FILM
ನಾಯಿ ಕಚ್ಚಿಸಿದ ಆರೋಪ-ನಟ ದರ್ಶನ್ ವಿರುದ್ಧ ಎಫ್.ಐ.ಆರ್…!
ಬೆಂಗಳೂರು: ನಟ ಚಾಲೆಂಜಿಗ್ ಸ್ಟಾರ್ ದರ್ಶನ್ ಮನೆಯ ನಾಯಿಗಳು ಮಹಿಳೆಯೋರ್ವರ ಮೇಲೆ ದಾಳಿ ನಡೆಸಿ ಘಾಸಿಗೊಳಿಸಿರುವ ಹಿನ್ನೆಲೆ ದರ್ಶನ್ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ.
ನಟ ಚಾಲೆಂಜಿಗ್ ಸ್ಟಾರ್ ದರ್ಶನ್ ಮನೆಯ ನಾಯಿಗಳು ಮಹಿಳೆಯೋರ್ವರ ಮೇಲೆ ದಾಳಿ ನಡೆಸಿ ಘಾಸಿಗೊಳಿಸಿರುವ ಹಿನ್ನೆಲೆ ದರ್ಶನ್ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ.
ಆರ್ಆರ್ ನಗರದ ನಿವಾಸದ ಬಳಿ ಘಟನೆ ನಡೆದಿದ್ದು, ಘಟನೆ ನಡೆಯುವ ಮುನ್ನ ದರ್ಶನ್ರ ಮನೆ ಸಿಬ್ಬಂದಿ ನಾಯಿ ಕಚ್ಚಿಸಿಕೊಂಡ ಮಹಿಳೆಯೊಂದಿಗೆ ವಾಗ್ವಾದ ಮಾಡಿದ್ದರು ಎನ್ನಲಾಗುತ್ತಿದೆ.
ಅಕ್ಟೋಬರ್ ತಿಂಗಳ 28 ರಂದು ದೂರುದಾರ ಮಹಿಳೆ ಖಾಸಗಿ ಆಸ್ಪತ್ರೆಯ ಕಾರ್ಯಕ್ರಮದ ನಿಮಿತ್ತ ದರ್ಶನ್ ಮನೆ ಬಳಿ ತೆರಳಿದ್ದರು.
ಇದೇ ವೇಳೆ ತಮ್ಮ ಕಾರನ್ನು ದರ್ಶನ್ ಮನೆ ಬಳಿ ಪಾರ್ಕಿಂಗ್ ಮಾಡಿದ್ದರು.ಕಾರ್ಯಕ್ರಮ ಮುಗಿಸಿ ಮರಳಿ ಬಂದಾಗ ಕಾರು ನಿಲ್ಲಿಸಿದ್ದ ಜಾಗದಲ್ಲಿ ಮೂರು ನಾಯಿಗಳು ಇದ್ದವಂತೆ.
ಇದೇ ವಿಚಾರಕ್ಕೆ ದರ್ಶನ್ ಮನೆಯ ಸಿಬ್ಬಂದಿ ಹಾಗೂ ಮಹಿಳೆ ನಡುವೆ ಕಿರಿಕ್ ನಡಿದಿದೆ.ಈ ಸಂದರ್ಭ ಎರಡು ಸಾಕು ನಾಯಿಗಳು ಮಹಿಳೆಯ ಮೇಲೆ ಜಿಗಿದು ಕಚ್ಚಿರುವ ಆರೋಪ ಕೇಳಿ ಬಂದಿದೆ.
ಆ ಹಿನ್ನೆಲೆ ನಾಯಿ ನೋಡಿಕೊಳ್ಳುತ್ತಿದ್ದ ವ್ಯಕ್ತಿ ಹಾಗೂ ಎರಡನೇ ಆರೋಪಿಯಾಗಿ ದರ್ಶನ್ ವಿರುದ್ದ ವೈದ್ಯರು ದೂರು ದಾಖಲಿಸಿದ್ದಾರೆ.
