LATEST NEWS
ರಾಜ್ಯ, ರಾಷ್ಟ್ರಕ್ಕೆ ಪತ್ರಕರ್ತರ ಕೊಡುಗೆ ದೊಡ್ಡದಿದೆ: ಶಾಸಕ ವೇದವ್ಯಾಸ್ ಕಾಮತ್
ಮಂಗಳೂರು: ರಾಜ್ಯ, ರಾಷ್ಟ್ರಕ್ಕೆ ಪತ್ರಕರ್ತರ ಕೊಡುಗೆ ದೊಡ್ಡದಿದೆ. ಕೊರೋನಾ ಸಹಿತ ಅಹಿತರ ಘಟನೆಗಳು ನಡೆದಾಗ ಪತ್ರಕರ್ತರು ತಮ್ಮ ಜೀವದ ಹಂಗು ತೊರೆದು ಕೆಲಸ ಮಾಡುವುದು ನೋಡಿದಾಗ ಮೆಚ್ಚಬೇಕು ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.
ನಗರದ ಪುರಭವನದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಪತ್ರಕರ್ತರ ಸಮ್ಮೇಳನವನ್ನು ಶಾಸಕ ವೇದವ್ಯಾಸ್ ಕಾಮತ್ ಉದ್ಘಾಟಿಸಿ ಮಾತನಾಡಿದರು.
ಪತ್ರಕರ್ತರಿಂದ ಸಮಾಜಕ್ಕೆ ಎಲ್ಲಾ ರೀತಿಯ ಮಾಹಿತಿ ಸಿಗುತ್ತಿದೆ. ಜೊತೆಗೆ ಸರಕಾರ, ಜನಪ್ರತಿನಿಗಳು, ಅಧಿಕಾರಿ ವರ್ಗ ಒಳ್ಳೆಯ ಕೆಲಸ ಮಾಡಿದಾಗ ಬೆನ್ನುತಟ್ಟಿ, ತಪ್ಪುಗಳು ನಡೆದಾಗ ಕಿವಿಹಿಂಡುವ ಕೆಲಸ ಮಾಡುತ್ತಿದ್ದಾರೆ.
ಜೊತೆಗೆ ದ.ಕ ಜಿಲ್ಲಾ ಪತ್ರಕರ್ತರ ಸಂಘ ಗ್ರಾಮವಾಸ್ತವ್ಯದ ಮೂಲಕ ಅಲ್ಲಿನ ಸ್ಥಳೀಯ ಸಮಸ್ಯೆ ಬಗ್ಗೆ ಪತ್ರಿಕಾ ವರದಿಗಳ ಮೂಲಕ ಗಮನ ಸೆಳೆಯುತ್ತಿದ್ದಾರೆ. ಪತ್ರಕರ್ತರಿಗೆ ವಿಮೆ, ನಿವೇಶನ ನೀಡುವ ಕಾರ್ಯ ಮಾಡುತ್ತಿದ್ದಾರೆ ಎಂದರು.
ಸಮ್ಮೇಳನದ ಸರ್ವಾಧ್ಯಕ್ಷ್ಯ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್, ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ,
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಕರಾವಳಿ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಗಣೇಶ್ ರಾವ್, ರಾಜ್ಯ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಮನಪಾ ಮೇಯರ್ ಪ್ರೇಮಾನಂದ ಶೆಟ್ಟಿ, ಪದಾಧಿಕಾರಿಗಳು ಉಪಸ್ಥಿತರಿದ್ದರು.
ಇದೇ ವೇಳೆ ಶಾಸಕ ವೇದವ್ಯಾಸ್ ಕಾರ್ಮಿಕ ಇಲಾಖೆಯ ಕಿಟ್ ವಿತರಿಸಿದರು. ಸಾಧನಾ ಸಂಭ್ರಮದ ಸ್ಮರಣ ಸಂಚಿಕೆಯನ್ನು ಐಕಳ ಹರೀಶ್ ಶೆಟ್ಟಿ ಬಿಡುಗಡೆ ಮಾಡಿದರು.
ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಅವರ ‘ಭಾವಚಿತ್ರಯಾನ’ ಕೃತಿಯನ್ನು ಗಣೇಶ್ ರಾವ್ ಬಿಡುಗಡೆಗೊಳಿಸಿದರು.
DAKSHINA KANNADA
ಮದುವೆ ಸಭಾಂಗಣದ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..! ರಕ್ತಸಿಕ್ತ ಸ್ಥಿತಿಯಲ್ಲಿದ್ದ ಶವ.!!
