MANGALORE
ಡಿ.11ರಂದು ಕನ್ನಡ ಸಾಹಿತ್ಯ ಪರಿಷತ್ ನೂತನ ಜಿಲ್ಲಾಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್ ಪದಗ್ರಹಣ
ಮಂಗಳೂರು: ಇತ್ತೀಚೆಗೆ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯಲ್ಲಿ ಭಾರೀ ಅಂತರದಿಂದ ಗೆಲುವು ಸಾಧಿಸಿರುವ ಲೇಖಕ ಸಂಘಟಕ ಉಪನ್ಯಾಸಕ ಡಾ.ಎಂ.ಪಿ ಶ್ರೀನಾಥ್ ಅವರ ಪದಗ್ರಹಣ ಕಾರ್ಯಕ್ರಮವು ಡಿ. 11ನೇ ತಾರೀಕು ಶನಿವಾರ ಸಂಜೆ 4 ಗಂಟೆಗೆ ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ ಎಂದು ಪದಗ್ರಹಣ ಸಮಿತಿಯ ಗಣೇಶ್ ಹೆಬ್ಬಾರ್ ಅವರು ತಿಳಿಸಿದ್ದಾರೆ.
ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾಗಿರುವ ಡಿ. ಹರ್ಷೇಂದ್ರ ಕುಮಾರ್ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಸಮಾರಂಭವನ್ನು ಉದ್ಘಾಟಿಸುವರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ ಅವರು ಸರಕಾರದ ನಿಯಮಾವಳಿಯಂತೆ ಡಾ.ಎಂ.ಪಿ.ಶ್ರೀನಾಥ್ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಸ್ಥಾನದ ಅಧಿಕಾರವನ್ನು ಹಸ್ತಾಂತರಿಸಿ ಪದಗ್ರಹಣ ಕಾರ್ಯಕ್ರಮವನ್ನು ನೆರವೇರಿಸುವರು ಎಂದವರು ತಿಳಿಸಿದರು.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಇದರ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ ಕುಮಾರ, ಮಂಗಳೂರು ತಾಲೂಕು ತಹಶೀಲ್ದಾರರಾದ ಗುರುಪ್ರಸಾದ್,
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಮಾಹಿತಿ ಹಂಚಿಕೊಂಡರು.
ಎರಡು ದಶಕಗಳ ಬಳಿಕ ಹೊಸ ಮುಖವೊಂದು ಅಧ್ಯಕ್ಷ ಸ್ಥಾನವನ್ನು ಅಲಂಕರಿಸಲಿರುವ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯವೈಖರಿಯಲ್ಲಿ ಹೊಸತನವನ್ನು ತರುವ ಮತ್ತು ಎಲ್ಲರನ್ನೂ ಪರಿಷತ್ತಿನ ಕನ್ನಡ ಸೇವೆಯಲ್ಲಿ ಭಾಗಿಯಾಗಿಸುವ ಉದ್ದೇಶವನ್ನು ಹೊಂದಿರುವ
ಡಾ.ಎಂ.ಪಿ ಶ್ರೀನಾಥ್ ಅವರು ಜಿಲ್ಲಾ ಕಸಾಪವನ್ನು ಸೃಜನಶೀಲವಾಗಿಸಿ ಹೊಸ ದಿಕ್ಕಿನ ಕಡೆ ಕೊಂಡೊಯ್ಯಲಿದ್ದು ಅನೇಕ ಕಾರ್ಯಕ್ರಮಗಳನ್ನು ಈ ಸಮಾರಂಭದಲ್ಲಿ ಘೋಷಿಸಲಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸೇರಿಕೊಳ್ಳಲು ಆಸಕ್ತರಿರುವವರಿಗೆ ಸದಸ್ಯರಾಗಲು ಸದಸ್ಯತ್ವ ಅಭಿಯಾನವನ್ನು ಅಂದೇ ಆರಂಭಿಸಲಿದ್ದು,
ಆಸಕ್ತರು ನಿಯಮಾವಳಿಯಂತೆ ಸ್ಥಳದಲ್ಲೇ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಿತಿಯ ಸಾಹಿತ್ಯ ಪೋಷಕ ಬರಹಗಾರ ಗುರುಪ್ರಸಾದ್ ಕಡಂಬಾರ್, ಸಂಘಟಕ ಮತ್ತು ಸಾಮಾಜಿಕ ಕಾರ್ಯಕರ್ತ ಇಸ್ಮಾಯಿಲ್ ಶಾಫಿ ಬಬ್ಬುಕಟ್ಟೆ ಹಾಗೂ ಕವಿ ಸಂಘಟಕ ಕಾ.ವೀ.ಕೃಷ್ಣದಾಸ್ ಉಪಸ್ಥಿತರಿದ್ದರು
DAKSHINA KANNADA
ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ
ಮಂಗಳೂರು: ಸಂಗೀತ, ಭರತನಾಟ್ಯದ ಮಾದರಿಯಲ್ಲಿ ಯಕ್ಷಗಾನಕ್ಕೂ ನಿರ್ದಿಷ್ಟ ಚೌಕಟ್ಟಿನಲ್ಲಿ ಪಠ್ಯ ರಚಿಸಿ ಪರೀಕ್ಷೆಗಳನ್ನು ನಡೆಸುವ ಪ್ರಯತ್ನಗಳು ನಡೆಯುತ್ತಿದೆ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಹೇಳಿದರು.
