LATEST NEWS
ಉಡುಪಿಯಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಕ್ಕೆ ಕಳವಳ:ನಿರ್ಲಕ್ಷ್ಯಮಾಡದೆ ಕೊರೊನಾ ಪರೀಕ್ಷೆ ಎದುರಿಸಲು ಜಿಲ್ಲಾಧಿಕಾರಿ ಮನವಿ..!
ಉಡುಪಿಯಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಕ್ಕೆ ಕಳವಳ:ನಿರ್ಲಕ್ಷ್ಯಮಾಡದೆ ಕೊರೊನಾ ಪರೀಕ್ಷೆ ಎದುರಿಸಲು ಜಿಲ್ಲಾಧಿಕಾರಿ ಮನವಿ..!
ಉಡುಪಿ : ಉಡುಪಿ ಜಿಲ್ಲೆಯಲ್ಲಿ ಕೊರೊನಾ ಸ್ಥಿತಿ ಸಂಪೂರ್ಣ ಹದಗೆಡುವ ಹಂತದಲ್ಲಿ ಬಂದು ನಿಂತಿದೆ. ಇದಕ್ಕೆ ಕಾರಣ ಜಿಲ್ಲೆಯಲ್ಲಿ ಕಳೆದೆರಡು ವಾರದಿಂದ ಕೊರೊನಾ ಬಗ್ಗೆ ಜನರಿಗೆ ತಪ್ಪು ಮಾಹಿತಿ ರವಾನೆಯಾಗುತ್ತಿದೆ.
ಸೋಶಿಯಲ್ ಮೀಡಿಯಾಗಳು ತಪ್ಪು ಮಾಹಿತಿ ಜನರಿಗೆ ತಲುಪಿಸುತ್ತಿವೆ.ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಮತ್ತು ಸಾವಿನ ಪ್ರಕರಣಗಳು ಹೆಚ್ಚಾಗುತ್ತಿವೆ.
ಜಿಲ್ಲೆಯ ಎಲ್ಲಾ ಐಸಿಯು ಬೆಡ್ಗಳು ಫುಲ್ ಆಗಿದ್ದು. ಜನರು ಕೊರೊನಾ ವಿಚಾರದಲ್ಲಿ ನಿರ್ಲಕ್ಷ ತೋರಿಸುತ್ತಿರುವುದರಿಂದ ಜಿಲ್ಲೆಯಲ್ಲಿ ಕೊರೊನಾ ಸಾವಿನ ಪ್ರಮಾಣ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಉಡುಪಿ ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ.
ಈ ಬಗ್ಗೆ ಉಡುಪಿಯಲ್ಲಿ ಶಾಸಕ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ಬಳಿಕ ಮಾತನಾಡಿದ ಅವರು ಜಿಲ್ಲೆಯಲ್ಲಿ ಕಳೆದೆರಡು ವಾರದಿಂದ ಕೊರೊನಾ ಬಗ್ಗೆ ಜನರಿಗೆ ತಪ್ಪು ಮಾಹಿತಿ ರವಾನೆಯಾಗುತ್ತಿದೆ. ಸೋಶಿಯಲ್ ಮೀಡಿಯಾಗಳು ತಪ್ಪು ಮಾಹಿತಿ ಜನರಿಗೆ ತಲುಪಿಸುತ್ತಿವೆ.
ಜಿಲ್ಲೆಯಲ್ಲಿ ಕೊರೊನಾದ ಯಾವುದೇ ದಂಧೆ ಆಗಲಿ, ಹಣ ಮಾಡುವ ಕೆಲಸ ಇಲ್ಲಿ ನಡೆಯುತ್ತಿಲ್ಲ.
ಕೊರೊನಾ ಬಗ್ಗೆ ಅಪಪ್ರಚಾರ ನಿರಂತರವಾಗಿ ನಡೆಯುತ್ತಾ ಇದೆ. ಇದರಿಂದಾಗಿ ಜನರು ಕೂಡ ಅದರಲ್ಲೂ ಹಿರಿಯರು ಹೆದರಿಕೆಯಿಂದ ತಪಾಸಣೆಗೆ ಬರುತ್ತಿಲ್ಲ.
ಇದರಿಂದ ಸಾವಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಹಾಗಾಗಿ ಯಾರು ಕೂಡ ನಿರ್ಲಕ್ಷ್ಯ ವಹಿಸಬಾರದು. ನಿಮ್ಮ ಪೋಷಕರ ಮೇಲೆ ಗೌರವವಿದ್ದರೆ ಅವರನ್ನು ತಕ್ಷಣ ತಪಾಸಣೆಗೊಳಪಡಿಸಿ ಚಿಕಿತ್ಸೆ ಕೊಡಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು.
