕಲ್ ಸಂತೋಷ್, ಚಂದ್ರಹಾಸ ಶೆಟ್ಟಿ ಕಪ್ಪೆಟ್ಟು, ಫ್ರಾಂಕಿ ಕೊಳಲಗಿರಿ, ಉಮೇಶ್ ಶೆಟ್ಟಿ ಹಾವಂಜೆ, ಬೇಬಿ ಆಧ್ಯಾ ಉಡುಪಿ ಮೊದಲಾದವರಿದ್ದಾರೆ.
ಛಾಯಾಗ್ರಹಣ: ರವಿ ಸುವರ್ಣ, ಸಂಕಲನ: ಪ್ರಜ್ವಲ್ ಸುವರ್ಣ, ಕಲೆ: ವೆಂಕಟೇಶ್ ಬೆಂಗಳೂರು, ಸಂಗೀತ: ಡೊಲ್ಪಿನ್ ಕೊಳಲಗಿರಿ. ಹಿನ್ನಲೆ ಸಂಗೀತ: ಕಾರ್ತಿಕ್ ಮುಲ್ಕಿ, ಸಾಹಸ: ಅಲ್ಟಿಮೆಟ್ ಶಿವ್ ನೃತ್ಯ: ಅವಿನಾಶ್ ಬಂಗೇರ, ಶುಭಕಿರಣ್, ಮೇಕಪ್ ಪ್ರದೀಪ್, ವಸ್ತ್ರಾಲಂಕಾರ : ಶರತ್ ಬರ್ಕೆ, ಸಹ ನಿರ್ದೇಶನ: ಪುಷ್ಪರಾಜ ರೈ, ಜಯರಾಜ್, ಸಹಾಯ: ಭಾಗ್ಯರಾಜ್ ಮಾಡಿದ್ದಾರೆ.
ಪ್ರೀಮಿಯರ್ ಶೋ
ಈಗಾಗಲೇ ಮಸ್ಕತ್, ಕತಾರ್ ಉಡುಪಿ, ಸುರತ್ಕಲ್ ನಲ್ಲಿ ಗಬ್ನರ್ ಸಿಂಗ್ ಸಿನಿಮಾದ ಪ್ರೀಮಿಯರ್ ಶೋ ನಡೆದಿದೆ. ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಲಭಿಸಿದೆ. ಸಾಂಸಾರಿಕ ಕತೆಯ ಜೊತೆ ಇಲ್ಲಿ ಹಾಸ್ಯವೂ ಚೆನ್ನಾಗಿ ವಕ್೯ಹೌಟ್ ಆಗಿದೆ. ನವೀನ್ ಪಡೀಲ್, ಬೋಜರಾಜ್ ವಾಮಂಜೂರು, ಅರವಿಂದ ಬೋಳಾರ್, ಸಾಯಿಕೃಷ್ಣ, ಉಮೇಶ್ ಮಿಜಾರ್, ಪ್ರಸನ್ನ ಶೆಟ್ಟಿ ಬೈಲೂರು, ರವಿರಾಮ ಕುಂಜ ಇವರ ಹಾಸ್ಯ ಸಕ್ಕತ್ತಾಗಿದೆ. ಜೊತೆಗೆ ಗಿರೀಶ್ ಶೆಟ್ಟಿ ಕಟೀಲು, ವೀಣಾ ಶೆಟ್ಟಿ ಉಡುಪಿ, ಅಥರ್ವ ಪ್ರಕಾಶ್ ಮೊದಲಾದವರ ಪಾತ್ರಗಳೂ ಕೂಡಾ ಇಲ್ಲಿ ಪ್ರಾಮುಖ್ಯತೆಯನ್ನು ಪಡೆದಿದೆ ಎಂದು ನಿರ್ಮಾಪಕ ಸತೀಶ್ ಬಾರ್ಕೂರು ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ನಿರ್ಮಾಪಕ ಸತೀಶ್ ಪೂಜಾರಿ ಬಾರ್ಕೂರು, ನಟ ಭೋಜರಾಜ ವಾಮಂಜೂರು, ಮಧು ಸುರತ್ಕಲ್, ಚಂದ್ರ ಶೇಖರ ನಾನಿಲ್ ಹಳೆಯಂಗಡಿ, ನಟ ಶರಣ್ ಶೆಟ್ಟಿ
ನಟಿ ವೆನ್ಸಿಟಾ ಇದ್ದರು.
