Connect with us

FILM

ಅಭಿಮಾನಿಗಳ ಮಹತ್ಕಾರ್ಯ ಕಂಡು ಧನ್ಯವಾದ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್!

Published

on

 

ನಟ ದರ್ಶನ್ ಉತ್ತಮ ಕಲಾವಿದನಾಗಿ ಹೆಸರು ವಾಸಿಯಾಗಿದ್ದಾರೆ. ಅಷ್ಟು ಮಾತ್ರವಲ್ಲದೇ, ಪ್ರಾಣಿ, ಪಕ್ಷಿಗಳ ಕುರಿತು ಅವರಿಗೆ ವಿಶೇಷವಾದ ಕಾಳಜಿ ಇದೆ. ಜೊತೆಗೆ ಸಹಾಯಹಸ್ತ ಚಾಚುವ ಗುಣದಿಂದಲೂ ಅಭಿಮಾನಿಗಳಿಗೆ ಅವರು ಹತ್ತಿರವಾದವರು.

ಅಲ್ಲದೇ, ನನಗೆ ಅಭಿಮಾನಿಗಳೇ ಎಲ್ಲರಿಗಿಂತ ಹೆಚ್ಚು ಎಂದು ದರ್ಶನ್ ಅಭಿಮಾನಿಗಳನ್ನು ಸೆಲೆಬ್ರಿಟೀಸ್ ಎಂದು ಕರೆಯುತ್ತಿರುತ್ತಾರೆ. ‘ಡಿ ಬಾಸ್’ ಎನ್ನುತ್ತಲೇ ಅಭಿಮಾನಿಗಳು ದರ್ಶನ್ ಅವರಿಗೆ ಅಪಾರ ಪ್ರೀತಿ, ಕಾಳಜಿ ತೋರಿಸುವುದನ್ನು ಕಾಣಬಹುದಾಗಿದೆ.

ದರ್ಶನ್ ಸಿನಿಮಾ ಬಿಡುಗಡೆ ಅಂದ್ರೇನೇ ಸಾಕು ಅಭಿಮಾನಿಗಳು ಹುಚ್ಚೆದ್ದು ಕುಣಿಯುತ್ತಾರೆ. ಅದ್ಯಾಕೆ, ಅವರ ಸಿನಿಮಾ ಘೋಷಣೆಯೇ ಅಭಿಮಾನಿಗಳಿಗೆ ಹಬ್ಬ. ಇನ್ನು ಹುಟ್ಟು ಹಬ್ಬ ಅಂದ್ರೆ ಕೇಳ್ಬೇಕಾ…ಅವಾಗಲಂತೂ ಮನೆ ಮುಂದೆ ಸರತಿ ಸಾಲೇ ನಿಂತಿರುತ್ತದೆ.

ಅಷ್ಟು ಮಾತ್ರವಲ್ಲದೇ ದರ್ಶನ್ ಏನಾದರು ಹೇಳಿದರೆ ಸಾಕು, ಅವರು ಹೇಳಿದ ಮಾತನ್ನು ಪಾಲಿಸುತ್ತಾ ಬರ್ತಿದ್ದಾರೆ. ನಟ ದರ್ಶನ್ ಪ್ರಾಣಿ- ಪಕ್ಷಿ ಪ್ರೀತಿ ಎಂಥದ್ದು ಎನ್ನುವುದು ಗೊತ್ತೇ ಇದೆ. ಕರ್ನಾಟಕ ಅರಣ್ಯ ಇಲಾಖೆ ರಾಯಭಾರಿ ಕೂಡ ಆಗಿರುವ ದರ್ಶನ್ ಸಾಕಷ್ಟು ಪ್ರಾಣಿ-ಪಕ್ಷಿಗಳನ್ನು ಸಾಕಿದ್ದಾರೆ. ಮೃಗಾಲಯಗಳಲ್ಲಿ ಪ್ರಾಣಿಗಳನ್ನು ದತ್ತು ಪಡೆಯುತ್ತಾರೆ. ತಮ್ಮ ಆಪ್ತರಿಗೂ, ಅಭಿಮಾನಿಗಳು ಪ್ರಾಣಿಗಳನ್ನು ದತ್ತು ಪಡೆಯಲು ಸಲಹೆ ನೀಡುತ್ತಾರೆ.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಾಗುತ್ತಿದೆ. ಈಗಾಗಲೇ ರಾಜ್ಯದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಬಿಸಿಲಿನ ಝಳ ತೀವ್ರಗೊಳ್ಳುತ್ತಿದ್ದು ಪ್ರಾಣಿ, ಪಕ್ಷಿಗಳು ಗುಟುಕು ನೀರಿಗಾಗಿ ಪರದಾಡುವಂತಾಗಿದೆ. ಇದೇ ಕಾರಣಕ್ಕೆ ನಟ ದರ್ಶನ್ ಪ್ರತಿವರ್ಷ ಅಭಿಮಾನಿಗಳಲ್ಲಿ ಮನವಿ ಮಾಡುತ್ತಾರೆ. ಎಲ್ಲರೂ ತಮ್ಮ ತಮ್ಮ ಮನೆಗಳ ಮುಂದೆ, ಮನೆ ಚಾವಣಿ ಮೇಲೆ ಪ್ರಾಣಿ ಪಕ್ಷಿಗಳಿಗಾಗಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿ ಎಂದು ಕೇಳಿ ಕೊಳ್ಳುತ್ತಾರೆ.