ಸಾಮಾಜಿಕ ಜಾಲತಾಣದಲ್ಲಿ ಕೊರೊನಾ ಬಗ್ಗೆ ಜನರಿಗೆ ತಪ್ಪು ಮಾಹಿತಿ ನೀಡಿದರೆ ಅವರ ವಿರುದ್ದ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಈ ಸಂದರ್ಭ ಎಚ್ಚರಿಸಿದರು.
LATEST NEWS
ಅತ್ತೆ – ಅಳಿಯ ಲವ್; ಹೆಂಡತಿಯನ್ನೇ ತ್ಯಾಗ ಮಾಡಿದ ಪತಿ! ಏನಿದು ಕಥೆ?
ಮಂಗಳೂರು / ಬಿಹಾರ : ಯುವತಿ – ಯುವಕರು ಪ್ರೀತಿಯಲ್ಲಿ ಬೀಳುವುದು ಸಾಮಾನ್ಯ. ಅವರ ಪ್ರೀತಿಗೆ ಮನೆಯವರು ಒಪ್ಪಿ ಮದುವೆ ಮಾಡಿಸುವುದಿದೆ. ಕೆಲವೊಮ್ಮೆ ಒಪ್ಪಿಗೆ ಸಿಗದೇ ಹೋಗಬಹುದು. ಆದ್ರೆ, ಇಲ್ಲಿ ಎಲ್ಲವೂ ವಿಭಿನ್ನ. ಯಾಕೆಂದ್ರೆ ಇಲ್ಲಿ ಪ್ರೀತಿಗೆ ಬಿದ್ದಿದ್ದು ಬೇರೆ ಯಾರೂ ಅಲ್ಲ ಅತ್ತೆ ಹಾಗೂ ಅಳಿಯ. ಈ ಮದುವೆ ಮಾಡಿಸಿದ್ದು ಮಾವ! ಸದ್ಯ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಹೆಂಡತಿಯನ್ನು ತ್ಯಾಗ ಮಾಡಿದ ಗಂಡ :
ಈ ಘಟನೆ ನಡೆದಿರುವುದು ಬಿಹಾರದ ಬಂಕಾದಲ್ಲಿ. ತನ್ನ ಹೆಂಡತಿಯ ತಾಯಿಯೊಂದಿಗೆ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದ ಅಳಿಯನನ್ನು ಮಾವ ಮತ್ತು ಗ್ರಾಮಸ್ಥರು ಸೇರಿ ಮದುವೆ ಮಾಡಿಸಿದ್ದಾರೆ. 55 ವರ್ಷದ ದಿಲೇಶ್ವರ್ ದರ್ವೆ ಅವರ ಪತ್ನಿ ಅವರ ಅಳಿಯ ಸಿಕಂದರ್ ಯಾದವ್ನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರು.
ಇತ್ತೀಚಿಗಷ್ಟೇ ಇವರಿಬ್ಬರ ಏಕಾಂತದ ಸಮಯದಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ಇವರಿಬ್ಬರ ಪ್ರೇಮ ಕಥೆ ಊರೆಲ್ಲಾ ಸುದ್ದಿಯಾಗುತ್ತಿದ್ದಂತೆ ಗ್ರಾಮಸ್ಥರು ಒಟ್ಟಾಗಿ ಸೇರಿ ಅಳಿಯನೊಂದಿಗೆ ಅತ್ತೆಗೆ ಮದುವೆ ಮಾಡಿಸಿದ್ದಾರೆ.
ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದ ಅತ್ತೆ – ಅಳಿಯ :
ಸಿಕಂದರ್ ಯಾದವ್ ಪತ್ನಿಯನ್ನು ಕಳೆದುಕೊಂಡಿದ್ದ. ಕೆಲ ತಿಂಗಳುಗಳಿಂದ ಅತ್ತೆಯ ಮನೆಯಲ್ಲಿ ವಾಸಿಸಲು ಆರಂಭಿಸಿದ್ದ. ಈ ಅವಧಿಯಲ್ಲಿ ಅತ್ತೆ ಮತ್ತು ಅಳಿಯ ಪರಸ್ಪರ ಹತ್ತಿರವಾಗಿದ್ದಾರೆ. ಈ ವೇಳೆ ಅತ್ತೆಯ ಪತಿಗೆ ಅನುಮಾನ ಬಂದಿದೆ. ಈ ಬಗ್ಗೆ ಆತ ತನಿಖೆ ನಡೆಸಿದ್ದು, ಇವರಿಬ್ಬರ ಅಕ್ರಮ ಸಂಬಂಧ ಬಯಲಾಗಿದೆ. ಇಬ್ಬರೂ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ಈ ಬಗ್ಗೆ ದಿಲೇಶ್ವರ್ ಪಂಚಾಯಿತಿಗೆ ಮಾಹಿತಿ ನೀಡಿದ್ದರು. ಇದಲ್ಲದೇ, ಸಿಕಂದರ್ ಯಾದವ್ ತನ್ನ ಅತ್ತೆಯ ಮೇಲಿನ ಪ್ರೀತಿಯನ್ನು ಪಂಚಾಯತ್ ಮತ್ತು ಗ್ರಾಮಸ್ಥರ ಮುಂದೆ ಬಹಿರಂಗವಾಗಿ ಹೇಳಿಕೊಂಡಿದ್ದಾನೆ.
