FILM
ಬಳ್ಳಾರಿ ಜೈಲಿಗೆ ಮೂರು ಬ್ಯಾಗ್ನೊಂದಿಗೆ ಬಂದ ದರ್ಶನ್ ಪತ್ನಿ..! ಒಂದು ವಸ್ತುವನ್ನು ಹಿಂದೆ ಕಳುಹಿಸಿದ ಪೊಲೀಸರು
ಬಳ್ಳಾರಿ/ಮಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ಇದೀಗ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿದ್ದಾರೆ. ಬಳ್ಳಾರಿ ಸೆಂಟ್ರಲ್ ಜೈಲಿಗೆ ದರ್ಶನ್ ನನ್ನು ನೋಡಲು ಅವರ ಪತ್ನಿ ವಿಜಯಲಕ್ಷ್ಮಿ ಆಗಮಿಸಿದ್ದರು. ಜೈಲಿಗೆ ಬರುವಾಗ ತನ್ನ ಪತಿಗಾಗಿ ಮೂರು ಬ್ಯಾಗ್ಗಳಲ್ಲಿ ಕೆಲ ವಸ್ತುಗಳನ್ನು ತಂದಿದ್ದರು. ಆದರೆ ವಿಜಯಲಕ್ಷ್ಮೀ ತಂದಿರುವ ವಸ್ತುಗಳನ್ನು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಪತ್ನಿ ಮೂರು ಬ್ಯಾಗ್ಗಳಲ್ಲಿ ತಂದಿದ್ದ ವಸ್ತುಗಳನ್ನು ಪರಿಶೀಲನೆ ಮಾಡಿ ಬಳಿಕ ಆ ಒಂದು ವಸ್ತುವನ್ನು ಮಾತ್ರ ವಾಪಸ್ ಹಿಂದೆ ಕಳುಹಿಸಿದ್ದಾರೆ.
ಈ ಕುರಿತಾಗಿ ಡಿಐಜಿ ಟಿ ಶೇಷ ರವರು ಪ್ರತಿಕ್ರಿಯಿಸಿದ್ದು, ವಿಜಯಲಕ್ಷ್ಮೀ ರವರು ದರ್ಶನ್ಗಾಗಿ ಡ್ರೈ ಫ್ರೂಟ್ಸ್, ಸೋಪು ಶ್ಯಾಂಪು, ಪೇಸ್ಟ್ಗಳನ್ನು ತಂದಿದ್ದರು. ಅಲ್ಲದೇ ಬಟ್ಟೆ, ಬ್ಲಾಂಕೆಟ್ಗಳನ್ನು ಸಹ ತಂದಿದ್ದರು. ಬ್ಲಾಂಕೆಟ್ಗಳನ್ನು ಹೊರಗಡೆಯಿಂದ ತರುವಂತಿಲ್ಲ. ಜೈಲಿನಲ್ಲಿರುವ ಹಾಸಿಗೆ ಬೆಡ್ಶೀಟ್ಗಳನ್ನೇ ಬಳಸಬೇಕು. ಹಾಗಾಗಿ ನಾವು ಬೆಡ್ ಶೀಟ್ನ್ನು ವಾಪಾಸು ಕಳುಸಿಹಿಸಿಕೊಟ್ಟಿದ್ದೇವೆ ಎಂದು ಹೇಳಿದ್ದಾರೆ.