DAKSHINA KANNADA
ಸಾವಿನಲ್ಲೂ ಒಂದಾದ ಸಹೋದರರು! ಅಣ್ಣನ ನಿಧನದ ಸುದ್ದಿ ಕೇಳಿ ಇಹಲೋಕ ತ್ಯಜಿಸಿದ ತಮ್ಮ
ಸುಳ್ಯ : ಸಹೋದರರಿಬ್ಬರು ಸಾ*ವಿನಲ್ಲೂ ಒಂದಾದ ಘಟನೆ ಸುಳ್ಯದ ಅರಂತೋಡಿನಲ್ಲಿ ನಡೆದಿದೆ. ಅರಂತೋಡು ಗ್ರಾಮದ 82 ವರ್ಷದ ಎಸ್. ಇ. ಅಬ್ದುಲ್ಲಾ ಹಾಗೂ ಮಹಮ್ಮದ್ ಎಸ್. ಇ ಮೃ*ತ ಸಹೋದರರು.
ಅಬ್ದುಲ್ಲಾ ಅವರು ಅಲ್ಪಕಾಲದ ಅಸೌಖ್ಯದಿಂದ ನಿಧ*ನರಾಗಿದ್ದಾರೆ. ಈ ವಿಚಾರ ತಿಳಿದ ಅವರ ಸಹೋದರ ಮಹಮ್ಮದ್ ಕುಸಿದು ಬಿದ್ದು ಸಾ*ವನ್ನಪ್ಪಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ : ಕೋವಿಶೀಲ್ಡ್ ಲಸಿಕೆ ಅಡ್ಡ ಪರಿಣಾಮ ಬೀರಲಿದೆ; ಸತ್ಯ ಒಪ್ಪಿಕೊಂಡ ಆಸ್ಟ್ರಾಜೆನಿಕಾ! ಏನಿದರ ಪರಿಣಾಮ?
ಇಬ್ಬರನ್ನು ಕಳೆದುಕೊಂಡ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ.
- FILM6 days ago
“ನಿತ್ಯಾಮೆನನ್” ಚಿತ್ರರಂಗದಿಂದ ‘ಬ್ಯಾನ್’ ಆಗಲು ಕಾರಣವೇನು ಗೊತ್ತಾ? ಈ ಬಗ್ಗೆ ನಿತ್ಯಾ ಹೇಳಿದ್ದೇನು?
- DAKSHINA KANNADA6 days ago
ನಮ್ಮ ಮಾತುಗಳಿಗೆ ಅಸ್ತು ಅನ್ನುವ ಅಶ್ವಿನಿ ದೇವತೆಗಳು – ಯಾರಿವರು?
- LATEST NEWS7 days ago
ಖತರ್ನಾಕ್ ಕಳ್ಳನನ್ನು ಬಂಧಿಸಿದ ಕೋಟ ಪೊಲೀಸರು; ‘ನನ್ನ ಬಗ್ಗೆ ಮಾಹಿತಿ ಬೇಕಾದ್ರೆ ಯೂಟ್ಯೂಬ್ ನೋಡಿ’ ಎಂದ ಖದೀಮ!
- bangalore7 days ago
ರಾಜ್ಯದ ಎಂಟು ಜಿಲ್ಲೆಗಳಲ್ಲಿ ಮಳೆಯಾಗಲಿದೆ: ಹವಾಮಾನ ಇಲಾಖೆ ಮುನ್ಸೂಚನೆ