ಇದನ್ನೂ ಓದಿ : 70 ರ ವೃದ್ಧನಿಗೆ ಸಂಗಾತಿ ಬೇಕಾಗಿದ್ದಾಳೆ; ಆತ ಜಾಹೀರಾತಿಗಾಗಿ ಮಾಡುತ್ತಿರೋ ಖರ್ಚೆಷ್ಟು ಗೊತ್ತಾ!?
ದಿಲೇಶ್ವರ್ ಮತ್ತು ಗ್ರಾಮಸ್ಥರ ಒಪ್ಪಿಗೆಯೊಂದಿಗೆ, ಸಿಕಂದರ್ ಮತ್ತು ಅತ್ತೆಯ ವಿವಾಹ ಮಾಡಿಸಲಾಗಿದೆ. ಸದ್ಯ ಇವರಿಬ್ಬರ ಮದುವೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
DAKSHINA KANNADA
ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮೋದಿ ಹೆಸರು ಉಲ್ಲೇಖಿಸಿದ್ದ ವರ..! ವರನ ಮೇಲೆ ದೂರು ದಾಖಲು..!
ಕಡಬ: ವ್ಯಕ್ತಿಯೊಬ್ಬರು ತಮ್ಮ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮೋದಿಯ ಕುರಿತಾಗಿ ಉಲ್ಲೇಖಿಸಿದ್ದು ಇದೀಗ ಇಕ್ಕಟ್ಟಿಗೆ ಸಿಲುಕಿರುವ ಘಟನೆ ನಡೆದಿದೆ. ಕಡಬ ತಾಲೂಕಿನ ಆಲಂತಾಯ ನಿವಾಸಿ ಶಿವಪ್ರಸಾದ್ ಎಂಬವರು ತಮ್ಮ ಮದುವೆಯ ಆಮಂತ್ರನ ಪತ್ರಿಕೆಯಲ್ಲಿ ಪ್ರಧಾನಿ ಮೋದಿಯನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡುವುದು ನಮಗೆ ನೀವು ನೀಡುವ ಉಡುಗೊರೆ ಎಂದು ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಉಲ್ಲೇಖಿಸಿದ್ದರು.
ಮುಂದೆ ಓದಿ..; ಮಕ್ಕಳ ಮುಂದೆಯೇ ದಾಂಪತ್ಯಕ್ಕೆ ಕಾಲಿಟ್ಟ ವೃದ್ದರು..!! ಅಚ್ಚರಿಯಾದ್ರು ಇದು ಸತ್ಯ..!!
ಮದುವೆ ನಡೆದ ಬಳಿಕ ವರನ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರನ್ನು ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ. ಮಾರ್ಚ್1 ರಂದು ಮದುವೆ ಆಮಂತ್ರಣ ಪತ್ರಿಕೆ ಮುದ್ರಿಸಿ ಶಿವಪ್ರಸಾದ್ರವರು ಹಂಚಿದ್ದರು. ನೀತಿ ಸಂಹಿತಿ ಘೋಷಣೆಗೆ ಮೊದಲೇ ಈ ಆಮಂತ್ರಣ ಪತ್ರಿಕೆ ಮುದ್ರಣಗೊಂಡಿತ್ತಾದರೂ ಇದೀಗ ಚುನಾವಣಾ ಅಧಿಕಾರಿಗಳಿಂದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
FILM
ಬೆಳ್ಳಿತೆರೆಯಲ್ಲಿ ಮತ್ತೊಮ್ಮೆ ಅಬ್ಬರಿಸಲಿದೆ ‘ಪುನೀತ್’ ಸಿನೆಮಾ..! ಯಾವ ಸಿನೆಮಾ?
ಬೆಂಗಳೂರು: ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿನಯದ ಫ್ಯಾಮಿಲಿ ಪ್ಯಾಕೇಜ್, ಹಿಟ್ ಮೂವಿಯೊಂದು ರಿ ರಿಲೀಸ್ಗೆ ರೆಡಿಯಾಗಿದೆ. ಮಾರ್ಚ್ ನಲ್ಲಿ ಅಪ್ಪು ಅಭಿನಯದ ಜಾಕಿ ಚಿತ್ರ ರಿ ರಲೀಸ್ ಆಗಿದ್ದು ಹಿಟ್ ಲಿಸ್ಟ್ಅಲ್ಲಿ ಸೇರಿಕೊಂಡಿದೆ. ಇದೀಗ ಅವರ ಅಭಿನಯದ ಮತ್ತೊಂದು ಸಿನೆಮಾ ‘ಅಂಜನಿಪುತ್ರ’ ರಿ ರಲೀಸ್ಗೆ ತಯಾರಾಗಿದೆ.
