DAKSHINA KANNADA
‘ಕೇಸರಿಕರಣ’ವಾದ ಡಿಡಿ ನ್ಯೂಸ್..! ಚರ್ಚೆಗೆ ಕಾರಣವಾದ ಹೊಸ ಲೋಗೋ..!
ಮಂಗಳೂರು : ಚುನಾವಣಾ ಸಮಯದಲ್ಲೇ ದೇಶದ ಸರ್ಕಾರಿ ಚಾನೆಲ್ ದೂರದರ್ಶನ ತನ್ನ ಲೋಗೋದ ಬಣ್ಣವನ್ನು ಬದಲಾಯಿಸಿದೆ. ಡಿಡಿ ನ್ಯೂಸ್ ತನ್ನ ಲೋಗೋ ಬಣ್ಣವನ್ನು ಕೇಸರಿ ಬಣ್ಣಕ್ಕೆ ಬದಲಾಯಿಸಿರುವುದು ಈಗ ಚರ್ಚೆಗೆ ಕಾರಣವಾಗಿದೆ. 1959 ರಲ್ಲಿ ಆರಂಭವಾಗಿದ್ದ ದೂರದರ್ಶನದ ಲೋಗೋ ನೀಲಿ ಬಣ್ಣದಾಗಿದ್ದು, ಇದೀಗ ಚುನಾವಣೆಯ ಹೊಸ್ತಿಲಲ್ಲಿ ಕೇಸರಿ ಬಣ್ಣಕ್ಕೆ ಬದಲಾಯಿಸಿದ ಬಗ್ಗೆ ಸಾಕಷ್ಟು ಟೀಕೆಗಳು ವ್ಯಕ್ತವಾಗಿದೆ. ದೇಶದಲ್ಲಿ ಎಲ್ಲವನ್ನೂ ಕೇಸರಿಕರಣ ಮಾಡುವ ಭಾಗವಾಗಿ ಈ ಬದಲಾವಣೆ ಮಾಡಲಾಗಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿದೆ.
ಕೇಂದ್ರ ಸರ್ಕಾರದ ಪ್ರಸಾರಭಾರತಿ ಅಡಿಯಲ್ಲಿ ಬರುವ ದೂರದರ್ಶನ ಏಕಾಏಕಿ ತನ್ನ ಲೋಗೋವನ್ನು ಕೇಸರಿ ಬಣ್ಣಕ್ಕೆ ಬದಲಾಯಿಸಿದೆ. ಇದನ್ನು ದೂರದರ್ಶನ ತನ್ನ ಅಧಿಕೃತ ‘X’ ಖಾತೆಯಲ್ಲಿ ಹಂಚಿಕೊಂಡಿದ್ದು, ಲೋಗೋ ಕೇವಲ ದೃಶ್ಯ ಸೌಂದರ್ಯದ ಬದಲಾವಣೆಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ.
While our values remain the same, we are now available in a new avatar. Get ready for a news journey like never before.. Experience the all-new DD News!
We have the courage to put:
Accuracy over speed
Facts over claims
Truth over sensationalismBecause if it is on DD News, it… pic.twitter.com/YH230pGBKs
— DD News (@DDNewslive) April 16, 2024
“ನಮ್ಮ ಮೌಲ್ಯಗಳು ಒಂದೇ ಆಗಿರುವಾಗ, ನಾವು ಈಗ ಹೊಸ ಅವತಾರದಲ್ಲಿ ಸಿಗಲಿದ್ದೇವೆ. ಹಿಂದೆಂದಿಗಿಂತಲೂ ಉತ್ತಮ ಸುದ್ದಿ ಪ್ರಯಾಣಕ್ಕೆ ಸಿದ್ಧರಾಗಿ. ಎಲ್ಲಾ ಹೊಸ ಡಿಡಿ ನ್ಯೂಸ್ ಅನ್ನು ಅನುಭವಿಸಿ! ” ಎಂದು DD News ತನ್ನ ಅಧಿಕೃತ ‘X’ ಹ್ಯಾಂಡಲ್ನಲ್ಲಿ ಅದರ ಹೊಸ ಲೋಗೋದ ವೀಡಿಯೊದೊಂದಿಗೆ ಪೋಸ್ಟ್ ಮಾಡಿದೆ. ಜೊತೆಗೆ “ಕೇವಲ ಧೈರ್ಯದ ಬರವಸೆಯಲ್ಲ..ವೇಗದ ಮತ್ತು ನಿಖರತೆಯ ಬರವಸೆ ; ಹಕ್ಕುಗಳ ಮತ್ತು ಸತ್ಯದ ಬರವಸೆ ; ಸಂವೇದನೆಯ ಹಾಗೂ ಸತ್ಯದ ಬರವಸೆ ; ಯಾಕೆಂದರೆ ಡಿಡಿ ನ್ಯೂಸ್ ನಲ್ಲಿ ಬಂದರೆ ಅದು ಸತ್ಯ! ಡಿಡಿ ನ್ಯೂಸ್ – ಭರೋಸಾ ಸಚ್ ಕಾ..” ಎಂದು ಹೇಳಿಕೊಂಡಿದ್ದಾರೆ.
