ದಕ್ಷಿಣ ಕನ್ನಡ ಕೋವಿಡ್ ಪರಿಸ್ಥಿತಿ ಪರಿಶೀಲಿಸಿದ ಡಿಸಿಎಂ : ಖಾಸಾಗಿ ಆಸ್ಪತ್ರೆಯ 8 ಸಾವಿರ ಬೆಡ್ ಗಳ ವಶಕ್ಕೆ ಪಡೆಯಲು ಜಿಲ್ಲಾಧಿಕಾರಿಗೆ ಸೂಚನೆ..!
ದಕ್ಷಿಣ ಕನ್ನಡ ಕೋವಿಡ್ ಪರಿಸ್ಥಿತಿ ಪರಿಶೀಲಿಸಿದ ಡಿಸಿಎಂ : ಖಾಸಾಗಿ ಆಸ್ಪತ್ರೆಯ 8 ಸಾವಿರ ಬೆಡ್ ಗಳ ವಶಕ್ಕೆ ಪಡೆಯಲು ಜಿಲ್ಲಾಧಿಕಾರಿಗೆ ಸೂಚನೆ..!
ಬೆಂಗಳೂರು: ದ.ಕ. ಜಿಲ್ಲೆಯಲ್ಲಿರುವ ಎಂಟು ಖಾಸಾಗಿ ಆಸ್ಪತ್ರೆಯ 8 ಸಾವಿರ ಬೆಡ್ ಗಳ ವಶಕ್ಕೆ ಪಡೆಯಲು ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಗೆ ಉಪ ಮುಖ್ಯಮಂತ್ರಿ ಡಾ. ಅಶ್ವತ್ ನಾರಾಯಣ ಸೂಚನೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಸ್ಪತ್ರೆ ಹಾಗೂ ತಾಲ್ಲೂಕು ಹಾಗೂ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಮ್ಲಜನಕಯುಕ್ತ ಬೆಡ್’ಗಳ ಸಂಖ್ಯೆಯನ್ನು ಕೂಡಲೇ ಹೆಚ್ಚಿಸಬೇಕು ಎಂದು ಉಪ ಮುಖ್ಯಮಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.
ಬೆಂಗಳೂರಿನಿಂದಲೇ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಮತ್ತಿತರೆ ಅಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿದ ಅವರು, ಜಿಲ್ಲಾಸ್ಪತ್ರೆ ವೆನ್’ಲಾಕ್ ಹಾಗೂ ಎಲ್ಲ ತಾಲ್ಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನೇಟೆಡ್ ಬೆಡ್’ಗಳನ್ನು ಕೂಡಲೇ ಹೆಚ್ವಿಸಬೇಕು. ದಿನೇದಿನೇ ಸೋಂಕಿತರು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ವ್ಯವಸ್ಥೆ ಮಾಡುವುದು ತುರ್ತು ಅಗತ್ಯವಾಗಿದೆ ಎಂದು ತಿಳಿಸಿದರು.
ವೆನ್’ಲಾಕ್ ಆಸ್ಪತ್ರೆಯಲ್ಲಿ ಈಗಾಗಲೇ 150 ಹಾಸಿಗೆಗಳಿಗೆ ಆಮ್ಲಜನಕ ವ್ಯವಸ್ಥೆ ಇರುವ ಅಂಶವನ್ನು ಜಿಲ್ಲಾಧಿಕಾರಿಗಳು ಡಿಸಿಎಂ ಗಮನಕ್ಕೆ ತಂದರು. “ಸದ್ಯಕ್ಕೆ ಇಷ್ಟು ಪ್ರಮಾಣದ ಆಕ್ಸಿಜನೇಟೆಡ್ ಬೆಡ್ಡುಗಳು ಸಾಕಾಗುವುದಿಲ್ಲ. ಈ ಪ್ರಮಾಣವನ್ನು 450ಕ್ಕೆ ಹೆಚ್ಚಿಸಿ. ಕೂಡಲೇ ಈ ಕುರಿತ ಪ್ರಸ್ತಾವನೆಯನ್ನು ಆರೋಗ್ಯ ಆಯುಕ್ತರಿಗೆ ಕಳಿಸಿ. ನಾನೂ ಅವರ ಜತೆ ಮಾತನಾಡಿ ಆದಷ್ಟು ಬೇಗ ಮಂಜೂರಾತಿ ಕೊಡಿಸುತ್ತೇನೆ. ಇದರ ಜತೆಗೆ ಜಿಲ್ಲೆಯ ಎಲ್ಲ ತಾಲ್ಲೂಕು ಆಸ್ಪತ್ರೆಗಳಲ್ಲೂ ಇಂಥ ಬೆಡ್ಡಿನ ವ್ಯವಸ್ಥೆ ಆಗಲೇಬೇಕು ಎಂದು ಡಿಸಿ ಅವರಿಗೆ ಸೂಚಿಸಿದರು.