ಮಂಗಳೂರಿನ ಪ್ರೆಸ್ ಕ್ಲಬ್ ವತಿಯಿಂದ ನಡೆದ ಪ್ರೆಸ್ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಯಕ್ಷಗಾನದಲ್ಲಿ ಪ್ರತಿಯೊಬ್ಬ ಗುರು ತಮ್ಮದೇ ಆದ ಶೈಲಿಯಲ್ಲಿ ನಾಟ್ಯವನ್ನು ಕಲಿಸುತ್ತಾರೆ. ಯಕ್ಷಗಾನ ಕಲಿಕೆಗೆ ಒಂದು ಚೌಕಟ್ಟು ರೂಪಿಸುವ ಮೂಲಕ ಏಕರೂಪತೆ ತರಬೇಕಾಗಿದೆ. ಯಕ್ಷಧ್ರುವ ಪಟ್ಲ ಫೌಂಡೇಶನ್ನ ಯಕ್ಷ ಶಿಕ್ಷಣ ಯೋಜನೆಯು ಪಠ್ಯ ರೂಪಿಸಿದ್ದು, ಫೌಂಡೇಶನ್ನ ಶಿಕ್ಷಕರು ಇದರ ಪ್ರಕಾರವೇ ನಾಟ್ಯ ಕಲಿಸುತ್ತಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಯಕ್ಷಗಾನಕ್ಕೆಂದೇ ಒಂದು ಸೀಲೆಬಸ್ ಮಾಡಿ ಅದರ ಮುಖೇನ ಯಕ್ಷಗಾನ ನಾಟ್ಯ ಕಲಿಯುವ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದರು.
DAKSHINA KANNADA
ಅಡ್ಯಾರ್ ಬೊಂಡ ಪ್ಯಾಕ್ಟರಿ ಎಳನೀರು ಪ್ರಕರಣ- ಆರೋಗ್ಯ ಇಲಾಖೆಯ ಕೈ ಸೇರಿದ ಪ್ರಯೋಗಾಲಯ ಪರೀಕ್ಷಾ ವರದಿ ಬಹಿರಂಗ..!
ಮಂಗಳೂರು : ಇತ್ತೀಚೆಗೆ ಅಡ್ಯಾರ್ ನಲ್ಲಿರುವ ಬೊಂಡಾ ಪ್ಯಾಕ್ಟರಿಯಲ್ಲಿ ಎಳ ನೀರು ಸೇವಿಸಿ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಯೋಗಾಲಯ ಪರೀಕ್ಷಾ ವರದಿ ಆರೋಗ್ಯ ಇಲಾಖೆಯ ಕೈ ಸೇರಿದ್ದು, ಸಹಜವಾಗಿತ್ತು ಎಳನೀರು ಎಂದು ವರದಿಯಲ್ಲಿ ತಿಳಿಸಲಾಗಿದೆ.
ನಗರದ ಹೊರವಲಯದ ಅಡ್ಯಾರಿನ ಬೊಂಡ ಫ್ಯಾಕ್ಟರಿಯಲ್ಲಿ ಎಪ್ರಿಲ್ 9ರಂದು ಖರೀದಿಸಿದ ಎಳನೀರು ಕುಡಿದವರಲ್ಲಿ 138 ಜನರು ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡಿದ್ದರು. ಈ ಪ್ರಕರಣ ಗಮನಕ್ಕೆ ಬಂದ ಬೆನ್ನಲ್ಲೇ ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಹಾಗೂ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಫ್ಯಾಕ್ಟರಿಯನ್ನು ಬಂದ್ ಮಾಡಿಸಿ ಎಳನೀರು ಮಾದರಿ ಸಂಗ್ರಹಿಸಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಿದ್ದರು.ಘಟನೆ ನಡೆದ ಎರಡು ದಿನಗಳ ನಂತರ ಇದು ಗಮನಕ್ಕೆ ಬಂದಿದ್ದು, ಆ ದಿನ ಫ್ಯಾಕ್ಟರಿಯಲ್ಲಿ ಸಂಗ್ರಹಿಸಿದ್ದ ಎಳನೀರನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಪ್ರಯೋಗಾಲಯ ಪರೀಕ್ಷೆಯ ವರದಿ ಎಪ್ರಿಲ್ 22ರಂದು ಆರೋಗ್ಯ ಇಲಾಖೆಯ ಕೈ ಸೇರಿದೆ.