ಜೈಲಿನಲ್ಲಿ ಇಂಡಿಯಲ್ ಟಾಯ್ಲೆಟ್ ಇದ್ದು, ದರ್ಶನ್ ಗೆ ಬೆನ್ನೆಲುಬು ನೋವು ಇರುವುದರಿಂದ ಶೌಚಕ್ಕೆ ಕಷ್ಟ್ವಾಗುತ್ತದೆ ಎಂದು ದರ್ಶನ್ ಹೇಳಿದ್ದಾರೆ. ಹೀಗಾಗಿ ಮೆಡಿಕಲ್ ರೆಕಾರ್ಡ್ ಪರಿಶೀಲಿಸಿ ಬಳಿಕ ವೆಸ್ಟರ್ನ್ ಕಮೋಡ್ ಒದಗಿಸುವುದರ ಬಗ್ಗೆ ಪರಿಶೀಲಿಸಲಾಗುತ್ತದೆ. ಇನ್ನು ಅವರಿಗೆ ಬೆನ್ನೆಲುಬಿನ ನೋವು ಇದ್ದೀದ್ದೇ ಆದಲ್ಲಿ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ನೀಡುತ್ತೇವೆ. ಇನ್ನು ಜೈಲಿನಲ್ಲಿ ಸಾಮಾನ್ಯ ಖೈದಿಗೆ ಹೇಗೆ ಚಿಕಿತ್ಸೆಯನ್ನು ನೀಡುತ್ತೇವೆಯೋ ಅದೇ ರೀತಿ ದರ್ಶನ್ ಗೂ ಚಿಕಿತ್ಸೆ ಕೊಡಿಸುತ್ತೇವೆ ಎಂದು ಡಿಐಜಿ ತಿಳಿಸಿದ್ದಾರೆ.
FILM
ಸೀಮಂತ ಸಂಭ್ರಮದಲ್ಲಿ ‘ಬಿಗ್ ಬಾಸ್’ ಖ್ಯಾತಿಯ ಕವಿತಾ ಗೌಡ
ಬೆಂಗಳೂರು: ‘ಬಿಗ್ ಬಾಸ್’, ‘ಲಕ್ಷ್ಮಿ ಬಾರಮ್ಮ’ ಖ್ಯಾತಿಯ ಚಿನ್ನು ಅಲಿಯಾಸ್ ನಟಿ ಕವಿತಾ ಗೌಡ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಚೊಚ್ಚಲ ಮಗುವಿನ ಆಗಮನಕ್ಕಾಗಿ ಎದುರು ನೋಡುತ್ತಿರುವ ನಟಿ ಕವಿತಾ ಸೀಮಂತ ಶಾಸ್ತ್ರ ಜರುಗಿದೆ. ಕಿರುತೆರೆಯ ನಟ, ನಟಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ಅಮ್ಮನಾಗ್ತಿರೋ ಕವಿತಾಗೆ ಶುಭಕೋರಿದ್ದಾರೆ.
ಕವಿತಾ ಮತ್ತು ನಟ ಚಂದನ್ ಕುಮಾರ್ ಮನೆಗೆ ಸದ್ಯದಲ್ಲೇ ಪುಟ್ಟ ಕಂದಮ್ಮನ ಆಗಮನವಾಗಲಿದೆ. ಇದೇ ಖುಷಿಯಲ್ಲಿ ತುಂಬು ಗರ್ಭಿಣಿ ಕವಿತಾಗೆ ಸರಳವಾಗಿ ಸೀಮಂತ ಶಾಸ್ತ್ರ ಮಾಡಿದ್ದಾರೆ. ಈ ಸಮಾರಂಭಕ್ಕೆ ನಟಿ ನಮ್ರತಾ ಗೌಡ, ತನಿಷಾ ಕುಪ್ಪಂಡ, ಹಿರಿಯ ನಟಿ ಶ್ರುತಿ, ನಿಮಿಕಾ ರತ್ನಾಕರ್, ನೇಹಾ ಗೌಡ, ಅನುಪಮಾ ಗೌಡ ಸೇರಿದಂತೆ ಅನೇಕರು ಭಾಗಿಯಾಗಿದ್ದರು.
ಅಂದಹಾಗೆ, ಲಾಕ್ಡೌನ್ ವೇಳೆ 2021ರ ಮೇ 14ರಂದು ಚಂದನ್ ಕುಮಾರ್ ಮತ್ತು ಕವಿತಾ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇಬ್ಬರೂ ‘ಲಕ್ಷ್ಮಿ ಬಾರಮ್ಮ’ ಸೀರಿಯಲ್ನಲ್ಲಿ ಹೀರೋ, ಹೀರೋಯಿನ್ ಆಗಿ ನಟಿಸಿದ್ದರು.