ಬೆಡ್ ವಶಕ್ಕೆ ಪಡೆಯಲು ಸಚಿವರ ಸೂಚನೆ:
ಜಿಲ್ಲೆಯಲ್ಲಿ 8 ವೈದ್ಯಕೀಯ ಕಾಲೇಜುಗಳಿವೆ. ಸಾಕಷ್ಟು ಖಾಸಗಿ ಆಸ್ಪತ್ರೆಗಳಿವೆ. ಹೀಗೆ ಕಾಲೇಜು, ಸರಕಾರಿ-ಖಾಸಗಿ ಆಸ್ಪತ್ರೆ ಸೇರಿ ಎಲ್ಲೆಡೆ ಕನಿಷ್ಟ 8 ಸಾವಿರಕ್ಕೂ ಹೆಚ್ಚು ಬೆಡ್ಡುಗಳಿವೆ. ಕೂಡಲೇ ಇವರಿಂದ ಅವುಗಳನ್ನು ಸರಕಾರದ ವಶಕ್ಕೆ ಪಡೆದುಕೊಳ್ಳಬೇಕು. ತತ್;ಕ್ಷಣವೇ ಆಯಾ ಮ್ಯಾನೇಜುಮೆಂಟುಗಳ ಜತೆ ಮಾತನಾಡಿ ಅಗ್ರಿಮೆಂಟ್ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿಗೆ ಡಿಸಿಎಂ ಸೂಚಿಸಿದರು.
ಸರಕಾರಿ, ಖಾಸಗಿ ಯಾವುದೇ ಆಸ್ಪತ್ರೆ ಇರಲಿ, ಸರ್ಕಾರದಿಂದ ಶಿಫಾರಸ್ಸಾದ ರೋಗಿಗಳಿಗೆ ಚಿಕಿತ್ಸೆ ಸಂಪೂರ್ಣ ಉಚಿತ. ಖಾಸಗಿ ಆಸ್ಪತ್ರೆಗಳಿಗೆ ಆ ವೆಚ್ಚವನ್ನು ಸರಕಾರವೇ ಭರಿಸುತ್ತದೆ. ಯಾರೂ ಕೂಡ ರೋಗಿಗಳಿಂದ ಹಣ ಪಡೆಯುವಂತಿಲ್ಲ. ಮುಖ್ಯವಾಗಿ ಗ್ರಾಮೀಣ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ರೋಗಿಗಳನ್ನು ನೇರವಾಗಿ ಚಿಕಿತ್ಸೆ ಲಭ್ಯವಿರುವ ಆಸ್ಪತ್ರೆಗಳಿಗೇ ಕಳಿಸಬೇಕು. ವಿನಾಕಾರಣ ರೋಗಿಯನ್ನು ಸುತ್ತಿಸಬಾರದು. ಆಸ್ಪತ್ರೆಗೆ ಬರುವ ರೋಗಿಗೆ ಕೂಡಲೇ ಬೆಡ್ ಹಂಚಿಕೆಯಾಗಬೇಕು ಎಂದು ಅವರು ಸಲಹೆ ನೀಡಿದರು. ಇದೇ ವೇಳೆ ಜಿಲ್ಲೆಯ ಕೋವಿಡ್ ಕೇರ್ ಸೆಂಟರುಗಳಲ್ಲಿ 250 ಹಾಸಿಗೆಗಳು ಸಿದ್ಧವಾಗಿದ್ದು, ಕೆಲವೇ ದಿನಗಳಲ್ಲಿ 3,800 ಹಾಸಿಗೆಗಳು ಲಭ್ಯವಾಗಲಿವೆ ಎಂಬ ಅಂಶವನ್ನು ಜಿಲ್ಲಾಧಿಕಾರಿಯವರು ಡಿಸಿಎಂ ಗಮನಕ್ಕೆ ತಂದರು.
