HomeLATEST NEWSಕಾರ್ಕಳದ ಸ್ವರ್ಣ ನದಿಯ ಬಾಕ ಗುಂಡಿಯಲ್ಲಿ ಮೀನುಗಳ ಮಾರಣ ಹೋಮ-ಕಿಡಿಗೇಡಿಗಳಿಂದ ವಿಷ ಪ್ರಾಶನ

ಕಾರ್ಕಳದ ಸ್ವರ್ಣ ನದಿಯ ಬಾಕ ಗುಂಡಿಯಲ್ಲಿ ಮೀನುಗಳ ಮಾರಣ ಹೋಮ-ಕಿಡಿಗೇಡಿಗಳಿಂದ ವಿಷ ಪ್ರಾಶನ

ಕಾರ್ಕಳ ತಾಲೂಕಿನ ಜನರಿಗೆ ಕುಡಿಯಲು ಮತ್ತು ಕೃಷಿ ಉದ್ದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸುವ ಸ್ವರ್ಣ ನದಿಯಲ್ಲಿ ಮಲೆಬೆಟ್ಟು ಮತ್ತು ಕೆರ್ವಾಶೆ ನಡುವಣ ಬಾಕ ಗುಂಡಿಯಲ್ಲಿ ಅಧಿಕ ಪ್ರಮಾಣದಲ್ಲಿ ಮೀನುಗಳು ಸತ್ತಿರುವುದು ಕಂಡು ಬಂದುದ್ದು, ಕಿಡಿಗೇಡಿಗಳು ವಿಷ ಪ್ರಾಶನ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಕಾರ್ಕಳ: ಕಾರ್ಕಳ ತಾಲೂಕಿನ ಜನರಿಗೆ ಕುಡಿಯಲು ಮತ್ತು ಕೃಷಿ ಉದ್ದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸುವ ಸ್ವರ್ಣ ನದಿಯಲ್ಲಿ ಮಲೆಬೆಟ್ಟು ಮತ್ತು ಕೆರ್ವಾಶೆ ನಡುವಣ ಬಾಕ ಗುಂಡಿಯಲ್ಲಿ ಅಧಿಕ ಪ್ರಮಾಣದಲ್ಲಿ ಮೀನುಗಳು ಸತ್ತಿರುವುದು ಕಂಡು ಬಂದುದ್ದು, ಕಿಡಿಗೇಡಿಗಳು ವಿಷ ಪ್ರಾಶನ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಇಲ್ಲಿ ಯಥೇಚ್ಛವಾಗಿ ಮೀನುಗಳ ಮಾರಣ ಹೋಮವಾಗಿರುವುದನ್ನು ಗಮನಿಸಿದರೆ ನದಿಯ ನೀರಿಗೆ ಗೇರುಬೀಜ ಎಣ್ಣೆ ಇಲ್ಲವೇ ಯಾವುದೋ ಕೀಟನಾಶಕ ಹಾಕಿರುವ ಸಂಶಯವನ್ನು ಸ್ಥಳೀಯರು ವ್ಯಕ್ತ ಪಡಿಸಿದ್ದಾರೆ.

ನಿನ್ನೆ ರಾತ್ರಿ ವೇಳೆ ಈ ಕೃತ್ಯವನ್ನು ಎಸಗಿರುವ ಸಾಧ್ಯತೆ ಇದ್ದು, ಇಂದು ಬೆಳಗ್ಗಿನ ಜಾವ ಬೆಳಕಿಗೆ ಬಂದಿದೆ.

ಸ್ಥಳೀಯರು ಈ ನದಿಯ ನೀರನ್ನು ಕೃಷಿಗೆ ಮಾತ್ರವಲ್ಲದೆ ಕುಡಿಯಲು ಕೂಡಾ ಉಪಯೋಗಿಸುತ್ತಿದ್ದಾರೆ.

ಪ್ರಸ್ತುತ ಕುಡಿಯುವ ನೀರಿಗೆ ಬರ ಇರುವ ಈ ಸಮಯದಲ್ಲಿ ನಿತ್ಯ ಬಳಕೆಗೆ ಆಧಾರವಾಗಿದ್ದ ನೀರಿನ ಮೂಲಕ್ಕೆ ಯಾವುದೋ ಪದಾರ್ಥವನ್ನು ಹಾಕಿ ಕಲುಷಿತಗೊಳಿಸಿರುವ ಬಗ್ಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

Latest articles

ಕಾಸರಗೋಡು: ಎಮರ್ಜೆನ್ಸಿಲೈಟ್‌ನಲ್ಲಿ ಅಕ್ರಮ ಚಿನ್ನ ಸಾಗಾಟ- ಓರ್ವನ ಬಂಧನ..!

ಅಕ್ರಮ ಚಿನ್ನ ಸಾಗಾಟಕ್ಕೆ ಸಂಬಂಧಪಟ್ಟಂತೆ ಓರ್ವನನ್ನು ಕಾಸರಗೋಡು ಡಿ ವೈ ಎಸ್ಪಿ ಪಿ. ಬಾಲಕೃಷ್ಣನ್ ನೇತೃತ್ವದ ಪೊಲೀಸರು...

ಯಾದಗಿರಿ: ನಿಂತಿದ್ದ ಲಾರಿಗೆ ಕ್ರೂಷರ್ ಡಿಕ್ಕಿ- ಐದು ಮಂದಿ ಸ್ಥಳದಲ್ಲೇ ಸಾವು…!

ನಿಂತಿದ್ದ ಲಾರಿಗೆ ಕ್ರೂಷರ್ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 13 ಮಂದಿಗೆ ಗಾಯಗಳಾಗಿರುವ ಘಟನೆ...

ಬಂಟ್ವಾಳ ವಿಟ್ಲದಲ್ಲಿ ರಸ್ತೆಗೆ ಅಡ್ಡ ಬಂದ ದನ : ಆಟೋ ರಿಕ್ಷಾ ಪಲ್ಟಿ-50 ಲೀಟರ್ ಹಾಲು ನಷ್ಟ..!

ಸಾರಡ್ಕ - ಪುಣಚ ರಸ್ತೆಯ ತೋರಣಕಟ್ಟೆಯ ಸೊಸೈಟಿಯ ಸಮೀಪ ಮಂಗಳವಾರ ದನ ರಸ್ತೆಯಲ್ಲಿ ಅಡ್ಡ ಬಂದ ಹಿನ್ನಲೆಯಲ್ಲಿ ಹಾಲು...

ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಎಫೆಕ್ಟ್- ಮುಂಗಾರು ಮತ್ತಷ್ಟು ವಿಳಂಬ ಸಾಧ್ಯತೆ..!

ಜೂನ್ ಎರಡನೇ ವಾರಕ್ಕೆ ಕಾಲಿಟ್ಟರೂ ಮುಂಗಾರು ಮಳೆಯ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಹವಾಮಾನ ಇಲಾಖೆಯ ಪ್ರಕಾರ ಈ ಬಾರಿ...