ಇತ್ತೀಚೆಗೆ ನಗರದ ಜೆಬಿ ಪಾರ್ಕ್‌ನಲ್ಲಿ ನಡೆದ ಶಿವರಾತ್ರಿ ಸಂಭ್ರಮ ಕಾರ್ಯಕ್ರಮದಲ್ಲಿ ನಟ ದರ್ಶನ್ ಭಾಗಿ ಆಗಿದ್ದರು. ಈ ವೇಳೆ “ಮನೆ ಮುಂದೆ ಮನೆ ಮೇಲೆ ದಯಮಾಡಿ ಪ್ರಾಣಿ, ಪಕ್ಷಿಗಳಿಗೆ ನೀರು ಇಡಿ. ಇದನ್ನು ಯಾವಾಗಲೂ ಕೇಳಿಕೊಳ್ಳುತ್ತೇನೆ. ನಮಗೂ ಸರಿಯಾಗಿ ನೀರು ಸಿಗುತ್ತಿಲ್ಲ. ನಾವಾದರೂ ನೀರು ಕೊಡಿ ಎಂದು ಕೇಳಬಹುದು. ಪಾಪ ಅವು ಕೇಳಿಕೊಳ್ಳಲ್ಲ. ದಯಮಾಡಿ ಈ ಕೆಲಸ ಮಾಡಿ ಎಂದು ಮನವಿ ಮಾಡಿದರು. ದರ್ಶನ್ ಹೇಳಿದ್ಮೇನೆ ಕೇಳ್ಬೇಕಾ? ಅಭಿಮಾನಿಗಳು ಶಿರಸಾವಹಿಸಿ ಪಾಲಿಸುತ್ತಾರೆ. ದರ್ಶನ್ ಮನವಿಗೆ ಸ್ಪಂದಿಸಿರುವ ಅಭಿಮಾನಿಗಳು ಪ್ರಾಣಿ-ಪಕ್ಷಿಗಳ ದಾಹ ತಣಿಸುವ ಕೆಲಸ ಮಾಡುತ್ತಿದ್ದಾರೆ.
ಕೆಲ ಅಭಿಮಾನಿಗಳು ಸಣ್ಣ ಸಣ್ಣ ಮಡಿಕೆಗಳು, ತೆಂಗಿನ ಚಿಪ್ಪು, ಹೂವಿನ ಕುಂಡಗಳನ್ನು ಸಿದ್ಧಪಡಿಸಿ ಮರಗಳ ಮೇಲೆ, ರಸ್ತೆಗಳ ಬದಿಗಳಲ್ಲಿ, ಮನೆಗಳ ಚಾವಣಿಗಳಲ್ಲಿ ಪ್ರಾಣಿ- ಪಕ್ಷಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಈ ವಿಡಿಯೋ ನಟ ದರ್ಶನ್ ಗಮನಕ್ಕೂ ಬಂದಿದೆ. ಕೂಡಲೇ ಈ ಬಗ್ಗೆ ಪ್ರತಿಕ್ರಿಯಿಸಿ ದರ್ಶನ್ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ.

