Connect with us

    FILM

    ದರ್ಶನ್ ಪ್ರಕರಣ: ನಟ ಚಿಕ್ಕಣ್ಣನಿಗೂ ನೋಟಿಸ್..!

    Published

    on

    ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಾಗಲೇ ಸ್ಟಾರ್ ನಟ ದರ್ಶನ್ ಸೇರಿದಂತೆ 19 ಮಂದಿ ಪೊಲೀಸರ ವಶದಲ್ಲಿದ್ದಾರೆ. ಪೊಲೀಸರ ತೀವ್ರ ತನಿಖೆ ನಡೆಯುತ್ತಿದ್ದು ಬೇರೆ ಬೇರೆ ಆಯಾಮಗಳಲ್ಲಿ ತನಿಖೆ ಮುಂದುವರಿಯುತ್ತಿದೆ. ಹೈ ಪ್ರೊಫೈಲ್‌ ಗ್ಯಾಂಗ್ ಈ ಕೊಲೆ ಪ್ರಕರಣದಲ್ಲಿ ಕಾಣಿಸಿಕೊಂಡಿದ್ದು ಈ ಕೇಸ್ ಹೆಚ್ಚು ಚರ್ಚೆಗೂ ಕಾರಣವಾಗಿದೆ. ಇನ್ನು ತನಿಖೆ ಬಳಿಕ ಬೇರೆ ಬೇರೆ ಹೆಸರುಗಳು ಕೇಳಿಬರುತ್ತಿದೆ.

    ಇದೀಗ ಕನ್ನಡ ಚಿತ್ರರಂಗದ ಹಾಸ್ಯನಟ ಚಿಕ್ಕಣ್ಣರವರಿಗೆ ನೋಟೀಸ್‌ ನೀಡಲು ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ದರ್ಶನ್ ಪಟ್ಟಣಗೆರೆ ಶೆಡ್‌ಗೆ ಹೋಗುವ ಮೊದಲು ರೆಸ್ಟೋರೆಂಟ್‌ನಲ್ಲಿ ನಡೆದ ಪಾರ್ಟಿಯಲ್ಲಿ ಪಾಲ್ಗೊಂಡಿದ್ದಾರೆ. ಈ ಪಾರ್ಟಿಯಲ್ಲಿ ನಿರ್ಮಾಪಕರು ಸೇರಿದಂತೆ ಚಿಕ್ಕಣ್ಣ ಕೂಡಾ ಭಾಗಿಯಾಗಿದ್ದರು. ದರ್ಶನ್ ಪಾರ್ಟಿ ಮುಗಿಸಿ ನೇರವಾಗಿ ಶೆಡ್‌ ಬಳಿ ತೆರಳಿದ್ದಾರೆ. ಬಳಿಕ ರೇಣುಕಾಸ್ವಾಮಿಗೆ ಹಲ್ಲೆ ನಡೆಸಿ ಹತ್ಯೆ ಮಾಡಿದ್ಧಾರೆ ಎನ್ನಲಾಗಿದೆ.

    ಚಿಕ್ಕಣ್ಣ ಹಾಗೂ ದರ್ಶನ್ ಮಧ್ಯೆ ಉತ್ತಮವಾದ ಬಾಂಧವ್ಯವಿತ್ತು. ದರ್ಶನ್‌ರವರ ಸಿನೆಮಾದಲ್ಲಿ ಚಿಕ್ಕಣ್ಣ ನಟನೆ  ಮಾಡಿದ್ದಾರೆ. ಉಪಾಧ್ಯಕ್ಷ ಸಿನೆಮಾದ ಬಗ್ಗೆ ದರ್ಶನ್ ಕೂಡಾ ಮೆಚ್ಚುಗೆಯ ಮಾತನ್ನಾಡಿದ್ದರು.