FILM
ಹೇಮಾ ಸಮಿತಿಯಂತೆ ಸ್ಯಾಂಡಲ್ವುಡ್ನಲ್ಲಿ ನಟಿಯರ ರಕ್ಷಣೆಗೆ ಬರುತ್ತಿದೆ ಸಮಿತಿ
ಮಂಗಳೂರು/ಬೆಂಗಳೂರು : ಮಲಯಾಳಂ ಚಿತ್ರರಂಗದಲ್ಲಿ ಹೇಮಾ ಸಮಿತಿ ವರದಿ ಭಾರೀ ಚರ್ಚೆ ಹುಟ್ಟು ಹಾಕಿತ್ತು. ಮಾಲಿವುಡ್ ನಲ್ಲಿ ನಟಿಯರ ಮೇಲೆ ನಡೆಯುತ್ತಿರುವ ಕಿರುಕು*ಳದ ಬಗ್ಗೆ ವರದಿ ಬಹಿರಂಗ ಪಡಿಸಿತ್ತು. ಈ ವrದಿಯಿಂದಾಗಿ ಹಲವು ಬೆಳವಣಿಗೆಗಳು ನಡೆದ ಬೆನ್ನಲ್ಲೇ ಚಂದನವನ(Sandalwood)ದಲ್ಲೂ ಹೇಮಾ ಸಮಿತಿ ಮಾದರಿಯಲ್ಲೇ ಸಮಿತಿ ರಚಿಸಬೇಕು ಎಂಬ ಆಗ್ರಹ ಕೇಳಿ ಬಂದಿತ್ತು. ಈ ಬಗ್ಗೆ ನಟಿಯರು ಮನವಿಯನ್ನೂ ಸಲ್ಲಿಸಿದ್ದರು.
ಈ ಹಿನ್ನೆಲೆಯಲ್ಲಿ ಇಂದು(ಸೆ.16) ಸಭೆ ನಡೆದಿದೆ. ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಬಳಿಕ ಸುದ್ದಿಗೋಷ್ಠಿ ನಡೆಯಿತು.
ಪಾಶ್ ಕಮಿಟಿ ರಚನೆ :
ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಚಿತ್ರರಂಗಕ್ಕೆ ಹೆಣ್ಣು ಮಕ್ಕಳು ಬರ್ತಾರೆ ಅಂದ್ರೆ ತಂದೆ-ತಾಯಿ ಸುಲಭದಲ್ಲಿ ಕಳುಹಿಸಬೇಕು. ಆ ರೀತಿ ಚಿತ್ರರಂಗ ಆಗಬೇಕು. ಎಲ್ಲರೂ ಡಾಕ್ಟರ್ ಆಗಿ, ಇಂಜಿನಿಯರ್ ಆಗಿ ಎನ್ನುತ್ತಾರೆ. ಆದರೆ, ಕೆಲವೇ ಕೆಲವರು ಮಾತ್ರ ನಟನೆಗೆ ಹೋಗಿ ಎಂದು ಹೇಳುತ್ತಾರೆ. ಚಿತ್ರರಂಗದಲ್ಲಿ ಹೆಣ್ಣುಮಕ್ಕಳು ಸುರಕ್ಷಿತವಾಗಿ ಇರ್ತಾರಾ ಎಂಬ ಪ್ರಶ್ನೆ ಮೂಡುವಂತೆ ಆಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ಪಾಶ್ ಕಮಿಟಿ ಮಾಡಲಾಗುತ್ತಿದೆ. ವಾಣಿಜ್ಯ ಚಿತ್ರರಂಗಕ್ಕೆ ಪತ್ರ ಬರೆದಿದ್ದೇವೆ. ಇವತ್ತು ಮೀಟಿಂಗ್ಗೆ ಬಹಳ ಕಡಿಮೆ ನಟಿಯರು ಬಂದಿದ್ದಾರೆ. ಹೊರದೇಶದಲ್ಲಿ ಕಾರ್ಯಕ್ರಮ (ಸೈಮಾ) ಇತ್ತು. ಹೀಗಾಗಿ, ಅಲ್ಲಿಗೆ ಹೋಗಿದ್ದಾರೆ ಎಂದರು.
