DAKSHINA KANNADA
ದ.ಕ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ನಿಲುವು ಅವೈಜ್ಞಾನಿಕ, ಖಂಡನೀಯ-ಮುನೀರ್ ಕಾಟಿಪಳ್ಳ
ಮಂಗಳೂರು: ‘ಇದೀಗ ಮುಚ್ಚಲಾಗಿರುವ ಸುರತ್ಕಲ್ ಅಕ್ರಮ ಟೋಲ್ ಗೇಟ್ ಸುಂಕವನ್ನು ಹೆಜಮಾಡಿ ನವಯುಗ್ ಟೋಲ್ ಪ್ಲಾಜಾದಲ್ಲಿ ಸಂಗ್ರಹಿಸುವ ಹೆದ್ದಾರಿ ಪ್ರಾಧಿಕಾರದ ಆದೇಶದ ಕುರಿತು ಉಡುಪಿ ಜಿಲ್ಲಾಡಳಿತ ನಡೆಸಿದ ಸಭೆಯ ತೀರ್ಮಾನದ ಕುರಿತಂತೆ ದಕ್ಷಿಣ ಕನ್ನಡ ಉಸ್ತುವಾರಿ ಸಚಿವರು ನೀಡಿರುವ ಮಾಹಿತಿ ಕುರಿತು ಹೋರಾಟ ಸಮಿತಿ ತೀವ್ರ ಆಕ್ಷೇಪವನ್ನು ವ್ಯಕ್ತಪಡಿಸುತ್ತದೆ’ ಎಂದು ಟೋಲ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಹೇಳಿದರು.
ಹೆಜಮಾಡಿ ಟೋಲ್ ಗೇಟ್ ನಲ್ಲಿ ಉಡುಪಿ ನೊಂದಾವಣೆಯ ಕೆ ಎ 20 ವಾಹನಗಳಿಗೆ ಮಾತ್ರ ಸುರತ್ಕಲ್ ಟೋಲ್ ಸುಂಕದಿಂದ ಪೂರ್ಣ ವಿನಾಯತಿ ಕೊಡಬೇಕು, ಆ ವಾಹನಗಳ ಓಡಾಟಕ್ಕೆ ಪ್ರತ್ಯೇಕ ಲೇನ್ ನಿರ್ಮಿಸಬೇಕು ಎಂಬ ಪ್ರಸ್ತಾವನೆ ಅವೈಜ್ಞಾನಿಕ ಮಾತ್ರ ಅಲ್ಲ. ತೀವ್ರವಾದ ತಾರತಮ್ಯದಿಂದ ಕೂಡಿದೆ.
ಸುರತ್ಕಲ್ ಅಕ್ರಮ ಟೋಲ್ ಸುಂಕವನ್ನು ಉಡುಪಿ, ದ.ಕ ವಾಹನಗಳು ಮಾತ್ರವಲ್ಲ, ಹೆಜಮಾಡಿ ಟೋಲ್ ಪ್ಲಾಜಾ ದಾಟುವ ಯಾವುದೇ ರಾಜ್ಯಗಳ ವಾಹನಗಳಿಂದ ಸಂಗ್ರಹಿಸಿದರೂ ಅದು ಸುಲಿಗೆಯೇ ಆಗುತ್ತದೆ. ಸುರತ್ಕಲ್ ನಲ್ಲಿ ಮಂಗಳೂರು ನೊಂದಾವಣೆಯ ಖಾಸಗಿ ವಾಹನಗಳಿಗೆ ಉಚಿತ ಓಡಾಟದ ಅವಕಾಶ ಇದ್ದರೂ ಟೋಲ್ ಸುಲಿಗೆಯ ವಿರುದ್ದ ಹೋರಾಟ ನಡೆಸಿರುವುದು ಇಂತಹ ವಿಶಾಲ ಮನೋಭಾವದಿಂದ, ನ್ಯಾಯಪ್ರಜ್ಞೆಯಿಂದ. ಇದು ಬಿಜೆಪಿ ಜನಪ್ರತಿನಿಧಿಗಳಿಗೆ, ಉಡುಪಿ ಜಿಲ್ಲಾಡಳಿತಕ್ಕೆ ಅರ್ಥ ಆಗದಿರುವುದು ದುರದೃಷ್ಟಕರ.