2012 ಮತ್ತು 2014 ರ ನಡುವೆ ಪ್ರಸಾರ ಭಾರತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ (CEO) ಸೇವೆ ಸಲ್ಲಿಸಿದ ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (AITC) ರಾಜ್ಯಸಭಾ ಸಂಸದ ಜವಾಹರ್ ಸಿರ್ಕಾರ್ ಈ ಬೆಳವಣಿಗೆಯನ್ನು ಟೀಕಿಸಿದ್ದಾರೆ. ಪ್ರಸಾರ ಭಾರತಿ ದೂರದರ್ಶನ ಮತ್ತು ಆಲ್ ಇಂಡಿಯಾ ರೇಡಿಯೊ (AIR) ಮೇಲ್ವಿಚಾರಣೆ ಮಾಡುವ ಶಾಸನಬದ್ಧ ಸಂಸ್ಥೆಯಾಗಿದೆ.”ರಾಷ್ಟ್ರೀಯ ಬ್ರಾಡ್ಕಾಸ್ಟರ್ ತನ್ನ ಬ್ರ್ಯಾಂಡಿಂಗ್ಗಾಗಿ ಕೇಸರಿ ಬಣ್ಣವನ್ನು ಆಯ್ಕೆ ಮಾಡಿರುವುದು ಸರಿಯಲ್ಲ” ಎಂದು ಸಿರ್ಕಾರ್ ಸಾಮಾಜಿಕ ಮಾಧ್ಯಮ ಸೈಟ್ ‘X’ ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಹೇಳಿದ್ದಾರೆ “ಇದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಎಂದು ನಾನು ಪರಿಗಣಿಸುತ್ತೇನೆ” ಎಂದು ಸಿರ್ಕಾರ್ ಹೇಳಿದ್ದಾರೆ, ಲೋಗೋ ಬದಲಾವಣೆ ಮಾಡಿರುವ ಸಮಯವನ್ನು ಪ್ರಶ್ನಿಸಿದ ಅವರು. “ಇದು ರಾಜ್ಯಗಳಲ್ಲಿ ಪ್ರಭಾವ ಬೀರುತ್ತದೆ ಎಂದು ಹೇಳಿದ್ದಾರೆ. ಕೇಸರಿ ಒಂದು ನಿರ್ಧಿಷ್ಟ ಧರ್ಮವನ್ನು ಸೂಚಿಸುವ ಬಣ್ಣವಾಗಿದ್ದು ಅದನ್ನು ದೂರದರ್ಶನ ಬಳಸಿಕೊಂಡಿದ್ದು ತಪ್ಪು” ಎಂದಿದ್ದಾರೆ.
As ex CEO of Prasar Bharati it hurts to see the saffronisation of Doordarshan’s logo
— just before elections!
It will influence voters, by overlaying the colour one religion and Sangh parivar colour with a ‘neutral’ Public Broadcaster and a biassed Govt/Regime! pic.twitter.com/g7m0PH9nMf— Jawhar Sircar (@jawharsircar) April 20, 2024
ದೂರದರ್ಶನದ ಈ ಬೆಳವಣಿಗೆಯ ಬಗ್ಗೆ ವಿರೋಧ ಪಕ್ಷಗಳು ಸಾಕಷ್ಟು ಟೀಕೆ ವ್ಯಕ್ತಪಡಿಸಿದ್ದು, ಹೊಸ ಸಂಸತ್ನಲ್ಲಿ ಒಳಗೆ ಎಲ್ಲಾ ಕಡೆ ಕೇಸರಿಕರಣ ಮಾಡಲಾಗಿದೆ. ಇದೀಗ ದೇಶದ ಜನರನ್ನು ದೂರದರ್ಶನದ ಮೂಲಕ ಕೇಸರಿಕರಣ ಮಾಡಲು ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದ್ದಾರೆ.
DAKSHINA KANNADA
ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ
ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.
ಉತ್ತರದ ಬ್ರೇಕ್ ವಾಟರ್ 831 ಮೀಟರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.
ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.
DAKSHINA KANNADA
ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು
ಮಂಗಳೂರು: ಗುಜರಾತ್ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.
ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್ ಗಾರ್ಡ್ ತಂಡ ಹೆಲಿಕಾಪ್ಟರ್ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.
ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್ ಗಾರ್ಡ್ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್ ಗಾರ್ಡ್ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.
DAKSHINA KANNADA
ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!
ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.
ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.
ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.
ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.
ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.
- LATEST NEWS5 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