ಡ್ಯಾಷ್’ಬೋರ್ಡ್ ವ್ಯವಸ್ಥೆಗೆ ಸೂಚನೆ:
ಕೋವಿಡ್ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ಮಾಡಬೇಕಾದರೆ ಡ್ಯಾಷ್’ಬೋರ್ಡ್ ವ್ಯವಸ್ಥೆಯನ್ನು ಉತ್ತಮವಾಗಿ ಮಾಡಿಕೊಳ್ಳಬೇಕು. ಎಲ್ಲಿ ಬೆಡ್ಡುಗಳಿವೆ? ರೋಗಿಗಳು ಎಷ್ಟಿದ್ದಾರೆ? ಮೂಲಸೌಕರ್ಯಗಳ ವ್ಯವಸ್ಥೆ ಇತ್ಯಾದಿ ಸೇರಿದಂತೆ ಎಲ್ಲವೂ ಈ ಡ್ಯಾಷ್’ಬೋರ್ಡ್ ನಲ್ಲೇ ಸಿಗಬೇಕು. ಯಾವುದೇ ವ್ಯಕ್ತಿಗೆ ಸೋಂಕು ಪಾಸಿಟೀವ್ ಬಂದರೆ ಆ ವಿಷಯವನ್ನು ಜನರಿಗೆ ತಿಳಿಸಿ. ಆಗ ಜನರಲ್ಲಿ ಆತಂಕ, ಗೊಂದಲ ತಪ್ಪುತ್ತದೆ. ಜತೆಯಲ್ಲೇ ನಾನ್ ಕೋವಿಡ್ ರೋಗಿಗಳಿಗೆ ಆದ್ಯತೆಯ ಮೇರೆಗೆ ಚಿಕಿತ್ಸೆ ಸಿಗುವಂತೆ ಆಗಬೇಕು. ಸೆಂಟ್ರಲೈಸ್ಡ್ ರಿಪೋರ್ಟಿಂಗ್ ಸಿಸ್ಟಂ ಅನ್ನು ಅಳವಡಿಸಿಕೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಹೇಳಿದರು.
ಜಿಲ್ಲೆಯಲ್ಲಿ ಸದ್ಯಕ್ಕೆ 59 ಆಂಬುಲೆನ್ಸುಗಳಿದ್ದು, ಮತ್ತಷ್ಟು ಖರೀದಿಸಿ, ಹೆಚ್ಚುವರಿಯಾಗಿ ಚಾಲಕರನ್ನು ನೇಮಿಸಿಸಕೊಳ್ಳಿ. ಊಟ, ಔಷಧಿ, ಪಿಪಿಎ ಕಿಟ್ಟುಗಳು ಕೊರತೆಯಾಗದಂತೆ ನೋಡಿಕೊಳ್ಳಿ. ಹೋಮ್ ಕೇರ್ ಬಗ್ಗೆ ಮತ್ತಷ್ಟು ಅರಿವು ಮೂಡಿಸಿ ಎಂದು ಅವರು ಸೂಚಿಸಿದರು. ಈಗಾಗಲೇ ಜಿಲ್ಲೆಯಾದ್ಯಂತ 430 ಜನರು ಹೋಮ್ ಕೇರ್’ಗಳಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಅನೇಕರು ತಮ್ಮ ಮನೆಗಳಲ್ಲಿಯೇ ಚಿಕಿತ್ಸೆ ಪಡೆಯುವ ಒಲವು ತೋರುತ್ತಿದ್ದಾರೆಂದು ಡಿಸಿ ಸಿಂಧೂ ಅವರು ಮಾಹಿತಿ ನೀಡಿದರು.
ಇದರ ಜತೆಯಲ್ಲೇ ಸೋಂಕಿತರ ಪರೀಕ್ಷೆಯ ಪ್ರಮಾಣವನ್ನು ಹೆಚ್ಚು ಮಾಡುವಂತೆ ಡಿಸಿಎಂ ಸೂಚಿಸಿದರು. ಸದ್ಯಕ್ಕೆ ದಿನವೊಂದಕ್ಕೆ 750 ಟೆಸ್ಟ್ ಆಗುತ್ತಿದೆ. ಈವರೆಗೂ 38 ಸಾವಿರ ಜನರಿಗೆ ಪರೀಕ್ಷೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.
ವಿಡಿಯೋ ಮಾತುಕತೆಯಲ್ಲಿ ಡಿಸಿಎಂ ಜತೆ ದ.ಕ. ಜಿಲ್ಲಾ ಉಸ್ತುವಾರಿ ಹಾಗೂ ಮುಜರಾಯಿ ಖಾತೆ ಮಂತ್ರಿ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕ ಹರೀಶ್ ಪುಂಜಾ ಪಾಲ್ಗೊಂಡರೆ, ಮಂಗಳೂರಿನಿಂದ ಜಿಲ್ಲಾಧಿಕಾರಿಯವರ ಜತೆ ಶಾಸಕರಾದ ಯು.ಟಿ. ಖಾದರ್, ವೇದವ್ಯಾಸ ಕಾಮತ್ ಭಾಗಿಯಾಗಿದ್ದರು. ಜತೆಗೆ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.
