Connect with us

    BELTHANGADY

    ಐಹೊಳೆ ನವೀಕರಣ ಧರ್ಮಸ್ಥಳದ ಹೆಗಲಿಗೆ-ಸ್ಮಾರಕ ಸಂರಕ್ಷಣೆಗೆ ಕೈ ಜೋಡಿಸಿದ ಧರ್ಮಾಧಿಕಾರಿ

    Published

    on

    ಬೆಂಗಳೂರು: ಐಹೊಳೆಯ ಅತ್ಯಂತ ಪುರಾತನ ದೇವಾಲಯ ಹಾಗೂ ಸ್ಮಾರಕಗಳ ನವೀಕರಣ ಕಾರ್ಯಕ್ಕಾಗಿ ರಾಜ್ಯ ಸರ್ಕಾರ ಧರ್ಮಸ್ಥಳ ಮಂಜುನಾಥೇಶ್ವರ ಟ್ರಸ್ಟ್ ಜೊತೆ ಒಡಂಬಡಿಕೆ ಮಾಡಿಕೊಂಡಿದೆ. ಮಾ.05ರಂದು ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರವಾಸೋದ್ಯಮ ಇಲಾಖೆ ಸಚಿವ ಹೆಚ್.ಕೆ.ಪಾಟೀಲ್ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರ ಸಮ್ಮುಖದಲ್ಲಿ ಐಹೊಳೆ ಒಪ್ಪಂದ ನಡೆದಿದೆ.

    ಐಹೊಳೆಯಲ್ಲಿ 3 ದೇವಸ್ಥಾನಗಳ ಸಂಕೀರ್ಣ ಹಾಗೂ 5 ಸ್ಮಾರಕಗಳ ನವೀಕರಣ ಮಾಡಲು ಮಂಜುನಾಥೇಶ್ವರ ಟ್ರಸ್ಟ್, ಪುರಾತತ್ವ ಇಲಾಖೆ ಹಾಗೂ ಚಾಲುಕ್ಯ ಅಭಿವೃದ್ಧಿ ಪ್ರಾಧಿಕಾರಗಳ ನಡುವೆ ತ್ರಿಪಕ್ಷೀಯ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಐತಿಹಾಸಿಕ ಸ್ಮಾರಕ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಇದು ದೊಡ್ಡ ಹೆಜ್ಜೆಯಾಗಿದ್ದು, ಶಿಥಿಲಾವಸ್ಥೆ ತಲುಪಿರುವ ಐಹೊಳೆಯನ್ನು ಉಳಿಸುವ ನಿಟ್ಟಿನಲ್ಲಿ ಅಭಿವೃದ್ದಿ ಮಾಡಲಾಗುತ್ತಿದೆ. ಐಹೊಳೆಯಲ್ಲಿ 120 ಸ್ಮಾರಕಗಳಿದ್ದು, 50 ಸ್ಮಾರಕಗಳನ್ನು ಕೇಂದ್ರ ಸರ್ಕಾರವು ಉತ್ತಮವಾಗಿ ನೋಡಿಕೊಳ್ಳುತ್ತಿದೆ. ಆದರೆ, ಸುಮಾರು 60-70 ಸ್ಮಾರಕಗಳು ಹಿನಾಯ ಸ್ಥಿತಿಯಲ್ಲಿವೆ. ಸ್ವಾತಂತ್ರ್ಯ ಬಂದು 75 ವರ್ಷಗಳೇ ಕಳೆದರೂ ಅವುಗಳನ್ನು ಸಂರಕ್ಷಣೆ ಮಾಡಲಾಗಿಲ್ಲ. ಸಧ್ಯ ಇದರ ಪುನರ್ ಸ್ಥಾಪನೆ, ಸಂರಕ್ಷಣೆ ಮಾಡಲು ಸರ್ಕಾರ ಸಿದ್ಧವಾಗಿದೆ. ಪುನರ್ ಅಭಿವೃದ್ಧಿ ಮಾಡುವ ಸ್ಥೈರ್ಯ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಿಗೆ ಮಾತ್ರ ಇದೆ ಎಂದು ಸಚಿವ ಹೆಚ್‌.ಕೆ ಪಾಟೀಲ್ ಹೇಳಿದ್ದಾರೆ.

    BELTHANGADY

    ಅಂತರಾಷ್ಟ್ರೀಯ ಟಾರ್ಗೆಟ್ ಬಾಲ್ ಪಂದ್ಯಾಟದಲ್ಲಿ ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ

    Published

    on

    ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ಸಿದ್ದಾರ್ಥ್ ಎಂ.ಸಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ಫ್ಲಾಯ್ಡ್ ಮಿಸ್ಕಿತ್ ರಾಷ್ಟ್ರಮಟ್ಟದ ಟಾರ್ಗೆಟ್ ಬಾಲ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ನೇಪಾಳದ ಕಠ್ಮಂಡುವಿನಲ್ಲಿ ಜುಲೈ 8 ರಿಂದ ಜರುಗಿದ ಅಂತರಾಷ್ಟ್ರೀಯ ಮಟ್ಟದ ದಕ್ಷಿಣ ಏಷ್ಯಾ ಟಾರ್ಗೆಟ್ ಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

