DAKSHINA KANNADA
ಇಂತಹ ವಿಷಕಾರಿ ಗಿಡಗಳನ್ನು ಯಾವತ್ತೂ ನೀವು ಮನೆಯಲ್ಲಿ ಇಡಬೇಡಿ!!
ಮಂಗಳೂರು: ನಮ್ಮ ತೋಟಗಳು ಮತ್ತು ಬಾಲ್ಕನಿಗಳಲ್ಲಿ ಅರಳುವ ಹೂವುಗಳು ಮತ್ತು ನಮ್ಮ ಮುಖದಲ್ಲಿ ನಗು ತರುವ ಸಾಕು ಪ್ರಾಣಿಗಳನ್ನು ನಾವು ಪ್ರೀತಿಸುತ್ತೇವೆ. ಆದ್ಧರಿಂದ ಅವರಿಬ್ಬರನ್ನೂ ಉಳಿಸಲು ಮತ್ತು ಸಂತೋಷದ ಶಕ್ತಿಯನ್ನು ಕಾಪಾಡಿಕೊಳ್ಳಲು ಇಲ್ಲಿ ನಾವು ನಿಮ್ಮ ಸಾಕು ಪ್ರಾಣಿಗಳಿಗೆ ಹಾನಿಕಾರಕವಾದ ಕೆಲವು ಸಸ್ಯಗಳ ಬಗ್ಗೆ ಮಾಹಿತಿ ಕೊಡುತ್ತೇವೆ. ಈ ಸಸ್ಯಗಳು ನಿಮ್ಮ ಮನೆಯಲ್ಲಿ ಇದ್ದರೆ ಅದು ವಿಷಕಾರಿ ಗಿಡ. ಅಂತಹ ಸಸ್ಯಗಳನ್ನು ಯಾವತ್ತೂ ನಿಮ್ಮ ಮನೆಯಲ್ಲಿ ಇಡಬೇಡಿ.
ಲೋಳೆ ಸರ
ಅಲೋವೆರಾ ಅದರ ಔಷಧೀಯ ಗುಣಗಳಿಗೆ ಹೆಸರುವಾಸಿಯಾಗಿದೆ. ಆದರೆ ಅದು ಮನುಷ್ಯರಿಗೆ ಮಾತ್ರ ಸೀಮಿತವಾಗಿದೆ. ಸಸ್ಯವನ್ನು ಸೇವಿಸಿದರೆ ಸಾಕುಪ್ರಾಣಿಗಳಿಗೆ ತುಂಬಾ ವಿಷಕಾರಿಯಾಗಬಹುದು ಮತ್ತು ವಾಂತಿ, ಅತಿಸಾರ ಮತ್ತು ನಡುಕವನ್ನು ಉಂಟುಮಾಡಬಹುದು.
ಪೊಥೋಸ್
ಪೋಥೋಸ್ ಜನಪ್ರಿಯ ಒಳಾಂಗಣ ಸಸ್ಯವಾಗಿದ್ದು ಅದು ಗಾಳಿಯನ್ನು ಶುದ್ದೀಕರಿಸುವ ಗುಣಗಳಿಗೆ ಹೆಸರುವಾಸಿಯಾಗಿದೆ. ಆದರೆ ಅವುಗಳನ್ನು ಇಟ್ಟುಕೊಳ್ಳುವುದರ ಸಮಸ್ಯೆಯೆಂದರೆ ಎಲೆಗಳು ಕ್ಯಾಲ್ಸಿಯಂ ಆಕ್ಸಲೇಟ್ ಹರಳುಗಳನ್ನು ಹೊಂದಿರುತ್ತವೆ. ಇದು ಸಾಕು ಪ್ರಾಣಿಗಳ ಬಾಯಿ ಮತ್ತು ಜೀರ್ಣಾಂಗವನ್ನು ಕೆರಳಿಸಬಹುದು.
ಹಾವಿನ ಗಿಡ
ನಮ್ಮ ಸುತ್ತಲಿನ ಗಾಳಿಯನ್ನು ಶುದ್ದೀಕರಿಸಲು ಸಹಾಯ ಮಾಡುವ ಮತ್ತು ಬೆಳೆಯಲು ತುಂಬಾ ಸುಲಭವಾದ ಮತ್ತೊಂದು ಉತ್ತಮ ಸಸ್ಯವೆಂದರೆ ಸ್ನೇಕ್ ಸಸ್ಯ. ಆದರೆ ಮನೆಯಲ್ಲಿ ಸಾಕುಪ್ರಾಣಿ ಇದ್ದರೆ ಜಾಗರೂಕರಾಗಿರಿ. ಹಾವಿನ ಸಸ್ಯಗಳು ಸಪೋನಿನ್ಗಳನ್ನು ಹೊಂದಿರುತ್ತವೆ. ಇದು ಸಾಕುಪ್ರಾಣಿಗಳಲ್ಲಿ ವಾಂತಿ ಮತ್ತು ಭೇದಿಗೆ ಕಾರಣವಾಗಬಹುದು.