“ಪ್ರಾಣಿ-ಪಕ್ಷಿಗಳಿಗಾಗಿ ಯಾರು ಈ ಕೆಲಸ ಮಾಡಿದ್ದಿರೋ ನಿಜಕ್ಕೂ ಇದು ಅತ್ಯುತ್ತಮ ಕೆಲಸ. ಈ ಅದ್ಭುತ ಕೆಲಸಕ್ಕೆ ಧನ್ಯವಾದ” ಎಂದು ದರ್ಶನ್ ಇನ್‌ಸ್ಟಾಗ್ರಾಂನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಕಾಟೇರಾ ಯಶಸ್ಸಿನ ನಂತರ ಸದ್ಯ ಡಿ ಬಾಸ್ ‘ಡೆವಿಲ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ವಾರವೇ ಸಿನಿಮಾ ಚಿತ್ರೀಕರಣ ಆರಂಭವಾಗಲಿದೆ. ರಾಕ್‌ಲೈನ್‌ ಸ್ಟುಡಿಯೋದಲ್ಲಿ ಮೊದಲ ಶೆಡ್ಯೂಲ್ ಶೂಟಿಂಗ್ ನಡೆಯಲಿದೆ. ಮಿಲನಾ ಪ್ರಕಾಶ್ ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾ ಚಿತ್ರೀಕರಣ ಆರಂಭಿಸುವ ಮುನ್ನ ಚಿತ್ರತಂಡ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದೆ. ಈ ಕುರಿತ ಫೋಟೋಗಳು ವೈರಲ್ ಆಗಿತ್ತು.

FILM

PHOTOS : ಗೀತಾ ‘ವಿಜಯ್’ ಅದ್ದೂರಿ ಮದುವೆ; ಮೆಚ್ಚುಗೆ ಪಡೆದ ಧನುಷ್ ಮಾಡಿದ ಆ ಒಂದು ಕಾರ್ಯ!

Published

on

ಬೆಂಗಳೂರು : ಸಿಕ್ಕಾಪಟ್ಟೆ ಫೇಮಸ್ ಆಗಿದ್ದ ಧಾರಾವಾಹಿ ‘ಗೀತಾ’. ಈ ಧಾರಾವಾಹಿಯ ನಾಯಕ ‘ವಿಜಯ್’ ಅಂದ್ರೆ ಧನುಷ್ ಗೌಡ ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದ್ದಾರೆ. ಅವರ ವಿವಾಹ ಶುಕ್ರವಾರ ಅದ್ದೂರಿಯಾಗಿ ನೆರವೇರಿತು.


ಧನುಷ್ ಗೌಡ ಅವರು ಸಂಜನಾ ಎಂಬವರ ಜೊತೆಗೆ ಸಪ್ತಪದಿ ತುಳಿದಿದ್ದಾರೆ. ಸಂಜನಾ ಧನುಷ್ ಅತ್ತೆಯ ಮಗಳಾಗಿದ್ದು, ಇದು ಅರೆಂಜ್ಡ್ ಮ್ಯಾರೇಜ್ ಆಗಿದೆ.


ಇನ್ನು ಮದುವೆಯಲ್ಲಿ ಕುಟುಂಬದವರು, ಆಪ್ತರು, ಸ್ನೇಹಿತರು ಉಪಸ್ಥಿತರಿದ್ದರು.

ಧನುಷ್ ಅವರು ಆರತಕ್ಷತೆ ಕಾರ್ಯಕ್ರಮವೂ ಅದ್ದೂರಿಯಾಗಿ ನಡೆದಿದೆ.

ಧನುಷ್ ಅವರ ಮದುವೆ, ಆರತಕ್ಷತೆ ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಪಾಲ್ಗೊಂಡಿದ್ದರು. 

ಇದನ್ನೂ ಓದಿ : ಮೇಕಪ್ ರೂಂನಲ್ಲಿ ಕೂಡಿ ಹಾಕಿದ್ರು…ಆಮೇಲೆ…ನಿರ್ಮಾಪಕನಿಂದಾದ ಕರಾಳ ಅನುಭವ ಬಿಚ್ಚಿಟ್ಟ ಖ್ಯಾತ ಕಿರುತೆರೆ ನಟಿ!