ರಿ ರಿಲೀಸ್ ಯಾವಾಗ?
ಪುನೀತ್ ರಾಜ್ಕುಮಾರ್, ರಶ್ಮಿಕಾ ಮಂದಣ್ಣ, ರಮ್ಯಾ ಕೃಷ್ಣನ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದ ಅಂಜನಿ ಪುತ್ರ ಸಿನಿಮಾ ಇದೀಗ ಮರು ಬಿಡುಗಡೆ ಆಗುತ್ತಿದೆ. ಹರ್ಷ ನಿರ್ದೇಶನದಲ್ಲಿ ಮೂಡಿ ಬಂದ ಈ ಚಿತ್ರ, ಎನ್ಎಮ್ಕೆ ಮೂವೀಸ್ ಲಾಂಛನದಲ್ಲಿ ಬಿಡುಗಡೆಗೊಂಡಿತ್ತು. 2017ರಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾ ಈಗ ಆರು ವರ್ಷಗಳ ಬಳಿಕ ಮತ್ತೆ ಚಿತ್ರಮಂದಿರಕ್ಕೆ ಬರುತ್ತಿದೆ. ರಾಜ್ಯದ ಹಲವು ಚಿತ್ರಮಂದಿರಗಳಲ್ಲಿ ಮೇ.10ರಂದು ಸಿನೆಮಾ ರಿಲೀಸ್ ಆಗಲಿದೆ ಎಂದು ನಿರ್ಮಾಪಕ ಎಮ್ಎನ್ ಕುಮಾರ್ ತಿಳಿಸಿದ್ದಾರೆ.
ಮುಂದೆ ಓದಿ..; ನೇ*ಣಿಗೆ ಶರಣಾದ ಯುವ ನಟಿ..! ಸಾ*ವಿಗೂ ಮುನ್ನ ವ್ಯಾಟ್ಸಾಪ್ ಸ್ಟೇಟಸ್ನಲ್ಲಿ ಬರೆದಿದ್ದೇನು..!
ರವಿ ಬಸ್ರೂರು ಸಂಗೀತ ನಿರ್ದೇಶನದಲ್ಲಿ ಮೂಡಿ ಬಂದ ಈ ಚಿತ್ರ ಹಿಟ್ ಸಾಂಗ್ಗಳನ್ನು ಒಳಗೊಂಡಿದೆ. ಅದರಲ್ಲೂ’ಭಾರಿ ಖುಷಿ ಮರ್ರೆ ನನ್ನ ಹೆಂಡ್ತಿ ಕಂಡ್ರೆ’ ಸಾಂಗ್ ಎಲ್ಲರ ತುಟಿಯಂಚಿನಲ್ಲಿ ಈಗಲೂ ಗುಣುಗುಟ್ಟುವಂತಿದೆ. ಮುಂದಿನ ದಿನಗಳಲ್ಲಿ ಪುನೀತ್ ಹಲವು ಸಿನೆಮಾಗಳು ರಿ ರಿಲೀಸ್ ಆಗುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗಿದೆ.
- FILM6 days ago
“ನಿತ್ಯಾಮೆನನ್” ಚಿತ್ರರಂಗದಿಂದ ‘ಬ್ಯಾನ್’ ಆಗಲು ಕಾರಣವೇನು ಗೊತ್ತಾ? ಈ ಬಗ್ಗೆ ನಿತ್ಯಾ ಹೇಳಿದ್ದೇನು?
- DAKSHINA KANNADA6 days ago
ನಮ್ಮ ಮಾತುಗಳಿಗೆ ಅಸ್ತು ಅನ್ನುವ ಅಶ್ವಿನಿ ದೇವತೆಗಳು – ಯಾರಿವರು?
- LATEST NEWS7 days ago
ಖತರ್ನಾಕ್ ಕಳ್ಳನನ್ನು ಬಂಧಿಸಿದ ಕೋಟ ಪೊಲೀಸರು; ‘ನನ್ನ ಬಗ್ಗೆ ಮಾಹಿತಿ ಬೇಕಾದ್ರೆ ಯೂಟ್ಯೂಬ್ ನೋಡಿ’ ಎಂದ ಖದೀಮ!
- bangalore7 days ago
ರಾಜ್ಯದ ಎಂಟು ಜಿಲ್ಲೆಗಳಲ್ಲಿ ಮಳೆಯಾಗಲಿದೆ: ಹವಾಮಾನ ಇಲಾಖೆ ಮುನ್ಸೂಚನೆ