ಇನ್ನು ಪ್ರಾಣಿ ಪ್ರಿಯ ದರ್ಶನ್ ಫಾರಂ ಹೌಸ್ನಲ್ಲಿ ಹಸು, ಎತ್ತು, ಕುದುರೆ ಸೇರಿ ಇನ್ನೂ ಕೆಲವು ಪ್ರಾಣಿ ಹಾಗೂ ಕೆಲವು ಪಕ್ಷಿಗಳನ್ನು ಸಹ ಸಾಕಿದ್ದಾರೆ.
ದರ್ಶನ್ ತಾವು ವಾಸಿಸುವ ಆರ್ಆರ್ ನಗರ ನಿವಾಸದಲ್ಲಿ ಕೆಲವು ನಾಯಿಗಳನ್ನು ಕೂಡ ಸಾಕಿದ್ದಾರೆ.
FILM
ಬಾಲಿವುಡ್ ಜನಪ್ರಿಯ ನಿರೂಪಕಿ ಭಾರತಿ ಸಿಂಗ್ ಆಸ್ಪತ್ರೆ ದಾಖಲು..!
ಮುಂಬೈ: ಬಾಲಿವುಡ್ ನಿರೂಪಕಿ, ಹಾಸ್ಯ ನಟಿ ಭಾರತಿ ಸಿಂಗ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಸ್ತುತ ಡ್ಯಾನ್ಸ್ ದೀವಾನೆ ಸೀಸನ್ 4 ಅನ್ನು ಹೋಸ್ಟ್ ಮಾಡುತ್ತಿರುವ ಖ್ಯಾತ ನಿರೂಪಕಿ ಭಾರತಿ ಸಿಂಗ್ ತೀವ್ರ ಹೊಟ್ಟೆ ನೋವಿನಿಂದ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
‘ಕಳೆದ ಮೂರು ದಿನಗಳಿಂದ ತೀವ್ರವಾದ ಹೊಟ್ಟೆ ನೋವನ್ನು ಅನುಭವಿಸುತ್ತಿದ್ದೇನೆ’ ಎಂದು ತನ್ನ ವ್ಲಾಗ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಆರಂಭದಲ್ಲಿ ಅದನ್ನು ಗ್ಯಾಸ್ಟ್ರೊನಲ್ ಅಥವಾ ಆಮ್ಲೀಯ ಅಸ್ವಸ್ಥತೆ ಆಗಿರಬಹುದೆಂದು ಭಾವಿಸಿ ನಿರ್ಲಕ್ಷ ಮಾಡಿದ್ದರಂತೆ. ಆದರೆ, ನೋವು ತಡೆದುಕೊಳ್ಳಲಾಗದೆ ವೈದ್ಯಕೀಯ ಚಿಕಿತ್ಸೆ ಪಡೆಯಲು ನಿರ್ಧರಿಸಿ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ವ್ಲಾಗ್ನಲ್ಲಿ ಹೇಳಿದ್ದಾರೆ. ಇನ್ನು ವೈದ್ಯಕೀಯ ಪರೀಕ್ಷೆ ಬಳಿಕ ಭಾರತಿಗೆ ಪಿತ್ತಕೋಶದಲ್ಲಿ ಕಲ್ಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಏನೂ ತಿನ್ನಲು ಆಗುತ್ತಿಲ್ಲ ತಿಂದರೂ ವಾಂತಿ ಆಗುತ್ತಿದೆ ಎಂದ ಹೇಳಿದ ಅವರು ಭಾವುಕರಾದರು.
ಮುಂದೆ ಓದಿ..;‘ಅರ್ಜುನ’ ಆನೆಯನ್ನು ನೆನೆದ ಡಿಬಾಸ್; ದರ್ಶನ್ ಕೋರಿಕೆ ಏನು?