ನನಗೆ ಅನಾರೋಗ್ಯ ಆಗಿದೆ. ಆದರೂ ಬಂದಿದ್ದೇನೆ. ಮುಂದಿನ ಸಭೆಯಲ್ಲಿ ಎಲ್ಲರೂ ಬರುವಂತೆ ಆಗಬೇಕು. ಕಮಿಟಿ ಹೇಗೆ ಇರಬೇಕು ಎನ್ನುವ ಕುರಿತು ಕಾನೂನು ಇದೆ. ಅದೇ ರೀತಿಯಲ್ಲಿ ಸಮಿತಿ ರಚನೆ ಆಗಲಿದೆ. ಇದು ನಟಿಯರಿಗೆ ಫ್ಯಾಮಿಲಿ. ನಟಿಯರು ಸಿನಿಮಾದಲ್ಲಿ ನಟಿಸಬೇಕು ಎಂದಾಗ 17 ಪಾಯಿಂಟ್ಸ್ ಇದೆ. ಯಾವ ಯಾವ ಫೆಸಿಲಿಟಿ ನೀಡಬೇಕು ಎಂಬುದರ ಉಲ್ಲೇಖ ಇದೆ. ಪಾಶ್ ಕಮಿಟಿ ಇರುತ್ತದೆ. ಸರ್ಕಾರದ ಗೆಜೆಟ್ನಲ್ಲಿ ಈ ಸಮಿತಿ ಬರುತ್ತದೆ. ದೂರು ಬಂದರೆ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಇದನ್ನೂ ಓದಿ : ಸದ್ದಿಲ್ಲದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್, ಅದಿತಿ ರಾವ್
ಸಮಿತಿ ಮಾಡಲೇಬೇಕು. ಅದನ್ನು ಯಾರೂ ಮಾಡಲ್ಲ ಎಂದು ಹೇಳೋಕೆ ಆಗಲ್ಲ. ಮಹಿಳೆಯರಿಗೆ ರಕ್ಷಣೆ ನೀಡಲು ಇದನ್ನು ಮಾಡಲೇಬೇಕು. ಇದನ್ನು ಮಾಡೇ ಮಾಡುತ್ತೇವೆ. ಈ ಸಮಿತಿಗೆ ಹಿರಿಯ ನಟಿ ಅಧ್ಯಕ್ಷರಾಗಿರಬೇಕು. ಅರ್ಧದಷ್ಟು ಸದಸ್ಯರು ಮಹಿಳೆಯರಾಗಬೇಕು. ಮಹಿಳೆಯರ ಪರ ಹೋರಾಡುವ ಒಬ್ಬರು ಈ ಸಮಿತಿಯಲ್ಲಿ ಇರಬೇಕು ಎಂದು ವಿವರಿಸಿದ್ದಾರೆ.
FILM
ತೆಲುಗು ಬಿಗ್ ಬಾಸ್ ಗೆ ಎಂಟ್ರಿ ಕೊಟ್ಟ ಮಂಗಳೂರಿನ ಯುವಕ
ಮಂಗಳೂರು : ರಿಯಾಲಿಟಿ ಶೋಗಳಲ್ಲಿ ಅತ್ಯಂತ ಹೆಚ್ಚು ಜನಮೆಚ್ಚಿದ, ಪ್ರಶಂಸೆಗೆ ಪಾತ್ರವಾಗಿರುವ ಬಿಗ್ ಬಾಸ್ ಗೆ ಎಂಟ್ರಿ ಕೊಡೋದು ಸುಲಭದ ಮಾತಲ್ಲ. ಚಿತ್ರರಂಗ ಮತ್ತು ಸೀರಿಯಲ್ ಕ್ಷೇತ್ರದ ಘಟಾನುಘಟಿಗಳು ಈ ಶೋ ನಲ್ಲಿ ಪಾಲ್ಗೊಳ್ಳಲು ತುದಿಗಾಲಲ್ಲಿ ನಿಂತಿದ್ದಾರೆ ಅನ್ನೋದು ಸುಳ್ಳಲ್ಲ. ಇಂಥ ಫೇಮಸ್ ರಿಯಾಲಿಟಿ ಶೋನಲ್ಲಿ ಮಂಗಳೂರಿನ ಯುವಕನೊಬ್ಬ ಎಂಟ್ರಿ ಕೊಟ್ಟಿದ್ದಾನೆ.
