Connect with us

DAKSHINA KANNADA

ದ.ಕ. ಇಂದಿನಿಂದ ಪೂರ್ಣ ಪ್ರಮಾಣದ ಸೆಮಿ ಅನ್ ಲಾಕ್ : ಮಂಗಳೂರು ನಗರದಲ್ಲಿ ಮತ್ತೆ ಗರಿಕೆದರಿದ ಚಟುವಟಿಕೆಗಳು..!

Published

on

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಲಾಕ್‌ಡೌನ್ ಸಡಿಲಿಕೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿರುವಂತೆಯೇ ಜಿಲ್ಲೆಯ ಕೇಂದ್ರ ಭಾಗವಾದ ಮಂಗಳೂರು ನಗರದೆಲ್ಲೆಡೆ ಲವಲವಿಕೆ ಕಂಡು ಬಂದಿದೆ.

ನಗರದ ಪ್ರಮುಖ ಜಂಕ್ಷನ್‌ಗಳು, ಪೇಟೆಗಳಲ್ಲಿ ಜನಸಂದಣಿ ಹೆಚ್ಚಿದ್ದು, ಮತ್ತೆ ಚಟುವಟಿಕೆ ಗರಿಗೆದರಿದೆ. ಎಲ್ಲೆಂದರಲ್ಲಿ ಜನತೆಯ ಖರೀದಿಯ ಭರಾಟೆ ಇತ್ತು.

ವಿಶೇಷವಾಗಿ ಆಟೋಮೊಬೈಲ್‌ ಅಂಗಡಿಗಳು, ಬ್ಯಾಂಕ್ ಗಳು,  ಗ್ಯಾರೇಜ್‌ಗಳಲ್ಲಿ ಜನ ಬಂದಿರುವುದು ಕಂಡು ಬಂದಿದೆ.

ಇನ್ನು ಜವುಳಿ ವ್ಯಾಪಾರಸ್ಥರು, ಚಪ್ಪಲಿ ಅಂಗಡಿ, ಕ್ಸೇರಾಕ್ಸ್ ಅಂಗಡಿಗಳು, ವಿವಿಧ ಬಗೆಯ ಸ್ಟೋರ್ಸ್‌ಗಳು,  ಬ್ಯೂಟಿ ಪಾರ್ಲರ್‌ಗಳು ಕೂಡಾ ಬೆಳ್ಳಂಬೆಳಿಗ್ಗೆಯೇ ತೆರೆದಿದ್ದು, ಕಳೆದೆರಡು ತಿಂಗಳಿನಿಂದ ಧೂಳು ಹಿಡಿದಿದ್ದ ಸೊತ್ತುಗಳನ್ನು ಸ್ವಚ್ಛ ಮಾಡುವುದು ಕಂಡು ಬಂತು.

ಇಂದಿನಿಂದ ಬೆಳಿಗ್ಗೆ 6ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅಂಗಡಿ ಬಾಗಿಲುಗಳು ತೆರೆದೆಡಲಿವೆ. ಇನ್ನು ಚಿನ್ನದಂಗಡಿಗಳು ಕೂಡಾ ತೆರೆದಿರುವುದು ಕಂಡು ಬಂದಿದೆ.

ನಗರದ ಹೃದಯಭಾಗ ಹಂಪನ್‌ಕಟ್ಟೆ, ಕೇಂದ್ರ ಮಾರುಕಟ್ಟೆ ಪರಿಸರದಲ್ಲೂ ಜನತೆ ಹೆಚ್ಚಿರುವುದು ಕಂಡು ಬಂದಿದೆ.

ಇನ್ನು ಬೆಳ್ಳಂಬೆಳಿಗ್ಗೆ ಎಂದಿನಂತೆ ಪೊಲೀಸರ ಬಂದೋಬಸ್ತ್‌ ಇಲ್ಲದ ಕಾರಣ ಜನತೆ ಕೂಡಾ ರಾಜಾರೋಷವಾಗಿ ಎಲ್ಲೆಡೆ ಅಡ್ಡಾಡಿದ್ದಾರೆ.

ನಗರದಲ್ಲಿ ಭಾರೀ ವಾಹನಗಳೇ ಲಗ್ಗೆ ಇಟ್ಟಿವೆ. ದ್ವಿಚಕ್ರ ವಾಹನ ಸವಾರರು, ಕಾರುಗಳು ಬಹಳಷ್ಟು ಸಂಖ್ಯೆಯಲ್ಲಿ ರಸ್ತೆಗೆ ಇಳಿದಿವೆ. ಆಟೋರಿಕ್ಷಾಗಳಲ್ಲಿ ಕೇವಲ ಇಬ್ಬರನ್ನು ಮಾತ್ರ ಕುಳ್ಳಿರಿಸಿಕೊಂಡು ಹೋಗಬಹುದು ಎಂದು ಆದೇಶದಲ್ಲಿ ಸ್ಪಷ್ಟವಾಗಿ ಸೂಚಿಸಿದ್ದರೂ ಮೂವರನ್ನು ಕುಳ್ಳಿರಿಸಿಕೊಂಡು ಹೋಗುತ್ತಿರುವುದು ಕಂಡು ಬಂದಿದೆ.

ನಗರದಲ್ಲೆಡೆ ರಸ್ತೆಗಳನ್ನು ಅಗೆದು ಹಾಕಿಡಲಾಗಿದ್ದ ಕಾರಣ ಪಾದಚಾರಿಗಳು ಭಾರೀ ಸಂಕಷ್ಟಪಟ್ಟರೆ ವಾಹನ ಸವಾರರು ಸುತ್ತುಬಳಸಿಕೊಂಡು ಓಡಾಡುವುದು ಅನಿವಾರ್ಯವಾಗಿತ್ತು.

ಕೆಎಸ್ಸಾರ್ಟಿಸಿ ಬಸ್ಸು ಸಂಚಾರ ಆರಂಭಗೊಂಡಿದ್ದು, ಪ್ರಮುಖ ರೂಟುಗಳಲ್ಲಿ ಸಂಚರಿಸಿದರೆ, ಖಾಸಗಿ ಬಸ್ಸು ಓಡಾಟ ಸಂಪೂರ್ಣ ಸ್ಥಬ್ಧವಾಗಿತ್ತು. ಖಾಸಗಿ ಬಸ್ಸುಗಳನ್ನು ಓಡಿಸಲ್ಲ ಎಂದು  ಈಗಾಗಲೇ ಬಸ್ಸು ಮಾಲಕರೂ ಕೂಡಾ ಸ್ಪಷ್ಟಪಡಿಸಿದ್ದಾರೆ.

ಮಧ್ಯಾಹ್ನ 2 ಗಂಟೆ ಬಳಿಕ ನಗರ ಮತ್ತೆ ಸ್ಥಬ್ಧಗೊಳ್ಳಲಿದೆ.

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

DAKSHINA KANNADA

ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ

Published

on

ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.

Continue Reading

LATEST NEWS

Trending