ಭವ್ಯಾ ಗೌಡ, ಮೌನ ಗುಡ್ಡೇಮನೆ, ರಿತ್ವಿಕ್ ಕೃಪಾಕರ್, ಸೇರಿ ಅನೇಕ ಕಿರುತೆರೆ ಹಿರಿತೆರೆ ತಾರೆಯರು ಆಗಮಿಸಿದ್ದರು.

 

ಮದುವೆ ಸಂಭ್ರಮದ ನಡುವೆಯೂ ಧನುಷ್ ವೋಟ್ ಮಾಡುವ ಮೂಲಕ ಅಭಿಮಾನಿಗಳಿಗೆ ಮಾದರಿಯಾಗಿದ್ದಾರೆ. ಧನುಷ್ ನಡೆಗೆ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ.

 

 

Continue Reading

FILM

WATCH VIDEO : ಕಾಸರಗೋಡಿನಲ್ಲಿ ಕಾಣಿಸಿಕೊಂಡ ಸನ್ನಿ ಲಿಯೋನ್

Published

on

ಕಾಸರಗೋಡು : ಸನ್ನಿಲಿಯೋನ್ ಯಾರಿಗೆ ತಾನೆ ಗೊತ್ತಿಲ್ಲ. ತನ್ನ ಮಾದಕ ನೋಟದಿಂದ, ನಟನೆಯಿಂದ ಸಿಕ್ಕಾಪಟ್ಟೆ ಫೇಮಸ್ ಆಗಿರುವ ಮೋಹಕ ತಾರೆ. ಸದ್ಯ ಅವರು ಸಿನಿಮಾಗಳಲ್ಲಿ ಬಿಝಿಯಾಗಿದ್ದಾರೆ. ಚಿತ್ರವೊಂದರ ಶೂಟಿಂಗ್ ಗಾಗಿ ಕಾಸರಗೋಡಿನಲ್ಲಿ ಕಾಣಿಸಿಕೊಂಡಿದ್ದಾರೆ.

ಸೀತಂಗೋಳಿ ಸಮೀಪದ ಶೇಣಿಯಲ್ಲಿ ಹಿಂದಿ ಚಿತ್ರವೊಂದರ ಶೂಟಿಂಗ್ ನಲ್ಲಿ ಅವರು ಭಾಗಿಯಾಗಿದ್ದಾರೆ. ಹೇಳಿ ಕೇಳಿ ಕಾಸರಗೋಡಿನಲ್ಲಿ ಚಿತ್ರೀಕರಣಕ್ಕೆ ಹೆಸರುವಾಸಿಯಾದ ಸುಂದರ ಪ್ರದೇಶ ಶೇಣಿ. ಇಲ್ಲಿ ಹಲವಾರು ಪರಭಾಷಾ ಚಲನಚಿತ್ರಗಳ ಚಿತ್ರೀಕರಣ ನಡೆದಿದೆ. ಇದೀಗ ಸನ್ನಿ ಲಿಯೋನ್ ಚಿತ್ರದ ಚಿತ್ರೀಕರಣವೂ ನಡೆಯುತ್ತಿದೆ.

ಇದನ್ನೂ ಓದಿ : ಖ್ಯಾತ ಕಿರುತೆರೆ ನಟ ಗುರುಚರಣ್ ಸಿಂಗ್ ನಾಪತ್ತೆ!

ಶೇಣಿಯ ಶಾಲೆ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಶೂಟಿಂಗ್ ನಡೆಯುತ್ತಿದೆ. ಸನ್ನಿಯ ಮಾದಕ ನೋಟವನ್ನ ನೋಡಲು ರಸ್ತೆ ಬದಿ ಅಭಿಮಾನಿಗಳು ಕಿಕ್ಕಿರಿದು ಸೇರಿದ್ದಾರೆ.

 

Continue Reading

FILM

ಮೇಕಪ್ ರೂಂನಲ್ಲಿ ಕೂಡಿ ಹಾಕಿದ್ರು…ಆಮೇಲೆ…ನಿರ್ಮಾಪಕನಿಂದಾದ ಕರಾಳ ಅನುಭವ ಬಿಚ್ಚಿಟ್ಟ ಖ್ಯಾತ ಕಿರುತೆರೆ ನಟಿ!