ಮಾನ್ಯ ಸುನಿಲ್ ಕುಮಾರ್ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರು. ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಜನತೆಯ, ಆಡಳಿತದ ಹಿತಾಸಕ್ತಿಗಳನ್ನು ಎತ್ತಿಹಿಡಿಯುವ ಕರ್ತವ್ಯ ಇದೆ.
ಹಾಗಿರುತ್ತಾ ಅವರು ಉಡುಪಿ ಜಿಲ್ಲಾಡಳಿತದ ಸಭೆಯಲ್ಲಿ ಭಾಗಿಯಾಗಿ ಮಂಗಳೂರು ವಾಹನಗಳ ಹಿತಾಸಕ್ತಿಯನ್ನು ಕಡೆಗಣಿಸಿರುವುದು, ಉಚಿತ ಪ್ರಯಾಣದ ಅವಕಾಶವನ್ನು ನಿರಾಕರಿಸಿರುವುದು ಖಂಡನೀಯ. ಆ ಮೂಲಕ ಅವರು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಮುಂದುವರಿಯುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ. ಉಡಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಮಾನ್ಯ ಅಂಗಾರ ರವರು ಸಭೆಯ ಅಧ್ಯಕ್ಷತೆ ವಹಿಸಿದ್ದರೂ ಈ ಚರ್ಚೆಗಳ ಸಂದರ್ಭ ಮೂಕ ಪ್ರೇಕ್ಷಕರಾಗಿದ್ದದ್ದು ದುರದೃಷ್ಟಕರ.
ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವು ಸಂಬಂಧ ಹೆದ್ದಾರಿ ಪ್ರಾಧಿಕಾರದ ಮಹತ್ವದ ಸಭೆ ಅಕ್ಟೋಬರ್ 14, 2022 ರಂದು ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದಿತ್ತು.
ಆ ಸಭೆಯಲ್ಲಿ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ಎಮ್ ಕೆ ವತಾರೆ ಸ್ವತಹ ಭಾಗಿಯಾಗಿದ್ದರು. ವಿಲೀನದ ಕುರಿತು ನಿರ್ಣಾಯಕ ಪ್ರಸ್ಥಾಪಗಳು ಆ ಸಭೆಯಲ್ಲಿ ತೀರ್ಮಾನಗೊಂಡಿದ್ದವು.
ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾಗಿ, ಸುರತ್ಕಲ್ ಟೋಲ್ ನಿಂದ ಅತಿ ಹೆಚ್ಚು ಭಾದಿತ ಉಡುಪಿ ಜಿಲ್ಲೆಗೆ ಸೇರಿದ ಶಾಸಕರಾಗಿ ಸುನಿಲ್ ಕುಮಾರ್ ಆ ಸಭೆಯಲ್ಲಿ ಭಾಗಿಯಾಗದಿರುವುದು, ಜಿಲ್ಲೆಯ ಉಳಿದ ಶಾಸಕರು ಭಾಗವಹಿಸುವಂತೆ ಮಾಡದಿರುವುದು ಯಾಕೆ ?
ಅಂದಿನ ಸಭೆಯಲ್ಲಿ ಉಸ್ತುವಾರಿ ಸಚಿವರು ಭಾಗಿಗಳಾಗಿದ್ದರೆ ಸಭೆಯ ಅಧ್ಯಕ್ಷತೆ ಸುನಿಲ್ ಕುಮಾರ್ ಅವರದ್ದೇ ಆಗಿರುತ್ತಿತ್ತು ಅಲ್ಲವೇ? ಅಂದು ಸಭೆಯಲ್ಲಿ ಭಾಗಿಗಳಾಗಿದ್ದರೆ ಈಗ ಅವೈಜ್ಞಾನಿಕ ಎಂದು ಹೇಳುವ ತೀರ್ಮಾನಕ್ಕೆ ಆಗಲೆ ತಡೆ ಬೀಳುತ್ತಿತ್ತು.