ಅಸ್ವಸ್ಥಗೊಂಡವರ ಮಲ ಮತ್ತು ರಕ್ತದ ಮಾದರಿ ಸಂಗ್ರಹಿಸಿ, ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ವರದಿ ಪ್ರಕಾರ ಕೆಲವರ ದೇಹದಲ್ಲಿ ಇಕೊಲೈ ಬ್ಯಾಕ್ಟಿರಿಯಾ ಇರುವುದು ಪತ್ತೆಯಾಗಿದೆ. ಮನುಷ್ಯನ ಕರುಳಿನಲ್ಲಿ ಈ ಬ್ಯಾಕ್ಟಿರಿಯಾ ಇರುತ್ತದೆ. ಆದರೆ ಅವುಗಳ ಪ್ರಮಾಣ ಹೆಚ್ಚಾದರೆ, ಕೆಲವೊಮ್ಮೆ ಆರೋಗ್ಯ ಸಮಸ್ಯೆ ಬರುತ್ತದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ತಿಳಿಸಿದರು.ಅಡ್ಯಾರಿನಲ್ಲಿರುವ ಎಳನೀರು ಗಂಜಿಯಿಂದ ಐಸ್ಕ್ರೀಮ್ ತಯಾರಿಸುವ ಘಟಕ, ಕಾರ್ಸ್ಪೀಟ್ ಮತ್ತು ಕದ್ರಿಯಲ್ಲಿರುವ ಎಳನೀರು ಮಳಿಗೆಗಳನ್ನು ಬಂದ್ ಮಾಡಿಸಲಾಗಿದೆ. ಈಗಲೂ ಅವು ಬಂದ್ ಆಗಿಯೇ ಇವೆ.
ಫ್ಯಾಕ್ಟರಿಯವರು ಸ್ವಯಂ ಪ್ರೇರಿತರಾಗಿ ಎಳನೀರು ನೀಡುವುದನ್ನು ನಿಲ್ಲಿಸಿದ್ದಾರೆ. ಅಡ್ಯಾರ್ನಲ್ಲಿ ಪಲ್ಟಿಂಗ್ ಘಟಕಗಳು ಮಾತ್ರ ಕಾರ್ಯಾಚರಿಸುತ್ತಿವೆ. ಗ್ರಾಹಕರಿಗೆ ಆಹಾರ ನೀಡುವಾಗ ನಿಯಮ ಪಾಲನೆ, ಶುಚಿತ್ವಕ್ಕೆ ಸಂಬಂಧಿಸಿ ಕೆಲವು ಅಂಶಗಳ ಕಟ್ಟುನಿಟ್ಟು ಪಾಲನೆಗೆ ಆಹಾರ ಸುರಕ್ಷಾ ಅಫಿದಾವಿತನ್ನು ಫ್ಯಾಕ್ಟರಿಯಿಂದ ಪಡೆಯಲು ಆಹಾರಸುರಕ್ಷಾ ಅಧಿಕಾರಿಗೆ ಸೂಚನೆ ನೀಡಲಾಗುವುದು ಎಂದು ಅವರು ಪ್ರತಿಕ್ರಿಯಿಸಿದರು.
Ancient Mangaluru
ಮಂಗಳೂರು ವಿಮಾನ ನಿಲ್ದಾಣವಿನ್ನು ನಿಶ್ಶಬ್ದ ವಲಯ!
ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಇನ್ನು ಮುಂದೆ ನಿಶ್ಶಬ್ದ ವಲಯವಾಗಿರಲಿದೆ. ಹೌದು, ಇನ್ನು ಮುಂದೆ ವಿಮಾನ ನಿಲ್ದಾಣದಲ್ಲಿ ಏರ್ಲೈನರ್ಗಳಿಂದ ಯಾವುದೇ ಪ್ರಯಾಣಿಕರ ಮಾಹಿತಿ ಕುರಿತ ಅನೌನ್ಸ್ ಮೆಂಟ್ ಇರುವುದಿಲ್ಲ. ಪ್ರಯಾಣಿಕರು ಫ್ಲೈಟ್ ಇನ್ಫಾರ್ಮೇಶನ್ ಡಿಸ್ಪ್ಲೇ ಸಿಸ್ಟಂ ಫಲಕಗಳನ್ನು ನೋಡಿ ಮಾಹಿತಿ ಪಡೆದುಕೊಳ್ಳ ಬೇಕಾಗಿದೆ ಎಂದು ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ.
ಸಹಾಯಕ್ಕಾಗಿ ಯಾರನ್ನು ಸಂಪರ್ಕಿಸಬೇಕು?