ಮಂಗಳೂರು: ಹೆಸರಾಂತ ಮದುವೆ ಸಭಾಂಗಣದ ಆವರಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದೆ. ತಲಪಾಡಿಯಲ್ಲಿರುವ ಬಂಟವಾಳದ ಭಂಟರ ಭವನದ ಆವರಣದ ಕಂಪೌಂಡ್ ಒಳಗಡೆ ವ್ಯಕ್ತಿಯೋರ್ವನ ಮೃತದೇಹ ರಕ್ತಸಿಕ್ತವಾಗಿ ಇದ್ದ ರೀತಿಯಲ್ಲಿ ಮೃತ ದೇಹ ಪತ್ತೆಯಾಗಿದೆ. ಉಪ್ಪಿನಂಗಡಿ ವಳಾಲು ಮೂಲದ ನಿವಾಸಿ ಸಂತೋಷ್ ಅವರ ಮೃತದೇಹ ಎಂದು ಗುರುತಿಸಲಾಗಿದೆ.
ಬಂಟರ ಭವನದ ಹೊರಗಡೆ ಸಂತೋಷ್ ಗೆ ಸೇರಿದ್ದ ಬೈಕ್ ಪತ್ತೆಯಾಗಿದೆ. ಬೈಕ್ ನಿಲ್ಲಿಸಿ ಕಂಪೌಂಡ್ ಮೇಲೆ ಕುಳಿತು ಕೊಂಡಿದ್ದು ಈ ವೇಳೆ ಕುಸಿದು ಕೆಳಗೆ ಬಿದ್ದು ಈ ಘಟನೆ ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಮುಂದೆ ಓದಿ.. ಧರ್ಮಸ್ಥಳ: ಸರಣಿ ಅಪ*ಘಾತ, 5 ವಾಹನಗಳಿಗೆ ಹಾನಿ
ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ.ಹರೀಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.
BELTHANGADY
ಧರ್ಮಸ್ಥಳ: ಸರಣಿ ಅಪ*ಘಾತ, 5 ವಾಹನಗಳಿಗೆ ಹಾನಿ
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಸರಣಿ ಅಪ*ಘಾತ ಸಂಭವಿಸಿದ್ದು ಹಲವು ವಾಹನಗಳು ಜಖಂಗೊಂಡಿವೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಸೋಮವಾರ 4ರ ಸುಮಾರಿಗೆ ನೇತ್ರಾವತಿಯಿಂದ ಧರ್ಮಸ್ಥಳಕ್ಕೆ ಬರುವ ರಸ್ತೆಯಲ್ಲಿ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿತು. ಅದರ ಹಿಂದೆ ಇದ್ದ ರಿಕ್ಷಾವೊಂದು ಅಪ*ಘಾತ ಸಂಭವಿಸಿದ ರಿಕ್ಷಾಕ್ಕೆ ತಾಗಿ ಜಖಂಗೊಂಡಿತು.
ವೇಗವಾಗಿ ಬರುತ್ತಿದ್ದ ಕಾರು ಮಗುಚಿ ಬಿದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆಯಿತು. ಅದರ ಹಿಂದಿನಿಂದ ಬರುತ್ತಿದ್ದ ಎರಡು ಕಾರುಗಳು ಒಂದರ ಹಿಂದೆ ಒಂದರಂತೆ ಡಿಕ್ಕಿ ಹೊಡೆದಿವೆ. ಹೀಗೆ ಒಟ್ಟು 2 ರಿಕ್ಷಾಗಳು ಹಾಗೂ 3 ಕಾರುಗಳು ಜಖಂಗೊಂಡಿವೆ. ರಿಕ್ಷಾ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಎಲ್ಲ ಕಾರುಗಳು ಜಖಂಗೊಂಡಿವೆ.
DAKSHINA KANNADA
ಮಂಗಳೂರು : ಕರಾವಳಿ ಮಾಣಿಕ್ಯ ಸೇವಾ ಸಂಸ್ಥೆಯ ವತಿಯಿಂದ ಪುಸ್ತಕ ವಿತರಣಾ ಕಾರ್ಯಕ್ರಮ
ಮಂಗಳೂರು : ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಯುವ ಪೀಳಿಗೆಯ ಯುವ ಮಕ್ಕಳ ಮುಂದಿನ ಉಜ್ವಲ ಭವಿಷ್ಯದ ನಿರ್ಮಾಣಕ್ಕಾಗಿ ಕರಾವಳಿ ಮಾಣಿಕ್ಯ ಸೇವಾ ಸಂಸ್ಥೆಯ ವತಿಯಿಂದ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ಪಚ್ಚನಾಡಿಯಲ್ಲಿ ನಡೆಯಿತು.