ಈ ನಡುವೆ ಭಾರತಿ ಆರೋಗ್ಯದಲ್ಲಿ ಏರುಪೇರು ಉಂಟಾಗಿರುವುದಕ್ಕೆ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ಸೋಶಿಯಲ್ ಮೀಡಿಯಾದಲ್ಲಿ ಬೇಗ ಚೇತರಿಸಿಕೊಳ್ಳುವಂತೆ ದೇವರಲ್ಲಿ ಪ್ರಾರ್ಥಿಸುತ್ತೇವೆ ಎಂದು ಕಮೆಂಟ್ಗಳನ್ನು ಹಾಕಿದ್ದಾರೆ.
FILM
ಉಡುಪಿಯ ಕಲ್ಪನಾ ಚಿತ್ರಮಂದಿರದಲ್ಲಿ ‘ಗಬ್ಬರ್ ಸಿಂಗ್’ ತುಳು ಚಲನಚಿತ್ರ ಬಿಡುಗಡೆ
ಉಡುಪಿ : ಬಹು ನಿರೀಕ್ಷಿತ ತುಳು ಚಿತ್ರ “ಗಬ್ಬರ್ ಸಿಂಗ್” ಕರಾವಳಿ ಕರ್ನಾಟಕದ ಉಡುಪಿ ಮತ್ತು ದಕ್ಷಿಣ ಕನ್ನಡದ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಉಡುಪಿಯ ಕಲ್ಪನಾ ಚಿತ್ರಮಂದಿರದಲ್ಲಿ ಬಿಡುಗಡೆ ಸಮಾರಂಭವೂ ನಡೆಯಿತು.
ತೊಟ್ಟಂ ಚರ್ಚ್ ನ ಧರ್ಮಗುರು ಫಾದರ್ ಡೆನಿಸ್ ಡೆಸಾ, ಶಂಕರಪುರದ ಸಾಯಿ ಈಶ್ವರ ಗುರೂಜಿ, ಮಿಯಾರ್ ಮಸೀದಿಯ ಮೌಲ್ವಿ ಅಬುಲ್ ಹಸನ್, ರಾಜಕೀಯ ಮುಖಂಡರಾದ ಗೀತಾಂಜಲಿ ಸುವರ್ಣ, ಬೈಕಾಡಿ ಸುಪ್ರಸಾದ್ ಶೆಟ್ಟಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಹರೀಶ್ ಕಿಣಿ, ಸರಳಾ ಕಾಂಚನ್, ಶಿಲ್ಪಾ ಭಟ್, ಉಡುಪಿ ಬಿಜೆಪಿ ಮಾಜಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕೃಷ್ಣಮೂರ್ತಿ ಆಚಾರ್ಯ, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಚಿತ್ರದ ಕಲಾವಿದರಾದ ವೀಣಾ ಎಸ್ ಶೆಟ್ಟಿ, ಸಂದೀಪ್ ಭಕ್ತ, ಆದ್ಯ, ಚಂದ್ರಹಾಸ್ ಕಪ್ಪೆಟ್ಟು, ಕಿಶೂ ಎಂಟರ್ಪ್ರೈಸಸ್ ವ್ಯವಸ್ಥಾಪಕ ನಿರ್ದೇಶಕರಾದ ಕಿಶೋರ್ ಗೊನ್ಸಾಲ್ವಿಸ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದರು.
ಇದನ್ನೂ ಓದಿ : ಕೋಸ್ಟಲ್ ವುಡ್ ಅಂಗಳದಲ್ಲಿ ‘ಗಬ್ಬರ್ ಸಿಂಗ್’ ಹವಾ ಶುರು
‘ಗಬ್ಬರ್ ಸಿಂಗ್’ ಚಿತ್ರವು ಕೌಟುಂಬಿಕ ಅಂಶಗಳನ್ನು ಒಳಗೊಂಡಿರುವ ಆಕ್ಷನ್ ಥ್ರಿಲ್ಲರ್ ಆಗಿದೆ. ಕಥೆ ಮತ್ತು ಚಿತ್ರಕಥೆಯನ್ನು ಸತೀಶ್ ಪೂಜಾರಿ ಬಾರ್ಕೂರು ರಚಿಸಿದ್ದು, ಪ್ರದೀಪ್ ನಿರ್ದೇಶನವಿದೆ. ತುಳು ಚಿತ್ರರಂಗದ ಹೆಸರಾಂತ ನಟರುಗಳು ಈ ಚಿತ್ರದಲ್ಲಿ ಪಾತ್ರವಾಗಿದ್ದಾರೆ.