    Read More..; ದರ್ಶನ್ – ರೇಣುಕಾಸ್ವಾಮಿ – ಪಾರದರ್ಶಕ ವಿಚಾರಣೆ …..ಎಂದ ನಟ ಉಪೇಂದ್ರ

    ಇದೀಗ ಪಾರ್ಟಿಯಲ್ಲಿ ದರ್ಶನ್ ಜೊತೆ ಭಾಗಿಯಾದ ಹಿನ್ನೆಲೆಯಲ್ಲಿ ಚಿಕ್ಕಣ್ಣಗೆ ನೋಟಿಸ್​ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ನೀಡಲು ಅನ್ನಪೂರ್ಣೇಶ್ವರಿನಗರ ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ಇಂದು (ಜೂ. 17) ಸಂಜೆಯೇ ನೋಟಿಸ್ ನೀಡಲು ಸಿದ್ಧತೆ ನಡೆದಿದೆ ಎಂದು ಹೇಳಲಾಗುತ್ತಿದೆ.

    FILM

    ಬೆಂಗಳೂರಿನಲ್ಲಿ ದರ್ಶನ್ ಅಭಿಮಾನಿಯ ಬಂಧನ

    Published

    on

    ಬೆಂಗಳೂರು : ರೇಣುಕಾಸ್ವಾಮಿ ಕೊ*ಲೆ ಪ್ರಕರಣ ಆರೋಪ ಹೊತ್ತಿರುವ ದರ್ಶನ್ ಜೈಲು ಪಾಲಾಗಿದ್ದಾರೆ. ಇತ್ತ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಬಂಧನದಿಂದ ಆಘಾ*ತಕ್ಕೊಳಗಾಗಿದ್ದಾರೆ. ಅಲ್ಲದೇ, ಕೆಲವರು ಟೀಕಾಪ್ರಹಾರಗಳನ್ನು ಮಾಡುತ್ತಿದ್ದಾರೆ. ಈ ಸಂಬಂಧ ಈಗಾಗಲೇ ಬೆಂಗಳೂರಿನಲ್ಲಿ ಓರ್ವ ದರ್ಶನ್ ಅಭಿಮಾನಿಯನ್ನು ಬಂಧಿಸಲಾಗಿದೆ.


    ಚೇತನ್ ಬಂಧಿತ ಆರೋಪಿ. ಕನ್ನಡ ಚಿತ್ರರಂಗದ ನಿರ್ಮಾಪಕ ಉಮಾಪತಿ ಗೌಡ ವಿರುದ್ಧ ದರ್ಶನ್ ಅಭಿಮಾನಿಗಳಿಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ.

    ಚೇತನ್ ಬಹಿರಂಗವಾಗಿ ಉಮಾಪತಿ ಗೌಡಗೆ ಬೆದರಿಕೆ ಹಾಕಿದ್ದಾನೆ. ಅಲ್ಲದೇ ಉಮಾಪತಿ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ವಿಡಿಯೋ ವೈರಲ್‌ ಆಗಿತ್ತು. ಈ ವಿಡಿಯೋಗಳನ್ನು ನೋಡಿದ ನಿರ್ಮಾಪಕ ಉಮಾಪತಿ ಗೌಡ ಬೆದರಿಕೆ ಹಾಕಿದ್ದ ಯುವಕನ ಬಗ್ಗೆ ದೂರು ನೀಡಿದ್ದರು.

    ಇದನ್ನೂ ಓದಿ : ದರ್ಶನ್ ಹಾಕಿ ಚಿತ್ರ ಮಾಡೋರು ಇನ್ಮೇಲೆ ಇದನ್ನ ಗಮನಿಸಲೇಬೇಕು

    ಈ ಹಿನ್ನೆಲೆಯಲ್ಲಿ ನಟ ದರ್ಶನ್‌ ಅಭಿಮಾನಿ ಚೇತನ್ ವಿರುದ್ಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಐಪಿಸಿ ಸೆಕ್ಷನ್ 504,506 ಅಡಿಯಲ್ಲಿ ಎಫ್ಐಆರ್ ಕೂಡ ದಾಖಲಾಗಿತ್ತು.

    Continue Reading

    FILM

    WATCH : ಅಭಿಮಾನಿಯನ್ನು ತಳ್ಳಿ ಬೀಳಿಸಿದ ನಾಗಾರ್ಜುನ ಬಾಡಿಗಾರ್ಡ್; ವೀಡಿಯೋ ವೈರಲ್ ಆಗುತ್ತಿದ್ದಂತೆ ಏನಂದ್ರು ನಟ?