LATEST NEWS
ದಸರಾ ಸಂಭ್ರಮ: ಅಕ್ಟೋಬರ್ 3 ರಿಂದ 20 ರವರೆಗೆ ಶಾಲೆಗಳಿಗೆ ರಜೆ
ಬೆಂಗಳೂರು: ದಸರಾ ಹಬ್ಬ ಹಿನ್ನೆಲೆ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20 ತನಕ ದಸರಾ ರಜೆ ಘೋಷಿಸಿದೆ.
ಅಕ್ಟೋಬರ್ 3 ರಿಂದ 20ರ ತನಕ ಅಂದರೆ 17 ದಿನಗಳ ಕಾಲ ದಸರಾ ರಜೆ ಸಿಗಲಿದೆ. ಅಕ್ಟೋಬರ್ 21 ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2025ರ ಏಪ್ರಿಲ್ 10 ತನಕ ನಡೆಯಲಿದೆ.
2024-2025ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ. ಈಗ ದಸರಾ ರಜೆ ಹಿನ್ನೆಲೆಯಲ್ಲಿ ಅಕ್ಟೋಬರ್ ತಿಂಗಳಲ್ಲಿ ಕೇವಲ 11 ದಿನಗಳು ತರಗತಿಗಳು ನಡೆಯಲಿವೆ.
ಇಡೀ ಕರ್ನಾಟಕದ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಿದೆ.
LATEST NEWS
ದಸರಾ ಆನೆಗಳ ಕಾದಾಟ..! ಬೆಚ್ಚಿಬಿದ್ದ ಜನರು, ಅಧಿಕಾರಿಗಳು..!!
ಮೈಸೂರು/ಮಂಗಳೂರು: ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಿರುವ ಗಜಪಡೆಯ ಆನೆಗಳು ಶುಕ್ರವಾರ(ಸೆ.20) ರಾತ್ರಿ ದಿಢೀರ್ ಕಾದಾಟಕ್ಕೆ ಇಳಿದಿದ್ದು ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
ದಸರಾ ಹಬ್ಬದ ಪ್ರಯುಕ್ತ ಆನೆಗಳಿಗೆ ತಾಲೀಮು ನಡೆಸಲಾಗುತ್ತಿದೆ. ಮಳೆಯಿರುವ ಕಾರಣ ಅರಮನೆ ಮೈದಾನದಲ್ಲೇ ಆನೆಗಳಿಗೆ ತಾಲೀಮನ್ನು ಕೈಗೊಳ್ಳಲಾಗಿತ್ತು. ನಿನ್ನೆ ರಾತ್ರಿ 8 ಗಂಟೆಯ ಸುಮಾರಿಗೆ ಧನುಂಜಯ್ ಹಾಗೂ ಕಂಜನ್ ಆನೆಗಳ ಮಧ್ಯೆ ಗುದ್ದಾಟ ಆಋಂಭವಾಗಿದೆ. ಊಟದ ಸಮಯದಲ್ಲಿ ಈ ಜಗಳ ಶುರುವಾಗಿದ್ದು ಧನುಂಜಯ್ ಆನೆ ಕಂಜನ್ನನ್ನು ಅರಮನೆಯಿಂದ ಹೊರಗೆ ಓಡಿಸಿಕೊಂಡು ಬಂದಿದೆ. ಈ ವೇಳೆ ಕಜನ್ ತನನ್ ಮಾವುತನನನ್ಉ ಕೆಳಗೆ ಬೀಳಿಸಿದೆ. ಧನುಂಜಯ್ ಆನೆ ಕಂಜನ್ನನ್ನು ಓಡಿಸಿಕೊಂಡು ಹೋಗಿದ್ದು ಜಯಮಾರ್ತಾಂಡ ದ್ವಾರದಿಂದ ಹೊರಗೆ ಬಂದಿದೆ. ಇದರಿಂದ ಕೆಲಕಾಲ ಜನ, ಮಾವುತರು, ಅಧಿಕಾರಿಗಳಲ್ಲಿ ಆತಂಕ ಸೃಷ್ಟಿಯಾಯಿತು. ಆನೆಗಳು ದೊಡ್ಡಕೆರೆ ಮೈದಾನ ಬಳಿ ಬ್ಯಾರಿಕೇಡ್ ತಳ್ಳಿಕೊಂಡು ರಸ್ತೆಗೆ ಪ್ರವೇಶಿಸುತ್ತಿದ್ದಂತೆ ಜನರು ಭಯದಿಂದ ದಿಕ್ಕಾಪಾಲಾಗಿ ಓಡಿಹೋದರು.