ಈ ಸಂದರ್ಭ ಕರಾವಳಿ ಮಾಣಿಕ್ಯ ಸೇವಾ ಸಂಸ್ಥೆಯ ಅಧ್ಯಕ್ಷ ಸತೀಶ್ ಕುಮಾರ್ ಬಜಾಲ್ ಮಾತನಾಡಿ, ನಾವು ಸಣ್ಣವರಿದ್ದಾಗ ಕಲಿಕಾ ಸಾಮಗ್ರಿಗಳಿಲ್ಲದೇ ಕಷ್ಟಪಟ್ಟಿದ್ದೆವು. ಅಂತಹ ಕಷ್ಟ ಬಡ ವಿದ್ಯಾರ್ಥಿಗಳು ಪಡಬಾರದೆಂದು ಸಮಾಜದ ಎಲ್ಲರಿಗೂ ಪ್ರೇರಣೆಯಾಗುವಂತೆ ಮಂಗಳೂರಿನ ಎಲ್ಲಾ ಕಡೆ ಪ್ರತಿವರ್ಷದಂತೆ ಪುಸ್ತಕ ವಿತರಣೆ ಕಾರ್ಯಕ್ರಮ ಮಾಡುವುದಾಗಿ ಭರವಸೆ ನೀಡಿದರು. ಪುಸ್ತಕ ಪಡೆದ ವಿದ್ಯಾರ್ಥಿಗಳು ಜೀವನದಲ್ಲಿ ಕಲಿತು ಆರ್ಥಿಕವಾಗಿ ಬೆಳೆದರೆ, ನೀವು ಕೂಡ ಈ ರೀತಿ ಕಾರ್ಯಕ್ರಮ ಮಾಡುವುದರ ಮೂಲಕ ಬಡ ವಿದ್ಯಾರ್ಥಿಗಳಿಗೆ ಸಹಾಯಮಾಡಿ ಎಂದರು.
ಇದನ್ನೂ ಓದಿ : ಆಸ್ಪತ್ರೆ ಸೆಲ್ ನಲ್ಲಿ ಕುಣಿಕೆಗೆ ಕೊರೊಳೊಡ್ಡಿದ ಖೈದಿ..!
ಗೌರವಾಧ್ಯಕ್ಷ ವಸಂತ್ ಜೆ ಪೂಜಾರಿ, ಉಪಾಧ್ಯಕ್ಷ ಅಕ್ಷಯ್ ಬಂಜನ್, ಕಮಲಾಕ್ಷ ಬಜಾಲ್, ಪ್ರಧಾನ ಕಾರ್ಯದರ್ಶಿ ನಟರಾಜ್ ಪಚ್ಚನಾಡಿ, ಜೊತೆ ಕಾರ್ಯದರ್ಶಿ ಶರತ್ ಕುಂದರ್ ಪದವಿನಂಗಡಿ, ಪ್ರಸಾದ್ ಕುಂಪಲ, ಖಜಾಂಚಿ ಅರುಣ್ ಡಿಸೋಜ, ಸದಸ್ಯ ರಾಕೇಶ್ ಶೆಟ್ಟಿ, ಪಿ ಎಎಫ್ ಸಿ ತಂಡದ ಪ್ರಮುಖರಾದ ಐವನ್ ಆಲ್ವರಿಸ್, ಕೀರ್ತಿ ಪ್ರಸಾದ್, ರಘು, ರಾಕೇಶ್ ಶೆಟ್ಟಿ, ರೂಪೇಶ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
- DAKSHINA KANNADA4 days ago
ಸುಬ್ರಹ್ಮಣ್ಯ: ಕೆಎಸ್ಸಾರ್ಟಿಸಿ ಬಸ್ಗಳ ಹಗಲು ದರೋಡೆ..! ಏನಿದು ಘಟನೆ?
- FILM6 days ago
ಬಿಗ್ ಬಾಸ್ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ನಮ್ರತಾ ಗೌಡ!
- dehali5 days ago
ನಾಯಿಗಳಿಗೂ ಬಂತು ಆಧಾರ್ ಕಾರ್ಡ್.!! ಇನ್ಮುಂದೆ ನಾಯಿಗೂ ಸ್ಕ್ಯಾನ್ ಕಾರ್ಡ್..! ಏನಿದು?
- BELTHANGADY5 days ago
ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು