Connect with us

LATEST NEWS

Davanagere/Haveri: ಮನೆ ಗೋಡೆ ಕುಸಿದು ಇಬ್ಬರು ಮಕ್ಕಳು ಸಾವು..!

Published

on

ನಿರಂತರ ಮಳೆ ಸುರಿಯುತ್ತಿದ್ದರಿಂದ ಮನೆಗೋಡೆ ಕುಸಿದು ಬಿದ್ದು, ಒಂದು ವರ್ಷದ ಮಗು ಹಾಗೂ 3 ವರ್ಷದ ಬಾಲಕಿ ಮೃತಪಟ್ಟ ಘಟನೆ ದಾವಣಗೆರೆ ಹಾಗೂ ಹಾವೇರಿಯಲ್ಲಿ ನಡೆದಿದೆ.

ದಾವಣಗೆರೆ/ಹಾವೇರಿ: ರಾಜ್ಯದಲ್ಲಿ ಭಾರಿ ಮಳೆ ಸುರಿಯುತಿದ್ದು, ಹಲೆವಡೆ ಅಪಾರ ಹಾನಿಯಾಗಿದೆ.

ನಿರಂತರ ಮಳೆ ಸುರಿಯುತ್ತಿದ್ದರಿಂದ ಮನೆಗೋಡೆ ಕುಸಿದು ಬಿದ್ದು, ಒಂದು ವರ್ಷದ ಮಗು ಹಾಗೂ 3 ವರ್ಷದ ಬಾಲಕಿ ಮೃತಪಟ್ಟ ಘಟನೆ ದಾವಣಗೆರೆ ಹಾಗೂ ಹಾವೇರಿಯಲ್ಲಿ ನಡೆದಿದೆ.

ಮಳೆಗೆ ಮನೆಯ ಗೋಡೆ ಕುಸಿತಗೊಂಡು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕುಂಬಳೂರಿನಲ್ಲಿ ಲಕ್ಷ್ಮಿ ಹಾಗೂ ಕೆಂಚಪ್ಪ ದಂಪತಿಯ ಪುತ್ರಿ ಸ್ಪೂರ್ತಿ (1) ಅದರಡಿ ಸಿಲುಕಿ ಸಾವನ್ನಪ್ಪಿದೆ.

ಘಟನೆಯಲ್ಲಿ ಬಾಲಕಿಯ ತಂದೆ-ತಾಯಿಗೂ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗೆ ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಪೂರ್ತಿ ಮಗುವಿನ ಪೋಷಕರ ಆಕ್ರಂದನ ಮುಗಿಲೇರಿದೆ.

ಮಲೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಅದೇ ರೀತಿ ಹಾವೇರಿ ಜಿಲ್ಲೆಯಲ್ಲೂ ನಿರಂತರ ಮಳೆ ಸುರಿಯುತಿದ್ದು, ಇಲ್ಲಿನ ಮಾಳಾಪುರ ಗ್ರಾಮದಲ್ಲಿ ಮನೆ ಗೋಡೆ ಕುಸಿದು ಭಾಗ್ಯ ಚಳಮರದ (3) ಎಂಬ ಬಾಲಕಿ ಮೃತಪಟ್ಟಿದ್ದಾಳೆ.

ಮನೆಯಲ್ಲಿದ್ದ ಮತ್ತೊಂದು ಮಗುವಿಗೂ ಗಾಯವಾಗಿದೆ.

2 ದಿನಗಳ ಹಿಂದೆ ನಿರಂತರ ಮಳೆಯಿಂದ ಮನೆಯ ಗೋಡೆ ಕುಸಿದು ಬಿದ್ದಿದ್ದು, ಘಟನೆಯಲ್ಲಿ ಬಾಲಕಿ ಭಾಗ್ಯ ಗಂಭೀರವಾಗಿ ಗಾಯಗೊಂಡಿದ್ದಳು.

ಬಳಿಕ ಆಕೆಯನ್ನು ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಿಸದೆ ಬಾಲಕಿ ಮೃತಪಟ್ಟಿದ್ದಾಳೆ.

ಇದೀಗ ಬಾಲಕಿ ಭಾಗ್ಯ ಚಳಮರದ ಸಾವಿನಿಂದ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

 

Click to comment

Leave a Reply

Your email address will not be published. Required fields are marked *

FILM

WATCH VIDEO : ಕಾಸರಗೋಡಿನಲ್ಲಿ ಕಾಣಿಸಿಕೊಂಡ ಸನ್ನಿ ಲಿಯೋನ್

Published

on

ಕಾಸರಗೋಡು : ಸನ್ನಿಲಿಯೋನ್ ಯಾರಿಗೆ ತಾನೆ ಗೊತ್ತಿಲ್ಲ. ತನ್ನ ಮಾದಕ ನೋಟದಿಂದ, ನಟನೆಯಿಂದ ಸಿಕ್ಕಾಪಟ್ಟೆ ಫೇಮಸ್ ಆಗಿರುವ ಮೋಹಕ ತಾರೆ. ಸದ್ಯ ಅವರು ಸಿನಿಮಾಗಳಲ್ಲಿ ಬಿಝಿಯಾಗಿದ್ದಾರೆ. ಚಿತ್ರವೊಂದರ ಶೂಟಿಂಗ್ ಗಾಗಿ ಕಾಸರಗೋಡಿನಲ್ಲಿ ಕಾಣಿಸಿಕೊಂಡಿದ್ದಾರೆ.

ಸೀತಂಗೋಳಿ ಸಮೀಪದ ಶೇಣಿಯಲ್ಲಿ ಹಿಂದಿ ಚಿತ್ರವೊಂದರ ಶೂಟಿಂಗ್ ನಲ್ಲಿ ಅವರು ಭಾಗಿಯಾಗಿದ್ದಾರೆ. ಹೇಳಿ ಕೇಳಿ ಕಾಸರಗೋಡಿನಲ್ಲಿ ಚಿತ್ರೀಕರಣಕ್ಕೆ ಹೆಸರುವಾಸಿಯಾದ ಸುಂದರ ಪ್ರದೇಶ ಶೇಣಿ. ಇಲ್ಲಿ ಹಲವಾರು ಪರಭಾಷಾ ಚಲನಚಿತ್ರಗಳ ಚಿತ್ರೀಕರಣ ನಡೆದಿದೆ. ಇದೀಗ ಸನ್ನಿ ಲಿಯೋನ್ ಚಿತ್ರದ ಚಿತ್ರೀಕರಣವೂ ನಡೆಯುತ್ತಿದೆ.

ಇದನ್ನೂ ಓದಿ : ಖ್ಯಾತ ಕಿರುತೆರೆ ನಟ ಗುರುಚರಣ್ ಸಿಂಗ್ ನಾಪತ್ತೆ!

ಶೇಣಿಯ ಶಾಲೆ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಶೂಟಿಂಗ್ ನಡೆಯುತ್ತಿದೆ. ಸನ್ನಿಯ ಮಾದಕ ನೋಟವನ್ನ ನೋಡಲು ರಸ್ತೆ ಬದಿ ಅಭಿಮಾನಿಗಳು ಕಿಕ್ಕಿರಿದು ಸೇರಿದ್ದಾರೆ.

 

Continue Reading

FILM

ಮೇಕಪ್ ರೂಂನಲ್ಲಿ ಕೂಡಿ ಹಾಕಿದ್ರು…ಆಮೇಲೆ…ನಿರ್ಮಾಪಕನಿಂದಾದ ಕರಾಳ ಅನುಭವ ಬಿಚ್ಚಿಟ್ಟ ಖ್ಯಾತ ಕಿರುತೆರೆ ನಟಿ!

Published

on

ಸಿನಿಮಾ ರಂಗದಲ್ಲಿ ತಮಗಾದ ಕೆಟ್ಟ ಅನುಭವಗಳ ಬಗ್ಗೆ ನಟಿಯರು ಹೇಳಿಕೊಳ್ಳುತ್ತಲೇ ಇರುತ್ತಾರೆ. ಕಾಸ್ಟಿಂಗ್ ಕೌಚ್ ವಿಚಾರ ಇತ್ತೀಚೆಗೆ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ. ಈ ನಡುವೆ ಮತ್ತೊಬ್ಬ ನಟಿ ಕಿರುತೆರೆಯಲ್ಲಿ ತನಗಾದ ಕೆಟ್ಟ ಅನುಭವವನ್ನು ಹಂಚಿಕೊಂಡಿದ್ದಾರೆ. ಹೌದು, ಕಿರುತೆರೆ ಖ್ಯಾತ ನಟಿ ಕೃಷ್ಣಾ ಮುಖರ್ಜಿ ಈ ಬಗ್ಗೆ ನೋವು ಹಂಚಿಕೊಂಡಿದ್ದಾರೆ.


ಧಾರಾವಾಹಿಯಿಂದ ಹೊರಬರಲು ಕಾರಣ ತಿಳಿಸಿದ ನಟಿ:

ಕೃಷ್ಣಾ ‘ಯೇ ಹೇ ಮೊಹಾಬತೇ’ ಧಾರಾವಾಹಿ ಮೂಲಕ ಫೇಮಸ್ ಆಗಿದ್ದರು. ನಾಗಿನ್ 2 ಕೂಡ ಅವರಿಗೆ ಹೆಸರು ತಂದು ಕೊಟ್ಟಿದೆ. ಇದೀಗ ಅವರು ತಮಗಾದ ಕಿರುಕುಳದ ವಿಚಾರವನ್ನು ಹಂಚಿಕೊಂಡಿದ್ದಾರೆ. ಕೃಷ್ಣಾ ‘ಶುಭ ಶಗುನ್’ ಹೆಸರಿನ ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಇದರಿಂದ ಅವರು ಹೊರ ಬಂದಿದ್ದಾರೆ. ಇದಕ್ಕೆ ಕಾರಣ ಧಾರಾವಾಹಿ ನಿರ್ಮಾಪಕ ಕುಂದನ್ ಸಿಂಗ್ ಅವರು ನೀಡಿದ ಕಿರುಕುಳ ಎಂದು ನಟಿ ಆರೋಪಿಸಿದ್ದಾರೆ.


ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ವಿವರವಾಗಿ ಹೇಳಿದ್ದಾರೆ. ‘ಇದನ್ನು ಬರೆಯುವಾಗ ನನ್ನ ಕೈಗಳು ನಡುಗುತ್ತಿವೆ. ಆದರೂ ನಾನು ಬರೆಯಲೇಬೇಕು. ನಾನು ಇವರಿಂದ ಖಿನ್ನತೆಗೆ ಒಳಗಾಗಿದ್ದೇನೆ. ನಾವು ನಮ್ಮ ಭಾವನೆಗಳನ್ನು ಹಿಡಿದಿಟ್ಟು, ನಮ್ಮ ಒಳ್ಳೆಯ ಜೀವನವನ್ನು ಮಾತ್ರ ಸೋಶಿಯಲ್ ಮೀಡಿಯಾದಲ್ಲಿ ತೋರಿಸುತ್ತೇವೆ. ಆದರೆ, ಇದು ರಿಯಾಲಿಟಿ’ ಎಂದು ಬರೆದುಕೊಂಡಿದ್ದಾರೆ.
‘ನನಗೆ ಇನ್ನಷ್ಟು ಹಾನಿ ಆಗಬಹುದು ಎನ್ನುವ ಕಾರಣಕ್ಕೆ ಕುಟುಂಬದವರು ಈ ಬಗ್ಗೆ ಪೋಸ್ಟ್ ಮಾಡೋದು ಬೇಡ ಎಂದರು. ನಾನೇಕೆ ಹೆದರಬೇಕು? ನ್ಯಾಯ ಪಡೆಯೋದು ನನ್ನ ಹಕ್ಕು’ ಎಂದು ಬರೆದಿದ್ದಾರೆ. ಅಲ್ಲದೇ, ಕುಂದನ್ ಸಿಂಗ್ ಅವರನ್ನು ಟ್ಯಾಗ್ ಕೂಡಾ ಮಾಡಿದ್ದಾರೆ.

ಮೇಕಪ್ ರೂಂ ಲಾಕ್ ಮಾಡಿದ್ದರು :

ಕಳೆದ ಒಂದೂವರೆ ವರ್ಷ ನನಗೆ ಸುಲಭದ್ದಾಗಿರಲಿಲ್ಲ. ನಾನು ಖಿನ್ನತೆಗೆ ಒಳಗಾಗಿದ್ದೇನೆ. ನಾನು ಒಂಟಿಯಾಗಿದ್ದಾಗ ಅಳುತ್ತಿದ್ದೇನೆ. ದಂಗಲ್ ಟಿವಿಗಾಗಿ ಶುಭ್ ಶಗುನ್ ಧಾರಾವಾಹಿ ಒಪ್ಪಿಕೊಂಡಾಗಿನಿಂದ ಈ ಸಮಸ್ಯೆ ಆಗುತ್ತಿದೆ. ನನ್ನ ಜೀವನದಲ್ಲಿ ಮಾಡಿದ ಅತಿ ಕೆಟ್ಟ ನಿರ್ಧಾರ. ನನಗೆ ಅದನ್ನು ಮಾಡಬೇಕು ಎಂದಿರಲಿಲ್ಲ. ಬೇರೆಯವರ ಮಾತನ್ನು ಕೇಳಿ ಕಾಂಟ್ರ್ಯಾಕ್ಟ್ ಸಹಿ ಮಾಡಿದೆ’ ಎಂದಿದ್ದಾರೆ ಕೃಷ್ಣಾ.

‘ಪ್ರೊಡಕ್ಷನ್ ಹೌಸ್ ಹಾಗೂ ನಿರ್ಮಾಪಕ ಕುಂದನ್ ಸಿಂಗ್ ಅವರು ನನಗೆ ಕಿರುಕುಳ ನೀಡಿದ್ದಾರೆ. ನನಗೆ ಅಂದು ಅನಾರೋಗ್ಯವಾಗಿತ್ತು. ಜೊತೆಗೆ ಅವರು ಸಂಭಾವನೆಯನ್ನೂ ಕೊಡುತ್ತಿರಲಿಲ್ಲ. ಹೀಗಾಗಿ ನಾನು ಶೂಟ್ ಮಾಡಲ್ಲ ಎಂದೆ. ಇದಕ್ಕಾಗಿ ಅವರು ಮೇಕಪ್​ ರೂಂನಲ್ಲಿ ನನ್ನನ್ನು ಲಾಕ್ ಮಾಡಿದ್ದರು. ನಾನು ಬಟ್ಟೆ ಬದಲಿಸುವಾಗ ಬಾಗಿಲು ಮುರಿಯುವ ರೀತಿಯಲ್ಲಿ ಬಾಗಿಲು ಬಡಿಯುತ್ತಿದ್ದರು ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ : ಖ್ಯಾತ ಕಿರುತೆರೆ ನಟ ಗುರುಚರಣ್ ಸಿಂಗ್ ನಾಪತ್ತೆ!


ಕೃಷ್ಣಾ ಪೋಸ್ಟ್ ಗೆ ಹಲವು ಮಂದಿ ಕಮೆಂಟ್ ಮಾಡಿದ್ದು, ನಿಮಗೆ ನ್ಯಾಯ ಸಿಗಲೇಬೇಕು ಎಂದು ಕೆಲವರು ಹೇಳಿದ್ದು, ನಿಮ್ಮ ಜೊತೆ ನಾವಿದ್ದೇವೆ ಎಂದು ಕೆಲವರು ಹೇಳಿದ್ದಾರೆ. ಇದು ಮನಸ್ಸು ಮುರಿಯುವ ವಿಚಾರ ಎಂದು ಕಮೆಂಟ್ ಮಾಡಲಾಗಿದೆ. ಅವರ ಅಭಿಮಾನಿಗಳು ಮಾತ್ರವಲ್ಲದೇ, ಕಲಾವಿದರೂ ಕಮೆಂಟ್ ಗಳನ್ನು ಮಾಡಿ ನಿಮ್ಮ ಜೊತೆಗೆ ನಾವಿದ್ದೇವೆ ಎನ್ನುತ್ತಿದ್ದಾರೆ. ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸುತ್ತಿದ್ದಾರೆ.

 

Continue Reading

FILM

ರಾಮ-ಸೀತೆಯಂತೆ ಕಾಣಿಸಿಕೊಂಡ ರಣ್​ಬೀರ್​, ಸಾಯಿ ಪಲ್ಲವಿ.. ರಾಮಾಯಣ ಸಿನಿಮಾ ಸೆಟ್ಟಿನ ಫೋಟೋ ಲೀಕ್​

Published

on

ರಾಮಾಯಣ ಬಾಲಿವುಡ್‌ನಲ್ಲಿ ತೆರೆ ಮೇಲೆ ಬರಲಿರುವ ಬಹುನೀರಿಕ್ಷಿತ ಸಿನಿಮಾ. ಆದರೀಗ ಈ ಸಿನಿಮಾದ ಕೆಲವು ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಲೀಕ್ ಆಗಿದೆ.

ನಿತೇಶ್ ತಿವಾರಿ ನಿರ್ದೇಶನದಲ್ಲಿ ರಾಮಾಯಣ ಸಿನಿಮಾ ಮೂಡಿಬರುತ್ತಿದೆ. ಈ ಸಿನಿಮಾದಲ್ಲಿ ರಣ್‌ಬೀರ್ ಕಪೂರ್ ಮತ್ತು ಸಾಯಿ ಪಲ್ಲವಿ ನಟಿಸುತ್ತಿರೋ ವಿಚಾರ ಎಲ್ಲರಿಗೂ ಗೊತ್ತೇ ಇದೆ. ಆದರೆ ಈಗ ರಣ್‌ಬೀರ್ ಮತ್ತು ಸಾಯಿ ಪಲ್ಲವಿ ಸಿನಿಮಾದಲ್ಲಿ ಭಗವಾನ್ ರಾಮ ಮತ್ತು ಸೀತಾ ದೇವಿ ಪಾತ್ರದಲ್ಲಿ ಕಾಣಿಸಿಕೊಂಡ ಫೋಟೋ ಲೀಕ್ ಆಗಿದೆ.

ಸದ್ಯ ಹರಿದಾಡುತ್ತಿರುವ ಮಾಹಿತಿ ಪ್ರಕಾರ, ಶನಿವಾರದಂದು ರಾಮಾಯಣ ಸೆಟ್‌ನಲ್ಲಿ ರಣ್‌ಬೀರ್ ಅಯೋಧ್ಯೆಯ ಶ್ರೀ ರಾಮ ಚಂದ್ರನಂತೆ ಕಾಣಿಸಿಕೊಂಡಿದ್ದಾರೆ. ಅತ್ತ ಸಾಯಿ ಪಲ್ಲವಿ ಕೂಡ ಸೀತೆಯಂತೆ ಕಂಗೊಳಿಸಿದ್ದಾರೆ. ಆದರೆ ಇದೇ ಸೆಟ್‌ನಲ್ಲಿ ಇವರಿಬ್ಬರ ಫೋಟೋ ಲೀಕ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ದಶರಥನ ವೇಷದಲ್ಲಿ ಅರುಣ್​ ಗೋಯಲ್

ಇದಲ್ಲದೆ ರಾಮಾಯಣ ಸಿನಿಮಾದಲ್ಲಿ ನಟಿಸುತ್ತಿರುವ ಅರುಣ್​ ಗೋಯಲ್​ ದಶರಥನ ವೇಷದಲ್ಲಿ ಕಾಣಿಸಿಕೊಂಡಿದ್ದಾರೆ. ಲಾರಾ ದತ್ತಾ ಕೈಕೇಯಿ, ಬಾಬಿ ಡಿಯೋಲ್​, ವಿಜಯ್​ ಸೇತುಪತಿ, ಸನ್ನಿ ಡಿಯೋಲ್​ ಮೂವರು ಕುಂಭಕರಣ, ವಿಭೀಷಣ, ಹನುಮಂತನಾಗಿ ನಟಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ರಣ್​ಬೀರ್​ ಸಸ್ಯಹಾರಿ

ಇನ್ನು ರಣ್​ಬೀರ್​ ರಾಮನ ಪಾತ್ರಕ್ಕಾಗಿ ಸಸ್ಯಹಾರವನ್ನು ಸೇವಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಅನಿಮಲ್​ ಸಿನಿಮಾದ ಬಳಿಕ ರಣಬೀರ್​ ರಾಮಾಯಣ ಚಿತ್ರತಂಡ ಸೇರಿಕೊಂಡಿದ್ದಾರೆ. ಅಂದಹಾಗೆಯೇ ಅನಿಮಲ್​ನಲ್ಲಿ ನಟಿ ರಶ್ಮಿಕಾ ಮಂದಣ್ಣನವರು ರಣಬೀರ್​ ಅವರ ನಾಯಕಿಯಾಗಿ ಕಾಣಿಸಿಕೊಂಡಿದ್ದರು.

Continue Reading

LATEST NEWS

Trending