ವಿಮಾನ ನಿಲ್ದಾಣದಲ್ಲಿರುವ ಪ್ರಯಾಣಿಕರಿಗೆ ಕಿರಿಕಿರಿಯಾಗುವುದನ್ನು ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ. ಇನ್ನು ಮುಂದೆ ವಿಮಾನಗಳ ಹಾರಾಟದ ಮಾಹಿತಿಗಳು ಫ್ಲೈಟ್ ಇನ್ಫಾರ್ಮೇಶನ್ ಡಿಸ್ಪ್ಲೇ ಸಿಸ್ಟಂ ಫಲಕಗಳಲ್ಲಿ ಅನಾವರಣಗೊಳ್ಳಲಿದೆ. ವಿಮಾನ ನಿಲ್ದಾಣದ ಹಲವು ಕಡೆಗಳಲ್ಲಿ ಈ ಡಿಸ್ಪ್ಲೇಗಳನ್ನು ಇರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಇದಲ್ಲದೆ, ವಿಮಾನ ನಿಲ್ದಾಣದ ಟರ್ಮಿನಲ್ನಲ್ಲಿ ‘ಮೇ ಐ ಹೆಲ್ಪ್ ಯು’ ಡೆಸ್ಕ್ ನಿರ್ವಹಿಸುವ ಸಿಬಂದಿ, ಗ್ರಾಹಕ ಸೇವೆ ಮತ್ತು ಅತಿಥಿ ಸಂಬಂಧಗಳ ಕಾರ್ಯನಿರ್ವಾಹಕರು, ಪ್ರಣಾಮ್ ಸಿಬಂದಿ ಕೂಡಾ ಮಾಹಿತಿಯೊಂದಿಗೆ ಪ್ರಯಾಣಿಕರಿಗೆ ಸಹಾಯ ಮಾಡಲು ಸಿದ್ಧರಿರುತ್ತಾರೆ.
ಇದನ್ನೂ ಓದಿ : ಕೋವಿಶೀಲ್ಡ್ ಲಸಿಕೆ ಅಡ್ಡ ಪರಿಣಾಮ ಬೀರಲಿದೆ; ಸತ್ಯ ಒಪ್ಪಿಕೊಂಡ ಆಸ್ಟ್ರಾಜೆನಿಕಾ! ಏನಿದರ ಪರಿಣಾಮ?
ಎಸ್.ಎಂ.ಎಸ್ ಮೂಲಕ ಮಾಹಿತಿ :
ಎಲ್ಲಾ ಏರ್ಲೈನ್ ಚೆಕ್-ಇನ್ ಕೌಂಟರ್ಗಳು, ಬೋರ್ಡಿಂಗ್ ಗೇಟ್ಗಳಲ್ಲಿ ವಿಮಾನದ ಮಾಹಿತಿಯನ್ನು ವೀಕ್ಷಿಸ ಬಹುದು. ಬೋರ್ಡಿಂಗ್ ಗೇಟ್ ಬದಲಾವಣೆಗಳು/ ವಿಮಾನ ಮರು ವೇಳಾಪಟ್ಟಿ ವಿವರಗಳನ್ನು ಎಸ್.ಎಂ.ಎಸ್. ಮೂಲಕ ಪ್ರಯಾಣಿಕರ ನೋಂದಾಯಿತ ಇಮೇಲ್ ಮತ್ತು ಮೊಬೈಲ್ ಸಂಖ್ಯೆಯಲ್ಲೂ ಕೂಡಾ ಏರ್ಲೈನ್ ಹಂಚಿಕೊಳ್ಳಲಿದೆ ಎಂದು ವಿವರಿಸಿದ್ದಾರೆ.
- FILM6 days ago
“ನಿತ್ಯಾಮೆನನ್” ಚಿತ್ರರಂಗದಿಂದ ‘ಬ್ಯಾನ್’ ಆಗಲು ಕಾರಣವೇನು ಗೊತ್ತಾ? ಈ ಬಗ್ಗೆ ನಿತ್ಯಾ ಹೇಳಿದ್ದೇನು?
- DAKSHINA KANNADA6 days ago
ನಮ್ಮ ಮಾತುಗಳಿಗೆ ಅಸ್ತು ಅನ್ನುವ ಅಶ್ವಿನಿ ದೇವತೆಗಳು – ಯಾರಿವರು?
- LATEST NEWS7 days ago
ಕಾಲಿನ ಮೂಲಕವೇ ಕಾರು ಚಲಾಯಿಸಿ, ಡ್ರೈವಿಂಗ್ ಲೈಸೆನ್ಸ್ ಪಡೆದ ಏಷ್ಯಾದ ಮೊದಲ ಮಹಿಳೆ!
- DAKSHINA KANNADA6 days ago
ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪದ್ಮರಾಜ್ ಪೂಜಾರಿ