FILM
‘ಅರ್ಜುನ’ ಆನೆಯನ್ನು ನೆನೆದ ಡಿಬಾಸ್; ದರ್ಶನ್ ಕೋರಿಕೆ ಏನು?
ಚಂದನವನ : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅದ್ಭುತ ಕಲಾವಿದ ಜೊತೆಗೆ ಪ್ರಾಣಿ ಪ್ರಿಯರೂ ಹೌದು. ಅವರ ಪ್ರಾಣಿ ಪ್ರೇಮದ ಬಗ್ಗೆ ಹೇಳ್ಬೇಕಾ? ಹಲವಾರು ನಿದರ್ಶನಗಳನ್ನು ನಾವು ನೋಡಿದ್ದೇವೆ. ಇದೀಗ ದರ್ಶನ್ ‘ಅರ್ಜುನ’ ನ ಬಗ್ಗೆ ಮಾತನಾಡಿದ್ದಾರೆ.
ಕಾಡಾನೆ ಸೆರೆ ವೇಳೆ ನಡೆದಿದ್ದ ದುರಂ*ತ :
ಹಾಸನದ ಅರಣ್ಯದಲ್ಲಿ ಕಾಡಾನೆ ಸೆರೆ ಹಿಡಿದು, ರೇಡಿಯೋ ಕಾಲರ್ ಅಳವಡಿಸುವ ಕಾರ್ಯಾಚರಣೆ ವೇಳೆ ದಸರಾ ಆನೆ ಅರ್ಜುನ ಮೃ*ತಪಟ್ಟಿದ್ದ. ಅವರಿಗೆ 63 ವರ್ಷ ವಯಸ್ಸಾಗಿತ್ತು. 2023 ರ ಡಿಸೆಂಬರ್ ತಿಂಗಳಲ್ಲಿ ಈ ಘಟನೆ ನಡೆದಿತ್ತು. ಅರ್ಜುನ 8 ಬಾರಿ ಜಂಬೂ ಸವಾರಿಯಲ್ಲಿ ಅಂಬಾರಿ ಹೊತ್ತಿದ್ದ. ಆತನ ನಿಧ*ನ ಕನ್ನಡಿಗರನ್ನು ಶೋಕಸಾಗರದಲ್ಲಿ ಮುಳುಗಿಸಿತ್ತು.
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಕಾಡಾನೆ ಸೆರೆ ಹಿಡಿದು ಸ್ಥಳಾಂತರ ಮಾಡುವ ಕಾರ್ಯಾಚರಣೆ ನಡೆಯುತ್ತಿತ್ತು. ಈ ವೇಳೆ ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡುವ ಕಾರ್ಯಾಚರಣೆ ವೇಳೆ ಅರ್ಜುನನ ಮೇಲೆ ಒಂಟಿಸಲಗ ಅಟ್ಯಾಕ್ ಮಾಡಿದೆ. ಕಾರ್ಯಾಚರಣೆ ವೇಳೆ ಒಂಟಿಸಲಗ ದಾಳಿ ಮಾಡುತ್ತಿದ್ದಂತೆ, ಉಳಿದ ಮೂರು ಸಾಕಾನೆಗಳು ಓಡಿ ಹೋಗಿವೆ. ಕೊನೆಗೆ ಒಂಟಿಸಲಗದ ಜೊತೆ ಅರ್ಜುನ ಆನೆಯು ಒಂಟಿಯಾಗಿ ಹೋರಾಟ ನಡೆಸಿದೆ. ಈ ಕಾಳಗ ಆರಂಭವಾಗುತ್ತಿದ್ದಂತೆ ಅರ್ಜುನನ ಮೇಲಿನಿಂದ ಮಾವುತ ಇಳಿದು ಓಡಿದ್ದಾರೆ. ಅರ್ಜುನ ಇಹಲೋಕ ತ್ಯಜಿಸಿದ್ದ. ಈ ಘಟನೆ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಜನ ಕಂಬನಿ ಮಿಡಿದಿದ್ದರು.