    Published

    on

    ಮಂಗಳೂರು : ಸಿನಿಮಾ ನಟರು ಅಂದಾಕ್ಷಣ ಅಭಿಮಾನಿಗಳು ಮುಗಿಬೀಳೋದು ಸಹಜ. ಅವರ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಬೇಕು, ಸೆಲ್ಫಿ ಗಿಟ್ಟಿಸಿಕೋಬೇಕು ಅನ್ನೋ ಹೆಬ್ಬಯಕೆ ಸಹಜ. ಆದ್ರೆ, ಈ ರೀತಿ ಹೋದ ಅಭಿಮಾನಿಯೊಬ್ಬನನ್ನು ತಳ್ಳಿರೋ ಘಟನೆ ನಡೆದಿದೆ. ಘಟನೆಯ ವೀಡಿಯೋ ಸದ್ಯ ವೈರಲ್ ಆಗಿದೆ.


    ವೈರಲ್ ಆಗಿರೋ ವೀಡಿಯೋ ನಟ ನಾಗಾರ್ಜುನ ಅವರದು. ವಿಮಾನ ನಿಲ್ದಾಣದಿಂದ ಹೊರಬರುತ್ತಿರುವ ಅವರ ಜೊತೆ ಫೋಟೋ ತೆಗೆಸಿಕೊಳ್ಳಲು ಅಭಿಮಾನಿಯೊಬ್ಬರು ಓಡೋಡಿ ಬಂದಿದ್ದಾರೆ. ಆದರೆ ಅವರನ್ನು ನಾಗಾರ್ಜುನ ಬಾಡಿಗಾರ್ಡ್​ ತಳ್ಳಿ ಬೀಳಿಸಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ವಿಡಿಯೋ ವೈರಲ್​ ಆಗಿದ್ದು, ನೆಟ್ಟಿಗರು ಗರಂ ಆಗಿದ್ದಾರೆ.

    ‘ನಿಮ್ಮ ಮಾನವೀಯತೆ ಎಲ್ಲಿ ಹೋಯಿತು ನಾಗಾರ್ಜುನ ಅವರೇ?’ ಎಂಬ ಕ್ಯಾಪ್ಷನ್​ನೊಂದಿಗೆ ಸೋಶಿಯಲ್​ ಮೀಡಿಯಾದಲ್ಲಿ ಈ ವಿಡಿಯೋವನ್ನು ಶೇರ್​ ಮಾಡಿಕೊಳ್ಳಲಾಗಿದೆ.

    ಇನ್ನು ವೀಡಿಯೋ ವೈರಲ್​ ಆಗುತ್ತಿದ್ದಂತೆ ಸ್ವತಃ ನಾಗಾರ್ಜುನ ಅವರು ಕ್ಷಮೆ ಕೇಳಿದ್ದಾರೆ. ‘ಇದು ಈಗ ತಾನೇ ನನ್ನ ಗಮನಕ್ಕೆ ಬಂತು. ಈ ರೀತಿ ಆಗಬಾರದಿತ್ತು. ಆ ವ್ಯಕ್ತಿಯಲ್ಲಿ ನಾನು ಕ್ಷಮೆ ಕೇಳುತ್ತೇನೆ. ಇನ್ಮುಂದೆ ಎಚ್ಚರಿಕೆ ವಹಿಸುತ್ತೇನೆ. ಈ ರೀತಿ ಇನ್ನೆಂದೂ ಆಗುವುದಿಲ್ಲ’ ಎಂದಿದ್ದಾರೆ.

    ಇದನ್ನೂ ಓದಿ: ದರ್ಶನ್ ಹಾಕಿ ಚಿತ್ರ ಮಾಡೋರು ಇನ್ಮೇಲೆ ಇದನ್ನ ಗಮನಿಸಲೇಬೇಕು

    ಅಂದಹಾಗೆ ಈ ಘಟನೆ ನಡೆದಾಗ ನಾಗಾರ್ಜುನ ಜೊತೆ ಕಾಲಿವುಡ್​ ನಟ ಧನುಷ್​ ಕೂಡ ಇದ್ದರು. ಸಿನಿಮಾ ನಟರನ್ನು ಕಂಡಾಗ ಸಿನಿಪ್ರಿಯರು ಹತ್ತಿರ ಬರೋದು ಸಹಜ. ಈ ವೇಳೆ ಬಾಡಿಗಾರ್ಡ್ ಗಳು ನಟರ ಬಳಿ ಬರಲು ಬಿಡುವುದಿಲ್ಲ. ಇಲ್ಲೂ ಹಾಗೇ ಆಗಿದೆ.