ಅಕ್ಟೋಬರ್ 17 ರಂದು ಮುಕ್ಕ, ಬಿಸಿ ರೋಡ್ ಹೆದ್ದಾರಿ ನಿರ್ಮಾಣಕ್ಕೆ ಹಣಕಾಸು ಒದಗಿಸಿರುವ ಬ್ಯಾಂಕರ್ ಗಳ ಸಭೆ ಮಂಗಳೂರಿನಲ್ಲಿ ನಡೆದಿತ್ತು. ಆಗಲೂ ಉಸ್ತುವಾರಿ ಸಚಿವರಾದ ಮಾನ್ಯ ಸುನಿಲ್ ಕುಮಾರ್ ಸಭೆಯಲ್ಲಿ ಭಾಗಿಯಾಗಿ ವಿವರಗಳನ್ನು ಪಡೆದುಕೊಳ್ಳದಿದ್ದದ್ದು ಯಾಕೆ ?
ಈ ಎಲ್ಲಾ ಸಭೆಗಳ ನಡಾವಳಿ, ಪ್ರಸ್ತಾವನೆಗಳ ಆಧಾರದಲ್ಲಿ ಹೆದ್ದಾರಿ ಪ್ರಾಧಿಕಾರವು ಹೆಜಮಾಡಿ ನವಯುಗ್ ಟೋಲ್ ಗೇಟ್ ನೊಂದಿಗೆ ವಿಲೀನ ಹಾಗೂ ಪರಿಷ್ಕೃತ ದರಪಟ್ಟಿಯೊಂದಿಗೆ ರಾಜ್ಯ ಸರಕಾರಕ್ಕೆ ಪ್ರಸ್ತಾವನೆಯನ್ನು ಅನುಮೋದನೆಗಾಗಿ ಕಳುಹಿಸಿಕೊಟ್ಟಿತ್ತು.
ಆ ಪ್ರಸ್ತಾವನೆಯ ಕುರಿತು ತೀರ್ಮಾನ ಕೈಗೊಳ್ಳಲು ಅಕ್ಟೋಬರ್ 28 ರಂದು ರಾಜ್ಯ ಸರಕಾರ ಬೆಂಗಳೂರಿನಲ್ಲಿ ಹೆದ್ದಾರಿ ಪ್ರಾಧಿಕಾರದ ಸಭೆ ನಡೆಸಿ ಯಾವುದೇ ತಕರಾರು, ಅಕ್ಷೇಪಗಳನ್ನು ಎತ್ತದೆ ಪ್ರಸ್ತಾವನೆಗೆ ಅನುಮೋದನೆಯನ್ನು ನೀಡಿತು. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಬಹುದೊಡ್ಡ ಸಮಸ್ಯೆಯ ಕುರಿತಾದ ರಾಜ್ಯ ಸರಕಾರದ ಮಟ್ಟದ ಸಭೆ ನಡೆಯುವಾಗ ಸಂಪುಟ ದರ್ಜೆಯ ಸಚಿವರಾಗಿ, ದ.ಕ.ಜಿಲ್ಲಾ ಉಸ್ತುವಾರಿ ಸಚಿವರಾಗಿ ಸುನಿಲ್ ಕುಮಾರ್ ಅವರ ಪಾತ್ರ ಏನಿತ್ತು ? ಸಭೆ ನಡೆಯುವ ಮಾಹಿತಿಯೇ ಅವರಿಗೆ ಇರಲಿಲ್ಲವೆ ?
ಈ ಎಲ್ಲಾ ಸಂದರ್ಭದಲ್ಲಿ ತಮಗೂ, ಸುರತ್ಕಲ್ ಅಕ್ರಮ ಟೋಲ್ ಗೇಟ್ ಸಮಸ್ಯೆಗೂ ಯಾವುದೇ ಸಂಬಂಧ ಇಲ್ಲ ಎಂದು ಮೌನ ವಹಿಸಿದ್ದು ಈಗ ತಾವು ಹೇಳುತ್ತಿರುವ “ಅವೈಜ್ಞಾನಿಕ” ಎಂಬ ಆದೇಶಗಳು ಹೊರಡಲು ಕಾರಣವಲ್ಲವೆ ?