ZZ ಸಸ್ಯ
ZZ ಸಸ್ಯಗಳು ತುಂಬಾ ಕಡಿಮೆ ನಿರ್ವಹಣೆಯನ್ನು ಹೊಂದಿವೆ ಮತ್ತು ಯಾರು ಬೇಕಾದರೂ ಬೆಳೆಸಬಹುದು. ಆದರೆ, ZZ ಸಸ್ಯದ ರಸವು ವಿಷಕಾರಿ ಪದಾರ್ಥಗಳು ಮತ್ತು ಉದ್ರೇಕಕಾರಿಗಳನ್ನು ಹೊಂದಿರುತ್ತದೆ. ಅದು ಮನುಷ್ಯರು ಅಥವಾ ಪ್ರಾಣಿಗಳು ಸೇವಿಸಿದರೆ, ಸುಟ್ಟಗಾಯಗಳು ಮತ್ತು ಇತರ ಸಮಸ್ಯೆಗಳನ್ನು ಉಂಟುಮಾಡಬಹುದು.
ಮೂಕ ಕಬ್ಬಿನ ಗಿಡ
ಡೈಫೆನ್ ಬಾಚಿಯಾ ಅಥವಾ ಮೂಕ ಕಬ್ಬನ್ನು ಉಲ್ಲೇಖಿಸಿದಂತೆ, ವಿಶೇಷವಾಗಿ ಸಾಕುಪ್ರಾಣಿಗಳಿಗೆ ಹೆಚ್ಚು ವಿಷಕಾರಿ ಸಸ್ಯವಾಗಿದೆ. ಮೂಕ ಕಬ್ಬಿನ ಎಲೆಗಳನ್ನು ಅಗಿಯುವುದು ಅಥವಾ ರುಚಿ ನೋಡುವುದು ಕಿರಿಕಿರಿ, ವಾಂತಿ ಮತ್ತು ನುಂಗಲು ತೊಂದರೆ ಉಂಟುಮಾಡಬಹುದು. ಇದನ್ನು ಪಶುವೈದ್ಯರು ಮಾತ್ರ ಚಿಕಿತ್ಸೆ ಮಾಡಬಹುದು.
ರಬ್ಬರ್ ಸಸ್ಯ
ರಬ್ಬರ್ ಸಸ್ಯಗಳು ಒಳಾಂಗಣದಲ್ಲಿ ಇರಿಸಿಕೊಳ್ಳಲು ಉತ್ತಮವಾದ ಮತ್ತೊಂದು ಸೆಟ್, ಆದರೆ ದುರದೃಷ್ಟವಶಾತ್ ನೀವು ಸಾಕುಪ್ರಾಣಿಗಳನ್ನು ಹೊಂದಿದ್ದರೆ ಹಾಗಲ್ಲ. ರಬ್ಬರ್ ಸಸ್ಯವು ಫಿಸಿನ್ ಮತ್ತು ರಬ್ಬರ್ ಟ್ರೀ ಲ್ಯಾಟೆಕ್ಸ್ ಎಂದು ಕರೆಯಲ್ಪಡುವ ವಿಷವನ್ನು ಹೊಂದಿರುತ್ತದೆ. ಇದು ಎಲೆಗಳನ್ನು ಅಗಿಯಲು ಅಥವಾ ನುಂಗಲು ಸಾಕುಪ್ರಾಣಿಗಳಿಗೆ ಹಾನಿಕಾರಕವಾಗಿದೆ.
ಲಿಲ್ಲಿಗಳು
ಲಿಲ್ಲಿಗಳು ಸುಂದರವಾಗಿದ್ದರೂ, ಬೆಕ್ಕುಗಳಿಗೆ ಹೆಚ್ಚು ವಿಷಕಾರಿ ಮತ್ತು ಸಣ್ಣ ಪ್ರಮಾಣದಲ್ಲಿ ಮೂತ್ರಪಿಂಡ ವೈಫಲ್ಯವನ್ನು ಉಂಟುಮಾಡಬಹುದು. ಸಸ್ಯದ ಎಲ್ಲಾ ಭಾಗಗಳು, ಪರಾಗ ಮತ್ತು ಹೂದಾನಿಗಳಿಂದ ನೀರು ಸೇರಿದಂತೆ, ತಿಂದರೆ ಅಥವಾ ಕುಡಿದರೆ ಹಾನಿಕಾರಕವಾಗಬಹುದು.
DAKSHINA KANNADA
ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ
ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.
ಉತ್ತರದ ಬ್ರೇಕ್ ವಾಟರ್ 831 ಮೀಟರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.
ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.
DAKSHINA KANNADA
ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು
ಮಂಗಳೂರು: ಗುಜರಾತ್ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.
ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್ ಗಾರ್ಡ್ ತಂಡ ಹೆಲಿಕಾಪ್ಟರ್ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.
ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್ ಗಾರ್ಡ್ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್ ಗಾರ್ಡ್ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.
DAKSHINA KANNADA
ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!
ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.
ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.
ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.
ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.
ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.
- LATEST NEWS5 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