ತೆಲುಗು ಬಿಗ್ ಬಾಸ್ ನ 8 ನೇ ಆವೃತ್ತಿ ಆಯ್ಕೆಯಾಗಿರುವ ಈ ಯುವಕ ಮಂಗಳೂರಿನ ಪೃಥ್ವಿ ಶೆಟ್ಟಿ. ಮೂಲತಃ ಮಂಗಳೂರಿನವರಾದ ಇವರು ಇದೀಗ ಬಿಗ್ ಬಾಸ್ ಶೋ ಒಳಗೆ ಎಂಟ್ರಿ ಕೊಟ್ಟು ತಮ್ಮ ಪ್ರದರ್ಶನ ನೀಡುತ್ತಿದ್ದಾರೆ.
ಧಾರಾವಾಹಿಗಳ ಮೂಲಕ ಗಮನ ಸೆಳೆದ ನಟ :
ಕುಡ್ಲದ ಪ್ರತಿಭೆಗಳು ಕಿರುತೆರೆ, ಹಿರಿತೆರೆಯಲ್ಲಿ ಮಿನುಗುತ್ತಿದ್ದಾರೆ. ಅವರಲ್ಲಿ ಪೃಥ್ವಿ ಶೆಟ್ಟಿ ಕೂಡ ಒಬ್ಬರು. ತಮ್ಮ ಪ್ರಾಥಮಿಕ ಶಿಕ್ಷಣ ಮತ್ತು ಕಾಲೇಜು ಶಿಕ್ಷಣವನ್ನು ಮಂಗಳೂರು, ಕಾಸರಗೋಡು ಮತ್ತು ಉಡುಪಿ ಜಿಲ್ಲೆಯಲ್ಲಿ ಮುಗಿಸಿರುವ ಪೃಥ್ವಿ ವಿದ್ಯಾಭ್ಯಾಸದ ಬಳಿಕ ಫ್ಯಾಷನ್ ಫೀಲ್ಡ್ ಗೆ ವಾಲಿದ್ದರು. ಕಾಲೇಜು ದಿನಗಳಲ್ಲಿಯೇ ಫ್ಯಾಷನ್ ಶೋಗಳಲ್ಲಿ ಪಾಲ್ಗೊಂಡು ಯಶಸ್ಸು ಕಂಡಿದ್ದ ಪೃಥ್ವಿ, ಬಳಿಕದ ದಿನಗಳಲ್ಲಿ ಚಿತ್ರರಂಗ ಮತ್ತು ಟಿವಿ ಶೋಗಳಲ್ಲಿ ಅಭಿನಯಿಸುವ ಇಚ್ಛೆಯಿಂದ ಬೆಂಗಳೂರು ಮಹಾನಗರಕ್ಕೆ ಪ್ರಯಾಣ ಬೆಳೆಸಿದ್ದರು.
ಹಲವು ಸಣ್ಣ-ಪುಟ್ಟ ಧಾರಾವಾಹಿಗಳಲ್ಲಿ ನಟಿಸಿರುವ ಪೃಥ್ವಿ ಶೆಟ್ಟಿಗೆ ಉತ್ತಮ ಬ್ರೇಕ್ ದೊರೆತಿದ್ದು ಪ್ರೀತಿಯ ಅರಸ ಮತ್ತು ಅರ್ಧಾಂಗಿ ಎನ್ನುವ ಟಿವಿ ಸೀರಿಯಲ್ ನಲ್ಲಿ. ಎರಡೂ ಧಾರಾವಾಹಿಗಳಲ್ಲಿ ತಮ್ಮ ಸಾಧನೆ ತೋರಿರುವ ಪೃಥ್ವಿ ಗೆ ಬಳಿಕದ ದಿನಗಳಲ್ಲಿ ತೆಲುಗು ಭಾಷೆಯ ಮೆಗಾ ಧಾರಾವಾಹಿಗಳಲ್ಲೂ ಅವಕಾಶ ದೊರೆತಿದೆ. ತೆಲುಗಿನ ಸೂಪರ್ ಹಿಟ್ ಧಾರಾವಾಹಿಯಾದ ನಾಗಪಂಚಮಿಯಲ್ಲಿನ ನಟನೆಗೆ ಪೃಥ್ವಿ ಶೆಟ್ಟಿ ಮನೆ ಮಾತಾಗಿದ್ದಾರೆ.