ಇನ್ನು ಸುರತ್ಕಲ್ ಟೋಲ್ ಸುಂಕದ ಬಾಕಿ ಮೊತ್ತ ಸಂಗ್ರಹಕ್ಕೆ ತಾವು ಸೂಚಿಸುತ್ತಿರುವ “ಮೂರು ಟೋಲ್ ಗೇಟ್ ಗಳಲ್ಲಿ ಹಂಚಿಕೆ ಮಾಡಿ ಸಂಗ್ರಹಿಸುವ” ಪರಿಹಾರವೇ ಅವೈಜ್ಞಾನಿಕತೆಯಿಂದ ಕೂಡಿದೆ ಮಾನ್ಯ ಸುನಿಲ್ ಕುಮಾರ್ ಅವರೆ.
ಮಂಜೇಶ್ವರ ಭಾಗದಿಂದ ಮಂಗಳೂರು ಕಡೆಗೆ ತೆರಳುವ 90 ಶೇಕಡಾ ವಾಹನಗಳು ನಂತೂರು ಸುರತ್ಕಲ್ ರಸ್ತೆಯನ್ನು ಪ್ರವೇಶಿಸುವುದಿಲ್ಲ, ಹಾಗೆಯೆ ಮಂಗಳೂರು, ತೊಕ್ಕೊಟು ಭಾಗದಿಂದ ತಲಪಾಡಿ ಟೋಲ್ ಗೇಟ್ ದಾಟುವ ವಾಹನಗಳು ನಂತೂರು, ಸುರತ್ಕಲ್ ರಸ್ತೆಯನ್ನು ಬಳಸಿರುವುದಿಲ್ಲ. ಬಿಸಿ ರೋಡ್ ನಲ್ಲಿರುವ ಬ್ರಹ್ಮರ ಕೂಟ್ಲು ಟೋಲ್ ಗೇಟ್ ದಾಟುವ ವಾಹನಗಳ ಸ್ಥಿತಿಯೂ ಸರಾಸಾರಿ ಹೀಗೆಯೆ ಇದೆ.
ನಿಮ್ಮ ಹಂಚಿಕೆ ನೀತಿಯನ್ನು ಹೆದ್ದಾರಿ ಪ್ರಾಧಿಕಾರ ಒಪ್ಪಿಕೊಂಡರೆ ಈ ವಾಹನ ಸವಾರರು ತಾವು ಬಳಸದೇ ಇರುವ ಸುರತ್ಕಲ್, ನಂತೂರು ರಸ್ತೆಗೆ ಅನ್ಯಾಯವಾಗಿ ಬ್ರಹ್ಮರ ಕೂಟ್ಲು, ತಲಪಾಡಿ ಟೋಲ್ ಪ್ಲಾಜಾದಲ್ಲಿ ಹೆಚ್ಚುವರಿ ಸುಂಕ ಕಟ್ಟಬೇಕಾಗುತ್ತದೆ.
ಇದು ಅವೈಜ್ಞಾನಿಕ ಮಾತ್ರ ಅಲ್ಲ, ಬಲವಂತದ ಸುಲಿಗೆಯೂ ಆಗುತ್ತದೆ ಎಂಬುದನ್ನು ತಮ್ಮ ಗಮನಕ್ಕೆ ತರುತ್ತಿದ್ದೇವೆ.
ಈ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ಇರುವುದು ಒಂದೇ ದಾರಿ. ತಪ್ಪು ಮಾಡಿರುವುದು ಅಕ್ರಮ ಟೋಲ್ ಗೇಟ್ ಹಾಕಿರುವ ಹೆದ್ದಾರಿ ಪ್ರಾಧಿಕಾರ. ಹೆದ್ದಾರಿ ಪ್ರಾಧಿಕಾರ ಹಾಗೂ ರಾಜ್ಯ ಸರಕಾರ ಸೇರಿಕೊಂಡು ತಾವು ಹೇಳುತ್ತಿರುವ ಕೆಲವು ಕೋಟಿ ರೂಪಾಯಿ ಉಳಿಕೆ ಮೊತ್ತವನ್ನು ಭರಿಸುವುದು, ನಂತೂರು, ಸುರತ್ಕಲ್ ಹೆದ್ದಾರಿಯನ್ನು ಟೋಲ್ ಮುಕ್ತ ರಸ್ತೆ ಎಂದು ಘೋಷಿಸುವುದು’ ಎಂದು ಹೇಳಿದ್ದಾರೆ.