Published

on

ಸಿನಿಮಾ ರಂಗದಲ್ಲಿ ತಮಗಾದ ಕೆಟ್ಟ ಅನುಭವಗಳ ಬಗ್ಗೆ ನಟಿಯರು ಹೇಳಿಕೊಳ್ಳುತ್ತಲೇ ಇರುತ್ತಾರೆ. ಕಾಸ್ಟಿಂಗ್ ಕೌಚ್ ವಿಚಾರ ಇತ್ತೀಚೆಗೆ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ. ಈ ನಡುವೆ ಮತ್ತೊಬ್ಬ ನಟಿ ಕಿರುತೆರೆಯಲ್ಲಿ ತನಗಾದ ಕೆಟ್ಟ ಅನುಭವವನ್ನು ಹಂಚಿಕೊಂಡಿದ್ದಾರೆ. ಹೌದು, ಕಿರುತೆರೆ ಖ್ಯಾತ ನಟಿ ಕೃಷ್ಣಾ ಮುಖರ್ಜಿ ಈ ಬಗ್ಗೆ ನೋವು ಹಂಚಿಕೊಂಡಿದ್ದಾರೆ.


ಧಾರಾವಾಹಿಯಿಂದ ಹೊರಬರಲು ಕಾರಣ ತಿಳಿಸಿದ ನಟಿ:

ಕೃಷ್ಣಾ ‘ಯೇ ಹೇ ಮೊಹಾಬತೇ’ ಧಾರಾವಾಹಿ ಮೂಲಕ ಫೇಮಸ್ ಆಗಿದ್ದರು. ನಾಗಿನ್ 2 ಕೂಡ ಅವರಿಗೆ ಹೆಸರು ತಂದು ಕೊಟ್ಟಿದೆ. ಇದೀಗ ಅವರು ತಮಗಾದ ಕಿರುಕುಳದ ವಿಚಾರವನ್ನು ಹಂಚಿಕೊಂಡಿದ್ದಾರೆ. ಕೃಷ್ಣಾ ‘ಶುಭ ಶಗುನ್’ ಹೆಸರಿನ ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಇದರಿಂದ ಅವರು ಹೊರ ಬಂದಿದ್ದಾರೆ. ಇದಕ್ಕೆ ಕಾರಣ ಧಾರಾವಾಹಿ ನಿರ್ಮಾಪಕ ಕುಂದನ್ ಸಿಂಗ್ ಅವರು ನೀಡಿದ ಕಿರುಕುಳ ಎಂದು ನಟಿ ಆರೋಪಿಸಿದ್ದಾರೆ.


ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ವಿವರವಾಗಿ ಹೇಳಿದ್ದಾರೆ. ‘ಇದನ್ನು ಬರೆಯುವಾಗ ನನ್ನ ಕೈಗಳು ನಡುಗುತ್ತಿವೆ. ಆದರೂ ನಾನು ಬರೆಯಲೇಬೇಕು. ನಾನು ಇವರಿಂದ ಖಿನ್ನತೆಗೆ ಒಳಗಾಗಿದ್ದೇನೆ. ನಾವು ನಮ್ಮ ಭಾವನೆಗಳನ್ನು ಹಿಡಿದಿಟ್ಟು, ನಮ್ಮ ಒಳ್ಳೆಯ ಜೀವನವನ್ನು ಮಾತ್ರ ಸೋಶಿಯಲ್ ಮೀಡಿಯಾದಲ್ಲಿ ತೋರಿಸುತ್ತೇವೆ. ಆದರೆ, ಇದು ರಿಯಾಲಿಟಿ’ ಎಂದು ಬರೆದುಕೊಂಡಿದ್ದಾರೆ.
‘ನನಗೆ ಇನ್ನಷ್ಟು ಹಾನಿ ಆಗಬಹುದು ಎನ್ನುವ ಕಾರಣಕ್ಕೆ ಕುಟುಂಬದವರು ಈ ಬಗ್ಗೆ ಪೋಸ್ಟ್ ಮಾಡೋದು ಬೇಡ ಎಂದರು. ನಾನೇಕೆ ಹೆದರಬೇಕು? ನ್ಯಾಯ ಪಡೆಯೋದು ನನ್ನ ಹಕ್ಕು’ ಎಂದು ಬರೆದಿದ್ದಾರೆ. ಅಲ್ಲದೇ, ಕುಂದನ್ ಸಿಂಗ್ ಅವರನ್ನು ಟ್ಯಾಗ್ ಕೂಡಾ ಮಾಡಿದ್ದಾರೆ.