ಇದನ್ನೂ ಓದಿ : ಚಿನ್ನದ ಅಂಗಡಿಗೆ ಬಂದು ಬೆಲೆಬಾಳುವ ಮಾಂಗಲ್ಯ ಸರದೊಂದಿಗೆ ಎಸ್ಕೇಪ್ ಆದ ಕಳ್ಳ
ಈಗಾಗಲೇ ಎರಡು ತೆಲುಗು ಚಿತ್ರಗಳಲ್ಲಿ ನಟಿಸಿರುವ ಪೃಥ್ವಿ ಆ ಚಿತ್ರಗಳಲ್ಲೂ ಯಶಸ್ಸು ಕಾಣುವ ವಿಶ್ವಾಸದಲ್ಲಿದ್ದಾರೆ. ತೆಲುಗು ಟಿವಿ ಶೋಗಳಲ್ಲಿ ಮಿಂಚಿರುವ ಪೃಥ್ವಿಯವರನ್ನು ಅವರ ಸಾಧನೆ ಹಾಗು ಯಶಸ್ಸನ್ನು ಪರಿಗಣಿಸಿ ಬಿಗ್ ಬಾಸ್ ನ 8 ನೇ ಆವೃತ್ತಿಗೆ ಆಯ್ಕೆ ಮಾಡಲಾಗಿದೆ. ಓಟಿಂಗ್ ನಲ್ಲೂ ಮೂರನೇ ಸ್ಥಾನವನ್ನು ಕಾಯ್ದುಕೊಂಡಿರುವ ಪೃಥ್ವಿ ಬಿಗ್ ಬಾಸ್ ಆಗಿ ಹೊರಬರಲಿ ಎನ್ನುವ ಹಾರೈಕೆಗಳೂ ಕೇಳಿ ಬರಲಾರಂಭಿಸಿದೆ.
- FILM6 days ago
ಕನ್ನಡ ಬಿಗ್ ಬಾಸ್ ಸೀಸನ್ 11ಕ್ಕೆ ಮುಹೂರ್ತ ಫಿಕ್ಸ್! ಹೋಸ್ಟ್ ಕೂಡ ಕನ್ಫರ್ಮ್!
- LATEST NEWS6 days ago
ನೃತ್ಯ ಮಾಡಲು ನಿರಾಕರಿಸಿದ ನೃತ್ಯಗಾರ್ತಿಯರ ಮೇಲೆ ಸಾಮೂಹಿಕ ಅತ್ಯಾಚಾ*ರ
- FILM7 days ago
ರೇಣುಕಾಸ್ವಾಮಿ ಚಾರ್ಜ್ಶೀಟ್ನಲ್ಲಿ ಇಬ್ಬರು ನಟಿಯರ ಹೆಸರು ಉಲ್ಲೇಖ..!
- FILM5 days ago
ಶಾಂಕಿಂಗ್ ನ್ಯೂಸ್ : ಕಟ್ಟಡದಿಂದ ಹಾರಿ ನಟಿ ಮಲೈಕಾ ಅರೋರಾ ತಂದೆ ಆತ್ಮಹ*ತ್ಯೆ
Pingback: ದರ್ಶನ್ ಗ್ಯಾಂಗ್ ವಿರುದ್ಧ ಇನ್ನೆರಡು ದಿನಗಳಲ್ಲಿ ಅಂತಿಮ ಚಾರ್ಜ್ಶೀಟ್ ಸಲ್ಲಿಕೆ - NAMMAKUDLA NEWS - ನಮ್ಮಕುಡ್ಲ ನ್ಯೂಸ