DAKSHINA KANNADA
ಬೆಂ*ಕಿಗೆ ಆಹುತಿಯಾದ ಹಡಗಿನಿಂದ ಅಪಾಯವಿಲ್ಲ, ಆತಂಕ ಬೇಡ : ಜಿಲ್ಲಾಧಿಕಾರಿ ಮುಲೈ ಮುಗಿಲನ್ ಸ್ಪಷ್ಟನೆ
ಮಂಗಳೂರು : ಮಂಗಳೂರು ಕರಾವಳಿಯ ಸಮುದ್ರದಲ್ಲಿ ಬೆಂ*ಕಿಗೆ ಆಹುತಿಯಾದ ವಿದೇಶಿ ಹಡಗಿನಿಂದ ಮಂಗಳೂರು ಕರಾವಳಿಗೆ ಯಾವುದೇ ಆತಂಕ ಇಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟ ಪಡಿಸಿದ್ದಾರೆ.
ಜುಲೈ 19 ರಂದು ಗುಜರಾತ್ನಿಂದ ಕೊಲೊಂಬೋಕ್ಕೆ ತೆರಳುತ್ತಿದ್ದ ಸರಕು ಸಾಗಟದ ಹಡುಗು ಬೆಂ*ಕಿಗೆ ಆಹುತಿಯಾಗಿತ್ತು. ತಕ್ಷಣ ಕೋಸ್ಟ್ಗಾರ್ಡ್ ತಂಡ ನಿರಂತರ ನಲುವತ್ತು ಗಂಟೆ ಪ್ರಯತ್ನ ನಡೆಸಿ ಬೆಂಕಿ ನಂದಿಸುವ ಕೆಲಸವಾಗಿತ್ತು. ಬಳಿಕ ಹಡಗನ್ನು ಮಂಗಳೂರು ಕರಾವಳಿಯ 30 ನಾಟಿಕಲ್ ದೂರದಲ್ಲಿ ನಿಲ್ಲಿಸಲಾಗಿತ್ತು. ಇದರಿಂದ ತೈಲ ಸೋರಿಕೆ ಆಗುವ ಆತಂಕವನ್ನು ಹಲವರು ವ್ಯಕ್ತಪಡಿಸಿದ್ದರು.
ಇದನ್ನೂ ಓದಿ : 5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್..!
ಹಡಗು ಮುಳುಗಡೆಯಾಗುವ ಭೀತಿ ಇದ್ದು ಹಾಗಾದಲ್ಲಿ ಹಡಗಿನಲ್ಲಿರುವ ತೈಲ ಸೋರಿಕೆ ಆಗಬಹುದು ಎಂದು ಸುದ್ದಿಯಾಗಿತ್ತು. ಆದ್ರೆ, ಈ ವಿಚಾರವಾಗಿ ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು, ಅಂತಹ ಯಾವುದೇ ಅಪಾಯ ಇಲ್ಲ ಎಂದು ಹೇಳಿದ್ದಾರೆ. ಅಂತಹ ಅವ*ಘಡ ನಡೆದಲ್ಲಿ ಅದನ್ನು ಎದುರಿಸಲು ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಜಿಲ್ಲಾಡಳಿತ ಹಾಗೂ ಕೋಸ್ಟ್ಗಾರ್ಡ್ ಮತ್ತು ಕರಾವಳಿ ಕಾವಲು ಪಡೆ ಸನ್ನದ್ಧವಾಗಿದೆ ಎಂದು ಮಾಹಿತಿ ನೀಡಿದ್ದಾರೆ.
DAKSHINA KANNADA
ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ
ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.
ಉತ್ತರದ ಬ್ರೇಕ್ ವಾಟರ್ 831 ಮೀಟರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.
ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.
DAKSHINA KANNADA
ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು
ಮಂಗಳೂರು: ಗುಜರಾತ್ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.
ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್ ಗಾರ್ಡ್ ತಂಡ ಹೆಲಿಕಾಪ್ಟರ್ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.
ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್ ಗಾರ್ಡ್ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್ ಗಾರ್ಡ್ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.
- LATEST NEWS5 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