ಮೇಕಪ್ ರೂಂ ಲಾಕ್ ಮಾಡಿದ್ದರು :

ಕಳೆದ ಒಂದೂವರೆ ವರ್ಷ ನನಗೆ ಸುಲಭದ್ದಾಗಿರಲಿಲ್ಲ. ನಾನು ಖಿನ್ನತೆಗೆ ಒಳಗಾಗಿದ್ದೇನೆ. ನಾನು ಒಂಟಿಯಾಗಿದ್ದಾಗ ಅಳುತ್ತಿದ್ದೇನೆ. ದಂಗಲ್ ಟಿವಿಗಾಗಿ ಶುಭ್ ಶಗುನ್ ಧಾರಾವಾಹಿ ಒಪ್ಪಿಕೊಂಡಾಗಿನಿಂದ ಈ ಸಮಸ್ಯೆ ಆಗುತ್ತಿದೆ. ನನ್ನ ಜೀವನದಲ್ಲಿ ಮಾಡಿದ ಅತಿ ಕೆಟ್ಟ ನಿರ್ಧಾರ. ನನಗೆ ಅದನ್ನು ಮಾಡಬೇಕು ಎಂದಿರಲಿಲ್ಲ. ಬೇರೆಯವರ ಮಾತನ್ನು ಕೇಳಿ ಕಾಂಟ್ರ್ಯಾಕ್ಟ್ ಸಹಿ ಮಾಡಿದೆ’ ಎಂದಿದ್ದಾರೆ ಕೃಷ್ಣಾ.

‘ಪ್ರೊಡಕ್ಷನ್ ಹೌಸ್ ಹಾಗೂ ನಿರ್ಮಾಪಕ ಕುಂದನ್ ಸಿಂಗ್ ಅವರು ನನಗೆ ಕಿರುಕುಳ ನೀಡಿದ್ದಾರೆ. ನನಗೆ ಅಂದು ಅನಾರೋಗ್ಯವಾಗಿತ್ತು. ಜೊತೆಗೆ ಅವರು ಸಂಭಾವನೆಯನ್ನೂ ಕೊಡುತ್ತಿರಲಿಲ್ಲ. ಹೀಗಾಗಿ ನಾನು ಶೂಟ್ ಮಾಡಲ್ಲ ಎಂದೆ. ಇದಕ್ಕಾಗಿ ಅವರು ಮೇಕಪ್​ ರೂಂನಲ್ಲಿ ನನ್ನನ್ನು ಲಾಕ್ ಮಾಡಿದ್ದರು. ನಾನು ಬಟ್ಟೆ ಬದಲಿಸುವಾಗ ಬಾಗಿಲು ಮುರಿಯುವ ರೀತಿಯಲ್ಲಿ ಬಾಗಿಲು ಬಡಿಯುತ್ತಿದ್ದರು ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ : ಖ್ಯಾತ ಕಿರುತೆರೆ ನಟ ಗುರುಚರಣ್ ಸಿಂಗ್ ನಾಪತ್ತೆ!


ಕೃಷ್ಣಾ ಪೋಸ್ಟ್ ಗೆ ಹಲವು ಮಂದಿ ಕಮೆಂಟ್ ಮಾಡಿದ್ದು, ನಿಮಗೆ ನ್ಯಾಯ ಸಿಗಲೇಬೇಕು ಎಂದು ಕೆಲವರು ಹೇಳಿದ್ದು, ನಿಮ್ಮ ಜೊತೆ ನಾವಿದ್ದೇವೆ ಎಂದು ಕೆಲವರು ಹೇಳಿದ್ದಾರೆ. ಇದು ಮನಸ್ಸು ಮುರಿಯುವ ವಿಚಾರ ಎಂದು ಕಮೆಂಟ್ ಮಾಡಲಾಗಿದೆ. ಅವರ ಅಭಿಮಾನಿಗಳು ಮಾತ್ರವಲ್ಲದೇ, ಕಲಾವಿದರೂ ಕಮೆಂಟ್ ಗಳನ್ನು ಮಾಡಿ ನಿಮ್ಮ ಜೊತೆಗೆ ನಾವಿದ್ದೇವೆ ಎನ್ನುತ್ತಿದ್ದಾರೆ. ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸುತ್ತಿದ್ದಾರೆ.

 

Continue Reading

LATEST NEWS

Trending