    Continue Reading

    FILM

    ಟೀಸರ್ ಮೂಲಕ ಭಾರಿ ಸದ್ದು ಮಾಡುತ್ತಿದೆ ‘ಸಾಂಕೇತ್’

    Published

    on

    ಮಂಗಳೂರು : ಸದ್ಯ ಪೋಸ್ಟರ್, ಟೀಸರ್ ಮೂಲಕ ಭಾರಿ ಹೈಪ್ ಕ್ರಿಯೆಟ್ ಮಾಡಿರುವ ಸಿನಿಮಾ ‘ಸಾಂಕೇತ್’. ಇದೊಂದು ಸಸ್ಪೆನ್ಸ್, ಥ್ರಿಲ್ಲರ್ ಕಥೆಯನ್ನೊಳಗೊಂಡ ವಿನೂತನ ಚಿತ್ರ ಅನ್ನೋದು ಟೀಸರ್ ಮೂಲಕ ಖಚಿತವಾಗಿದೆ. ಟೀಸರ್ ಚಿತ್ರದ ಭಾರಿ ನಿರೀಕ್ಷೆ ಹುಟ್ಟು ಹಾಕಿದೆ.

    ಚಿತ್ರ ತಂಡ :

    ಚಿತ್ರದ ನಿರ್ದೇಶನವನ್ನು ಜ್ಯೋತ್ಸ್ನಾ ಕೆ. ರಾಜ್ ಮಾಡಿದ್ದು, ಜೊತೆಗೆ ಸೌಂಡ್ ಡಿಸೈನಿಂಗ್, ಎಡಿಟಿಂಗ್ ಹೊಣೆಯನ್ನೂ ಹೊತ್ತಿದ್ದಾರೆ. ಸ್ಕ್ರೀನ್ ಪ್ಲೇ, ಸಿನಿಮಾಟೋಗ್ರಾಫಿ, ಬಿಜಿಎಂ ಆ್ಯಂಡ್ ವಿಎಫ್ ಎಕ್ಸ್ ರಾಜ್ ಕಾರ್ತಿಕ್ ಮಾಡಿದ್ದಾರೆ.

    ಸಹಾಯಕ ನಿರ್ದೇಶಕನಾಗಿ, ಛಾಯಾಗ್ರಾಹಕನಾಗಿ ಸನತ್ ಕುಮಾರ್ ಕೆಲಸ ಮಾಡಿದ್ದಾರೆ. ಪ್ರಕಾಶ್ ರಾವ್ ಸಾಹಿತ್ಯ ಚಿತ್ರಕ್ಕಿದೆ. ಪ್ರೊಡಕ್ಸನ್ ಮ್ಯಾನೇಜರ್ ಆಗಿ ನಿಶಾನ್ ತೆಲ್ಲಿಸ್ ಕಾರ್ಯ ನಿರ್ವಹಿಸಿದ್ದಾರೆ.

    ಪಾತ್ರವರ್ಗ :

    ತುಳನಾಡ ಪ್ರತಿಭೆ ಚೈತ್ರ ಶೆಟ್ಟಿ, ವಿಕ್ಕಿ ರಾವ್, ಮೋಹನ್ ಶೆಣಿ, ರೂಪಶ್ರೀ ವರ್ಕಾಡಿ, ರಾಹುಲ್ ಅಮೀನ್, ನಿರೀಕ್ಷಾ ಶೆಟ್ಟಿ, ಸದಾಶಿವ ಅಮೀನ್, ನಿರೀಕ್ಷಾ ರಾಣಿ, ರಜೀತ್ ಕದ್ರಿ, ಮೇಘನಾ ರಕ್ಷಿತಾ ಮೊದಲಾವರು ಚಿತ್ರದಲ್ಲಿ ಪಾತ್ರವಾಗಿದ್ದಾರೆ. ಇನ್ನು ಚಿತ್ರದ ಟ್ರೇಲರ್ ಇದೇ ಜೂನ್ 29 ರಂದು ಬಿಡುಗಡೆಯಾಗಲಿದೆ.

    Continue Reading

    LATEST NEWS

    Trending