ಸಾಹಿತಿ ಹಂಪ ನಾಗರಾಜಯ್ಯ ಅವರಿಂದ ದಸರಾ ಉದ್ಘಾಟನೆ : ಸಿಎಂ ಸಿದ್ಧರಾಮಯ್ಯ
ದೊಡ್ಡಕೆರೆ ಮೈದಾನದ ಬೆಂಗಳೂರು- ನೀಲಗಿರಿ ರಸ್ತೆಯಲ್ಲಿನ ವಾಹನಗಳನ್ನು ನೋಡುತ್ತಿದ್ದಂತೆ ಕಂಜನ್ ಬೆದರಿ ನಿಂತಿತು. ಮಾವುತರು ಕಾವಾಡಿಗರು ಸಮಾಧಾನ ಪಡಿಸಿದರು. ಯಾವುದೇ ಅನಾಹುತ ಸಂಭವಿಸಿಲ್ಲ. ಕಾವಾಡಿಗಳ ಚಾಣಾಕ್ಷತದಿಂದ ಆನೆಗಳ ಆಟೋಟಕ್ಕೆ ಬ್ರೇಕ್ ಬಿದ್ದಿದೆ. ಬಳಿಕ ಅರಮನೆಗೆ ಆನೆಗಳನ್ನು ಸಿಬ್ಬಂದಿ ಕರೆತಂದಿದ್ದಾರೆ. ಸದ್ಯ ಕೋಡಿಸೋಮೇಶ್ವರ ದೇವಸ್ಥಾನ ಸಮೀಪ ಇರುವ ಆನೆಗಳು ಬಿಡಾರ ಬಿಟ್ಟಿವೆ.
DAKSHINA KANNADA
ಮಂಗಳೂರು : ಬೈಕ್ಗೆ ಲಾರಿ ಡಿ*ಕ್ಕಿ; ವಿದ್ಯಾರ್ಥಿ ಸಾ*ವು
ಮಂಗಳೂರು : ಲಾರಿಯೊಂದು ಬೈಕ್ಗೆ ಡಿ*ಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೊಬ್ಬ ಮೃ*ತಪಟ್ಟ ಘಟನೆ ಕುಂಟಿಕಾನ ಪ್ಲೈಓವರ್ನ ಮೇಲೆ ಶುಕ್ರವಾರ(ಸೆ.21) ನಡೆದಿದೆ.
ಪಾಣೆಮಂಗಳೂರು ಸಮೀಪದ ಮೆಲ್ಕಾರ್ ನಿವಾಸಿ ಜಾಸಿಮ್ (18) ಮೃ*ತಪಟ್ಟ ವಿದ್ಯಾರ್ಥಿ. ನಗರ ಹೊರಲವಲಯದ ಕೂಳೂರಿನಲ್ಲಿರುವ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಎಂಬಿಎ ಓದುತ್ತಿದ್ದ ಜಾಸಿಮ್ ಶುಕ್ರವಾರ ಸಂಜೆ ಕೂಳೂರಿನಿಂದ ಕೆಪಿಟಿ ಕಡೆಗೆ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಲಾರಿಯೊಂದು ಡಿ*ಕ್ಕಿ ಹೊಡೆಯಿತು ಎನ್ನಲಾಗಿದೆ.
ಇದನ್ನೂ ಓದಿ : ನಾಲ್ಕನೇ ಮಗುವೂ ಹೆಣ್ಣಾಯಿತೆಂದು ಹಸುಗೂಸನ್ನು ನೆಲಕ್ಕೆ ಬಡಿದು ಕೊಂ*ದ ತಂದೆ
ಪರಿಣಾಮ ನಿಯಂತ್ರಣ ತಪ್ಪಿದ ಜಾಸಿಮ್ ರಸ್ತೆಗೆ ಬಿದ್ದಿದ್ದರು. ಇದರಿಂದ ಗಂಭೀ*ರ ಗಾ*ಯಗೊಂಡ ಅವರು ಮೃ*ತಪಟ್ಟಿದ್ದಾರೆ. ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.