ಅಂದು ಡಿ ಬಾಸ್ ದರ್ಶನ್ ಕೂಡ ಸಂತಾಪ ಸೂಚಿಸಿದ್ದರು. ಇದೀಗ ಮತ್ತೆ ಡಿ ಬಾಸ್ ‘ಅರ್ಜುನ’ನನ್ನು ಸ್ಮರಿಸಿದ್ದಾರೆ.
ಏನಂದ್ರು ಡಿಬಾಸ್?
ದರ್ಶನ್ ಅರ್ಜುನ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಅರ್ಜುನನಿಗೆ ಸಲ್ಲಬೇಕಾದ ಗೌರವದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
‘ದಸರಾ ಸಡಗರದ ವೇಳೆ ಬಹಳಷ್ಟು ಬಾರಿ ಅಂಬಾರಿ ಹೊತ್ತು ತನ್ನ ಗಜಗಾಂಭೀರ್ಯಕ್ಕೆ ಹೆಸರುವಾಸಿಯಾಗಿದ್ದ ಅರ್ಜುನ ಕಳೆದ ವರ್ಷ ನಡೆದ ಕಾಡಾನೆ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿರುವುದು ತಿಳಿದೇ ಇದೆ. ಆತನ ಸಮಾಧಿಗೆ ಯಾರು ದಿಕ್ಕು-ದೆಸೆ ಇಲ್ಲದಂತೆ ಭಾಸವಾಗುತ್ತಿದೆ.
ಇದನ್ನೂ ಓದಿ : ತಿಮ್ಮಪ್ಪನ ಸನ್ನಿಧಾನದಲ್ಲಿ ಮಾಂಗಲ್ಯ ಮಾರಾಟ; ಮಾಂಗಲ್ಯ ಪಡೆಯುವುದು ಹೇಗೆ?
ಆತನಿಗೆ ಸಲ್ಲಬೇಕಾದ ಗೌರವ ಆದಷ್ಟು ಬೇಗ ದೊರೆಯಲಿ. ಇನ್ನೇನು ಮಳೆಗಾಲ ಶುರುವಾಗುವ ಮುನ್ನ ಇದಕ್ಕೊಂದು ಒಳ್ಳೆ ವ್ಯವಸ್ಥೆಯಾಗಲಿ ಎಂಬ ಕೋರಿಕೆ ನಮ್ಮದು ಎಂದು ಅವರು ಬರೆದುಕೊಂಡಿದ್ದಾರೆ.
- FILM6 days ago
PHOTOS : ಗೀತಾ ‘ವಿಜಯ್’ ಅದ್ದೂರಿ ಮದುವೆ; ಮೆಚ್ಚುಗೆ ಪಡೆದ ಧನುಷ್ ಮಾಡಿದ ಆ ಒಂದು ಕಾರ್ಯ!
- DAKSHINA KANNADA6 days ago
ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!
- FILM6 days ago
ರಾಮ-ಸೀತೆಯಂತೆ ಕಾಣಿಸಿಕೊಂಡ ರಣ್ಬೀರ್, ಸಾಯಿ ಪಲ್ಲವಿ.. ರಾಮಾಯಣ ಸಿನಿಮಾ ಸೆಟ್ಟಿನ ಫೋಟೋ ಲೀಕ್
- DAKSHINA KANNADA6 days ago
ದೆಹಲಿಯ ರಾಣಾ ಪ್ರತಾಪ್ ನಗರದ ಜಿನ ಬಸದಿ 24ತೀರ್ಥಂಕರ ಪಂಚ ಕಲ್ಯಾಣ; ಮೂಡುಬಿದಿರೆ ಸ್ವಾಮೀಜಿ ಭಾಗಿ