    ಫ್ಲಾಯ್ಡ್ ಮಿಸ್ಕಿತ್ ಮಡಂತ್ಯಾರು ನಿವಾಸಿ ಬೇಬಿ ಡಯಾನ ಮಿಸ್ಕಿತ್ ಹಾಗೂ ಕ್ಲೌಡಿ ಫ್ರಾನ್ಸಿಸ್ ಮಿಸ್ಕಿತ್ ದಂಪತಿಗಳ ಪುತ್ರರಾಗಿದ್ದು, ಸಿದ್ಧಾರ್ಥ್ ಎಂ.ಸಿ ಮಂಗಳೂರಿನ ಕಪಿತಾನಿಯೊ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಮಮಿತಾ ಹಾಗೂ ಬಿ.ಸಿ.ರೋಡ್ ನ ನ್ಯಾಯವಾದಿ ಪಿ.ಚೆನ್ನಪ್ಪ ಸಾಲಿಯಾನ್ ದಂಪತಿಗಳ ಪುತ್ರರಾಗಿದ್ದಾರೆ.

    ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ರಾಘವೇಂದ್ರ ವಿಟ್ಲ ತರಬೇತಿ ನೀಡಿರುತ್ತಾರೆ.

    Continue Reading

    BELTHANGADY

    ಬೆಳ್ತಂಗಡಿ: ವಿದ್ಯುತ್‌ ತಗುಲಿ ಯುವಕ ಮೃ*ತ್ಯು

    Published

    on

    ಉಪ್ಪಿನಂಗಡಿ: ಮನೆಯಲ್ಲಿ ವಿದ್ಯುತ್ ಇಲ್ಲವೆಂದು ವಿದ್ಯುತ್ ಪರಿವರ್ತಕದ ಬಳಿ ಫ್ಯೂಸ್ ಹಾಕಲು ತೆರಳಿದ ಯುವಕನೋರ್ವ ವಿದ್ಯುತ್ ಆಘಾ*ತಕ್ಕೆ ಬ*ಲಿಯಾದ ಘಟನೆ ಜು.15ರಂದು ಇಳಂತಿಲ ಗ್ರಾಮದ ಗೋಳಿತ್ತಡಿ ಎಂಬಲ್ಲಿ ನಡೆದಿದೆ.

    ಹರೀಶ (32) ಮೃ*ತ ಯುವಕ. ಅಡಿಕೆ ಸುಲಿಯುವ ಕೆಲಸ ಮಾಡುತ್ತಿದ್ದ ಈತ ಉತ್ತಮ ಕಬಡ್ಡಿ ಆಟಗಾರನೂ ಆಗಿದ್ದು, ತನ್ನ ಮನೆಗೆ ವಿದ್ಯುತ್ ಬರುತ್ತಿಲ್ಲವೆಂದು ವಿದ್ಯುತ್ ಪ್ರವಹಿಸಿ ಈತ ಮೃ*ತಪಟ್ಟಿದ್ದಾರೆ.

    Continue Reading

    BELTHANGADY

    ವಿಧಾನಸಭಾ ಅಧಿವೇಶನ: ಫಝಲ್ ಕೋಯಮ್ಮ ತಂಙಳ್, ನಿರೂಪಕಿ ಅಪರ್ಣಾ ಸಹಿತ ಅಗಲಿದ ಗಣ್ಯರಿಗೆ ಸಂತಾಪ

    Published

    on

    ಬೆಂಗಳೂರು: ವಿಧಾನ ಮಂಡಲ ಉಭಯ ಸದನಗಳ ಮುಂಗಾರು ಅಧಿವೇಶನ ಇಂದು ಪೂರ್ವಾಹ್ನ 11 ಗಂಟೆಗೆ ಆರಂಭಗೊಂಡಿತು.

    ಸದನ ಆರಂಭಗೊಳ್ಳುತ್ತಿದ್ದಂತೆ ಸಭಾಧ್ಯಕ್ಷರಾದ ಯು.ಟಿ.ಖಾದರ್‌ ಅವರು ಸಂತಾಪ ಸೂಚಿಸುವ ನಿರ್ಣಯವನ್ನು ಮಂಡಿಸಿ, ಅಗಲಿದ ಗಣ್ಯರ ಕೊಡುಗೆಗಳನ್ನು ಸ್ಮರಿಸಿದರು.

    ಅಗಲಿದ ಗಣ್ಯರಾದ ಧಾರ್ಮಿಕ ಮುಖಂಡ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ (ಕೂರತ್ ತಂಙಳ್), ನಿರೂಪಕಿ ಅಪರ್ಣಾ, ಸಾಹಿತಿ ಕಮಲಾ ಹಂಪನಾ, ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರಿಗೆ ಸದನಗಳ ಸದಸ್ಯರು ಸಂತಾಪ ಅರ್ಪಿಸಿದರು.

    Continue Reading

    LATEST NEWS

    Trending